ಮಡಿಕೇರಿ ಮೇ 8 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳನ್ನು ಕೇಂದ್ರ ಸ್ಥಾನದಿಂದ ಕೆಎಸ್ಆರ್ಟಿಸಿ ಬಸ್ಗಳ ಮುಖಾಂತರ ಕರೆದುಕೊಂಡು ಹೋಗುವ ಮಾರ್ಗದ ವಿವರ ಇಂತಿದೆ. ಮಡಿಕೇರಿ ತಾಲ್ಲೂಕಿನ ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮೂರ್ನಾಡು ಮಾರ್ಗವಾಗಿ ಬಸ್ ಸಂಚರಿಸಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ. ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಹೊರಟು ಬೆಟ್ಟಗೇರಿ-ನಾಪೋಕ್ಲು-ಕಕ್ಕಬೆ-ಪಾರಾಣೆ ಮಾರ್ಗವಾಗಿ ಬಸ್ ಸಂಚರಿಸಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜಿಗೆ ತಲುಪಲಿದೆ. ನಗರದ ಗಾಂಧಿ ಮೈದಾನದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಹಾಕತ್ತೂರು-ಮರಗೋಡು-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ಬಸ್ ಸಂಚರಿಸಿ ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ತಲುಪಲಿದೆ. ಕರಿಕೆ ಗ್ರಾಮ ಪಂಚಾಯಿತಿ ಕಚೇರಿಯಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಭಾಗಮಂಡಲ-ಅಯ್ಯಂಗೇರಿ-ನೆಲಜಿ-ಬಲ್ಲಮಾವಟಿ-ಕಕ್ಕಬೆ-ಚೆಯ್ಯಂಡಾಣೆ ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಜೂನಿಯರ್ ಕಾಲೇಜಿಗೆ ತಲುಪಲಿದೆ. ಮಡಿಕೇರಿ ಕೋಟೆ ಆವರಣದಿಂದ ಬೆಳಗ್ಗೆ 7 ಗಂಟೆಗೆ ಬಸ್ ಹೊರಟು ಕತ್ತಲೆಕಾಡು-ಕಡಗದಾಳು-ಚೆಟ್ಟಳ್ಳಿ-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಜೂನಿಯರ್…
ಲೇಖಕ: admin
ಮಡಿಕೇರಿ ಮೇ 8 : ನಗರದ ಜಿಲ್ಲಾ ಪಂಚಾಯಿತಿ ಬಳಿ (ಗೃಹ ಮಂಡಳಿ ಹತ್ತಿರ) ಭಾರತ ಚುನಾವಣಾ ಆಯೋಗದಿಂದ ಸುಮಾರು 4.25 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ’ವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಉದ್ಘಾಟಿಸಿದರು. ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಚುನಾವಣಾ ತಹಶೀಲ್ದಾರ್ ರವಿಶಂಕರ, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಎಇಇ ದ್ರುವರಾಜು, ಜೂನಿಯರ್ ಎಂಜಿನಿಯರ್ ಸತೀಶ್, ಚುನಾವಣಾ ಶಿರಸ್ತೇದಾರ್ ಪ್ರಕಾಶ್ ಇತರರು ಇದ್ದರು. ಮತ ಎಣಿಕೆ ಪೂರ್ಣಗೊಂಡ ನಂತರ ವಿದ್ಯುನ್ಮಾನ ಮತಯಂತ್ರಗಳನ್ನು ಸೂಕ್ತ ಭದ್ರತೆಯೊಂದಿಗೆ ಈ ಉಗ್ರಾಣದಲ್ಲಿ ಇಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮಡಿಕೇರಿ ಮೇ.8 : ಪ್ರಸಕ್ತ (2023-24)ಸಾಲಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎ-ಎಚ್ಆರ್ಡಿ, ಬಿಎಸ್ಸಿ, ಬಿಎಸ್ಡಬ್ಲ್ಯು ಕೋರ್ಸ್ಗಳಿಗೆ ಉಚಿತವಾಗಿ ಅರ್ಜಿಯನ್ನು ಕಾಲೇಜಿನಲ್ಲಿ ಹಾಗೂ ಕಾಲೇಜಿನ ಜಾಲತಾಣ www.fmkmcc.edu.in ನಲ್ಲಿ ಪಡೆದುಕೊಳ್ಳಬಹುದು. ನಿಯಮಾನುಸಾರ ಭರ್ತಿ ಮಾಡಿದ ಅರ್ಜಿಯನ್ನು ಕಾಲೇಜಿನ ಕಚೇರಿಗೆ ಹಿಂದಿರುಗಿಸುವುದು. ಹೆಚ್ಚಿನ ಮಾಹಿತಿಗೆ 08272-298222/ 8088272689 ನ್ನು ಸಂಪರ್ಕಿಸಬಹುದು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಏ.8 : ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಮತದಾರರ ಗುರುತಿನ ಚೀಟಿ ಇಲ್ಲದೇ ಇದ್ದರೆ ಮಾನ್ಯತೆ ಪಡೆದ 12 ಬಗೆಯ ಗುರುತಿನ ಚೀಟಿ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ಆಧಾರ್ ಕಾರ್ಡ್, ಎಂಎನ್ಆರ್ಇಜಿಎ ಜಾಬ್ ಕಾರ್ಡ್, ಬ್ಯಾಂಕ್, ಅಂಚೆ ಕಚೇರಿಯು ವಿತರಿಸಿರುವ ಭಾವಚಿತ್ರವಿರುವ ಪಾಸ್ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ವಿತರಿಸಿರುವ ಹೆಲ್ತ್ ಇನ್ಸುರೆನ್ಸ್ ಕಾರ್ಡ್, ಚಾಲನಾ ಪರವಾನಗಿ ಪತ್ರ, ಪಾನ್ಕಾರ್ಡ್, ಎನ್ಪಿಆರ್ ಅಡಿಯಲ್ಲಿ ಆರ್ಜಿಐ ವತಿಯಿಂದ ನೀಡಿರುವ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆಗಳು. ಕೇಂದ್ರ, ರಾಜ್ಯ, ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ನೀಡಿರುವ ಗುರುತಿನ ಚೀಟಿ ತೋರಿಸಿ ಮತ ಹಕ್ಕು ಚಲಾಯಿಸಬಹುದಾಗಿದೆ. ‘ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪ್ರತಿ ಮತಗಟ್ಟೆಯ 200 ಮೀಟರ್ ಅಂತರದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಬೂತ್ಗಳನ್ನು ಸ್ಥಾಪಿಸಬಹುದಾಗಿದೆ. ಈ ಬೂತ್ಗಳಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತಿಯ, ಪಂಚಾಯತ್…
ಮಡಿಕೇರಿ ಮೇ 8 : ಕೊಡಗು ಜಿಲ್ಲೆಯಲ್ಲಿ ಕಳೆದ 20-25 ವರ್ಷಗಳ ಕಾಲ ಸೋಲು ಅನುಭವಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ದಾಖಲೆ ನಿರ್ಮಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಅವರುಗಳು ವಿದ್ಯಾವಂತರು ಹಾಗೂ ಅಭಿವೃದ್ಧಿಪರ ಚಿಂತನೆ ಹೊಂದಿದವರಾಗಿದ್ದು, ಇವರ ಗೆಲುವು ನಿಶ್ಚತವೆಂದರು. ಚುನಾವಣಾ ಪ್ರಚಾರದ ಸಂದರ್ಭ ಜನಬೆಂಬಲ ಇವರಿಬ್ಬರ ಪರವಾಗಿದೆ. ಕಳೆದ 20-25 ವರ್ಷಗಳ ಕಾಲದ ಆಡಳಿತದಿಂದ ಜಿಲ್ಲೆಯ ಜನ ಬೇಸತ್ತು ಹೋಗಿದ್ದು, ಬದಲಾವಣೆಯನ್ನು ಬಯಸಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿಂದ ಗೆಲುವು ದಾಖಲಿಸಲಿದ್ದಾರೆ ಎಂದು ತಿಳಿಸಿದರು. ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಪಕ್ಷ ತೊರೆದಿರುವುದರಿಂದ ಯಾವುದೇ ತೊಂದರೆ ಆಗಿಲ್ಲ. ಉಪಾಧ್ಯಕ್ಷ ಸ್ಥಾನದಲ್ಲಿದ್ದ ಅನಂತಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲಾ ಸ್ಥಾನಮಾನಗಳನ್ನು…
ವಿರಾಜಪೇಟೆ ಮೇ 8 : ದೇವಣಗೇರಿಯ ಬಿ.ಸಿ ಪ್ರೌಢಶಾಲೆಯು 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದು ಸತತವಾಗಿ 5 ವರ್ಷ ಶೇ.100 ರಷ್ಟು ಫಲಿತಾಂಶ ಪಡೆದು ಸಾಧನೆಗೈದು ಜಿಲ್ಲೆಯಲ್ಲಿ ಅನುದಾನಿತ ಪ್ರೌಢಶಾಲಾ ವಿಭಾಗದಲ್ಲಿ ಸಾಧನೆ ಮಾಡಿದೆ. ಇಲ್ಲಿಯವರೆಗೆ ಒಟ್ಟು 7 ಬಾರಿ ಶೇ.100 ಫಲಿತಾಂಶ ಪಡೆದು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಪ್ರಗತಿಗೆ ಶಿಕ್ಷಕರ ನಿರಂತರ ಪರಿಶ್ರಮ ಸಹಕಾರಿಯಾಗಿದೆ.
ಮಡಿಕೇರಿ ಮೇ 8 : ಜಿಲ್ಲೆಯ ಎಎನ್ಎಫ್ ಶಿಬಿರಗಳಿಗೆ ಎಡಿಜಿಪಿ ಆಂತರಿಕ ಭದ್ರತಾ ವಿಭಾಗ (ಐಎಸ್ಡಿ), ಐಜಿಪಿ ಐಎಸ್ಡಿ ಮತ್ತು ನಕ್ಸಲ್ ನಿಗ್ರಹ ದಳದ ಎಸ್ಪಿ ಭೇಟಿ ನೀಡಿ, ಚುನಾವಣೆಯನ್ನು ಸುಸೂತ್ರವಾಗಿ ನಡೆಸುವಂತೆ ತಿಳಿಸಿದರು.
ಮಡಿಕೇರಿ ಮೇ 8 : ಗಾಳಿಬೀಡು ಸರಕಾರಿ ಪ್ರೌಢಶಾಲೆ ಕಳೆದ 11 ವರ್ಷಗಳಿಂದ ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಈ ಬಾರಿಯೂ ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಮಾದರಿ ಶಾಲೆ ಎನಿಸಿಕೊಂಡಿದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಶಾಲೆಯ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿ, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದೆ.
ಕೊಡ್ಲಿಪೇಟೆ ಮೇ 8 : 2022- 23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೊಡ್ಲಿಪೇಟೆ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯು ಶೇ 100 ರಷ್ಟು ಫಲಿತಾಂಶ ಪಡೆದಿದ್ದು, 26 ರಷ್ಟು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಮಡಿಕೇರಿ ಮೇ 8 : ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದು, ಮಡಿಕೇರಿ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರಿಗೆ ಮತ ನೀಡುವಂತೆ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದಿವಿನ್ ಹಾಗೂ ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ಶಶಿಕಲಾ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ತೀರ್ಮಾನದಂತೆ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದ ಮೇರೆಗೆ ಹಾಗೂ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಮತ್ತು ರಾಜ್ಯದಲ್ಲಿ ದಲಿತರನ್ನು ಕಡೆಗಣಿಸಲಾಗುತ್ತಿದೆ. ದಲಿತರ ಕಲ್ಯಾಣಕ್ಕಾಗಿ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಾರದೆ ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಕಳೆದ…






