ಮಡಿಕೇರಿ ಜೂ.14 : ಮೇಕೇರಿಯ ರೆಹಮಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
ಲೇಖಕ: admin
ಮಡಿಕೇರಿ ಜೂ.14 : ಆಲೂರು ಸಿದ್ದಾಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಸ್ತಾನಿರುವ ನಿರುಪಯುಕ್ತ ಸಾಮಾಗ್ರಿಗಳು, ಯಂತ್ರೋಪಕರಣಗಳನ್ನು ಎಲ್ಲಿ, ಹೇಗಿವೆಯೋ, ಅದೇ ಸ್ಥಿತಿಯಲ್ಲಿ ಜುಲೈ, 11 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಆಲೂರು ಸಿದ್ದಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜೂ.14 : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಸರ್ವರ್ ಅನ್ನು ಜೂ.28 ರಿಂದ ಸ್ಥಗಿತಗೊಳಿಸಲಾಗುತ್ತದೆ. ಹೀಗಾಗಿ ಜೂನ್ ತಿಂಗಳ ಕೊನೆಯ ಮೂರು ದಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಜೂ.27 ರಂದು ಪಡಿತರ ಪಡೆಯಲು ಕೊನೆಯ ದಿನ ಆಗಿದೆ. ಜಿಲ್ಲೆಯ ಆದ್ಯತಾ (ಬಿಪಿಎಲ್ ಮತ್ತು ಎಎವೈ) ಪಡಿತರ ಚೀಟಿ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಜೂನ್ ತಿಂಗಳ ಪಡಿತರವನ್ನು ಜೂ.27 ರೊಳಗೆ ಪಡೆಯುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ತಿಳಿಸಿದ್ದಾರೆ.
ಮಡಿಕೇರಿ ಜೂ.14 : ತಾಲೂಕಿನ ಸಂಪಾಜೆ ಹೋಬಳಿ ಮದೆ ಗ್ರಾಮದ ಸರ್ವೇ ನಂಬರ್ 98/1ಪಿ1ರ 1.50 ಎಕರೆ ಜಾಗವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ನಿವೇಶನ ಉದ್ದೇಶಕ್ಕೆ ಹಾಗೂ ಕಾಟಕೇರಿ ಗ್ರಾಮದ ಸರ್ವೇ ನಂಬರ್ 115/1ರ 1.50 ಎಕರೆ ಜಾಗವನ್ನು ನಿವೇಶನ ಉದ್ದೇಶಕ್ಕೆ ಮಡಿಕೇರಿ ತಾ.ಪಂ.ಇಒ ಅವರ ಹೆಸರಿಗೆ ಜಾಗ ಕಾಯ್ದಿರಿಸಿ ಆದೇಶಿಸಿ ಮದೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಡಿಕೇರಿ ಜೂ.14 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸ್ನಾತಕೋತ್ತರ ಕೇಂದ್ರ, ಕೊಡಗು ವಿಶ್ವವಿದ್ಯಾನಿಲಯ ಚಿಕ್ಕಅಳುವಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ, ಸೋಮವಾರಪೇಟೆ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಶಾಖೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಕುಶಾಲನಗರ ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ವಾಣಿಜ್ಯೋದ್ಯಮಿಗಳ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ಚಿಕ್ಕ ಅಳುವಾರದ ಕೊಡಗು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ನಡೆಯಿತು. ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ಉದ್ಘಾಟಿಸಿ ಮಾತನಾಡಿ, ರಕ್ತದಾನ ಶ್ರೇಷ್ಠದಾನವಾಗಿದ್ದು, ಯುವಜನತೆ ಮುಂದೆ ಬಂದು ರಕ್ತದಾನ ಮಾಡುವ ಮೂಲಕ ಮಾದರಿಯಾಗುವಂತೆ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮಾತನಾಡಿ, ಕಾರ್ಲ್ ಲ್ಯಾಂಡ್ಸ್ಟೀನರ್ ರಕ್ತದ ಗುಂಪನ್ನು ಕಂಡುಹಿಡಿದ ವಿಜ್ಞಾನಿ. ಇವರ…
ಮಡಿಕೇರಿ ಜೂ.14 : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸದಸ್ಯರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು. ಮೀಸಲಾತಿ ಸ್ಥಾನ ವಿವರ ಇಂತಿದೆ : ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ಮಕ್ಕಂದೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ), ಕಳಕೇರಿ ನಿಡುಗಣೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಕಡಗದಾಳು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮರಗೋಡು ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹೊಸ್ಕೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕಾಂತೂರು ಮೂರ್ನಾಡು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಹೊದ್ದೂರು ಅಧ್ಯಕ್ಷ(ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಹಾಕತ್ತೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಎಸ್ಸಿ ಮಹಿಳೆ), ಮೇಕೇರಿ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ (ಎಸ್ಸಿ), ಬೆಟ್ಟಗೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮದೆ ಅಧ್ಯಕ್ಷ…
ಮಡಿಕೇರಿ ಜೂ.14 : ಕೊಡಗು ಜಿ.ಪಂ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪೊನ್ನಂಪೇಟೆಯಲ್ಲಿ ನಿರ್ಮಾಣವಾಗಲಿರುವ ನೂತನ ಪಶುವೈದ್ಯ ಆಸ್ಪತ್ರೆಯ ಕಟ್ಟಡಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಭೂಮಿ ಪೂಜೆ ನೆರವೇರಿಸಿದರು. ಕರ್ನಾಟಕ ಸರ್ಕಾರದಿಂದ ಮಂಜೂರಾಗಿರುವ ರೂ.53 ಲಕ್ಷ ಅನುದಾನದಲ್ಲಿ ನೂತನ ಪಶುವೈದ್ಯ ಆಸ್ಪತ್ರೆಯು ನಿರ್ಮಾಣವಾಗಲಿದ್ದು, ಸಾರ್ವಜನಿಕರಿಗೆ ಮುಂದಿನ ದಿನಗಳಲ್ಲಿ ಇದರ ಸೇವೆ ಲಭ್ಯವಾಗಲಿದೆ ಎಂದು ಪಶುವೈದ್ಯ ಇಲಾಖೆಯ ಕೊಡಗು ಜಿಲ್ಲಾ ಉಪ ನಿರ್ದೇಶಕ ಡಾ.ಲಿಂಗರಾಜು ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ನೂತನ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಎ.ಎಸ್.ಪೊನ್ನಣ್ಣ, ಸರ್ಕಾರದ ಕಾರ್ಯಕ್ರಮಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು. ಕಾಮಗಾರಿಯ ಗುಣಮಟ್ಟ ಉತ್ತಮವಾಗಿರಬೇಕು. ಇಲಾಖೆಯು ತಿಳಿಸಿರುವ ನಿರ್ದೇಶನದಂತೆ ಕಾಮಗಾರಿಯ 6 ತಿಂಗಳೊಳಗೆ ಪೂರೈಸಿ ನಾಗರಿಕರಿಗೆ ಇದರ ಪ್ರಯೋಜನ ದೊರೆಯಲು ಅನುವು ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮೇಲುಸ್ತುವಾರಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಂತರ ಆಸ್ಪತ್ರೆಯ…
ಮಡಿಕೇರಿ ಜೂ.14 : ಓದುವ ಹವ್ಯಾಸ ಬದುಕಿಗೊಂದು ಅರ್ಥ ಕಲ್ಪಿಸುತ್ತದೆ, ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ ಕೊಡವ ಕಾದಂಬರಿ, ಕೊಡವ ಮಕ್ಕಡ ಕೂಟದ 66ನೇ ಕೃತಿ “ಬೇರ್” ನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಮನುಷ್ಯನ ಬದುಕು ಏನು ಎಂಬುವುದನ್ನು ಅರಿತುಕೊಳ್ಳಲು ಪುಸ್ತಕಗಳು ಸಹಕಾರಿಯಾಗಿವೆ. ಆದ್ದರಿಂದ ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಪುಸ್ತಕಗಳನ್ನು ಓದುವಂತಾಗಬೇಕು, ಯುವಕ, ಯುವತಿಯರಿಗೆ ಮಾರ್ಗದರ್ಶನ ನೀಡುವಂತಹ ಪುಸ್ತಕಗಳು ಪ್ರಕಟಗೊಳ್ಳಬೇಕು ಎಂದರು. ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರು ಅನೇಕ ಉತ್ಸಾಹಿ ಸಾಹಿತಿಗಳಿಗೆ ಪ್ರೋತ್ಸಾಹವನ್ನು ನೀಡಿದ್ದಾರೆ. ಇಲ್ಲಿಯವರೆಗೆ 66 ಪುಸ್ತಕಗಳನ್ನು ಹೊರ ತಂದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು, ಕೊಡಗಿನ ಸಾಹಿತ್ಯ ಕ್ಷೇತದ ಬೆಳವಣಿಗೆಯಲ್ಲಿ ಇವರ ಪಾತ್ರವೂ ಪ್ರಮುಖವಾಗಿದೆ ಎಂದು ವೀಣಾ ಅಚ್ಚಯ್ಯ ಶ್ಲಾಘಿಸಿದರು.…
ಮಡಿಕೇರಿ ಜೂ.14 : ವಿದ್ಯುತ್ ದರವನ್ನು ನೂತನ ಕಾಂಗ್ರೆಸ್ ಸರ್ಕಾರವೇ ಏರಿಕೆ ಮಾಡಿದ್ದು, ವಿನಾಕಾರಣ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ವಿದ್ಯುತ್ ದರ ಇಳಿಕೆಗೆ ಒತ್ತಾಯಿಸಿ ಪಕ್ಷದ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಮೂಲಕ ಕಾಂಗ್ರೆಸ್ ಜನರ ಹಾದಿ ತಪ್ಪಿಸುತ್ತಿದೆ ಎಂದು ಟೀಕಿಸಿದರು. ವಿದ್ಯುತ್ ದರವನ್ನು ಇಳಿಕೆ ಮಾಡುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ದುಬಾರಿ ವಿದ್ಯುತ್ ದರದಿಂದ ಬೇಸತ್ತಿರುವ ಜನರ ಹಿತ ದೃಷ್ಟಿಯಿಂದ ದರವನ್ನು ತಕ್ಷಣ ಇಳಿಕೆ ಮಾಡಬೇಕು. ತಪ್ಪಿದಲ್ಲಿ ದರ ಇಳಿಕೆಯಾಗುವಲ್ಲಿಯವರೆಗೆ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದರು. ಕುಡಿಯುವ ನೀರಿನ ಸಮಸ್ಯೆಯನ್ನು ಆಲಿಸಲು ಮಡಿಕೇರಿಯ ನೂತನ ಶಾಸಕರು ಕೂಟುಹೊಳೆಗೆ ಭೇಟಿ ನೀಡಿದ್ದ ಸಂದರ್ಭ ಮಡಿಕೇರಿ ನಗರಸಭೆಯ ಆಡಳಿತ ಮಂಡಳಿ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿದ್ದಾರೆ. ತಮ್ಮ…
ಮಡಿಕೇರಿ ಜೂ.14 : ಮಡಿಕೇರಿ ನಗರದ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಲು ಹಳೆಯ ಪೈಪ್ ಲೈನ್ ಗಳನ್ನು ಬದಲಾಯಿಸಿ ನೂತನ ಪೈಪ್ ಲೈನ್ ಗಳ ಅಳವಡಿಕೆಗೆ 60 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ 20 ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿದ ಹಣವನ್ನು ಬಿಡುಗಡೆ ಮಾಡುವಂತೆ ನೂತನ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 120 ಕಿ.ಮೀ ನಷ್ಟು ನೂತನ ಪೈಪ್ ಗಳನ್ನು ಅಳವಡಿಸಲು ಯೋಜನೆ ರೂಪಿಸಲಾಗಿದ್ದು, ಸರ್ಕಾರದ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದರು. ನಗರದ ಜನರಿಗೆ ಯಾವುದೇ ಅಡಚಣೆ ಇಲ್ಲದೆ ಕುಡಿಯುವ ನೀರು ಒದಗಿಸಲು ನಗರಸಭೆ ಬದ್ಧವಾಗಿದೆ. ಕಳೆದ ಕೆಲವು ದಿನಗಳ ಕಾಲ ತಾಂತ್ರಿಕ ಕಾರಣಗಳಿಂದ ನೀರಿನ ಸಮಸ್ಯೆ ಎದುರಾಗಿತ್ತು. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆ, ಮೋಟಾರ್ ಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ಕೈಗೊಳ್ಳಲಾಗಿದೆ. ನೀರು ಸರಬರಾಜಿನಲ್ಲಿ ವ್ಯತ್ಯಯ…






