ಮಡಿಕೇರಿ ಜೂ.15: ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು ಪ್ರಕಟಗೊಂಡಿದ್ದು ಜಿಲ್ಲೆಯ ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ತಿಳಿಸಿದ್ದಾರೆ. ಸಂಘದ ವತಿಯಿಂದ ನೀಡಲಾಗುವ ಅತ್ಯತ್ತಮ ಕ್ರೀಡಾ ವರದಿ ಪ್ರಶಸ್ತಿಗೆ ಕನ್ನಡ ಪ್ರಭ ಜಿಲ್ಲಾ ವರದಿಗಾರ ವಿಘ್ನೇಶ್ ಭೂತನಕಾಡು ಭಾಜನರಾಗಿದ್ದಾರೆ. ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ‘ಏಷ್ಯನ್ ಗೇಮ್ಸ್,ಕಾಮನ್ ವೆಲ್ತ್ ಗೆ ಅರ್ಹತೆ ಪಡೆದ ಕೊಡಗಿನ ಎ.ಬಿ.ಬೆಳ್ಳಿಯಪ್ಪ’ ವರದಿಗೆ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ಪ್ರತಿನಿಧಿ ಪತ್ರಿಕೆಯ ಜಿಲ್ಲಾ ವರದಿಗಾರ ಸುರೇಶ್ ಬಿಳಿಗೇರಿ ಭಾಜನರಾಗಿದ್ದಾರೆ.ಪ್ರತಿನಿಧಿಯಲ್ಲಿ ಪ್ರಕಟಗೊಂಡ ‘ಕೊಡಗಿನಲ್ಲಿ ರಸ್ತೆಗಳೇ ಮಾಯ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ.ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಸೋಮವಾರಪೇಟೆ ವರದಿಗಾರ ಕವನ್ ಕಾರ್ಯಪ್ಪ ಭಾಜನರಾಗಿದ್ದಾರೆ.ವಿಜಯ ಕರ್ನಾಟಕದಲ್ಲಿ ಪ್ರಕಟಗೊಂಡ ‘ಕಾಡಾನೆ ಕಾಟದಿಂದ ಕಂಗಾಲಾದ ಕೃಷಿಕ’ ವರದಿಗೆ ಪ್ರಶಸ್ತಿ ದೊರೆತಿದೆ.ಸಂಘದ ಸಲಹೆಗಾರರಾದ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ.ಅನಂತ ಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ…
ಲೇಖಕ: admin
ಮಡಿಕೇರಿ ಜೂ.15 : ಜಿಲ್ಲೆಯಲ್ಲಿ ಮಲೆನಾಡು ರಕ್ಷಣಾ ಸೇನೆ ಅಸ್ಥಿತ್ವಕ್ಕೆ ಬಂದಿದ್ದು, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳನ್ನು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಮಲೆನಾಡು ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ರಕ್ಷಿತ್ ರವೀಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ, ರಾಜ್ಯಾಧ್ಯಕ್ಷ ಸಾಗರ್ ಜಾನೇಕೆರೆ ಅವರು ಕೊಡಗು ಜಿಲ್ಲಾಧ್ಯಕ್ಷನ್ನಾಗಿ ತನ್ನನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪದಾಧಿಕಾರಿಗಳ ನೇಮಕ ಮತ್ತು ತಾಲೂಕು, ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಕನ್ನಡಪರ ಧ್ವನಿ ಎತ್ತಲು ಯಾವುದೇ ಸಂಘಟನೆ ಮುಂದೆ ಬರದೇ ರಾಜಕೀಯ ಪ್ರೇರಿತವಾಗಿ ನಡಿಯುತ್ತಿದೆ. ಆದ್ದರಿಂದ ಕನ್ನಡ ಪರ, ರೈತರ ಪರ ಹಾಗೂ ಜಿಲ್ಲೆಯ ಜ್ವಲಾಂತ ಸಮಸ್ಯೆಗಳ ಬಗ್ಗೆ ಸಂಘಟನೆ ವತಿಯಿಂದ ಕಾಳಜಿ ವಹಿಸಿ ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಮಲೆನಾಡಿನ ಸಂರಕ್ಷಣೆಗಾಗಿ ಪಣ ತೊಡುವುದರ ಜತೆಗೆ ನೆಲ-ಜಲ, ನಾಡು-ನುಡಿ ಸಂರಕ್ಷಣೆಗೆ ಹೋರಾಟ ಹಾಗೂ ಸಾಮಾಜಿಕ…
ಬೆಂಗಳೂರು ಜೂ.15 : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ಜೂ.16 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಆಫ್ ಲೈನ್ ಹಾಗೂ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು. ಜೂ.16ರ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಸಿ.ಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಸೇವಾ ಸಿಂಧು ಪೋರ್ಟಲ್ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್ಪೋರ್ಟಲ್ ನ್ನು ಸಿಎಂ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ನಾಪೋಕ್ಲು ಜೂ.15 : ಮಡಿಕೇರಿಯಿಂದ ಮೂರ್ನಾಡು, ಕುಂಬಳದಾಳು ಮೂಲಕ ನಾಪೋಕ್ಲುವನ್ನು ಸಂಪರ್ಕಿಸುವ ನೂತನ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಗೊಂಡಿದ್ದು, ಆರಂಭಿಕ ದಿನದಂದು ಮಹಿಳೆಯರು ಉಚಿತ ಪ್ರಯಾಣ ಮಾಡಿ ಸಂಭ್ರಮಿಸಿದರು. ಮಡಿಕೇರಿಯಿಂದ ಮಧ್ಯಾಹ್ನ 12.30 ಕ್ಕೆ ಹೊರಡುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು 1.15 ಕ್ಕೆ ನಾಪೋಕ್ಲು ತಲುಪಲಿದ್ದು ಅದೇ ರಸ್ತೆಯಲ್ಲಿ ಹಿಂದಿರುಗಲಿದೆ. ಶಾಸಕ ಡಾ.ಮಂಥರ್ ಗೌಡ ಅವರಿಗೆ ಕುಂಬಳಗಾಳು ಗ್ರಾಮಸ್ಥರು ಬಸ್ ಸಂಚಾರ ಕಲ್ಪಿಸಿ ಕೊಡುವಂತೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಉಪಯೋಗಕ್ಕಾಗಿ ಈ ಬಸ್ ಸೌಲಭ್ಯವನ್ನು ಕಲ್ಪಿಸಿರುವುದು ಗ್ರಾಮಸ್ಥರ ಪ್ರಶಂಸೆಗೆ ಕಾರಣವಾಗಿದೆ.ಈ ಸಂದರ್ಭ ಬಸ್ ಸಂಚಾರದ ಉದ್ಘಾಟನೆಯನ್ನು ಕುಂಬಳದಾಳು ಅಂಗನವಾಡಿ ಕೇಂದ್ರದ ಸಮೀಪ ನೆರವೇರಿಸಿ ಮಹಿಳೆಯರು ಸಂಭ್ರಮಿಸಿದರು. ಸಂಜೀವಿನಿ ಸ್ವಸಹಾಯ ಸಂಘದ ಮುಖ್ಯಸ್ಥೆ ವೀಣಾ ಕುಮಾರಿ, ಅಂಗನವಾಡಿ ಕಾರ್ಯಕರ್ತೆ ಅನುರಾವತಿ ಬಸ್ಸಿಗೆ ಹೂವಿನ ಮಾಲೆ ಹಾಕಿ ಆರತಿ ಎತ್ತಿ ಈಡುಗಾಯಿ ಒಡೆಯುವುದರ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಹೊದ್ದೂರು ಗ್ರಾಮ ಪಂಚಾಯ್ತಿ ಸದಸ್ಯರಾದ…
ಬೆಂಗಳೂರು: ಪಿಯುಸಿ ನಂತರ ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದು (KCET Results 2023)ಅದರ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್, ಈ ಬಾರಿ ರಾಜ್ಯದ 592 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 592 ಕೇಂದ್ರಗಳಲ್ಲಿ 2,61,610 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸರಿ ಉತ್ತರಗಳನ್ನು ಪ್ರಾಧಿಕಾರದ kea.nic.in ವೆಬ್ ಸೈಟ್ ನಲ್ಲಿ ಪ್ರಕಟ ಮಾಡಲಿದೆ ಎಂದು ಹೇಳಿದರು. ಬಾಲಕಿಯರು ಮೇಲುಗೈ: ಈ ಬಾರಿ ಸಿಇಟಿಯಲ್ಲೂ ಬಾಲಕಿಯರದ್ದೇ ಮೇಲುಗೈ. ಇಂಜಿನಿಯರಿಂಗ್ ವಿಭಾಗದಲ್ಲಿ, ವಿಘ್ನೇಶ್ ನಟರಾಜು ಕುಮಾರ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಕ್ವಾಲಿಫೈ ಪರೀಕ್ಷೆಯಲ್ಲಿ 99.667 ಅಂಕ ಕಳಿಸಿದ್ದು, ಸಿಟಿಇಯಲ್ಲಿ 96.111 ಅಂಕ ಪಡೆದಿದ್ದು. ಒಟ್ಟು 97.111…
ಮಡಿಕೇರಿ ಜೂ.15 : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಹಿರಿಕರ ರವಿ ಭಾಜನರಾಗಿದ್ದಾರೆ.ಪ್ರಜಾಸತ್ಯ ಪತ್ರಿಕೆಯಲ್ಲಿ 5-07-2022 ರಂದು ಕತ್ತಲಲ್ಲಿ ಕಮರುತ್ತಿದೆ ಕಿಬ್ಬೆಟ್ಟ ಗಿರಿಜನರ ಬದುಕು ಶಿರೋನಾಮೆಯಲ್ಲಿ ಪ್ರಕಟವಾದ ವಿಶೇಷ ವರದಿ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೆ.ಬಿ. ಮಹಾಂತೇಶ್ ಸ್ಮರರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿ ನೀಡಲಾಗುತ್ತದೆ.ಜೂನ್ 25 ರಂದು ಮಡಿಕೇರಿಯಲ್ಲಿರುವ ಪತ್ರಿಕಾ ಭವನದಲ್ಲಿ ಆಯೋಜಿಸಿರುವ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 5,000 ರೂಪಾಯಿ, ಪ್ರಶಸ್ತಿ ಫಲಕ ಇರುತ್ತದೆ.
ಕುಶಾಲನಗರ, ಜೂ.15 : ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದಾಗಿ ವಾತಾವರಣ ಕಲುಷಿತಗೊಳ್ಳುತ್ತಿದೆ. ಪ್ರತಿಯೊಬ್ಬರೂ ಈ ವಿಷಕಾರಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವತ್ತ ಎಲ್ಲರೂ ಕೈಜೋಡಿಸಬೇಕು ಎಂದು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಇಂದಿರಾ ರಮೇಶ್ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕೂಡುಮಂಗಳೂರು ಮತ್ತು ಕೂಡಿಗೆ ಗ್ರಾ.ಪಂ ಗಳ ಸಹಯೋಗದೊಂದಿಗೆ ಎಸ್.ಡಿ.ಎಂ.ಸಿ. ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ಘಟಕ, ಇಕೋ ಕ್ಲಬ್, ಎನ್ನೆಸ್ಸೆಸ್ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಮಾಸಾಚರಣೆ ಅಂಗವಾಗಿ “ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಸ್ನೇಹಿ ಬಟ್ಟೆ ಚೀಲ ಬಳಸಿ” ಎಂಬ ಘೋಷವಾಕ್ಯದೊಂದಿಗೆ “ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳು” ಕುರಿತು ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ ಬಟ್ಟೆ ಕೈ ಚೀಲ ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಮ್ಮ ದೈನಂದಿನ ಬದುಕಿನಲ್ಲಿ ಪರಿಸರದ ಕಡೆಗೆ ಕಾಳಜಿ ವಹಿಸುವುದರೊಂದಿಗೆ ಪ್ಲಾಸ್ಟಿಕ್ ನಿರ್ಮೂಲನೆಗೆ ಕೈ ಜೋಡಿಸಬೇಕು ಎಂದರು. ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತು…
ಸೋಮವಾರಪೇಟೆ. ತಾಲ್ಲೂಕಿನ ಗಡಿಭಾಗದ ಬಾಣಾವರ ಗ್ರಾಮದಲ್ಲಿನ ಮೀಸಲು ಅರಣ್ಯಕ್ಕೆ ಒಳಪಡುವ ಕಲ್ಲು ಕೋರೆ ಕೆರೆಯೊಂದರಲ್ಲಿ ಅಪರಿಚಿತ ಶವ ಒಂದು ಮಂಗಳವಾರ ರಾತ್ರಿ ಪತ್ತೆಯಾಗಿದೆ. ಸುಮಾರು 45 ವರ್ಷದ ವಯಸ್ಸಿನವನಾಗಿದ್ದು. ಮೃತನ ಸುಳಿವು ಪತ್ತೆಯಾಗಿಲ್ಲ. ಸ್ಥಳಕ್ಕೆ ಪಿಎಸ್ಐ ರಮೇಶ್ ಭೇಟಿ ನೀಡಿ ಮಾಹಿತಿ ಪಡೆದರು. ಶವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಕ್ಷಿಪ್ರ ಕಾರ್ಯಪಡೆ ಸಂಯೋಜಕ ರಾಮದಾಸ್, ಸ್ವಯಂ ಸೇವಕರಾದ ಆನಂದ, ಶೇಖರ್, ಶಶಿ, ರಾಜ, ನಾಗರಾಜ್, ಗಣೇಶ್ ಹಾಗೂ ಶ್ರೀನಿವಾಸ್ ರಾತ್ರಿಯೇ ಕೆರೆಯಲ್ಲಿ ಶವವನ್ನು ಹುಡುಕಿ ಮೇಲಕ್ಕೆ ತಂದರು. ಈ ಸಂಬಂಧ ಸೋಮವಾರಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ನಮ್ಮ ಡಾಕ್ಟರ್ ನಮ್ಮ ಹೆಮ್ಮೆ, ನಮ್ಮ ಜಿಲ್ಲಾಸ್ಪತ್ರೆ ನಮ್ಮ ಜಿಲ್ಲೆಯ ಹೆಮ್ಮೆ ಅಂತ ಸುತ್ತಲ ಹತ್ತೂರಿನ ಎದುರು ಹೆಮ್ಮೆಯಿಂದ ಎದೆತಟ್ಟಿ ಹೇಳಿಕೊಳ್ಳಬಲ್ಲೆ. ಸಾಕಷ್ಟು ಜನರಲ್ಲಿ ಸರ್ಕಾರಿ ವೈದ್ಯರ ಮೇಲೆ ಒಂದಷ್ಟು ಕೀಳರಿಮೆಗಳಿವೆ. ಇವರೇನೂ ಪುಕ್ಸಟೆ ನೋಡಿಕೊಳ್ತಾರಾ ಸರ್ಕಾರದಿಂದ ಲಕ್ಷಲಕ್ಷ ಸಂಬಳ ತಗೋಳೋದಿಲ್ವಾ ಅಂತ …? ನಿಜ ಇವರಿಗೆ ತಿಂಗಳಿಗೆ ಲಕ್ಷ ಲಕ್ಷ ಸಂಬಳಗಳಿರಬಹುದು ! ಆದರೂ ಒಂದು ಸಲ ಯೋಚನೆ ಮಾಡಿ ಲಕ್ಷ ಲಕ್ಷ ಸಂಬಳ ಪಡೆಯುವ ವೈದ್ಯ ಒಂದೇ ಒಂದುನಿಮಿಷ ಅಲಸ್ಯ ತೋರಿಸಿದರೆ ನಮ್ಮಲ್ಲಿರುವ ಎಷ್ಟು ಹಣದಿಂದ ನಮ್ಮನ್ನು ಉಳಿಸಿಕೊಳ್ಳಲು ಸಾಧ್ಯವಿದೆ ವೈದ್ಯರ ಹೊರತಾಗಿ . ವೈದ್ಯರನ್ನು ನಂಬಿದ್ರೆ ಹರೋ ಹರ ಎನ್ನುವವರ ನಡುವೆ ನಮ್ಮೂರಿನ ವೈದ್ಯರಿಗೆ ವೈದ್ಯೋ ನಾರಾಯಣ ಹರಿ ಅಂತ ಚೀರಿ ಹೇಳಬೇಕು ಅನ್ನಿಸಿತು. ಕೋವಿಡ್ ಆರಂಭದ ದಿನಗಳಿಂದ ಜಿಲ್ಲಾಸ್ಪತ್ರೆಯ ಲೋಪಗಳನ್ನು ಎಷ್ಟು ತೀಕ್ಷ್ಣವಾಗಿ ಖಂಡಿಸಿದ್ದೇನೋ ಹಾಗೆಯೇ ಆಸ್ಪತ್ರೆಯಲ್ಲಿ ರೋಗಿಗಳಿಗೆ ಡಾಕ್ಟರ್ ಗಳು ನೀಡುತ್ತಿರುವ ಅತ್ಯಮೂಲ್ಯ ಸೇವೆಯ ಬಗ್ಗೆಯೂ ಬರೆಯಬೇಕು…
ಪಾವಗಡ ಜೂ.14 : ಪಾವಗಡ ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು. ಇಂದು ಇಂಧನ ಸಚಿವ ಕೆ ಜೆ ಜಾರ್ಜ್ ಜೊತೆ ಪಾವಗಡ ಸೋಲಾರ್ ಪಾರ್ಕ್ ವೈಮಾನಿಕ ಸಮೀಕ್ಷೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯೋಜನೆಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದರು. ಇದು ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿದ್ದು, ಇದನ್ನು ವಿಸ್ತರಣೆ ಮಾಡಲು ಸರ್ಕಾರ ಸಿದ್ಧವಿದೆ. ಈ ಭಾಗದ ಜನರು ತಮ್ಮ ಭೂಮಿಯನ್ನು ಸ್ವಯಂ ಪ್ರೇರಿತವಾಗಿ ಬಿಟ್ಟುಕೊಟ್ಟರೆ ಕೇಂದ್ರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಕಲಬುರ್ಗಿ, ರಾಯಚೂರು ಹಾಗೂ ಬೇರೆ ಜಿಲ್ಲೆಗಳಿಂದಲೂ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಬೇಡಿಕೆ ಬಂದಿದ್ದು, ಆದಷ್ಟು ಬೇಗ ಈ ಭಾಗದ ಜನರೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು. ಕಳೆದ ಬಾರಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಜಮೀನು ನೀಡದವರು ನನ್ನ ಬಳಿ ಬಂದು…






