ಮಡಿಕೇರಿ ಮೇ 6 : ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾ ಯುವಕರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ 200 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಭದ್ರಕೋಟೆಯಾಗಿರುವ ಕೊಟ್ಟಮುಡಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಹಾಗೂ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಾಸೀರ್ ಮೂರ್ನಾಡು ಅವರ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭ ಮಾತನಾಡಿದ, ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಕೊಡಗು ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರನ್ನು ಬರೀ ವೋಟ್ ಗಾಗಿ ಬಳಸಲಾಗುತ್ತಿದೆ. ಬಿಜೆಪಿ ಕೋಮುವಾದಿ ಪಕ್ಷವಾಗಿದೆ. ಅಲ್ಪಸಂಖ್ಯಾತರಿಗೆ ನ್ಯಾಯ ದೊರಕಿಸಿಕೊಟ್ಟಿದ್ದ ಜೆಡಿಎಸ್ ಪಕ್ಷ. ಅಲ್ಪಸಂಖ್ಯಾತರನ್ನು ರಾಜ್ಯಾಧ್ಯಕ್ಷರಾಗಿ ಮಾಡಿರುವ ಏಕೈಕ ಪಕ್ಷ ವಾಗಿದೆ ಎಂದರು. ಈ ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸುವ ಮುನ್ಸೂಚನೆ ಬಹುತೇಕರಿಗೆ ಸಿಕ್ಕಿದೆ, ಇದರಿಂದಲೇ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ನಾಪಂಡ ಮುತ್ತಪ್ಪ ಹೇಳಿದರು. ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಜಾಸೀರ್ ಮೂರ್ನಾಡು ಮಾತನಾಡಿ,…
ಲೇಖಕ: admin
ಮಡಿಕೇರಿ ಮೇ 6 : ಆಮ್ ಆದ್ಮಿ ಪಕ್ಷದ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವೀಂದ್ರ ಪರವಾಗಿ ವಿ.ಬಾಡಗ, ಬಾಳೆಲೆ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಯಿತು. ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಕುಂದಾ, ವಿ.ಬಾಡಗ, ರುದ್ರಗುಪ್ಪೆ, ದೇವರಪುರ, ತಿತಿಮತಿ, ಮಲ್ಲೂರು, ಬಾಳೆಲೆ, ಕಾನೂರು ಕಡೆಗಳ ಮನೆ ಮನೆಗೆ ತೆರಳಿ ಪಕ್ಷದ ಯೋಜನೆಗಳ ಕರಪತ್ರವನ್ನು ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಅಭ್ಯರ್ಥಿ ಸಿ.ಎಸ್.ರವೀಂದ್ರ ಮಾತನಾಡಿ, ಈಗಾಗಲೇ ಜಿಲ್ಲೆಯ ಹಲವೆಡೆ ಬಿರುಸಿನ ಪ್ರಚಾರ ನಡೆದಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತ್ತಿದೆ. ಈ ಬಾರಿ ಬದಲಾವಣೆ ಬಯಸುತ್ತಿರುವ ಮತದಾರರು ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿರಾಜಪೇಟೆ ಮೇ 6 : ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿ ನೇಮಕವಾದ ಪ್ರೊ.ಅಶೋಕ ಸಂಗಪ್ಪ ಆಲೂರ ಅವರನ್ನು ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕುಲಪತಿಗಳ ಕಚೇರಿಯಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಕರ್ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕರಾದ ಬಿ.ಡಿ.ಹೇಮ ಹಾಜರಿದ್ದರು.
ಮಡಿಕೇರಿ ಮೇ 6 : ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಲೋಕದ ಬೆಳವಣಿಗೆಗೆ ಅಪಾರವಾದ ಕೊಡುಗೆ ನೀಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ನುಡಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜಿಲ್ಲಾ ಕಚೇರಿಯಲ್ಲಿ ನಡೆದ ಪರಿಷತ್ತಿನ 109ನೇ ಸಂಸ್ಥಾಪನಾ ದಿನದ ಕುರಿತು ಮಾತನಾಡಿದ ಅವರು, 108 ವರ್ಷಗಳ ಹಿಂದೆ ಕನ್ನಡ ನಾಡು ನುಡಿ ಸಂಸ್ಕೃತಿಗಳ ಉಳಿವಿಗೆ ಸ್ಥಾಪನೆಯಾದ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು 1955ರಲ್ಲಿ ಮೈಸೂರು ಸಂಸ್ಥಾನದ ದೊರೆಗಳಾದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದಿವಾನರುಗಳಾದ ಸರ್. ಎಂ.ವಿಶ್ವೇಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ ಅವರು ಸ್ಥಾಪಿಸಿದ ಕರ್ನಾಟಕ ಸಾಹಿತ್ಯ ಪರಿಷತ್ತು 1935 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಎಂದು ಮರುನಾಮಕರಣ ಗೊಂಡಿತು ಎಂದು ಹೇಳಿದರು. ಹೋಬಳಿ ಮಟ್ಟದಲ್ಲಿಯೂ ಪರಿಷತ್ತಿನ ಘಟಕಗಳನ್ನು ರಚಿಸುವ ಮೂಲಕ ಪ್ರತಿ ಗ್ರಾಮದಲ್ಲೂ ಕನ್ನಡದ ಬೆಳವಣಿಗೆ ಅದರ ಸಂಸ್ಕೃತಿಯ ಉಳಿವು ಅರಿವು ಆಗಬೇಕು ಎನ್ನುವ…
ಮಡಿಕೇರಿ ಮೇ 6 : ಕಳೆದ ಎರಡೂವರೆ ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಯಾವುದೇ ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಬಿಜೆಪಿಯ ‘ಗ್ರೇಟರ್ ಮಡಿಕೇರಿ ಟೂರಿಸಂ ಕಾರಿಡಾರ್’ ಒಳಗೊಂಡ ಪ್ರಣಾಳಿಕೆ ಹಾಸ್ಯಾಸ್ಪದವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಸುದೀರ್ಘ ಆಡಳಿತದಿಂದ ಬೇಸತ್ತಿರುವ ಜನತೆ ಬದಲಾವಣೆಯನ್ನು ಬಯಸಿದ್ದಾರೆ. ಜಿಲ್ಲೆಯ 2 ಕ್ಷೇತ್ರಗಳ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಪ್ರವಾಸೋದ್ಯಮದ ಅಭಿವೃದ್ಧಿ ಸೇರಿದಂತೆ ದೂರದೃಷ್ಟಿಯ ಕಾಂಗ್ರೆಸ್ ಪ್ರಣಾಳಿಕೆ ಕಾರ್ಯಗತಗೊಳ್ಳಲಿದೆ ಎಂದರು. ಜಿಲ್ಲಾಡಳಿತ ಭವನದ ಕಳಪೆ ತಡೆಗೋಡೆ, ಗಡಿ ಅಭಿವೃದ್ಧಿಯ ಅನುದಾನ ಸೇರಿದಂತೆ 9.50 ಕೋಟಿ ವೆÉಚ್ಚದ ಸುವರ್ಣ ಸಮುಚ್ಛಯ ಭವನವಿನ್ನೂ ಪೂರ್ಣಗೊಳ್ಳದೆ ಪಾಳು ಬಂಗಲೆಯಂತೆ ನಿಂತಿರುವುದು, 4 ಕೋಟಿ ವೆಚ್ಚದ ಕೊಡಗು ಹೆರಿಟೇಜ್ ಅಪೂರ್ಣವಾಗಿ ಪಳೆಯುಳಿಕೆಯಂತೆ ತೋರುತ್ತಿರುವುದು, ಸರ್ವಋತು ರಸ್ತೆಗಳು ಗಬ್ಬೆದ್ದು ಅವುಗಳಿಗೆ ತೇಪೆ ಹಾಕುತ್ತಿರುವುದು ಬಿಜೆಪಿ ಜನಪ್ರತಿನಿಧಿಗಳ ಸಾಧನೆಯಾಗಿದೆ ಎಂದು ಟೀಕಿಸಿದರು. ಶಾಸಕರುಗಳ ವೈಫಲ್ಯವನ್ನು ಅರಿತಿರುವ ಜಿಲ್ಲೆಯ ಮತದಾರ ಕಾಂಗ್ರೆಸ್ ಅಭ್ಯರ್ಥಿಗಳಾದ…
ಮಡಿಕೇರಿ ಮೇ 6 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಅವರು, ನನಗೆ ಯಾರೂ ಪ್ರತಿಸ್ಪರ್ಧಿ ಇಲ್ಲವೆಂದು ಹೇಳಿಕೊಳ್ಳುತ್ತಿದ್ದಾರೆ. ಕಳೆದ 25 ವರ್ಷಗಳ ಕಾಲ ಇವರಿಗೆ ಪ್ರತಿಸ್ಪರ್ಧಿ ಇಲ್ಲದಿರಬಹುದು. ಆದರೆ ಈಗ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ರಂಜನ್ ಅವರನ್ನು ಸೋಲಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದವರು ಮತ್ತೆ ಮತ್ತೆ ಗೆದ್ದು ಬರುತ್ತಿರುವುದು ಹೇಗೆ ಎಂದೇ ತಿಳಿಯುತ್ತಿಲ್ಲ. ಗೆದ್ದ ನಂತರ ಐದು ವರ್ಷ ಸುಮ್ಮನಿದ್ದು, ಚುನಾವಣೆ ಸಂದರ್ಭ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಕೊನೆಯ ಮೂರು ದಿನ ಚಟುವಟಿಕೆಯಲ್ಲಿ ತೊಡಗುತ್ತಾರೆ ಹೊರತು ಅಭಿವೃದ್ಧಿಪರ ಚಿಂತನೆಯನ್ನೇ ಮಾಡುತ್ತಿಲ್ಲ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತವಾಗಿದೆ. ಆದ್ದರಿಂದ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಅನಿವಾರ್ಯವಾಗಿದೆ. ಇವರುಗಳು ಗೆದ್ದರೆ ಅಭಿವೃದ್ಧಿ ಕಾರ್ಯಗಳು ಸುಲಭವಾಗಲಿದೆ, ಮಂತರ್…
ಮಡಿಕೇರಿ ಮೇ 6 : ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರ ಪರ ಪ್ರಚಾರದಲ್ಲಿ ತೊಡಗಿರುವ ಬುದ್ಧಿ ಜೀವಿ ಅಡ್ಡಂಡ ಕಾರ್ಯಪ್ಪ ಅವರು ಇಡೀ ಕೊಡವ ಜನಾಂಗವನ್ನು ಅಪಮಾನ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಆರೋಪಿಸಿದ್ದಾರೆ. ಬಿಜೆಪಿ ಗೆ ಕೊಡವರ ಮೇಲೆ ನೈಜ ಪ್ರೀತಿ ಇದ್ದರೆ ಕಾರ್ಯಪ್ಪ ಅವರನ್ನು ಪಕ್ಷದಿಂದ ತಕ್ಷಣ ಉಚ್ಛಾಟಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀಣಾ ಅಚ್ಚಯ್ಯ, ಕೊಡವರು ಹಾಗೂ ಕೊಡವತಿಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾರ್ಯಪ್ಪ ಅವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಹೇಳಿದರು. ಅಭಿವೃದ್ಧಿ ಪರ ಚಿಂತನೆಯನ್ನು ಮರೆತು ವೈಯುಕ್ತಿಕ ತೆಜೋವಧೆ ಮಾಡುವ ಮೂಲಕ ಮತ ಗಳಿಸುವುದು ಬಿಜೆಪಿಯ ಚಾಳಿಯಾಗಿದೆ. ಅಡ್ಡಂಡ ಕಾರ್ಯಪ್ಪ ಅವರು ಒಬ್ಬ ಕೊಡವನಾಗಿ ಇಡೀ ಕೊಡವ ಸಮುದಾಯವನ್ನು ತೇಜೋವಧೆ ಮಾಡಿದ್ದಾರೆ. ನಾನೊಬ್ಬ ಕೊಡವ ಹೆಣ್ಣುಮಗಳಾಗಿ ಹೇಳಿಕೊಳ್ಳಲಾಗದಂತಹ ಅವಾಚ್ಯ ಶಬ್ಧಗಳನ್ನು ಅವರು ಬಳಕೆ ಮಾಡಿದ್ದಾರೆ, ಇದರಿಂದ ನನಗೆ ತುಂಬಾ…
ಮಡಿಕೇರಿ ಮೇ 6 : ಓಮನ್ನಲ್ಲಿ ಮೇ 23 ರಿಂದ ಜೂನ್ 1ರ ತನಕ ಜರುಗಲಿರುವ ಪುರುಷರ ಜೂನಿಯರ್ ಏಷ್ಯಾಕಪ್ ಹಾಕಿ-2023 ಚಾಂಪಿಯನ್ಶಿಪ್ಗೆ ಭಾರತ ಜೂನಿಯರ್ ಹಾಕಿ ತಂಡಕ್ಕೆ ಜಿಲ್ಲೆಯ ಯುವ ಆಟಗಾರ ಚಂದುರ ಬಿ.ಪೂವಣ್ಣ ಆಯ್ಕೆಗೊಂಡಿದ್ದಾರೆ. ಇದು ಮುಂಬಲಿರುವ ಎಫ್.ಐ.ಎಸ್. ಜೂನಿಯರ್ಮೆನ್ಸ್ ವರ್ಲ್ಡ್ ಕಪ್ ಹಾಕಿ ಪಂದ್ಯಾಟಕ್ಕೆ ಅರ್ಹತೆ ಗಳಿಸುವ ಪ್ರತಿಷ್ಠಿತ ಪಂದ್ಯಾವಳಿಯೂ ಆಗಿದೆ. ಹಾಕಿ ಇಂಡಿಯಾ 18 ಆಟಗಾರರ ಹೆಸರನ್ನು ಜೂನಿಯರ್ ಏಷ್ಯಾಕಪ್ ಪಂದ್ಯಾವಳಿಗೆ ಪ್ರಕಟಿಸಿದ್ದು, ಇದರಲ್ಲಿ ಪೂವಣ್ಣ ಕೂಡ ಒಬ್ಬರಾಗಿದ್ದಾರೆ. ಉತ್ತಮ್ ಸಿಂಗ್ ತಂಡದ ನಾಯಕರಾಗಿದ್ದು, ಕರ್ನಾಟಕ ರಾಜ್ಯದಿಂದ ಪೂವಣ್ಣ ಹಾಗೂ ಹೆಚ್.ಎಸ್.ಮೋಹಿತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪೂವಣ್ಣ 2022ರಲ್ಲಿ ಜರುಗಿದ 10ನೇ ಸುಲ್ತಾನ್ ಆಫ್ ಜೋಹಾರ್ಕಪ್ ಪ್ರಶಸ್ತಿ ಗಳಿಸಿದ್ದ ಜೂನಿಯರ್ ಇಂಡಿಯಾ ತಂಡವನ್ನೂ ಈ ಹಿಂದೆ ಪ್ರತಿನಿಧಿಸಿದ್ದರು. ಇವರು ಮೂಲತಃ ಕಂಡಂಗಾಲದ ನಿವಾಸಿ ಚಂದುರ ಎಸ್.ಬಾಬಿ (ಪ್ರಭು) ಹಾಗೂ ಅನಿಲ (ತಾಮನೆ ಮಲ್ಲೇಂಗಡ, ಬಾಡಗರಕೇರಿ) ದಂಪತಿ ಪುತ್ರ.
ಮಡಿಕೇರಿ ಮೇ 6 : ಬಾಳೆಯಡ ಕಿಶನ್ ಪೂವಯ್ಯ ಮೂಲತಃ ನಾಪೋಕ್ಲುವಿನ ಬಾಳೆಯಡ ಬಿ.ಕೆ ಚರ್ಮಣ್ಣ, ಬಿ.ಸಿ.ಮಾಚಮ್ಮ ದಂಪತಿಯ ಪುತ್ರ. ವಿರಾಜಪೇಟೆಯಲ್ಲಿ ಜನಿಸಿದ ಕೊಡಗಿನ ವಿವಿಧ ಸ್ಥಳಗಳಲ್ಲಿ ತಮ್ಮ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣವನ್ನು ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರಿನಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಬಳಿಕ ಬೆಂಗಳೂರಿನ ಹಾವನೂರು ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಮಡಿಕೇರಿಯಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ವೃತ್ತಿಯಿಂದ ವಕೀಲರು ಮತ್ತು ನೋಟರಿಯಾದರೂ ಸಹ ಪ್ರವೃತ್ತಿಯು ಕೃಷಿ ಮತ್ತು ಸಮಾಜ ಸೇವೆ, ರಾಜಕೀಯ, ಕ್ರೀಡೆ ಇತ್ಯಾದಿ ಇವರ ವಿಶೇಷತೆ. ಸುಮಾರು 8 ವರ್ಷಗಳ ಕಾಲ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿದ್ದ ಇವರು ಪ್ರಸ್ತುತ ಜಿಲ್ಲಾ ಸಮಿತಿಯ ಆಹ್ವಾನಿತ ಸದಸ್ಯರಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಕನ್ನಡ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಿದ್ದವರು ಕೊಡವ ಸಾಹಿತ್ಯ ಅಕಾಡೆಮಿಯ ಸಮಾರಂಭಗಳಲ್ಲಿ, ಉಪ ಸಮಿತಿಗಳ ಸದಸ್ಯನಾಗಿ, ಸ್ಥಳೀಯ ವಾಹಿನಿಗಳಲ್ಲಿ ಮತ್ತು ಆಕಾಶ ವಾಹಿನಿಯಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಣೆ, …
ಮಡಿಕೇರಿ ಮೇ 6 : ಚುನಾವಣಾ ಪ್ರಚಾರಕ್ಕಾಗಿ ಜಿಲ್ಲೆಯ ಗಡಿ ಅರಕಲಗೂಡಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂತಪ್ಪ ಆಗಮಿಸಿ ದೊಡ್ಡಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೋಟೆ. ಇಲ್ಲಿನ ಜನತೆ ಪ್ರಜ್ಞಾವಂತರು ಈ ಹಿಂದಿನಿಂದಲೂ ನಮ್ಮನ್ನು ಆಶೀರ್ವಾದಿಸುತ್ತಾ ಬಂದಿದ್ದಾರೆ. ಈ ಭಾರಿಯು ನಮ್ಮ ಪಕ್ಷದಿಂದ ಅಪ್ಪಚ್ಚು ರಂಜನ್ ಹಾಗೂ ಬೋಪಯ್ಯ ಸ್ಪರ್ಧಿಸಿದ್ದು, ನಿಮ್ಮೆಲ್ಲರ ಆಶೀರ್ವಾದ ಅವರ ಮೇಲಿರಲಿ ಎಂದರು. ರಾಜ್ಯದ ಜನತೆ ಬಿಜೆಪಿ ಪರವಾಗಿದ್ದಾರೆ. ಈ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಈ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ದೇವರು, ಬಸವ ಪಟ್ಟಣ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಪಕ್ಷದ ಪ್ರಮುಖರು ಈ ಸಂದರ್ಭ ಹಾಜರಿದ್ದರು.






