ಲೇಖಕ: admin

ಮಡಿಕೇರಿ ಮೇ 5 : 19 ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ವಾರ್ಷಿಕ ತರಬೇತಿ ಶಿಬಿರವು ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆಯಿತು. ಹಿರಿಯ ವಿಭಾಗ (ಸೀನಿಯರ್ ವಿಂಗ್) ಎನ್‍ಸಿಸಿ ಕೆಡೆಟ್‍ಗಳು ಮತ್ತು ಜೂನಿಯರ್ ವಿಭಾಗ (ಜೂನಿಯರ್ ವಿಂಗ್) ಎನ್‍ಸಿಸಿ ಕೆಡೆಟ್‍ಗಳಿಗೆ 10 ದಿನಗಳ ಶಿಬಿರವನ್ನು ಮಡಿಕೇರಿಯ 19 ಕರ್ನಾಟಕ ಬಿಎನ್ ಎನ್‍ಸಿಸಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ಜೆಫಿರಿನ್ ಗಿಲ್ಬರ್ಟ್ ಅರಾನ್ಹಾ, ಲೆಫ್ಟಿನೆಂಟ್ ಕರ್ನಲ್ ಚಾಕೋ ಹಾಗೂ ಹಲವಾರು ಎನ್‍ಸಿಸಿ ಮೇಲುಸ್ತುವಾರಿಗಳ ನೇತೃತ್ವದಲ್ಲಿ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಜೊತೆಗೆ ಕೊಡಗು ಜಿಲ್ಲೆಯ ವಿವಿಧ ಸಂಸ್ಥೆಗಳಿಂದ 520 ಕೆಡೆಟ್‍ಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ನಾಯಕತ್ವದ ಗುಣ, ಶಿಸ್ತು, ಕರ್ತವ್ಯನಿಷ್ಠೆ, ಸಮಯಪಾಲನೆ, ಕ್ರಮಬದ್ಧತೆ, ನ್ಯಾಯಸಮ್ಮತ ಅಧಿಕಾರ, ಮೌಲ್ಯ, ಆತ್ಮ ವಿಶ್ವಾಸ ಮತ್ತು ಸ್ವಾವಲಂಬನೆಯ ಮಟ್ಟವನ್ನು ಹೆಚ್ಚಿಸುವ ಬಗ್ಗೆ ತರಬೇತಿ ನೀಡಲಾಯಿತು. ಎನ್‍ಸಿಸಿ ಕೆಡೆಟ್‍ಗಳಿಗೆ ಸಮಾಜ ಕಲ್ಯಾಣ, ಪರಿಸರ ಜಾಗೃತಿ, ಸಾಹಸ ಮತ್ತು ಮನರಂಜನಾ ಚಟುವಟಿಕೆಗಳಿಗೆ ಒತ್ತು ನೀಡುವ ಮೂಲಕ…

Read More

ಮಡಿಕೇರಿ ಮೇ 5 :  ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು  ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಧ್ವಜಾರೋಹಣದ ಮೂಲಕ ವಿವಿಧ ಪೂಜಾ ಕೈಂಕರ್ಯಗಳಿಗೆ ಚಾಲನೆ ದೊರೆಯಿತು. ನಂತರ  ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ  ಪೂಜೆ, ತೀರ್ಥ ಸ್ನಾನ, ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಿತು. ನಂತರ   ದೇವಾಲಯದ ಆವರಣದ ಸುತ್ತಲೂ  ದೇವಿಯ ರಥೋತ್ಸವ ನಂತರ ನೆರವೇರಿತು. ಬಳಿಕ  ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ಹಾಗೂ ತಾಯಿಯ ದರ್ಶನ  ನೆರವೇರಿತು. ಸಂಜೆ  ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ನಡೆಯಿತು. ನಗರದ ಹಾಗೂ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಮಡಿಕೇರಿ ಮೇ 5 : ಕೇಂದ್ರ ಹಾಗೂ ರಾಜ್ಯ ಸರ್ಕಾರ ದುಡಿಯುವ ವರ್ಗವನ್ನು ನಿರ್ಲಕ್ಷ್ಯಿಸುತ್ತಲೇ ಬರುತ್ತಿರುವುದರಿಂದ ನೊಂದವರ ಧ್ವನಿಯಾಗಿ ಹೋರಾಟ ನಡೆಸಲು ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ನನಗೆ ಜನರು ಮತ ನೀಡಿ ಗೆಲುವು ತಂದುಕೊಡಬೇಕೆಂದು ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರದಲ್ಲಿ 11ನೇ ಸಂಖ್ಯೆಯಲ್ಲಿರುವ ಕುಡುಗೋಲು, ತೆನೆ ಗುರುತಿಗೆ ಮತ ನೀಡಿ ಜನಸೇವೆಗೆ ಅವಕಾಶ ನೀಡಬೇಕೆಂದು ಕೋರಿದರು. ಕಳೆದ 20 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಿಪಿಐ ಮತ್ತು ಎಐಟಿಯುಸಿ ಸಂಘಟನೆ ಜಂಟಿಯಾಗಿ ದುಡಿಯುವ ವರ್ಗದ ಪರ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಕಾರ್ಮಿಕ ವರ್ಗ ನಿತ್ಯ ಅನುಭವಿಸುತ್ತಿರುವ ಸಂಕಷ್ಟ, ರೈತರ ಸಮಸ್ಯೆಗಳು, ವನ್ಯ ಜೀವಿ ದಾಳಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸುವುದಕ್ಕಾಗಿ “ಸೂರಿಗಾಗಿ ಸಮರ” ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟವನ್ನು ನಡೆಸಲಾಗಿತ್ತು. ಆದರೆ ಆಡಳಿತ ನಡೆಸುವವರಿಂದ ಕೇವಲ ಭರವಸೆ ಮಾತ್ರ ದೊರೆಯಿತೇ…

Read More

ಮಡಿಕೇರಿ ಮೇ 5 : ನಗರದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ನವೀಕೃತಗೊಂಡಿರುವ ಶ್ರೀ ಕೋದಂಡ ರಾಮ ದೇವಾಲಯದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವವು ಶ್ರದ್ಧಾಭಕ್ತಿಯಂದ ಜರುಗಿತು. ಪ್ರತಿಷ್ಠಾಪನೆಯ ಮೂರನೇ ದಿನದಂದು ಬ್ರಹ್ಮಕುಂಭಾಭಿಷೇಕದೊಂದಿಗೆ ವಿವಿಧ ಪೂಜಾದಿ, ಹೋಮ ಹವನಗಳು ಜರುಗಿದವು. ಬೆಳಿಗ್ಗೆ ವಿಜಯ ವಿನಾಯಕ ದೇವಾಲಯದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯ, ಮೈಸೂರಿನ ಕೆ.ಶ್ರೀನಿವಾ ಉಪಾಧ್ಯ ನೇತೃತ್ವದಲ್ಲಿ ಹಣಪತಿ ಹೋಮ, ವಿಶೇಷ ಶಾಂತಿ ಹೋಮ, ಪ್ರಾಯಶ್ಚಿತ ಹೋಮ, ಪ್ರತಿಷ್ಠಾ ಹೋಮ, ದೇವರ ಪ್ರತಿಷ್ಠೆ ಹಾಗೂ ತತ್ವಕಲಾ ಹೋಮ, ಪೂರ್ಣಹುತಿ, ವ್ಯಾಸ ಪೂಜೆ, ಅಲಂಕಾರ ಪೂಜೆ, ನೈವೇದ್ಯ ಮಹಾಪೂಜೆ ನೆರವೇರಿತು. ನಂತರ ಕ್ಷೇತ್ರದ ಮುಂದಿನ ನಿತ್ಯ ನೈಮಿತ್ತಿಕಾದಿಗಳ ಬಗ್ಗೆ ಪ್ರತಿಜ್ಞಾವಿಧಿ ಪ್ರಸನ್ನ ಪೂಜೆ, ಆಚಾರ್ಯ ಪೂಜೆ, ಮಂಗಳ ಮಂತ್ರಾಕ್ಷತೆ, ರಾಷ್ಟ್ರಾಶೀರ್ವಾದ ನಡೆಯಿತು. ನಗರದ ಸೇರಿದಂತೆ ವಿವಿಧಡೆಗಳಿಂದ ಸಹಸ್ತಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶ್ರೀ ಕೊದಂಡರಾಮ ಜೀರ್ಣೋದ್ಧಾರ ಸಮಿತಿ, ಕೋದಂಡರಾಮ ದೇವಾಲಯ ಟ್ರಸ್ಟ್, ಪ್ರತಿಷ್ಟಾ…

Read More

ಮಡಿಕೇರಿ ಮೇ 5 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರ ವಿರುದ್ಧ ಬಿಜೆಪಿ ಮಂದಿ ವೈಯುಕ್ತಿಕ ತೇಜೋವಧೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕೆಂದು ಕ್ಷೇತ್ರದ ಕಾಂಗ್ರೆಸ್ ವಕ್ತಾರ ಬಿ.ಎಸ್.ತಮ್ಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ವಿರಾಜಪೇಟೆ ಕ್ಷೇತ್ರಕ್ಕೆ ಒಬ್ಬ ಉತ್ತಮ ವ್ಯಕ್ತಿತ್ವದ, ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ ಯುವಕನನ್ನು ಕಣಕ್ಕಿಳಿಸಿದೆ. ಇವರಿಗೆ ದೊರೆಯುತ್ತಿರುವ ಜನ ಬೆಂಬಲದಿಂದ ಭಯಗೊಂಡಿರುವ ಬಿಜೆಪಿಯ ಮನು ಮುತ್ತಪ್ಪ ಹಾಗೂ ಅಡ್ಡಂಡ ಕಾರ್ಯಪ್ಪ ಅವರು, ಪೊನ್ನಣ್ಣ ಅವರ ತೇಜೋವಧೆಯಲ್ಲಿ ತೊಡಗಿದ್ದಾರೆ. ವೃತ್ತಿಪರವಾದ ವಕಾಲತ್ತುಗಳನ್ನು ಆಧರಿಸಿ ಅಪಪ್ರಾಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಮಂದಿ ಎಷ್ಟೇ ತೇಜೋವಧೆಯಲ್ಲಿ ತೊಡಗಿದರೂ ಪೊನ್ನಣ್ಣ ಅವರು ಅದಕ್ಕೆ ಪ್ರತಿಕ್ರಿಯೆ ನೀಡದೆ ಅಭಿವೃದ್ಧಿಪರ ಚಿಂತನೆಯೊಂದಿಗೆ ಮತಯಾಚಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ, ಭ್ರಷ್ಟಚಾರ ರಹಿತ ಆಡಳಿತ ಮತ್ತು ಸಾಮರಸ್ಯ ಜೀವನದ ನೆಲೆಗಟ್ಟಿನಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ. ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಉದ್ದೇಶದಿಂದ ನಾವು ವೈಯುಕ್ತಿಕ ಟೀಕೆ ಮತ್ತು ಅಪಪ್ರಚಾರ ಮಾಡುವುದಿಲ್ಲ. ಜಿಲ್ಲೆಯ…

Read More

ಮಡಿಕೇರಿ ಮೇ 5 : ಗಿರಿಜನರ ಅಭಿವೃದ್ಧಿಗಾಗಿ 28 ಸಾವಿರ ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲಿಟ್ಟ ಕೇಂದ್ರ ಸರ್ಕಾರ ಈ ಯೋಜನೆಯ ಜಾಹೀರಾತಿಗಾಗಿ ನೂರಾರು ಕೋಟಿ ರೂ. ಗಳನ್ನು ವ್ಯಯ ಮಾಡಿತೇ ಹೊರತು, ಇಲ್ಲಿಯವರೆಗೆ ಗಿರಿಜನರ ಅಭಿವೃದ್ಧಿಯಾಗಿಲ್ಲವೆಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಿರಿಜನರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ನೂರಾರು ಕೋಟಿ ರೂ. ಗಳನ್ನು ಖರ್ಚು ಮಾಡಿ ಜಾಹೀರಾತು ಮೂಲಕ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ತುಳಿತಕ್ಕೆ ಒಳಗಾದ ಗಿರಿಜನರ ಸ್ಥಿತಿ ಇಂದಿಗೂ ಹೀನಾಯವಾಗಿದೆ. ಪ್ರಧಾನಮಂತ್ರಿಗಳು ಅಭಿವೃದ್ಧಿ ಪರವಾಗಿ ಮಾತನಾಡುತ್ತಿಲ್ಲ, ಜನತೆಗೆ ರಕ್ಷಣೆ ನೀಡಿದ್ದೇವೆ ಎಂದು ಜಾಹಿರಾತಿನ ಮೂಲಕ ಹೇಳುತ್ತಿದ್ದಾರೆ. ಆದರೆ ಅತ್ಯಾಚಾರ, ಹಲ್ಲೆ, ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ ಮತ್ತು ದ್ವೇಷದ ರಾಜಕಾರಣ ನಡೆಯುತ್ತಿದೆ. ದೇಶದಲ್ಲಿ ಹಿಟ್ಲರ್‍ಗೂ ಮೀರಿದ ಆಡಳಿತ ನಡೆಯುತ್ತಿದ್ದು, ಮಾನವ ಹಕ್ಕುಗಳಿಗೆ ಬೆಲೆ ಇಲ್ಲದಾಗಿದೆ…

Read More

ಮಡಿಕೇರಿ ಮೇ 5 : ಕೇಂದ್ರ ಹಾಗೂ ರಾಜ್ಯ ಸರ್ಕಾರ ದುಡಿಯುವ ವರ್ಗವನ್ನು ನಿರ್ಲಕ್ಷ್ಯಿಸುತ್ತಲೇ ಬರುತ್ತಿರುವುದರಿಂದ ನೊಂದವರ ಧ್ವನಿಯಾಗಿ ಹೋರಾಟ ನಡೆಸಲು ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ನನಗೆ ಜನರು ಮತ ನೀಡಿ ಗೆಲುವು ತಂದುಕೊಡಬೇಕೆಂದು ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಯಂತ್ರದಲ್ಲಿ 11ನೇ ಸಂಖ್ಯೆಯಲ್ಲಿರುವ ಕುಡುಗೋಲು, ತೆನೆ ಗುರುತಿಗೆ ಮತ ನೀಡಿ ಜನಸೇವೆಗೆ ಅವಕಾಶ ನೀಡಬೇಕೆಂದು ಕೋರಿದರು. ಕಳೆದ 20 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಿಪಿಐ ಮತ್ತು ಎಐಟಿಯುಸಿ ಸಂಘಟನೆ ಜಂಟಿಯಾಗಿ ದುಡಿಯುವ ವರ್ಗದ ಪರ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಕಾರ್ಮಿಕ ವರ್ಗ ನಿತ್ಯ ಅನುಭವಿಸುತ್ತಿರುವ ಸಂಕಷ್ಟ, ರೈತರ ಸಮಸ್ಯೆಗಳು, ವನ್ಯ ಜೀವಿ ದಾಳಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸುವುದಕ್ಕಾಗಿ “ಸೂರಿಗಾಗಿ ಸಮರ” ಘೋಷ ವಾಕ್ಯದೊಂದಿಗೆ ಬೃಹತ್ ಹೋರಾಟವನ್ನು ನಡೆಸಲಾಗಿತ್ತು. ಆದರೆ ಆಡಳಿತ ನಡೆಸುವವರಿಂದ ಕೇವಲ ಭರವಸೆ ಮಾತ್ರ ದೊರೆಯಿತೇ…

Read More

ಮಡಿಕೇರಿ ಮೇ 5 : ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ 6ನೇ ವರ್ಷದ ಗೌಡ ಕುಟುಂಬಗಳ ನಡುವಣ “ಗೌಡ ಫುಟ್ಬಾಲ್ ಟ್ರೋಫಿ 2023” ಪಂದ್ಯಾವಳಿ ಗೆ  ಚಾಲನೆ ದೊರೆಯಿತು. ಮರಗೋಡು ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ  ಮೇ  14 ರವರೆಗೆ ನಡೆಯಲಿರುವ ಪಂದ್ಯಾವಳಿಯನ್ನು   ಗೌಡ ಫುಟ್ಬಾಲ್ ಅಕಾಡೆಮಿ ಅಧ್ಯಕ್ಷ ಬಡುವಂಡ್ರ ದುಷ್ಯಂತ ಅವರು  ತೆಂಗಿನ ಕಾಯಿ ಗೆ ಗುಂಡು ಹೊಡೆಯುವ ಮೂಲಕ ಚಾಲನೆ ನೀಡಿದರು. ಮೊದಲ ಪಂದ್ಯಾವಳಿಯ ಕ್ರೀಡಾಪಟುಗಳಿಗೆ ಕಟ್ಟೆಮನೆ ರಾಕೇಶ್ ಶುಭಹಾರೈಸಿದರು. ಪಂದ್ಯಾವಳಿಗೂ ಮುನ್ನ ಗಣಪತಿ ಹೋಮ ನಂತರ   ಮೆರವಣಿಗೆ ಮೂಲಕ  ಕ್ರೀಡಾಂಗಣಕ್ಕೆ ಗಣ್ಯರು ಹಾಗೂ ಕ್ರೀಡಾಪಟುಗಳು ಆಗಮಿಸಿದರು.

Read More

ಮಡಿಕೇರಿ ಮೇ 5 :  ಕರ್ನಾಟಕ ರಾಜ್ಯ ವಿಧಾನಸಭೆಗೆ ಮೇ 10 ರಂದು ನಡೆಯುತ್ತಿರುವ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರ ಪಾಲ್ಗೊಂಡು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು. ಎಲ್ಲರೂ ಮತದಾನ ಮಾಡಲೇಬೇಕೆಂದು ಪ್ರೇರಣೆ ನೀಡುವ ಉದ್ದೇಶದಿಂದ ಮತದಾನ ಮಾಡಿದ ಪ್ರವಾಸಿಗರಿಗೆ ಮಡಿಕೇರಿ ತಾಲ್ಲೂಕಿನ ಇಬ್ನಿವಳವಾಡಿ ಗ್ರಾಮದ ಇಬ್ಬನಿ ಸ್ಪ್ರಿಂಗ್ ರೆಸಾರ್ಟ್ ನಲ್ಲಿ ತಂಗುವ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ರೆಸಾರ್ಟ್ನ ಮಾಲೀಕ ಚೆಯ್ಯಂಡ ಸತ್ಯ ಗಣಪತಿ ತಿಳಿಸಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಬರುವ ಚುನಾವಣೆಯಲ್ಲಿ ಮತ ಚಲಾಯಿಸುವ ಮತದಾರ ಪ್ರಭುವಾಗಿರುತ್ತಾನೆ. ಮತದಾನ ಮಾಡದೆ ನಿರ್ಲಕ್ಷ್ಯ ವಹಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಅರ್ಥಹೀನವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಪ್ರಜೆಗಳೇ ಪ್ರಭುಗಳು ಎನ್ನುವುದನ್ನು ಸಾಬೀತು ಪಡಿಸಬೇಕಾಗಿದೆ. ಮತದಾನ ಮಾಡಿ ರೆಸಾರ್ಟ್ ಗೆ ಆಗಮಿಸಿ ತಂಗುವ ಪ್ರವಾಸಿಗರಿಗೆ ಮೇ 10 ರಂದು ಶೇ.20 ರಷ್ಟು ರಿಯಾಯಿತಿ ನೀಡಲಾಗುತ್ತದೆ. ರೆಸಾರ್ಟ್ ಗೆ ಬರುವವರು ಮತದಾನ ಮಾಡಿದ ಕುರಿತು ಬೆರಳಿನ ಗುರುತನ್ನು ತೋರಿಸಿ…

Read More

ಮಡಿಕೇರಿ ಮೇ 5 : ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಚುನಾವಣಾ ರಾಜಕೀಯ ಜಾಹೀರಾತು ಸಂಬಂಧಿಸಿದಂತೆ ಪೂರ್ವಾನುಮತಿ ಪಡೆದು ಪ್ರಕಟಿಸಲಾಗುತ್ತಿದೆ. ಮುಂದುವರೆದು ವಿಧಾನಸಭಾ ಚುನಾವಣೆಯ ಮತದಾನವು ಮೇ 10 ರಂದು ನಡೆಯಲಿದ್ದು, ಈ ಹಿನ್ನೆಲೆ ಚುನಾವಣಾ ಆಯೋಗವು ಕೆಲವು ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಮೇ 9 ಹಾಗೂ 10 ರಂದು ಅಭ್ಯರ್ಥಿಗಳು/ ಸಂಸ್ಥೆಗಳು ಅಥವಾ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ‘ಚುನಾವಣಾ ರಾಜಕೀಯ ಜಾಹೀರಾತು’ ಪ್ರಕಟಿಸಬೇಕಾದರೆ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ವತಿಯಿಂದ ಮುಂಚಿತವಾಗಿ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. ಚುನಾವಣಾ ರಾಜಕೀಯ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮೇ 9 ಹಾಗೂ 10 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ, ಸಂಬಂಧಿಸಿದ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ, 7 ರೊಳಗೆ ಜಿಲ್ಲಾ ಮಟ್ಟದ ಎಂಸಿಎಂಸಿ ಗೆ ಅರ್ಜಿ ಸಲ್ಲಿಸಬೇಕು. ವಿದ್ಯುನ್ಮಾನ ಮಾಧ್ಯಮಗಳಿಗೆ…

Read More