ನಾಪೋಕ್ಲು ಜೂ.19 : ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡರೇ ಬದುಕು ಸುಂದರವಾಗಿ ಸಾಗುತ್ತದೆ ಎಂದು ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹೇಳಿದರು. ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಏನಾದರು ಸಾಧಿಸಬೇಕು ಎಂದರೆ ಶಿಸ್ತು, ತಾಳ್ಮೆ, ಧೈರ್ಯ ಬಹಳ ಮುಖ್ಯವಾದುದು. ಹದಿಹರೆಯದ ವಯಸ್ಸಿನಲ್ಲಿ ಅನೇಕ ತಪ್ಪುಗಳು ಅರಿವು ಇದ್ದೋ, ಇಲ್ಲದೇನೋ ಅಗುವುದು ಆದರೆ ನಮ್ಮ ದೇಶದ ಕಾನೂನು ಅದಕ್ಕೆ ಅವಕಾಶ ನೀಡುವುದಿಲ್ಲ. ಎಲ್ಲಾರಿಗೂ ಸಮಾನವಾದ ಶಿಕ್ಷೆ ವಿಧಿಸುತ್ತದೆ. ಯಾರು ಕೂಡ ಸಂಚಾರಿ ನಿಯಮ ಉಲ್ಲಂಘನೆ, ಗಾಂಜಾ ಸೇವನೆ ಮಾಡಬಾರದು ಎಂದು ತಿಳಿಸಿದರು. ನಾಪೋಕ್ಲು ಠಾಣಾಧಿಕಾರಿ ಮಂಜುನಾಥ ಮಾತನಾಡಿ, ವ್ಯಸನಗಳಿಂದ ಮುಕ್ತ ಹೊಂದಿ, ಜೀವನದಲ್ಲಿಯೇ ಸರಳ ಜೀವನ ನಡೆಸಿಕೊಂಡು ಉನ್ನತ ಧ್ಯೇಯ ಮತ್ತು ಗುರಿಯನ್ನು ಹೊಂದಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕಾವೇರಿ, ಎನ್.ಎನ್ .ಎಸ್ ಘಟಕದ ಮುಖ್ಯಸ್ಥೆ…
ಲೇಖಕ: admin
ಮಡಿಕೇರಿ ಜೂ.19 : ಬೆಂಗಳೂರಿನ ಪ್ರತಿಷ್ಠಿತ ವೀಣಾಧರಿ ಇನ್ಸ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಮತ್ತು ಫೈನ್ ಆಟ್ಸ್ ನಡೆಸಿದ ಆನ್ಲೈನ್ ಅಂತರಾಷ್ಟ್ರೀಯ ಮಟ್ಟದ ಫಿಲಂ ಮ್ಯೂಸಿಕ್, ಸೀನಿಯರ್ ವಿಭಾಗದ ಸ್ಪರ್ಧೆಯಲ್ಲಿ ಕೊಡಗಿನ ಬಾಳೆಲೆಯ ಸಿ.ವಿ.ಅನ್ವಿತ್ ಕುಮಾರ್ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಬಾಳೆಲೆಯ ಗಣೇಶ ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಮತ್ತು ಚಂದ್ರಕಲಾ ದಂಪತಿಗಳ ಪುತ್ರನಾಗಿದ್ದು, ಗೋಣಿಕೊಪ್ಪದ ಕಾವೇರಿ ಕಾಲೇಜಿನ ಬಿಸಿಎವಿದ್ಯಾರ್ಥಿ. ವತ್ಸಲ ನಾರಾಯಣ್ ಅವರ ಶಿಷ್ಯ.
ಮಡಿಕೇರಿ ಜೂ.19 : ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಸೌಲಭ್ಯವನ್ನು ಪಡೆಯಲು ಕೊಡಗು ಜಿಲ್ಲೆಯ ಗೃಹ ಬಳಕೆಯ ವಿದ್ಯುತ್ ಗ್ರಾಹಕರು ಜೂ.18 ರಿಂದ ಸೂಕ್ತ ದಾಖಲಾತಿಗಳೊಂದಿಗೆ ಮಡಿಕೇರಿ ಕಾರ್ಯ ಮತ್ತು ಪಾಲನಾ ವಿಭಾಗ ಕಚೇರಿ, ಮಡಿಕೇರಿ, ಕುಶಾಲನಗರ ಸೋಮವಾರಪೇಟೆ, ಗೋಣಿಕೊಪ್ಪಲು, ವಿರಾಜಪೇಟೆ ಕಾರ್ಯ ಮತ್ತು ಪಾಲನಾ ಉಪವಿಭಾಗ/ಶಾಖಾ ಕಚೇರಿ ಹಾಗೂ ತಾಳತ್ಮನೆ, ಸಂಪಾಜೆ, ಭಾಗಮಂಡಲ, ಮೂರ್ನಾಡು, ನಾಪೋಕ್ಲು, ಕೂಡಿಗೆ, ಸುಂಟಿಕೊಪ್ಪ, ಚೆಟ್ಟಳ್ಳಿ, ಮಾದಾಪುರ, ಶಾಂತಳ್ಳಿ, ಶನಿವಾರಸಂತೆ, ಆಲೂರು ಸಿದ್ದಾಪುರ, ಕೊಡ್ಲಿಪೇಟೆ, ಶ್ರೀಮಂಗಲ, ಬಾಳೆಲೆ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ ಕಾರ್ಯ ಮತ್ತು ಪಾಲನಾ ಶಾಖಾ ಕಚೇರಿಗಳಲ್ಲಿ ಚಾ.ವಿ.ಸ.ನಿ.ನಿ.(CESCOM) ಕಚೇರಿಗಳ ಗೃಹಜ್ಯೋತಿ ಕೌಂಟರ್ಗಳಿಗೆ ಭೇಟಿ ನೀಡಿ ಅರ್ಜಿ ನೋಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ನಿಮ್ಮ ಮೊಬೈಲ್, ಲ್ಯಾಪ್ಟಾಪ್, ಕಂಪ್ಯೂಟರ್, ಸಮೀಪದ ಕರ್ನಾಟಕ-1, ಗ್ರಾಮ-1, ಗ್ರಾಮ ಪಂಚಾಯತ್ ಮತ್ತು ನಾಡ ಕಚೇರಿಗಳಲ್ಲಿ ಹಾಗೂ ಸೇವಾ ಸಿಂಧು ಆನ್ಲೈನ್ ತಂತ್ರಾಂಶದಲ್ಲೂ ಕೂಡ ಗೃಹಜ್ಯೋತಿ ಯೋಜನೆಯ ಅರ್ಜಿಯನ್ನು ನೋಂದಾಯಿಸಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ…
ಮಡಿಕೇರಿ ಜೂ.19 : ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ನಡೆದ 64ನೇ ವಾರ್ಷಿಕ ಮಹಾಸಭೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಏಕರೂಪ್ ಕೌರ್ ಅವರು ಸಂಸ್ಥೆಯ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದರು. 64ನೇ ವಾರ್ಷಿಕ ಮಹಾಸಭೆಯಲ್ಲಿ 2023ರ ಮಾರ್ಚ್ 31 ಕ್ಕೆ ಅಂತ್ಯಗೊಂಡ ಹಣಕಾಸು ವರ್ಷ 2022-23 ರ ಸಂಸ್ಥೆಯ ವಾರ್ಷಿಕ ಕಾರ್ಯಾಚರಣೆ ಹಾಗೂ ಪರಿಶೋಧಿಸಲ್ಪಟ್ಟ ಲೆಕ್ಕಪತ್ರಗಳ ಪ್ರಮುಖ ಅಂಶಗಳನ್ನು ಹಂಚಿಕೊಂಡರು. ಸಂಸ್ಥೆಯು ಪ್ರಸಕ್ತ 2022-23ನೇ ಸಾಲಿನ ಆರ್ಥಿಕ ಸ್ಥಿತಿಯನ್ನು ಕ್ರೋಡಿಕರಿಲಾಗಿದ್ದು, ತೆರಿಗೆ ಪೂರ್ವ ರೂ. 138.78 ಕೋಟಿಗಳ ದಾಖಲೆ ಲಾಭಗಳಿಸಿದೆ ಹಾಗೂ ರೂ.107.31 ಕೋಟಿಗಳ ತೆರಿಗೆ ನಂತರದ ಲಾಭಗಳಿಸಿದೆ. ಸಂಸ್ಥೆಯು 2022-23 ರ ಹಣಕಾಸು ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 901.10 ಕೋಟಿ ರೂ.ಗಳ ಸಾಲದ ಮಂಜೂರಾತಿ ಮಾಡಿದ್ದು, ಇದರಲ್ಲಿ ರೂ.874.68 ಕೋಟಿಗಳ ಮೊತ್ತದ ಮಂಜೂರಾತಿಯು 682 ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಘಟಕಗಳಿಗೆ ಒಳಗೊಂಡಿದೆ. 2023 ರ ಮಾರ್ಚ್ ಅಂತ್ಯದವರೆಗೆ 1,75,833 ಉದ್ಯಮಗಳಿಗೆ 19,680.73 ಕೋಟಿ ರೂ.ಗಳ ಸಂಚಿತ…
ಮಡಿಕೇರಿ ಜೂ.19 : ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿರುವ ಉಪಹಾರ ಗೃಹವನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನಡೆಸಲು ಟೆಂಡರ್/ ಕೊಟೇಷನ್ನ್ನು ಆಸಕ್ತಿವುಳ್ಳ ಹಾಗೂ ನುರಿತ ಹೋಟೆಲ್ ಉದ್ದಿಮೆದಾರರಿಂದ ಮುಚ್ಚಿದ ಲಕೋಟೆಗಳಲ್ಲಿ ಕೊಟೇಷನ್ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ, ಷರತ್ತುಗಳು ಹಾಗೂ ನಿಬಂಧನೆಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ https://districts.ecourts.gov.in/kodagu ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವವರು, ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಆವರಣದಲ್ಲಿರುವ ಉಪಹಾರ ಗೃಹವನ್ನು ನೋಡಬಹುದು. `ಮಡಿಕೇರಿಯ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿರುವ ಉಪಹಾರ ಗೃಹ ನಡೆಸುವ ಸಲುವಾಗಿ ಟೆಂಡರು’ ಎಂದು ನಮೂದಿಸಬೇಕು. ಈ ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಡಗು-ಮಡಿಕೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ವಿದ್ಯಾನಗರ, ಮಡಿಕೇರಿ-571201 ಇವರ ವಿಳಾಸಕ್ಕೆ ಜು.18 ರ ಸಂಜೆ 6 ಗಂಟೆ ಒಳಗೆ ಸಲ್ಲಿಸಬೇಕು. ನಂತರ ತಲುಪಿದ ಲಕೋಟೆಗಳನ್ನು ಪರಿಗಣಿಸಲಾಗುವುದಿಲ್ಲ. ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಕೊಡಗು-ಮಡಿಕೇರಿ ಇವರ ಸಮ್ಮುಖದಲ್ಲಿ ಜು.20 ರಂದು…
ಮಡಿಕೇರಿ ಜೂ.19 : ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಪದವಿ ಪ್ರದಾನ ಸಮಾರಂಭವು ಜೂ.20 ರಂದು ಮಧ್ಯಾಹ್ನ 2.30 ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್(ಅರಣ್ಯ) ಡಾ.ಸಿ.ಜಿ.ಕುಶಾಲಪ್ಪ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್(ಅರಣ್ಯ) ಡಾ.ಜಿ.ಎಂ.ದೇವಗಿರಿ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜೂ.19 : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು 49,582 ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿದೆ. ಈ ಯೋಜನೆಯ ನೆರವು ಅರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿದೆ. ಇ-ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು. ರೈತರು http://pmkisan.gov.in ಪೋರ್ಟಲ್ನ ಪಾರ್ಮರ್ಸ್ ಕಾರ್ನರ್ನ ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್ನಲ್ಲಿ ದಾಖಲಿಸಿ “ಸಬ್ಮಿಟ್ ಫಾರ್ ಆಥ್ (SUBMIT FOR AUTH) ಎಂಬ…
ಮಡಿಕೇರಿ ಜೂ.19 : ಪ್ರಸಕ್ತ (2022-23) ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಿಕ್ಷಕರು/ ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಕೌನ್ಸಿಲಿಂಗ್ ಪ್ರಕ್ರಿಯೆಯು ಜೂ.20, 21 ಮತ್ತು 22 ರಂದು ನಗರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚುವರಿಯಾದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರುಗಳಿಗೆ ಪೂರ್ವಹ್ನ ಮತ್ತು ಹೆಚ್ಚುವರಿಯಾದ ಪ್ರೌಢಶಾಲಾ ಶಿಕ್ಷಕರುಗಳಿಗೆ ಅಪರಾಹ್ನ ಜೂ.20, 21 ಮತ್ತು 22 ರಂದು ಕೌನ್ಸಿಲಿಂಗ್ ನಡೆಸಲಾಗುತ್ತದೆ. ಹೆಚ್ಚುವರಿಯಾದ ಪ್ರಾಥಮಿಕ ಮತ್ತು ಪೌಢಶಾಲಾ ಶಿಕ್ಷಕರುಗಳು ತಪ್ಪದೇ ಹೆಚ್ಚುವರಿ ಕೌನ್ಸಿಲಿಂಗನಲ್ಲಿ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ತಿಳಿಸಿದ್ದಾರೆ.
ಮಡಿಕೇರಿ ಜೂ.19 : ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.10 ಸಾವಿರ ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಆನ್ಲೈನ್ ಮೂಲಕ ಜು.31 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು 2022-23 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10 ನೇ ತರಗತಿ) ಯಲ್ಲಿ ಓದುತ್ತಿರಬೇಕು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022 ರ ಏಪ್ರಿಲ್, 1 ರಿಂದ 2023 ರ ಮಾ.31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ…
ಮಡಿಕೇರಿ ಜೂ.19 : ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾ ಶುಶ್ರೂಷಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಿ.ಐ.ಚಿತ್ರಾವತಿ ಅವರಿಗೆ ಪ್ರತಿಷ್ಟಿತ ಪ್ಲೊರೆನ್ಸ್ ನೈಂಟಿಂಗಲ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಪ್ರೆಸ್ಕ್ಲಬ್ ಆಫ್ ಇಂಡಿಯಾ ವತಿಯಿಂದ ನೀಡುವ ಈ ಪ್ರಶಸ್ತಿಯು ಅತ್ಯುತ್ತಮವಾಗಿ ಸೇವೆ ಸಲ್ಲಿಸುವ ಶುಶ್ರೂಷಕ ಅಧಿಕಾರಿಗಳಿಗೆ ನೀಡಲ್ಪಡುತ್ತದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಬಿ.ಐ.ಚಿತ್ರಾವತಿ ಅವರಿಗೆ ಪ್ರಶಸಿಯನ್ನು ಆಂಧ್ರ ಪ್ರದೇಶದ ರಾಜ್ಯಪಾಲ ಅಬ್ದುಲ್ ನಜೀರ್ ಪ್ರದಾನ ಮಾಡಿದರು. ನಿಮ್ಹಾನ್ಸ್ ನಿರ್ದೇಶಕಿ ಡಾ.ಪ್ರತಿಮಾ ಮೂರ್ತಿ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ.ಚಂದ್ರಶೇಖರ್ಶೆಟ್ಟಿ, ಮೇಜರ್ ಜನರಲ್(ನಿವೃತ್ತ) ವಿಪಿಎಸ್ ಬಪುನಿ, ನ್ಯೂಸ್ ಪೇಪರ್ ಆಸೋಸಿಯೇಶನ್ನ ರಾಜ್ಯಾಧ್ಯಕ್ಷ ಗಣೇಶ್ ಕಾಸರಗೋಡು, ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ನೋಂದಣಿ ಅಧಿಕಾರಿ ಡಾ.ಪ್ರಶಾಂತ್ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. 25 ವರ್ಷಗಳಿಂದ ಶುಶ್ರೂಷಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತ್ತಿರುವ ಬಿ.ಐ.ಚಿತ್ರಾವತಿ ಪ್ರಸ್ತುತ ಎಸ್ಬಿಎ (ತಾಯಿ ಹಾಗೂ ಮಗುವಿನ ಆರೋಗ್ಯ ಸಂರಕ್ಷಣೆ ಯೋಜನೆ) ಕೊಡಗು ಜಿಲ್ಲಾ ತರಬೇತುದಾರರಾಗಿ ಸುಮಾರು 14 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುತ್ತಾರೆ.






