ಲೇಖಕ: admin

ಮಡಿಕೇರಿ ಜೂ.21: ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿ ಮುಂದುವರೆದಿದ್ದು, ಕಾಫಿ ತೋಟವೊಂದರಲ್ಲಿ ಹಂದಿಯನ್ನು ಹುಲಿ ಭೇಟೆಯಾಡಿದ ಘಟನೆ ನಡೆದಿದೆ. ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ನಾಯಡ ವಿಕ್ಕಿ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಹುಲಿ ಹಂದಿಯನ್ನು ಬಲಿಪಡೆದಿದೆ. ಕಾಫಿತೋಟದಲ್ಲಿ ಹಂದಿಯ ಮೇಲೆ ದಾಳಿ ನಡೆಸಿದ ಹುಲಿ ಸುಮಾರು 50ರಿಂದ 55 ಕೆ.ಜಿ. ಭಾರದ ಹಂದಿಯ ಕಳೇಬರವನ್ನು ಸ್ಥಳದಿಂದ ದೂರ ಎಳೆದೊಯ್ದು ಅರ್ಧಂಬರ್ಧ ತಿಂದು ಹಾಕಿದೆ. ಹುಲಿ ದಾಳಿ ನಡೆಸಿದ ಸ್ಥಳದ ಸಮೀಪದಲ್ಲೇ ಮನೆಗಳಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಹುಲಿದಾಳಿ ನಡೆಸಿದ ಸ್ಥಳದಲ್ಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ವಿರಾಜಪೇಟೆಯ ಅರಣ್ಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ, ಕೂಂಬಿಂಗ್ ಕಾರ್ಯಾಚರಣೆ ನಡೆಸಿದರು. ಆದರೆ ಹುಲಿ ಜಾಡು ಮಾತ್ರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಪತ್ತೆಯಾಗಲಿಲ್ಲ ಎಂದು ತಿಳಿದು ಬಂದಿದೆ.

Read More

ಕುಶಾಲನಗರ, ಜೂ.21 : ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ  ನಡೆದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ  ಮಕ್ಕಳು ಯೋಗಾಭ್ಯಾಸ ಪ್ರದರ್ಶಿಸಿದರು. ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಲ್.ಸುಕುಮಾರಿ, ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ವಿದ್ಯಾರ್ಥಿಗಳು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ ಇತರರು ಇದ್ದರು. ಪ್ರಾಥಮಿಕ ಶಾಲೆಯಲ್ಲಿ ಯೋಗಾಭ್ಯಾಸ : ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ತರಬೇತುದಾರ ಡಿ.ವಿ.ಗಣೇಶ್, ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ ಹಾಗೂ ಶಿಕ್ಷಕರು ಇದ್ದರು.

Read More

ಮಡಿಕೇರಿ ಜೂ.21 :  “ಅನುಬಂಧ ಸ್ನೇಹ ಸಂಬಂಧಗಳ ದರ್ಶನ” ಶೀರ್ಷಿಕೆಯಡಿಯಲ್ಲಿ ಬೀರೂರಿನಲ್ಲಿ ಜರುಗಿದ ಜೆಸಿಐ ವಲಯ 14 ರ ಅರ್ಧವಾರ್ಷಿಕ ಸಮ್ಮೇಳನ-2023 ರಲ್ಲಿ ಕಳೆದ ಆರು ತಿಂಗಳಲ್ಲಿ ವಲಯ ಮತ್ತು ಜೆಸಿಐ ಭಾರತ ನೀಡುವ ಮಾರ್ಗದರ್ಶನದಂತೆ ಘಟಕಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿದ್ದು, ಅದರಲ್ಲಿ ಸಾಧನೆಗೈದ ಘಟಕವನ್ನು ಗುರುತಿಸಿ ಅರ್ಧವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಸೋಮವಾರಪೇಟೆ ಪುಷ್ಪಗಿರಿಯ ಅಧ್ಯಕ್ಷೆ ಎಂ.ಎ.ರುಬೀನಾ ಗೆ ವಲಯ ಅಧ್ಯಕ್ಷರಾದ ಯಶಸ್ವಿನಿ, ವಲಯ ಉಪಾಧ್ಯಕ್ಷ ಹೆಚ್.ಆರ್.ಪ್ರಶಾಂತ್  ಗೋಲ್ಡನ್ ಕಾಲರ್ ಹಾಕುವ ಮೂಲಕ ಗೋಲ್ಡನ್ ಕಾಲರ್ ಪ್ರಸಿಡೆಂಟ್ ಅವಾರ್ಡ್ ನೀಡಿ ಗೌರವಿಸಿದರು. ಜೊತೆಗೆ ಔಟ್ ಸ್ಟ್ಯಾಂಡಿಂಗ್ ಲಾಮ್ ವಿನ್ನರ್, ಔಟ್ ಸ್ಟ್ಯಾಂಡಿಂಗ್ ಫರ್ ಮಾರ್ಮರ್ ಪಿ ಆರ್ ಅಂಡ್ ಮಾರ್ಕೆಟಿಂಗ್, ನೀಡ್ ಬ್ಲಡ್ ಕಾಲ್ ಜೆಸಿಐ ನಲ್ಲಿ ವಿನ್ನರ್, ಗೋ ಗ್ರೀನ್, ಮ್ಯಾನೇಜ್ ಮೆಂಟ್ ಏರಿಯ, ಪ್ರೋಗ್ರಾಂ ಏರಿಯ ಮತ್ತು ಗೋ ಗ್ರೀನ್ ನಲ್ಲಿ ಸೆಕೆಂಡ್ ರನ್ನರ್ ಅಪ್ ಪ್ರಶಸ್ತಿಗಳನ್ನು ಘಟಕಕ್ಕೆ ಲಭಿಸಿದೆ. ಪುಷ್ಪಗಿರಿ ಘಟಕದಿಂದ ಜೆಸಿ…

Read More

ಮಡಿಕೇರಿ ಜೂ.21 :  ಕೊಡಗು ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜ ಅಧಿಕಾರ ಸ್ವೀಕರಿಸಿದರು. 2013ರ ಬ್ಯಾಚ್‍ನ ಅಧಿಕಾರಿಯಾಗಿರುವ ವೆಂಕಟ್ ರಾಜ ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅಧಿಕಾರ ಹಸ್ತಾಂತರಿಸಿ, ಶುಭಕೋರಿದರು. ಮೂಲತಃ ರಾಜಸ್ಥಾನ ಮೂಲದವರಾದ ವೆಂಕಟ್ ರಾಜ, ಹಾಸನದಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದು, ಬಳಿಕ ಬೀದರ್ ಉಪ ವಿಭಾಗದಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ, ರಾಜ್ಯ ಪರೀಕ್ಷಾಂಗ ಪ್ರಾಧಿಕಾರ, ಬೆಂಗಳೂರು ಅಬಕಾರಿ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ, ಬೆಂಗಳೂರು ಕೋವಿಡ್ ಕಂಟ್ರೋಲ್ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಕೋಲಾರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಕೊಡಗು ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜ ಅವರನ್ನು ರಾಜ್ಯ ಸರಕಾರ ನಿಯೋಜಿಸಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜ, ಕೊಡಗು ಜಿಲ್ಲೆಯ ಬಗ್ಗೆ ಹೆಮ್ಮೆ ಇದೆ ಎಂದು ಮೆಚ್ಚುಗೆಯ ನುಡಿಯಾಡಿದರು. ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಸಂದರ್ಭ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ…

Read More

ಮಡಿಕೇರಿ ಜೂ.21 : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ನಿದೇ೯ಶಕ ದೇವಣಿರ ತಿಲಕ್ ರೋಟರಿ ವಲಯ 6 ರ ಸಹಾಯಕ ಗವನ೯ರ್ ಆಗಿ ನೇಮಕಗೊಂಡಿದ್ದಾರೆ. ದೇವಣಿರ ತಿಲಕ್, ಮಡಿಕೇರಿ ರೋಟರಿ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ರೋಟರಿ ವುಡ್ಸ್, ವಿರಾಜಪೇಟೆ ರೋಟರಿ, ಗೋಣಿಕೊಪ್ಪ ರೋಟರಿ ಕ್ಲಬ್ ಮತ್ತು ಪಿರಿಯಾಪಟ್ಟಣ ರೋಟರಿ ಸಂಸ್ಥೆಗಳ ಸಹಾಯಕ ಗವನ೯ರ್ ಆಗಿ 2023-24 ನೇ ರೋಟರಿ ವಷ೯ದಲ್ಲಿ ಜು. 1 ನಿಂದ ಕಾಯ೯ನಿವ೯ಹಿಸಲಿದ್ದಾರೆ. ಡಿ.ಎಂ.ತಿಲಕ್ 2017-18 ನೇ ಸಾಲಿನಲ್ಲಿ ರೋಟರಿ ಜಿಲ್ಲೆಯ ಸಾಜೆ೯ಂಟ್ ಎಟ್ ಆಮ್ಸ್೯ ಆಗಿ ಕಾಯ೯ನಿವ೯ಹಿಸಿದ್ದು, ಈವರೆಗೂ ರೋಟರಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾಯ೯ನಿವ೯ಹಿಸಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ ನ 18 ವಷ೯ಗಳ ಅವಧಿಯಲ್ಲಿ ಬಿ.ಕೆ.ರವೀಂದ್ರ ರೈ, ಡಾ.ಸಿ.ಆರ್.ಪ್ರಶಾಂತ್, ಅನಿಲ್ ಎಚ್.ಟಿ. ಸಹಾಯಕ ಗವನ೯ರ್ ಆಗಿ ಕಾಯ೯ನಿವ೯ಹಿಸಿದ್ದು, ಇದೀಗ ನಾಲ್ಕನೇ ಸಹಾಯಕ ಗವನ೯ರ್ ನ್ನು ಮಿಸ್ಟಿ ಹಿಲ್ಸ್ ನಿಂದ ವಲಯ 6 ಕ್ಕೆ ನೀಡಿರುವ ಹೆಗ್ಗಳಿಕೆಗೆ ಮಿಸ್ಟಿ ಹಿಲ್ಸ್ ಪಾತ್ರವಾಗಿದೆ.

Read More

ಚೆಯ್ಯಂಡಾಣೆ, ಜೂ 21 :  ನರಿಯಂದಡ ಗ್ರಾ.ಪಂ ವತಿಯಿಂದ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿಯ ಕಾರ್ಯಾಲಯದ ಕಟ್ಟಡವನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಡೀ ದೇಶಾದ್ಯಂತ ಪಂಚಾಯಿತಿಗಳಿಗೆ ಒಂದು ಸುಸಜ್ಜಿತವಾದ ಕೇಂದ್ರಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರಕಾರದಿಂದ ಅನುದಾನ ನೀಡಬೇಕೆಂದು ನರೇಗಾ ಯೋಜನೆಯನ್ನು 2008 ರಲ್ಲಿ ಜಾರಿಗೆ ತಂದು ಒಂದು ಪಂಚಾಯಿತಿ ಕೇಂದ್ರ ನಿರ್ಮಾಣಕ್ಕೆ ನೀಡಲಾಗುತ್ತಿತ್ತು. ಈ ಯೋಜನೇ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರವಾಗಿ ಪ್ರಾರಂಭವಾಗಿದ್ದರು ಎಲ್ಲೂ ಕೂಡ ಕೇಂದ್ರಗಳು ನಿರ್ಮಾಣವಾಗಲಿಲ್ಲ. ಹಳೇ ಕಟ್ಟಡಗಳಲ್ಲಿ ಬಾಡಿಗೆ ಕಟ್ಟಡಗಳಲ್ಲಿ ದೈನಂದಿನ ಕೆಲಸಗಳು ಮುಂದುವರಿಯುತಿತ್ತು. ಆದರೆ 2014ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಬಂದನಂತರ ಪಂಚಾಯಿತಿಗಳಿಗೆ ಕೊಡುವ ಅನುದಾನವನ್ನು 18.75 ಸಾವಿರಕ್ಕೆ ಏರಿಸಿದ್ದು, ಇಂದು ಸುಸಜ್ಜಿತ ಕಟ್ಟಡಗಳು ನಿರ್ಮಾಣಗೊಳ್ಳುತ್ತಿವೆ ಎಂದರು. ಅಧ್ಯಕ್ಷರ ಕೊಠಡಿ ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೆÇನ್ನಣ್ಣ, ಸಂವಿದಾನವನ್ನು 72 ತಿದ್ದುಪಡಿಯ ಮೂಲಕ ಗ್ರಾ.ಪಂ ಅನ್ನು 1992 ರಲ್ಲಿ…

Read More

ಮಡಿಕೇರಿ ಜೂ.21 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಅರ್ಥಪೂರ್ಣವಾಗಿ ಜರುಗಿತು. “ವಸುದೈವ ಕುಟುಂಬಕ್ಕಾಗಿ ಯೋಗ’ ‘ಹರ್ ಆಂಗನ್ ಯೋಗ” ಎಂಬ ಘೋಷ ವ್ಯಾಕ್ಯದೊಂದಿಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಾಭಿಮಾನಿಗಳು ಭಾಗವಹಿಸಿ  ಯೋಗ, ಧ್ಯಾನ ಮಾಡಿ ಗಮನ ಸೆಳೆದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ, ಯೋಗ ಶಿಕ್ಷಕರಾದ ಮಹೇಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ…

Read More

ಮಡಿಕೇರಿ ಜೂ.21 : ನಗರದ ಮಲ್ಲಿಕಾರ್ಜುನ ನಗರದಲ್ಲಿ ಇತ್ತೀಚಿಗೆ ಪುನರ್ ಪ್ರತಿಷ್ಠಾಪನಗೊಂಡ ಕೋದಂಡರಾಮ ದೇವಾಲಯದಲ್ಲಿ ದೃಢಕಲಶ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಪುನರ್‍ಪ್ರತಿಷ್ಟೆ ಬಳಿಕ 48 ದಿನಗಳು ಕಳೆದು ನಡೆಯುವ ದೃಢಕಲಶ ಪೂಜೆಯಲ್ಲಿ ಹೋಮ-ಹವನದೊಂದಿಗೆ ಬೆಳಿಗ್ಗೆ 8 ಗಂಟೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಭಕ್ತರ ಸಮ್ಮುಖದಲ್ಲಿ ನೆರವೇರಿವು. ವೈದಿಕರುಗಳಾದ ಕೃಷ್ಣ ಉಪಾಧ್ಯ, ಶ್ರೀನಿವಾಸ ಉಪಾಧ್ಯ, ಅರ್ಚಕರುಗಳಾದ ಷಣ್ಮುಖ, ಸುಬ್ರಮಣ್ಯ ಶಾಸ್ತ್ರೀ ಹಾಗೂ ಕೋದಂಡರಾಮ ದೇವಾಲಯದ ಅರ್ಚಕ ಚಂದ್ರಕಾಂತ್ ಭಟ್ ಹಾಗೂ ಇತರ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾಧಿಗಳಿಂದ ವಿಷ್ಣು ಸಹಸ್ರನಾಮ ನಡೆಯಿತು. ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಜರುಗಿತು.

Read More

ನಾಪೋಕ್ಲು ಜೂ.21 : ಮುಂಗಾರು ಆರಂಭದ ಹಿನ್ನೆಲೆ ನಾಪೋಕ್ಲು ರೈತ ಸಂಪರ್ಕ ಕೇಂದ್ರದಲ್ಲಿ ಬೆಳೆಗಾರರಿಗೆ ವಿವಿಧ ಬಿತ್ತನೆ ಬೀಜಗಳನ್ನು ಒದಗಿಸಲು ಸಿದ್ಧತೆ ಮಾಡಲಾಗಿದೆ. ನಾಪೋಕ್ಲು ಹೋಬಳಿಯಲ್ಲಿ ಶೇಕಡ 50ರ ಸಹಾಯಧನದಲ್ಲಿ ತುಂಗಾ ಆರ್ ಎನ್ ಆರ್ 1508 ಬೀಜಗಳು ಲಭ್ಯವಿದ್ದು, ಭತ್ತ ಬೆಳೆಯುವ ರೈತರು ತಮ್ಮ ಮೂಲ ಆಧಾರ್ ಕಾರ್ಡು ತೋರಿಸಿ ಬಿತ್ತನೆ ಬೀಜಗಳನ್ನು ಪಡೆಯಬಹುದು ಎಂದು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಜೂ.21 : ಮಳೆ ಕೊರತೆ ಹಿನ್ನೆಲೆ ಜಿಲ್ಲೆಯಲ್ಲಿ ಉತ್ತಮ ಮಳೆ ಆಗುವಂತೆ ಸಂಸದ ಪ್ರತಾಪ ಸಿಂಹ ಹಾಗೂ ಮಾಜಿ ಶಾಸಕ ಕೆ.ಜಿ ಬೋಪಯ್ಯ ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಜೂನ್ ಮೂರನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಕೊಡಗಿನಲ್ಲಿ ಕಾಫಿ ಹಾಗೂ ಕಾಳುಮೆಣಸಿನ ಕೃಷಿಗೆ ಸಮಸ್ಯೆ ಉಂಟಾಗಲಿದೆ. ಕೃಷಿ ಚಟುವಟಿಕೆಗಳು ಹಿನ್ನಡೆ ಆಗಲಿವೆ. ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಮಾಜಿ ಶಾಸಕರು ಪ್ರಾರ್ಥಿಸಿದರು. ಈ ಸಂದರ್ಭ ಬಿಜೆಪಿ ತಾಲೂಕು ಅಧ್ಯಕ್ಷ ಕಾಂಗಿರ ಸತೀಶ್, ಬಿಜೆಪಿ ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಕೋಲೆಯಂಡ ಗಿರೀಶ್, ಬಿಜೆಪಿ ತಾಲೂಕು ಕಾರ್ಯದರ್ಶಿ ಪಾಡಿಯಮ್ಮಂಡ ಮನು ಮಹೇಶ್, ಕಕ್ಕಬೆ ಶಕ್ತಿ ಕೇಂದ್ರದ ಅಧ್ಯಕ್ಷ ಕಲಿಯಂಡ ಸುನಂದ, ತಾ.ಪಂ ಮಾಜಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಕಕ್ಕಬೆ ವಿಎಸ್ಎಸ್ ಎನ್ ಅಧ್ಯಕ್ಷ ಕಲ್ಯಾಟಂಡ ರಘು ತಮ್ಮಯ್ಯ, ಭಕ್ತ ಜನ ಸಂಘದ ಉಪಾಧ್ಯಕ್ಷ ಪರದಂಡ ಡಾಲಿ, ಚಂಡಿರ ಜಗದೀಶ್…

Read More