ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.15ರ ಪಂದ್ಯಗಳು *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಮುಕ್ಕಾಟಿರ (ಕುಂಬಳದಾಳು) ಮತ್ತು ಕಲ್ಲುಮಾಡಂಡ (ಚೇರಂಬಾಣೆ), 10ಕ್ಕೆ ಚೋವಂಡ ಮತ್ತು ಮೊಣ್ಣಂಡ, 11ಕ್ಕೆ ಅಪ್ಪುಡ ಮತ್ತು ತೀತರಮಾಡ, ಮಧ್ಯಾಹ್ನ 12ಕ್ಕೆ ಬಡುಮಂಡ ಮತ್ತು ಕಬ್ಬಚ್ಚಿರ, 1ಕ್ಕೆ ಪೊನ್ನಿಮಾಡ ಮತ್ತು ಚೆಂಬಂಡ, 2ಕ್ಕೆ ಚೊಟ್ಟೆಯಂಡಮಾಡ ಮತ್ತು ಮಲ್ಲಂಗಡ ಹಾಗೂ 3 ಗಂಟೆಗೆ ಅಯ್ಯಕುಟ್ಟಿರ ಮತ್ತು ಮುಂಡ್ಯೋಳಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಬಲ್ಲಚಂಡ ಮತ್ತು ನಾಟೋಳಂಡ, 10ಕ್ಕೆ ಚಿಯನಮಾಡ ಮತ್ತು ಮುಕ್ಕಾಟಿರ (ಬೆಳ್ಳೂರು-ಹರಿಹರ), 11ಕ್ಕೆ ಬಡಲೇರ ಮತ್ತು ಚಿರಿಯಪಂಡ, ಮಧ್ಯಾಹ್ನ 12ಕ್ಕೆ ಕುಪ್ಪನಮಾಡ ಮತ್ತು ನಂದೀರ, 1ಕ್ಕೆ ದಾಸಂಡ ಮತ್ತು ಕೊಡೇಂಗಡ, 2ಕ್ಕೆ ಚೀಕಂಡ ಮತ್ತು ಪಾರುವಂಗಡ ಹಾಗೂ 3 ಗಂಟೆಗೆ ಚೇರುವಾಳಂಡ (ಪುಲ್ಲಿಮಕ್ಕಿ) ಮತ್ತು ಅರಮಣಮಾಡ (ಬೆಸಗೂರು)
ಲೇಖಕ: admin
ಮಡಿಕೇರಿ NEWS DESK ಏ.14 : ಕೊಡಗು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಉಮೇಶ್ ಕುಮಾರ್ ಎಂ.ಎನ್ ಅವರಿಗೆ ಹೆಚ್ಚುವರಿಯಾಗಿ ಮಡಿಕೇರಿ ಗ್ರಾಮಾಂತರ ವೃತ್ತದ ಜವಾಬ್ದಾರಿಯನ್ನು ನೀಡಲಾಗಿದೆ. ಇವರು ಹೆಚ್ಚುವರಿಯಾಗಿ ಮಡಿಕೇರಿ ಗ್ರಾಮಾಂತರ ವೃತ್ತದ ನಾಪೋಕ್ಲು ಪೊಲೀಸ್ ಠಾಣೆ ಹಾಗೂ ಭಾಗಮಂಡಲ ಪೊಲೀಸ್ ಠಾಣೆಯ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.
ಮಡಿಕೇರಿ ಏ.14 NEWS DESK : ಪಿ.ಕೃಷ್ಣೇ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಘಟಕ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮಡಿಕೇರಿ ತಾಲ್ಲೂಕಿನ ನಾಲ್ವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಿತು. ನಗರ ಖಾಸಗಿ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಕರವೇ ಸ್ವಾಭಿಮಾನಿ ಬಣದ ಪ್ರಮುಖರು ಉದ್ಘಾಟಿಸಿದರು. *ಶಿಕ್ಷಣ ಕ್ಷೇತ್ರದಲ್ಲೂ ಬದಲಾವಣೆ* ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಜಿಲ್ಲಾ ಉಸ್ತುವಾರಿ ತನು ಕಿಶೋರ್ ಅವರು ಮಾತನಾಡಿ, 25 ವರ್ಷಗಳಿಂದ ರಾಜ್ಯಾದ್ಯಂತ ಘಟಕಗಳನ್ನು ಹೊಂದಿರುವ ಕರವೇ ಸ್ವಾಭಿಮಾನಿ ಬಣ, ಸಾಮಾಜಿಕ ಕಳಕಳಿಯ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಕೊಡಗು ಜಿಲ್ಲೆಯಲ್ಲಿಯೂ ಸಮಾಜಿಕ ಸಮಸ್ಯೆಗಳ ಬಗ್ಗೆ ಹಲವು ಹೋರಾಟಗಳನ್ನು ರೂಪಿಸಿದ್ದು, ಇದು ಮುಂದೆಯೂ ನಡೆಯಲಿದೆ ಎಂದರು. ಸಂಘಟನೆ ಶಿಕ್ಷಣ ಕ್ಷೇತ್ರದಲ್ಲೂ ಬದಲಾವಣೆಗೆ ಮುಂದಾಗಿದ್ದು, ಅದರ ಅಂಗವಾಗಿ ದ್ವಿತೀಯ ಪಿಯುಸಿ…
ಕುಶಾಲನಗರ ಏ.14 NEWS DESK : ದೇವಾಲಯ ಹಾಗೂ ಮಠ ಮಂದಿರಗಳು ಮನುಷ್ಯನ ಅಂತರಂಗ ಶುದ್ದಿಯ ಆಲಯಗಳು ಎಂದು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವರ ವಾರ್ಷಿಕ ಪೂಜೋತ್ಸವ ದಲ್ಲಿ ಭಾಗಿಯಾಗಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮನುಷ್ಯ ಏನೆಲ್ಲಾ ಗಳಿಸಿದರೂ ಕೂಡ ಮಾನಸಿಕ ಶಾಂತಿ ನೆಮ್ಮದಿ ಪಡೆಯಲು ದೇವಾಲಯಗಳಿಗೆ ಬರಬೇಕಿದೆ. ಪೂರ್ವಜರು ಆಚರಿಸಿಕೊಂಡು ಬಂದ ಗ್ರಾಮೀಣ ಹಬ್ಬಗಳು, ದೇವರ ಪೂಜೋತ್ಸವಗಳನ್ನು ಮುಂದಿನ ಪೀಳಿಗೆಗೂ ಜತನದಿಂದ ಒಯ್ಯುವುದೇ ಭಾರತೀಯ ಸಂಸ್ಕೃತಿಯ ಸೌಂದರ್ಯ ಎಂದು ಶ್ರೀಗಳು ಹೇಳಿದರು. ಸೋಮವಾರ ಸಂಜೆಯಿಂದ ಆರಂಭವಾದ ದೇವತಾ ಪೂಜೋತ್ಸವ ಮಂಗಳವಾರ ಮಧ್ಯಾಹ್ನ ಸಮಾಪ್ತಿಗೊಂಡಿತು. ಮಂಗಳವಾರ ಬೆಳಗ್ಗೆ ವಾದ್ಯಮೇಳ, ಅಲಂಕೃತ ದೇವರುಗಳ ಪಲ್ಲಕ್ಕಿಯೊಂದಿಗೆ ಗ್ರಾಮದ ಕಾವೇರಿ ನದಿಗೆ ತೆರಳಿ ಗಂಗಾ ಸ್ನಾನ ನೆರವೇರಿಸಲಾಯಿತು. ಇದೇ ಸಂದರ್ಭ ಹೊಳೆನರಸೀಪುರ ತಾಲ್ಲೂಕಿನ ಉದ್ದೂರು ಗ್ರಾಮದ ವೀರಗಾಸೆ ಕಲಾವಿದ ರಾದ ರವಿಕುಮಾರ ತಂಡದಿಂದ ಆಕರ್ಷಕವಾದ ವೀರಭದ್ರ ನೃತ್ಯ ಭಕ್ತರನ್ನು…
ಕುಶಾಲನಗರ ಏ.14 NEWS DESK : ಹೆಬ್ಬಾಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರಿಗಾಗಿ ಉಚಿತ ಫುಟ್ ಪಲ್ಸ್ ಥೆರಪಿ ಉಚಿತಾ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ. ಹದಿನೈದು ದಿನಗಳ ಅವಧಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಿಬಿರ ನಡೆಯಲಿದ್ದು 8 ವರ್ಷದ ಮೇಲ್ಪಟ್ಟು ವಯೋವೃದ್ಧರವರೆಗೂ ಥೆರಪಿಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ತರಬೇತಿ ಶಿಬಿರದ ಆಯೋಜಕರಾದ ಕಂಪಾನಿಯೋ ಸಂಸ್ಥೆಯ ಥೆರಪಿಯನ್ ಶಶಿಕಾಂತ ಪೂಜಾರಿ ಹೇಳಿದರು. ಅರ್ಧ ಗಂಟೆ ಕಾಲ ನಡೆಸುವ ಥೆರಪಿಯಲ್ಲಿ ಓರ್ವ ಆರೋಗ್ಯವಂತ ಮನುಷ್ಯ 5 ಕಿಮೀ ವೇಗದ ನಡಿಗೆ ಮಾಡಿದಷ್ಟು ಪ್ರಯೋಜನವಾಗಲಿದೆ. ಥೆರಪಿಯಿಂದಾಗಿ ದೇಹದ ನರನಾಡಿಗಳಲ್ಲಿ ಸುಗಮ ರಕ್ತ ಸಂಚಾರವಾಗುತ್ತದೆ. ದೇಹದಲ್ಲಿನ ಅಶುದ್ಧ ರಕ್ತ ಶುದ್ಧವಾಗುತ್ತದೆ. ಹೃದಯಸಂಬಂಧಿ ಕಾಯಿಲೆಗಳು ಸೇರಿದಂತೆ ಸೊಂಟ ನೋವು, ಹಿಂಬದಿ ನೋವು, ಬೆನ್ನು ನೋವು ಮೊದಲಾದ ನರ ದೌರ್ಬಲ್ಯಗಳ ನೋವುಗಳು ನಿವಾರಣೆಯಾಗಲಿವೆ. ಕಂಪಾನಿಯೋ ಸಂಸ್ಥೆ 2014 ರಿಂದ ಆರಂಭವಾಗಿದ್ದು ದೇಶಾದ್ಯಂತ 15 ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಯೋಜನವಾಗಲಿದೆ ಎಂದು ಶಶಿಕಾಂತ ಪೂಜಾರಿ ಹೇಳಿದರು. ಶಿಬಿರದಲ್ಲಿ…
ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಮೈದಾನ 2 ರಲ್ಲಿ ಏ.14ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 2* ಅಪ್ಪುಮಣಿಯಂಡ ಮತ್ತು ಬಲ್ಲಂಡ ತಂಡಗಳ ನಡುವಿನ ಪಂದ್ಯದಲ್ಲಿ ಅಪ್ಪುಮಣಿಯಂಡ ತಂಡಕ್ಕೆ 7 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಲ್ಲಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿತು. ಅಪ್ಪುಮಣಿಯಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 73 ರನ್ ಗಳನ್ನು ಗಳಿಸಿ ಗೆಲುವು ಕಂಡಿತು. ಕಂಗಂಡ ಮತ್ತು ಚೆನಿಯಪಂಡ ನಡುವಿನ ಪಂದ್ಯದಲ್ಲಿ ಕಂಗಂಡ ತಂಡ 19 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಕಂಗಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 66 ರನ್ ಗಳನ್ನು ಸೇರಿಸಿತು. ಚೆನಿಯಪಂಡ 6 ಓವರ್ ಗಳಲ್ಲಿ…
ಮಡಿಕೇರಿ ಏ.14 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.14ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ತೆನ್ನಿರ ಮತ್ತು ಮುಕ್ಕಾಟಿರ (ಬೇತ್ರಿ) ನಡುವಿನ ಪಂದ್ಯದಲ್ಲಿ ಮುಕ್ಕಾಟಿರ 10 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತೆನ್ನಿರ 6 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 54 ರನ್ ಗಳನ್ನು ಗಳಿಸಿತು. ಮುಕ್ಕಾಟಿರ ಯಾವುದೇ ವಿಕೆಟ್ ನಷ್ಟವಿಲ್ಲದೆ 4.4 ಓವರ್ ಗಳಲ್ಲಿ 55 ರನ್ ಗಳನ್ನು ಸೇರಿಸಿ ಗೆಲುವಿನ ನಗೆ ಬೀರಿತು. ಮಿನ್ನಂಡ ಮತ್ತು ಚೌರಿರ ತಂಡಗಳ ನಡುವಿನ ಹಣಾಹಣಿಯಲ್ಲಿ ಸೂಪರ್ ಓವರ್ ನಲ್ಲಿ ಚೌರಿರ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಿಣ್ಣಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 50 ಮತ್ತು ಇದನ್ನು ಬೆನ್ನಟ್ಟಿದ ಚೌರಿರ 6 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ…
ಸುಂಟಿಕೊಪ್ಪ ಏ.14 NEWS DESK : ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲ್ಲೂಕು ಘಟಕ ಕೊಡಮಾಡುವ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಸಮಾರಂಭ ಏ.21 ರಂದು ಕುಶಾಲನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಕುಶಾಲನಗರ ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ನಾಲ್ವರು ಕೃಷಿಕರನ್ನು ತಾಲೂಕು ಪತ್ರಕರ್ತರ ಸಂಘವು ಪ್ರತೀ ವರ್ಷ ‘ನೇಗಿಲಯೋಗಿ’ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಅದರಂತೆ ಈ ಬಾರಿ ಸುಂಟಿಕೊಪ್ಪದ ಪ್ರಗತಿಪರ ಕೃಷಿಕ ಪಟ್ಟೆಮನೆ ಪಿ.ಉದಯಕುಮಾರ್, ನಾಕೂರು ಶಿರಂಗಾಲ ಗ್ರಾಮ ಪಂಚಾಯತ್’ನ ಮಳೂರು ನಿವಾಸಿ ಶಂಕರನಾರಾಯಣ, ಶಿರಂಗಾಲ ಗ್ರಾಮ ಪಂಚಾಯತ್’ನ ಮಣಜೂರು ನಿವಾಸಿ ಭವಾನಿ ಕುಮಾರಸ್ವಾಮಿ ಹಾಗೂ ಗುಡ್ಡೆಹೊಸೂರು ಪಂಚಾಯತ್’ನ ಬಾಳುಗೋಡು ನಿವಾಸಿ ನಂಗಾರು ಜಗ ಅವರನ್ನು ಆಯ್ಕೆ ಮಾಡಲಾಗಿದೆ. ಏ.21 ರಂದು ಪೂರ್ವಾಹ್ನ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕೊಡಗು ಪತ್ರಿಕಾಭವನ ಟ್ರಸ್ಟಿ, ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರು ಉದ್ಘಾಟಿಸಲಿದ್ದು, ಕುಶಾಲನಗರ ತಾಲೂಕು ಪತ್ರಕರ್ತರ ಘಟಕದ ಅಧ್ಯಕ್ಷ ಬಿ.ಸಿ.ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ…
ಕುಶಾಲನಗರ ಏ.14 NEWS DESK : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಬ್ಬ ವ್ಯಕ್ತಿಯಾಗಿರದೆ, ಇಡೀ ಸಮಾಜದ ಶಕ್ತಿಯಾಗಿದ್ದರು. ಅವರ ಶಿಕ್ಷಣ, ಸಂಘಟನೆ, ಹೋರಾಟ ಎಲ್ಲರಿಗೂ ಮಾದರಿಯಾದುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ( ಎನ್ನೆಸ್ಸೆಸ್ ) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಾಲಾ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ‘ಭಾರತ ಭಾಗ್ಯ ವಿಧಾತ’ ವಿಶ್ವಜ್ಞಾನಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ , ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಂವಿಧಾನ ಪೀಠಿಕೆಯನ್ನು ಬೋಧಿಸಿ ಭಾರತೀಯ ಸಂವಿಧಾನದ ಮಹತ್ವ ಕುರಿತು ಮಾತನಾಡಿದರು. ಡಾ.ಅಂಬೇಡ್ಕರ್ ರಂತಹ ಮಹಾನ್ ಪುರುಷರ ವೈಚಾರಿಕ ಚಿಂತನೆಗಳು ಶೋಷಿತರಿಗೆ ಪ್ರೇರಣೆ, ಸ್ಪೂರ್ತಿಯಾಗಬೇಕೆಂಬ ನೆಲೆಗಟ್ಟಿನಲ್ಲಿ ಇಂತಹ ಜಯಂತಿಗಳನ್ನು ಆಚರಿಸಲಾಗುತ್ತಿದೆ ಎಂದು ಪ್ರೇಮಕುಮಾರ್ ತಿಳಿಸಿದರು. ಶಿಕ್ಷಣ-ಸಂಘಟನೆ-ಹೋರಾಟ…
ಮಡಿಕೇರಿ ಏ.14 NEWS DESK : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರಿದ್ದಾರೆ. ಆದ್ದರಿಂದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಜನರು ಉನ್ನತ ಶಿಕ್ಷಣ ಪಡೆದು ವಿವಿಧ ಕ್ಷೇತ್ರದಲ್ಲಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರಂತೆ ನಿರಂತರ ಹಾಗೂ ಕಠಿಣ ಪರಿಶ್ರಮ ಅಗತ್ಯ ಎಂದು ಶಾಸಕರು ಪ್ರತಿಪಾದಿಸಿದರು. ಸರ್ಕಾರದ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಮೇಲೆ ಬರಲು ಶ್ರಮ ವಹಿಸಬೇಕು. ಪರಿಶ್ರಮ ಇಲ್ಲದೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಅಸಾಧ್ಯ ಎಂದು ಡಾ.ಮಂತರ್ ಗೌಡ ಅವರು ಕಿವಿಮಾತು ಹೇಳಿದರು. ಸಂವಿಧಾನ…






