ಮಡಿಕೇರಿ ಜೂ.16 : ಕೊಡವ ಬುಡಕಟ್ಟು ಜನಾಂಗದ ಅಧ್ಯಯನಕ್ಕೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಬೆಂಗಳೂರಿನ ಆರ್ ಟಿ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದ ನಿಯೋಗ ಸಂಘಟನೆಯ ಸುದೀರ್ಘ ಅವಧಿಯ ಹೋರಾಟ ಮತ್ತು ಕೊಡವರ ಪರವಾದ ನಿಲುವುಗಳನ್ನು ವಿವರಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಆಯ್ಕೆಯಾದ ಪೊನ್ನಣ್ಣ ಅವರಿಗೆ ಅಭಿನಂದನೆ ಸಲ್ಲಿಸಿದ ನಾಚಪ್ಪ, ಸಿಎನ್ಸಿ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು. ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ನ್ಯಾಯಸಮ್ಮತ, ಸಾಂವಿಧಾನಿಕ ಬೇಡಿಕೆಯ ಪರ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆ ಗಮನ ಸೆಳೆದರು. ಕಾನೂನುಬದ್ಧವಾಗಿ ಬುಡಕಟ್ಟು ಸಮುದಾಯವನ್ನು ರಕ್ಷಿಸಲು ಕೊಡವ ಜನಾಂಗದ ಸಮಗ್ರ, ನಿಖರ ಮತ್ತು ನ್ಯಾಯೋಚಿತ ಜನಾಂಗೀಯ ಮರು-ಅಧ್ಯಯನಕ್ಕೆ ಒತ್ತು ನೀಡಬೇಕು.…
ಲೇಖಕ: admin
ಮಡಿಕೇರಿ ಜೂ.16 : ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ಜೂ.27 ರಂದು ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿಯನ್ನು ನಗರದ ಕೊಡಗು ಗೌಡ ಸಮಾಜದಲ್ಲಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಶಿಷ್ಟಾಚಾರದಂತೆ ಆಹ್ವಾನ ಪತ್ರ ಮುದ್ರಣ, ಗಣ್ಯರ ಆಹ್ವಾನ, ಉಪನ್ಯಾಸ, ಗೀತಾಗಾಯನ ಕಾರ್ಯಕ್ರಮ ಏರ್ಪಡಿಸುವುದು ಹೀಗೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಸೂಚಿಸಿದರು. ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಕೆ.ಪಿ.ನಾಗರಾಜು, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು, ಉದಯ ಪೆರಿಯನ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಜಯಂತಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಪ್ರಮುಖರಾದ ಬೈತಡ್ಕ ಜಾನಕಿ, ಅಮೆ ಸೀತಾರಾಮ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ, ಪಿ.ಟಿ.ಮುತ್ತಮ್ಮ, ಪಿ.ಟಿ.ಧೃತಿ, ದೀಪ್ತಿ ರಂಜಿತ್, ಕೊಡಗು ಗೌಡ ಸಂಘದ ಕಾರ್ಯದರ್ಶಿ ಉದಯ ಕುಮಾರ, ಕೊಡಗು ಗೌಡ ಯುವ…
ಮಡಿಕೇರಿ ಜೂ.16 : ಅಂತರರಾಷ್ಟ್ರೀಯ 9ನೇ ಯೋಗ ದಿನಾಚರಣೆಗೆ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಯೋಗ ಸಂಸ್ಥೆಗಳು, ನೆಹರು ಯುವ ಕೇಂದ್ರ, ರೆಡ್ಕ್ರಾಸ್ ಸಂಸ್ಥೆ ಪ್ರತಿನಿಧಿಗಳು, ವಿವಿಧ ಕಾಲೇಜುಗಳ ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕಗಳು, ವಸತಿ ಶಾಲೆಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಹೀಗೆ ಎಲ್ಲರೂ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸುವಂತಾಗಬೇಕು ಎಂದು ತಿಳಿಸಿದರು. ಇದೇ ಜೂ.21 ರಂದು ನಗರದ ಗೌಡ ಸಮಾಜದಲ್ಲಿ ನಡೆಯುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ…
ಮಡಿಕೇರಿ ಜೂ.16 : ಜಿಲ್ಲಾ ಕೇಂದ್ರ ಮಡಿಕೇರಿ ನಗರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಭಾರೀ ಪ್ರಮಾಣದ ತ್ಯಾಜ್ಯ ವಿಲೇವಾರಿ ಸಂಬಂಧ ಮಡಿಕೇರಿ ನಗರಸಭೆ ಸಲ್ಲಿಸಿದ್ದ 6.69 ಕೋಟಿ ರೂ. ವೆಚ್ಚದ ಯೋಜನಾ ವರದಿಗೆ ಪೌರಾಡಳಿತ ನಿರ್ದೇಶನಾಲಯ ಷರತ್ತು ಬದ್ಧವಾದ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ ಎಂದು ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ತಿಳಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನ್ಯಾಯಾಲಯವು 2022ರ ಅಕ್ಟೋಬರ್ 13 ರಂದು ನೀಡಿರುವ ಆದೇಶದಲ್ಲಿ, ಪಾರಂಪರಿಕ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಿ ಗಣನೀಯ ಪ್ರಗತಿ ಸಾಧಿಸಿ 6 ತಿಂಗಳಿಗೊಮ್ಮೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನವನ್ನು ನೀಡಿತ್ತು. ಅದರಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಲವಾರು ವರ್ಷಗಳಿಂದ ಶೇಖರಣೆಯಾಗಿರುವ ಹಳೆಯ, ಪಾರಂಪರಿಕ ತ್ಯಾಜ್ಯ ವಸ್ತುಗಳನ್ನು ತ್ವರಿತಗತಿಯಲ್ಲಿ ಬಯೋಮೈನಿಂಗ್ ಮತ್ತು ಬಯೋರಿಮಿಡಿಯೇಷನ್ ಮೂಲಕ ತೆರವುಗೊಳಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕಿದೆ. ::: ನಗರಸಭೆಯಿಂದ ಪ್ರಸ್ತಾವನೆ ::: ಹಸಿರು ನ್ಯಾಯಾಧೀಕರಣದ ಆದೇಶದ ಹಿನ್ನೆಲೆ ಮಡಿಕೇರಿ ನಗರಸಭೆಯ ಪೌರಾಯುಕ್ತರು ಪ್ರಸಕ್ತ ಸಾಲಿನ…
ಮಡಿಕೇರಿ ಜೂ.16 : ಕಡಂಗ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಆದ್ಯ ಕ್ಲಿನಿಕ್ ಆರಂಭಗೊಂಡಿದ್ದು, ನರಿಯಂದಡ ಗ್ರಾ.ಪಂ ಸದಸ್ಯ ಕೋಡಿರ ವಿನೋದ್ ನಾಣಯ್ಯ ಉದ್ಘಾಟಿಸಿದರು. ಸುತ್ತಮುತ್ತಲಿನ ಜನರು ಅನಾರೋಗ್ಯದಿಂದ ತುತ್ತಾದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಮತ್ತು ಇನ್ನಿತರ ತುರ್ತು ಸಮಯದಲ್ಲಿ ಇಂತಹ ಆರೋಗ್ಯ ಘಟಕಗಳು ಅನುಕೂಲವಾಗುತ್ತದೆ ಎಂದು ಆಶಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯ ಸಿ.ಇ.ಸುಬ್ಬೀರ್ , ಸುಗುಣ, ಕಾಳಯ್ಯ, ಮಹಮ್ಮದ್ ಎಡಪಾಲ, ಕಡಂಗ ಜಮಾ ಅಂತ ಅಧ್ಯಕ್ಷ ಅಬ್ದುಲ್ಲ, ಎಡಪ್ಪಲ ಜಮಾಹತ್ ಅಧ್ಯಕ್ಷ ಶಾಫಿ , ಅನಿಸ್ ಬಿಲ್ಡಿಂಗ್ ಮಾಲೀಕ ಅಬೂಬಕರ್, ಪ್ರಮುಖರಾದ ಸಿ.ಎಚ್.ಮಮ್ಮು , ಅಬ್ದುಲ್ ರೆಹಮಾನ್, ಉಬೈಸ್, ವೈದ್ಯಾಧಿಕಾರಿಗಳಾದ ಅಮಲ್ , ಅಖಿಲ ಅಮಲ್ ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್ ಕಡಂಗ
ಗೋಣಿಕೊಪ್ಪಲು ಜೂ.16 : ಕಾವೇರಿ ಕಾಲೇಜಿನ ವಿದ್ಯಾಸಂಸ್ಥೆಗೆ ‘ನ್ಯಾಕ್ ‘ ತಂಡ ಭೇಟಿ ನೀಡಿತು. ನ್ಯಾಕ್ ತಂಡದಲ್ಲಿ ಜಗತ್ ಗುರುನಾನಕ್ ದೇವ್ ಪಂಜಾಬ್ನ ಓಪನ್ ಯುನಿವರ್ಸಿಟಿ ಪಂಜಾಬ್ನ ಉಪ ಕುಲಪತಿ ಡಾ.ಕರಮ್ಜಿತ್ ಸಿಂಗ್, ರಾಜಸ್ಥಾನದ ಉದಯ್ಪುರ್ ಎಂಎಲ್ಎಸ್ ಯುನಿವರ್ಸಿಟಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಕನ್ನಿಕಾ ಶರ್ಮ, ದೆಹಲಿಯ ಶ್ರೀ ವೆಂಕಟೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿ.ಸುನೀಲ ರೆಡ್ಡಿ ಇದ್ದರು. ನ್ಯಾಕ್ ತಂಡವನ್ನು ಕೊಡವ ಉಡುಪು ಧರಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆತ್ಮೀಯವಾಗಿ ಬರ ಮಾಡಿಕೊಂಡರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಇಟ್ಟಿರ ಬಿದ್ದಪ್ಪ, ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ, ಪ್ರಾಂಶುಪಾಲ ಡಾ.ಕಾವೇರಪ್ಪ ಹೂಗುಚ್ಛ ನೀಡಿ ಸ್ವಾಗತಿಸಿದರು. ತಂಡವು 2 ದಿನಗಳ ಕಾಲ ಮೌಲ್ಯಾಂಕನ ನಡೆಸಲಿದೆ ಎಂದು ಕಾಲೇಜಿನ ಅಧ್ಯಕ್ಷ ಇಟ್ಟಿರ ಬಿದ್ದಪ್ಪ ತಿಳಿಸಿದರು. ಪ್ರಾಂಶುಪಾಲ ಡಾ. ಕಾವೇರಪ್ಪ ಮಾತನಾಡಿ, ಕಾವೇರಿ ಕಾಲೇಜು 2005ರಲ್ಲಿ ಮೊದಲ ಮೌಲ್ಯಾಂಕನಕ್ಕೆ ಒಳಪಟ್ಟಿತ್ತು. ಆ ಸಂದರ್ಭ ಬಿ ಪ್ಲಸ್ಪ್ಲಸ್ ದೊರಕಿತ್ತು. 2011ರಲ್ಲಿ 2ನೇ ಮೌಲ್ಯಾಂಕನಕ್ಕೆ ಒಳಪಟ್ಟಂತಹ ಸಂದರ್ಭ ಎ ಶ್ರೇಣಿ ಪಡೆದಿತ್ತು.…
ಮಡಿಕೇರಿ ಜೂ.16 : ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಪಟ್ಟಣದ ಇಂದಿರಾ ಬಡಾವಣೆ ನಿವಾಸಿ ಪೂಣಚ್ಚ ಎಂಬುವವರ ಪುತ್ರಿ ಭಾವನ (21) ಮೃತ ಯುವತಿ. ಗುರುವಾರ ಸಂಜೆ ಕುಶಾಲನಗರದಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿದ್ದ ಭಾವನ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಕೊಪ್ಪದ ಬಳಿಯ ಮರೂರು ನಿವಾಸಿ, ವಿದ್ಯಾರ್ಥಿನಿ ನಿಸರ್ಗ ತೀವ್ರವಾಗಿ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾವನ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕುಶಾಲನಗರಕ್ಕೆ ಬಂದಿದ್ದ ಈಕೆ ಸ್ನೇಹಿತೆ ನಿಸರ್ಗಳೊಂದಿಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೊನ್ನಂಪೇಟೆ, ಜೂ.16 : ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಯ ಆತಂಕವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಫಿ ತೋಟಗಳಲ್ಲಿ ನಿರಂತರವಾಗಿ ಹುಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬೆಳೆಗಾರರಲ್ಲಿ ಮತ್ತು ತೋಟ ಕಾರ್ಮಿಕರಲ್ಲಿ ತೀವ್ರ ಭಯದ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ಹುಲಿಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸರಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಬಿಜೆಪಿ ಮುಖಂಡ ಮೂಕೊಂಡ ವಿಜು ಸುಬ್ರಮಣಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ ಇತ್ತೀಚಿಗೆ ಹುಲಿ ದಾಳಿ ನಡೆಸಿ ಹಸುಗಳನ್ನು ಕೊಂದು ಹಾಕಿದೆ. ಈ ಘಟನೆಯಿಂದ ಇಡೀ ಗ್ರಾಮದ ಜನರಲ್ಲಿ ಭಯ ಮೂಡಿದ್ದು, ಕಾರ್ಮಿಕರು ತೋಟದ ಕೆಲಸಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಕಾಫಿ ಬೆಳೆಗಾರರಿಗೆ ಮತ್ತು ಕಾರ್ಮಿಕರಿಗೆ ಹುಲಿ ಮತ್ತು ಕಾಡಾನೆಗಳ ಹಾವಳಿ ಬಹುದೊಡ್ಡ ಸವಾಲಾಗಿದೆ. ಇದರಿಂದ ವನ್ಯಪ್ರಾಣಿಗಳ ಹಾವಳಿ ಪೀಡಿತ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ರಸ್ತೆಗಳಲ್ಲಿ ಮುಕ್ತವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ವಾಹನ ಚಾಲಕರು ಜೀವಭಯದಿಂದ ವಾಹನ ಚಾಲಿಸಬೇಕಾಗಿದೆ. ಆದ್ದರಿಂದ…
ನಾಪೋಕ್ಲು ಜೂ.16 : ನಾಪೋಕ್ಲು-ಮೂರ್ನಾಡು ಮುಖ್ಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋಕೇರಿ ಗ್ರಾಮದ ಎಚ್. ಕೆ.ಸುದೀಪ್ ಎಂಬ ಯುವಕನ ಚಿಕಿತ್ಸೆಗಾಗಿ ನಾಪೋಕ್ಲು ವಾಹನ ಚಾಲಕರ ಸಂಘದಿಂದ ಆರ್ಥಿಕ ನೆರವು ನೀಡಲಾಯಿತು. ನಾಪೋಕ್ಲು ವಾಹನ ಚಾಲಕರ ಸಂಘದಿಂದ ಸಾರ್ವಜನಿಕರ ಸಹಾಯದಿಂದ ಸಂಗ್ರಹಿಸಲಾದ 21,670 ರೂ. ಗಳನ್ನು ಯುವಕನ ತಾಯಿ ಸವಿತಾ ಅವರಿಗೆ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಅವರ ನೇತೃತ್ವದಲ್ಲಿ ನಾಪೋಕ್ಲು ವಿನ ಸಂಘದ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭ ನಾಪೋಕ್ಲು ವಾಹನ ಚಾಲಕ ಮತ್ತು ಮಾಲೀಕರ ಸಂಘದ ಸದಸ್ಯರಾದ ರಾಶಿದ್, ಸುನಿಲ್, ಪ್ರಕಾಶ್,ಶಕೀಲ್, ಜಗದೀಶ್ ಮತ್ತಿತರರು ಹಾಜರಿದ್ದರು. ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು ಜೂ.16 : ಕೇರಳದ ಕಲ್ಲಿಕೋಟೆಯಲ್ಲಿರುವ ಮರ್ಕಝ್ ನಾಲೇಜ್ ಸಿಟಿಯಲ್ಲಿ ಅಂತರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ ಸಂಭ್ರಮದಿಂದ ನಡೆಯಿತು. ಮರ್ಕಝ್ ಯುನಾನಿ ವೈದ್ಯಕೀಯ ಕಾಲೇಜು, ಡಾ.ಮೂಪನ್ಸ್ ವೈದ್ಯಕೀಯ ಕಾಲೇಜು ಮತ್ತು ಮೆಡಿಸಿನ್ ಇಂಡಿಯಾ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಸಮ್ಮೇಳನವನ್ನು ಮೂಪನ್ಸ್ ವೈದ್ಯಕೀಯ ಕಾಲೇಜಿನ ಡೀನ್ ಡಾ.ಗೋಪಕುಮಾರ ಕರ್ತ ಉದ್ಘಾಟಿಸಿದರು. ಮರ್ಕಝ್ ನಾಲೇಜ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಎ.ಪಿ ಅಬ್ದುಲ್ ಹಕೀಂ ಅಝ್ಹರಿ ಮುಖ್ಯ ಭಾಷಣ ಮಾಡಿದರು. ಡಾ.ಅನೀಶ್ ಬಶೀರ್, ಡಾ.ಅಮೀರ್ ಹಸನ್, ಡಾ.ಶೇಖ್ ಶಾಹುಲ್ ಹಮೀದ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯದ ಪ್ರೊ.ಅಲನ್ ಬಿಟ್ಟಿಲ್, ಡಾ.ಅಜು ಮ್ಯಾಥ್ಯೂ, ಡಾ.ಗ್ರೇಸ್ ರೌಲಿ ಯುಕೆ, ಡಾ.ಒಕೆಎಂ ಅಬ್ದುರ್ರಹ್ಮಾನ್, ಡಾ.ಪಿವಿ ಶಂಸುದ್ದೀನ್, ಡಾ.ಗಿರೀಶ್ ವಡಗೊಂಕರ್ ಮುಂಬೈ ಮತ್ತು ಇತರ ವೈದ್ಯಕೀಯ ರಂಗದ ತಜ್ಞರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಕ್ಯಾನ್ಸರ್ ಆರೈಕೆ, ಪೋಷಕ ಆಹಾರ, ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ, ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆಗೆ ಯುನಾನಿ ವಿಧಾನ ಮರ್ಕಝ್ ವಿಧಾನ, ಆರೋಗ್ಯ ಸೇವೆಯ ಗುಣಮಟ್ಟ ಸುಧಾರಣೆ, ವೈದ್ಯಕೀಯ…






