ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ ಬಾಂದವ್ಯವನ್ನು ಗಟ್ಟಿಗೊಳಿಸುವ ಶಾಶ್ವತ ಬಂಧ ಎಂದು ಸೇವ ಭಾರತಿ ಜಿಲ್ಲಾಧ್ಯಕ್ಷರಾದ ಚಂದ್ರನ್ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ರಕ್ಷಾ ಬಂಧನವು ಇಂದು ರಕ್ತ ಸಂಬಂದವನ್ನು ಮೀರಿ ನಿಂತ ಹಬ್ಬವಾಗಿದ್ದು ಸಹೋದರತೆಯನ್ನು ಬಿತ್ತುವ ಹಬ್ಬ. ಸಹೋದರತೆಯಿಂದ ಸಾಮರಸ್ಯ , ಇವೆರಡು ಸೇರಿ ಸಂಘಟನೆ ನಂತರ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಇದು ಕೇವಲ ಹಬ್ಬ ಮಾತ್ರವಲ್ಲ. ಭಾವನೆಗಳನ್ನು ಬೆಸೆಯುವ ಹಬ್ಬವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಪರಸ್ಪರ ಬಬ್ಬರನ್ನೊಬ್ಬರು ರಕ್ಷಣೆ ಮಾಡುತ್ತ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಯುವಶಕ್ತಿ ದೇಶದ ಶಕ್ತಿ ಎಂಬಂತೆ ಉತ್ತಮ ಆದರ್ಶ ಪ್ರಾಯರಾಗಿ ಜೀವನ ನಡೆಸಿ ಎಂದರು . ರಕ್ಷಾ ಬಂಧನ ಆಚರಣೆಗೆ ಭಾರತೀಯ…
ಲೇಖಕ: admin
ಮಡಿಕೇರಿ ಆ.30 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಲಾಗಿರುವ ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ ಕೃತಿಗಳನ್ನು ಸಲ್ಲಿಸುವ ಅವಧಿಯನ್ನು ಒಂದು ವಾರ ವಿಸ್ತರಿಸಲಾಗಿದೆ. ಕೊಡಗು ಜಿಲ್ಲೆಯ ಲೇಖಕರು ರಚಿಸಿರುವ ಉತ್ತಮ ಪುಸ್ತಕಕ್ಕೆ ಪ್ರಶಸ್ತಿ ಪ್ರದಾನಿಸುವ ಉದ್ದೇಶದಿಂದ ಪೇರಿಯಂಡ ಪಿ. ಪೆಮ್ಮಯ್ಯ ಹಾಗೂ ಜಿ.ಕೆ.ದೇವಕಿ ಪೆಮ್ಮಯ್ಯ ದಂಪತಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ಸ್ಥಾಪಿಸಿದ್ದಾರೆ. ಈ ಹಿಂದೆ ಪ್ರಕಟಣೆಯಲ್ಲಿ ಕೃತಿಗಳನ್ನು ಸಲ್ಲಿಸಲು ಆಗಸ್ಟ್ 31, 2026 ಕೊನೆಯ ದಿನವೆಂದು ತಿಳಿಸಲಾಗಿತ್ತು. ಇದೀಗ ಒಂದು ವಾರದ ಅವಧಿ ವಿಸ್ತರಿಸಲಾಗಿದ್ದು, ಆಸಕ್ತರು ತಮ್ಮ ಕೃತಿಗಳನ್ನು ಸೆಪ್ಟೆಂಬರ್ 7, 2026ರೊಳಗೆ ತಲುಪಿಸುವಂತೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ಕೃತಿಗಳನ್ನು ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 94483 46276 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು…
ವಿರಾಜಪೇಟೆ, NEWS DESK ಆ.30: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪರೀಕ್ಷೆಗಳಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸಿ ವಿಶಿಷ್ಟ ಸಾಧನೆ ಮಾಡಿದ ವಿರಾಜಪೇಟೆಯ ಪ್ರತಿಷ್ಠಿತ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ವತಿಯಿಂದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ರೆ. ಫಾ. ಮದಲೈ ಮುತ್ತು, ಕಾಲೇಜು ಪ್ರತಿವರ್ಷವೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಜೊತೆಗೆ ಆಡಳಿತ ಮಂಡಳಿಯ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಕ್ತಿ ಪತ್ರಿಕೆಯ ಸಂಪಾದಕ ಚಿದ್ವಿಲಾಸ್, ಡಿಡಿಪಿಯು ಗಣಪತಿ, ಪಿಯು ಕಾಲೇಜು ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು ಹಾಗೂ…
ವಿರಾಜಪೇಟೆ, NEWS DESK ಆ.30: ಅಮ್ಮತಿಯ ಗುಡ್ ಶೆಫರ್ಡ್ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ. 400 ಮೀಟರ್ ಓಟದ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ಕರ್ನಂದ ಕೃತಿಕಾ ಅಕ್ಕಮ್ಮ ಪ್ರಥಮ ಹಾಗೂ 9ನೇ ತರಗತಿಯ ಕರ್ನಂದ ಶತಕ ಕಾವೇರಮ್ಮ ದ್ವಿತೀಯ ಸ್ಥಾನ ಪಡೆದಿದ್ದಾರೆ. 200 ಮೀಟರ್ ಓಟದಲ್ಲಿ 10ನೇ ತರಗತಿಯ ಬೋವ್ವೆರಿಯಂಡ ಹನ್ಸಿಕ ಪೊನ್ನಪ್ಪ ಪ್ರಥಮ ಸ್ಥಾನ ಗಳಿಸಿದ್ದಾರೆ. 800 ಮೀಟರ್ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಚಬಂಡ ವಿಬಿನ್ ದ್ವಿತೀಯ ಹಾಗೂ 400 ಮೀಟರ್ ಓಟದಲ್ಲಿ 9ನೇ ತರಗತಿಯ ಕುಟ್ಟಂಡ ಚಿರಾಗ್ ಎಲ್. ದ್ವಿತೀಯ ಸ್ಥಾನ ಪಡೆದಿದ್ದಾರೆ. ಗುಂಡು ಎಸೆತ ಸ್ಪರ್ಧೆಯಲ್ಲಿ 10ನೇ ತರಗತಿಯ ಗುಡ್ದಂಡ ಮುತ್ತಮ್ಮ ಟಿ. ತೃತೀಯ ಸ್ಥಾನ ಗಳಿಸಿದ್ದಾರೆ. 4×100 ಮೀಟರ್ ರಿಲೇ ಬಾಲಕಿಯರ ವಿಭಾಗದಲ್ಲಿ ಹನ್ಸಿಕ ಪೊನ್ನಪ್ಪ, ಕುಲ್ಲಚಂಡ ಭೂಮಿಕ ಭೋಜಮ್ಮ, ಕರ್ನಂದ ಶತಕ ಕಾವೇರಮ್ಮ ಹಾಗೂ…
ಮಡಿಕೇರಿ, NEWS DESK ಆ. 30 – ನಗರದ ರೋಟರಿ ವುಡ್ಸ್ ಸಂಸ್ಥೆ ವತಿಯಿಂದ ನಮ್ಮ ಹಬ್ಬ ನಮ್ಮ ಸೇವೆ ಯೋಜನೆಯ ಅಂಗವಾಗಿ ರಕ್ಷಾ ಬಂಧನ್ ಕಾಯ೯ಕ್ರಮವನ್ನು ಆಯೋಜಿಸಲಾಗಿತ್ತು. ಮಡಿಕೇರಿ ನಗರ ಪೊಲೀಸ್ ಠಾಣೆ, , ನಗರ ಮಹಿಳಾ ಪೊಲೀಸ್ ಠಾಣೆ ಮತ್ತು ಮಡಿಕೇರಿ ಮಹಿಳಾ ಕಾಲೇಜ್ ನಲ್ಲಿರಕ್ಷಾ ಬಂಧನ್ ಆಚರಿಸಲಾಯಿತು. ರಕ್ಷಾ ಸೂತ್ರವು ಕೇವಲ ಹಬ್ಬದ ದಿನ ಕ್ಯೆಗೆ ಕಟ್ಟುವ ದಾರವಲ್ಲ, ಅದು ರಕ್ಷಣೆ, ನಂಬಿಕೆ ಮತ್ತು ಶುಭಾಶಯಗಳನ್ನು ಸದಾ ಸಾರುವ ಪವಿತ್ರ ಸಂಕೇತವಾಗಿದೆ, ವೇದ ಕಾಲದಿಂದಲೂ ಯಜ್ಞ, ಪೂಜೆ ಮತ್ತು ಶುಭ ಕಾರ್ಯಗಳ ವೇಳೆ ಪವಿತ್ರ ಮಂತ್ರಗಳಿಂದ ಅಭಿಮಂತ್ರಿಸಿದ ರಕ್ಷಾಸೂತ್ರವನ್ನು ಕಟ್ಟುವ ಸಂಪ್ರದಾಯವಿದೆ… ಈ ದಾರವು ದುಷ್ಟಶಕ್ತಿಗಳಿಂದ ರಕ್ಷಿಸಿ ದ್ಯೆರ್ಯ, ಶುಭ ಮತ್ತು ಪವಿಕ ಕ್ರಪೆಯನ್ನು ನೀಡುತ್ತದೆ ಎಂಬ ನಂಬಿಕೆ ಇತ್ತು..ಕಾಲಕ್ರಮೇಣ ಇದೇ ಸಂಪ್ರದಾಯ ಕುಟುಂಬಗಳಲ್ಲಿಯೂ ಬೆಳೆದು, ಪರಸ್ಪರರ ಒಳಿತು, ಕ್ಷೇಮ ಮತ್ತು ಜವಾಬ್ದಾರಿಯನ್ನು ನೆನಪಿಸುವ ಪವಿತ್ರ ಬಂಧನವಾಯಿತು, ಆದ್ದರಿಂದ ರಕ್ಷಾ ಸೂತ್ರದ ಮಹತ್ವ ಅದನ್ನು…
ಕುಶಾಲನಗರ, NEWS DESK ಆ. 30: ಮೈಸೂರಿನ ಸೇವಾ ಭಾರತಿ ಸಂಸ್ಥೆಯ ವತಿಯಿಂದ ನಿರಂತರ ಮಿತ್ರ ವೃಂದ ಹಾಗೂ ಭವಿಷ್ಯ ಚಾರಿಟೇಬಲ್ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದ ಶಿಕ್ಷಣ ತಜ್ಞರೂ ಆದ ಶೈಕ್ಷಣಿಕ ಸಮಾಲೋಚಕ ಡಾ. ಜಿ. ಅಚ್ಯುತನ್ ಅವರು, ಸಂಪನ್ಮೂಲಗಳ ಕೊರತೆಯಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಹಾಗೂ ಅವರ ಕಲಿಕೆಗೆ ಪ್ರೋತ್ಸಾಹ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸುವ ಉದ್ದೇಶದಿಂದ ನೋಟ್ ಪುಸ್ತಕಗಳ ವಿತರಣೆ ಅತ್ಯುತ್ತಮ ಮತ್ತು ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಈ ಸಾಮಾಜಿಕ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಹಲವಾರು ದಾನಿಗಳು ಸಹಕರಿಸಿದ್ದಾರೆ ಎಂದರು. ಸಮಾಜ ಸೇವೆಯ ಒಂದು ಭಾಗವಾಗಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಬರವಣಿಗೆ ಪುಸ್ತಕಗಳು, ಪೆನ್, ಪೆನ್ಸಿಲ್,…
ಮಡಿಕೇರಿ, NEWS DESK ಆ.30: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಕಾರ್ಯಕಾರಿ ಮಂಡಳಿ ಸಭೆಯು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ವಹಿಸಿದ್ದರು. ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕಳೆದ ಸಾಲಿನಲ್ಲಿ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಪದಾಧಿಕಾರಿಗಳು, ವಿಶೇಷ ಆಹ್ವಾನಿತರು ಮತ್ತು ಸದಸ್ಯರ ಸಭೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕಾರಿ ಸಮಿತಿಯ 6 ಸಭೆಗಳು, ಪದಾಧಿಕಾರಿಗಳ 12 ಸಭೆಗಳು, ಜಿಲ್ಲಾ ಸಮ್ಮೇಳನ ಹಾಗೂ ಮೂರು ತಾಲೂಕು ಸಮ್ಮೇಳನಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. ಇದರೊಂದಿಗೆ ಸಂಸ್ಥಾಪನಾ ದಿನಾಚರಣೆ, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದಿನಾಚರಣೆ, ಸರ್ ಎಂ. ವಿಶ್ವೇಶ್ವರಯ್ಯ ದಿನಾಚರಣೆ ಹಾಗೂ ಮಿರ್ಜಾ ಇಸ್ಮಾಯಿಲ್ ದಿನಾಚರಣೆಗಳನ್ನು ಆಚರಿಸಲಾಗಿದ್ದು, 37 ದತ್ತಿನಿಧಿ ಕಾರ್ಯಕ್ರಮಗಳು ಮತ್ತು 15 ರಾಜ್ಯೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಗೌರವ ಕಾರ್ಯದರ್ಶಿ…
ಮಡಿಕೇರಿ, NEWS DESK ಆ.30 – ಹೊಸ ತಂತ್ರಜ್ಯಾನದ, ನವನವೀನ ಆವಿಷ್ಕಾರದ ಇಂದಿನ ದಿನಗಳಲ್ಲಿ ನಮ್ಮ ಪ್ರಾಚೀನ ಸಂಸ್ಕೃತಿ, ಆಚರನೆಯನ್ನು ಮರೆಯದೇ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಗರದ ವೈದ್ಯ ಸಾಹಿತಿ ಡಾ.ನಡಿಬೈಲು ಉದಯಶಂಕರ್ ಕರೆ ನೀಡಿದ್ದಾರೆ. ನಗರದ ಶ್ರೀ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದಲ್ಲಿ ಶೖತಿಲಯ ತಂಡದಿಂದ ಕೊಡಗು ಕನ್ನಡ ಮತ್ತು ಸಂಸ್ಕೖತಿ ಇಲಾಖೆ, ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿಯ ಸಹಯೋಗದಲ್ಲಿ ಆಯೋಜಿತವಾದ ಶ್ರೀರಾಘವೇಂದ್ರ ಆರಾಧನೆ, ವಿಶ್ವಸಂಗೀತ ದಿನದ ಅಂಗವಾಗಿನ ದಾಸರ ಕೀತ೯ನೆ ಕಾಯ೯ಕ್ರಮವನ್ನು ಉದ್ಗಾಟನಾ ಕಾಯ೯ಕ್ರಮದಲ್ಲಿ ಡಾ.ಉದಯಶಂಕರ್ ಮಾತನಾಡಿದರು. , ದಾಸ ಪರಂಪರೆ ಈ ನಾಡಿನಲ್ಲಿ ಶ್ರೀಮಂತವಾಗಿದೆ. ಎಂಥ ಸಂಕಷ್ಟ, ಸವಾಲು ಎದುರಾದರೂ ದೇವರು ನಮ್ಮನ್ನು ಸುರಕ್ಷಿತವಾಗಿ ಇರಿಸುತ್ತಾನೆ ಎಂಬ ನಂಬಿಕೆಯನ್ನು ದಾಸ ಪರಂಪರೆ ಸೃಷ್ಟಿಸಿದೆ ಎಂದೂ ಅವರು ಹೇಳಿದರು. ಕೊಡಗು ಬ್ರಾಹ್ಮಣ ವಿದ್ಯಾಭಿವೖದ್ದಿ ನಿದಿಯ ಅಧ್ಯಕ್ಷ ರಾಮಚಂದ್ರ ಮೂಗೂರು ಮಾತನಾಡಿ, ಕಲೆ, ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿ ಇಂಥ ಕಾರ್ಯಕ್ರಮಗಳಿಗೆ ಸಹಯೋಗ ನೀಡುತ್ತದೆ ಎಂದರು.…
ಮಡಿಕೇರಿ, NEWS DESK ಆ.30: ಕೊಡಗು ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿಗಳು ರಕ್ಷಾ ಬಂಧನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಹೋದರ–ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ, ಕಾಳಜಿ ಹಾಗೂ ಪರಸ್ಪರ ರಕ್ಷಣೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ಹಾಗೂ ಆಡಳಿತ ಮುಖ್ಯಸ್ಥ ರವಿ ಪಿ. ಉದ್ಘಾಟಿಸಿದರು. ರಕ್ಷಾ ಬಂಧನದ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಡು, ನೃತ್ಯ ಹಾಗೂ ಸಹೋದರ–ಸಹೋದರಿಯರ ನಡುವಿನ ಬಾಂಧವ್ಯವನ್ನು ಬಿಂಬಿಸುವ ನಾಟಕವನ್ನು ಪ್ರಸ್ತುತಪಡಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ರಕ್ಷಾ ಬಂಧನದ ಮಹತ್ವ, ಕುಟುಂಬ ಸಂಬಂಧಗಳ ಮೌಲ್ಯ ಮತ್ತು ಪರಸ್ಪರ ಪ್ರೀತಿ–ಗೌರವದ ಸಂದೇಶವನ್ನು ಸುಂದರವಾಗಿ ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದ ಅಂಗವಾಗಿ 8ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆರು ಗುಂಪುಗಳಾಗಿ ವಿಭಜಿಸಿಕೊಂಡು ಮಡಿಕೇರಿ ನಗರದ ಕೊಡಗು ವಿದ್ಯಾಲಯ ಆಪರ್ಚುನಿಟಿ ಶಾಲೆ ಮತ್ತು ಶಕ್ತಿ ವೃದ್ಧಾಶ್ರಮ, ಸಿ.ಎಂ.ಸಿ. ಹಾಗೂ ಜನತಾ ಬಜಾರ್, ಪೊಲೀಸ್ ಠಾಣೆ, ಹಾಪ್ಕಾಮ್ಸ್ ಮತ್ತು ಅಂಚೆ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ಮಡಿಕೇರಿ NEWS DESK ಆ.30 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಪ್ರಗತಿ ಕುರಿತು ಮಾಹಿತಿ ನೀಡಿದ ಸುಮನ್ ಅವರು 2025-26 ನೇ ಸಾಲಿನಲ್ಲಿ ಸಂಘವು ರೂ.35,20,997 ನಿವ್ವಳ ಲಾಭವನ್ನು ಪಡೆದಿದ್ದು ಸದಸ್ಯರಿಗೆ ಶೇ.14ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದರು. ಸಂಘದಲ್ಲಿ ರೂ.1,25,77,047 ಷೇರು ಬಂಡವಾಳವಿದ್ದು, ಒಟ್ಟು ರೂ.15.86 ಕೋಟಿ ಸಾಲವನ್ನು ವಿತರಿಸಲಾಗಿದೆ. ರೂ.9.45 ಕೋಟಿ ಕೆಸಿಸಿ ಫಸಲು ಸಾಲವನ್ನು ನೀಡಲಾಗಿದೆ. ಒಟ್ಟು ರೂ.6,15,42,000 ಠೇವಣಿಯನ್ನು ಸಂಗ್ರಹಿಸಲಾಗಿದೆ. ಆಡಿಟ್ ವರ್ಗೀಕರಣದಲ್ಲಿ ಸಂಘ “ಎ” ದರ್ಜೆಯಲ್ಲಿ ಮುಂದುವರೆದಿದೆ. 1976ರಲ್ಲಿ ಸಂಘ ಸ್ಥಾಪನೆಗೊಂಡಿದ್ದು ಪ್ರಸ್ತುತ ವರ್ಷ 50ನೇ ವರ್ಷದ ಸಂಭ್ರಮದಲ್ಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಮಹಾಸಭೆಯಲ್ಲಿ 10ನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲಾಯಿತು. ಸಂಘದ ಉಪಾಧ್ಯಕ್ಷ ಪೊಡೊನೋಳನ ಶ್ರೀನಿವಾಸ್, ನಿರ್ದೇಶಕರುಗಳಾದ ಅಯ್ಯಂಡ ಬೆಳ್ಳಿಯಪ್ಪ, ಕೇಕಡ…






