ಲೇಖಕ: admin

ಮಡಿಕೇರಿ ಮೇ 8 : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು, ಅದರಂತೆ ವಿರಾಜಪೇಟೆ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಮತ ನೀಡುವಂತೆ ಸಮಿತಿಯ ವಿರಾಜಪೇಟೆ ತಾಲ್ಲೂಕು ಸಂಚಾಲಕ ಮನು ಚೆನ್ನಯ್ಯನಕೋಟೆ ಹಾಗೂ ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ರೇಖಾ ಮಹೇಶ್ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, ಸಂವಿಧಾನ ವಿರೋಧಿ ನೀತಿಯ ಬಿಜೆಪಿ ಪಕ್ಷವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಅಸ್ತಿತ್ವಕ್ಕೆ ತರಲು ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ತೀರ್ಮಾನದಂತೆ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದ ಮೇರೆಗೆ ಹಾಗೂ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಶ್ರಮಿಸುತ್ತಿದೆ ಎಂದರು. ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಕಲ್ಯಾಣಕ್ಕೆ ಪೂರಕವಾದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ…

Read More

ಮಲಪ್ಪುರಂ: 23 ಜನರ ಸಾವಿಗೆ ಕಾರಣವಾದ ಕೇರಳ ದೋಣಿ ದುರಂತ ಪ್ರಕರಣದ ಸಂತ್ರಸ್ಥರಿಗೆ ಕೇರಳ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸ್ವತಃ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದು, ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ವಿಜಯನ್, ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು. ಸೋಮವಾರ ಮಲಪ್ಪುರಂ ಜಿಲ್ಲೆಯ ತಿರುರಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ವಿಜಯನ್, ಘಟನೆಯಿಂದ ತಮಗೆ ಆಘಾತವಾಗಿದ್ದು, ಪ್ರಕರಣದ ಕುರಿತು ಕೇರಳ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ಹೇಳಿದರು.

Read More

ಮಡಿಕೇರಿ ಮೇ 8 : ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನ್ಯೂ ಮೆಕಾಲೆ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಪೈ, ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಿಜಿಎಸ್ ಶಾಲೆಯ ಯಶಸ್ ಗೌಡ, ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ಭೀಮನಗೌಡ ಪಾಟೀಲ್ ಈ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರ ಸಂಖ್ಯೆ 3,41,108 ಆಗಿದ್ದು, ಬಾಲಕಿಯರ ಸಂಖ್ಯೆ 3,59,511, SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಆಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.

Read More

ಮಡಿಕೇರಿ ಮೇ 8 : ಮಡಿಕೇರಿ ತಾಲ್ಲೂಕಿನ ಪೆರಾಜೆ ಗ್ರಾಮದ ಜ್ಯೋತಿ ಪ್ರೌಢ ಶಾಲೆ  10 ನೇ ತರಗತಿ ಪರೀಕ್ಷೆಯಲ್ಲಿ ಶೇ.100 ರಷ್ಟು  ಸಾಧನೆ ಮಾಡಿದೆ. ಕನ್ನಡದಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ 125 ಕ್ಕೆ 125 ಅಂಕ ದೊರೆತ್ತಿದೆ. 8ನೇ ತರಗತಿಗೆ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದೆ. ಹಾಸ್ಟೆಲ್ ವ್ಯವಸ್ಥೆ ಇದೆ ಎಂದು ಶಾಲಾ ಆಡಳಿತ ಮಂಡಳಿಯ ಸಹ ಕಾರ್ಯದರ್ಶಿ  ಲೋಕನಾಥ್ ಅಮಚೂರು ತಿಳಿಸಿದ್ದಾರೆ.

Read More

ಮಡಿಕೇರಿ ಏ.8 : ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ಪೊನ್ನಂಪೇಟೆಯ ಕೆ.ಪಿ.ಎಸ್. ಸಿ ಶಾಲೆಯ ವಿದ್ಯಾರ್ಥಿನಿ ಬಿ.ಎಸ್. ಕೀರ್ತಿ 605 (ಶೇಕಡ 96.8 ) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.  ಈಕೆ ಪೊನ್ನಂಪೇಟೆಯ ನಿಸರ್ಗ ನಗರದ ಬಿ. ಆರ್ ಸುಧಾಕರ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರಿ.

Read More

ಮಡಿಕೇರಿ ಮೇ 8 : ಕಾಟಕೇರಿ ಕೂರನಬಾಣೆಯ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಸಂಜೆ ದೈವಗಳ ಭಂಡಾರ ತೆಗೆಯಲಾಯಿತು. ನಂತರ ಮಂತ್ರವಾದಿ ಗುಳಿಗ ಪಾಷಾಣ ಮೂರ್ತಿ ಹಾಗೂ ಕೊರತಿ ದೈವದ ನೇಮಗಳು ನೆರವೇರಿತು. ಮುಂಜಾನೆ ಕೊರಗಜ್ಜ ದೈವದ ನೇಮ, ಧರ್ಮದೈವದ ನೇಮೋತ್ಸವ ನಡೆದಿದ್ದು, ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು.

Read More

ನಾಪೋಕ್ಲು ಮೇ 8 : ಕಕ್ಕುಂದ ಕಾಡು ವ್ಯಾಪ್ತಿಯಲ್ಲಿ ಕೊಡಗು ಬಲಿಜ ಸಮಾಜ ನೇತೃತ್ವದಲ್ಲಿ ಮನೆ ಮನೆ ಮತದಾನ ಜಾಗೃತಿ ಅಭಿಯಾನ ನಡೆಯಿತು. ಈ ಸಂದರ್ಭ ಕೊಡಗು ಬಲಿಜ ಸಮಾಜ ಅಧ್ಯಕ್ಷ ಟಿ.ಎಲ್.ಶ್ರೀನಿವಾಸ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಬಡತನ ರೇಖೆಗಿಂತಾ ಕೆಳಗೆ ಇರುವ ಬಲಿಜ ಮತದಾರರೇ ಅಧಿಕವಾಗಿದ್ದು, ಹಲವರು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯಕ ಸಮಾಜ ಒಕ್ಕೂಟ ಮೂಲಕ 102 ಜಾತಿ ಜನಾಂಗಗಳ ಬೇಡಿಕೆ ಈಡೇರಿಕೆಗೂ ಹೋರಾಟ ನಡೆದಿದೆ, ನಾಪೋಕ್ಲುವಿನಲ್ಲಿ ಸುಮಾರು 25 ಬಲಿಜ ಕುಟುಂಬಗಳಿದ್ದು ಜಮ್ಮಾ ಹಿಡುವಳಿದಾರರೂ ಇದ್ದಾರೆ ಎಂದರು. ಇದೇ ಸಂದರ್ಭ ಎಲ್ಲ ಬಲಿಜ ಜನಾಂಗದ ಮನೆ ಮನೆಗೆ ತೆರಳಿ ‘ಮತದಾನದ ದಿನ ಯಾರೂ ಮನೆಯಲ್ಲಿ ಉಳಿಯದೇ ಮತದಾನದಲ್ಲಿ ಭಾಗಿಯಾಗಿ ಎಂದು ಮನವಿ ಮಾಡಲಾಯಿತು. ಕೊಡಗು ಬಲಿಜ ಸಮಾಜ ನಿರ್ದೇಶಕಿ ಟಿ.ವಿ.ಭವಾನಿ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.  

Read More

ಮಡಿಕೇರಿ, ಮೇ 8 : ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತ ಶಯನ ಅವರು ಬರೆದಿರುವ ಪತ್ರಿಕೋದ್ಯಮದ, ಅನುಭವ ಆಧಾರಿತ ಪುಸ್ತಕ ‘ಸೊಡರು’ ಮೇ 14 ರಂದು ಮಡಿಕೇರಿಯಲ್ಲಿ ಬಿಡುಗಡೆಗೊಳ್ಳಲಿದೆ. ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಯಂ.ಸಿ. ನಾಣಯ್ಯ, ಸ್ಟಾರ್ ಆಫ್ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಗಳ ಸ್ಥಾಪಕ ಕೆ.ಬಿ.ಗಣಪತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರೆಸ್ ಕ್ಲಬ್ ಹಾಗೂ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎ.ಪೊನ್ನಪ್ಪ, ಗಡಿನಾಡ ಸಂಚಾರಿ ಪತ್ರಿಕೆಯ ಸಂಪಾದಕ ಟಿ.ಪಿ.ರಮೇಶ್, ‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಭಾಗವಹಿಸಲಿದ್ದಾರೆ. ಪುಸ್ತಕದೊಳಗೆ ವರದಿಗಾರಿಕೆ ಸಂದರ್ಭ ಉಂಟಾಗುವ ಎಡರು ತೊಡರುಗಳು, ಇರಿಸು ಮುರಿಸುಗಳು, ಕಾನೂನು ಅಡಚಣೆಗಳು, ಬೆದರಿಕೆಗಳು, ಸ್ವಯಂಕೃತ ಅಪರಾಧಗಳು ಇತ್ಯಾದಿ ವಿಚಾರ ಉದಾಹರಣೆ ಸಹಿತ ನೀಡಲಾಗಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮ ಜಿ. ಚಿದ್ವಿಲಾಸ್ ಅವರ ಮಾಲೀಕತ್ವದ ರೆಡ್‍ಬ್ರಿಕ್ಸ್ ಕಟ್ಟಡದ ಸತ್ಕಾರ ಸಭಾಂಗಣದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ. ಸಭಾಂಗಣದಲ್ಲಿ…

Read More

ಮಡಿಕೇರಿ ಏ.8 : ವಿಶ್ವವಿಖ್ಯಾತ ಮೈಸೂರು ದಸರಾ  ಮಹೋತ್ಸವದಲ್ಲಿ  14 ಬಾರಿ ಚಿನ್ನದ ಅಂಬಾರಿ ಹೊತ್ತು  ಸಾಗಿದ ಬಲರಾಮ  ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. 67 ವರ್ಷದ ಬಲರಾಮ ಆನೆ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ. ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು‌ ಕುಡಿಯಲು ಆಗದೇ ತೀವ್ರ ಅಸ್ವಸ್ಥಗೊಂಡಿತ್ತು.

Read More

ಮಡಿಕೇರಿ ಏ.8 :   ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‍ಎಸ್‍ಎಲ್‍ಸಿ  ಪರೀಕ್ಷಾ ಫಲಿತಾಂಶ  ಇಂದು ಪ್ರಕಟವಾಗಿದ್ದು, ಕೊಡಗು 9ನೇ ಸ್ಥಾನ ಪಡೆದುಕೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡಿಸಿದ ಸುದ್ದಿಗೋಷ್ಠಿಯಲ್ಲಿ , ‘ಚಿತ್ರದುರ್ಗ ಹೆಚ್ಚು ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೆಯ ಜಿಲ್ಲೆ ಮಂಡ್ಯ, ಮೂರನೇ ಜಿಲ್ಲೆ ಹಾಸನ ಜಿಲ್ಲೆಯಾಗಿದೆ. ಬೆಂಗಳೂರು ಗ್ರಾಮಾಂತರ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಜಿಲ್ಲೆ ಯಾದಗಿರಿ ಜಿಲ್ಲೆಯಾಗಿದೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

Read More