ಮಡಿಕೇರಿ ಮೇ 6 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂತರ್ ಗೌಡ ಪರ ನಗರದ ಪ್ರಮುಖ ಬಡಾವಣೆಗಳಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಮತಯಾಚನೆ ಸಂದರ್ಭ ಮಾತನಾಡಿದ ಅವರು ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ ಎಂದರು. ಅಭಿವೃದ್ಧಿಯ ಚಿಂತನೆಯೊAದಿಗೆ ಕಣಕ್ಕಿಳಿದಿರುವ ಉತ್ಸಾಹಿ ಯುವ ರಾಜಕಾರಣಿ ಮಂತರ್ ಅವರ ಪರ ಯುವ ಸಮೂಹ ಒಲವು ತೋರಿದೆ. ಈ ಹಿಂದೆ ಕಂಡರಿಯದಷ್ಟು ಜನಬೆಂಬಲ ಕಾಂಗ್ರೆಸ್ ಅಭ್ಯರ್ಥಿಗೆ ದೊರೆಯುತ್ತಿದೆ. ಆದ್ದರಿಂದ ಮಂತರ್ ಗೆಲವು ಖಚಿತವೆಂದರು. ನಗರ ಕಾಂಗ್ರೆಸ್ ಉಸ್ತುವಾರಿಯ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಯೋಜನೆಗಳ ಕುರಿತು ಮತದಾರರಿಗೆ ವಿವರಿಸಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ನಗರ ಉಸ್ತುವಾರಿ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಉಪಾಧ್ಯಕ್ಷ ಮಹಮ್ಮದ್ ಯಾಕುಬ್, ಡಿಸಿಸಿ…
ಲೇಖಕ: admin
ಮಡಿಕೇರಿ ಮೇ 6 : ಕೊಡಗು ಪ್ರೆಸ್ ಕ್ಲಬ್ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಹಾಗೂ ಸದಸ್ಯತ್ವ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಲಬ್ನ ಸಾಮಾನ್ಯ ಸದಸ್ಯರಾಗುವವರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಸಂಪಾದಕರು ಅಥವಾ ಜಿಲ್ಲಾ ವರದಿಗಾರರಿಂದ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯ. ಸದಸ್ಯರಾಗುವವರು ಪತ್ರಕರ್ತರಾಗಿರುವುದು ಹಾಗೂ ಪತ್ರಿಕಾ ಕಾರ್ಯಾಲಯದಲ್ಲಿ ಇರುವುದು ಕಡ್ಡಾಯ. ಸಾಮಾನ್ಯ ಸದಸ್ಯರಾಗುವವರು ಕಡ್ಡಾಯವಾಗಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ/ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಪಡೆಯದಿದ್ದರೇ ಕ್ಲಬ್ನ ಆಜೀವ ಸದಸ್ಯತ್ವ ಮತ್ತು ಸಾಮಾನ್ಯ ಸದಸ್ಯತ್ವ ರದ್ದಾಗುತ್ತದೆ. ಸಾಮಾನ್ಯ ಸದಸ್ಯತ್ವಕ್ಕೆ ವೃತ್ತಿನಿರತ ಪತ್ರಕರ್ತರು, ಪತ್ರಿಕಾ ಸಂಪಾದಕರು, ಉಪಸಂಪಾದಕರು, ಪತ್ರಿಕಾ ಅಧಿಕೃತ ಛಾಯಾಚಿತ್ರಕಾರರು, ಮಾಧ್ಯಮ ಪ್ರತಿನಿಧಿಗಳು, ವ್ಯವಸ್ಥಾಪಕ ಸಂಪಾದಕರು, ಪತ್ರಿಕಾ ಮಾಲೀಕತ್ವ ಹೊಂದಿರುವ ಸಂಪಾದಕರು…
ಮಡಿಕೇರಿ ಮೇ.6 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಹಾಗೂ ಮತಎಣಿಕೆ ಕಾರ್ಯವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ, 8 ರ ಸಂಜೆ 6 ರಿಂದ ಮೇ, 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಮೇ, 12 ರ ಮಧ್ಯರಾತ್ರಿ 12 ರಿಂದ ಮೇ, 13 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಸ್ಟಾರ್ ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ ಮೇ 6 : ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸ್ ಅವಧಿ 6 ತಿಂಗಳು ಜುಲೈ, 1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನಲ್ಲಿ ಸಹಕಾರ ತರಬೇತಿ ಪ್ರಾರಂಭಿಸಲಾಗುತ್ತಿದ್ದು, ಕೊಡಗು ಮತ್ತು ಹಾಸನ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪಡೆದ ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು. ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು. ಪ್ರತ್ಯೇಕ ತರಗತಿ ಹಾಗೂ ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ, ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇದೆ. ತರಬೇತಿ ಪಡೆದವರಿಗೆ ವಿವಿಧ ರೀತಿಯ ಸಹಕಾರ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ. ಸಹಕಾರ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಆದ್ಯತೆ. ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ ವಿದ್ಯಾರ್ಹತೆ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ಮಾಹಿತಿಗೆ…
ಮಡಿಕೇರಿ ಮೇ 6 : ರಾಜ್ಯ ಬಾಲ ಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ (1 ರಿಂದ 10ನೇ ತರಗತಿ) 5 ರಿಂದ 16 ವರ್ಷದ ಮಕ್ಕಳಿಗಾಗಿ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಅಂಡ್ ಗೈಡ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ. ಇಲ್ಲಿ ಮೇ, 15 ರಿಂದ 29 ರವರೆಗೆ ಉಚಿತ ಬೇಸಿಗೆ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿ ನೀಡಲಾಗುವುದು. ಆದ್ದರಿಂದ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಮೇ, 12 ರೊಳಗೆ ದೂರವಾಣಿ ಸಂಖ್ಯೆ 8618861505, 6363285685 ಕಚೇರಿ ಸಮಯದಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಮಡಿಕೇರಿ ಮೇ 6 : ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ರೋಟರ್ಯಾಕ್ಟ್ ಕ್ಲಬ್ ಪದವಿ ಕಾಲೇಜು ಮೂರ್ನಾಡು ಸಹಯೋಗದಲ್ಲಿ ಮೂರ್ನಾಡು ಬಳಿಯ ಹೆಚ್.ಪಿ ಪೆಟ್ರೋಲ್ ಬಂಕ್ ಬಳಿಯಿಂದ ಮೂರ್ನಾಡು ಬಾಚೆಟ್ಟಿರ ಲಾಲುಮುದ್ದಯ್ಯ ಕ್ರೀಡಾಂಗಣದ ವರೆಗೆ ಮತದಾನ ಮಹತ್ವ ಸಾರುವ ಜಾಗೃತಿ ಜಾಥವು ನಡೆಯಿತು. ಸ್ಪರ್ಧೆಗೆ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ. ಆಕಾಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಡಿಕೇರಿ ರೋಟರಿ ಸಂಸ್ಥೆಯ ಮುಖ್ಯಸ್ಥರಾದ ಅನಿಲ್ ಎಚ್.ಟಿ, ಮಡಿಕೇರಿ ವುಡ್ಸ್ನ ಅಧ್ಯಕ್ಷ ಸಂಪತ್ ಕುಮಾರ್, ಕಾರ್ಯದರ್ಶಿ ವಸಂತ್ ಕುಮಾರ್, ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಧನಂಜಯ್, ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ.ಮಾದಪ್ಪ, ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಸ್ವೀಪ್ ಸಮಿತಿಯ ನವೀನ್, ಸಮಿತಿಯ ಪದಾಧಿಕಾರಿಗಳು, ರೋಟರಿ ವುಡ್ಸ್ನ ಸದಸ್ಯರಾದ ಹರೀಶ್, ನವೀನ್, ಬೋಪಣ್ಣ, ರೋಟರ್ಯಾಕ್ಟ್ ಕ್ಲಬ್ನ ಅಧ್ಯಕ್ಷೆ ಶ್ರೀರಕ್ಷಾ, ಕಾರ್ಯದರ್ಶಿ ಸಂಜಯ್, ಸದಸ್ಯರು ಇದ್ದರು. ಮತದಾನ ಜಾಗೃತಿ ಮೂಡಿಸಲು…
ಮಡಿಕೇರಿ ಮೇ 6 : ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಮತ್ತು ಭಾರತೀಯ ಮಾಹಿತಿ ಸೇವೆ(ಐಐಎಸ್) ವಿಭಾಗದ ಅಧಿಕಾರಿ ಪವನ್ ನಾಗರಹೊಳೆಯ ಸರ್ಕಾರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ತೆರೆಯಲಾಗಿರುವ ‘ಸಾಂಪ್ರದಾಯಿಕ’ ಮತಗಟ್ಟೆಗೆ ಭೇಟಿ ನೀಡಿ ವೀಕ್ಷಿಸಿದರು. ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಆಶ್ರಮ ಶಾಲೆಯ ಪ್ರಾಂಶುಪಾಲರಾದ ಎನ್.ಎಸ್.ಬಸವರಾಜು, ಐಟಿಡಿಪಿ ಇಲಾಖೆಯ ತಾಲ್ಲೂಕು ಅಧೀಕ್ಷಕರಾದ ನವೀನ್ ಕುಮಾರ್ ಇತರರು ಇದ್ದರು.
ಮಡಿಕೇರಿ ಮೇ 6 : ಮಿನಿ ವಿಮಾನಗಳ ಸಂಗ್ರಹದೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗಿತ್ತು. ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮತ್ತು ಜಿ.ಪಂ.ಸಿಇಒ ಜತೆಯೂ ಫೋಟೋ ತೆಗೆಸಿಕೊಳ್ಳಲು ಗ್ರಾಮಸ್ಥರು ಮುಗಿಬಿದ್ದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮಿನಿ ವಿಮಾನಗಳ ಫೋಟೋವನ್ನು ತಮ್ಮ ಕ್ಯಾಮರದಲ್ಲಿ ತೆಗೆಯುವುದರ ಜೊತೆಗೆ ಸಾರ್ವಜನಿಕರ ಫೋಟೋಗಳನ್ನೂ ಕೂಡ ಮಿನಿ ವಿಮಾನಗಳ ಜತೆ ತೆಗೆಯುವುದರೊಂದಿಗೆ ಜನರ ಮೆಚ್ಚುಗೆ ಗಳಿಸಿದರು. ನೀವು ನಿಲ್ಲಿ.. ನಾನು ಫೋಟೋ ತೆಗೆಯುತ್ತೇನೆ ಎಂದು ಜನರನ್ನು ಹುರಿದುಂಬಿಸುತ್ತಾ ಜಿಲ್ಲಾಧಿಕಾರಿಗಳು ತಮ್ಮದೇ ಫೋಟೋ ತೆಗೆಯುತ್ತಾ ಗಮನ ಸೆಳೆದರು.
ಮಡಿಕೇರಿ ಮೇ 6 : ಬಾಳೆಲೆ ಬಳಿಯ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ಮತದಾನದ ಮಹತ್ವವನ್ನು ಸಾರಿದ ಮಿನಿ ವಿಮಾನಗಳು ವಿಭಿನ್ನ ರೀತಿಯಲ್ಲಿ ಬಾನಂಗಣದಲ್ಲಿ ಮತದಾನದ ಮಹತ್ವ ಸಾರುವ ಮೂಲಕ ಕಿಕ್ಕಿರಿದು ಸೇರಿದ್ದ ಗ್ರಾಮಸ್ಥರ ಮನ ಸೆಳೆದವು. ಜಿಲ್ಲಾಡಳಿತ ಹಾಗೂ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಆಶ್ರಯದಲ್ಲಿ ಬಾಳೆಲೆ ಕಾರ್ಮಾಡು ಗ್ರಾಮ ನಿವಾಸಿ ಕೊಳ್ಳಿಮಾಡ ರಾಜಿ ಗಣಪತಿ ಅವರ ಸಂಗ್ರಹದಲ್ಲಿರುವ ಮಿನಿ ವಿಮಾನಗಳ ಪ್ರದರ್ಶನ ಮತ್ತು ಹಾರಾಟ ಅತ್ಯಾಕರ್ಷಕವಾಗಿ ಜರುಗಿತು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮತ್ತು ಜಿ.ಪಂ.ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಮಿನಿ ವಿಮಾನ ಹಾರಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಮತದಾನ ಮಹತ್ವ ಸಾರುವ ಸಂದೇಶ ಅಭಿಯಾನಕ್ಕೆ ಚಾಲನೆ ನೀಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಕಾರ್ಮಾಡು ಗ್ರಾಮದ ಖಾಸಗಿ ಏರ್ಸ್ಟ್ರಿಪ್ನಲ್ಲಿ ಮಿನಿ ವಿಮಾನಗಳು ಸದ್ದುಮಾಡುತ್ತಾ ಬಾನಂಗಣದಲ್ಲಿ ಹಾರಾಟ ನಡೆಸಿದವು. ಮಿನಿ ಸೆಸ್ನಾ, ಎಕ್ಸ್ಎಫ್ 80, ಎಕ್ಸ್ 380 ಶ್ರೇಣಿಯ ಮಿನಿ ವಿಮಾನಗಳು, ಮಿನಿ ಹೆಲಿಕಾಪ್ಟರ್…
ಮಡಿಕೇರಿ ಮೇ 6 : ಮಡಿಕೇರಿ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪಿ.ಕೆ.ಬೋಪಣ್ಣ ಪರವಾಗಿ ನಗರದ ವಿವಿಧೆಡೆ ಬಿರುಸಿನ ಮತ ಪ್ರಚಾರ ನಡೆಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ಕನ್ನಿಕ ಲೇಔಟ್, ಸುಬ್ರಹ್ಮಣ್ಯ ನಗರ, ಡೈರಿ ಲೇಔಟ್, ಗಾಳಿಬೀಡು ರಸ್ತೆ, ಎಫ್ಎಂಸಿ ಕಾಲೇಜು ರಸ್ತೆ ಕಡೆಗಳಲ್ಲಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಕೆ.ಪಿ.ಬೋಪಣ್ಣ ಕೊಡಗಿನ ವಿವಿಧೆಡೆ ಆಮ್ ಆದ್ಮಿ ಪಕ್ಷಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಎರಡು ಕ್ಷೇತ್ರದಲ್ಲೂ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಕ್ಷದ ವತಿಯಿಂದ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರು ತನಗೆ ಮತ ನೀಡಿ ಗೆಲ್ಲಿಸಿದ್ದಲ್ಲಿ ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಲಾಗುವುದೆಂದು ಭರವಸೆ ನೀಡಿದರು. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಪ್ರಮುಖರಾದ ಮುರಳಿ, ಕಲ್ಯಾಣಿ, ಶಿಲ್ಪ ಬೋಪಣ್ಣ, ಥೋಮಸ್ ಮತ್ತು ಇತರರು ಈ ಸಂದರ್ಭ ಹಾಜರಿದ್ದರು.






