ಮಡಿಕೇರಿ ಜೂ.16 NEWS DESK : ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಹಾಗೂ ಸಹಾಯಕಿ ಹುದ್ದೆಗಳಿಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಮಡಿಕೇರಿ ಚೈನ್ಗೇಟ್ ಹತ್ತಿರದಲ್ಲಿರುವ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಪೂರಕ ದಾಖಲಾತಿಯೊಂದಿಗೆ ಜೂನ್, 22 ರೊಳಗೆ ಕಚೇರಿ ವೇಳೆ ಸಂಜೆ 5.30ರ ಒಳಗೆ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಡಿಕೇರಿಯಲ್ಲಿ ದೂ.ಸಂ.08272-295087 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ. :: ಸೋಮವಾರಪೇಟೆ :: ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆ ಇಲ್ಲಿಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರ 15 ಹುದ್ದೆಗೆ ಹಾಗೂ 63 ಸಹಾಯಕಿಯರ ಹುದ್ದೆಗಳಿಗೆ…
ಲೇಖಕ: admin
ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್, 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪೃಥ್ವಿ ಜ್ಯುವೆಲ್ಲರಿ ಕುಶಾಲನಗರ, ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ‘ಪೃಥ್ವಿ ಜ್ಯುವೆಲ್ಲರಿ ಕುಶಾಲನಗರ’ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.
ಮಡಿಕೇರಿ ಜೂ.16 NEWS DESK : ಕೊಡಗು ಜಿಲ್ಲೆಯಲ್ಲಿ ಹೋಂ-ಸ್ಟೇ ನಡೆಸುವ ಮಾಲೀಕರು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನಿಯಮಾನುಸಾರ ಹೋಂ-ಸ್ಟೇ ನೋಂದಣಿ ಮಾಡಿಕೊಳ್ಳಲು ಸರ್ಕಾರದ ಪ್ರವಾಸೋದ್ಯಮ ನೀತಿ ಹಾಗೂ ಮಾರ್ಗಸೂಚಿಗಳಿಗೆ ಬದ್ಧರಿದ್ದಲ್ಲಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ನಿರಾಕ್ಷೇಪಣಾ ಪತ್ರಗಳನ್ನು ಪಡೆದುಕೊಂಡಿರುವ ಮಾಲೀಕರಿಗೆ ಪ್ರವಾಸೋದ್ಯಮ ಇಲಾಖೆಯಿಂದ 5 ವರ್ಷದ ಅವಧಿಗೆ ಪರವಾನಿಗೆಯನ್ನು ನೀಡಲಾಗಿದೆ. ಹೋಂ-ಸ್ಟೇ ನಡೆಸುವ ಮಾಲೀಕರು ಪ್ರವಾಸಿಗರ ಮನೋರಂಜನೆಗಾಗಿ ಹೋಂ-ಸ್ಟೇಗಳಲ್ಲಿ ಈಜುಕೊಳ, ಜಿಪ್ಲೈನ್, ಕಾಯಾಕಿಂಗ್ ಮತ್ತು ಇತರೆ ಸಾಹಸ ಚಟುವಟಿಕೆ ಅಳವಡಿಸಿಕೊಂಡಿರುತ್ತಾರೆ. ಈ ಚಟುವಟಿಕೆಗಳನ್ನು ನಡೆಸುವ ಸಂಬಂಧ ಸರಿಯಾದ ಮಾರ್ಗಸೂಚಿ ಅನುಸರಿಸುವುದು ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು. ಇವುಗಳಿಂದ ಪ್ರವಾಸಿಗರಿಗೆ ತೊಂದರೆಗಳು ಉಂಟಾದಲ್ಲಿ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ. ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಸುವಂತಿಲ್ಲ ಎಂದು ಈಗಾಗಲೇ ತಿಳಿಸಿದರೂ ಸಹ, ಹಲವು ಹೋಂ-ಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಕೆಯಲ್ಲಿರುವುದು ಕಂಡು ಬಂದಿರುತ್ತದೆ. ಗ್ಯಾಸ್ ಗೀಸರ್ ಬಳಕೆಯಿಂದ ಅನಾಹುತಗಳು ಸಂಭವಿಸಿದಲ್ಲಿ ಹೋಂ-ಸ್ಟೇ ಮಾಲೀಕರೇ ನೇರ ಹೊಣೆಗಾರರಾಗಿರುತ್ತಾರೆ. ಇಲಾಖೆಯು ನೀಡುವ ಮಾರ್ಗಸೂಚಿ…
ಮಡಿಕೇರಿ ಜೂ.16 NEWS DESK : ಕೊಡಗು ಜಿ ಮರಾಠ-ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಸಮಾಜಬಾಂಧವರ ಸಹಕಾರ ಅಗತ್ಯ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ್ ತಿಳಿಸಿದರು. ಮಡಿಕೇರಿ ತಾಲ್ಲೂಕಿನ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಕೊಡಗು ಜಿ ಮರಾಠ/ಮರಾಟಿ ಸಮಾಜ ಸೇವಾ ಸಂಘದ 30ನೇ ವರ್ಷದ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸುಮಾರು 4ಕೋಟಿ ವೆಚ್ಚದಲ್ಲಿ ಸಂಘದ ಸಭಾಭವನ ನಿರ್ಮಾಣವಾಗಲಿದೆ. ಈಗಾಗಲೇ ಸರ್ಕಾರದಿಂದ ೨ ಕೋಟಿ ಅನುದಾನ ಘೋಷಣೆಯಾಗಿದ್ದು, ೬೫ ಲಕ್ಷ ಸಿಕ್ಕಿದೆ. 1.35ಕೋಟಿ ಹಣ ಬರಲು ಬಾಕಿಯಿದೆ. ಸರ್ಕಾರದ ಹಣದೊಂದಿಗೆ ಸಮಾಜಬಾಂಧವರ ಸಹಕಾರದೊಂದಿಗೆ 1.60 ಕೋಟಿ ವೆಚ್ಚದಲ್ಲಿ ಸಭಾಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನುಳಿದ ಕಾಮಗಾರಿ ನಡೆಸಲು ಸಮಾಜಬಾಂಧವರ ಸಹಕಾರ ಅಗತ್ಯವಾಗಿದ್ದು, ಪ್ರತಿ ಕುಟುಂಬದಿಂದ 5,000 ನೀಡುವಂತೆ ಮನವಿ ಮಾಡಿದರು. ನಮ್ಮ ಜನಾಂಗಬಾಂಧವರಲ್ಲಿ ಸಾಕಷ್ಟು ಯುವಕರು ಇದ್ದಾರೆ. ಆದರೆ, ಸಂಘದ ಕಾರ್ಯಚಟುವಟಿಕೆಯಲ್ಲಿ ಪಾಲ್ಗೊಳ್ಳು ಹಿಂದೇಟು ಹಾಕುತ್ತಿದ್ದಾರೆ. ಇವು ಆಗಬಾರದು. ಮುಂದಿನ ದಿನಗಳಲ್ಲಿ ಯುವಕರು ಹೆಚ್ಚಿನ…
ಮಡಿಕೇರಿ ಜೂ.16 NEWS DESK : 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರತಿ ವರ್ಷದಂತೆ ಜೂನ್, 21 ರಂದು ಆಯುಷ್ ಮಂತ್ರಾಲಯ, ಭಾರತ ಸರ್ಕಾರ, ಆಯುಷ್ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ. 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಕೊಡಗು ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಯೋಗ ಒಕ್ಕೂಟ, ಮಡಿಕೇರಿ, ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಪೋಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಿಂದ ಹಳೆಯ ಖಾಸಗಿ ಬಸ್ ನಿಲ್ದಾಣ ಮೂಲಕ ಗಾಂಧಿ ಮೈದಾನದವರೆಗೆ ಜಾಥಾ ನಡೆಯಿತು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಜಾಥಾಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಶ್ರೀನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ.ಜಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ.ರಾಮಚಂದ್ರ ಕಾಮತ್, ಶಾಲಾ ಶಿಕ್ಷಣ ಇಲಾಖೆ,…
ಮಡಿಕೇರಿ ಜೂ.16 NEWS DESK : ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಮತ್ತು ಹೊಸ ಮತದಾರರನ್ನು ಸೇರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ. ಆದ್ದರಿಂದ ಬೂತ್ಮಟ್ಟದ ಏಜೆಂಟರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಆರ್.ಶ್ರೀಧರ್ ಅವರು ಹೇಳಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಮತಗಟ್ಟೆ ಏಜೆಂಟರುಗಳಿಗೆ ಎಸ್ಐಆರ್ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಏಜೆಂಟರು ಎಸ್ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಪಾರದರ್ಶಕವಾಗಿ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಹಕರಿಸಬೇಕು, ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು. ಕೈಬಿಟ್ಟ ಹೆಸರುಗಳನ್ನು ಮತ್ತೆ ಸೇರಿಸಲು ನಮೂನೆ ಭರ್ತಿ ಮಾಡಲು ಸಹಾಯ ಮಾಡಬೇಕು, ಮತಗಟ್ಟೆ ಹಂತದಲ್ಲಿನ ದೋಷಗಳನ್ನು ಗುರುತಿಸಿ, ಚುನಾವಣಾ ಅಧಿಕಾರಿಗಳಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡಬೇಕು ಎಂದು ಆರ್.ಶ್ರೀಧರ್ ಅವರು ತಿಳಿಸಿದರು. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು, ಮತದಾರರ ಮಾಹಿತಿ ನವೀಕರಣ, ಹೊಸ ಮತದಾರರ…
ಮಡಿಕೇರಿ NEWS DESK ಜೂ. 16: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ, ಮೈಸೂರು–ಕೊಡಗು ಭಾಗಕ್ಕೆ ಸಂಬಂಧಿಸಿದ ಎರಡು ಮಹತ್ವದ ವಿಷಯಗಳ ಕುರಿತು ಮನವಿ ಸಲ್ಲಿಸಿದರು. ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವುದು ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ (ನಗರ್ ವನ್) ಯೋಜನೆ ಜಾರಿಗೊಳಿಸುವುದು ಈ ಮನವಿಗಳ ಪ್ರಮುಖ ಉದ್ದೇಶವಾಗಿತ್ತು. *ಕೊಡಗಿನಲ್ಲಿ ಹೆಚ್ಚುತ್ತಿರುವ ಆನೆ–ಮಾನವ ಸಂಘರ್ಷಕ್ಕೆ ತುರ್ತು ಕ್ರಮ ಅಗತ್ಯ* ಸಭೆಯಲ್ಲಿ ಮಾತನಾಡಿದ ಯದುವೀರ್ ಒಡೆಯರ್ ಅವರು, ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆನೆಗಳು ಕೃಷಿ ಭೂಮಿಗಳು ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ನಿರಂತರವಾಗಿ ಹೆಚ್ಚುತ್ತಿದ್ದು, ಇದು ಜಿಲ್ಲೆಯ ಜನರ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಸಚಿವರ ಗಮನಕ್ಕೆ ತಂದರು. ಆನೆಗಳ ದಾಳಿಯಿಂದ ಮಾನವ ಜೀವಹಾನಿ, ಗಾಯಗಳು, ಬೆಳೆ ನಷ್ಟ, ಆಸ್ತಿ…
ಮಡಿಕೇರಿ ಜೂ.15 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು ಫೀಡರ್ನಲ್ಲಿ ಜೂ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಮುತ್ತಾರ್ಮುಡಿ, ಕಿಗ್ಗಾಲು, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಜೂ.15 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ ಶುಭಹಾರೈಸಿದರು. ಇದೇ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಿ ಸಹಕಾರ ಕೋರಿದರು.
ಮಡಿಕೇರಿ ಜೂ.15 NEWS DESK : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರ ಹಾಜರಾತಿ, ಶಾಲಾ ಮಕ್ಕಳ ಹಾಜರಾತಿ, ಬಿಸಿಯೂಟ, ಅಡುಗೆ ಕೋಣೆ, ಗಣಕಯಂತ್ರ ಕೊಠಡಿ ವೀಕ್ಷಣೆ, ಗ್ರಂಥಾಲಯ, ಕುಡಿಯುವ ನೀರು ಪೂರೈಕೆ, ಮತ್ತಿತರ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಇಲ್ಲಿನ ವ್ಯವಸ್ಥೆ ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಡಗದಾಳು ಶಾಲೆಯು ಎಸ್ಎಸ್ಎಲ್ಸಿ ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆಯುತ್ತಿದ್ದು, ಶಾಲಾ ದಾಖಲಾತಿ ಹೆಚ್ಚಿಸಲು ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದು ಹೇಳಿದರು. ಸುತ್ತಮುತ್ತಲಿನ ಎಲ್ಲಾ ಮಕ್ಕಳು ಶಾಲೆಗೆ ಸೇರಿ ಶಿಕ್ಷಣ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಶಾಲಾ ದಾಖಲಾತಿ ಹೆಚ್ಚಳಕ್ಕೆ ಶ್ರಮಿಸುವಂತೆ ಮುಖ್ಯಶಿಕ್ಷಕರು ಹಾಗು ಸಹಶಿಕ್ಷಕರಿಗೆ ಸಲಹೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಎಸ್ಎಸ್ಎಲ್ಸಿ ಯಲ್ಲಿ ಕಡಗದಾಳು ಶಾಲೆ ಶೇ.100 ರಷ್ಟು ಫಲಿತಾಂಶ ಪಡೆಯುತ್ತಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗುಣಾತ್ಮಕ ಕಲಿಕೆಗೆ ಒತ್ತು ನೀಡಲಾಗಿದೆ…






