ಮಡಿಕೇರಿ ಜು.7 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮ್ ಕುಮಾರ್ ಆಯ್ಕೆಯಾಗಿದ್ದಾರೆ. ನಗರದ ಕೊಡಗು ಪತ್ರಿಕೆ ಭವನದ ಸಭಾಂಗಣದಲ್ಲಿ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಂ. ಮೊಯ್ದಿನ್, ರೇವತಿ ರಮೇಶ್, ಗೌರವ ಕಾರ್ಯದರ್ಶಿಯಾಗಿ ಭಾರತಿ ರಮೇಶ್, ಕೋಶಾಧಿಕಾರಿಯಾಗಿ ಕಡ್ಲೇರ ತುಳಸಿ ಮೋಹನ್, ಸಹಕಾರ್ಯದರ್ಶಿಯಾಗಿ ಕೆ.ವಿ ಉಮೇಶ್ ಅವರನ್ನು ನೇಮಕ ಮಾಡಲಾಯಿತು. ನಿರ್ದೇಶಕರುಗಳಾಗಿ ಎಂ.ಪಿ.ಕೇಶವ ಕಾಮತ್, ಟಿ.ಪಿ.ರಮೇಶ್, ಅಂಬೇಕಲ್ ನವೀನ್, ಕೆ.ಟಿ.ಬೇಬಿ ಮ್ಯಾಥ್ಯು, ನೆರವಂಡ ಉಮೇಶ್, ಲೋಕನಾಥ್ ಅಮೆಚೂರ್, ಶ್ವೇತಾ ರವೀಂದ್ರ, ಬಿ.ಆರ್.ಜೋಯಪ್ಪ, ಸುನಿತಾ ಪಿ.ಪಿ ರವರನ್ನು ಆರಿಸಲಾಯಿತು. ಗೌರವ ಸಲಹೆಗಾರರಾಗಿ ಬಿ.ಎ ಶಂಷುದ್ದೀನ್, ಎಸ್.ಐ. ಮುನೀರ್ ಅಹ್ಮದ್, ಜಯಪ್ಪ ಹಾನಗಲ್ ಅವರನ್ನು ಆಯ್ಕೆ ಮಾಡಲಾಯಿತು. ಮಹಾಸಭೆಯಲ್ಲಿ ಕಳೆದ ವಾರ್ಷಿಕ ವರದಿಯನ್ನು ಗೌರವ ಕಾರ್ಯದರ್ಶಿ ಭಾರತಿ ರಮೇಶ್ ಮಂಡಿಸಿದರು. ವಾರ್ಷಿಕ ಲೆಕ್ಕಪತ್ರವನ್ನು ಕೋಶಾಧಿಕಾರಿ ಕಡ್ಲೇರ…
ಲೇಖಕ: admin
ವಿರಾಜಪೇಟೆ ಜು.7 NEWS DESK : ಹುಲಿ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಟೈಗರ್ ಔಟ್ಸೈಡ್ ಟೈಗರ್ ರಿಸವ್ರ್ಸ್ -ಟಿಒಟಿಆರ್ ಪೈಲಟ್ ಸ್ಕೀಮ್” ಅಡಿಯಲ್ಲಿ ವಿರಾಜಪೇಟೆ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಪ್ರವಾಸ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ 2025-26 ಯೋಜನೆಯಡಿ ಅರಣ್ಯ ಇಲಾಖೆಯ ವಿರಾಜಪೇಟೆ ವಲಯದ ಪ್ರಾದೇಶೀಕ ವಿಭಾಗದ ವತಿಯಿಂದ ಆಯೋಜನೆಗೊಂಡ ಅರಣ್ಯದಲ್ಲಿ ಅಧ್ಯಯನ ಪ್ರವಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ವಿವಿಧ ಮಹಿಳಾ ಸಂಘಗಳ ಸದಸ್ಯರು, ಮಹಿಳಾ ಸಮಾಜದ ಸದಸ್ಯರು, ಮತ್ತು ಮಕ್ಕಳು ಭಾಗವಹಿಸಿ, ವನ್ಯ ಜೀವಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು. ಕಾಕನಕೋಟೆ ಸಫಾರಿ ಕೇಂದ್ರ, ಬಂಡೀಪುರ, ನಾಗರಹೋಳೆ ವನ್ಯ ಜೀವಿಧಾಮಗಳಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹುಲಿ ಹಾಗೂ ಇತರೆ ವನ್ಯಜೀವಿಗಳ ಸಂರಕ್ಷಣೆ, ಮಾನವ-ವನ್ಯಜೀವಿ ಸಂಘರ್ಷ ತಡೆ, ಅರಣ್ಯದ ಮಹತ್ವದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ವಿರಾಜಪೇಟೆ ತಾಲೂಕು ಅರಣ್ಯ ಇಲಾಖೆಯ ಉಪ…
ಮಡಿಕೇರಿ ಜು.7 NEWS DESK : ಭಾರತ ಸರಕಾರದ ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಎನಿಸಿಕೊಂಡಿರುವ ಡಾ.ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ( ಸಚಿವ ದರ್ಜೆ ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಸಂಸ್ಥೆಯಾದ ತೆಕ್ಕಿಲ್ ಸಮುದಾಯ ಭವನ ಮತ್ತು ತೆಕ್ಕಿಲ್ ಶಿಕ್ಷಣ ಸಂಸ್ಥೆಯ ಕಟ್ಟಡ ಕೆಲಸ ಕಾರ್ಯಗಳಿಗೆ ಮಾರ್ಗದರ್ಶಕರಾಗಿ, ಪೇರಡ್ಕದಲ್ಲಿರುವ ನಮ್ಮ ಕುಟುಂಬದವರು, ಊರಿನವರು, ಮಳೆಗಾಲದಲ್ಲಿ ದೋಣಿಯಲ್ಲಿ ಸಂಚರಿಸುವ ಸಂಧರ್ಭದಲ್ಲಿ ಸಂಪಾಜೆ ಗ್ರಾಮದ ಗೂನಡ್ಕ ಪೆರಡ್ಕಕ್ಕೆ ಜನಾರ್ಧನ ಪೂಜಾರಿಯವರ ಅನುದಾನದಲ್ಲಿ ತೂಗು ಸೇತುವೆಯನ್ನು ನಿರ್ಮಿಸಿ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಟ್ಟ ಒಬ್ಬ ಮುಸ್ಸದ್ಧಿಯಾಗಿದ್ದರು. ಅಲ್ಲದೆ ದೇಶದ ನಾನಾ ಭಾಗದಲ್ಲಿ ತೂಗುಸೇತುವೆ ನಿರ್ಮಿಸಿ ತೂಗುಸೇತುವೆಯ ಸರದಾರರಾಗಿದ್ದಾರೆ ಅವರ ನಿಧನವು ಸಮಾಜಕ್ಕೆ, ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದರು. ಶಿಕ್ಷಣ ಮತ್ತು ಸಮಾಜ ಸೇವೆಗೆ ಅವರು ನೀಡಿದ ಕೊಡುಗೆ ಅಪಾರವಾದದ್ದು, ಭಗವಂತನು ಅವರ…
ಸುಂಟಿಕೊಪ್ಪ ಜು.8 NEWS DESK : ಸಹಕಾರ ಕ್ಷೇತ್ರವು ಪ್ರಜಾಪ್ರಭುತ್ವದ ಮಾದರಿಯಲ್ಲಿ ಪ್ರಶ್ನಿಸುವ ಗುಣಗಳನ್ನು ಪ್ರತಿಯೊಬ್ಬ ಸದಸ್ಯರು ಬೆಳೆಸಿಕೊಂಡಾಗ ಮಾತ್ರ ಸಹಕಾರ ಕ್ಷೇತ್ರವು ಬಲಿಷ್ಠವಾಗಿ ಬೆರೂರಲು ಸಾಧ್ಯವೆಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು. ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘ, ರಂಗಸಮುದ್ರ ಸಹಕಾರ ಧವಸ ಭಂಡಾರ ಸಂಘ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಮೂರು ಸಂಘಗಳ ಜಾಗದ ದಾಖಲೆ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಪ್ರಶ್ನೆ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದು ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ ಎಂದರು. ಗ್ರಾಮೀಣ ಭಾಗದ ಜನತೆ ಹೈನುಗಾರಿಕೆಗೆ ಪ್ರಥಮ ಆದ್ಯತೆ ನೀಡುವ ಮೂಲಕ ಆರ್ಥಿಕವಾಗಿ ಸದೃಢರಾಗಿ ಉತ್ತಮ ಜೀವನ ಕಂಡುಕೊಳ್ಳಬೇಕು ಎಂದು ಕರೆ ನೀಡಿದರು. ಇಲ್ಲಿನ ಸಹಕಾರ ಕ್ಷೇತ್ರದ…
ಮಡಿಕೇರಿ ಜು.7 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಸೌಹಾರ್ದ ಸಹಕಾರ ಸಂಘ ರಚನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಕೊಡಗು ಗೌಡ ಸಮಾಜದಲ್ಲಿರುವ ಯುವ ವೇದಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಯುವ ವೇದಿಕೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಯುವ ವೇದಿಕೆ ಮುಖಾಂತರ ಸೌಹಾರ್ದ ಸಹಕಾರ ಸಂಘ ರಚನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು ರಚನೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ರಾಜ್ಯ ಸೌಹಾರ್ದ ಸಂಯುಕ್ತ ನಿಯಮಿತದ ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರುಪ್ರಸಾದ್ ಬಂಗೇರ, ಜಿಲ್ಲಾ ಸಂಯೋಜಕ ಸುರೇಶ್ ಅವರುಗಳು ಸಹಕಾರ ಸಂಘ ರಚನೆ ಮಾಡುವ ಬಗ್ಗೆ ಮಾಹಿತಿ ಒದಗಿಸಿ, ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರು. ಯುವ ವೇದಿಕೆ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ಮಾತನಾಡಿ, ಏಪ್ರಿಲ್, ಮೇ ತಿಂಗಳಿನಲ್ಲಿ ಏರ್ಪಡಿಸಿದ್ದ ಕೊಡಗು ಗೌಡ ಯುವ ವೇದಿಕೆ ಕ್ರೀಡಾಕೂಟ ಬಹಳ ಅದ್ದೂರಿಯಾಗಿ ನಡೆದಿದೆ. ಇದೇ ಪ್ರಥಮ ಬಾರಿಗೆ ನಡೆಸಲಾದ ರಿಂಕ್ ಹಾಕಿಗೆ ಉತ್ತಮ ಪ್ರತಿಕ್ರಿಯೆ ಬಂದಿದೆ, ಜೊತೆಗೆ…
ಸುಂಟಿಕೊಪ್ಪ ಜು.8 NEWS DESK : ಸಹಕಾರ ಕ್ಷೇತ್ರವು ಪ್ರಜಾಪ್ರಭುತ್ವದ ಮಾದರಿಯಲ್ಲಿ ಪ್ರಶ್ನಿಸುವ ಗುಣಗಳನ್ನು ಪ್ರತಿಯೊಬ್ಬ ಸದಸ್ಯರು ಬೆಳೆಸಿಕೊಂಡಾಗ ಮಾತ್ರ ಸಹಕಾರ ಕ್ಷೇತ್ರವು ಬಲಿಷ್ಠವಾಗಿ ಬೆರೂರಲು ಸಾಧ್ಯವೆಂದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು. ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘ, ರಂಗಸಮುದ್ರ ಸಹಕಾರ ಧವಸ ಭಂಡಾರ ಸಂಘ ಹಾಗೂ ಗುಡ್ಡೆಹೊಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಮೂರು ಸಂಘಗಳ ಜಾಗದ ದಾಖಲೆ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಪ್ರಶ್ನೆ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದು ಸಹಕಾರಿ ಕ್ಷೇತ್ರದಲ್ಲಿ ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ ಎಂದರು. ಗ್ರಾಮೀಣ ಭಾಗದ ಜನತೆ ಹೈನುಗಾರಿಕೆಗೆ ಪ್ರಥಮ ಆದ್ಯತೆ ನೀಡುವ ಮೂಲಕ ಆರ್ಥಿಕವಾಗಿ ಸದೃಢರಾಗಿ ಉತ್ತಮ ಜೀವನ ಕಂಡುಕೊಳ್ಳಬೇಕು ಎಂದು ಕರೆ ನೀಡಿದರು. ಇಲ್ಲಿನ ಸಹಕಾರ ಕ್ಷೇತ್ರದ…
ಗೋಣಿಕೊಪ್ಪ ಜು.7 NEWS DESK : ಒಂದು ಕೋಟಿ ಅನುದಾನದಲ್ಲಿ ನಿರ್ಮಾಣವಾದ ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಲೋಕಾರ್ಪಣೆಗೆ ಸಿದ್ಧವಾಗಿದೆ ಎಂದು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ವೈಲಾಯ ಮಾಹಿತಿ ನೀಡಿದರು. ಕೈಕೇರಿಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 9 ರಂದು ಬೆಳಗ್ಗೆ 10.30ಕ್ಕೆ ಕೊಡಗು ಮೈಸೂರು ಲೋಕಸಭಾಕ್ಷೇತ್ರದ ಸಂಸದಯದವೀರ್ಕೃಷ್ಣದತ್ತ ಚಾಮರಾಜ ಒಡೆಯರ್ ನೂತನ ಸಭಾಭವನ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ತಿಳಿಸಿದರು. ಜತೆಗೆ ವಿಪ್ರಯುವ ಸಂಘದ ಅನ್ನಪೂರ್ಣ ಭೋಜನ ಶಾಲೆಯನ್ನು ವಿರಾಜಪೇಟೆ ವಿಧಾನ ಸಭಾಕ್ಷೇತ್ರದ ಶಾಸಕ ಎ.ಎಸ್.ಪೆÇನ್ನಣ್ಣ ಉದ್ಘಾಟಿಸಲಿದ್ದಾರೆ. ಬಾಳೆ ಕುಂದ್ರು ಶ್ರೀಮಠದ ಪರಮ ಪೂಜ್ಯಜಗದ್ಗುರು ಶಂಕರಾಚಾರ್ಯ ಶ್ರೀವಾಸದೇವ ಸದಾಶಿವಾಶ್ರಮದ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ವೈಲಾಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ವಿಪ್ರಯುವ ಸಂಘದ ಸ್ಥಾಪಕ ಕಾರ್ಯದರ್ಶಿ…
ಮಡಿಕೇರಿ NEWS DESK ಜು.7 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜು.8 ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಭಾರೀ ಗಾಳಿ ಮಳೆಯಿಂದಾಗಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನದಿ ನೀರು ರಸ್ತೆಯನ್ನು ಆವರಿಸಿದೆ. ಜಿಲ್ಲಾ ಕೇಂದ್ರ್ರ ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹಳೇ ಖಾಸಗಿ ಬಸ್ ನಿಲ್ದಾಣಕ್ಕೆ ತೆರಳುವ ಇಳಿಜಾರು ರಸ್ತೆಯ ಒಂದು ಪಾರ್ಶ್ವದಲ್ಲಿನ ಕಾಲ್ನಡಿಗೆಯ ಹಾದಿ ಕುಸಿದು ಹೋಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯಲ್ಲಿನ ವಾಹನ ಸಂಚಾರವನ್ನು ಸೀಮಿತಗೊಳಿಸಲಾಗಿದ್ದು, ಬಸ್ಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದೆ. ಈ ಭೂ ಕುಸಿತದ ಹಿನ್ನೆಲೆ ಮುಖ್ಯ ರಸ್ತೆ ಅಪಾಯಕ್ಕೆ ಸಿಲುಕಿದ್ದು, ರಸ್ತೆಯಲ್ಲಿ ಏಕಮುಖ ಸಂಚಾರ ಜಾರಿ ಮಾಡಲಾಗಿದೆ. ಕೆಎಸ್ಆರ್ಟಿಸಿ ಬಸ್ಗಳು ಕೈಗಾರಿಕಾ ಬಡಾವಣೆ ಮೂಲಕ, ರಾಜಾಸೀಟ್ ಮಾರ್ಗವಾಗಿ ಹಾದು ಹೋಗಲು ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.…
ಮಡಿಕೇರಿ NEWS DESK ಜು.7 : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್ಐಆರ್)ಗೆ ಸಂಬAಧಿಸಿದ ಅಗತ್ಯ ದಾಖಲೆಗಳಿಲ್ಲದೆ ಆದಿವಾಸಿ, ದಲಿತ ಮತ್ತು ಬಡ ವರ್ಗದ ಸಮುದಾಯ ಮತದಾನದಿಂದ ವಂಚಿತವಾಗುವ ಸಾಧ್ಯತೆಗಳಿರುವುದರಿಂದ ಇವರುಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಆಗ್ರಹಿಸಿ ವಿವಿಧ ಶ್ರಮಿಕ ಹಾಗೂ ಆದಿವಾಸಿ ಸಂಘÀಟನೆಗಳಿAದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ರಾಜ್ಯ ಆದಿವಾಸಿಗಳ ಹಕ್ಕುಗಳ ಸಮನ್ವಯ ಸಮಿತಿ ಹಾಗೂ ಕರ್ನಾಟಕ ರಾಜ್ಯ ಕೃಷಿ ಕೂಲಿ ಕಾರ್ಮಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರಮುಖರು ಮತದಾನದ ಹಕ್ಕನ್ನು ಉಳಿಸುವಂತೆ ಆಗ್ರಹಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಭರತ್ ಅವರು ಸ್ವಾತಂತ್ರಾö್ಯನAತರದ ಆರಂಭಿಕ ಕಾಲ ಘಟ್ಟದ ಚುನಾವಣಾ ಆಯೋಗ, ಮತದಾರರ ಪಟ್ಟಿಯಿಂದ ಹೊರಗುಳಿದವರನ್ನು ಪಟ್ಟಿಗೆ ಸೇರ್ಪಡೆಗೊಳಿಸಿ, ಅವರಿಗೆ ಮತದ ಹಕ್ಕನ್ನು ಒದಗಿಸಬೇಕೆನ್ನುವ ಚಿಂತನೆಯನ್ನು ಹೊಂದಿತ್ತು. ಪ್ರಸ್ತುತ ಆಯೋಗ ನಡೆಸುತ್ತಿರುವ ಎಸ್ಐಆರ್ನಿಂದ ಮತ ಪತ್ರದಿಂದ ಹೆಸರು ಬಿಟ್ಟು ಹೋದವರನ್ನು ಮತ್ತೆ ಪಟ್ಟಿಗೆ ಸೇರಿಸುವ…
ಮಡಿಕೇರಿ NEWS DESK ಜು.7 : ದಕ್ಷಿಣ ಕೊಡಗಿನ ಇತಿಹಾಸ ಪ್ರಸಿದ್ಧ ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಪುನರ್ ರಚನೆಗೊಂಡ ನೂತನ ಗರ್ಭಗುಡಿಯಲ್ಲಿ ದೇವರ ಬಿಂಬ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವವು ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಊರ ಕೂಡುಕಟ್ಟಿನ ಯಜಮಾನತ್ವದಲ್ಲಿ ಆರಂಭಗೊoಡಿತು. ಸೋಮವಾರ ಸಂಜೆ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಪುಣ್ಯಾಹ, ಪ್ರಸಾದ ಶುದ್ಧಿ, ವಾಸ್ತು ರಕ್ಕೋಘ್ನ ಹೋಮ, ವಾಸ್ತು ಬಲಿ ನಡೆಯಿತು. ಇಂದು ಗಣಪತಿ ಹೋಮ, ಬಿಂಬ ಶುದ್ಧಿ, ಕಲಶಾಭಿಷೇಕ, ದುರ್ಗಾ ನಮಸ್ಕಾರ ಪೂಜೆ, ಮಂಟಪ ಸಂಸ್ಕಾರ ಮತ್ತಿತರ ಧಾರ್ಮಿಕ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಜು.9 ರವರೆಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.






