ಸೋಮವಾರಪೇಟೆ ಜೂ.19 : ಕೊಡಗಿನ ವಿವಿಧ ಆಸ್ಪತ್ರೆಗಳಲ್ಲಿ ಎಂ.ಆರ್.ಐ. ಸ್ಕ್ಯಾನಿಂಗ್ ಘಟಕ ಅಳವಡಿಸುವಂತೆ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಪದಾಧಿಕಾರಿಗಳು ಶಾಸಕ ಡಾ. ಮಂತರ್ಗೌಡ ಅವರಿಗೆ ಮನವಿ ಸಲ್ಲಿಸಿದರು. ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದರು. ಮನವಿ ಸಲ್ಲಿಕೆ ಸಂದರ್ಭ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ವಿ.ಕೃಷ್ಣ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಷಂಶುದ್ಧೀನ್, ಕಾರ್ಯದರ್ಶಿ ರೋನಾಲ್ಡ್, ಪದಾಧಿಕಾರಿ ಶಿರಂಗಾಲದ ಪುರುಷೋತ್ತಮ ಆಚಾರ್ಯ ಹಾಜರಿದ್ದರು.
ಲೇಖಕ: admin
ಸೋಮವಾರಪೇಟೆ ಜೂ.19 : ಕೆಂಚಮ್ಮನಬಾಣೆಯಲ್ಲಿನ ಶ್ರೀ ಬಲಮುರಿ ಗಣಪತಿ ದೇವಾಲಯದ 21ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲದಲ್ಲಿ ಕಳಶರಾಧನೆ, ಪಂಚಾಮೃತಾಭಿಷೇಕ, ಗಣಹೋಮಗಳು ದೇವಾಲಯದ ಪ್ರದಾನ ಅರ್ಚಕ ಶ್ರೀನಿವಾಸ್ ಶರ್ಮ ಅವರ ಪೌರೋಹಿತ್ಯದಲ್ಲಿ ನಡೆಯಿತು. ಉತ್ಸವದ ಪ್ರಯುಕ್ತ ಗ್ರಾಮದ ಪ್ರತಿ ಬೀದಿಯಲ್ಲಿ ಚಾಮರಾಜನಗರದ ವೀರಭದ್ರೇಶ್ವರ ಕಲಾತಂಡದಿಂದ ವೀರಗಾಸೆ ಕಾಯಕ್ರಮ ನಡೆಯಿತು. ಈ ಸಂದರ್ಭ ನೂತನವಾಗಿ ಆಯ್ಕೆಯಾದ ಮಡಿಕೇರಿ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಮಂತರ್ಗೌಡ, ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ದಾನಿಗಳಾದ ಗುಡುಗೂರಿನ ಡಾ.ವೇಣುಗೋಪಾಲ್, ಮಧುವನ ಎಸ್ಟೇಟ್ನ ಮಧುಕರ್ ಭಟ್, ಪಾಲಿಗದ್ದೆ ಎಸ್ಟೇಟ್ನ ಎಚ್.ಪ್ರಸಾದ್, ಬೇಳೂರು ಎಸ್ಟೇಟ್ನ ರಾಣಿ ಪ್ರತಾಪ್ ಅವರನ್ನು ಸನ್ಮಾನಿಸಲಾಯಿತು. ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಕೆ.ಪಿ.ಸೋಮಶೇಖರ್, ಪದಾಧಿಕಾರಿಗಳಾದ ಕೆ.ಎಸ್.ಪ್ರತಾಪ್, ಪಿ.ಈ.ಸುರೇಶ್, ಕೆ.ಬಿ.ರಮೇಶ್, ಬಿ.ಆರ್. ರವಿ., ಎಂ.ಆರ್.ವಿಶ್ವನಾಥ್, ಕೆ.ಆರ್.ಶಿವಕುಮಾರ್ ಹಾಜರಿದ್ದರು.
ಸೋಮವಾರಪೇಟೆ ಜೂ.19 : ಗೌಡಳ್ಳಿ ಗ್ರಾ.ಪಂ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಂದಿಗುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಗೌಡಳ್ಳಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇಂದೂಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯವಂತರು ಪ್ರತಿ ಮೂರು ತಿಂಗಳಿಗೊಮ್ಮೆ ಯಾವುದೇ ಅಂಜಿಕೆಯಿಲ್ಲದೆ, ರಕ್ತದಾನ ಮಾಡಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು ರಕ್ತದಾನಕ್ಕೆ ಮುಂದಾಗಬೇಕು. ರಕ್ತದಾನದಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು. ದೇಹದಲ್ಲಿ ಹೊಸ ರಕ್ತ ಉತ್ಪಾದನೆ ನಾವೇ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು. ಮಡಿಕೇರಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಕರುಂಬಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯವಿಲ್ಲ. ಅದಕ್ಕಾಗಿ ಮತ್ತೊಬ್ಬರ ರಕ್ತವನ್ನು ಪಡೆಯಬೇಕಿದೆ. ಒಬ್ಬರು ರಕ್ತದಾನ ಮಾಡಿದಲ್ಲಿ, ಅದು ನಾಲ್ಕು ಜನರಿಗೆ ಉಪಯೋಗಕ್ಕೆ ಬರುವುದು. ಕೆಲವರು ಇಂದಿಗೂ ರಕ್ತದಾನ ಮಾಡಲು ಭಯಪಡುತ್ತಿದ್ದು, ಅಂತವರಲ್ಲಿ ಅರಿವು ಮೂಡಿಸುವ ಅಗತ್ಯ ಇದೆ ಎಂದರು. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಕ್ತಕ್ಕೆ ಬೇಡಿಕೆ ಅಧಿಕವಾಗಿದ್ದು, ತುರ್ತು ಸಂದರ್ಭ ಬೇರೆ ಜಿಲ್ಲೆಯಿಂದಲೂ…
ನಾಪೋಕ್ಲು ಜೂ.19 : ಬೆಂಗಳೂರಿನ ಇಂಚರ ಟೆಕ್ನೋಲಜಿ ಖಾಸಗಿ ಸಂಸ್ಥೆಯ ಇಂಚರ ಚಾರಿಟಬಲ್ ಟ್ರಸ್ಟ್ ಮತ್ತು ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ತಡಿಯಂಡಮೊಳ್ ಬೆಟ್ಟದ ತಪ್ಪಲಿನಲ್ಲಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್. ಎ ಸಿ ಎಫ್ ಮೋಸಿನ್ ಭಾಷಾ, ಇಂಚರ ಫೌಂಡೇಶನ್ ಅಧ್ಯಕ್ಷ ಸಚ್ಚಿನ್ ವರ್ಮಾ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಂಚರ ಚಾರಿಟಬಲ್ ಟ್ರಸ್ಟ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ವರ್ಮ ಮಾತನಾಡಿ, ಕೊಡಗಿನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಒಂದು ಲಕ್ಷ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ. ಟ್ರೀ ಚಾಂಪಿಯನ್ ಅಭಿಯಾನಕ್ಕೆ ಎಲ್ಲರ ಸಹಕಾರ ಅಗತ್ಯ ಕೊಡಗಿನ ಸುಂದರ ಪ್ರಕೃತಿ ಸೊಬಗು ಸದಾ ಮುಂದುವರಿಯಬೇಕು. ಕಾಡಿನೊಳಗಿರುವ ವನ್ಯ ಪ್ರಾಣಿಗಳನ್ನು ಗಮನದಲ್ಲಿಟ್ಟುಕೊಂಡು ಮೊದಲ ಹಂತದಲ್ಲಿ 10 ಸಾವಿರ ಹಣ್ಣಿನ ಗಿಡಗಳನ್ನು ನೆಡಲಾಗುತ್ತಿದೆ ಎಂದರು. ಟ್ರೀ ಚಾಂಪಿಯನ್ ಅಭಿಯಾನ ರೂವಾರಿ ಕೇಟೋಳಿರ ವಿನ್ಸಿ ದೇವಯ್ಯ ಮಾತನಾಡಿ, ಅರಣ್ಯ ಇಲಾಖೆಯಿಂದ ಅನುಮತಿ ಪಡೆದುಕೊಂಡು…
ನಾಪೋಕ್ಲು ಜೂ.14 : ನಾಪೋಕ್ಲು ವ್ಯಾಪ್ತಿಯ ಚೆರಿಯಪರಂಬು ರಸ್ತೆಯೂ ಸಂಪೂರ್ಣ ಹಾಳಾಗಿದ್ದು, ಸ್ಥಳೀಯ ಶೌರ್ಯ ತಂಡದ ಸದಸ್ಯರು ಶ್ರಮದಾನದ ಮೂಲಕ ರಸ್ತೆ ಗುಂಡಿ ಮುಚ್ಚಿದರು. ಪಟ್ಟಣಕ್ಕೆ ಹೊಂದಿಕೊಂಡಂತಿರುವ ಚೇರಿಯಪರಂಬು ರಸ್ತೆಯ ದುರಸ್ಥಿಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಗಮನಹರಿಸದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಮಳೆಗಾಲದಲ್ಲಿ ಇನ್ನಷ್ಟು ಸಮಸ್ಯೆ ಎದುರಾಗುವುದನ್ನು ಗಮನಿಸಿದ ಶೌರ್ಯ ಸದಸ್ಯರುಗಳು ಹೊಳೆಯಿಂದ ಹೊರಳು ಕಲ್ಲುಗಳನ್ನು ಶೇಖರಿಸಿ ಪಿಕಪ್ ವಾಹನದಲ್ಲಿ ತಂದು ರಸ್ತೆಗೆ ಹಾಕಿ ಸೇವಾ ಕಾರ್ಯವನ್ನು ಮಾಡಿ ರಸ್ತೆಗೊಂದು ಕಾಯಕಲ್ಪ ನೀಡಿ ನಾಪೋಕ್ಲು ಶೌರ್ಯ ಸದಸ್ಯರು ಊರಿನವರ ಪ್ರಶಂಸೆಗೆ ಭಾಜನರಾದರು. ಈ ಸಂದರ್ಭ ಎನ್.ಬಿ.ದಿಲೀಶ್, ಬಿ.ಹೆಚ್.ಶಂಕರ್, ಸೀನಾ ಮಾಧವನ್, ಪಿ.ಎಂ.ಮಾಯಿಲಪ್ಪ, ಎಂ.ಗಣೇಶ್, ವೈ.ಆರ್.ಅಪ್ಪಣ್ಣ, ಕೆ.ಹೆಚ್.ಪ್ರವೀಣ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಜೂ.19 : ಅರಂತೋಡಿನ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಇಂಡಿಯನ್ ರಬ್ಬರ್ ಮಾರ್ಕೆಟಿಂಗ್ ಶುಭಾರಂಭಗೊಂಡಿತು. ಅಂಗಡಿಯನ್ನು ಕರಾವಳಿ ಕೊಕೋನೆಟ್ ಪೈಚಾರು ಮಾಲೀಕ ಅಬೂಬಕ್ಕರ್ ಬೊಳುಬೈಲು ಉದ್ಘಾಟಿಸಿದರು. ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ ಕುರುಂಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಅರಂತೋಡು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಜಾಲ್ಸೂರು ಗ್ರಾ.ಪಂ.ಸದಸ್ಯ ಮುಜೀಬ್ ಪೈಚಾರು, ಎ.ಪಿ.ಎಂ.ಸಿ ಮಾಜಿ ಉಪಾಧ್ಯಕ್ಷ ಪಿ.ಎ.ಉಮ್ಮರ್, ವಿದ್ಯಾಬೋಧಿನಿ ಬಾಳಿಲ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಜತ್ತಪ್ಪ ಮಾಸ್ಟರ್ , ಅರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ಎ.ಕೆ.ಶಶಿಕುಮಾರ್, ಅರಂತೋಡು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ, ಇಂಡಿಯನ್ ಮಾರ್ಕೆಟಿಂಗ್ ಅರಂತೋಡಿನ ಹಂಝ ಬೊಳುಬೈಲು, ಕರ್ನಾಟಕ ರಬ್ಬರ್ ಮಾರ್ಕೆಟಿಂಗ್ ಪೈಚಾರ್ ನ ಸಂಶುದ್ದೀನ್, ಶಾರಿಕ್, ಅಬ್ದುಲ್ಲಾ, ನಿರಂಜನ, ಸಿರಾಜ್, ಮತ್ತಿತರರು ಹಾಜರಿದ್ದರು. ಸುದ್ದಿ ಬಿಡುಗಡೆ ಪ್ರತಿನಿಧಿ ತಾಜುದ್ದೀನ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಮಡಿಕೇರಿ ಜು.19 : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ 19 ನೇ ವಷ೯ದ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ ಮತ್ತು ಕಾಯ೯ದಶಿ೯ಯಾಗಿ ರತ್ನಾಕರ್ ರೈ ಆಯ್ಕೆಯಾಗಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ ನ 2023-24 ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ ಹಾಗೂ ಕಾಯ೯ದಶಿ೯ಯಾಗಿ ರತ್ನಾಕರ್ ರೈ ಆಯ್ಕೆಯಾಗಿದ್ದು, ಆಡಳಿತ ಮಂಡಳಿಯ ಪದಗ್ರಹಣ ಕಾಯ೯ಕ್ರಮ ಜು.4 ರಂದು ಸಂಜೆ 6.30 ಗಂಟೆಗೆ ಮಡಿಕೇರಿ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ನಡೆಯಲಿದೆ. ರೋಟರಿ ಜಿಲ್ಲೆ 3181 ನ ಮುಂದಿನ ಸಾಲಿನ ನಿಯೋಜಿತ ಗವನ೯ರ್ ವಿಕ್ರಂದತ್ತ ಪದಗ್ರಹಣ ನೆರವೇರಿಸಲಿದ್ದಾರೆ. ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ನಿಗ೯ಮಿತ ಅಧ್ಯಕ್ಷ ಪ್ರಸಾದ್ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಮಿಸ್ಟಿ ಹಿಲ್ಸ್ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜೂ.19 : ಕಕ್ಕಬ್ಬೆಯ “ದಿ ತಾಮರ ಕೂರ್ಗ್” ವತಿಯಿಂದ ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 1 ಟೇಬಲ್ ಮತ್ತು 3 ಚೇರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ತಾಮರ ಕೂರ್ಗ್ ವ್ಯವಸ್ತಾಪಕರಾದ ಕಲ್ಯಾಟಾಂಡ ಗಿರೀಶ್ ಸುಬ್ಬಯ್ಯ, ಅವಿನಾಶ್, ವಿಜು. ಗ್ರಾ.ಪ ಸದಸ್ಯ ಕೊಡಿಮನಿಯಂಡ ಬೋಪಣ್ಣ ಮತ್ತು ಅತಿಥಿ ಶಿಕ್ಷಕರು ಹಾಜರಿದ್ದರು.
ಮಡಿಕೇರಿ ಜೂ.19 : ಬ್ರಹ್ಮಾಕುಮಾರೀಸ್ ಮಡಿಕೇರಿ ಶಾಖೆ ವತಿಯಿಂದ ಶಾಸಕ ಡಾ. ಮಂಥರ್ ಗೌಡ ಅವರನ್ನು ಸನ್ಮಾನಿಸಲಾಯಿತು. ನಗರದ ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ಸಭಾಂಗಣದಲ್ಲಿ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯತ್ರೀಜಿ ಆಶೀರ್ವದಿಸಿ, ಪರಮಾತ್ಮನ ಶಕ್ತಿ ಮತ್ತು ಸ್ಮೃತಿಯಿಂದ ತಮ್ಮ ಕಾರ್ಯದಲ್ಲಿ ವಿಜಯಿಗಳಾಗಿ ಎಂದು ಹಾರೈಸಿ, ಶಾಲು ಹೊದಿಸಿ ಪುಷ್ಪಗುಚ್ಛ ನೀಡಿ ಉಡುಗೊರೆಯೊಂದಿಗೆ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ನಿಮ್ಮೆಲ್ಲರ ಮಾರ್ಗದರ್ಶನದಿಂದ ಆತ್ಮತೃಪ್ತಿಯಿಂದ ಜನಸೇವೆ ಮಾಡುವುದಾಗಿ ತಿಳಿಸಿದರು. ಈ ಸಂದರ್ಭ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪುಷ್ಪಾ ಕುಟ್ಟಣ್ಣ, ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಕಾಶ್, ರಾಜೇಶ್ವರಿ ವಿದ್ಯಾ ಸಂಸ್ಥೆಯ ನಿರ್ದೇಶಕರು ಹಾಗೂ ವಕೀಲರಾದ ಸಚಿನ್ ವಾಸುದೇವ್ , ಕೊಡಗು ಡಿ.ಸಿ.ಸಿ. ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ಪ್ರೇಮ ಕರುಂಬಯ್ಯ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಬ್ರಹ್ಮಾಕುಮಾರೀಸ್ ಶಾಖೆಯ ಎಲ್ಲಾ ರಾಜಯೋಗ ಶಿಕ್ಷಕಿಯರು ಹಾಜರಿದ್ದರು. ಬ್ರಹ್ಮಾಕುಮಾರಿ ಧನಲಕ್ಷ್ಮಿ ಅಕ್ಕ ನಿರೂಪಿಸಿದರು. ಕೊನೆಯಲ್ಲಿ ಎಲ್ಲರಿಗೂ ಪ್ರಸಾದ…
ಸೋಮವಾರಪೇಟೆ ಜೂ.9 : ಪ್ರಾಣಿ, ಪಕ್ಷಿಗಳಿಂದ ಪರಿಸರ ಮತ್ತು ಪ್ರಕೃತಿ ನಾಶವಾಗುತ್ತಿಲ್ಲ. ಪ್ರಕೃತಿ ನಾಶದಲ್ಲಿ ಮಾನವನ ಕೊಡುಗೆ ಅಪಾರವಾದದ್ದು ಎಂದು ಕಲಾವಿದರು ಮತ್ತು ಪಕ್ಷಿತಜ್ಞ ಹಾಸನದ ಬಿ.ಎಸ್.ದೇಸಾಯಿ ಹೇಳಿದರು. ನಾವು ಪ್ರತಿಷ್ಠಾನ ಕೊಡಗು ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ‘ಹಕ್ಕಿಗೊಂದು ಗುಟುಕು ಅಭಿಯಾನ-2023 ರ ಸಮಾರೋಪ ಸಮಾರಂಭ ಹಾಗೂ ಪಕ್ಷಿ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಮಾತೆ ಬಳಲಿದ್ದಾಳೆ. ಭೂಮಿಯ ಮೇಲೆ ಮನುಷ್ಯರು ಹಾಗೂ ಇತರ ಜೀವಿಗಳು ಬದುಕಬೇಕು. ದಟ್ಟವಾದ ಕಾಡನ್ನು ಮಾನವನಿಂದ ಸೃಷ್ಟಿಸಲು ಸಾಧ್ಯವಿಲ್ಲ. ಅಂತಹ ಕಾಡನ್ನು ಮನುಷ್ಯರು ನುಗ್ಗಿ ಅರಣ್ಯ ನಾಶ ಮಾಡಲು ಬೀಡಬಾರದು ಎಂದು ಹೇಳಿದರು. ಪ್ರಕೃತಿನಾಶ, ಭೂಮಿಯೊಳಗಿನ ಒತ್ತಡದಿಂದ ಪ್ರಕೃತಿವಿಕೋಪಗಳು, ಹವಮಾನ ವೈಪರಿತ್ಯ ಸಂಭವಿಸುತ್ತಿದೆ. ಮುಂದೆ ಗಂಡಾಂತರದ ಮುನ್ಸೂಚನೆ ಇದೆ. ಈ ಕಾರಣದಿಂದಲಾದರೂ ಪ್ರತಿದಿನ ಪರಿಸರ ಉಳಿಯುವ ಕಾಯಕ ಮಾಡಲೇಬೇಕಾಗಿದೆ ಎಂದರು. ಪ್ರಾಣಿ ಮತ್ತು ಪಕ್ಷಿ ಸಂಕುಲಗಳು ಪ್ರಕೃತಿಯ ಅವಿಭಾಜ್ಯ ಅಂಗಗಳು. ಅವುಗಳು ಉಳಿದರೆ ಮಾತ್ರ ಮನುಷ್ಯ ಉಳಿಯಲು…






