ಲೇಖಕ: admin

ಮಡಿಕೇರಿ ಆ.4 NEWS DESK : ರೋಟರ್ಯಾಕ್ಟ್ ಜಿಲ್ಲೆ 3181 ನ ಜಿಲ್ಲಾ ಪ್ರತಿನಿಧಿಯಾಗಿ ಕೊಡಗು ಮೂಲದ ಶ್ರೀರಕ್ಷಾ ಮೈಸೂರಿನಲ್ಲಿ ಆಯೋಜಿತ ಸಮಾರಂಭದಲ್ಲಿ ತನ್ನ ತಂಡದೊಂದಿಗೆ ಪದಗ್ರಹಣ ಸ್ವೀಕರಿಸಿದರು. ಮೈಸೂರಿನ  ಶ್ರೀ ಕಂಠೀರವ ನರಸಿಂಹರಾಜ ಸ್ಪೋಟ್ಸ್೯ ಕ್ಲಬ್ ನಲ್ಲಿ  ಆಯೋಜಿತ ಸಮಾರಂಭದಲ್ಲಿ ರೋಟರ್ಯಾಕ್ಟ್ ಗೆ ಸೇರಿದ 56 ಸಂಸ್ಥೆಗಳಿಗೆ ಜಿಲ್ಲಾ ಪ್ರತಿನಿಧಿಯಾಗಿ ನೇಮಕಗೊಂಡ ಶ್ರೀರಕ್ಷಾ ಮತ್ತು ಕಾಯ೯ದಶಿ೯ಯಾಗಿ  ನೇಮಕಗೊಂಡ  ಮೂಕಳೇರ ತುಳಸಿ  ತಂಗಮ್ಮ ಅವರಿಗೆ ರೋಟರಿ ಗವನ೯ರ್ ಸತೀಶ್ ಬೋಳಾರ್ ಪದಗ್ರಹಣ ನೀಡಿದರು ನಾಪೋಕ್ಲುವಿನ ಹಿರಿಯ ಪತ್ರಕತ೯ ಪ್ರಭಾಕರ್ ಮತ್ತು ಅಶ್ವಿನಿ  ದಂಪತಿ ಪುತ್ರಿಯಾದ ಶ್ರೀರಕ್ಷಾ ಅಧಿಕಾರ ಸ್ವೀಕರಿಸಿ ಮಾತನಾಡಿ, , ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯಿಂದ ರೋಟರ್ಯಾಕ್ಟ್ ನ ಈ ಪ್ರಮುಖ ಹುದ್ದೆಗೆ ನೇಮಕಗೊಂಡ ಸಂತೋಷ ತನ್ನದಾಗಿದ್ದು, ಸಾಕಷ್ಟು ಯೋಜನೆಗಳೊಂದಿಗೆ ಯುವತಂಡದ ನೆರವಿನೊಂದಿಗೆ ಜನಸೇವೆಗೆ ಮುಂದಾಗುವುದಾಗಿ ಭರವಸೆ ನೀಡಿದರು. ಮಾಜಿ ಸೈನಿಕರಿಗೆ ನೆರವು, ಪರಿಸರ ಸಂರಕ್ಷಣೆಗಾಗಿ ಮ್ಯಾರಾಥಾನ್, ಆಥಿ೯ಕ ನಿಧಿ ಸಂಗ್ರಹ, ಕನ್ನಡ ನಾಡು ನುಡಿಗಗಿ ಕಾಯ೯ಕ್ರಮಗಳೂ ಸೇರಿದಂತೆ…

Read More

ಮಡಿಕೇರಿ NEWS DESK ಆ.4 : ಸೋಮವಾರಪೇಟೆ ತಾಲ್ಲೂಕಿನ ಹೊಸಗುತ್ತಿ ಸರಕಾರಿ ಶಾಲೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಡಿ.ವನಜಾಕ್ಷಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಬಿ.ಡಿ.ವನಜಾಕ್ಷಿ ಅವರು ಸಕಲೇಶಪುರ ತಾಲ್ಲೂಕಿನಲ್ಲಿ ಶಿಕ್ಷಕ ವೃತ್ತಿಯನ್ನು ಆರಂಭಿಸಿ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ, ಶನಿವಾರಸಂತೆಯಲ್ಲಿ ಸೇವೆ ಸಲ್ಲಿಸಿದರು. ಪ್ರಸ್ತುತ ಹೊಸಗುತ್ತಿ ಸರಕಾರಿ ಶಾಲೆಯಲ್ಲಿ ವಯೋ ನಿವೃತ್ತಿ ಹೊಂದಿ ತಮ್ಮ 30 ವರ್ಷಗಳ ಸುದೀರ್ಘ ಸೇವೆಯನ್ನು ಸಾರ್ಥಕಗೊಳಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ಪ್ರಮುಖರು, ಶಿಕ್ಷಕರು ಹಾಗೂ ಗ್ರಾಮಸ್ಥರು ಬಿ.ಡಿ.ವನಜಾಕ್ಷಿ ಅವರ ಕರ್ತವ್ಯ ನಿಷ್ಠೆಯನ್ನು ಶ್ಲಾಘಿಸಿ ಸನ್ಮಾನಿಸಿ ಗೌರವಿಸಿದರು.

Read More

ಮಡಿಕೇರಿ ಆ.4 NEWS DESK : ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಸಂಬಂಧ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಮುದಾಯಿಕ, ಸಾಮಾಜಿಕ ಸಾಮರಸ್ಯವನ್ನು-ಉತ್ತೇಜಿಸುವಲ್ಲಿ ಸರ್ಕಾರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಆ ನಿಟ್ಟಿನಲ್ಲಿ ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ ಅಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಪ್ರತೀ ಗ್ರಾ.ಪಂ.ವ್ಯಾಪ್ತಿಯಲ್ಲಿ ತಲಾ ಒಂದು ಭಾರತ್ ಜೋಡೋ ಯುವ ಸಂಘ ಸ್ಥಾಪಿಸಬೇಕಿದೆ. ಪ್ರತೀ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪ್ರತೀ ಪುರಸಭೆಯಲ್ಲಿ ಸರಾಸರಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ನಗರಸಭೆ ವ್ಯಾಪ್ತಿಯಲ್ಲಿ ಸರಾಸರಿ 8…

Read More

ಮಡಿಕೇರಿ NEWS DESK ಆ.4 : ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಿಂದೂ ಜಾಗರಣ ವೇದಿಕೆ ವತಿಯಿಂದ ಕೊಡಗಿನ ಏಳು ಕಡೆಗಳಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಭಾಗವಾಗಿ ಸಭಾ ಕಾರ್ಯಕ್ರಮ, ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥವನ್ನು ಆಯೋಜಿಸಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಭೋಜೇಗೌಡ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಆ.7ರಂದು ಸಂಜೆ 6 ಗಂಟೆಗೆ ನಗರದ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸುವುದರ ಮೂಲಕ ಪಂಜಿನ ಮೆರವಣಿಗೆ ಆರಂಭಗೊಳ್ಳಲಿದೆ. ಸಂಜೆ 7 ಗಂಟೆಗೆ ಕಾವೇರಿ ಹಾಲ್‌ನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ಆ.8ರಂದು ಸಂಜೆ 6 ಗಂಟೆಗೆ ಮಾದಾಪುರದ ಇಗ್ಗೋಡ್ಲು ಶ್ರೀ ಚಾಮುಂಡೇಶ್ವರಿ ದೇವಾಲಯದಿಂದ ಪಂಜಿನ ಮೆರವಣಿಗೆ ಆರಂಭವಾಗಿ ಎಫ್‌ಎಂಸಿ ರಸ್ತೆಯ ಮೂಲಕ ಶ್ರೀಗಣಪತಿ ದೇವಾಲಯದವರೆಗೆ ಸಾಗಲಿದೆ. 7.30ಗಂಟೆಗೆೆ ಸಭಾ ಕಾರ್ಯಕ್ರಮ ನಡೆಯಲಿದೆ. ಕೊಡ್ಲಿಪೇಟೆಯಲ್ಲಿ ಆ.9 ರಂದು ಸಂಜೆ 6 ಗಂಟೆಗೆ ಆರ್‌ಎಂಸಿ ಮಾರುಕಟ್ಟೆ ಸಮೀಪದ…

Read More

ಮಡಿಕೇರಿ ಆ.3 NEWS DESK : ಕೊಡಗು ಪತ್ರಕರ್ತ ಸಂಘ ಪೊನ್ನಂಪೇಟೆ ತಾಲೂಕು ಘಟಕ, ಮಡಿಕೇರಿ ವಿಸ್ತಾರಣ ಶಿಕ್ಷಣ ಘಟಕ ಮತ್ತು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಸಹಯೋಗದಲ್ಲಿ ಪೊನ್ನಂಪೇಟೆ ತಾಲೂಕು ಘಟಕದ ಅಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ ಅವರ ಮುಂದಾಳತ್ವದಲ್ಲಿ ಅರಣ್ಯ ಮಹಾವಿದ್ಯಾಲಯದ ಗದ್ದೆಯಲ್ಲಿ ಆಯೋಜಿಸಿದ್ದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಜಿಲ್ಲೆಯ ಪತ್ರಕರ್ತರು ಕೆಸರಿನಲ್ಲಿ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಘಟಕದ ಕ್ಷೇತ್ರ ಅಧೀಕ್ಷಕ ಡಾ. ಸಿ. ಪ್ರಶಾಂತ್ ಅವರು ಚೆಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ಕೆಸರುಗದ್ದೆ ಕ್ರೀಡಾಕೂಟ ಎನ್ನುವುದು ಕೊಡಗಿನ ಅನಾದಿಕಾಲದ ಸಂಪ್ರದಾಯಗಳಲ್ಲಿ ಒಂದಾಗಿದೆ, ಇಂತಹ ಕ್ರೀಡಾಕೂಟಗಳಿಂದ ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರಲು ಸಾಧ್ಯವಾಗುತ್ತದೆಂದರಲ್ಲದೆ ದಿನಗಳಲ್ಲಿಯೂ ಕೂಡ ಗ್ರಾಮ ಮಟ್ಟದಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವಂತಾಗಲಿ ಎಂದು ಆಶೀಸಿದರು. ಹ್ಯಾಂಡ್‌ಬಾಲ್ , ಹಗ್ಗಜಗ್ಗಾಟ, ಹಾಗೂ ಓಟದ ಸ್ಪರ್ಧೆ, ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆಯ ಸುಮಾರು 50 ಕ್ಕೂ ಹೆಚ್ಚು ಪತ್ರಕರ್ತರು ಪಾಲ್ಗೊಂಡು…

Read More

ಮಡಿಕೇರಿ ಆ.03 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲೆಯ ವತಿಯಿಂದ ವಿರಾಜಪೇಟೆ ಗ್ರಾಮಾಂತರ ಹಾಗೂ ಪಟ್ಟಣ ಪೊಲೀಸ್ ಠಾಣೆಗಳ ಸಿಬ್ಬಂದಿಗಾಗಿ ಎಚ್‍ಐವಿ, ಸಿಪಿಲಿಸ್, ಕ್ಷಯರೋಗ, ವೈರಲ್ ಹೆಪಟೈಟಿಸ್, ಅಸಾಂಕ್ರಾಮಿಕ ರೋಗಗಳು ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಒಳಗೊಂಡ ಸಮಗ್ರ ಆರೋಗ್ಯ ತಪಾಸಣಾ ಶಿಬಿರವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ವಿರಾಜಪೇಟೆ ಡಿವೈಎಸ್‍ಪಿ ಮಹೇಶ್ ಕುಮಾರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅನುಪ್ ಮಾದಪ್ಪ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ವೈದ್ಯಾಧಿಕಾರಿ ಡಾ.ಸೌಮ್ಯಶ್ರೀ ಹಾಗೂ ಐಸಿಟಿಸಿ (ಚರ್ಮರೋಗ ತಜ್ಞರು), ಸರ್ಕಾರಿ ಆಸ್ಪತ್ರೆ ವಿರಾಜಪೇಟೆ, ಡಾ.ಹರೀಶ್, ಡಾ.ಅರ್ಚನಾ, ಉಪ ನಿರೀಕ್ಷಕ ಪ್ರಮೋದ್ ಹಾಗೂ ಲತಾ, ಐಸಿಟಿಸಿ ಆಪ್ತ ಸಮಾಲೋಚಕರಾದ ಚಿಟ್ಟಿಯಪ್ಪ ಹಾಗೂ ಚಂದ್ರಶೇಖರ್, ಎಸ್‍ಟಿಎಸ್ ವಿನಿಲ್ ಉಪಸ್ಥಿತರಿದ್ದರು. ಈ ಶಿಬಿರವನ್ನು ಐಸಿಟಿಸಿ, ಎನ್‍ಟಿಇಪಿ, ಎನ್‍ಸಿಡಿ, ಆರ್‍ಬಿಎಸ್‍ಕೆ ಹಾಗೂ ಎನ್‍ವಿಎಚ್‍ಸಿಪಿ ತಂಡಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಕುಟ್ಟಂದಿ ಹಾಗೂ ಕಾಕೋಟುಪರಂಬು ಅವರ ಸಹಯೋಗದೊಂದಿಗೆ ಆಯೋಜಿಸಲಾಯಿತು.…

Read More

ಮಡಿಕೇರಿ ಆ.3 NEWS DESK : ಪತ್ರಕರ್ತನಿಗೆ ಸಮಾಜಮುಖಿ ಬದ್ಧತೆ, ಸತ್ಯನಿಷ್ಠೆ ಮತ್ತು ಜನಪರ ಕಾಳಜಿ ಮುಖ್ಯ. ಪತ್ರಕರ್ತನು ತನ್ನ ಪದವಿಯಿಂದಲ್ಲ, ತನ್ನ ಕಾರ್ಯದಿಂದ ಗುರುತಿಸಲ್ಪಡುತ್ತಾನೆ ಎಂದು ಬೆಳಗಾವಿ ಆವೃತ್ತಿಯ ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ಹೃಷಿಕೇಶ್ ಬಹದ್ದೂರ್ ದೇಸಾಯಿ ಹೇಳಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕವಾಗಿ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಾಗಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪತ್ರಿಕಾ ದಿನವು ಕೇವಲ ಸಂಭ್ರಮದ ದಿನವಲ್ಲ, ಆತ್ಮಾವಲೋಕನ ಮಾಡಿಕೊಳ್ಳುವ ದಿನವೂ ಹೌದು. ಕೃತಕ ಬುದ್ಧಿಮತ್ತೆ (ಎಐ) ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಸಾಂಪ್ರದಾಯಿಕ ಮಾಧ್ಯಮಗಳು ಅಸ್ತಿತ್ವದ ಪ್ರಶ್ನೆಯನ್ನು ಎದುರಿಸುತ್ತಿವೆ. ‘ಎಐ’ನಂತಹ ಅವಿಷ್ಕಾರಗಳು ಪತ್ರಕರ್ತರು ಪ್ರಶ್ನಿಸುವ ಮನೋಭಾವವನ್ನೇ ಕಸಿಯುತ್ತಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೂ ಪರಿಣಾಮ ಬೀರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು ಇಂದು ಫೇಸ್‍ಬುಕ್ ಮುಂತಾದ…

Read More

ವಿರಾಜಪೇಟೆ ಆ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ವಿರಾಜಪೇಟೆ ತಾಲೂಕಿನ ಕಾನೂರು ವಲಯದ ಕುಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕರಾದ ದಿನೇಶ್ ಉದ್ಘಾಟಿಸಿ ಮಾತನಾಡಿ, ಧರ್ಮಸ್ಥಳ ಯೋಜನೆಯ ಜನಮಂಗಳ ಕಾರ್ಯಗಳು ಹಾಗೂ ಸಮಾಜಮುಖಿ ವಿಚಾರಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಡಾ. ಕಾರ್ಯಪ್ಪ ಅವರು, “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋೀಜನೆಯು ಅನೇಕ ಜನಮಂಗಳ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಪ್ರತಿವರ್ಷ ಆಯೋಜಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿನ ಬೆಳವಣಿಗೆಗಳು ಹಾಗೂ ಮಕ್ಕಳ ಕುತೂಹಲದ ಗುಣದಿಂದಾಗಿ ಕೆಲವರು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗಗಳು ಬರುವ ಅಪಾಯವಿದ್ದು, ಜೀವನ ಕತ್ತಲತ್ತ ತಳ್ಳಲ್ಪಡುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ದುಶ್ಚಟ ಮುಕ್ತ ಜೀವನವನ್ನು ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು”ಎಂದು ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿದರು.…

Read More

ವಿರಾಜಪೇಟೆ ಆ.3 NEWS DESK : ಯುವಜನತೆ ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಧಿಕ ಉತ್ಪಾದನೆ ಸಾಧಿಸುವ ಮೂಲಕ ಕೃಷಿ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಾಮದಾಸ್ ಹೆಚ್.ವಿ. ಕರೆ ನೀಡಿದರು. ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಬಿ.ಡಿ. ಮುಕುಂದ ಅವರ ಅತ್ತೂರು ಗದ್ದೆ ಮನೆಯಲ್ಲಿ ಆಯೋಜಿಸಲಾಗಿದ್ದ ಭೂಮಾತೆಯ ಮಡಿಲಲ್ಲಿ ಗದ್ದೆಯಲ್ಲಿ ಗೆಲುವಿನ ಹೆಜ್ಜೆ ಗದ್ದೆ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಜಾನಪದ ಹಾಗೂ ಗ್ರಾಮೀಣ ಕ್ರೀಡೆಗಳ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ಕೆಸರಿನ ಕಿಡಿಗಳು, ಮಣ್ಣಿನ ಮಕ್ಕಳು, ಮಣ್ಣಿನ ಮೇಘಗಳು, ಗದ್ದೆಯ ಗೆಳೆಯರು, ಮಣ್ಣಿನ ರಾಣಿಯರು ಹಾಗೂ ಗ್ರಾಮೀಣ ಚಕ್ರವರ್ತಿಗಳು ಎಂಬ ವಿವಿಧ ತಂಡಗಳು ರಚನೆಗೊಂಡಿದ್ದವು. ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಹಗ್ಗ-ಜಗ್ಗಾಟ, ವಿಷದ ಚೆಂಡು ಹಾಗೂ ಕೆಸರುಗದ್ದೆ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಮ್ಮಿಲನಗೊಂಡರು. :: ಸಮಾಜ ಸೇವಕರಿಗೆ ಸನ್ಮಾನ: ಇದೇ…

Read More

ವಿರಾಜಪೇಟೆ ಆ.3 NEWS DESK : ಸೋಮವಾರಪೇಟೆ ತಾಲೂಕಿನ ಜಂಬೂರಿನಲ್ಲಿ ಇತ್ತೀಚೆಗೆ ಮರ ಬಿದ್ದು ಮೃತಪಟ್ಟ ಅಸ್ಸಾಂ ಮೂಲದ ಇಬ್ಬರು ಕಾರ್ಮಿಕರ ಪರಿಹಾರ ವಿಚಾರದಲ್ಲಿ ಕೆಲವು ರಾಜಕೀಯ ಪಕ್ಷಗಳು ಕ್ರೆಡಿಟ್ ತೆಗೊಳ್ಳಲು ಯತ್ನಿಸುತ್ತಿರುವುದನ್ನು ಯುನೈಟೆಡ್ ಪ್ಲಾಂಟೇಶನ್ ವರ್ಕರ್ಸ್ ಯೂನಿಯನ್ (ಎಐಟಿಯುಸಿ) ತೀವ್ರವಾಗಿ ಖಂಡಿಸಿದೆ. ಯುನೈಟೆಡ್ ಪ್ಲಾಂಟೇಶನ್ ವರ್ಕರ್ಸ್ ಯೂನಿಯನ್ ಕೊಡಗು ಶಾಖೆ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ಧರ್ಮರಾಜ್ ಅವರು, ವಾಸ್ತವಾಂಶವನ್ನು ಮುಂದಿಟ್ಟು ಮಾತನಾಡಿ”ಕೊಡಗು ಜಿಲ್ಲೆಯಲ್ಲಿ 2004 ರಿಂದಲೂ ನಮ್ಮ ಪ್ಲಾಂಟೇಶನ್ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ತೋಟಗಳಲ್ಲಿ ಅನಾಹುತ ಸಂಭವಿಸಿದಾಗ ಕಾರ್ಮಿಕ ಸಂಘಟನೆ ಮತ್ತು ಮಾಲೀಕರ ಸಂಘಟನೆಗಳು ಜಂಟಿಯಾಗಿ ಮಾತುಕತೆ ನಡೆಸಿ ಪರಿಹಾರ ಒದಗಿಸುತ್ತವೆ. ದುರಂತ ಸಂಭವಿಸಿದ ದಿನವೇ ನಾವು ಐಆರ್ ಅಧಿಕಾರಿಯೊಂದಿಗೆ ಸಂಧಾನ ನಡೆಸಿ, ಕಂಪನಿಯಿಂದ ಮೃತರ ಕುಟುಂಬಗಳಿಗೆ ತಲಾ ರೂ 5 ಲಕ್ಷದಂತೆ ಈಗಾಗಲೇ 10 ಲಕ್ಷ ಪರಿಹಾರ ವಿತರಿಸಲಾಗಿದೆ. ಮರಣ ಪ್ರಮಾಣಪತ್ರ ಬಂದ ನಂತರ ಪಿಎಫ್ ಒಳಗೊಂಡಂತೆ ಒಟ್ಟು ರೂ.30 ಲಕ್ಷದಷ್ಟು ಮೊತ್ತ…

Read More