ಮಡಿಕೇರಿ ಜೂ 21 : ಕೊಡಗು ಪ್ರೆಸ್ ಕ್ಲಬ್ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.25 ರಂದು ಪತ್ರಿಕಾ ಭವನದಲ್ಲಿ ಆಯೋಜಿಸ ಲಾಗಿದೆ ಎಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಚೀಯಂಡಿ ತೇಜಸ್ ಪಾಪಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಅತ್ಯುತ್ತಮ ಪರಿಣಾಮಕಾರಿ ವರದಿಗಾಗಿ ಕೆ.ಬಿ. ಮಹಾಂತೇಶ್ ಸ್ಮರಣಾರ್ಥ ನೀಡುವ ಪ್ರಶಸ್ತಿಗೆ ಭಾಜನರಾಗಿರುವ ಹಿರಿಕರ ರವಿ ಅವರಿಗೆ ಶಕ್ತಿ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಪಾಲ್ಗೊಳ್ಳಲಿದ್ದಾರೆ. ಬೊಳ್ಳಜೀರ ಬಿ.…
ಲೇಖಕ: admin
ಸೋಮವಾರಪೇಟೆ ಜೂ.21 : ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಹಾಗೂ ಬೆಳೆಗಾರರ ವಿದ್ಯುತ್ಬಿಲ್ ಬಾಕಿ ಮನ್ನಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸದ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದೆಂದು ರಾಜ್ಯ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಹೇಳಿದರು. ಕೊಡಗು ಜಿಲ್ಲಾ ರೈತ ಸಂಘದ ವತಿಯಿಂದ ಸಫಾಲಿ ಹಾಲ್ನಲ್ಲಿ ನಡೆದ ರೈತರ ಮಾಸಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭತ್ತ, ಅಡಕೆ, ತೆಂಗು, ಹೊಗೆಸೊಪ್ಪು ಸೇರಿದಂತೆ ಇನ್ನಿತರ ಬೆಳೆಗಳಿಗೆ ಉಚಿತ ವಿದ್ಯುತ್ ನೀಡುತ್ತಾರೆ. ಆದರೆ ಸಂಕಷ್ಟದಲ್ಲಿರುವ ಸಣ್ಣ ಕಾಫಿ ಬೆಳೆಗಾರರಿಗೆ ಈ ಸೌಲಭ್ಯವಿಲ್ಲ ಎಂದು ವಿಷಾಧಿಸಿದರು. ರೈತ ಸಂಘದ ಹೋರಾಟದ ಫಲವಾಗಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ 10ಎಚ್.ಪಿ.ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರು ವಿಧಾನಸಭೆ ಅಧಿವೇಶನದಲ್ಲಿ ಘೋಷಣೆ ಮಾಡಿದ್ದರು. ಅದನ್ನು ರೈತ ಸಂಘ ಸ್ವಾಗತ ಮಾಡಿತ್ತು. ಆದರೆ ನಂತರ ತಂದ ಸಬ್ಸಿಡಿ ನಿಯಮವನ್ನು ಸಂಘ…
ಸುಂಟಿಕೊಪ್ಪ,ಜೂ.20 : ಮಡಿಕೇರಿಯ ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ವತಿಯಿಂದ ಮಡಿಕೇರಿ ಶಾಸಕ ಮಂಥರ್ ಗೌಡ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ದಿವ್ಯ ಜ್ಯೋತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿರಿಲ್ ಮೊರಾಸ್ ಉಪಾಧ್ಯಕ್ಷ ಎನ್.ಟಿ.ಜೋಸೆಫ್ ಹಾಗೂ ನಿರ್ದೇಶಕರುಗಳು ಸೇರಿ ಶಾಸಕರಿಗೆ ಮಂಥರ್ ಗೌಡ ಅವರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
ಮಡಿಕೇರಿ ಜೂ.20 : ಕಕ್ಕಬೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಗುತ್ತಿಗೆದಾರ ವಿ.ಜಿ.ಮೋಹನ್ ಕಲಿಕಾ ಪ್ರೋತ್ಸಾಹಕವಾಗಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿದರು. ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕುಂಜಿಲ-ಕಕ್ಕಬೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕೆ.ಎ.ಕಾರ್ಯಪ್ಪ, ಪ್ರಮುಖರಾದ ಕಿರಣ್, ಶಾಲಾ ಶಿಕ್ಷಕರು ಹಾಜರಿದ್ದರು.
ನಾಪೋಕ್ಲು ಜೂ.20 : ಮಳೆಗಾಲ ಪ್ರಾರಂಭಕ್ಕೂ ಮೊದಲು ಚೆರಿಯಪರಂಬು ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡುವಂತೆ ಒತ್ತಾಯಿಸಿ ನಾಪೋಕ್ಲು ಗ್ರಾ.ಪಂ ಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಗ್ರಾ.ಪಂ ಅಧ್ಯಕ್ಷೆ ಎಚ್. ಎಸ್.ಪಾರ್ವತಿ ಅವರಿಗೆ ಮನವಿ ನೀಡಿದ ಗ್ರಾಮಸ್ಥರು, ಚೆರಿಯಪರಂಬು ಗ್ರಾಮವು ಪ್ರವಾಹ ಪೀಡಿತ ಗ್ರಾಮವಾಗಿದೆ. ಗ್ರಾಮದ ರಸ್ತೆಗೆ ಸರಿಯಾದ ಚೆರಂಡಿ ವ್ಯವಸ್ಥೆ ಇಲ್ಲದೆ ಮಳೆಗಾಲದಲ್ಲಿ ನೀರು ರಸ್ತೆಯಲ್ಲಿಯೇ ಶೇಖರಣೆಗೊಂಡು ಶಾಲಾ ಮಕ್ಕಳು, ಸಾರ್ವಜನಿಕರು ನಡೆದಾಡಲು ಬವಣೆ ಪಡುವ ಪರಿಸ್ಥಿತಿ ಉದ್ಭವ ವಾಗಲಿದೆ. ಅದರಂತೆ ಗ್ರಾಮದಲ್ಲಿ ಬೀದಿ ದೀಪಗಳಿಲ್ಲದೆ ಕತ್ತಲಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಇದ್ದು ಮಳೆಗಾಲ ಪ್ರಾರಂಭಕ್ಕೂ ಮೊದಲು ಪಂಚಾಯಿತಿ ವತಿಯಿಂದ ಗ್ರಾಮಕ್ಕೆ ಆಗಬೇಕಾದ ಮೂಲಭೂತ ಸೌಕರ್ಯದ ವ್ಯವಸ್ಥೆಗಳನ್ನು ಪೂರ್ಣಗೊಳಿಸಿ ಕೊಡಬೇಕೆಂದು ಗ್ರಾಮಸ್ಥರು ಮನವಿ ಸಲ್ಲಿಸಿದರು. ಈ ಸಂದರ್ಭ ಗ್ರಾಮಸ್ಥರಾದ ಪರವಂಡ ಸಿರಾಜ್, ಅಬ್ದುಲ್ ರಜಾಕ್,ಬಶೀರ್, ಅಫೀಲ್,ರಶೀದ್, ಅಬ್ದುಲ್ ಖಾದರ್ ಮತ್ತಿತರರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು
ಮಡಿಕೇರಿ ಜೂ.20 : ಮೂರ್ನಾಡು 33/11ಕೆವಿ ಎಂಯುಎಸ್ಎಸ್ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಜೂ.21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊದವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಜೂ.20 : ಸರ್ಕಾರದ ಎಲ್ಲಾ ಯೋಜನೆಗಳನ್ನು ನಿಯಮಾನುಸಾರ ಅನುಷ್ಟಾನಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್.ಆಕಾಶ್ ಸೂಚನೆ ನೀಡಿದರು. ನಗರದ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಡಿಕೇರಿ ತಾಲೂಕು ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಜಿ.ಪಂ.ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಹಲವು ಯೋಜನೆಗಳು ಪ್ರಗತಿ ಹಂತದಲ್ಲಿದೆ. ಇವುಗಳನ್ನು ಕಾಲಮಿತಿಯೊಳಗೆ ಅನುಷ್ಟಾನಿಸಿ ಸಂಪೂರ್ಣ ಪ್ರಗತಿ ಸಾಧಿಸಬೇಕು. ನಿಯಮಾನುಸಾರ ಗ್ರಾಮಪಂಚಾಯಿತಿಗಳು ಕಂದಾಯ ಸಂಗ್ರಹಣೆ ಮಾಡುವಂತೆ ಸೂಚನೆ ನೀಡಿದರು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮಪಂಚಾಯತ್ ಗಳು ಮಹಿಳಾ ಸ್ವ ಸಹಾಯ ಸಂಘಗಳ ಸಹಕಾರದೊಂದಿಗೆ ಸೂಕ್ತ ರೀತಿಯಲ್ಲಿ ಘನ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿಗಳನ್ನು ಕೈಗೊಳ್ಳಬೇಕು. ಗ್ರಾಮ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಅರ್ಹ…
ಮಡಿಕೇರಿ ಜೂ.20 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ಮತ್ತು ಪಿಯುಸಿ ಸಮನಾಂತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: http://shp.karnataka.gov.in. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ಆಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕೆ ಇಲಾಖೆಯ ವೆಬ್ಸೈಟ್ http://bcwd.karnataka.gov.in ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಯವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ…
ಮಡಿಕೇರಿ ಜೂ.20 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕ ಪಿ.ಬಿ.ಯತೀಶ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಯೋಗೇದ್ರ ನಾಯಕ್ ಅವರಿಗೆ ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷರಾದ ಆನಂದ್ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದು 2022-2023ನೇ ಸಾಲಿನ ಲಾಭಾಂಶದಿಂದ ತೆಗೆದ ಶೇಕಡಾ 2 ರಷ್ಟು ಮೊತ್ತವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ನೀಡಬೇಕಾಗಿರುವುದರಿಂದ ಜಿಲ್ಲೆಯಲ್ಲೇ ಪ್ರಥಮವಾಗಿ ಸಹಕಾರ ಶಿಕ್ಷಣ ನಿಧಿ ಚೆಕ್ಕನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಗೆ ನೀಡಿರುತ್ತಾರೆ.
ಮಡಿಕೇರಿ ಜೂ.20 : ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ ಹೀಗೆ ವಿವಿಧ ಪಿಂಚಣಿಯನ್ನು ಕೊಡಗು ಜಿಲ್ಲೆಯಲ್ಲಿ ಒಟ್ಟು 69,473 ಫಲಾನುಭವಿಗಳಿಗೆ ಈಗಾಗಲೇ ವಿತರಿಸಲಾಗಿದ್ದು, ಈ ಪಿಂಚಣಿಯನ್ನು ಸಂಬಂಧಿಸಿದ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ಆದರೆ ಜೂನ್, 2023 ರಿಂದ ಸಾಮಾಜಿಕ ಭದ್ರತಾ ಯೋಜನೆ ಮತ್ತು ಪಿಂಚಣಿಗಳ ನಿರ್ದೇಶನಾಲಯವು ಫಲಾನುಭವಿಗಳಿಗೆ ಪಾವತಿಸುತ್ತಿರುವ ಪಿಂಚಣಿಯನ್ನು ಆಧಾರ್ ನಂಬರ್ ಆಧಾರಿತ ಪಾವತಿಯನ್ನಾಗಿಸಲು ತೀರ್ಮಾನಿಸಿದ್ದು, ಈ ತೀರ್ಮಾನದಂತೆ ಆಧಾರ್ ನಂಬರನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವ ಎನ್ಪಿಸಿಐ ಮ್ಯಾಪಿಂಗ್ ಆಗದೇ ಇರುವ ಹಾಗೂ ಬ್ಯಾಂಕ್/ ಅಂಚೆ ಕಚೇರಿಯಲ್ಲಿ ಚಾಲನೆಯಲ್ಲಿಲ್ಲದಿರುವ ಖಾತೆಗಳಿಗೆ ಪಿಂಚಣಿ ಪಾವತಿಯಾಗುವುದಿಲ್ಲ. ಈ ಕಾರ್ಯವನ್ನು ಜೂ.25 ರ ಒಳಗೆ ಫಲಾನುಭವಿಗಳು ಸರಿಪಡಿಸಿಕೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಅಂತಹ ಒಟ್ಟು 5,949 ಫಲಾನುಭವಿಗಳಿದ್ದು, ಈ ಫಲಾನುಭವಿಗಳ ಪಟ್ಟಿಯನ್ನು ನಿರ್ದೇಶನಾಲಯದಿಂದ ಕಳುಹಿಸಲಾಗಿದ್ದು, ತಾಲ್ಲೂಕುವಾರು ವಿವರ ಇಂತಿದೆ: ಮಡಿಕೇರಿ…






