ಲೇಖಕ: admin

ಮಡಿಕೇರಿ, NEWS DESK ಸೆ. 12: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಲ್ಲಂಘಿಸಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಾ, ಜಾತಿ ಪದ್ಧತಿಯ ವಿಷಬೀಜವನ್ನು ಬಿತ್ತುತ್ತಿರುವ ಮನುವಾದಿಗಳ ವಿರುದ್ಧ ಜಾತ್ಯತೀತ ಶಕ್ತಿಗಳು ಒಂದಾಗಿ ರಾಷ್ಟ್ರದ ಒಳಿತಿಗಾಗಿ ಹೋರಾಡಬೇಕಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್ ಕರೆ ನೀಡಿದ್ದಾರೆ. ಉತ್ತರಾಖಂಡ ರಾಜ್ಯದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣಗೊಳಿಸಿದ ಪ್ರಕರಣವನ್ನು ಖಂಡಿಸಿ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಎಫ್‌ಐಆರ್ ದಾಖಲಿಸಿರುವುದನ್ನು ವಿರೋಧಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ, ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗಳು, ಮಡಿಕೇರಿ ಬ್ಲಾಕ್ ಹಾಗೂ ನಗರ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಬಿಜೆಪಿಯ ದ್ವೇಷ ರಾಜಕಾರಣವನ್ನು ತಿರಸ್ಕರಿಸಿ ದೇಶದ ಏಕತೆಗಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾಗಿದೆ. ಬಿಜೆಪಿಯಿಂದ ಶೋಷಿತ ಜನಾಂಗಗಳ…

Read More

ಮಡಿಕೇರಿ, NEWS DESK ಸೆ. 12: ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ನೂತನ ಕಚೇರಿಯನ್ನು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ನಿಕಟಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಸೇರಿದಂತೆ ಗಣ್ಯರು ದೀಪ ಬೆಳಗಿಸಿ, ಕನ್ನಡಾಂಬೆಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿದರು. ಬಳಿಕ ನಾಡಗೀತೆಯೊಂದಿಗೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಎಂ.ಪಿ. ಕೇಶವ ಕಾಮತ್ ಅವರು, ಮೂರ್ನಾಡು ಹೋಬಳಿ ಘಟಕಕ್ಕೆ ಪಂಚಾಯಿತಿಯ ವತಿಯಿಂದ ಕಚೇರಿ ದೊರೆತಿರುವುದು ಸಂತಸದ ವಿಚಾರವಾಗಿದೆ. ಇದಕ್ಕಾಗಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಒಂದು ವರ್ಷದಿಂದ ನಡೆಸಿದ ನಿರಂತರ ಪ್ರಯತ್ನಕ್ಕೆ ಇದೀಗ ಫಲ ದೊರೆತಿದೆ. ಕೊಡಗು ಜಿಲ್ಲೆಯಲ್ಲಿ ಕೆಲವೇ ಹೋಬಳಿ ಘಟಕಗಳಿಗೆ ಸ್ವಂತ ಕಚೇರಿ ಸೌಲಭ್ಯವಿದ್ದು, ಇದೀಗ ಮೂರ್ನಾಡು ಘಟಕವೂ ಆ ಪಟ್ಟಿಗೆ ಸೇರ್ಪಡೆಯಾಗಿರುವುದು ಹೆಮ್ಮೆಯ…

Read More

ವಿರಾಜಪೇಟೆ, NEWS DESK ಸೆ.12: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ 44ನೇ ವರ್ಷದ ಅದ್ದೂರಿ ಗಣೇಶೋತ್ಸವ ಸಮಾರಂಭ ನಡೆಯಲಿದೆ. ಸೆಪ್ಟೆಂಬರ್ 14ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ, ವಿಶೇಷ ಪೂಜೆ ಹಾಗೂ ಅನ್ನದಾನ ಸೇವೆಗಳು ನಡೆಯಲಿವೆ. ಒಟ್ಟು ಏಳು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಪ್ರತಿದಿನ ಮಧ್ಯಾಹ್ನ ಹಾಗೂ ಸಂಜೆ ವಿಶೇಷ ಪೂಜೆ ಮತ್ತು ಭಕ್ತಾದಿಗಳಿಗೆ ಅನ್ನದಾನ ವ್ಯವಸ್ಥೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 20ರಂದು ಗೌರಿ-ಗಣೇಶ ಮೂರ್ತಿಗಳ ವಿಸರ್ಜನೋತ್ಸವ ನಡೆಯಲಿದೆ. ಹೂವಿನಿಂದ ಅಲಂಕರಿಸಲಾದ ಮಂಟಪದಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಚಂಡೆ ಸೇವೆ, ಭಜನೆ, ಕುಣಿತ ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಏಳು ದಿನಗಳ ಕಾಲ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತೀರ್ಥ ಪ್ರಸಾದ…

Read More

ವಿರಾಜಪೇಟೆ, NEWS DESK ಸೆ.12: ಪೂರ್ವಜರು ಕಂಡುಕೊಂಡ ಸಾಂಪ್ರದಾಯಿಕ ಪದ್ಧತಿಗಳು ಸಂಶೋಧನೆಯಿಂದ ಪರಿಷ್ಕೃತಗೊಂಡು ಇಂದಿಗೂ ಬಳಕೆಯಲ್ಲಿವೆ. ದೇಶದ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಂಶೋಧನೆಗಳು ಪೂರಕವಾಗಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅಶೋಕ್ ಎಸ್. ಅಲೂರ ಅಭಿಪ್ರಾಯಪಟ್ಟರು. ಸೇಂಟ್ ಆನ್ಸ್ ಪದವಿ ಕಾಲೇಜು ಹಾಗೂ ಎಂ.ಕಾಂ. ಸ್ನಾತಕೋತ್ತರ ಅಧ್ಯಯನ ಕೇಂದ್ರ, ಐಕ್ಯೂಎಸಿ ಮತ್ತು ಐ.ಪಿ.ಆರ್. ಕೋಶ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ “ಬೌದ್ಧಿಕ ಆಸ್ತಿ ಹಕ್ಕುಗಳು, ಸಂಶೋಧನೆಯಿಂದ ನಾವೀನ್ಯತೆ ಮತ್ತು ವಾಣಿಜ್ಯೀಕರಣ” ವಿಷಯದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸೃಜನಶೀಲತೆಯನ್ನು ಬೆಳೆಸಿಕೊಂಡು ಹೊಸ ಉದ್ಯಮಗಳನ್ನು ಸ್ಥಾಪಿಸುವ ಗುರಿ ಹೊಂದಬೇಕು. ಸಮಾಜದ ಬೇಡಿಕೆಗಳಿಗೆ ಸ್ಪಂದಿಸಿ, ಆಧುನಿಕ ಯುಗಕ್ಕೆ ತಕ್ಕಂತಹ ನೂತನ ಆವಿಷ್ಕಾರಗಳನ್ನು ಕಂಡುಕೊಂಡು ವಾಣಿಜ್ಯ ಅಭಿವೃದ್ಧಿಗೆ ಸಹಕರಿಸುವಂತಾಗಬೇಕು ಎಂದು ಹೇಳಿದರು. ಕೆಲವು ವಸ್ತುಗಳ…

Read More

ಮಡಿಕೇರಿ, NEWS DESK ಸೆ. 12: ಮಹಾರಾಷ್ಟ್ರದ ಕೊಲ್ಹಾಪುರದ ಸಂಜೀವನ್ ಶಾಲೆಯಲ್ಲಿ ನಡೆದ ದಕ್ಷಿಣ ವಲಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ ಬಾಲಕಿಯರ ಹಾಗೂ ಬಾಲಕರ ಹಾಕಿ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿ ಗಮನಾರ್ಹ ಸಾಧನೆ ಮಾಡಿವೆ. ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು, ಇದೇ ತಿಂಗಳು ಪಂಜಾಬ್‌ನ ಅಮೃತಸರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿರುವುದು ಕೊಡಗು ವಿದ್ಯಾಲಯದ ಕ್ರೀಡಾ ಕ್ಷೇತ್ರದ ಹೆಮ್ಮೆಯ ಸಾಧನೆಯಾಗಿದೆ. ಬಾಲಕಿಯರ ತಂಡವು ಲೀಗ್ ಹಂತದಲ್ಲಿ ಡಿಫೆನ್ಸ್ ಕೆರಿಯರ್ ಅಕಾಡೆಮಿ ವಿರುದ್ಧ 18–0 ಹಾಗೂ ಡೆಲ್ಲಿ ಪಬ್ಲಿಕ್ ಸ್ಕೂಲ್, ಮೈಸೂರು ವಿರುದ್ಧ 6–0 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿತು. ಸೆಮಿಫೈನಲ್‌ನಲ್ಲಿ ಬೆಂಗಳೂರಿನ ಜನನ ಸ್ವೀಕರ್ ತಂಡವನ್ನು 6–0 ಅಂತರದಲ್ಲಿ ಮಣಿಸಿ ಫೈನಲ್ ಪ್ರವೇಶಿಸಿತು. ಫೈನಲ್ ಪಂದ್ಯದಲ್ಲಿ ಆತಿಥೇಯ ಸಂಜೀವನ್ ಶಾಲೆ, ಕೊಲ್ಹಾಪುರ ತಂಡವನ್ನು 4–3 ಗೋಲುಗಳ ಅಂತರದಲ್ಲಿ ರೋಚಕವಾಗಿ ಸೋಲಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಬಾಲಕಿಯರ ತಂಡದ ನಾಯಕಿಯಾಗಿ ಲಕ್ಷ್ಯ ಪೊನ್ನಕ್ಕ…

Read More

ಸಂಪಾಜೆ, NEWS DESK ಸೆ.11: ಮಗುವಿನ ಭವಿಷ್ಯಕ್ಕೆ ಭೂಮಿಕೆ ಸಿದ್ಧವಾಗುವುದು ಅಮ್ಮನ ಮಡಿಲಿನಲ್ಲಿಯೇ. ಮಕ್ಕಳಿಗೆ ತಾಯಿ ನೀಡುವ ಸಮಯ ಮತ್ತು ಪ್ರೀತಿಗೆ ಸಮಾನವಾದದ್ದು ಜಗತ್ತಿನಲ್ಲಿ ಬೇರಾವುದೂ ಇಲ್ಲ ಎಂದು ಸಾಹಿತಿ ಹಾಗೂ ಉಪನ್ಯಾಸಕಿ ಜಯಲಕ್ಷ್ಮಿ ಕೆ. ಅಭಿಪ್ರಾಯಪಟ್ಟರು. ಸಂಪಾಜೆಯ ಕೀಲಾರು ಪ್ರತಿಷ್ಠಾನದ ವತಿಯಿಂದ ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಯಂದಿರಿಗೆ ಜಾಗೃತಿ ಕಾರ್ಯಕ್ರಮ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ‘ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ತಾಯಂದಿರ ಪಾತ್ರ’ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು. ಪೋಷಕತ್ವ ಒಂದು ಅದ್ಭುತ ಕಲೆ. ಮಕ್ಕಳನ್ನು ಸಭ್ಯ, ಸುಶಿಕ್ಷಿತ ಹಾಗೂ ಸುಸಂಸ್ಕೃತ ಪ್ರಜೆಗಳನ್ನಾಗಿ ರೂಪಿಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ. ಮಕ್ಕಳ ಕನಸುಗಳು ನನಸಾಗಲು ಹಾಗೂ ಅವರ ಬದುಕು ಪರಿಪೂರ್ಣವಾಗಲು ಮಾತೆಯರ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ತ್ಯಾಗ ಅತ್ಯಗತ್ಯ ಎಂದು ಜಯಲಕ್ಷ್ಮಿ ಹೇಳಿದರು. ಸಂಪಾಜೆ ಎಜುಕೇಶನ್ ಸೊಸೈಟಿಯ ಸಂಚಾಲಕ ಎಂ. ಶಂಕರನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಥಪೂರ್ಣ ಸೇವೆ ಸಲ್ಲಿಸಿ ಶಿಕ್ಷಕ ವೃತ್ತಿಯಿಂದ ನಿವೃತ್ತರಾದ…

Read More

ಸುಂಟಿಕೊಪ್ಪ, NEWS DESK ಸೆ. 11: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಹೋಬಳಿ ಘಟಕದ ಉದ್ಘಾಟನೆ ಹಾಗೂ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಕುಶಾಲನಗರ ತಾಲೂಕು ಅಧ್ಯಕ್ಷ ಶಿವು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಯುವಕರು ಸಂಘಟನೆಗೆ ಸೇರ್ಪಡೆಗೊಂಡರು. ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ ವಿ.ಎಸ್., ರಾಜ್ಯೋತ್ಸವ ಕಾರ್ಯಕ್ರಮದ ಖಜಾಂಜಿ ಅಂತೋನಿ, ಹಿರಿಯ ಸದಸ್ಯರಾದ ಕೆ.ಆರ್. ನಂಜಪ್ಪ, ವಿಲ್ಸನ್ ಹಾಗೂ ಸುಂಟಿಕೊಪ್ಪ ಹೋಬಳಿ ಯುವ ಘಟಕದ ಅಧ್ಯಕ್ಷ ಕ್ಲಿಫರ್ಡ್ ರೊಡ್ರಿಗಸ್ ಅವರ ನೇತೃತ್ವ ಮತ್ತು ಸಹಕಾರದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸುಂಟಿಕೊಪ್ಪ ಹೋಬಳಿ ಘಟಕದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಶರೀಫ್ ಎಂ.ಇ. ಅಧ್ಯಕ್ಷರಾಗಿ ಹಾಗೂ ಶಹಾದ್ ವಿ.ಎ. ಉಪಾಧ್ಯಕ್ಷರಾಗಿ ಆಯ್ಕೆಯಾದರು. ನಿತಿನ್ ಮಂದಣ್ಣ, ನಿತಿನ್ ಎನ್.ಎಸ್., ನವೀನ್, ಸಂಜಯ್ ಹೋಬಳಿ, ರೋಷನ್, ಸಾಧಿಕ್, ಸಮೀರ್, ಸಿದ್ದೀಕ್, ನಾಸೀರ್, ಕರ್ಣ, ರಾಜೇಶ್ ಹಾಗೂ…

Read More

ಕುಶಾಲನಗರ, NEWS DESK ಸೆ.11: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗು ಜಿಲ್ಲೆಯ ಕೊಡುಗೆ ಅಪಾರವಾಗಿದ್ದು, ಜಿಲ್ಲೆಯ ಕವಿಗಳು ಮತ್ತು ಸಾಹಿತಿಗಳ ಸಾಹಿತ್ಯದಲ್ಲಿ ಪಶ್ಚಿಮಘಟ್ಟದ ಪ್ರಕೃತಿ, ಪರಿಸರ, ಜೀವನದಿ ಕಾವೇರಿ, ಜನಪದ, ಸಂಸ್ಕೃತಿ ಹಾಗೂ ಪರಂಪರೆಗೆ ಪ್ರಮುಖ ಸ್ಥಾನ ದೊರೆತಿದೆ ಎಂದು ಚಿಂತಕ ಹಾಗೂ ನಿವೃತ್ತ ಕಲಾ ಶಿಕ್ಷಕ ಉ.ರಾ. ನಾಗೇಶ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಘಟಕ ಹಾಗೂ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ತ್ರಿವೇಣಿ ತ್ರಿಭಾಷಾ ಸಂಘದ ಸಂಯುಕ್ತಾಶ್ರಯದಲ್ಲಿ ‘ಕನ್ನಡ ಸಾಹಿತ್ಯದಲ್ಲಿ ಕೊಡಗು’ ಎಂಬ ವಿಷಯ ಕುರಿತು ಆಯೋಜಿಸಿದ್ದ ಕೆ.ಟಿ. ಸುಬ್ಬರಾವ್ ಅವರ ವಾರ್ಷಿಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊಡಗಿನಲ್ಲಿ ಕನ್ನಡ ಸಾಹಿತ್ಯದ ಬೆಳವಣಿಗೆ ಕುರಿತು ಮಾತನಾಡಿದ ಅವರು, ಜಿಲ್ಲೆ ಕಂಡ ಹೆಸರಾಂತ ಕಥೆಗಾರ್ತಿ ಕೊಡಗಿನ ಗೌರಮ್ಮ, ಹಿರಿಯ ಕವಿ ಹರದಾಸ ಅಪ್ಪಚ್ಚು ಕವಿ, ಕವಿ ಪಂಜೆ ಮಂಗೇಶರಾಯರು, ಸಾಹಿತಿ ಭಾರತೀಸುತ ಸೇರಿದಂತೆ ಇಂದಿನ…

Read More

ಮಡಿಕೇರಿ, ಸೆ.11 NEWS DESK : ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ರಸ್ತೆ, ವಾಹನ ನಿಲುಗಡೆ ಹಾಗೂ ಸೂಚನಾ ಫಲಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸುವುದರ ಜೊತೆಗೆ ಈಗಾಗಲೇ ಇರುವ ಪ್ರವಾಸಿ ತಾಣಗಳ ನಿರ್ವಹಣೆ ಹಾಗೂ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಬೇಕು. ಜಿಲ್ಲೆಯ ನೈಸರ್ಗಿಕ, ಐತಿಹಾಸಿಕ ಹಾಗೂ ಸಾಂಸ್ಕøತಿಕ ಪ್ರವಾಸಿ ತಾಣಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಪ್ರವಾಸೋದ್ಯಮ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ಉತ್ತೇಜಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಟೂರ್ ಅಂಡ್ ಟ್ರಾವೆಲ್ ಅಸೋಸಿಯೇಷನ್‍ನ ವಂಸತ ಅವರು ಮಾತನಾಡಿ, ದಸರಾ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.…

Read More

ಮಡಿಕೇರಿ ಸೆ.11 NEWS DESK : ಜಿಲ್ಲೆಯ ಪ್ರವಾಸಿ ತಾಣಗಳನ್ನು ಪರಿಸರ ಸ್ನೇಹಿಯಾಗಿ ಮತ್ತಷ್ಟು ಜನಪ್ರಿಯಗೊಳಿಸುವುದು, ಸ್ಥಳೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಮತ್ತು ಸಂಘ, ಸಂಸ್ಥೆಯವರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಹೋಂಸ್ಟೇ ಅಸೋಸಿಯೇಷನ್, ಚೇಂಬರ್ ಆಫ್ ಕಾಮರ್ಸ್, ಟೂರ್ ಅಂಡ್ ಟ್ರಾವಲ್ಸ್, ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದರು. ಸಭೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮದ ವೈವಿಧ್ಯತೆ, ಸ್ಥಳೀಯ ಸಂಸ್ಕøತಿ, ಪರಂಪರೆ, ಆಹಾರ, ಕಲೆ ಹಾಗೂ ಪ್ರಕೃತಿ ಸೌಂದರ್ಯವನ್ನು ಪ್ರವಾಸಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಎಚ್.ಶಶಿಧರ್ ಅವರು, ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ…

Read More