ಮಡಿಕೇರಿ ಜೂ.21 : ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ನ್ನು ಭಾರತದಾದ್ಯಂತ ಜೂನ್ 29 ರಂದು ಆಚರಿಸಲಾಗುತ್ತದೆ. ಅಂದಿನ ಈದುಲ್ ಅಝ್ಹಾ ನಮಾಝನ್ನು ಮಡಿಕೇರಿ ನಗರದ ಎಂ. ಎಂ.ಮಸೀದಿಯಲ್ಲಿ ಬೆಳಿಗ್ಗೆ 7:30 ಗಂಟೆಗೆ ನಿರ್ವಹಿಸಲಾಗುವುದು ಎಂದು ಜಮಾಅತ್ ನ ಕಾರ್ಯದರ್ಶಿಗಳಾದ ಎಂ.ಎಂ.ಹಾರೂನ್ ಹಾಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜೂ.21 : ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೋಮವಾರಪೇಟೆ ನಿವಾಸಿ ಅಶ್ರಫ್ (40) ಹಾಗೂ ಕೊಟ್ಟಮುಡಿ ನಿವಾಸಿ ಇಸ್ಮಾಯಿಲ್(31) ಎಂದು ಗುರುತಿಸಲಾಗಿದೆ. ಇವರ ಬಳಿ ಇದ್ದ 19 ಗ್ರಾಂ ನಿಷೇಧಿತ ಮಾದಕ ವಸ್ತು (ಎಂಡಿಎಂಎ)ವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್.ಬಿ.ಜಿ, ಠಾಣಾಧಿಕಾರಿ ರವೀಂದ್ರ ಹಾಗೂ ಸಿಬ್ಬಂದಿಗಳ ವಿಶೇಷ ತಂಡಕ್ಕೆ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಯಿತು. ಪ್ರಕರಣ ಪತ್ತೆ ಹಚ್ಚಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ದಕ್ಷತೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಜೂ.21 : ಜನ ಸ್ನೇಹಿ ಮತ್ತು ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡುವುದಾಗಿ ನೂತನ ಜಿಲ್ಲಾಧಿಕಾರಿ ವೆಂಕಟ್ ರಾಜ ಹೇಳಿದರು. ಇಂದು ಅಧಿಕಾರ ಸ್ವೀಕಾರಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಬಗ್ಗೆ ಹೆಮ್ಮೆ ಇದೆ ಎಂದು ಮೆಚ್ಚುಗೆಯ ನುಡಿಯಾಡಿದರು. ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಸಂದರ್ಭ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ಮಳೆಗಾಲ ಎದುರಿಸಲು ಮೊದಲ ಆಧ್ಯತೆ ನೀಡಲಾಗುತ್ತದೆ ಎಂದು ಹೇಳಿದರು. ಈಗಾಗಲೇ ಜಿಲ್ಲಾಧಿಕಾರಿಗಳಾಗಿದ್ದ ಡಾ. ಬಿ.ಸಿ.ಸತೀಶ ಅವರಿಂದಲೂ ಮಳೆಗಾಲದ ಕುರಿತು ಮಾಹಿತಿ ಪಡೆದಿರುವುದಾಗಿ ಹೇಳಿದರು. ಜಿಲ್ಲೆಯ ಸಮಸ್ಯೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯುವುದಾಗಿ ತಿಳಿಸಿದರು.
ಮಡಿಕೇರಿ ಜೂ.21 : ನಗರದ ಜಿಲ್ಲಾಧಿಕಾರಿಗಳ ಕಟ್ಟಡದ ಆವರಣದಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಹಾಗೂ ಭವನವನ್ನು ನಿರ್ಮಿಸುವಂತೆ ಪ್ರೊ. ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕೊಡಗು ಜಿಲ್ಲಾ ಸಮಿತಿ ಒತ್ತಾಯಿಸಿದೆ. ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ನೇತೃತ್ವದಲ್ಲಿ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರಿಗೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇ ಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಹಾಗೂ ಸಮಾಜ ಕಲ್ಯಾಣಧಿಕಾರಿಗಳಿಗೆ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಿದರು. ಭಾರತದ ಇತಿಹಾಸದ ಪುಟಗಳಲ್ಲಿ ಅಂಬೇಡ್ಕರ್ ಅವರ ಸಾಧನೆ ಅಜರಾಮರವಾಗಿದ್ದು, ಜೀವನದ ಪ್ರತಿಕ್ಷಣವನ್ನು ಶೋಷಿತರ ಧ್ವನಿಯಾಗಿ ಕಳೆದವರು. ಅಂಬೇಡ್ಕರ್ ಅವರನ್ನು ವಿಶ್ವವೇ ಹಾಡಿ ಹೊಗಳಿದರೂ ಜಿಲ್ಲಾ ಮತ್ತು ತಾಲೂಕು ಕಚೇರಿ ಮುಂಭಾಗ ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಸರ್ಕಾರದ ಅನುದಾನದಲ್ಲಿ ಪುತ್ಥಳಿ ಹಾಗೂ ಭವನವನ್ನು ನಿರ್ಮಾಣ ಮಾಡದೇ ಇರುವುದು ಸಂವಿಧಾನ ಶಿಲ್ಪಿಗೆ ಅಗೌರವ ತೋರಿದಂತೆ ಎಂದರು. ಆದ್ದರಿಂದ ಶೀಘ್ರವೇ ಕೊಡಗು ಜಿಲ್ಲಾ ಕೇಂದ್ರವಾದ ಮಡಿಕೇರಿ ಜಿಲ್ಲಾಧಿಕಾರಿಗಳ ಕಟ್ಟಡದ ಆವರಣದಲ್ಲಿ ಹಾಗೂ…
ಕುಶಾಲನಗರ ಜೂ.21 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕೊಡ ಮಾಡುವ ರಾಜ್ಯಮಟ್ಟದ ಕಾಯಕ ರತ್ನ 2023 ಪ್ರಶಸ್ತಿ ಗೆ ಕೊಡಗು ಜಿಲ್ಲೆಯ ಕುಶಾಲನಗರದ ಶಾಂತ ಶ್ರೀಪತಿ ಆಯ್ಕೆಯಾಗಿದ್ದಾರೆ. ನಗರದ ಶಾರದಾ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಲವು ವರ್ಷಗಳ ಸಾಧನೆ ಮೂಲಕ ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿರುವ ಶಾಂತ ಶ್ರೀಪತಿ ಅªರಿಗೆ ಜೂ.25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಪರಿಷತ್ತಿನ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಮಾರಂಭದಲ್ಲಿ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ. ಎಸ್, ಕಿರಣ್ ಕುಮಾರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಹುಲಿಕಲ್ ನಟರಾಜ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.
ಮಡಿಕೇರಿ ಜೂ.21 : ಪ್ರಸಕ್ತ(2023-24) ಸಾಲಿನ ಮೇ-2023 ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅಧ್ಯಕ್ಷತೆಯಲ್ಲಿ ಜೂ.27 ರಂದು ಬೆಳಗ್ಗೆ 11.30 ಗಂಟೆಗೆ ನಗರದ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.
ಮಡಿಕೇರಿ ಜೂ.21 : ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬಂಧ 2023-24ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯ ಮತ್ತು ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ 3 ವರ್ಷಗಳ ಅಥವಾ ಪಿಯುಸಿ ನಂತರ 5 ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು 15 ವರ್ಷಕ್ಕೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು/ ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ…
ಮಡಿಕೇರಿ ಜೂ.21 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ 9ನೇ ಯೋಗ ದಿನಾಚರಣೆಯು ನಗರದ ಗೌಡ ಸಮಾಜದಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ವಸುದೈವ ಕುಟುಂಬಕ್ಕಾಗಿ ಯೋಗ ಆ ಹೆಸರಿನಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಆರೋಗ್ಯವೇ ಭಾಗ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ…
ಮಡಿಕೇರಿ ಜೂ.21 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ (ಡಿಪ್ಲೊಮಾ) ಯೋಗವಿಜ್ಞಾನ ವಿಭಾಗ, ಎನ್ಸಿಸಿ, ಎನ್ಎಸ್ಎಸ್ ಹಾಗೂ ಕೆನರಾ ಬ್ಯಾಂಕ್ ನ ಸಹಯೋದಲ್ಲಿ ಅಂತರಾಷ್ಟ್ರೀಯ ಯೋಗದಿನಾಚರಣೆಯನ್ನು ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಯೋಗಾಭ್ಯಾಸದಿಂದ ದೈಹಿಕ ಕ್ಷಮತೆಯನ್ನು ಪಡೆದುಕೊಳ್ಳಬಹುದು. ಆ ಮೂಲಕ ಶಿಸ್ತುಬದ್ಧ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಯೋಗಾಭ್ಯಾಸಕ್ಕೆ ಮಹತ್ತರವಾದ ಸ್ಥಾನವಿದೆ ಎಂದು ಅಭಿಪ್ರಾಯಪಟ್ಟರು. ಮಡಿಕೇರಿಯ ಕರ್ನಾಟಕ 19ನೇ ಬಟಾಲಿಯನ್ ನ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಚಾಕೋ ವಿ.ಡಿ ಮತ್ತು ಮಡಿಕೇರಿಯ ಕೆನರಾ ಬ್ಯಾಂಕ್ ಪಶ್ಚಿಮ ಶಾಖೆಯ ವ್ಯವಸ್ಥಾಪಕ ಪಿ.ಕೆ.ಅವಿನಾಶ್ ಹಾಜರಿದ್ದರು. ಪ್ರಾಯೋಗಿಕ ಯೋಗಾಭ್ಯಾಸದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಡಾ. ಗಾಯತ್ರಿ ಪಾಲ್ಗೊಂಡಿದ್ದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ (ಡಿಪ್ಲೊಮಾ) ಯೋಗವಿಜ್ಞಾನ ವಿಭಾಗದ ಸಂಯೋಜಕ ಡಾ. ಎಂ.ಪಿ.ಕೃಷ್ಣ ವಂದಿಸಿದರು. ಸ್ನಾತಕೋತ್ತರ (ಡಿಪ್ಲೊಮಾ) ಯೋಗವಿಜ್ಞಾನ ವಿಭಾಗದ ಅಧ್ಯಾಪಕ ಎಂ.ಎಸ್.ಗುರುಕಿರಣ್ ಮತ್ತು ಅಖಿಲಾ ಎನ್ಸಿಸಿ, ಎನ್ಎಸ್ಎಸ್…
ಮಡಿಕೇರಿ ಜೂ.21 : ಎಲ್ಲರೂ ನಮ್ಮ ದೇಶದ ಪರಂಪರೆಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಬಿ.ಪಿ.ರೇಖಾ ಹೇಳಿದರು. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಯೋಗದೊಂದಿಗೆ ಏರ್ಪಡಿಸಿದ್ದ ಪರಂಪರೆ ಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪರಂಪರೆ ಅನಾದಿ ಕಾಲ ಘಟದಿಂದಲೂ ಕೂಡಿಕೊಂಡು ಬಂದಿದೆ. ಭಾರತದಲ್ಲಿ ನಡೆದ ಐತಿಹಾಸಿಕ ಘಟನೆಗಳ ಹಿನ್ನಲೆ ಮತ್ತು ಮಹಾನ್ ಪುರುಷರ ಆಚಾರ ವಿಚಾರಗಳು, ಸಿದ್ದಾಂತ ಮತ್ತು ಸಂಸ್ಕೃತಿಗಳನ್ನು ತಿಳಿದುಕೊಳುವುದು ಇಂದಿನ ಕಾಲಘಟದಲ್ಲಿ ಅತ್ಯಂತ ಅವಶ್ಯ ಎಂದರು. ಪ್ರಾಚೀನ ಮತ್ತು ಪ್ರಚಲಿತ ನಾಣ್ಯಗಳ ಹಾಗೂ ನೋಟುಗಳ ಸಂಗ್ರಹಕಾರ ಕೆ.ಪಿ.ಕೇಶವಮೂರ್ತಿ ಮಾತನಾಡಿ, ನಾಣ್ಯಗಳು ನಮ್ಮ ದೇಶವನ್ನು ಆಳಿದ ರಾಜ ಮನೆತನದ ವೈಭವಕ್ಕೆ ಸಾಕ್ಷಿಯಾಗಿದೆ. ಎಷ್ಟೋ ಇತಿಹಾಸ ಕುರುಹುಗಳನ್ನು ಹುಡುಕಿಕೊಡುವುದರಲ್ಲಿ ಮಹತ್ತರ ಪಾತ್ರವಹಿಸಿದೆ. ಇತಿಹಾಸವನ್ನು ನಾಣ್ಯಗಳ ಸಂಗ್ರಹ ರೂಪದಲ್ಲಿ ಇಂದಿನ ಪೀಳಿಗೆಗೆ ತಿಳಿಸುತ್ತಿರುವುದು ನನ್ನ ಸೌಭಾಗ್ಯವಾಗಿದೆ. ಪ್ರತಿ ವಿದ್ಯಾರ್ಥಿಗಳು ಇತಿಹಾಸ ಅದರ ಪರಂಪರೆಯನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.…






