ಸುಂಟಿಕೊಪ್ಪ ಮೇ 9 : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವ ಅಂಗವಾಗಿ ಚಿಕ್ಕಮಗಳೂರು ಧರ್ಮಕ್ಷೇತ್ರದ ವಂ. ಗುರುಗಳಾದ ವಿನಯ್ ಕುಮಾರ್ ವಿಶೇಷ ಪ್ರಭೋದನೆ ಮತ್ತು ಬಲಿಪೂಜೆಯನ್ನು ಸಮರ್ಪಿಸಿದರು. ಧ್ವಜಾರೋಹಣ ನೇರವೇರಿಸುವ ಮೂಲಕ ಬಲಿಪೂಜೆಯನ್ನು ಅರ್ಪಿಸುವ ಮೂಲಕ ದೇವಾಲಯದ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು. ನಂತರ ಅಂಬು ಕಾಣಿಕೆಯ ಹರಕೆಯನ್ನು ಭಕ್ತಾಧಿಗಳು ಸಲ್ಲಿಸಿದರು. ಸಂಜೆ ಸಂತ ಅಂತೋಣಿಯವರ ದೇವಾಲಯದಲ್ಲಿ ಹಬ್ಬದ ಅಡಂಬರ ಗಾಯನ ಬಲಿಪೂಜೆ ಮತ್ತು ಪರಮಪ್ರಸಾದ ಆರಾಧನೆಯನ್ನು ಮೈಸೂರು ಧರ್ಮಕ್ಷೇತ್ರದ ಶೇಷ್ಠ ಗುರುಗಳಾದ ರೇವರೆಂಡ್ ಅಲ್ಪ್ರೆಡ್ ಜಾನ್ ಮೆಂಡಾನ್ಸಾ, ಮಡಿಕೇರಿ ವಲಯದ ಶೇಷ್ಠ ಗುರುಗಳಾದ ಫಾಧರ್ ದೀಪಕ್, ಆಗಮಿಸಿದ್ದ ಧರ್ಮಗುರುಗಳು ಒಗ್ಗೂಡಿ ನೇರವೇರಿಸಿದರು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂಗಳು ಹಾಗೂ ಲೈಂಟಿಗ್ಸ್ ಹಾಗೂ ಹೊರಾಂಗಣವನ್ನು ವಿದ್ಯುತ್ ದೀಪಾಗಳಿಂದ ಅಲಂಕಾರಿಸಲಾಗಿತ್ತು. ಬೀಟಿಕಟ್ಟೆ ದೇವಾಲಯದ ಜಾನ್ ಡಿಕುನ್ನ, ಕೂಡಿಗೆ ಚಾಲ್ಸ್ ನರೋನ, ಪೌಲ್ ಹೇರ್ಸ, 7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯದ ರೆ.ಫಾ.ಸುನಿಲ್,…
ಲೇಖಕ: admin
ಸುಂಟಿಕೊಪ್ಪ ಮೇ 9 : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಸುಂಟಿಕೊಪ್ಪ ವ್ಯಾಪ್ತಿಯ ಪ್ರೌಢಶಾಲೆಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಮಕ್ಕಳು ಪೋಷಕರು ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಕೊಡಗರಹಳ್ಳಿಯ ಶಾಂತಿನೀಕೇತನ ಪ್ರೌಢಶಾಲೆ ಮತ್ತು ಸುಂಟಿಕೊಪ್ಪದ ಸಂತಮೇರಿ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದಿವೆ. ಶಾಂತಿನಿಕೇತನ ಶಾಲೆಯ 74 ವಿದ್ಯಾರ್ಥಿಗಳಲ್ಲಿ ಅತ್ಯುನ್ನತ್ತ ಶ್ರೇಣಿಯಲ್ಲಿ 39 ಮಕ್ಕಳು ಮತ್ತು ಪ್ರಥಮ ದರ್ಜೆಯಲ್ಲಿ 35 ಮಕ್ಕಳು ಉತ್ತೀರ್ಣರಾಗಿದ್ದು, ಈ ಪೈಕಿ ಎಂ.ವಿ. ಶ್ರೀ ಲಕ್ಷ್ಮಿ 604 ಅಂಕಗಳಿಸಿ ಶೇ.96.64 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಕೆ.ಎಸ್.ತಮ್ಮಯ್ಯ ಶೇ.96.32 ಅಂಕಗಳನ್ನು ಗಳಿಸಿದ್ದಾರೆ, ಯಶಸ್ವಿನಿ ಶೆಟ್ಟಿ, ಅನನ್ಯ ಅರವಿಂದ್ ಮತ್ತು ನೇಹಾ ಅವರುಗಳು ಶೇ.95.02 ಅಂಕಗಳೊಂದಿಗೆ 3ನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಸಂತಮೇರಿ 90 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾರೂ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಅತ್ಯುನ್ನತ್ತ ಶ್ರೇಣಿಯಲ್ಲಿ 11 ಮಂದಿ ಬಾಲಕರು 17 ಮಂದಿ ಬಾಲಕಿಯರು ಒಟ್ಟು 28 ಮಂದಿ ತೇರ್ಗಡೆಗೊಂಡರೇ, ಪ್ರಥಮ ಶ್ರೇಣಿಯಲ್ಲಿ…
ಮಡಿಕೇರಿ ಮೇ 9 : ಕರ್ನಾಟಕ ಸರ್ಕಾರದ ವೇತನ ಅನುದಾನಕ್ಕೊಳಪಟ್ಟ ಭಾಗಮಂಡಲ ಕೆವಿಜಿ ಸಂಸ್ಥೆಯಲ್ಲಿ 2023-24ನೇ ಸಾಲಿಗೆ ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಹಾಗೂ ಎಲೆಕ್ಟ್ರಿಷಿಯನ್ ವೃತ್ತಿಗಳಿಗೆ ಸೇರಬಯಸುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶವು ಎಲ್ಲಾ ಅಭ್ಯರ್ಥಿಗಳಿಗೆ ಮುಕ್ತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಪ್ರಾಂಶುಪಾಲರು : 9900902141
ಮಡಿಕೇರಿ ಮೇ 8 : ಇತ್ತೀಚೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಅವರ ಪುತ್ರ, ಸೋಮವಾರಪೇಟೆ ತಾ.ಪಂ ಮಾಜಿ ಸದಸ್ಯ ಕೆ.ಐ.ಮೊಹಮ್ಮದ್ ರಫೀಕ್ ಅವರಿಗೆ ಪಕ್ಷ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ಥಾನವನ್ನು ನೀಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ನೀಡಿದ ಆದೇಶ ಪತ್ರವನ್ನು ಪಕ್ಷದ ಮುಖಂಡ ಹೆಚ್.ಡಿ.ರೇವಣ್ಣ ಅವರ ಬಳಿಯಿಂದ ಮೊಹಮ್ಮದ್ ರಫೀಕ್ ಪಡೆದುಕೊಂಡರು. ಕಾಂಗ್ರೆಸ್ ಪಕ್ಷ ನನ್ನನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು, ಆದರೆ ಜಾತ್ಯತೀತ ಜನತಾದಳ ನನಗೆ ಈ ದೊಡ್ಡ ಹುದ್ದೆಯನ್ನು ನೀಡಿದ್ದು, ಸಂಘಟನೆಯ ಮೂಲಕ ಪಕ್ಷ ನಿಷ್ಠೆಯನ್ನು ಪ್ರದರ್ಶಿಸುವುದಾಗಿ ಮೊಹಮ್ಮದ್ ರಫೀಕ್ ಹೇಳಿದರು.
ಮಡಿಕೇರಿ ಮೇ.8 : ವಿಧಾನಸಭಾ ಚುನಾವಣೆ ಮತದಾನವು ಮೇ 10 ರಂದು ನಡೆಯಲಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 543 ಮತಗಟ್ಟೆಗಳಲ್ಲಿ ಮೇ, 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 4,56,313 ಮತದಾರರಿದ್ದು, 2,24,875 ಪುರುಷರು ಮತ್ತು 2,31,415 ಮಹಿಳಾ ಮತದಾರರು, 23 ಇತರ ಮತದಾರರು ಇದ್ದಾರೆ ಎಂದರು. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 2,32,148 ಮತದಾರರಿದ್ದು, 1,13,585 ಪುರುಷರು ಮತ್ತು 1,18,553 ಮಹಿಳಾ ಮತದಾರರಿದ್ದಾರೆ. 10 ಮಂದಿ ಇತರ ಮತದಾರರು ಇದ್ದಾರೆ ಎಂದು ಹೇಳಿದರು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,24,165 ಮತದಾರರಿದ್ದು, 1,11,290 ಪುರುಷ ಮತ್ತು 1,12,862 ಮಹಿಳಾ ಮತದಾರರು ಇದ್ದಾರೆ. 13 ಇತರ ಮತದಾರರು ಇದ್ದಾರೆ…
ಸೋಮವಾರಪೇಟೆ ಮೇ 8 : ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಅವರು ಸಂಪಿಗೆಕಟ್ಟೆಯಲ್ಲಿ ರೋಡ್ ಶೋ ನಡೆಸಿದರು. ಭಾಷಣಕಾರರಾಗಿ ವೇದಿಕೆಯೇರಿದ ರಂಜನ್ ಅವರ ಪುತ್ರ ಡಾ.ಕಾರ್ಯಪ್ಪ ಅವರು ತಮ್ಮನ್ನು ತಾವು ಪರಿಚಯಿಸಿಕೊಂಡು, ಅಮೆರಿಕಾದ ಜನರ ಸೇವೆ ಮಾಡುತ್ತಿದ್ದಾರೆಂದು ಆರೋಪಿಸಿರುವ ಅಪ್ಪಚ್ಚು ರಂಜನ್ ಅವರ ಡಾಕ್ಟರ್ ಪುತ್ರ ನಾನೇ ಎಂದರು. ಅಪ್ಪಚ್ಚು ರಂಜನ್ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಮಾಡಿದ ಡಾ.ಕಾರ್ಯಪ್ಪ, ನಾನು ವೈದ್ಯಕೀಯ ವಿದ್ಯಾಭ್ಯಾಸವನ್ನು ಜಿಲ್ಲೆಯ ಹೊರಗೆ ಮಾಡಿದ್ದೇನೆ. ನನ್ನ ತಂದೆ ಈಗ ಮಡಿಕೇರಿ ಕ್ಷೇತ್ರವನ್ನೇ ವಿದ್ಯಾ ಕೇಂದ್ರವನ್ನಾಗಿ ಮಾಡಿದ್ದಾರೆ. ವಿಶ್ವವಿದ್ಯಾನಿಲಯ, ವೈದ್ಯಕೀಯ, ಇಂಜಿನಿಯರಿಂಗ್, ವಸತಿ ಶಾಲೆಗಳು, ಸೈನಿಕ ಶಾಲೆ ಎಲ್ಲವೂ ಇಲ್ಲೇ ಇದೆ ಎಂದರು. ನಾನು ಪ್ರತಿ ಚುನಾವಣಾ ಸಮಯದಲ್ಲಿ ಅಮೇರಿಕದಿಂದ ಬರುತ್ತೇನೆ, ಕ್ಷೇತ್ರದಲ್ಲಿ ಸೇವಾಕಾರ್ಯದಲ್ಲಿ, ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ಕೋವಿಡ್ ಸಮಯದಲ್ಲಿ ನನ್ನ ತಂದೆ ಪಿಪಿಇ ಕಿಟ್ ಧರಿಸಿ, ಕೋವಿಡ್ ಪೀಡಿತರನ್ನು ಭೇಟಿ ಮಾಡುವಂತೆ ಸಲಹೆ ನೀಡಿದವನೂ ನಾನೇ. “ಆದರೆ, ಡಾಕ್ಟರ್ ಮಂಥರ್ ಗೌಡ್ರೇ, ಪಕ್ಕದ…
ಮಡಿಕೇರಿ ಮೇ 8 : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆ ಶೇ.93.19 ಫಲಿತಾಂಶದೊಂದಿಗೆ ರಾಜ್ಯಕ್ಕೆ 9ನೇ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಜಿಲ್ಲೆ ರಾಜ್ಯಕ್ಕೆ 11 ಸ್ಥಾನದಲ್ಲಿತ್ತು. ಜಿಲ್ಲೆಗೆ ಪ್ರಥಮ-ಮಡಿಕೇರಿಯ ಸಂತ ಮೈಕೆಲರ ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿನಿ ಮರ್ಲಿನ್ ಲಾಸ್ರೆಡೋ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ವೈಷ್ಣವಿ ಅವರುಗಳು 620(ಶೇ.99.20) ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮರಾಗಿದ್ದಾರೆ. ಸೋಮವಾರಪೇಟೆಯ ಫಾತಿಮಾ ಕಾನ್ವೆಂಟ್ನ ಶ್ರೀವಿದ್ಯಾ ಡಿ.619(ಶೇ.99.04) ಅಂಕಗಳೊಂದಿಗೆ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೂಡಿಗೆಯ ಏಂಜೆಲಾ ವಿದ್ಯಾನಿಕೇತನದ ಚೇತನ್ ಎಸ್.ಎನ್. ಮತ್ತು ಗೋಣಿಕೊಪ್ಪಲು ಲಯನ್ಸ್ ಪ್ರೌಢಶಾಲೆಯ ದೀತ್ಯಾ ದೇಚಮ್ಮ ಎಂ.ವಿ. ಅವರುಗಳು 618 (ಶೇ.98.88) ಅಂಕಗಳೊಂದಿಗೆ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. 5597 ವಿದ್ಯಾರ್ಥಗಳು ತೇರ್ಗಡೆ- ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಜಿಲ್ಲೆಯ 6026 ವಿದ್ಯಾರ್ಥಿಗಳಲ್ಲಿ 5597 ಮಂದಿ ಉತ್ತೀರ್ಣಗಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಪರೀಕ್ಷೆ ಬರೆದ 1769 ವಿದ್ಯಾರ್ಥಿಗಳಲ್ಲಿ 1608 ಮಂದಿ ತೇರ್ಗಡೆಯಾಗಿ ಶೇ.90.90 ಫಲಿತಾಂಶ ಬಂದಿದ್ದರೆ, ಸೋಮವಾರಪೇಟೆ ತಾಲ್ಲೂಕಿನ 2383 ವಿದ್ಯಾರ್ಥಿಗಳಲ್ಲಿ 2270…
ಮಡಿಕೇರಿ ಮೇ 8 : ಕೋಮು ಭಾವನೆ ಬಿತ್ತುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡು ಜನರನ್ನು ಗೊಂದಲಕ್ಕೀಡು ಮಾಡುತ್ತಿವೆ ಎಂದು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಜಾಶೀರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಎದುರಾಗಿರುವ ಚುನಾವಣೆ ಅತ್ಯಂತ ವಿಭಿನ್ನ ರೀತಿಯದ್ದಾಗಿದೆ. ಅಲ್ಪಸಂಖ್ಯಾತರು ತನ್ನ ಮತ ಬ್ಯಾಂಕ್ ಎಂದು ಭಾವಿಸಿಕೊಂಡಿರುವ ಕಾಂಗ್ರೆಸ್ ಈಗಾಗಲೇ ಗೆದ್ದಿರುವ ಭ್ರಮೆಯಲ್ಲಿದೆ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪದ ಕಾಂಗ್ರೆಸ್ ಮುಖಂಡ ಕೆ.ಎಂ.ಇಬ್ರಾಹಿಂ ಅವರ ಪುತ್ರ ರಫೀಕ್ ಅವರು ಜೆಡಿಎಸ್ಗೆ ಸೇರ್ಪಡೆಗೊಂಡಿದ್ದಾರೆ ಎಂದು ತಿಳಿಸಿದರು. ಈ ಬಾರಿಯ ಚುನಾವಣೆಯಲ್ಲಿ ಜಾತ್ಯತೀತ ನಿಲುವಿನ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರನ್ನು ಕ್ಷೇತ್ರದ ಜನತೆ ಆಶೀರ್ವದಿಸಲಿದ್ದು, ಅವರ ಗೆಲುವು ನಿಶ್ಚಿತವೆಂದು ಹೇಳಿದರು. ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ, ಪ್ರಮುಖ ರಾಜಕೀಯ ಪಕ್ಷಗಳು ಜೆಡಿಎಸ್ ಈ ಚುನಾವಣೆಯಲ್ಲಿ ಹೊಂದಾಣಿಕೆಯ ರಾಜಕೀಯ ಮಾಡುತ್ತಿರುವುದಾಗಿ ಅಪಪ್ರಚಾರ ಮಾಡುತ್ತಿವೆ. ನಿಜಾಂಶವೆಂದರೆ ಒಳ…
ಮಡಿಕೇರಿ ಮೇ 8 : ಮಡಿಕೇರಿ ಕ್ಷೇತ್ರದ ಶಾಸಕರು ಕೋಟ್ಯಾಂತರ ರೂ. ಅನುದಾನ ತಂದಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ಅನುದಾನ ಎಲ್ಲಿಗೆ ಬಳಕೆಯಾಗಿದೆ ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ ಎಂದು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಪ್ರಮುಖ ಸುರೇಶ್ ಹಣಕೋಡು ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಜಾತಿ, ಮತ, ಧರ್ಮಗಳನ್ನು ಮೀರಿ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಐದು ಬಾರಿ ಶಾಸಕರಾದವರು ಕೋಟ್ಯಾಂತರ ರೂ. ಅನುದಾನ ತಂದಿರುವ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಇಷ್ಟು ಹಣ ಬಂದಿದ್ದರೂ ಕ್ಷೇತ್ರ ಅಭಿವೃದ್ಧಿ ಕಾಣದೆ ಇರಲು ಕಾರಣವೇನೆಂದು ಪ್ರಶ್ನಿಸಿದರು. ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ವಸಂತ ಶಾಂತವೇರಿ ಮಾತನಾಡಿ ಬಿಜೆಪಿಯಲ್ಲಿನ ಗೊಂದಲಗಳಿಂದ ಬೇಸತ್ತು ಪಕ್ಷ ತೊರೆದಿದ್ದೇನೆ ಎಂದರು. ಭ್ರಷ್ಟಾಚಾರ ರಹಿತ ಆಡಳಿತ ದೊgತಯಕಬೇಕೆನ್ನುವ ಚಿಂತನೆ ತನ್ನದಾಗಿತ್ತು. ಆದರೆ, ಇದಕ್ಕೆ ತದ್ವಿರುದ್ಧವಾದ ನಡೆUಳು ಕಂಡು ಬಂದಿದೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುರುಳಿ ಉಪಸ್ಥಿತರಿದ್ದರು.
ಮಡಿಕೇರಿ ಮೇ 8 : ಸಿದ್ದಾಪುರ ಸಂತ ಜೋಸೆಫ್ರ ಚರ್ಚ್ನ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ವಾರ್ಷಿಕೋತ್ಸವದ ಪ್ರಯುಕ್ತ ದಿವ್ಯ ಅಡಂಬರ ಬಲಿ ಪೂಜೆಯನ್ನು ಬೆಂಗಳೂರಿನ ಇಂದಿರಾ ನಗರದ ಫಾದರ್ ಬಾಲ್ ರಾಜ್ ಧರ್ಮಗುರುಗಳು ನೆರವೇರಿಸಿದರು. ಕ್ರೈಸ್ತ ಬಾಂಧವರು ನೂರಾರು ಸಂಖ್ಯೆಯಲ್ಲಿ ಪ್ರಾರ್ಥನೆ ಹಾಗೂ ದಿವ್ಯ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಸಂತ ಜೋಸೆಫ್ ರ ವಿಗ್ರಹವನ್ನು ವಿದ್ಯುತ್ ಅಲಂಕೃತ ಮಂಟಪ ವಾದ್ಯ ಗೋಷ್ಠಿಗಳ ಮೂಲಕ ಹಳೇ ಸಿದ್ದಾಪುರದ ರಸ್ತೆಯ ಸಂತ ಮೇರಿ ಗವಿಯವರೆಗೆ ಭಕ್ತಾದಿಗಳು ಮೇಣದ ಬತ್ತಿ ಹಿಡಿದು ಮೆರವಣಿಗೆ ಮೂಲಕ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಿ ಚರ್ಚ್ಗೆ ಹಿಂತಿರುಗಲಾಯಿತು. ಸಿದ್ದಾಪುರ ಧರ್ಮ ಕೇಂದ್ರದ ಫಾದರ್ ಮೈಕಲ್ ಮೇರಿ, ಫಾದರ್ ದಯಾನಂದ ಪ್ರಭು ವಿರಾಜಪೇಟೆ, ಫಾದರ್ ಜ್ಞಾನಪ್ರಕಾಶ್ ನಾಪೋಕ್ಲು ಮತ್ತು ಕೊಡಗಿನ ಇತರ ಧರ್ಮ ಕೇಂದ್ರದ ಗುರುಗಳು ವಾರ್ಷಿಕೋತ್ಸವ ಹಬ್ಬದಲ್ಲಿ ಪಾಲ್ಗೊಂಡಿದ್ದು, ನೆರೆದಿದ್ದ ಭಕ್ತರಿಗೆ ಆಶೀರ್ವದಿಸಿದರು. ಈ ಸಂದರ್ಭ ಪಾಲನ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.






