ಲೇಖಕ: admin

ಬೆಂಗಳೂರು NEWS DESK ಜ.13 : ಸೋಮವಾರಪೇಟೆ ತಾಲ್ಲೂಕು ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಮತ್ತು ಹೊಸ ಕಟ್ಟಡ ನಿರ್ಮಾಣ ವಿಚಾರವಾಗಿ 2026-2027 ರ ಆಯವ್ಯಯದಲ್ಲಿ ಅನುದಾನ ನೀಡುವ ಸಂಬಂಧ ಇಂದು ಶಾಸಕ ಡಾ.ಮಂತರ್ ಗೌಡ ಅವರು ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಯನ್ನು ಸಲ್ಲಿಸಿದರು.

Read More

ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ಸೋಮವಾರಪೇಟೆ ಮಂಡಲದ ಮಾಜಿ ಅಧ್ಯಕ್ಷ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಕುಮಾರಪ್ಪ (ಕುಮಾರಪ್ಪಣ್ಣ ) ಇಂದು ( ಜ.13 ) ಮೈಸೂರಿನಲ್ಲಿ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಜ.14 ರಂದು ಸುಂಟಿಕೊಪ್ಪ ಸಮೀಪದ ಕಲ್ಲೂರಿನ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನಡೆಯಿತು. ವಿರಾಜಪೇಟೆಯ ಶಿಕ್ಷಕರ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಉದ್ಘಾಟಿಸಿದರು. ಬೆಳ್ತಂಗಡಿ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ರಮೇಶ್, ಬಿ.ಸಿ ಯೋಜನಾಧಿಕಾರಿ ಪ್ರವೀಣ್, ಕೊಡಗು ಜಿಲ್ಲೆಯ ಎಂವೈಎಸ್ ಯೋಜನಾಧಿಕಾರಿ ಪ್ರವೀಣ್, ಕೊಡಗು ಜಿಲ್ಲಾ ಆಡಿಟರ್ ಪ್ರಮೋದ್, ತಾಲೂಕಿನ ಯೋಜನಾಧಿಕಾರಿ ಹರೀಶ್ ಕಾರ್ಯಾಗಾರದ ವಿಚಾರವನ್ನು ಸೇವಾ ಪ್ರತಿನಿಧಿಗಳಿಗೆ ವಿವರಿಸಿ ಮಾಹಿತಿ ನೀಡಿದರು. ಈ ಸಂದರ್ಭ ವಿವಿಧ ವಲಯಗಳ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Read More

ಬೆಂಗಳೂರು ಜ.13 NEWS DESK  : ರಾಜ್ಯದಲ್ಲಿ ವ್ಯಕ್ತಿ ಅಥವಾ ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸುವ ಅಮಾನವೀಯ ಪದ್ಧತಿಗೆ ಕಾನೂನುಬದ್ಧ ಕಡಿವಾಣ ಹಾಕುವ ಉದ್ದೇಶದಿಂದ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಅಧಿನಿಯಮ–2025’ಕ್ಕೆ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ ಅಂಕಿತ ಹಾಕಿದ್ದು, ಈ ಮೂಲಕ ಅಧಿನಿಯಮವು ರಾಜ್ಯಾದ್ಯಂತ ಕಾನೂನಾಗಿ ಜಾರಿಗೊಳ್ಳಲಿದೆ. ಈ ಮಹತ್ವದ ಬೆಳವಣಿಗೆಯನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವ್ಯಕ್ತಿ ಘನತೆ ರಕ್ಷಣೆ, ನಾಗರಿಕರಲ್ಲಿ ಭಾತೃತ್ವವನ್ನು ಉತ್ತೇಜಿಸುವುದು ಹಾಗೂ ಮೂಲಭೂತ ಹಕ್ಕುಗಳನ್ನು ಕಾಪಾಡುವುದು ಈ ಕಾನೂನಿನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಬಹಿಷ್ಕಾರದಂತಹ ಪದ್ಧತಿಗಳು ಮಾನವೀಯ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಈ ಅಧಿನಿಯಮ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. :: ಪಂಚಾಯಿತಿ, ಸಮಿತಿಗಳಿಗೆ ನಿರ್ಬಂಧ :: ಈ ಅಧಿನಿಯಮದ ಪ್ರಕಾರ, ಪಂಚಾಯಿತಿ, ನೋಂದಾಯಿತ ಅಥವಾ ನೋಂದಾಯಿತವಲ್ಲದ, ಔಪಚಾರಿಕ ಅಥವಾ ಅನೌಪಚಾರಿಕ ಯಾವುದೇ ಸಮಿತಿ,…

Read More

ನವದೆಹಲಿ ಜ.13 NEWS DESK : ಈ ವರ್ಷ ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಗೆ ಸಂಬಂಧಿಸಿದಂತೆ ಅದರ ಲೋಗೋ, ಥೀಮ್ ಮತ್ತು ಅಧಿಕೃತ ವೆಬ್‌ಸೈಟ್‌ನ್ನು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ನವದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಡಾ. ಜೈಶಂಕರ್, ಶೃಂಗಸಭೆಯ ಅವಧಿಯಲ್ಲಿ ಜಾಗತಿಕ ಕಲ್ಯಾಣಕ್ಕಾಗಿ ಬ್ರಿಕ್ಸ್ ರಾಷ್ಟ್ರಗಳ ಸಾಮರ್ಥ್ಯವನ್ನು ಒಟ್ಟುಗೂಡಿಸಲು ಭಾರತ ಗಟ್ಟಿಯಾದ ಪ್ರಯತ್ನ ನಡೆಸಲಿದೆ ಎಂದು ಹೇಳಿದರು. :: ಲೋಗೋ ವಿನ್ಯಾಸಕ್ಕೆ ಸಾಂಸ್ಕೃತಿಕ ಸ್ಪರ್ಶ : : ಬ್ರಿಕ್ಸ್ ಶೃಂಗಸಭೆಯ ಲೋಗೋ ಕುರಿತು ವಿವರಿಸಿದ ಸಚಿವರು, ಬ್ರಿಕ್ಸ್ ಧ್ವಜದ ಬಣ್ಣಗಳಲ್ಲಿ ದಳಗಳನ್ನು ಹೊಂದಿರುವ ಕಮಲ ಹೂವು ಹಾಗೂ ಅದರ ಮಧ್ಯಭಾಗದಲ್ಲಿ ನಮಸ್ತೆ ಸೂಚಕವನ್ನು ಒಳಗೊಂಡ ವಿನ್ಯಾಸವನ್ನು ಪರಿಚಯಿಸಿದರು. ಈ ಲೋಗೋ ಭಾರತದ ಸಂಸ್ಕೃತಿ ಮತ್ತು ಆತಿಥ್ಯ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. :: ಶೃಂಗಸಭೆಯ ಆದ್ಯತೆಗಳು : : ಭಾರತದ ಬ್ರಿಕ್ಸ್ ಅಧ್ಯಕ್ಷತೆಯಲ್ಲಿ, ಕೆಳಗಿನ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ…

Read More

ಮಡಿಕೇರಿ ಜ.13 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜನವರಿ, 14 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಜ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವು ಜ.14 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ಡಿ.ಸುಜಿತ್, ನಾಪೋಕ್ಲು…

Read More

ಮಡಿಕೇರಿ ಜ.13 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಕೊಂಪುಳಿರ ಇಂದಿರಾ ರಾಮಚಂದ್ರ, ನಗರಾಧ್ಯಕ್ಷರಾಗಿ ಶಶಿಕಲಾ ಭಗವತಿ ನಗರ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಜಾನಕಿ ವೆಂಕಟೇಶ್ ಚೌಡ್ಲು, ನಗರಾಧ್ಯಕ್ಷರಾಗಿ ಶುಭ ಸೋಮವಾರಪೇಟೆ, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಸವಿತಾ ಸುರೇಶ್ ಶಿರಂಗಾಲ ಹಾಗೂ ನಗರಾಧ್ಯಕ್ಷರಾಗಿ ಸಂಗೀತ ರವಿಕುಮಾರ್ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಮೂರು ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಚರ್ಚಿಸಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಒಪ್ಪಿಗೆ ಮೇರೆಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪಕ್ಷದ ಬಲವರ್ಧನೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್ ತಿಳಿಸಿದರು. ನೂತನ ಅಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಡಾ.ಮಂತರ್ ಗೌಡ ಅವರು ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭ ಸೋಮವಾರಪೇಟೆ…

Read More

ಚೆಟ್ಟಳ್ಳಿ ಜ.13 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತಕ್ಕೆ  ಸಹಕಾರ ವಿದ್ಯಾನಿಧಿ ಚೆಕ್ಕನ್ನು ವಿತರಿಸಲಾಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಿಬ್ಬಂದಿ ಅರುಣ್ ಕುಮಾರ್ ಅವರಿಗೆ ಸಂಘದ ಅಧ್ಯಕ್ಷರಾದ  ಬಲ್ಲಾರಂಡ ಮಣಿ ಉತ್ತಪ್ಪ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರಾದ ಬಿ.ಎಂ.ಕಾಶಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ಎಸ್.ನಂದಿನಿ ಹಾಜರಿದ್ದರು.

Read More

ಮಡಿಕೇರಿ ಜ.13 NEWS DESK : ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ದಕ್ಷತೆ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅಭಿನಂದಿಸಿದರು. ನಗರದ  ಜಿಲ್ಲಾ ಕವಾಯತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಇದ್ದರು.

Read More