ಲೇಖಕ: admin

ಮಡಿಕೇರಿ, NEWS DESK ಮಾ.1: ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಮಡಿಕೇರಿಯ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ, ಕುಡಿಯರ ಗಿರೀಶ್ ಎಂಬುವವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಶನಿವಾರ ಸಂಜೆ ಮನೆಗೆ ತೆರಳುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಪೂಜಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕಾಡಾನೆ ದಾಳಿ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಮಧ್ಯ ಪ್ರಾಚ್ಯ ಹಾಗೂ ಕೊಲ್ಲಿ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ. ಕರ್ನಾಟಕದ ಹಲವರು ಸಿಲುಕಿಕೊಂಡಿರುವ ಮಾಹಿತಿಯಿದೆ. ಕೊಡಗು ಜಿಲ್ಲೆಯ ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ , ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ದೂ:- 08272 221077 , 08272 221099 ವಾಟ್ಸಾಪ್ ಸಂಖ್ಯೆ(Only message):- 8550001077

Read More

ನವದೆಹಲಿ, ಮಾರ್ಚ್ 1, 2026: ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್-ಅಮೆರಿಕ ಪಡೆಗಳ ನಡುವೆ ತಾರಕಕ್ಕೇರಿರುವ ಸಂಘರ್ಷವು ಭಾರತದ ಅಂತರರಾಷ್ಟ್ರೀಯ ವಿಮಾನಯಾನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಪರಿಸ್ಥಿತಿಯನ್ನು ಅವಲೋಕಿಸಲು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ತುರ್ತು ಪರಿಶೀಲನಾ ಸಭೆ ನಡೆಸಿದ್ದು, ದೇಶದ ಎಲ್ಲಾ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ವಿಮಾನಯಾನ ರದ್ದು: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ 55 ವಿಮಾನಗಳ ಸ್ಥಗಿತ ಮಧ್ಯಪ್ರಾಚ್ಯದ ವಾಯುಪ್ರದೇಶದಲ್ಲಿ ನಿರ್ಬಂಧಗಳು ಮತ್ತು NOTAM (ನೋಟ್-ಆನ್-ಅಲಾರ್ಮ್) ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಈ ಕಠಿಣ ನಿರ್ಧಾರ ಕೈಗೊಂಡಿವೆ: ಸಂಪೂರ್ಣ ಸ್ಥಗಿತ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ತನ್ನ ಎಲ್ಲಾ 55 ವಿಮಾನಗಳನ್ನು ರದ್ದುಗೊಳಿಸಿದೆ. ಮುಂದಿನ 24 ಗಂಟೆಗಳ ಕಾಲ ಯಾವುದೇ ಸೇವೆ ಇರುವುದಿಲ್ಲ. ಪೀಡಿತ ನಗರಗಳು: ಬೆಂಗಳೂರು, ಮಂಗಳೂರು, ದೆಹಲಿ, ಮುಂಬೈ, ಕೊಚ್ಚಿ, ಕಣ್ಣೂರು ಸೇರಿದಂತೆ ಭಾರತದ ಪ್ರಮುಖ ನಗರಗಳಿಂದ ದುಬೈ, ಅಬುಧಾಬಿ, ಶಾರ್ಜಾ, ದೋಹಾ, ಮಸ್ಕತ್ ಮತ್ತು ರಿಯಾದ್‌ಗೆ ತೆರಳಬೇಕಿದ್ದ…

Read More

ಜೆರುಸಲೆಮ್/ಟೆಹ್ರಾನ್, ಮಾರ್ಚ್ 1, 2026: ದಶಕಗಳ ಶತ್ರುತ್ವದ ನಡುವೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಶನಿವಾರ ಬೆಳಿಗ್ಗೆ ಇರಾನ್ ಮೇಲೆ ಬೃಹತ್ ಜಂಟಿ ವೈಮಾನಿಕ ದಾಳಿಯನ್ನು ಆರಂಭಿಸಿವೆ. ‘ಆಪರೇಷನ್ ರೋರ್ ಆಫ್ ದಿ ಲಯನ್’ ಹೆಸರಿನ ಈ ಕಾರ್ಯಾಚರಣೆಯ ಮೊದಲ ಅಧಿಕೃತ ವೀಡಿಯೊವನ್ನು ಇಸ್ರೇಲ್ ರಕ್ಷಣಾ ಪಡೆ (IDF) ಬಿಡುಗಡೆ ಮಾಡಿದ್ದು, ಇರಾನ್‌ನ ನೂರಾರು ಸೇನಾ ನೆಲೆಗಳು ಧ್ವಂಸವಾಗಿವೆ. ಪ್ರಮುಖ ಘಟನಾವಳಿಗಳು: ಕ್ಷಿಪಣಿ ದಾಳಿಯ ದೃಶ್ಯ: ಐಡಿಎಫ್ ಹಂಚಿಕೊಂಡಿರುವ ವೀಡಿಯೊದಲ್ಲಿ ಇರಾನ್ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿಗಳು ಅಪ್ಪಳಿಸುತ್ತಿರುವುದು ಮತ್ತು ದಟ್ಟವಾದ ಹೊಗೆ ಆವರಿಸಿರುವುದು ಗೋಚರಿಸುತ್ತಿದೆ. ಶಾಲೆಯ ಮೇಲೆ ದಾಳಿ – 53 ಸಾವು: ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್‌ನಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 53 ವಿದ್ಯಾರ್ಥಿನಿಯರು ದುರ್ಮರಣಕ್ಕೀಡಾಗಿದ್ದಾರೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ‘ಐಆರ್‌ಎನ್‌ಎ’ (IRNA) ವರದಿ ಮಾಡಿದೆ. ಮಿನಾಬ್ ಪ್ರದೇಶವು ಇರಾನಿನ ಕ್ರಾಂತಿಕಾರಿ ಗಾರ್ಡ್‌ಗಳ (IRGC) ಪ್ರಮುಖ ನೆಲೆಯಾಗಿದೆ. ಖಮೇನಿ ಕಚೇರಿ ಬಳಿ…

Read More

ವಾಷಿಂಗ್ಟನ್/ಟೆಹ್ರಾನ್, ಮಾರ್ಚ್ 1, 2026: ದಶಕಗಳಿಂದ ಮಧ್ಯಪ್ರಾಚ್ಯದ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾಗಿದ್ದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಅಮೆರಿಕ ಮತ್ತು ಇಸ್ರೇಲಿ ವಾಯುಪಡೆಗಳ ಜಂಟಿ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಬೆಳವಣಿಗೆಯು ಇಡೀ ಜಗತ್ತನ್ನು ಪೂರ್ಣ ಪ್ರಮಾಣದ ಯುದ್ಧದ ಅಂಚಿಗೆ ತಂದು ನಿಲ್ಲಿಸಿದೆ. ಟ್ರಂಪ್ ಅವರ ‘ಟ್ರೂತ್ ಸೋಶಿಯಲ್’ ಪೋಸ್ಟ್ ಸಂಚಲನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರೂತ್ ಸೋಶಿಯಲ್’ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಅತ್ಯಾಧುನಿಕ “ಸರ್ಜಿಕಲ್ ಸ್ಟ್ರೈಕ್”ನಲ್ಲಿ ಖಮೇನಿ ಅಂತ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಬೆನ್ನಲ್ಲೇ ಇರಾನ್ ಸರ್ಕಾರವು 40 ದಿನಗಳ ಕಾಲ ಸಾರ್ವಜನಿಕ ಶೋಕಾಚರಣೆ ಘೋಷಿಸಿದೆ ಎಂಬ ವರದಿಗಳು ಲಭ್ಯವಾಗಿವೆ. ನೆತನ್ಯಾಹು ಜಾಗರೂಕ ನಡೆ; ಇರಾನ್ ಮಾಧ್ಯಮಗಳ ಮೌನ ಇಸ್ರೇಲ್ ಪ್ರತಿಕ್ರಿಯೆ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಟ್ರಂಪ್ ಹೇಳಿಕೆಯನ್ನು ಪುಷ್ಠೀಕರಿಸುವಂತಿದ್ದರೂ, ಅವರು ಸ್ವಲ್ಪ…

Read More

ಸುಂಟಿಕೊಪ್ಪ ಫೆ.28 NEWS DESK : ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ‘ಅದೃಶ್ಯ ಬರಹ’ದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್ ಖಾನ್ ಉದ್ಘಾಟಿಸಿದರು. ವಿಜ್ಞಾನ ಶಿಕ್ಷಕರಾದ ಬಿ.ಟಿ.ವರ್ಣಿತಾ ದಿನದ ಮಹತ್ವವನ್ನು ವಿವರಿಸಿದರು. ನಂತರ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಗಮನ ಸೆಳೆಯಿತು. ಈ ಸಂದರ್ಭ ಸರಕಾರಿ ಪ್ರೌಢಶಾಲಾ ಉಪ ಪ್ರಾಂಶುಪಾಲರಾದ ಬಾಲಕೃಷ್ಣ, ಸ.ಪ್ರೌಢ ಶಾಲೆ, ಶಾಲಾ ಎಸ್‍ಡಿಎಂಎಸ್ ಉಪಾಧ್ಯಕ್ಷೆ ಸಂಧ್ಯಾ, ಸುಂಟಿಕೊಪ್ಪ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಪಿ.ಇ.ನಂದ ಮತ್ತು ಶಾಲೆಯ ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಫೆ.28 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆ ಮುಖ್ಯವಾದ ಜವಾಬ್ದಾರಿಯಾಗಿದ್ದು, ಸತ್ಕಾರಣಕ್ಕಾಗಿ ಸರ್ಕಾರ ಅಕಾಡೆಮಿ ಗಳನ್ನು ರಚಿಸಿದೆ. ಇದಕ್ಕೆ ಪೂರಕವಾಗಿ ಕೊಡವ ಸಾಹಿತ್ಯ ಅಕಾಡೆಮಿಯು ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯರವರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ಸಾಗಿ ನಡೆಸುತ್ತಿದ್ದು, ಸರ್ವ ಸದಸ್ಯರ ಸಹಕಾರ ಎದ್ದು ಕಾಣುತ್ತಿದೆ. ಎಲ್ಲಾರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಯಶಸ್ಸು ಖಂಡಿತಾ ಎಂದು ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಕುಟ್ಟ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ, “2026ನೆ ಕಾಲತ್‌ರ ಗೌರವ ಪ್ರಶಸ್ತಿ ಮತ್ತು ಕೊಡವ ಸಾಹಿತ್ಯ-ಸಂಸ್ಕೃತಿರ ಅಂದೋಳ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸರಕಾರವು ಸಾಹಿತ್ಯ, ಸಂಸ್ಕೃತಿ, ಭಾಷೆಯ ರಕ್ಷಣೆ ಹಾಗೂ ಬೆಳವಣಿಗೆಯ ಉದ್ದೇಶದಿಂದ ಅಕಾಡೆಮಿಯನ್ನು ಸ್ಥಾಪಿಸಿದ್ದು, ಅದರಂತೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದೆ. ಕೊಡವ…

Read More

ಸುಂಟಿಕೊಪ್ಪ ಫೆ.28 NEWS DESK : ಕಂಬಿಬಾಣೆಯ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ ದೊರೆಯಿತು. ದೇವಾಲಯದ ಆವರಣದಲ್ಲಿ ಅಂದಾಜು 10 ಲಕ್ಷ ವೆಚ್ಚದ ಸಭಾಭವನ ನಿರ್ಮಾಣಕ್ಕೆ ಕಾಫಿ ಬೆಳೆಗಾರರು ಹಾಗೂ ದಾನಿಗಳಾದ ಟಿ.ಕೆ.ಸಜೀವ ಅವರು ಭೂಮಿ ಪೂಜೆ ನೇರವೇರಿಸಿದರು. ದೇವಾಲಯದ ಆರ್ಚಕ ಪ್ರಭಾಕರ್‍ಭಟ್ ಪೂಜೆಯನ್ನು ನೇರವೇರಿಸಿದರು. ಈ ಸಂದರ್ಭ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್, ಸಾಬು ಪಳಂಗಪ್ಪ, ಜಯಂತ್, ಗಂಗಾಧರ್, ರವಿಕುಮಾರ್, ಮಾತೃಮಂಡಳಿ ಸದಸ್ಯರಾದ ಪೂರ್ಣಿಮಾ, ಮೀನಾ ಹರೀಶ್, ರಮಣಿ, ಸುಧಾ ಹಾಗೂ ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಗೋಣಿಕೊಪ್ಪ ಫೆ.28  NEWS DESK  : ಮನುಷ್ಯನ ಅಂತಕರಣ ಭಾಷೆಯ ಒಳ ಮಿಡಿತಗಳು ತಿಳಿದಾಗ ವಿರಳವಾದ ಮತ್ತು ಸರಳವಾದ ಕಾವ್ಯ ಸೃಷ್ಟಿಯಾಗುವುದು ಎಂದು ಕವಿ ಮತ್ತು ಪತ್ರಕರ್ತ ಜಗದೀಶ್ ಜೋಡುಬಿಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ನಡೆದ ಜಿಲ್ಲಾ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕವಿಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಧುನಿಕ ಭಾವನೆಗಳನ್ನು ಪೂರಣಗಳ ಅನುಭವದಲ್ಲಿ ಕರಗಿಸಿ ಅಭಿವ್ಯಕ್ತಿ ಪಡಿಸಿಕೊಂಡಾಗ ಸ್ಥಿರವಾದ ನೆಲೆಯಲ್ಲಿ ಕಾವ್ಯ ನಿಲ್ಲುತ್ತದೆ. ಕ್ಷಿತಿಜದ ದಾಚೆಗೂ ಒಂದು ಕಣ್ಣೋಟ ನೆಟ್ಟಾಗ ಕವಿತೆಗಳು ಪ್ರಬುದ್ಧತೆಯಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾವ್ಯಕಟ್ಟುವುದು ಒಂದು ಕಸುಬುಗಾರಿಕೆ. ಬಿಡಿಯಾದ ಮಲ್ಲಿಗೆಯ ಮೊಗ್ಗನು ಮಾಲೆಯಾಗಿಸುವ ಕುಸುರಿ ಪದಗಳು ಎದೆಯೊಳಗಿನ ಲಾಲಿತ್ಯದ ಗಿಲಿಕಿ ಯಾಗಬೇಕು. ಕವಿತೆಕಟ್ಟುವುದುಧ್ಯಾನಸ್ಥ ಸ್ಥಿತಿಯ ಅವಲಂಬನೆ. ಆಧ್ಯಾತ್ಮದತಪಸ್ಸು, ಮತ್ತು ಹೊನಪು ಎಂದರು. ಕವಿತೆಯನ್ನು ಕಟ್ಟುವುದಲ್ಲ ಅದನ್ನು ಕೆತ್ತಬೇಕು.…

Read More

ಮಡಿಕೇರಿ ಫೆ.28 NEWS DESK : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಅಪ್ಪಚ್ಚಿರ ಗೌತಮ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾಪೋಕ್ಲು ಕಾರೆಕಾಡು ನಿವಾಸಿ ಪಿ.ಹೆಚ್.ಸುಹೈಲ್(24), ಬೇತು ಗ್ರಾಮದ ನಿವಾಸಿ ಕೆ.ಇ.ಸಿದ್ದಿಕ್(20), ಇಂದಿರಾನಗರದ ನಿವಾಸಿ ನಾಫಿ(19) ಹಾಗೂ ರಾಶೀದ್ ಪಿ.ಎ.(30) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆ ಕುರಿತು ಕರವಂಡ ಲವ ನಾಣಯ್ಯ ಎಂಬುವವರು ನೀಡಿದ ದೂರನ್ನು ಆಧರಿಸಿ ಆರೋಪಿಗಳನ್ನು ಬಂಧಿಸಿ ವಿರಾಜಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಲ್ಲಮಾವಟಿ ಸಹಿತ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆಗೊಂಡಿದ್ದ ಕಾರಣ ನಾಪೋಕ್ಲು ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಕೂಡ ಸ್ಥಳದಲ್ಲಿ ಮೊಕಾಂ ಹೂಡಿದ್ದು, ಪರಿಸ್ಥಿಯನ್ನು ಅವಲೋಕಿಸುತ್ತಿದ್ದಾರೆ. ನಾಪೋಕ್ಲು ಸಹಿತ ಸೂಕ್ಷ್ಮ ಮತ್ತು ಆಯಕಟ್ಟಿನ ಪ್ರದೇಶದಲ್ಲಿ ಕೆಎಸ್‍ಆರ್‍ಪಿ, ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಮತ್ತು ಜಿಲ್ಲೆಯ ವಿವಿಧ ಠಾಣೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಿ ಅಹಿತಕರ ಘಟನೆಗಳು ನಡೆಯದಂತೆ…

Read More