ಬೆಂಗಳೂರು ಮೇ 26 NEWS DESK : “AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವದ ಕುರಿತಾಗಿದೆ” ತಂತ್ರಜ್ಞಾನವು ಸಾರ್ವಜನಿಕ ಸೇವೆ ವಿತರಣೆ, ಆಡಳಿತಾತ್ಮಕ ಪ್ರತಿಕ್ರಿಯೆ ಮತ್ತು ಒಳಗೊಳ್ಳುವಿಕೆಯನ್ನು ಸುಧಾರಿಸುವ ಮೂಲಕ ಕರ್ನಾಟಕವನ್ನು AI ತಂತ್ರಜ್ಞಾನದ ಹಬ್ ಮಾತ್ರವಲ್ಲದೆ, ‘AI-ಸಕ್ರಿಯ ಆಡಳಿತ ರಾಜ್ಯ’ವನ್ನಾಗಿ ಮಾಡುವುದು ಸರ್ಕಾರದ ದೂರದೃಷ್ಟಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದರು. ಕರ್ನಾಟಕ ಸರ್ಕಾರದ ಇ-ಆಡಳಿತ ಕೇಂದ್ರದಿಂದ ವತಿಯಿಂದ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾದ “AI CoE (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೆಂಟರ್ ಆಫ್ ಎಕ್ಸಲೆನ್ಸ್) ಅನುಷ್ಠಾನ ಕಾರ್ಯಾಗಾರ” ವನ್ನು ಉದ್ಘಾಟಿಸಿ ಮಾತನಾಡುತ್ತಾ, ಆಡಳಿತದಲ್ಲಿ ಸ್ಕೇಲೆಬಲ್, ಸುರಕ್ಷಿತ ಮತ್ತು ನಾಗರಿಕ-ಕೇಂದ್ರಿತ AI ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಕುರಿತು ಚರ್ಚಿಸಲು ವಿವಿಧ ರಾಜ್ಯಗಳ ಹಿರಿಯ ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು, ಉದ್ಯಮದ ಮುಖಂಡರು, ಶಿಕ್ಷಣ ತಜ್ಞರು, ನವೋದ್ಯಮಗಳು (Startups) ಮತ್ತು ಪರಿಸರ ವ್ಯವಸ್ಥೆಯ…
ಲೇಖಕ: admin
ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯು ಪ್ರವಾಸಿಗರಿಗೆ ಸುರಕ್ಷಿತವಾಗಿದ್ದು, ಆತಿಥ್ಯಕ್ಕೆ ಎಂದಿನಂತೆ ಹೆಸರುವಾಸಿಯಾಗಿದೆ. ವದಂತಿಗಳಿಗೆ ಪ್ರವಾಸಿಗರು ಕಿವಿಗೊಡಬಾರದು ಎಂಬ ಸಂದೇಶವನ್ನು ಪ್ರವಾಸಿಗರಿಗೆ ಮನದಟ್ಟು ಮಾಡುವ ನಿಟ್ಟಿನಲ್ಲಿ ನಾಡಿನ ಪ್ರವಾಸೋದ್ಯಮಿಗಳು, ಸಂಘಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೊಳಂಡ ದಿನೇಶ್ ಕಾಯ೯ಪ್ಪ ಮನವಿ ಮಾಡಿದ್ದಾರೆ. ನಗರದ ವ್ಯಾಲಿವ್ಯೂ ಹೋಟೇಲ್ ಸಭಾಂಗಣದಲ್ಲಿ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಆಯೋಜಿತ ಪ್ರವಾಸೋದ್ಯಮ ಸಂಬಂಧಿತ ವಿವಿಧ ಸಂಘಸಂಸ್ಥಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು. ಕೆಲವರು ಅನಗತ್ಯವಾಗಿ ಕೊಡಗಿನ ಪ್ರವಾಸೋದ್ಯಮದ ಬಗ್ಗೆ ಇಲ್ಲಸಲ್ಲದ ಟೀಕೆ, ದೂರುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿಸುತ್ತಾ ಕೊಡಗಿನ ಆತಿಥ್ಯ ಸಂಸ್ಕೖತಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಇಂಥ ಆಧಾರ ರಹಿತ ಹೇಳಿಕೆಗಳನ್ನು ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡ ಸವ೯ರೂ ಖಂಡಿಸಲೇಬೇಕಾಗಿದೆ ಎಂದು ದಿನೇಶ್ ಹೇಳಿದರು. ಕಳೆದ ವಷ೯ ಕೊಡಗಿಗೆ 25 ಲಕ್ಷದಷ್ಟು ಪ್ರವಾಸಿಗರು ಭೇಟಿ ನೀಡಿದ್ದರಾದರೂ 45 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ…
ಮಡಿಕೇರಿ ಮೇ 26 NEWS DESK : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಐತಿಹಾಸಿಕ ಹಿನ್ನೆಲೆ ಹೊಂದಿದೆ. ಮಾತ್ರವಲ್ಲದೇ ತನ್ನ 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ವೇದಿಕೆ ನೀಡಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಉಪ ಕಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ವಾರ್ಷಿಕೋತ್ಸವ, ಕ್ರೀಡೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂತಹ ಮಹಾನ್ ಕಾಲೇಜನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ಕೆಲಸವನ್ನು ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಮಾಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಕಾಲೇಜಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. :: ವಿದ್ಯಾರ್ಥಿಗಳು ದೇಶದ ಶಕ್ತಿ :: ಹಿರಿಯ ಪತ್ರಕರ್ತ, ಕೊಡಗು ಚಾನಲ್ ಪ್ರಧಾನ ಸಂಪಾದಕ ಜಿ.ವಿ ರವಿಕುಮಾರ್ ಮಾತಾಡಿ, ವಿದ್ಯಾರ್ಥಿಗಳಿಗೆ ಗುರಿ ಮತ್ತು ಪರಿಶ್ರಮ ಅತೀ ಮುಖ್ಯ. ಸೋಮಾರಿತನ ಬಿಟ್ಟು ಸಮಾಜದ ತಿಳುವಳಿಕೆ ಹೊಂದಬೇಕು.…
ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 29 ಮತ್ತು 30 ರಂದು ಸುಂಟಿಕೊಪ್ಪದ ಎಸ್.ಎಸ್.ಇಂಟರ್ನ್ಯಾಷನಲ್ ಸಭಾಂಗಣದ ಕವಿಶಿಷ್ಯ ಪಂಜೆ ಮಂಗೇಶರಾಯರ ವೇದಿಕೆಯಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಸಮ್ಮೇಳನದ ವಿವರಗಳನ್ನು ನೀಡುತ್ತಾ, ಸಮ್ಮೇಳನದ ಸರ್ವಾಧ್ಯಕ್ಷರಾದ ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಅಬ್ದುಲ್ ರಶೀದ್ ಅವರ ಘನ ಉಪಸ್ಥಿತಿಯಲ್ಲಿ ಎರಡು ದಿನಗಳ ಕಾಲ ಕನ್ನಡ ನುಡಿ ಹಬ್ಬ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆಯೆಂದು ತಿಳಿಸಿದರು. :: ವಿವಿಧ 19 ದ್ವಾರಗಳ ಉದ್ಘಾಟನೆ :: ಆರಂಭಿಕ ದಿನವಾದ ಮೇ 29 ರಂದು ಬೆಳಗ್ಗೆ ರಾಷ್ಟ್ರಧ್ವಜ, ನಾಡಧ್ವಜ ಮತ್ತು ಪರಿಷತ್ತಿನ ಧ್ವಜದ ಆರೋಹಣದೊಂದಿಗೆ ಸಮ್ಮೇಳನ ಪ್ರಾರಂಭವಾಗಲಿದೆ. ಇದೇ ಸಂದರ್ಭ ಸುಂಟಿಕೊಪ್ಪ ವ್ಯಾಪ್ತಿಯ 19 ಮಂದಿ ಹಿರಿಯ ಚೇತನಗಳನ್ನು ಸ್ಮರಿಸುವ ದ್ವಾರಗಳನ್ನು ಗಣ್ಯರು ಉದ್ಘಾಟಿಸಲಿದ್ದಾರೆಂದರು. :: ಮೆರವಣಿಗೆ :: ಅಂದು…
ಮಡಿಕೇರಿ ಮೇ 26 NEWS DESK : ಕಳೆದ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ಜನಸಾಮಾನ್ಯರನ್ನು ವಂಚಿಸಿರುವುದಾಗಿ ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಪ್ರಕಾಶ್ ಆಚಾರ್ಯ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಟಿ.ಪಿ.ರಮೇಶ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ನಗರಸಭಾ ಕಚೇರಿಯವರೆಗೆ ಕಾಂಗ್ರೆಸ್ ಪ್ರಮುಖರು ಮತ್ತು ಸದಸ್ಯರು ಷೆÉೂೀಷಣೆಗಳ ಸಹಿತ ಪ್ರತಿಭಟನೆ ನಡೆಸಿ, ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರಸಭೆಯ ಮುಂಭಾಗ ಕೆಲ ಕಾಲ ಪ್ರತಿಭಟನೆ ನಡೆದ ಬಳಿಕ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಆಡಳಿತ ಪಕ್ಷದೊಳಗಿನ ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ.ಉತ್ತಮ ಆಡಳಿತದ ನಿರೀಕ್ಷೆಯಲ್ಲಿ ಬಹುಮತ ನೀಡಿದ ಜನರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಆರೋಪಿಸಿದರು. ಮಡಿಕೇರಿ ಕ್ಷೇತ್ರದ ಶಾಸಕರು ಒದಗಿಸಿರುವ ವಿಶೇಷ ಅನುದಾನದಿಂದಷ್ಟೆ…
ಮಡಿಕೇರಿ ಮೇ 26 NEWS DESK : ಕುಶಾಲನಗರ ತಾಲೂಕಿನಲ್ಲಿ ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ. `ನಮ್ಮೂರ ಶಾಲೆ ನಮ್ಮದು ನಮ್ಮೂರಲ್ಲೆ ಉಳಿಯಲಿ’ ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಎಐಡಿಎಸ್ಓ ನೇತೃತ್ವದಲ್ಲಿ ಚಿಕ್ಕತ್ತೂರು, ಮದಲಾಪುರ ಶಾಲೆಗಳ ಮುಂದೆ ಬ್ಯಾನರ್ ಕಟ್ಟಿ ಶಾಲೆ ಮುಚ್ಚುವ ಕ್ರಮಕ್ಕೆ ಪ್ರತಿರೋಧ ವ್ಯಕ್ತಪಡಿಸಿದರು. ಈ ಸಂದರ್ಭ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕಿ ಸ್ವಾತಿ ಮಾತನಾಡಿ, ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಸರ್ಕಾರಿ ಶಾಲೆ ಉಳಿಸಿ ಎಂದು ಹೋರಾಟ ಮಾಡುವ ದುಸ್ಥಿತಿ ಬಂದಿದೆ. ಕರ್ನಾಟಕ ಯಾವುದೇ ಪಕ್ಷದ ಶಾಸಕರು ಸರ್ಕಾರಿ ಶಾಲೆ ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿಲ್ಲ. ಸದನದಲ್ಲಿ ಒಂದೇ ಒಂದು ಮಗು ಇದ್ದರೂ ಶಾಲೆ ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಮಗು ಇರುವ ಶಾಲೆಗಳ ಪಟ್ಟಿಯನ್ನು ಸರ್ಕಾರ ನೀಡಲಿ. ತಾಲೂಕಿನ ಕೆಲ ಗ್ರಾಮಗಳಲ್ಲಿ ಮೋಸದಿಂದ ಸರ್ಕಾರಿ ಶಾಲೆಗಳನ್ನು…
ಮಡಿಕೇರಿ ಮೇ 26 NEWS DESK : ಕೊಡಗು ಜಿಲ್ಲೆಯಲ್ಲಿರುವ ಸುಮಾರು 60 ಸಾವಿರಕ್ಕೂ ಅಧಿಕ ನಿವೇಶನ ರಹಿತ ಬಡವರಿಗೆ ತಲಾ 5 ಸೆಂಟ್ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವರು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಮತ್ತು ನವ ಕರ್ನಾಟಕ ನಿರ್ಮಾಣ ಆಂದೋಲನ ಸಮಿತಿ ವತಿಯಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೇಡಿಕೆಗಳನ್ನು ಮಂಡಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಸಂಯೋಜಕ ಗೋಪಿನಾಥ್, ಖಜಾಂಚಿ ಆರ್.ಮುನಿಯಪ್ಪ, ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ, ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಹೆಚ್.ಡಿ.ಬಸವರಾಜು,…
ಮಡಿಕೇರಿ NEWS DESK ಮೇ 26 : ದೇವಟ್ ಪರಂಬ್ ನಲ್ಲಿ ವಂಚನೆಯಿoದ ಹತ್ಯೆಗೊಳಗಾದ ಕೊಡವ ಯೋಧರಿಗೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೌರವ ಅರ್ಪಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ಭೇಟಿ ನೀಡಿದ ಪ್ರಮುಖರು ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಇತಿಹಾಸದ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ಅವರು ದೇವಟ್ ಪರಂಬು ಹತ್ಯಾಕಾಂಡವು ಕೊಡವರ ಇತಿಹಾಸದಲ್ಲಿ ಒಂದು ಮರೆಯಲಾಗದ ಮತ್ತು ಕ್ಷಮಿಸಲಾಗದ ದುರಂತವಾಗಿದೆ. ಘಟನೆಗೆ ಸಾಂತ್ವನವಾಗಿ ದೇವಟ್ಪರಂಬ್ ನಲ್ಲಿ ಅಂತರಾಷ್ಟ್ರೀಯ ಹೋಲೋಕಾಸ್ಟ್ ಸ್ಮಾರಕವನ್ನು ನಿರ್ಮಿಸಬೇಕು ಮತ್ತು ಕೊಡವ ಜನಾಂಗೀಯ ಹತ್ಯೆಯನ್ನು ಯುಎನ್ಒ ಅಂತರರಾಷ್ಟಿçÃಯ ಹೋಲೋಕಾಸ್ಟ್ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು. ಈ ಮಹಾನ್ ಮಾನವ ಹಾನಿಗಳನ್ನು ಸರಿದೂಗಿಸಲು, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಗಳು) ಸೂಕ್ತ ಶಾಸಕಾಂಗ ವ್ಯವಸ್ಥೆಯ ಮೂಲಕ ಸಾಂವಿಧಾನಿಕ ಪರಿಹಾರವನ್ನು ಆರಂಭಿಸಬೇಕು. ವಿಶ್ವಪ್ರಸಿದ್ಧ ಅರ್ಥಶಾಸ್ತçಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರತಿಪಾದಿಸಿರುವಂತೆ “ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ”ಯಾಗಿ…
ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ.ದಿನೇಶ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಸುಂಟಿಕೊಪ್ಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.
ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆಯು ಸೋಮವಾರಪೇಟೆಯಲ್ಲಿ ನಡೆಯಿತು. ಸೋಮವಾರಪೇಟೆಯ ಖಾಸಗಿ ಸಭಾಂಗಣದಲ್ಲಿ, ಸಂಘದ ಅಧ್ಯಕ್ಷರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘವು ಪುನಃಶ್ಚತನಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಫಿ ಮತ್ತು ಇತರೆ ಪ್ಲಾಂಟೇಷನ್ ಬೆಳೆ ಉತ್ಪನ್ನಗಳ ಮೌಲ್ಯವೃದ್ಧೀಕರಣದಲ್ಲಿ ಸಂಘದ ಪಾತ್ರ ಮತ್ತು ಚಟುವಟಿಕೆಗಳನ್ನು ನಿರ್ಧರಿಸುವ ಬಗ್ಗೆ ವಿಚಾರ ಸಂಕೀರ್ಣ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡು, ಇಂದಿನ ದಿನಗಳಲ್ಲಿ ಸಂಘವು ಮತ್ತಷ್ಟು ಲಾಭ ಹಾಗೂ ಯಶಸ್ಸಿನೊಂದಿಗೆ ಮುಂದುವರೆಯಲು ಕಾರ್ಯತಂತ್ರ ಹಾಗೂ ಯೋಜನೆಗಳನ್ನು ರೂಪಿಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ, ಉಪಾಧ್ಯಕ್ಷರು ಪ್ರಭುದೇವ, ಸದಸ್ಯರು, ನಿರ್ದೇಶಕರು, ವಿಚಾರ ಸಂಕೀರ್ಣದ ವೇದಿಕೆ ಅಧ್ಯಕ್ಷರು ಶ್ರೀ ಎನ್. ಬೋಸ್ ಮಂದಣ್ಣ, ಪ್ರಮುಖರು ಚಂದ್ರಕಲಾ, ಯಾಕೂಬ್, ಕಾಫಿ…






