ನಾಪೋಕ್ಲು ಜೂ.16 : ಅತೀ ಹೆಚ್ಚು ಗ್ರಾಮಗಳನ್ನು ಹೊಂದಿರುವ ನಾಪೋಕ್ಲು ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಅಗತ್ಯವಾದ ವೈದ್ಯರ ಸೇವೆ ಲಭಿಸದೆ ದಶಕಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ನಾಪೋಕ್ಲುವಿನ ಟಿ.ಎ. ಮೊಹಮ್ಮದ್ ಹನೀಫ್ ಆರೋಗ್ಯ ಕೇಂದ್ರದಲ್ಲಿ ದಿನದ 24 ಗಂಟೆ ಸಮರ್ಪಕವಾಗಿ ವೈದ್ಯರ ಸೇವೆ ಒದಗಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೆಚ್ಚು ಜನಸಂಖ್ಯೆ ಹೊಂದಿರುವ ನಾಪೋಕ್ಲು ಪಟ್ಟಣದಲ್ಲಿ ಈ ಹಿಂದೆ ಇದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೆಡವಿ ಸರ್ಕಾರ ಕೋಟಿಗಟ್ಟಲೆ ಹಣ ಖರ್ಚುಮಾಡಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಆದರೆ ವೈದ್ಯರ ನೇಮಕದ ಬಗ್ಗೆ ಮಾತ್ರ ಇದುವರೆಗು ಯಾರೂ ಕಾಳಜಿ ತೋರಿಲ್ಲವೆಂದು ಆರೋಪಿಸಿದ್ದಾರೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ 200ರಿಂದ 300 ಮಂದಿ ರೋಗಿಗಳು ಬರುತ್ತಿದ್ದಾರೆ. ಆದರೆ ಇಲ್ಲಿರುವ ಎರಡು ವೈದ್ಯರುಗಳು ಬೆಳಿಗ್ಗೆ 10 ಗಂಟೆಯಿಂದ…
ಲೇಖಕ: admin
ಸುಂಟಿಕೊಪ್ಪ : ಚೆಟ್ಟಳ್ಳಿ – ಸುಂಟಿಕೊಪ್ಪ ಮಾರ್ಗದ ಕೃಷ್ಣ ತೋಟದ ಸಮೀಪ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿತು. ರಸ್ತೆಯಲ್ಲಿ ಆನೆ ಓಡಾಟ ಕಂಡು ವಾಹನ ಸವಾರರು ಆತಂಕಗೊಂಡರು. ಕಾಡಾನೆಯನ್ನು ಅರಣ್ಯ ಇಲಾಖೆಯ ಆರ್ ಆರ್ ಟಿ ತಂಡದ ಸಿಬ್ಬಂದಿಗಳು ಪಟಾಕಿ ಸಿಡಿಸಿ ಕಾಡಿಗೆ ಅಟ್ಟಿಸುವ ಕೆಲಸ ಮಾಡಿದರು.
ಮಡಿಕೇರಿ ಜೂ.15 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಸಿಎನ್ಸಿ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜೂ.14 ರಂದು ಹೈಕೋರ್ಟ್ ನಲ್ಲಿ ನಡೆಯಿತು. ವಿಚಾರಣೆಯನ್ನು ಆ.3 ಕ್ಕೆ ಮುಂದೂಡಲಾಗಿದ್ದು, ಮುಂದಿನ 6 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಎಂಜೆ ಎಸ್ ಕಮಲ್ ಅವರ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಅವರ ಪರವಾಗಿ ನ್ಯಾಯವಾದಿ ಕಿರಣ್, ಎನ್.ಯು.ನಾಚಪ್ಪ ಅವರ ಪರ ಸುಪ್ರೀಂ ಕೋರ್ಟ್ ವಕೀಲ ವಿಕ್ರಮ್ ಹೆಗ್ಡೆ ಹಾಗೂ ಚಿತ್ವಾನ್ ಹಾಜರಾಗಿ ಅಹವಾಲು ಸಲ್ಲಿಸಿದರು. ಎನ್.ಯು.ನಾಚಪ್ಪ, ಲೆಫ್ಟಿನೆಂಟ್ ಕರ್ನಲ್ ಪಾರ್ವತಿ, ಮಚ್ಚಾರಂಡ ಸಿಂಧು, ಶ್ರೇಯ ನಾಚಪ್ಪ, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಚಂಬಂಡ ಜನತ್, ಮಂದಪಂಡ ಮನೋಜ್, ಆಲ್ಮಂಡ ಜೈ, ಬೊಳ್ಳಾರಪಂಡ…
ಮಡಿಕೇರಿ ಜೂ.15 : ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು ಕೊಡಗರು ಎನ್ನುವ ಬದಲಿಗೆ ಕೊಡವರು ಎಂದು ನಮೂದಿಸಲು ಅಧಿಕೃತ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದೆ. ಬೆಂಗಳೂರಿಗೆ ತೆರಳಿದ ಸಿಎನ್ಸಿ ನಿಯೋಗ ಕೊಡವರು ಪದ ಬಳಕೆಯ ಕುರಿತು ಹೈಕೋರ್ಟ್ ಆದೇಶವನ್ನು ಗೆಜೆಟ್ ಅಧಿಸೂಚನೆಯ ಮೂಲಕ ಅನುಷ್ಠಾನಕ್ಕೆ ತರಬೇಕೆಂದು ಒತ್ತಾಯಿಸಿತು. 2010 ಜೂನ್ ತಿಂಗಳಿನಲ್ಲಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ ಪರಿಣಾಮ ಆಯೋಗವು ಕಾಗುಣಿತ ದೋಷ ತಿದ್ದುಪಡಿಗೆ ಶಿಫಾರಸ್ಸು ಮಾಡಿತು. ಕೊಡಗರ ಬದಲಿಗೆ ಕೊಡವ/ಕೊಡವರು ಎಂದು ನಮೂದಿಸುವ ಕುರಿತು ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತು. ಆದರೆ ಸರ್ಕಾರ ವರದಿಯನ್ನು ಜಾರಿಗೊಳಿಸಲಿಲ್ಲ ಮತ್ತು ಯಾವುದೇ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಿಲ್ಲ. ಈ ಕಾರಣದಿಂದ ಹೈಕೋರ್ಟ್ ಮೆಟ್ಟಿಲೇರಿದ ಪರಿಣಾಮ ಕೋರ್ಟ್ ಕೂಡ ಕೊಡವ ಪದ ಬಳಕೆ ಕುರಿತು ಆದೇಶ ಹೊರಡಿಸಿತು. ಆದರೆ ಅಧಿಕಾರಿಶಾಹಿಗಳು ನ್ಯಾಯಾಲಯದ ಆದೇಶವನ್ನು ಕೂಡ ಪಾಲಿಸಲಿಲ್ಲವೆಂದು ಸಿಎನ್ಸಿ ಅಧ್ಯಕ್ಷ…
ಮಡಿಕೇರಿ ಜೂ.15 : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ 30 ಮಂದಿ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಕೊಡಗು ಜಿಲ್ಲಾ ಪೊಲೀಸ್ ವಿಪತ್ತು ನಿರ್ವಹಣಾ ತಂಡದಿಂದ ಮದೆನಾಡು ಗ್ರಾಮ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಅಭ್ಯಾಸವನ್ನು ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ನೇತೃತ್ವದಲ್ಲಿ ನಡೆದ ಅಭ್ಯಾಸ ಕಾರ್ಯಾಚರಣೆಯಲ್ಲಿ ಮಡಿಕೇರಿ ಉಪವಿಭಾಗ ಸಹಾಯಕ ಎಸ್.ಪಿ, ಆರ್.ಪಿ.ಐ. ಡಿಎಆರ್ ಮಡಿಕೇರಿ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಮಡಿಕೇರಿ ಜೂ.15 : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮಡಿಕೇರಿ ಉಪ ವಿಭಾಗದ ಕುಂದಚೇರಿ ಗ್ರಾಮದ ಚೆಟ್ಟಿಮಾನಿ ಸಮುದಾಯ ಭವನ, ಗೋಣಿಕೊಪ್ಪಲು ಉಪ ವಿಭಾಗದ ಹೊಸೂರು ಗ್ರಾ.ಪಂ. ಸಭಾಂಗಣ, ವಿರಾಜಪೇಟೆ ಉಪ ವಿಭಾಗದ ಹಚ್ಚಿನಾಡು ಸರ್ಕಾರಿ ಪ್ರಾಥಮಿಕ ಶಾಲೆ, ಹೆಗ್ಗಳ ಹಿರಿಯ ಪ್ರಾಥಮಿಕ ಶಾಲೆ, ಬೇಟೋಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ, ಕುಶಾಲನಗರ ಉಪ ವಿಭಾಗದ ಕೂಡಿಗೆ ಗ್ರಾಮದ ತೊರೆನೂರು ಗ್ರಾ.ಪಂ ಸಭಾಂಗಣ ಹಾಗೂ ಸೋಮವಾರಪೇಟೆ ಉಪ ವಿಭಾಗದ ಬಜೆಗುಂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜೂ.17 ರಂದು ಬೆಳಗ್ಗೆ 11 ಗಂಟೆಯಿಂದ ವಿದ್ಯುತ್ ಅದಾಲತ್ ನಡೆಯಲಿದೆ. ಆದ್ದರಿಂದ ಈ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಜೂ.15 : ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ, ಬಿತ್ತನೆ ಬೀಜ ಮತ್ತು ಇತರೆ ಮಾಧ್ಯಮಗಳಿಂದ ಬೀಜದ ಮುಖಾಂತರ ಪ್ರಸಾರಗೂಂಡು ರೈತರಿಗೆ ಅಪಾರ ಆರ್ಥಿಕ ಹಾನಿಯನ್ನು ಉಂಟುಮಾಡುತ್ತವೆ. ರೈತರು ಅತಿ ಸರಳ ಮತ್ತು ಕಡಿಮೆ ಖರ್ಚಿನಲ್ಲಿ ಬೀಜದಿಂದ ಪ್ರಸಾರವಾಗುವ ಈ ರೋಗಗಳನ್ನು ಬಿಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಬೀಜಗಳಿಗೆ, ಮೊಳಕೆಯೊಡೆಯುವ ಸಸಿಗಳಿಗೆ ಹಾಗೂ ಮುಂದಿನ ಸಸ್ಯ ಬೆಳವಣಿಗೆ ಹಂತದಲ್ಲಿ ಬರುವ ಅನೇಕ ರೋಗಗಳಿಂದ ರಕ್ಷಣೆ ಒದಗಿಸಬಹುದಾಗಿದೆ. ಬೀಜದಿಂದ ಪ್ರಸಾರವಾಗುವ ಅನೇಕ ರೋಗಗಳಲ್ಲಿ ಹಾನಿಕಾರಕ ರೋಗಾಣುಗಳಾದ ಶಿಲೀಂದ್ರ, ದುಂಡಾಣು ಮತ್ತು ನಂಜಾಣು ಸೂಕ್ಷ್ಮ ಜೀವಿಗಳು ಬೀಜಗಳ ಹೊರಮೈ ಹಾಗೂ ಒಳಮೈ ಆವರಿಸಿ ಬೀಜಗಳು ಮೊಳಕೆಯೊಡೆಯುವಾಗ ಸಸಿಗಳು ಬೆಳೆಯುವಾಗ ಜೊತೆಯಲ್ಲೆ ಇದ್ದು ಬೆಳೆಯ ವಿವಿಧ ಬೆಳವಣಿಗೆಯ ಹಂತದಲ್ಲಿ ರೋಗವು ಉಲ್ಬಣಿಸಿ ಬೆಳೆಯ ಹಾನಿಗೆ ಕಾರಣವಾಗುತ್ತವೆ. ಬೀಜೋಪಚಾರ ಮಾಡುವ ವಿಧಾನ :: ಪ್ರತೀ ಎಕರೆಗೆ ಶಿಫ಼ಾರಸ್ಸು ಮಾಡಿದ 25-30 ಕೆ.ಜಿ…
ಮಡಿಕೇರಿ ಜೂ.15 : ನಾಗರಹೊಳೆಯ ಆದಿವಾಸಿ ಜಮ್ಮ-ಪಾಳೇ ಹಕ್ಕು ಸ್ಥಾಪನಾ ಸಮಿತಿಯು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುತ್ತಿದ್ದು, ಈ ಹಿನ್ನೆಲೆ ಅರಣ್ಯ ಹಕ್ಕು ಕಾಯ್ದೆಯಡಿ ಮತ್ತೊಮ್ಮೆ ಪರಿಶೀಲಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಾಡಿಗಳ ಆದಿವಾಸಿ ಜನರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಾಡಿಯ ಜನರು ವಾಸಕ್ಕಾಗಿ ಮಾತ್ರ ಅರಣ್ಯ ಹಕ್ಕು ಪತ್ರ ನೀಡಿದ್ದು, ವ್ಯವಸಾಯಕ್ಕೆ ಭೂಮಿ ನೀಡಿಲ್ಲ. ಆದ್ದರಿಂದ ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಹಕ್ಕು ಕಾಯ್ದೆಯಡಿ ಉಳುಮೆ ಮಾಡುತ್ತಿರುವ ಕೃಷಿ ಭೂಮಿಯನ್ನು ಆದಿವಾಸಿಗಳಿಗೆ ನೀಡಬೇಕು ಎಂಬುದು ಆಗ್ರಹವಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಎರಡು ಬಾರಿ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ತಿರಸ್ಕೃತವಾಗಿರುವ ವೈಯಕ್ತಿಕ 320 ಅರ್ಜಿಗಳನ್ನು ಪುನರ್ ಪರಿಶೀಲಿಸಿ ವರದಿ ನೀಡುವಂತೆ…
ಸುಂಟಿಕೊಪ್ಪ ಜೂ.15 : ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಡಳಿತ, ಕೊಡಗು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಹಾಗೂ ಡಿಎಚ್ಓ ಡಾ.ಸತೀಶ್ಕುಮಾರ್ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ನಂತರ ಸುಂಟಿಕೊಪ್ಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಕೊಂಡ ಅಧಿಕಾರಿಗಳು ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಲು ಸೂಚಿಸಿದರು. ಮನೆಯ ಸುತ್ತ ಶುಚಿತ್ವ ಕಾಪಾಡಲು ಆದ್ಯತೆ ನೀಡಬೇಕು, ಚರಂಡಿಯಲ್ಲಿ ನೀರು ಕಟ್ಟಿರುವುದನ್ನು ತೆರವುಗೊಳಿಸಲು ಪಂಚಾಯಿತಿ ವತಿಯಿಂದ ಕ್ರಮ ಕೈಗೊಳ್ಳಬೇಕೆಂದರು. ಈ ಸಂದರ್ಭ ಗ್ರಾ.ಪಂ ಸದಸ್ಯ ರಫೀಕ್ಖಾನ್ ಮಾತನಾಡಿ, ಶುಚಿತ್ವ ಈಗಾಗಲೇ ಜಾಷಧಿ ಸಿಂಪಡಿಸುವ ಕಾರ್ಯವನ್ನು ಪೌರ ಕಾರ್ಮಿಕರಿಂದ ನಿರ್ವಹಿಸಲಾಗಿದೆ ಎಂದು ತಿಳಿಸಿದರು. ಮತ್ತೋರ್ವ ಸದಸ್ಯ ಪಿ.ಆರ್.ಸುನಿಲ್ಕುಮಾರ್ ಮಾತನಾಡಿ, ಸುಂಟಿಕೊಪ್ಪ ಗ್ರಾ.ಪಂ.ಗೆ ಕಸ ವಿಲೇವಾರಿಗಾಗಿ ವಾಹನದ ಅವಶ್ಯಕತೆ ಇದ್ದು, ಇರುವ 1 ವಾಹನದಿಂದ ಎಲ್ಲಾ ವಾರ್ಡ್ಗಳಿಗೆ ತೆರಳಿ ಕಸವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ. ಇನ್ನೊಂದು ವಾಹನದ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರದು. 7 ವಾರ್ಡ್ನಲ್ಲಿ ಕುಡಿಯುವ ನೀರಿನ…
ಸುಂಟಿಕೊಪ್ಪ ಜೂ.15 : ಕುಶಾಲನಗರ ಕೊಡಗು ಜಿಲ್ಲಾ ಗೌಡ ನೌಕರರ ಟ್ರಸ್ಟ್ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ ಹಾಗೂ ಜಿಲ್ಲೆಯ ನೂತನ ಶಾಸಕರುಗಳಿಗೆ ಅಭಿನಂದನಾ ಸಮಾರಂಭವು ಜೂ.18 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿದ್ದು, ಆದಿ ಚುಂಚನಗಿರಿ ಸಂಸ್ಥಾನ ಮಠದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಹಾಸನ ಕೊಡಗು ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಆರ್ಶಿವಚನ ಹಾಗೂ ಸಮಾರಂಭ ಉದ್ಘಾಟನೆಯನ್ನು ನೇರವೇರಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಾಳಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಮುಖ್ಯ ಮಂತ್ರಿಗಳು ಹಾಗೂ ಲೋಕಸಭಾ ಸದಸ್ಯ ಡಿ.ವಿ.ಸದಾನಂದಗೌಡ, ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ತ್ ನ ಎಲ್.ಬೋಜೇಗೌಡ, ಮಾಜಿ ಸಚಿವ ಬಿ.ಎ.ಜೀವಿಜಯ, ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ,…






