ಮಡಿಕೇರಿ ಮೇ 4 : ಗೋಣಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ದಿ ಶೂನ್ಯವಾಗಿದ್ದು, ಖಾಸಗಿ ಬಸ್ಸು ನಿಲ್ದಾಣವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ ಆರೋಪಿಸಿದ್ದಾರೆ. ವಿರಾಜಪೇಟೆಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗೋಣಿಕೊಪ್ಪ ವಾಣಿಜ್ಯ ನಗರಿಯಾಗಿದ್ದು ಪ್ರತಿದಿನ ಸಾವಿರಾರು ಸಾರ್ವಜನಿಕರು ನಗರಕ್ಕೆ ಬಂದು ಹೋಗುತ್ತಾರೆ. 100ಕ್ಕೂ ಅಧಿಕ ಖಾಸಗಿ ಹಾಗು ರಾಜ್ಯ ರಸೆತ ಸಾರಿಗೆ ಸಂಸ್ಥೆ ಬಸ್ಸುಗಳು ಬಂದು ಹೋಗುತ್ತಿದೆ. ಬಸ್ಸು ನಿಲುಗಡೆ ಮಾಡಲು ಬಸ್ಸು ನಿಲ್ದಾಣ ಇಲ್ಲ. ನಗರದ ಸುತ್ತಮುತ್ತ ವಾರ್ಡ್ಗಳಲ್ಲಿ 198 ಕುಟುಂಬಗಳು ಇಂದಿಗೂ ಕೂಡ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದಾರೆ. ಕಳೆದ 12 ವರ್ಷಗಳ ಹಿಂದೆ ನಗರ ಹಾಗು ಹೊಸೂರು, ಹಾತೂರು ಅರುವತೋಕ್ಲು ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದರೂ ಇವರೆಗೆ ಕಾರ್ಯಗತಗೊಂಡಿಲ್ಲ. ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪ ಕೇವಲ ಪ್ರಸ್ತಾಪವಾಗಿಯೇ ಇದೆ ಎಂದು ಟೀಕಿಸಿದರು. ಕಾನೂನು ಘಟಕದ ಮಾಜಿ ಅಧ್ಯಕ್ಷ ಡಿ.ಸಿ.ಧ್ರುವ ಕುಮಾರ್ ಮಾತನಾಡಿ…
ಲೇಖಕ: admin
ಮಡಿಕೇರಿ ಮೇ 4 : ಮೂರ್ನಾಡುವಿನಲ್ಲಿ ಮಡಿಕೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರ ಪರ ಮತಯಾಚನೆ ನಡೆಯಿತು. ಜೆಡಿಎಸ್ ನ ವಿರಾಜಪೇಟೆ ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ ಮಡಿಕೇರಿ ಕ್ಷೇತ್ರದಲ್ಲಿ ಮುತ್ತಪ್ಪ ಅವರಿಗೆ ಇರುವ ಜನಬೆಂಬಲ ನೋಡಿದರೆ 25 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಭೇರಿ ಬಾರಿಸಲಿದ್ದಾರೆ. ಈ ಬಾರಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ವಿರಾಜಪೇಟೆ ತಾಲೂಕು ಕಾರ್ಯದರ್ಶಿ ಹರ್ಷ ಟಿ.ಆರ್, ಯುವ ಘಟಕದ ಅಧ್ಯಕ್ಷ ಸೈಫೂದ್ದೀನ್, ಯೂಸೆಫ್ ಕೊಂಡAಗೇರಿ ಹಾಗೂ ಮುಖಂಡರಾದ ಬಲ್ಲಚಂಡ ಗೌತಮ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಾಸಿರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಡಿಕೇರಿ ಮೇ 4 : ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆದ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಭವ್ಯ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ತೆರಳಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಚಲನಚಿತ್ರ ನಟ ದರ್ಶನ್ ತೂಗುದೀಪ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಮತ್ತು ಗಣ್ಯ ಅತಿಥಿಗಳು ಮಂಗಲಸೂತ್ರವನ್ನು ವಿತರಿಸಿದರು 1972 ರಲ್ಲಿ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದು ಪ್ರತಿವರ್ಷ ನಡೆಸಲಾಗುತ್ತದೆ. ಕಳೆದ ವರ್ಷದವರೆಗೆ 12,576 ಜೊತೆ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. * ಈವರೆಗೆ ಒಂದು ಕೂಡಾ ವಿಚ್ಛೇದನ ಪ್ರಕರಣ ವರದಿಯಾಗಿಲ್ಲ ಎಂಬುದು ಗಮನಾರ್ಹವಾಗಿದೆ.
ಮಡಿಕೇರಿ ಮೇ 4 : ಟಿ.ಶೆಟ್ಟಿಗೇರಿಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರ ಮೆರವಣಿಗೆ ಮತ್ತು ಸಭೆ ನಡೆಸಲಾಯಿತು. ಮಂಡಲ ಅದ್ಯಕ್ಷ ನೆಲ್ಲೀರ ಚಲನ್ ಕುಮಾರ್, ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ ಬೋಪಯ್ಯ, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ರಾಜ್ಯ ಶಿಸ್ತು ಸಮಿತಿ ಸದಸ್ಯರು ರೀನಾ ಪ್ರಕಾಶ್, ರಾಜ್ಯ ಕೃಷಿ ಮೋರ್ಚ ಸದಸ್ಯ ಯಮುನಾ ಚಂಗಪ್ಪ, ಹುದಿಕೇರಿ ಪ್ರಭಾರಿ ಕಟ್ಟೇರ ಈಶ್ವರ ಹಾಗೂ ಮತ್ತು ಟಿ.ಶೆಟ್ಟಿಗೇರಿ ಪಂಚಾಯತಿ ಒಳಪಟ್ಟ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತಿರಿದ್ದರು.
ಮಡಿಕೇರಿ ಮೇ 4 : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಪ್ರಗತಿಯಲ್ಲಿ ವಿಶ್ವದ ಗಮನ ಸೆಳೆದಿದೆ. ಮೋದಿ ನಾಯಕತ್ವದ ಭಾರತವನ್ನು ಇಡೀ ಜಗತ್ತೇ ತಿರುಗಿ ನೋಡುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದ್ದಾರೆ. ಬಿಳಿಗೇರಿಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತಾನಾಡಿದ ಅವರು ಶ್ರೀಲಂಕಾ, ಪಾಕಿಸ್ತಾನದಲ್ಲಿರುವ ಪರಿಸ್ಥಿತಿ ನಮಗೆಲ್ಲಾ ಗೊತ್ತೇ ಇದೆ. ಪಾಕಿಸ್ತಾನದಲ್ಲಿ ಗುಂಡು ಹಾರಿಸಿ ಕೊಂದು, ಜನರನ್ನು ನಿಯಂತ್ರಿಸಿ ಆಹಾರವನ್ನು ವಿತರಿಸುವ ಪರಿಸ್ಥಿತಿ ಇದೆ. ಶ್ರೀಲಂಕಾದಲ್ಲಿ ಅಡುಗೆ ಮಾಡಲೂ ಅನಿಲ ಸಿಗುತ್ತಿಲ್ಲ. ಜನ ದಂಗೆ ಎದ್ದು, ಅಧ್ಯಕ್ಷರೇ ದೇಶ ಬಿಟ್ಟು ಹೋಗಬೇಕಾಯಿತು. ಆದರೆ ದೇಶದಲ್ಲಿ ಬಿಜೆಪಿ ಆಳ್ವಿಕೆಯಿರುವ ರಾಜ್ಯಗಳಲ್ಲಿ ರಾಜ್ಯದಲ್ಲಿ ಪೆಟ್ರೋಲ್ ಕಡಿಮೆ ಬೆಲೆಗೆ ಸಿಗುತ್ತಿದೆ; ಕರ್ನಾಟಕದಲ್ಲಿ ದಕ್ಷಿಣದ ಇತರ ರಾಜ್ಯಗಳಿಗಿಂತ ತೈಲ ಬೆಲೆ ಕಡಿಮೆ ಇದೆ ಎಂದರು. ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಮುಂದುವೆರೆದ ರಾಷ್ಟ್ರಗಳಲ್ಲಿ ಒಂದಾಗುವತ್ತ ಮುನ್ನುಗ್ಗುತ್ತಿದೆ. ಇಡೀ ಜಗತ್ತೇ ಭಾರತದತ್ತ ನೋಡುತ್ತಿದೆ. ಕಾಂಗ್ರೆಸ್ ಸರ್ಕಾರಗಳು 60 ವರ್ಷಗಳಲ್ಲಿ ಸಾಧಿಸದನ್ನು…
ಮಡಿಕೇರಿ ಮೇ 4 : ‘ಬೈನೋಬೈನ್ ಇಂಟರ್ನ್ಯಾಷನಲ್’ ವತಿಯಿಂದ ಇತ್ತೀಚೆಗೆ ದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನಡೆದ 41ನೇ ರಾಷ್ಟ್ರಮಟ್ಟದ “ಬ್ರೈನೋಬೈನ್ ಸ್ಪರ್ಧೆ-2023”ರಲ್ಲಿ ಮಡಿಕೇರಿಯ ಬ್ರೈನೋಬೈನ್ ಕೇಂದ್ರದ ನುಷ್ಕ ಕೊಡೆಂದರ ಹಾಗೂ ತ್ರಿಶಾ ಎ.ವೈ ಭಾಗವಹಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಬೈನೋಬೈನ್ ಇಂಟರ್ ನ್ಯಾಷನಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಮ್ ಹಾಗೂ ತಾಂತ್ರಿಕ ನಿರ್ದೇಶಕ ಸುಬ್ರಮಣ್ಯಮ್ ಅವರು ವಿಜೇತರಿಗೆ ಪದಕ ಪ್ರದಾನ ಮಾಡಿದರು. ಬೈನೋಬ್ರೆನ್ ಮಡಿಕೇರಿ ಕೇಂದ್ರದ ಮುಖ್ಯಸ್ಥರು ಹಾಗೂ ತರಬೇತುದಾರರಾದ ಮಾಪಂಗಡ ಕವಿತಾ ಕರುಂಬಯ್ಯ ಅವರಿಂದ ತರಬೇತಿ ಪಡೆದಿರುವ ಈ ವಿದ್ಯಾರ್ಥಿಗಳು ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಚಿನ್ನದ ಪದಕ ಗೆದ್ದಿರುವ ವಿದ್ಯಾರ್ಥಿಗಳ ಸಾಧನೆ ಅಮೋಘ ಎಂದು ಹರ್ಷ ವ್ಯಕ್ತಪಡಿಸಿರುವ ಕವಿತಾ ಕರುಂಬಯ್ಯ, ಇದರ ಹೆಗ್ಗಳಿಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಲ್ಲಬೇಕು ಎಂದು ಹೇಳಿದ್ದಾರೆ. 5 ವರ್ಷದ ನುಷ್ಕ ಕೊಡೆಂದೆರ ಮಡಿಕೇರಿಯ ಕೊಡೆಂದರೆ ವಿಕ್ರಮ್ ಕುಟ್ಟಯ್ಯ ಹಾಗೂ ಕಾವ್ಯ ದಂಪತಿ ಪುತ್ರಿಯಾಗಿದ್ದು, ಟೀಟೋಸ್ ಪ್ಲೇ…
ಮಡಿಕೇರಿ ಮೇ 3 : ಚುನಾವಣೆ ಸಂದರ್ಭ ರಾಜೀನಾಮೆ ಪರ್ವ ಸಾಮಾನ್ಯ, ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಮತ್ತೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾದರೆ ಅವರ ಸಲಹೆಗಳನ್ನು ಪಡೆಯಲು ನಾವು ಬದ್ಧರಾಗಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸ್ಪರ್ಧೆಯಲ್ಲಿದ್ದ ಏಳು ಕಾಂಗ್ರೆಸ್ಸಿಗರಲ್ಲಿ ಓರ್ವರನ್ನು ಒಮ್ಮತದಿಂದ ಆಯ್ಕೆ ಮಾಡಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಗೆಲ್ಲಿಸಿಕೊಂಡು ಬರುವ ಕುರಿತು ಸಲಹೆ ನೀಡಿದ ಜೀವಿಜಯ ಅವರೇ ಇದೀಗ ರಾಜೀನಾಮೆ ನೀಡಿರುವುದು ಸರಿಯಲ್ಲಿ. ಟಿಕೆಟ್ ಸಿಗಲಿಲ್ಲ ಎನ್ನುವ ಕಾರಣಕ್ಕೆ ಈ ರೀತಿ ನಡೆದುಕೊಂಡಿರುವುದು ಬೇಸರವನ್ನುಂಟು ಮಾಡಿದೆ ಎಂದರು. ಜಾತ್ಯತೀತ ನೆಲೆಗಟ್ಟಿನ ರಾಜಕಾರಣ ಮಾಡಿಕೊಂಡು ಬಂದವರು ಇದೀಗ ಬಿಜೆಪಿ ಅಭ್ಯರ್ಥಿ ಅಪ್ಪಚ್ಚುರಂಜನ್ ಹಾಗೂ ಜೆಡಿಎಸ್ ಅಭ್ಯರ್ಥಿ ಮುತ್ತಪ್ಪ ಅವರ ಪರ ಮಾತನಾಡುತ್ತಿದ್ದಾರೆ. ಈಗ ಜೀವಿಜಯ ಅವರ ಜಾತ್ಯತೀತ ಸಿದ್ಧಾಂತ ಎಲ್ಲಿಗೆ ಹೋಯಿತು ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿಯನ್ನು ಹೊರಗಿನವರು ಎಂದು…
ಮಡಿಕೇರಿ ಏ.3 : ಡಬಲ್ ಎಂಜಿನ್ ಸರ್ಕಾರ ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕಾಗಿ ಒತ್ತು ನೀಡಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರದ ಜನಪರ ಯೋಜನೆಗಳು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಅನಿತಾ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಟಿ ಬಚಾವೋ, ಬೇಟಿ ಪಡಾವೋ ಸೇರಿದಂತೆ ಹಲವು ಯೋಜನೆಗಳ ಮೂಲಕ ನಾರಿಶಕ್ತಿಯ ಅಭ್ಯುದಯಕ್ಕೆ ಕಂಕಣಬದ್ಧರಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದುಡಿಯುತ್ತಿದೆ ಎಂದರು. 2014 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರದಲ್ಲಿ ಅತಿ ಹೆಚ್ಚು ಮಹಿಳಾ ಮಂತ್ರಿಗಳನ್ನು ಹೊಂದಿರುವ ವಿಶಿಷ್ಟ ಹೆಗ್ಗಳಿಕೆಗೆ ಪಾತ್ರವಾಗಿದೆ. ಡಬಲ್ ಎಂಜಿನ್ ಸರ್ಕಾರದಿಂದ ಮಹಿಳೆಯರು ಮಹಾಶಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಆರೋಗ್ಯ, ಜೀವನೋಪಾಯ ಮತ್ತು ಶಿಕ್ಷಣದಿಂದ ಜೀವನದ ಗುಣಮಟ್ಟ ಸುಧಾರಿಸಿದೆ. ಜಲಜೀವನ್ ಮಿಷನ್ ಮೂಲಕ ನೀರಿನ ಸಂಪರ್ಕ, ಸ್ವಚ್ಛಭಾರತ್ ಮಿಷನ್, ಉಜ್ವಲ ಯೋಜನೆಯಿಂದ ಉಚಿತ ಎಲ್ಪಿಜಿ ಸಂಪರ್ಕ, ಗರ್ಭಿಣಿ ಮಹಿಳೆಯರ ಸುಧಾರಣೆಗೆ ಮಾತೃಪೂರ್ಣ ಯೋಜನೆ, ಮಾತೃ…
ಮಡಿಕೇರಿ ಮೇ 3 : ವಿಧಾನಸಭಾ ಚುನಾವಣೆಯಲ್ಲಿ ಪ್ರಜಾ ಪರಿವರ್ತನಾ ವೇದಿಕೆಯ ಕೊಡಗು ಜಿಲ್ಲಾ ಘಟಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಲಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಸ್.ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆಯ ರಾಜ್ಯ ಸಮಿತಿಯ ನಿರ್ದೇಶನದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ವೇದಿಕೆಯ ಎಲ್ಲಾ ಮತದಾರರು, ಕಾರ್ಯಕರ್ತರು, ಸಂಘಟನೆಯ ಅಭಿಮಾನಿಗಳು ಹಾಗೂ ಜಿಲ್ಲೆಯ ಸಮಸ್ತ ಮತದಾರರು ಈ ಬಾರಿಯ ಬದಲಾವಣೆಯ ದೃಷ್ಟಿಯಿಂದ ತಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ ಪಕ್ಷದ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಗಳಿಗೆ ನೀಡಿ ಜಯಶೀಲರನ್ನಾಗಿ ಮಾಡಿ ಜನ ಸೇವೆಗೆ ಅವಕಾಶವನ್ನು ಮಾಡಿಕೊಡಬೇಕಾಗಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎ.ಗಣೇಶ್, ಸಂಘಟನಾ ಕಾರ್ಯದರ್ಶಿ ಹೊನ್ನಪ್ಪ, ಜಿಲ್ಲಾ ಖಜಾಂಚಿ ಜಿ.ರಾಮ, ಮುಖಂಡರಾದ ಸುನೀಲ್ ಉಪಸ್ಥಿತರಿದ್ದರು.
ಮಡಿಕೇರಿ ಮೇ 3 : ಕರ್ನಾಟಕ ರಾಜ್ಯದಲ್ಲಿ ಪೂರ್ಣ ಬಹುಮತದ ಭಾರತೀಯ ಜನತಾ ಪಾರ್ಟಿಯ ಸರಕಾರ ಅಧಿಕಾರಕ್ಕೆ ಬರಬೇಕೆಂದು ಜನತೆ ಬಯಸಿದ್ದು, ಈ ಚುನಾವಣೆಯಲ್ಲಿ ಪಕ್ಷ 125 ರಿಂದ 130 ಸ್ಥಾನಗಳನ್ನು ಪಡೆಯುವುದು ಖಚಿತವೆಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬಲ್ ಇಂಜಿನ್ ಸರ್ಕಾರ, ತನ್ನ ಆಡಳಿತಾವಧಿಯಲ್ಲಿ ಜನಪರವಾದ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿದೆಯೆಂದು ತಿಳಿಸಿದರು. ರಾಜ್ಯದ ಬಿಜೆಪಿ ಸರ್ಕಾರ ಸಮಾಜದ ವಿವಿಧ ಸ್ತರಗಳ ಜನರ ಪ್ರಗತಿಗಾಗಿ ಹತ್ತಾರು ಪ್ಯಾಕೇಜ್ಗಳನ್ನು ವಿವಿಧ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರ ನೀಡಿದೆ. ಕೋವಿಡ್ ಕಾಲದಲ್ಲಿ ಸರ್ಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದರು. ಮಡಿಕೇರಿ ಕ್ಷೇತ್ರದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿರಾಜಪೇಟೆ ಕ್ಷೇತ್ರದ ಕೆ.ಜಿ.ಬೋಪಯ್ಯ ಅವರು ಚುನಾವಣೆಯಲ್ಲಿ ನಿಚ್ಚಳ ಬಹುಮತದೊಂದಿಗೆ ನಿರಾಯಾಸ ಗೆಲುವನ್ನು ದಾಖಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್…






