ಕುಶಾಲನಗರ ಡಿ.11 NEWS DESK : ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಹಳೆ ಪಿಂಚಣಿ ಯೋಜನೆ ಜಾರಿ, ಮಕ್ಕಳ ದಾಖಲಾತಿಯಲ್ಲಿ ವಿನಾಯಿತಿ, ಶಾಲೆ ಮಾನ್ಯತೆ ನವೀಕರಣ ಸೇರಿದಂತೆ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.17 ರಂದು ಬೆಳಗಾವಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಹಳೆಯ ಪಿಂಚಣಿ ಅತಿ ಶೀಘ್ರವಾಗಿ ಜಾರಿಗೆ ಒತ್ತಾಯಿಸಿ ಬೃಹತ್ ಹೋರಾಟಕ್ಕೆ ರಾಜ್ಯ ಸಂಘ ಈಗಾಗಲೇ ತೀರ್ಮಾನಿಸಿದ್ದು ಸಂಘಟನೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ. ಅನುದಾನಿತ ನೌಕರರ ಮತ್ತು ಸಂಸ್ಥೆಗಳ ಉಳಿವಿಗಾಗಿ ಹೋರಾಟ ಅನಿವಾರ್ಯ ಆಗಿದೆ. ಆದ್ದರಿಂದ ಕೊಡಗು ಜಿಲ್ಲಾ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅನುದಾನಿತ ಶಾಲಾ ಕಾಲೇಜುಗಳ…
ಲೇಖಕ: admin
ಬೆಳಗಾವಿ ಡಿ.11 NEWS DESK : ಬೆಳಗಾವಿ ಜಿಲ್ಲಾಡಳಿತ ಹಾಗೂ ಬೆಳಗಾವಿ ಲೋಕೋಪಯೋಗಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲಿ ನಿರ್ಮಿಸಿರುವ, ಉದ್ಯಾನವನ ಹಾಗೂ ಕಾರಂಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ , ಸಚಿವರುಗಳಾದ ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ ಸುಧಾಕರ್, ಡಾ.ಹೆಚ್.ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹಮದ್, ಶಾಸಕರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು ಡಿ.11 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್, ಬಾಸಿಲ್, ಸಮೀರ್ರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟು ಮಾತ್ರ ಸಾಲದು ಇವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್ ಆಗ್ರಹಿಸಿದರು. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದರು. :: ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ :: ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂಥ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಈ ಸಂಬಂಧ ಪೊಲೀಸ್ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಕಠಿಣ…
ಮಡಿಕೇರಿ ಡಿ.11 NEWS DESK : ಮಾನವ ದೇಹಕ್ಕೆ ಅತ್ಯಂತ ಮುಖ್ಯವಾದ ಪೋಷಕಾಂಶಗಳಲ್ಲಿ ಒಂದಾದ ವಿಟಮಿನ್ ಡಿ3 ಯನ್ನು ಕೋಲೆಕ್ಯಾಲ್ಸಿಫೆರಾಲ್ ಎಂದೂ ಕರೆಯುತ್ತಾರೆ. ಇದು ದೇಹದಲ್ಲಿ ಹಾರ್ಮೋನ್ನಂತೆ ಕಾರ್ಯನಿರ್ವಹಿಸುತ್ತದೆ ಮತ್ತು ಮೂಳೆ ಆರೋಗ್ಯ, ರೋಗನಿರೋಧಕ ಶಕ್ತಿ, ಹೃದಯ ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆಧುನಿಕ ಜೀವನದಲ್ಲಿ ಅದರ ಕೊರತೆಯು ಸಾಮಾನ್ಯವಾಗಿದ್ದರೂ, ಸರಳ ಕ್ರಮಗಳ ಮೂಲಕ ಅದನ್ನು ನಿಯಂತ್ರಿಸಬಹುದು. :: ವಿಟಮಿನ್ ಡಿ3ಯ ಮಹತ್ವ :: ಇದು ಮೂಳೆಗಳ ಬೆಳವಣಿಗೆ ಮತ್ತು ಬಲಕ್ಕೆ ಅತ್ಯಗತ್ಯ. ಇದು ನಮ್ಮ ಆಹಾರದಿಂದ ಕ್ಯಾಲ್ಸಿಯಂ ಮತ್ತು ಫಾಸ್ಫರಸ್ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ. ಇದರಿಂದಾಗಿ ಆಸ್ಟಿಯೋಪೋರೋಸಿಸ್ ಮತ್ತು ರಿಕೆಟ್ಸ್ ನಂತಹ ಕಾಯಿಲೆಗಳನ್ನು ತಡೆಯುತ್ತದೆ. ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಸಂಶೋಧನೆಗಳ ಪ್ರಕಾರ, ವಿಟಮಿನ್ ಡಿ3 ಕ್ಯಾನ್ಸರ್, ಮಧುಮೇಹ, ಹೃದಯರೋಗಗಳು ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲರೂ ಮನೆಯ ಒಳಗಡೆ ಇದ್ದುದರಿಂದ ಬಿಸಿಲಿಗೆ ಮೈಯನ್ನು ಒಡ್ಡಿ ಕೊಳ್ಳುವುದು…
ಮಡಿಕೇರಿ ಡಿ.11 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ವಿಶೇಷವಾಗಿ ಬೆಳಗಿನ ಶಾಲಾ ಸಭಾಂಗಣದಲ್ಲಿ ಪ್ರಾರ್ಥನಾ ಗೀತೆ, ನುಡಿಮುತ್ತು ಹಾಗೂ ಸುದ್ದಿ ಸಮಾಚಾರ ಒಳಗೊಂಡ ಸಂಪೂರ್ಣ ಕಾರ್ಯಕ್ರಮವನ್ನು ಕೊಡವ ಭಾಷೆಯಲ್ಲಿ ಹಮ್ಮಿಕೊಳ್ಳಲಾಯಿತು. ಕೊಡವ ಭಾಷೆಯ ಪ್ರಾರ್ಥನಾ ಗೀತೆಯನ್ನು ವಿದ್ಯಾರ್ಥಿಗಳಾದ ಕಂಜಿತಂಡ ಲಿಷ್ಮ ದೇಚಮ್ಮ, ಕೋಡಿರ ವಿಹಾನ ಮುತ್ತಣ್ಣ, ಮೇಕೆರಿರಾ ಪ್ರಿನಾಲ್ ಪೊನ್ನಕ್ಕ, ಮೇಕೇರಿರಾ ಮಾಚಮ್ಮ, ನಡುಮನೆ ಮೋಕ್ಷಿತ, ಕೊಪ್ಪಿರ ತನ್ವಿ ತಂಗಮ್ಮ, ಮಾನ್ವಿ ತಂಗಮ್ಮ, ಚೇಂದಿರ ಕನಿಷ್ಕ ಮಾದಪ್ಪ, ಮೇವಂಡ ಕುನಲ್ ಕುಟ್ಟಪ್ಪ, ಪುಗ್ಗೆರ ತಿಯಾರ ಮಂದಣ್ಣ ಹಾಡಿದರು. 6ನೇ ತರಗತಿಯ ಮೇಕೇರಿರ ಪ್ರಿನಲ್ ಪೊನ್ನಕ್ಕ ಕೊಡವ ನುಡಿಮುತ್ತು ಹಾಗೂ 8ನೇ ತರಗತಿಯ ವಿದ್ಯಾರ್ಥಿಯಾದ ಪಟ್ಟಡ ದೇಚಮ್ಮ ಬಿ ಸುದ್ದಿ ಸಮಾಚಾರ ಓದಿದರು. ಗತಕಾಲದ ಪುತ್ತರಿ ಹಬ್ಬದ ಕೊಡಗಿನ ಜನಪದ ಕಲೆ ಸಂಸ್ಕೃತಿ, ಬಿಂಬಿಸುವ ಸಾಂಪ್ರದಾಯಿಕ ಉಡುಗೆಯಲ್ಲಿ ತಾಳಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಂದ ಉಮ್ಮತಾಟ್ ನೃತ್ಯ ವನ್ನು ಎಂಟನೇ ತರಗತಿ ವಿದ್ಯಾರ್ಥಿಗಳಾದ ಪಟ್ಟಡ ಬಿ. ದೇಚಮ್ಮ, ಕುಪ್ಪಚ್ಚಿರ…
ಮಡಿಕೇರಿ NEWS DESK ಡಿ.10 : ಕೊಡಗು ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕರುಗಳು ಸ್ಪಷ್ಟ ಸೂಚನೆಯನ್ನು ನೀಡುವ ಮೂಲಕ ಸಾರ್ವಜನಿಕರ ಹಿತ ಕಾಯಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್ಟಿ ಮೋರ್ಚಾ ಒತ್ತಾಯಿಸಿದೆ. ವಿರಾಜಪೇಟೆ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎA.ಪರಮೇಶ್ವರ ಅವರು ಅತಿ ಮಳೆಯ ನೆಪವೊಡ್ಡಿ ರಸ್ತೆಗಳ ಗುಂಡಿ ಮುಚ್ಚುವ ತೇಪೆ ಕಾರ್ಯವನ್ನು ಇತ್ತೀಚೆಗಷ್ಟೇ ಆರಂಭಿಸಲಾಗಿದೆ. ಈ ಕಾಮಗಾರಿಯಲ್ಲಿ ನವೀನ ತಂತ್ರಜ್ಞಾನವನ್ನು ಬಳಸದೆ ಹಳೆಯ ಕ್ರಮವನ್ನು ಅನುಸರಿಸಲಾಗುತ್ತಿದೆ. ಇದು ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳು ಗುಂಡಿಮಯವಾಗಿದ್ದು, ನಿಧಾನಗತಿಯ ಕಾಮಗಾರಿಯಿಂದ ವಾಹನ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈಗ ನಡೆಯುತ್ತಿರುವ ಕಾಮಗಾರಿಯ ವೇಗವನ್ನು ಗಮನಿಸಿದರೆ ಮುಂದಿನ ಮಳೆಗಾಲದವರೆಗೂ ಗುಂಡಿ ಮುಚ್ಚುವ ಕಾರ್ಯ ಮುಂದುವರಿಯುವ ಸಾಧ್ಯತೆ ಇದೆ ಎಂದು ವ್ಯಂಗ್ಯವಾಡಿದರು. ಜಿಲ್ಲೆಯ ಶಾಸಕದ್ವಯರು…
ಮಡಿಕೇರಿ ಡಿ.10 NEWS DESK : ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆಯನ್ನು 2015 ರಲ್ಲಿ ಲಾಭರಹಿತ ಸಂಸ್ಥೆಯಾಗಿ, ಬೆಂಗಳೂರಿನ ಕನಕಪುರ ರಸ್ತೆಯ ರವುಗೋಡ್ಲು ಗ್ರಾಮದಲ್ಲಿ ಸ್ಥಾಪಿಸಲಾಗಿದೆ. ಈ ಸಂಸ್ಥೆಗೆ ಭಾರತದ ಸರ್ಕಾರದ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಇಲಾಖೆಯು (ಡಿಎಸ್ಐಆರ್) ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆ (ಎಸ್ಐಆರ್ಒ) ಎಂದು ಮಾನ್ಯತೆಯನ್ನು ನೀಡಿದೆ. ಪ್ರಯೋಗಾ ಸಂಸ್ಥೆಯು ವಿಜ್ಞಾನ ಕಲಿಕೆ ಮತ್ತು ಅಧ್ಯಾಪನವನ್ನು ಪ್ರಯೋಗಾತ್ಮಕವಾಗಿ ಕಲಿಯಲು ಉತ್ತೇಜಿಸುವ ಹಲವಾರು ವಿಜ್ಞಾನ ಶಿಕ್ಷಣ ಮತ್ತು ಪ್ರೋತ್ಸಾಹಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂತಹವುಗಳಲ್ಲೊಂದು ಅನ್ವೇಷಣಾ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮವನ್ನು 2021ರಲ್ಲಿ ಪ್ರಾರಂಭಿಸಿದ್ದು, ಪ್ರೌಢಶಾಲೆ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಲ್ಲಿ (ತರಗತಿಗಳು 9–12) ವೈಜ್ಞಾನಿಕ ಅನ್ವೇಷಣೆ ಮತ್ತು ಅನುಭವಾಧಾರಿತ ಕಲಿಕೆಯನ್ನು ಉತ್ತೇಜಿಸುವ ಮಹತ್ವಾಕಾಂಕ್ಷಿ ಉಪಕ್ರಮವಾಗಿದೆ. ಈ ಕಾರ್ಯಕ್ರಮಕ್ಕೆ ಅರ್ಹ ವಿದ್ಯಾರ್ಥಿಗಳಿಂದ 2026 ರ ಶೈಕ್ಷಣಿಕ ವರ್ಷಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ, 15 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಡಿ.10 NEWS DESK : ಸ್ಪೈಸಸ್ ಅಂಗಡಿಯೊಂದರಲ್ಲಿ ಕಿಡಿಗೇಡಿಯೊಬ್ಬ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಕುರಿತು ಅವಹೇಳನ ಮಾಡಿರುವ ಮತ್ತು ಆತನೊಂದಿಗೆ ಕೆಲವು ಯುವಕರು ಸಂಭ್ರಮಸಿರುವ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಕಿಡಿಗೇಡಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವ ಮೂಲಕ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದಕ್ಕಾಗಿ ಈ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ಕುರಿತು ಶಂಕೆ ಇದ್ದು, ತಕ್ಷಣ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ದೇಶದ ಅಭಿವೃದ್ಧಿ ಮತ್ತು ಸಾಮರಸ್ಯಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿಶ್ವ ಮಟ್ಟದಲ್ಲೇ ಖ್ಯಾತಿ ಗಳಿಸಿರುವ ಪ್ರಧಾನಿ ಮೋದಿ ಅವರ ಕುರಿತು ಅವಹೇಳನ ಮಾಡಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಳ್ಳಬೇಕು ಮತ್ತು ಯಾವುದೇ ಪ್ರಭಾವಕ್ಕೆ ಮಣಿಯದೆ ಕಿಡಿಗೇಡಿಗಳ ವಿರುದ್ಧ ದೇಶದ್ರೋಹದ ಪ್ರಕರಣ…
ಮಡಿಕೇರಿ ಡಿ.10 NEWS DESK : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ‘ಯುವನಿಧಿ’ ಯೋಜನೆಯಡಿಯಲ್ಲಿ ನೋಂದಾಯಿಸಿರುವ ಆಸಕ್ತ ಯುವನಿಧಿ ಫಲಾನುಭವಿಗಳಿಗೆ ಎರಡು ವಾರಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಫಲಾನುಭವಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮತ್ತಿತ್ತರ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಡಿಸೆಂಬರ್, 25 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ…
ಮಡಿಕೇರಿ ಡಿ.10 NEWS DESK : ಕರ್ನಾಟಕ ಸರ್ಕಾರದ ಯೋಜನೆಯಂತೆ ತಾಲ್ಲೂಕು ವ್ಯಾಪ್ತಿಯಲ್ಲಿನ ಇ-ಪೌತಿ ಖಾತೆ ಬದಲಾವಣೆ ಸಂಬಂಧ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪೌತಿ ವಾರಸುದಾರಿಕೆಯ ಖಾತೆಗೆ ಖಾತೆದಾರನ ಮರಣ ಧೃಢೀಕರಣ ಪತ್ರ, ಒಂದು ವೇಳೆ ಮರಣ ಧೃಡೀಕರಣ ಲಭ್ಯವಿಲ್ಲದಿದ್ದಲ್ಲಿ ಆಧಾರ್ ಮತ್ತು ಪಡಿತರ ಚೀಟಿ ದಾಖಲೆಗಳಂತೆ ಸಂಬಂಧಪಟ್ಟ ವಾರಸುದಾರರಿಂದ ಅಫಿಡವಿಡ್ನ್ನು ಪಡೆದುಕೊಳ್ಳುವುದು. ಆರ್.ಡಿ.ಸಂಖ್ಯೆಯುಳ್ಳ ವಂಶವೃಕ್ಷ ಧೃಡೀಕರಣ ಪತ್ರ, ಚಾಲ್ತಿ ಸಾಲಿನ ಪಹಣೆ, ಆಧಾರ್ ಪತ್ರಿ ಮತ್ತು ದೂರವಾಣಿ ಸಂಖ್ಯೆಯನ್ನು ಸಲ್ಲಿಸಬೇಕು. ದಾಖಾಲಾತಿಗಳೊಂದಿಗೆ (ಪಟ್ಟೆದಾರರು ಮರಣಹೊಂದಿದರೆ ಪಟ್ಟೆದಾರರ ನೇರ ವಾರಸುದಾರರಲ್ಲದೇ ಇತರೇ ಸಂಬಂಧಗಳಿಗೆ ನೇರ ಖಾತೆ ಮಾಡುವ ಪ್ರಕ್ರಿಯೆ ಹೊರತುಪಡಿಸಿ) ಮನವಿಯನ್ನು/ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕರಿಗಳಿಗೆ ಸಲ್ಲಿಸಬೇಕು ಎಂದು ತಾಲ್ಲೂಕು ತಹಶೀಲ್ದಾರ್ ಶ್ರೀಧರ ಅವರು ತಿಳಿಸಿದ್ದಾರೆ.






