ಮಡಿಕೇರಿ ಜೂ.17 : ಕೊಡಗು ಜಿಲ್ಲೆಯ 104 ಗ್ರಾ.ಪಂ ಗಳಲ್ಲಿ ಖಾಲಿ ಹುದ್ದೆಗಳು ಭರ್ತಿಯಾಗದೆ ಇರುವುದರಿಂದ ಸಾರ್ವಜನಿಕರ ಕೆಲಸ, ಕಾರ್ಯಗಳು ಸ್ತಬ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಗ್ರಾ.ಪಂ ಗಳಲ್ಲಿ ಡಾಟಾ ಎಂಟ್ರಿ ಆಪರೇಟರ್, ಬಿಲ್ ಕಲೆಕ್ಟರ್, ಸ್ವಚ್ಛತಾ ಸಿಬ್ಬಂದಿ, ಅಟೆಂಡರ್, ನೀರುಗಂಟಿಗರು ಸೇರಿದಂತೆ ಸುಮಾರು 180 ಹುದ್ದೆಗಳು ಖಾಲಿ ಇವೆ. ಇವುಗಳನ್ನು ಶೀಘ್ರ ಭರ್ತಿ ಮಾಡುವ ಮೂಲಕ, ಪಂಚಾಯ್ತಿ ವ್ಯಾಪ್ತಿಯಲ್ಲಿ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು. ::: ಖಾಲಿ ಇರುವ 23 ಪಿಡಿಒ ಹುದ್ದೆ ::: ಜಿಲ್ಲಾ ವ್ಯಾಪ್ತಿಯ ಗ್ರಾ.ಪಂ ಗಳಲ್ಲಿ 23 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆಗಳು ಖಾಲಿ ಇವೆ. ಇದರಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಿಡಿಒಗಳು ಹೆಚ್ಚುವರಿಯಾಗಿ ಇತರೆ ಗ್ರಾಮ ಪಂಚಾಯ್ತಿಗಳ ಜವಾಬ್ದಾರಿಯನ್ನು ನಿರ್ವಹಿಸುವ ಪರಿಸ್ಥಿತಿ ಬಂದೊದಗಿದೆ ಎಂದು ತಿಳಿಸಿದರು. ಅಗತ್ಯ ಕೆಲಸ ಕಾರ್ಯಗಳಿಗಾಗಿ ಜನ ಪಂಚಾಯ್ತಿಗಳಿಗೆ…
ಲೇಖಕ: admin
ನಾಪೋಕ್ಲು ಜೂ.17 : ಹಳೆತಾಲೂಕು ಬದ್ರಿಯಾ ಜುಮಾ ಮಸೀದಿಯ 2023-24ನೇ ಸಾಲಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಟಿ. ಎ.ಮೊಹಮ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿ.ಬಿ.ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ. ಎ.ಅಬ್ದುಲ್ ಖಾದರ್, ಸಹ ಕಾರ್ಯದರ್ಶಿಯಾಗಿ ಬಿ.ಎ. ಕಬೀರ್,ಸಮಿತಿ ಸದಸ್ಯರಾಗಿ ಎಂ.ಎಸ್. ಸಂಶುದ್ದೀನ್, ಬಿ.ಕೆ.ಗಫೂರ್, ಪಿ.ಎಂ. ನಾಸಿರ್, ಎ.ಎಂ. ಸಲೀಂ, ಎಂ.ಕೆ.ಯೂಸುಫ್, ಟಿ.ಐ.ರಿಯಾಝ್, ಪಿ.ಎಂ. ಇಸ್ಮಾಯಿಲ್, ಬಿ.ಎ.ಹ್ಯಾರಿಸ್, ಎಂ.ಎಚ್.ನೌಶಾದ್ ಇವರನ್ನು ಹಳೇತಾಲೂಕು ಬದ್ರಿಯಾ ಜುಮಾ ಮಸೀದಿಯ ಮದರಸಾ ಸಭಾಂಗಣದಲ್ಲಿ ನಡೆದ ಜಮಾಅತ್ ನ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಮಾಡಲಾಯಿತು. ವರದಿ :ಝಕರಿಯ ನಾಪೋಕ್ಲು
ಮಡಿಕೇರಿ ಜೂ.17 : ಪೊನ್ನಂಪೇಟೆ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಂಡಲ ಅಧ್ಯಕ್ಷ ಚಲನ್ ನೆಲ್ಲಿರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ರಾಜ್ಯ ಕೃಷಿ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಶಕ್ತಿ ಕೇಂದ್ರ ಪ್ರಮುಖ ಕಿಶನ್ ಕೊಟ್ಟೆರ, ಮಧು ಮೂಕೇಳೇರ, ಪಕ್ಷದ ಪ್ರಮುಖರು, ಗ್ರಾ.ಪಂ ಸದಸ್ಯರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಜೂ.17 : ದ್ವೇಷ ರಾಜಕಾರಣಕ್ಕೆ ಆದ್ಯತೆ ನೀಡದೆ ಕೊಡಗು ಜಿಲ್ಲೆಯ ಆಶೋತ್ತರಗಳಿಗೆ ಪೂರಕವಾಗಿ ಕೆಲಸ ಮಾಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ತಿಳಿಸಿದ್ದಾರೆ. ನಗರದಲ್ಲಿ ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಆಡಳಿತ ಮಂಡಳಿಯ ವತಿಯಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಚುನಾವಣಾ ಸಂದರ್ಭ ಕೆಲವರು ನನ್ನ ಕಾಲೆಳೆದಿದ್ದು ತುಂಬಾ ನೋವಾಗಿದೆ. ಆದರೆ ಯಾವುದೇ ಅಪಪ್ರಚಾರಕ್ಕೆ ಮನ್ನಣೆ ನೀಡದ ಈ ಕ್ಷೇತ್ರದ ಜನ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಶಾಸಕನಾಗಿ ನಾನು ದ್ವೇಷ ರಾಜಕಾರಣಕ್ಕೆ ಅವಕಾಶ ನೀಡದೆ ಅಭಿವೃದ್ಧಿಪರ ಚಿಂತನೆಯೊಂದಿಗೆ ಕಾರ್ಯ ನಿರ್ವಹಿಸುವುದಾಗಿ ಹೇಳಿದರು. ಜನರ ಪ್ರೀತಿ ಗಳಿಸಿ ಸರ್ವರ ಏಳಿಗೆಗಾಗಿ ಶ್ರಮಿಸಲು ಬದ್ಧನಿದ್ದೇನೆ. ಜಿಲ್ಲೆಯ ಹಿರಿಯರು ಹಾಗೂ ಅನುಭವಿಗಳು ನನಗೆ ಬೆಂಬಲವಾಗಿ ನಿಂತು ಮಾರ್ಗದರ್ಶನ ನೀಡಬೇಕೆಂದು ಡಾ.ಮಂಥರ್ ಗೌಡ ಮನವಿ ಮಾಡಿದರು. ನಗರದ ಸಂಘದ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ಅತೀ ಚಿಕ್ಕ ವಯಸ್ಸಿನಲ್ಲಿ ಮಂಥರ್ ಅವರು ಶಾಸಕರಾಗಿ ಆಯ್ಕೆಯಾಗಿರುವುದು…
ಮಡಿಕೇರಿ ಜೂ.17 : ಕಕ್ಕಬೆಯ “ದಿ ತಾಮರ ಕೂರ್ಗ್” ರೆಸಾರ್ಟ್ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ “ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ ಡೈನಿಂಗ್ ಟೇಬಲ್ ಮತ್ತು ಕುರ್ಚಿಗಳನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭ ತಾಮರ ಕೂರ್ಗ್ ನ ವ್ಯವಸ್ಥಾಪಕ ಕಲಿಯಟಂಡ ಗಿರೀಶ್ ಸುಬ್ಬಯ್ಯ, ಕುಂಜಿಲ ಕಕ್ಕಬೆ ಗ್ರಾ.ಪಂ ಅಧ್ಯಕ್ಷ ಸಂಪನ್ ಅಯ್ಯಪ್ಪ, ಅಭಿವೃದ್ಧಿ ಅಧಿಕಾರಿ ಅಶೋಕ್, ರೆಸಾರ್ಟ್ ಸಿಬ್ಬಂದಿಗಳಾದ ಶ್ರೀಕಾಂತ್, ವಿಜು, ಗ್ರಾ.ಪಂ ಸದಸ್ಯರಾದ ರಝಾಕ್, ಬಶೀರ್, ಶಾಲೆಯ ಮುಖ್ಯ ಶಿಕ್ಷಕಿ ಕೆ.ಎಂ.ಸುಮಯ್ಯ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜೂ.17 : ನಾಪೋಕ್ಲು-ವಿರಾಜಪೇಟೆ ಮುಖ್ಯ ರಸ್ತೆಯ ಪೊದ್ದಮಾನಿ ತಿರುವಿನಲ್ಲಿ ಬೃಹತ್ ಮರ ರಸ್ತೆಗೆ ಉರುಳಿಬಿದ್ದ ಪರಿಣಾಮ ಸ್ವಲ್ಪ ಸಮಯ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ನಂತರ ಗ್ರಾಮಸ್ಥರು ಮರವನ್ನು ತೆರವು ಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸಮೀಪದಲ್ಲೇ ಕಡಂಗ, ಕರಡ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಪೈಪ್ ಹಾನಿಯಾಗಿದೆ.
ಮಡಿಕೇರಿ ಜೂ.17 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಸುಸ್ಥಿರ ಅಭಿವೃದ್ಧಿಗಾಗಿ ಡಿಜಿಟಲೀಕರಣ’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಿತು. ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಮ್ಮೇಳನದಲ್ಲಿ ಆನ್ ಲೈನ್ ಮತ್ತು ಆಫ್ ಲೈನ್ ಸೇರಿದಂತೆ ಸುಮಾರು 60 ಪ್ರಬಂಧಗಳನ್ನು ಮಂಡಿಸಲಾಯಿತು. ಪ್ರಧಾನ ಭಾಷಣಕಾರರಾಗಿ ಡಾ.ಕೃಷ್ಣ ರಾಜ್, ಅಂತರರಾಷ್ಟ್ರೀಯ ಮಟ್ಟದ ಸಂಪನ್ಮೂಲ ವ್ಯಕ್ತಿ ಡಾ.ಬೇಟ ಪರ್ಕಸ (ಇಂಡೋನೇಷ್ಯಾ) ಮತ್ತು ಪ್ರೊ.ಅಬ್ದುಲ್ ವಾಸಿ ಗೌಹರ್ (ಅಫ್ಘಾನಿಸ್ತಾನ್) ಭಾಗವಹಿಸಿದ್ದರು. ಕೊಡಗು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಡಾ.ಸೀನಪ್ಪ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಡಾ. ಕೆ.ಶೈಲಶ್ರೀ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕರು, ಕಾಲೇಜಿನ ಇತರ ವಿಭಾಗದ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕ…
ಮಡಿಕೇರಿ ಜೂ.17 : ಎಸ್ವೈಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮೇಕೇರಿಯಲ್ಲಿ ಜಿಲ್ಲಾ ಮತ್ತು ಝೋನ್ ಮಟ್ಟದ ನಾಯಕರಿಗೆ ತರಬೇತಿ ಶಿಬಿರ ನಡೆಯಿತು. ದರ್ಗಾ ಝಿಯಾರತ್ನೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಎಸ್ವೈಸ್ ಸಂಘಟನಾ ಕಾರ್ಯದರ್ಶಿ ಯಾಖೂಬ್ ಮಾಸ್ಟರ್ ಉದ್ಘಾಟಿಸಿದರು. ಕೂರ್ಗ್ ಜಂಇಯ್ಯತುಲ್ ಉಲಾಮಾದ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ, ಅನ್ವಾರಲ್ ಹುದಾ, ಮೊದಲ ಹಂತದ ತರಗತಿ ನಡೆಸಿ ಎಸ್ವೈಎಸ್ ಹಾಗೂ ನಾಯಕರ ಇತಿಹಾಸವನ್ನು ಮೆಲುಕು ಹಾಕಿದರು. ನಂತರ ನಾಯಕತ್ವ ಹೇಗಿರಬೇಕು ಎಂಬುದನ್ನು ಉದಾಹರಣೆ ಸಹಿತ ವಿವರಿಸಿದರು. ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿ ಎರಡನೇ ಹಂತದ ತರಬೇತಿ ನೀಡಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ ಸ್ವಾಗತಿಸಿ, ಸರ್ವರನ್ನು ವಂದಿಸಿದರು.
ಸುಂಟಿಕೊಪ್ಪ,ಜೂ.17 : ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್ ವಿವಿಧ ಬಡಾವಣೆಗಳಿಗೆ ತಮ್ಮ ಸ್ವಂತ ಖರ್ಚಿನಿಂದ ಜಾಷಧಿ ಸಂಪಡಣೆ ಮಾಡಿದರು. ನಂತರ ಮಾತನಾಡಿದ ಪಿ.ಎಂ.ಲತೀಫ್, ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಅನೇಕರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರೂ, ಸಂಬಂಧಿಸಿದ ಇಲಾಖೆಗಳು ರೋಗ ನಿಯಂತ್ರಣಕ್ಕೆ ಮುಂದಾಗದೆ ತಾತ್ಸರ ಮನೋಭಾವನೆಯನ್ನು ತೋರುತ್ತಿರುವುದು ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾ.ಪಂ. ಸದಸ್ಯರಾದ ಸಬಾಸ್ಟೀನ್, ರಫೀಕ್ ಖಾನ್ ಮತ್ತಿತರರು ಭೇಟಿ ನೀಡಿ ಆರೋಗ್ಯ ಇಲಾಖೆಯ ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಪಿ.ಎಂ.ಲತೀಫ್ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯ ರಫೀಕ್ಖಾನ್, ರಜಾಕ್, ವಾಹನ ಚಾಲಕ ರಿಜ್ವಾನ್, ಕೋಟೆಕಾಡು ತೋಟದ ವ್ಯವಸ್ಥಾಪಕ ರಜಾಕ್ ಹಾಗೂ ಕಾರ್ಮಿಕರು ತೊಡಗಿಸಿಕೊಂಡಿದ್ದರು.
ಸಿದ್ದಾಪುರ ಜೂ.17 : ವ್ಯಕ್ತಿಯೊಬ್ಬರು ದ್ವಿಚಕ್ರ ವಾಹನದಲ್ಲಿ ತೋಟದ ಮಾರ್ಗದಲ್ಲಿ ಸಾಗುತ್ತಿದ್ದ ಸಂದರ್ಭ ದಿಢೀರನೆ ಕಾಡಾನೆ ಪ್ರತ್ಯಕ್ಷಗೊಂಡು ಫೀಳಿಟ್ಟ ಸಂದರ್ಭ ಭಯಗೊಂಡು ಎದುರಿ ಕಂಬಕ್ಕೆ ಬೈಕ್ ಸಿಹಿತವಾಗಿ ಡಿಕ್ಕಿ ಹೊಡೆದು ಕಾಲು ಮುರಿತಗೊಂಡಿರು ಘಟನೆ ಪುಲಿಯೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸುರೇಶ್ ಎಂಬವರು ಗಾಯ ಗೊಂಡ ವ್ಯಕ್ತಿ. ಅಮ್ಮತ್ತಿಯ ಅಮೇರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮಾಹಿತಿ ತಿಳಿದು ಶಾಸಕ ಪೊನ್ನಣ್ಣ ಅವರ ಸೂಚನೆಯಂತೆ ಕೆಪಿಸಿಸಿ ವಕ್ತಾರ ಸಂಕೇಂತ್ ಪೂವಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿ ವೈದ್ಯರೊಂದಿಗೆ ಚರ್ಚಿಸಿದ್ದಾರೆ. ಗಾಯಾಳು ಸುರೇಶ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದ್ದು, ಸೋಮವಾರ ನಡೆಸುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆ ಬಗ್ಗೆ ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸೂಕ್ತ ಪರಿಹಾರ ಹಾಗೂ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಲು ಶಾಸಕರು ಸೂಚಿಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸ್ಥಳೀಯರಾದ ಎಸ್.ಹೆಚ್.ಮತೀನ್, ಜಾನ್ಸನ್, ಎನ್.ಎ.ನೌಶಾದ್, ಎ.ಡಿ.ದಿನೇಶ್, ದಿವಾಕರ್ ಮತ್ತಿರರು ಸಹಕರಿಸಿದ್ದಾರೆ. ಸ್ಥಳಕ್ಕೆ ಆರ್.ಎಫ್.ಓ ದೇವಯ್ಯ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ…






