ಲೇಖಕ: admin

ಮಡಿಕೇರಿ ಮೇ 9 : ಶಸ್ತ್ರ ಚಿಕಿತ್ಸೆಯ ನಂತರ ಎರಡೂ ಕಣ್ಣುಗಳ ದೃಷ್ಟಿಯನ್ನು ಕಳೆದುಕೊಂಡಿರುವ ತರುಣೇಶ ಡಿ.ಎಸ್ ದೇವಗೋಂಡಿ ಅವರಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆ ಆರ್ಥಿಕ ನೆರವನ್ನು ನೀಡಿತು. ನಗರದ ಬಾಲಭವನದಲ್ಲಿ ಧನ ಸಹಾಯ ಹಸ್ತಾಂತರಿಸುವ ಸಂದರ್ಭ ಸಂಸ್ಥೆಯ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್, ಕಾರ್ಯದರ್ಶಿ ಲಲಿತಾ ರಾಘವನ್, ಸದಸ್ಯರುಗಳಾದ ಉಮಾಗೌರಿ, ಮಲ್ಲಿಗೆ ಪೈ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ತರುಣೇಶ ಅವರು 4 ವರ್ಷಗಳ ಹಿಂದೆ ದೃಷ್ಟಿಯನ್ನು ಕಳೆದುಕೊಂಡಿದ್ದರು.

Read More

ಸೋಮವಾರಪೇಟೆ ಮೇ 9 : ಹತ್ತನೇ ತರಗತಿಯಲ್ಲಿ ಸೋಮವಾರಪೇಟೆ ಸಮೀಪದ ನೇರುಗಳಲೆ ಸರ್ಕಾರಿ ಪ್ರೌಢಶಾಲೆ, ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ಆಂಗ್ಲಮಾಧ್ಯಮ ಶಾಲೆ, ಓಎಲ್‌ವಿ ಆಂಗ್ಲ ಮಾಧ್ಯಮ ಶಾಲೆ ಶೇ.100ರಷ್ಟು ಫಲಿತಾಂಶ ಪಡೆದಿವೆ. ನೇರುಗಳಲೆ ಶಾಲೆಯಲ್ಲಿ 18 ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಅತ್ಯುನ್ನತ ಶ್ರೇಣಿ, 14 ಉನ್ನತಶ್ರೇಣಿ, 3 ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಲಾಂಛನ್ ಶೇ.86, ನಿಶಾಂತ್ ಶೇ.85, ನವೀನ್ ಶೇ.84 ಅಂಕಗಳಿಸಿದ್ದಾರೆ. ಕುವೆoಪು ಶಾಲೆಯಲ್ಲಿ 44 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 26 ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವೈ.ಎಸ್.ಧನ್ಯ ಶಾಲೆಗೆ ಟಾಪರ್ ಆಗಿದ್ದು, 907 ಅಂಕಗಳೊoದಿಗೆ ಶೇ.97.12, ಎಸ್.ವೈ.ಹಿಮಾನಿ ಶೇ. 95.36, ಸಿ.ಎಸ್.ಸೂರ್ಯ 95.36, ಪುಷ್ಪಾಂಜಲಿ ಶೇ.93, ಅಮೃತ್ ಶೇ.93 ಅಂಕಗಳಿಸಿದ್ದಾರೆ. ಓಎಲ್‌ವಿ ಶಾಲೆ 83 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 32 ಉನ್ನತಶ್ರೇಣಿ, 14 ದ್ವಿತೀಯ ಶ್ರೇಣಿ, 11 ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕೆ.ಎಸ್.ಅನುಜ್ ಶೇ.98.72 ಅಂಕಗಳೊoದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾನೆ. ದಿವಿನ್…

Read More

ಮಡಿಕೇರಿ ಮೇ 9 : ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಡಿಕೇರಿ ನಗರದ ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿನಿ ಬಿ.ಆರ್.ರಿದಾ ಸುಮನ್ 625 ಕ್ಕೆ 615 ಅಂಕಗಳನ್ನು ಪಡೆದು ಶೇ. 98.4 ರಷ್ಟು ಫಲಿತಾಂಶದೊoದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಕನ್ನಡ 125, ಇಂಗ್ಲೀಷ್ 100, ಹಿಂದಿ 99, ವಿಜ್ಞಾನ 100, ಗಣಿತ 93, ಸಮಾಜ ವಿಜ್ಞಾನ 98 ಅಂಕ ಪಡೆದಿದ್ದಾಳೆ. ಈಕೆ ಮಡಿಕೇರಿ ಆಕಾಶವಾಣಿ ಕಾರ್ಯಕ್ರಮ ನಿರೂಪಕ ಬಿ.ಎಸ್.ರಫೀಕ್ ಅಹ್ಮದ್ ಹಾಗೂ ರೈಹಾನ ದಂಪತಿಯ ಪುತ್ರಿ.

Read More

ಸುಂಟಿಕೊಪ್ಪ ಮೇ 9 : ನಾಕೂರು – ಶಿರಾಂಗಾಲ ಗ್ರಾಮದ ದಿವಂಗತ ರಾಜಪ್ಪ ಮಾಸ್ಟರ್ ಅವರ ಪುತ್ರ, ಪ್ರಸ್ತುತ ಸುಂಟಿಕೊಪ್ಪ ಉಲುಗುಲಿ ರಸ್ತೆಯಲ್ಲಿ ನೆಲೆಸಿದ್ದ ವಕೀಲ ಎಸ್.ಆರ್.ಬಸಪ್ಪ (69) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ.

Read More

ಮಡಿಕೇರಿ ಮೇ 9 : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ನಗರದ ಸಂತ ಮೈಕಲರ ಶಾಲೆಯ ಮತಗಟ್ಟೆಯಲ್ಲಿ ಹಿರಿಯ ರಾಜಕಾರಣಿ ಮಿಟ್ಟು ಚಂಗಪ್ಪ ಹಾಗೂ ಪತ್ನಿ ಯಶಿ ಚಂಗಪ್ಪ ಅವರು ಮೇ 10 ರಂದು ಬೆಳಗ್ಗೆ 7 ಗಂಟೆಗೆ 30 ನೇ ಬಾರಿಗೆ ಮೊದಲಿಗರಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಕ್ಕು ಚಲಾಯಿಸಲಿದ್ದಾರೆ. ಎಐಸಿಸಿ ಸದಸ್ಯ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹಲವು ಹುದ್ದೆಗಳನ್ನು ನಿರ್ವಹಿಸಿರುವ 82 ವರ್ಷದ ಮಿಟ್ಟು ಚಂಗಪ್ಪ ಅವರು ಯುವ ಮತದಾರರಿಗೆ ಸ್ಫೂರ್ತಿಯಾಗಿದ್ದಾರೆ. ಅಭಿಮಾನಿಗಳು ಮಿಟ್ಟು ಅವರನ್ನು ಕೊಡಗು ಕಾಂಗ್ರೆಸ್ ನ ಭೀಷ್ಮ ಎಂದೇ ಕರೆಯುತ್ತಾರೆ.

Read More

ಮಡಿಕೇರಿ ಮೇ 9 : ವಿಧಾನಸಭಾ ಚುನಾವಣೆ ಹಿನ್ನೆಲೆ ಮೇ, 10 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನದ ಮಹತ್ವವನ್ನು ಸಾರುವ ಉದ್ದೇಶದಿಂದ ಸಾಂಕೇತಿಕವಾಗಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 210 ಹಾಗೂ 211 ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆ, ಹಿಲ್ ರಸ್ತೆ, ಮಡಿಕೇರಿ ಇಲ್ಲಿನ ಮತಗಟ್ಟೆಯನ್ನು ಮಾದರಿ ಮತಗಟ್ಟೆಯಾಗಿ ವಿನ್ಯಾಸಗೊಳಿಸಲಾಗಿದೆ. ಮಾದರಿ ಮತಗಟ್ಟೆಯಲ್ಲಿ ಲಭ್ಯವಿರುವ ಸೌಲಭ್ಯಗಳು: ಶಾಲಾ ಕಟ್ಟಡವನ್ನು ಕೊಡಗಿನ ಕಾಫಿ ಸಂಸ್ಕೃತಿಯನ್ನು ಸಾರುವ ಚಿತ್ರಕಲೆ ಮೂಲಕ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ವಿಶೇಷಚೇತನರಿಗಾಗಿ ರ‍್ಯಾಂಪ್, , ರೈಲಿಂಗ್ಸ್, ವೀಲ್‍ಚೇರ್ ಹಾಗೂ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ರಿಯಾಯಿತಿ ದರದಲ್ಲಿ ಮತದಾರರಿಗೆ ಕುಡಿಯಲು ಕಾಫಿ ವ್ಯವಸ್ಥೆ ಮಾಡಲಾಗಿದೆ(ರೂ.10 ಕ್ಕೆ ಫಿಲ್ಟರ್ ಕಾಫಿಯನ್ನು ನಿರೀಕ್ಷಣಾ ಕೊಠಡಿಯಲ್ಲಿ ಕುಳಿತು ಸವಿಯಬಹುದಾಗಿದೆ). ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ಕಲ್ಪಿಸಲಾಗಿದೆ. ಪೀಠೋಪಕರಣಗಳು, ಫ್ಯಾನ್, ಬೆಳಕಿನ ವ್ಯವಸ್ಥೆಗಳನ್ನೊಳಗೊಂಡಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು…

Read More

ಮಡಿಕೇರಿ ಮೇ 9 : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ‘ಸೆಲ್ಫಿ ಕಂಟೆಸ್ಟ್’ ಸ್ಪರ್ಧೆ ಆಯೋಜಿಸಿದೆ. ಮತದಾನ ಮಾಡಿದ ಎಲ್ಲರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಯುವಕ ಯುವತಿಯರನ್ನು ಒಳಗೊಂಡಂತೆ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಕುಟುಂಬದವರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ. ಉತ್ತಮ ಫೋಟೋಗಳಿಗೆ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಮತದಾನ ಮಾಡಿದ ನಂತರ ಏಕಮಾತ್ರವಾಗಿ ಅಥವಾ ಗುಂಪಿನಲ್ಲಿ ಸೆಲ್ಫಿಯನ್ನು ಕ್ಲಿಕ್ಕಿಸಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕುಟುಂಬ ವರ್ಗ, ಸ್ನೇಹಿತರೊಂದಿಗೆ ಇರುವ ಫೋಟೋಗಳಿಗೆ ಆದ್ಯತೆ ನೀಡಲಾಗುವುದು. ಮತಗಟ್ಟೆಯ ಒಳಗೆ ಮೊಬೈಲ್ ಪೋನ್ ತೆಗೆದುಕೊಂಡು ಹೋಗುವಂತಿಲ್ಲ. ಮತದಾನ ಮಾಡಿದ ನಂತರವಷ್ಟೇ ತಮ್ಮ ಫೋನನ್ನು ಬಳಸಿ ಮತಗಟ್ಟೆಯ ಹೊರಭಾಗದಲ್ಲಿ ನಿಂತು ಸೆಲ್ಫಿ ತೆಗೆದು ಕಳುಹಿಸಬಹುದು ಎಂದು ಹೇಳಿದ್ದಾರೆ. ಛಾಯಾಚಿತ್ರವನ್ನು ಮೇ, 10 ರ ಮತದಾನದ ದಿನದಂದು ಸಂಜೆ 6 ಗಂಟೆಯೊಳಗೆ ಕಳುಹಿಸಬೇಕು. ಉತ್ತಮವಾದ…

Read More

ಮಡಿಕೇರಿ ಮೇ 9 : ವಿಧಾನಸಭಾ ಚುನಾವಣೆ ಸಂಬಂಧ ಮಸ್ಟರಿಂಗ್ ಕಾರ್ಯವು ನಗರದ ಸಂತ ಜೋಸೆಫರ ಶಾಲೆ ಮತ್ತು ವಿರಾಜಪೇಟೆಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸುಸೂತ್ರವಾಗಿ ನಡೆಯಿತು. ವಿಧಾನಸಭಾ ಚುನಾವಣೆ ಸಂಬಂಧ ಜಿಲ್ಲೆಯ 543 ಮತಗಟ್ಟೆಗಳಿಗೆ ನಿಯೋಜಿಸಿರುವ ಎಲ್ಲಾ ಹಂತದ ಪೊಲಿಂಗ್ ಅಧಿಕಾರಿಗಳು ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ ತಮಗೆ ಹಂಚಿಕೆಯಾದ ಮತಗಟ್ಟೆಯ ಸಂಖ್ಯೆಯನ್ನು ತಿಳಿದುಕೊಂಡು ನಿಗಧಿಪಡಿಸಿದ ಕೌಂಟರ್‍ಗೆ ತೆರಳಿ ತಮ್ಮ ಮತಗಟ್ಟೆಗೆ ನಿಯೋಜಿಸಿರುವ ಮತಗಟ್ಟೆ ಅಧಿಕಾರಿಗಳನ್ನು ಪರಿಚಯ ಮಾಡಿಕೊಂಡರು. ಬಳಿಕ ಸೆಕ್ಟರ್ ಅಧಿಕಾರಿಗಳಿಂದ ಚುನಾವಣೆ ಸಂಬಂಧ ಮಾಹಿತಿ ಪಡೆದು ಮತಗಟ್ಟೆ ಕಾರ್ಯನಿರ್ವಹಣೆಗೆ ಬೇಕಾಗಿರುವ ಸಾಮಗ್ರಿಗಳನ್ನು ಪಡೆದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ವಿರಾಜಪೇಟೆಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮತಗಟ್ಟೆ ಕೇಂದ್ರದಲ್ಲಿ ನಿರ್ವಹಿಸಬೇಕಾದ ಕಾರ್ಯವಿಧಾನದ ಬಗ್ಗೆ ಹಲವು ಮಾರ್ಗದರ್ಶನ ಮಾಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಖ್, ತಹಶೀಲ್ದಾರರಾದ ಪ್ರಶಾಂತ್, ರಾಮಚಂದ್ರ, ಇತರರು ಇದ್ದರು. ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ,…

Read More

ವಿರಾಜಪೇಟೆ ಮೇ 9 : ಕಳೆದ ಹದಿನೈದು ದಿನಗಳಿಂದ  ಬಿ.ಜೆ.ಪಿ. ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಹಿಂದು ಸಂಘಟನೆಯ ಕಾರ್ಯಕರ್ತರು ಇಂದು ಮಡಿಕೇರಿ ತಾಲ್ಲೂಕಿನ ಕರಡದ ಮಲೆತಿರಿಕೆ ದೇವಾಲಯದಲ್ಲಿ ಇಬ್ಬರು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಆವರವಣವನ್ನು ಸ್ವಚ್ಚಗೊಳಿಸಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಜಿ.ಬೋಪಯ್ಯ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಅವರು ಈ ಬಾರಿ  ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಬೇಕೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ  ವಿರಾಜಪೇಟೆ ಭಾಗದ ಹಿಂದು ಸಂಘಟನೆಯ ಮಾಳೇಟಿರ ಸನ್ನಿ, ತರ್ಮೆ ಮೊಟ್ಟೆ ಪೊನ್ನಪ್ಪ, ಮಂಜೇಶ, ಕಿಶೋರ್‌ ಪೂಜಾರಿ, ಗಗನ್‌, ಬಿದ್ದಪ್ಪ, ಕೆ.ಎಂ.ಅಯ್ಯಪ್ಪ(ಮಣಿ) ಇನ್ನಿತ್ತರ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಮೇ 9 : ಮೇ 10 ರ ಚುನಾವಣೆ ದಿನ ಮತದಾನ ಮಾಡಿದವರಿಗೆ ಮಾತ್ರ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಿಗೆ ಪ್ರವೇಶ ನೀಡಲಾಗುವುದು. ನಗರದ ರಾಜಾಸೀಟು, ಸನ್ನಿ ಸೈಡ್ ಮ್ಯೂಸಿಯಂ, ಅಬ್ಬಿ ಫಾಲ್ಸ್, ಮಲ್ಲಳ್ಳಿ ಫಾಲ್ಸ್‍ಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಮಕ್ಕಳು ಹಾಗೂ ಹೊರ ರಾಜ್ಯದ ಪ್ರವಾಸಿಗರನ್ನು ಹೊರತು ಪಡಿಸಿ, ಮತದಾನ ಮಾಡಿರುವವರಿಗೆ ಮಾತ್ರ ಪ್ರವಾಸಿ ತಾಣಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಕೊಡಗು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.

Read More