ಲೇಖಕ: admin

ಮಡಿಕೇರಿ ಮೇ 10 : ಪ್ರಜಾತಂತ್ರ ವ್ಯವಸ್ಥೆಯ ಅತ್ಯಂತ ಪವಿತ್ರ ‘ಮತದಾನ’ ಪ್ರಕ್ರಿಯೆಯ ಒಟ್ಟು ಪ್ರಮಾಣದ ಹೆಚ್ಚಳಕ್ಕೆ ಪೂರಕವಾಗಿ ಜಿಲ್ಲೆಯ ಎರಡು ಮತ ಕ್ಷೇತ್ರಗಳ ಹತ್ತು ಮತಗಟ್ಟೆಗಳು ‘ಸಖಿ ಮತಗಟ್ಟೆ’ಗಳಾಗಿ ಮತದಾರರ ಗಮನ ಸೆಳೆಯಿತು. ಜಿಲ್ಲಾ ಕೇಂದ್ರ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮತಗಟ್ಟೆ 199 ಮತ್ತು ಮಹದೇವಪೇಟೆಯ ಸಿಎಂಸಿ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ 201 ಸರ್ವಾಲಂಕೃತಗೊoಡು ‘ಸಖಿ ಮತಗಟ್ಟೆ’ಯಾಗಿ ಗಮನ ಸೆಳೆಯಿತು. ವಿಶೇಷವಾಗಿ ಈ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿಗಳೆಲ್ಲರು ಮಹಿಳೆಯರೇ ಆಗಿದ್ದು, ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾದರು. ‘ನಾನು ಹೆಮ್ಮೆಯ ಮತದಾರ. ನನ್ನ ಮತ, ನನ್ನ ಧ್ವನಿ” ಘೋಷವಾಕ್ಯದ ಆಕರ್ಷಕ ಘೋಷಣೆಯೊಂದಿಗೆ ಸಖಿ ಮತಗಟ್ಟೆಯ ಮುಖ್ಯ ದ್ವಾರ ಮತದಾರರನನ್ನು ತನ್ನೆಡೆಗೆ ಸೆಳೆಯುವುದರೊಂದಿಗೆ, ಘೋಷಣೆಯ ಮೂಲಕ ಗಮನ ಸೆಳೆಯುತಿತ್ತು. ಈ ವಿಶೇಷ ಮತಗಟ್ಟೆಯಲ್ಲಿ ಮತದಾನ ಮಾಡಿದವರು ತಮ್ಮ ಭಾವ ಚಿತ್ರ ತೆಗೆದುಕೊಳ್ಳಲು ಅನುಕೂಲವಾಗುವಂತೆ ‘ಸೆಲ್ಫಿ ಬೂತ್’ ಸಜ್ಜುಗೊಳಿಸಿದ್ದು, ಸಾಕಷ್ಟು ಮತದಾರರು ಈ ಸೆಲ್ಫಿ ಬೂತ್‌ನಲ್ಲಿ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದು…

Read More

ಮಡಿಕೇರಿ ಮೇ 10 : ಕೊಡಗು ಜಿಲ್ಲೆಯಾದ್ಯಂತ ವಿಧಾನಸಭೆಗೆ ಉತ್ಸಾಹದಿಂದ ಮತದಾನ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜು ಮತಗಟ್ಟೆಯಲ್ಲಿ ವರ ಹೊಸ್ಕೇರಿ ಗ್ರಾಮದ ಚೋಂದಿರ ಜಗದೀಶ್ ಮತದಾನ ಮಾಡಿದರು. ನಂತರ ಮೂರ್ನಾಡು ಗೌಡ ಸಮಾಜದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Read More

ಮಡಿಕೇರಿ ಮೇ 10 : ನಕ್ಸಲ್ ಪೀಡಿತ ವಣಚಲು ಮತಗಟ್ಟೆಯಲ್ಲಿ ಬೆಳಗ್ಗಿನ ಅವಧಿ ಚುರುಕಿನ ಮತದಾನ ನಡೆಯಿತು. ಮಧ್ಯಾಹ್ನದ ವೇಳೆಗೆ ಶೇ.55ರಷ್ಟು ಮತದಾನ ದಾಖಲಾಯಿತು. ಈ ಮತಗಟ್ಟೆಗೆ ಶಸ್ತ್ರ ಸಜ್ಜಿತ ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ದಕ್ಷಿಣ ಕೊಡಗಿನ ಕೆಲ ಮತಗಟ್ಟೆಗಳು ವನ್ಯಜೀವಿಗಳ ಉಪಟಳಕ್ಕೆ ತುತ್ತಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಎಲಿಫೆಂಟ್ ಟಾಸ್ಕ್ ಫೋರ್ಸ್ ನಿಯೋಜನೆ ಮಾಡಲಾಗಿತ್ತು.ಭಯ ಮುಕ್ತ ಮತದಾನಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕೈಜೋಡಿಸಿದ್ದರು. ಮಡಿಕೇರಿ ಕ್ಷೇತ್ರದ ಮಾದಾಪುರ ಮತಗಟ್ಟೆಯ ಗೊಂದಲದಿಂದ ಕೆಲ ಕಾಲ ಮತದಾನಕ್ಕೆ ತೊಡಕುಂಟಾಯಿತು. ಈ ಹಂತದಲ್ಲಿ ಮತದಾನಕ್ಕೆ ಕಾಯ್ದು ಬಳಲಿದ್ದ ಮತದಾರರು ಕುಡಿಯುವ ನೀರಿಗಾಗಿ ಪರದಾಡಿ ತಾಳ್ಮೆ ಕಳೆದುಕೊಂಡರು. ಈ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಅರೆಸೇನಾ ಪಡೆಯ ಸಿಬ್ಬಂದಿ ಲಾಠಿ ಬೀಸಿದ ಪರಿಣಾಮ ಮತದಾರರೊಬ್ಬರ ಕಾಲಿಗೆ ಗಾಯವಾಗಿ ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಯಿತು. ನಂತರ ಚುನಾವಣಾಧಿಕಾರಿಗಳು ಶಾಂತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಿಕೊಟ್ಟರು. ಜಂಬೂರು ಬಾಣೆ ಮತ್ತು ಎಫ್.ಎಂ.ಸಿ ಬಡಾವಣೆಯ (ಪ್ರಕೃತಿ ವಿಕೋಪ ಪುನರ್ವಸತಿ ಬಡಾವಣೆ)…

Read More

ಮಡಿಕೇರಿ ಮೇ 10 : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುವಕ ಯುವತಿಯರನ್ನು ಒಳಗೊಂಡಂತೆ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಕುಟುಂಬದವರೊಂದಿಗೆ ಮತದಾನ ಮಾಡಿ ನಂತರ ಸೆಲ್ಫಿ ಕ್ಲಿಕ್ಕಿಸಿಕೊಂಡು ಗಮನ ಸೆಳೆದರು.

Read More

ಮಡಿಕೇರಿ ಮೇ.10 : ವಿಧಾನಸಭಾ ಚುನಾವಣೆಯ ಮತದಾನವು ಜಿಲ್ಲೆಯಾದ್ಯಂತ ಬುಧವಾರ ಶಾಂತಿಯುತ ಹಾಗೂ ಬಿರುಸಿನಿಂದ ನಡೆಯಿತು. ಜಿಲ್ಲೆಯಲ್ಲಿ 9 ಗಂಟೆ ವೇಳೆಗೆ ಶೇ.11.74 ರಷ್ಟು, 11 ಗಂಟೆ ವೇಳೆಗೆ ಶೇ.26.52 ರಷ್ಟು, ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.45.64 ರಷ್ಟು, ಮಧ್ಯಾಹ್ನ 3 ಗಂಟೆ ವೇಳೆಗೆ 58.24 ರಷ್ಟು ಮತದಾನವಾಗಿತ್ತು. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದ ಒಟ್ಟು 543 ಮತಗಟ್ಟೆಗಳಲ್ಲಿ ಮತದಾರರು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಬೆಳಗ್ಗಿನ ವೇಳೆಯಲ್ಲಿ ಮತಗಟ್ಟೆ ಕೇಂದ್ರಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಮತಹಕ್ಕು ಚಲಾಯಿಸಿದ್ದು ಕಂಡುಬಂದಿತು. ಮತದಾರರು ಮತಹಕ್ಕು ಚಲಾಯಿಸಿ ಮತಗಟ್ಟೆಯಿಂದ ಹೊರಬರುತ್ತಿದ್ದ ದೃಶ್ಯವು ಮತದಾನದ ಹುಮ್ಮಸ್ಸನ್ನು ಹೆಚ್ಚಿಸಿತು. ಪ್ರಥಮ ಬಾರಿಗೆ ಮತಹಕ್ಕು ಚಲಾಯಿಸಿದ ಯುವ ಮತದಾರರು ಸಂತಸದಿಂದ ಮತದಾನದ ಹಬ್ಬದಲ್ಲಿ ಪಾಲ್ಗೊಂಡು ಮತಹಕ್ಕು ಚಲಾಯಿಸಿದರು. ತಿತಿಮತಿ ಗ್ರಾಮದ ಯುವ ಮತದಾರರೊಬ್ಬರು ಮಾತನಾಡಿ ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಮತ ಚಲಾಯಿಸಿದ್ದೇನೆ. ಪ್ರಥಮ ಬಾರಿಗೆ ಮತದಾನ ಮಾಡಿದ್ದು ತುಂಬಾ ಖುಷಿ ತಂದಿದೆ ಎಂದರು. ನಕ್ಸಲ್ ಪೀಡಿತ…

Read More

ಮಡಿಕೇರಿ ಮೇ 6 :   ಕೊಡಗು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಕಾವಾಡಿ – ಅಮ್ಮತ್ತಿ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Read More

ವಿರಾಜಪೇಟೆ ಮೇ 10 : ನಾಪೋಕ್ಲು ಸಮೀಪದ ಬೇತು ಸ.ಹಿ.ಪ್ರಾ.ಶಾಲೆಯ ಮತಗಟ್ಟೆಗೆ ಹಿರಿಯ ವಿಶೇಷ ಚೇತನರೊಬ್ಬರು ಗಾಲಿ ಖುರ್ಚಿಯಲ್ಲಿ ತೆರಳಿ ಮತದಾನ ಮಾಡಿ  ಗಮನ ಸೆಳೆದರು.

Read More

ಮಡಿಕೇರಿ ಮೇ 10 :   ಆಮ್ ಆದ್ಮಿ ಪಕ್ಷದ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವೀಂದ್ರ ವಿರಾಜಪೇಟೆ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿದರು. ಕೊಂಡಂಗೇರಿ,  ಚಂಬೆಬೆಳ್ಳೂರು, ಬಿಟ್ಟಂಗಾಲ, ವಿ.ಬಾಡಗ, ಬಾಳೆಲೆ ಬೂತ್  ಗಳಿಗೆ ಭೇಟಿ ನೀಡಿ  ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಹಾಜರಿದ್ದರು.

Read More

ಮಡಿಕೇರಿ ಮೇ 10 : ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ಹಾಗೂ ಕೊಡಗು ಜಿಲ್ಲಾ ಮರಾಠ, ಮರಾಠಿ ಸಮಾಜ ಸೇವಾ ಸಂಘ ತಾಳತ್ತಮನೆ ವತಿಯಿಂದ ಮೇ 13 ಮತ್ತು 14 ರಂದು ಎಂ.ಪಿ.ಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಯುವಕ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್, ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ಗಂಟೆಗೆ ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಬೇರೆ ಜಿಲ್ಲೆ ಅಥವಾ ರಾಜ್ಯದ ಸ್ವಜಾತಿ ಪ್ರತಿ ತಂಡದಲ್ಲಿ ಇಬ್ಬರು ಅತಿಥಿ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಥಮ ಬಹುಮಾನ ರೂ.25 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.15 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ತೃತೀಯ ಬಹುಮಾನ ರೂ.5 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, 4ನೇ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ಮತ್ತು ಇತರ ವೈಯುಕ್ತಿಕ ಬಹುಮಾನಗಳನ್ನು…

Read More

ಕಡಂಗ  ಮೇ 10 : ಎಡಪಾಲ ಹಾಗೂ ಅರಪಟ್ಟು ಪೊದವಾಡ ಮತಗಟ್ಟೆಯಲ್ಲಿ  ಬೆಳಿಗ್ಗೆ 7 ಗಂಟೆಯಿಂದ  ಬಿರುಸಿನ ಮತದಾನ ನಡೆಯಿತು. ಮಹಿಳೆಯರು, ವಯಸ್ಕರು , ಅಂಗವಿಕಲರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಮೊದಲ ಬಾರಿಗೆ ಮತದಾನ ಮಾಡಿದ ಯುವ ಮತದಾರರು ಹರ್ಷ ವ್ಯಕ್ತಪಡಿಸಿದರು. ಅರಪಟ್ಟು ಪೊದವಾಡ ಮತಗಟ್ಟೆ ಗೆ ವಿರಾಜಪೇಟೆ ಸರ್ಕಲ್ ಇನ್ಸ್‌ಪೆಕ್ಟರ್  ಶಿವ ರುದ್ರ ಹಾಗೂ ಗ್ರಾಮಾಂತರ ಠಾಣಾಣಾಧಿಕಾರಿ ರವಿಕುಮಾರ್  ಭೇಟಿ ನೀಡಿ  ಪರಿಶೀಲಿಸಿದರು ವರದಿ : ನೌಫಲ್ ಕಡಂಗ  

Read More