ಮಡಿಕೇರಿ ಮೇ 2 : ಕೊಡಗು ಜಿಲ್ಲೆಯಲ್ಲಿ ತ್ರಿಬಲ್ ಎಂಜಿನ್ ಸರ್ಕಾರವಿದೆ, ಸ್ಥಳೀಯ ಆಡಳಿತ, ವಿಧಾನಸಭೆ ಮತ್ತು ಲೋಕಸಭೆಯಲ್ಲೂ ಬಿಜೆಪಿ ಪ್ರತಿನಿಧಿಗಳಿದ್ದಾರೆ. ಆದರೆ ಕೊಡಗಿನ ಪರಿಸ್ಥಿತಿ ನೋಡಿದರೆ ದು:ಖವಾಗುತ್ತದೆ ಎಂದು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಬಿಕೆ.ಹರಿಪ್ರಸಾದ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು ಕಳೆದ 20-25 ವರ್ಷಗಳಿಂದ ಆಡಳಿತ ನಡೆಸಿದವರು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕೂಡ ನೀಡಿಲ್ಲ. ಈ ಬಾರಿ ಜಿಲ್ಲೆಯ ಜನ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಯಾವುದೇ ವ್ಯಕ್ತಿ, ಎಲ್ಲಿ ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ. ಆದರೆ ಸಂಸದ ಪ್ರತಾಪ್ ಸಿಂಹ ಅವರು ಕೊಡಗಿನ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೊರಗಿನವರೆಂದು ಹೇಳಿಕೆ ನೀಡಿರುವುದು ಖಂಡನೀಯ. ಸಂಸದರಾಗಿ ಅವರ ಸ್ಥಾನಕ್ಕೆ ಈ ರೀತಿಯ ಹೇಳಿಕೆ ಶೋಭೆ ತರುವುದಿಲ್ಲ. ಪ್ರತಾಪ್ ಸಿಂಹ ಅವರು ಕೊಡಗಿನವರೇ ಎಂದು ಹರಿಪ್ರಸಾದ್ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ…
ಲೇಖಕ: admin
ಮಡಿಕೇರಿ ಮೇ 2 : ಪ್ರಗತಿಯಲ್ಲ್ಲಿ ಕರ್ನಾಟಕ ದೇಶಕ್ಕೇ ಮಾದರಿಯಾಗಿದ್ದು, ಗುಜರಾತ್ ಮತ್ತು ಉತ್ತರಪ್ರದೇಶದ ಮಾಡೆಲ್ ಇಲ್ಲಿಗೆ ಅಗತ್ಯವಿಲ್ಲವೆಂದು ವಿದಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಪ್ರಗತಿಯಲ್ಲಿ ಉತ್ತರ ಪ್ರದೇಶಕ್ಕಿಂತ 200 ವರ್ಷ ಮತ್ತು ಗುಜರಾತ್ ಗಿಂತ 50 ವರ್ಷ ಮುಂದಿದೆ. ಆದರೂ ಕರ್ನಾಟಕಕ್ಕೆ ಎರಡು ರಾಜ್ಯಗಳ ಮಾಡಲ್ ನ್ನು ಅಳವಡಿಸುವ ಬಿಜೆಪಿ ಹೇಳಿಕೆ ಸರಿಯಲ್ಲವೆಂದು ಹೇಳಿದರು. ಶಾಸಕರ ಖರೀದಿಯ ಮೂಲಕ ರಚನೆಯಾಗಿರುವ ಬಿಜೆಪಿ ಸರ್ಕಾರ ಜನಮನ್ನಣೆಯನ್ನು ಕಳೆದುಕೊಂಡಿದೆ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವ ಸಮೂಹಕ್ಕಾಗಿ ಯಾವುದೇ ಕಾಳಜಿಯ ಕಾರ್ಯಕ್ರಮಗಳು ಜಾರಿಯಾಗಿಲ್ಲ. ಸರ್ಕಾರ ರಚಿಸುವಾಗ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಇದು ಡಬಲ್ ಎಂಜಿನ್ ಸರ್ಕಾರವಲ್ಲ, ಡಬಲ್ ದೋಖಾ ಸರ್ಕಾರ ಎಂದು ಟೀಕಿಸಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಾಗ ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಇವರ ಭರವಸೆಯ ಪ್ರಕಾರ…
ಮಡಿಕೇರಿ ಮೇ 2 : ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರಿಗೆ ಬೆಂಬಲ ಸೂಚಿಸುವುದರಲ್ಲಿ ತಪ್ಪೇನು ಎಂದು ಅವರು ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದು ಸಿದ್ಧಾಂತದ ರಾಜಕಾರಣಕ್ಕೆ ಬೆಲೆ ಇಲ್ಲದಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಕೊಡಗು ಜಿಲ್ಲೆಯವರಿಗೇ ಟಿಕೆಟ್ ನೀಡಬೇಕೆಂದು ನಾನು ಮಾಡಿದ ಮನವಿಗೆ ಕೆಪಿಸಿಸಿ ಸ್ಪಂದನೆ ನೀಡಿಲ್ಲ ಮತ್ತು ನುಡಿದಂತೆ ನಡೆದುಕೊಂಡಿಲ್ಲ. ಆದ್ದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು. ವಿಧಾನಸಭಾ ಚುನಾವಣೆ ಕಳೆದ ನಂತರ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು. ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಅವರು ಬಿಳಿಗೇರಿಯ ದೇವಾಲಯದಲ್ಲಿ ಮುಖಾಮುಖಿಯಾದಾಗ ಎಲ್ಲರನ್ನು ಸಮಾನವಾಗಿ ಕಾಣುವಂತೆ ಮತ್ತು ಸಂವಿಧಾನಕ್ಕೆ ಬದ್ಧರಾಗಿರುವಂತೆ ನಾನು ಸಲಹೆ ನೀಡಿದ್ದೆ. ಇದು ನನ್ನ ಕೊನೆಯ ಚುನಾವಣೆಯಾಗಿರುವುದರಿಂದ ಸಲಹೆಯಂತೆ ನಡೆದುಕೊಳ್ಳುವುದಾಗಿ ಅಪ್ಪಚ್ಚುರಂಜನ್ ಅವರು ಭರವಸೆ ನೀಡಿದ್ದಾರೆ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಅವರಿಗೆ…
ಮಡಿಕೇರಿ ಮೇ 2 : ವಿದ್ಯಾರ್ಥಿಗಳಿಗೆ ಮುಂದಿನ ಜೀವನಕ್ಕೆ ಹೆಚ್ಚು ಪ್ರಯೋಜನವಾಗುವಂತಹ ವಿಚಾರವನ್ನು ಒಳಗೊಂಡ ವಸಂತ ವಿಹಾರ ಶಿಬಿರ ಪ್ರಶಂಸನಾರ್ಹ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ನುಡಿದರು. ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ವತಿಯಿಂದ ನಡೆದ ವಸಂತ ವಿಹಾರ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೇಕಾದಷ್ಟು ಬೇಸಿಗೆ ಶಿಬಿರಗಳು ನಡೆಯುತ್ತಿವೆ ಕೆಲವೆಡೆ ನೃತ್ಯ ಕಲಿಕೆ, ಚಿತ್ರಕಲಾ ಕಲಿಕೆ, ಕರಾಟೆ, ಈಜು, ಕ್ರೀಡೆ ಇವೆಲ್ಲವನ್ನೂ ಒಳಗೊಂಡಂತಹ ಬೇಸಿಗೆ ಶಿಬಿರಗಳು ಎಲ್ಲೆಡೆ ಆಗುತ್ತಿದ್ದರೂ ಮಕ್ಕಳಿಗೆ ಜೀವನದ ಮೌಲ್ಯಶಿಕ್ಷಣ ತರಬೇತಿ ಯೋಗಾಸನ, ಪ್ರಾಣಾಯಾಮ, ಏಕಾಗ್ರತೆಯನ್ನು ಬೆಳೆಸಿಕೊಳ್ಳುವ ವಿಧಾನ, ವ್ಯಕ್ತಿತ್ವ ವಿಕಸನ, ಆಟ, ಪ್ರವಾಸ, ಕ್ರೀಡೆ, ಇವೆಲ್ಲವನ್ನು ಒಳಗೊಂಡಂತಹ ಶಿಬಿರ ಪ್ರಶಂಸನಾರ್ಹ ಎಂದರು. ಆಶ್ರಮವು ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ ಜಿಲ್ಲೆಯಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಮತ್ತು ಕೋವಿಡ್ ದುಸ್ಥಿತಿಯ ಸಂದರ್ಭದಲ್ಲಿ ಜನಸ್ನೇಹಿಯಾಗಿ ಲಕ್ಷಾಂತರ ರೂಪಾಯಿಗಳ ಅಹಾರ, ಬಟ್ಟೆ ಬರೆ ಗಳನ್ನು ನೀಡಿ ಮಾನವೀಯತೆ…
ನಾಪೋಕ್ಲು ಮೇ 2 : ಸಮಾಜದ ಎಲ್ಲಾ ವರ್ಗದ ಜನರಿಗೆ ಹತ್ತು ಹಲವಾರು ಕಾರ್ಯಕ್ರಮಗಳು, ಯೋಜನೆಗಳನ್ನು ರೂಪಿಸುವುದು ಮಾತ್ರವಲ್ಲ ಅದನ್ನು ಜನರಿಗೆ ತಲುಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ ಬೋಪಯ್ಯ ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗು ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ರಸ್ತೆಗಳ ಅಭಿವೃದ್ಧಿಯಾಗಿದೆ. ಹುಣಸೂರು- ತಲಕಾವೇರಿ ರಾಜ್ಯ ಹೆದ್ದಾರಿ ಅಭಿವೃದ್ಧಿಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಸಾಲ ಸೌಲಭ್ಯ ಒದಗಿಸಲಾಗಿದ್ದು, ಅವರನ್ನು ಮುಖ್ಯ ವಾಹಿನಿಗೆ ತರಲು ಯೋಜನೆ ರೂಪಿಸಲಾಗಿದೆ ಎಂದರು. ಜಿಲ್ಲೆಯ ಬಹುತೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ವಿರೋಧಿಗಳು ರಸ್ತೆಗಳ ಅಭಿವೃದ್ಧಿ ಆಗಿಲ್ಲ. ಮೂಲಭೂತ ಸೌಕರ್ಯಗಳು ಲಭಿಸಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆಡಳಿತದಲ್ಲಿದ್ದ ಬಿಜೆಪಿ ಪಕ್ಷದ ವೈಫಲ್ಯಗಳನ್ನು ಹೇಳಲಿ ಎಂದು ಸವಾಲು ಹಾಕಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಹಿಂದುತ್ವ ಎನ್ನುವುದು ದೇಶದ ಅಸ್ಮಿತೆ. ಹಾಗೆಂದು…
ಸೋಮವಾರಪೇಟೆ ಮೇ 1 : ಮಡಿಕೇರಿ ಕ್ಷೇತ್ರಕ್ಕೆ ಅರಕಲಗೂಡುವಿನಿಂದ, ವಿರಾಜಪೇಟೆ ಕ್ಷೇತ್ರಕ್ಕೆ ಬೆಂಗಳೂರಿನಿಂದ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಅಮದು ಮಾಡಿಕೊಂಡಿದೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ಸಿಂಹ ಹೇಳಿದರು. ಭಾರತೀಯ ಜನತಾಪಾರ್ಟಿಯ ವತಿಯಿಂದ ಸೋಮವಾರಪೇಟೆ ಜೇಸಿ ವೇದಿಕೆಯಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಸಚಿವ ಬಿ.ಎ.ಜೀವಿಜಯ, ಚಂದ್ರಮೌಳಿ, ಹರಪಳ್ಳಿ ರವೀಂದ್ರ, ಚಂದ್ರಕಲಾ, ಕೆ.ಎಂ.ಲೋಕೇಶ್ ಕುಮಾರ್ ಅವರಿಗೆ ಟಿಕೇಟ್ ನೀಡದೆ, ಹೊರಗಿನವರಿಗೆ ಕೊಟ್ಟು ಗೆಲುವು ಸಾಧಿಸುತ್ತೇವೆ ಎಂಬುದು ಭ್ರಮೆ ಎಂದು ಹೇಳಿದರು. ಕಾಂಗ್ರೆಸ್ನ ಇಬ್ಬರು ಅಭ್ಯರ್ಥಿಗಳು ಗೆಲವು ಸಾಧಿಸಿ ಏನೂ ಮಾಡಬೇಕಿಲ್ಲ. ಎಲ್ಲ ಅಭಿವೃದ್ಧಿ ಕೆಲಸಗಳನ್ನು ಅಪ್ಪಚ್ಚುರಂಜನ್ ಹಾಗೂ ಕೆ.ಜಿ.ಬೋಪಯ್ಯ ಮಾಡಿ ಮುಗಿಸಿದ್ದಾರೆ ಎಂದರು. ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, 1800ಕೋಟಿ ರೂ.ಗಳ ಅನುದಾನ ತಂದು ಮಡಿಕೇರಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಪರಿಶಿಷ್ಟ ಜಾತಿ-ಪಂಗಡದ ಕಾಲೋನಿ, ರಸ್ತೆಗಳನ್ನು ಕಾಂಕ್ರೀಟೀಕರಣ ಮಾಡಲಾಗಿದೆ. ಹಳ್ಳಿ ಹಳ್ಳಿಗೆ ರಸ್ತೆಗಳನ್ನು…
ಸುಂಟಿಕೊಪ್ಪ ಮೇ 1 : ಕಳೆದ 25 ವರ್ಷಗಳಿಂದ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟಿದ್ದೇನೆ ಎಂದು ಶಾಸಕ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಕಾನ್ ಬೈಲ್, ನಾಕೂರು ಶಿರಂಗಲ, ಕೊಡಗರಹಳ್ಳಿ, ಕಂಬಿಬಾಣೆ, ಸುಂಟಿಕೊಪ್ಪದಲ್ಲಿ ಪ್ರಚಾರ ನಡೆಸಿದ ಎಂ.ಪಿ.ಅಪ್ಪಚ್ಚು ರಂಜನ್ ಪಟ್ಟಣದಲ್ಲಿ ರೋಡ್ ಶೋ ನಡೆಸಿ, ನಂತರ ಕನ್ನಡ ವೃತ್ತದಲ್ಲಿ ಸಾರ್ವಜನಿಕ ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಳೆದ 25 ವರ್ಷಗಳಲ್ಲಿ ಮಡಿಕೇರಿ ಕ್ಷೇತ್ರದಲ್ಲಿ ಅಭಿವೃದ್ಧಿಗಳನ್ನು ವಿವರಿಸಿ ಹೇಳಿದ ರಂಜನ್, ಪ್ರಗತಿಯೇ ಬಿಜೆಪಿಯ ಮಂತ್ರ, ಆದರಿಂದ ಬಿಜೆಪಿಯೇ ಭರವಸೆ ಎಂದರು. ಪಟ್ಟಣದಲ್ಲಿ ರೋಡ್ ಶೋ ಸುಮಾರು ಎರಡು ಕಿ.ಮೀ. ಸಾಗಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕೊನೆಗೊಂಡಿತು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ಪ್ರಮುಖರಾದ ವಿ.ಕೆ.ಲೋಕೇಶ್, ಅಭಿಮನ್ಯು ಕುಮಾರ್, ತಾ.ಪಂ.ಮಾಜಿ ಉಪಾಧ್ಯಕ್ಷರುಗಳಾದ ಅಭಿಮನ್ಯು ಕುಮಾರ್, ಶಂಕರ ನಾರಾಯಣ ಮಾತನಾಡಿದರು. ಈ ಸಂದರ್ಭ ತಾ.ಪಂ ಮಾಜಿ ಸದಸ್ಯೆ…
ಸೋಮವಾರಪೇಟೆ ಮೇ 2 : ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ, ಜನರ ಮನಸ್ಸನ್ನು ಗೆಲ್ಲಲಿಲ್ಲ. ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಮಾಡಿದ್ದರೆ ಚುನಾವಣಾ ಬಹಿಷ್ಕಾರ ಏಕೆ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಪ್ರಶ್ನಿಸಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರಪೇಟೆ ಜೇಸಿ ವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಈ ಬಾರಿಯೂ ಪ್ರಜ್ಞಾವಂತ ಮತದಾರರು ಅವರಿಗೆ ಮತ ನೀಡಿದರೆ ಮಡಿಕೇರಿ ಕ್ಷೇತ್ರ ಅಭಿವೃದ್ಧಿಯಲ್ಲಿ ಇನ್ನೂ ಇಪ್ಪತ್ತೈದು ವರ್ಷ ಹಿಂದಕ್ಕೆ ಹೋಗಲಿದೆ. ಕಳೆದ 25 ವರ್ಷಗಳಲ್ಲಿ ಯುವ ನಾಯಕರನ್ನು ಬೆಳೆಸಲಿಲ್ಲ ಎಂದು ದೂರಿದರು. ವೈಯಕ್ತಿಕ ಟೀಕೆಯನ್ನು ಮಾಡುವುದು ರಂಜನ್ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದಲ್ಲ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು ಎಂದರು. ಬಿಜೆಪಿಯವರು ಕೇಂದ್ರ ನಾಯಕರನ್ನು ಕರೆದು ರೋಡ್ ಶೋ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ಗೆ ಕಾರ್ಯಕರ್ತರು ಮತ್ತು ಮುಖಂಡರುಗಳೇ ಸ್ಟಾರ್ ಪ್ರಚಾರಕರು. ನಮ್ಮ ಗೆಲುವಿಗೆ ಇವರೇ ಸಾಕು…
ಮಡಿಕೇರಿ ಮೇ 1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾಸಿರ್ ಮಕ್ಕಿ ನಾಪೋಕ್ಲುವಿನಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ನಾಪೋಕ್ಲು ಪಟ್ಟಣದ ಮನೆ, ಅಂಗಡಿ ಮುಂಗಟ್ಟುಗಳಿಗೆ ತೆರಳಿ ತಮಗೆ ಮತ ನೀಡುವಂತೆ ಮನವಿ ಮಾಡಿದರು. ಬಳಿಕ ವಿವಿಧ ಗ್ರಾಮಗಳಿಗೆ ತೆರಳಿ ಮನೆಮನೆಗಳಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ನಾಸಿರ್ ಮಕ್ಕಿ ಕಳೆದ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತರನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿಲ್ಲ. ಕೇವಲ ಮತ ಬ್ಯಾಂಕ್ ಗಾಗಿ ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದರು. ಇದೀಗ ಪರಿಸ್ಥಿತಿ ಬದಲಾಗಿದ್ದು, ಅಲ್ಪಸಂಖ್ಯಾತರು ಪ್ರಜ್ಞಾವಂತರಾಗಿದ್ದಾರೆ. ಆಮಿಷ ಮತ್ತು ಒತ್ತಡಗಳಿಗೆ ಮಣಿಯದೆ ಅಭಿವೃದ್ಧಿಪರ ಚಿಂತನೆಯೊoದಿಗೆ ಮತದಾನ ಮಾಡಲಿದ್ದಾರೆ. ರಾಜಕೀಯ ಪಕ್ಷಗಳು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿವೆ ಎಂದು ಆರೋಪಿಸಿದ ಅವರು, ತಾವು ಭೇಟಿ ನೀಡಿದ ಕಡೆಗಳಲ್ಲಿ ಎಲ್ಲಾ ವರ್ಗದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಈ ಬಾರಿ ವಿರಾಜಪೇಟೆ ಕ್ಷೇತ್ರದಲ್ಲಿ ನಾನು ರಾಜಕೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಲಿದ್ದು, ಗೆಲುವು…
ಮಡಿಕೇರಿ ಮೇ 1 : ಕಾಡಾನೆ ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ನೋಕ್ಯ ಗ್ರಾಮದ ಎಡಪಾರೆ ಎಂಬಲ್ಲಿ ನಡೆದಿದೆ. ಮಲ್ಲಂಗಡ ಸನ್ನಿ ಚಂಗಪ್ಪ(64) ಎಂಬುವವರೇ ಮೃತ ದುರ್ದೈವಿ. ಸೋಮವಾರ ಬೆಳಗ್ಗೆ 8.30 ಸುಮಾರಿಗೆ ಹಸುವನ್ನು ಮೇಯಿಸಲು ಹೋದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಮನೆ ಸಮೀಪದ ಗದ್ದೆಗೆ ಹಸುವನ್ನು ಮೇಯಿಸಲು ಹೋದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ಸನ್ನಿ ಚಂಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.






