ಮಡಿಕೇರಿ ಮೇ 1 : ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಡಿಪಿಐ ಪಕ್ಷ ಸ್ಪರ್ಧೆ ಮಾಡುತ್ತಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಇರುವ ಕಾರಣ ಪಕ್ಷದ ನಿಲುವು ಕುರಿತು ಮಡಿಕೇರಿಯ ಜಿಲ್ಲಾ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಅವರ ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಮತ್ತು ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ನಾಯಕರುಗಳೊಂದಿಗೆ ಚರ್ಚಿಸಲಾಯಿತು. ಜನಪರ ಹೋರಾಟಗಾರ ಅಮೀನ್ ಮೊಹಿಸಿನ್ ಅವರು ಮಡಿಕೇರಿ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡಲಿದ್ದು, ಕ್ಷೇತ್ರದಲ್ಲಿ ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದಾರೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಜೆಸಿಬಿ ಪಕ್ಷಗಳಾಗಿದ್ದು, ಬೇಸತ್ತಿರುವ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಮಡಿಕೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್ಡಿಪಿಐ ಅಭ್ಯರ್ಥಿ ಅಮೀನ್ ಮೊಹಿಸಿನ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ಅಫ್ಸರ್ ಕೊಡ್ಲಿಪೇಟೆ ವಿಶ್ವಾಸ ವ್ಯಕ್ತಪಡಿಸಿದರು. ವಿರಾಜಪೇಟೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕೆ ಇಳಿಸದ ಕಾರಣ ಫ್ಯಾಸಿಸ್ಟ್ ಮನೋಭಾವನೆ ಇರುವ ಅಭ್ಯರ್ಥಿಗಳನ್ನು ಸೋಲಿಸುವ…
ಲೇಖಕ: admin
ಮಡಿಕೇರಿ ಏ.12 : 18 ವರ್ಷದೊಳಗಿನ ಮಕ್ಕಳ ಸ್ಪರ್ಧೆಯಲ್ಲಿ ಮಡಿಕೇರಿ ನಗರದ ಮಾನ್ವಿ ಎಸ್. (ಪ್ರಥಮ) ಮೋಕ್ಷಿತ ಕೆ.ಜೆ. (ದ್ವಿತೀಯ) ಹಾಗೂ ರೀಕ್ಷಿತ (ತೃತೀಯ) ಸ್ಥಾನ ಪಡೆದರು. ಹಾಗೆಯೇ 18 ವರ್ಷ ಮೇಲ್ಪಟ್ಟ ದಿವ್ಯ ಗಾಳಿಬೀಡು (ಪ್ರಥಮ) ಸುಶ್ಮಿತಾ ಟಿ.ಪಿ. (ದ್ವಿತೀಯ) ಹಾಗೂ ರಿವ್ಯ ಎಂ.ಎಂ. ತೃತೀಯ ಸ್ಥಾನ ಪಡೆದರು. ಮತ್ತು ಎಲ್ಲಾ ಸ್ಪರ್ಧಾರ್ಥಿಗಳಿಗೂ ಸಮಾಧನಕರ ಪ್ರಶಸ್ತಿ ಪತ್ರ ನೀಡಲಾಯಿತು.
ಮಡಿಕೇರಿ ಮೇ 1 : ನಮೂನೆ 12 ಡಿ ರಡಿ ಹೆಸರು ನೋಂದಾಯಿಸಿದ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ಹಕ್ಕು ಚಲಾಯಿಸುವ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಸೆಂಟ್ ಜೋಸೆಫ್ ಕಾಲೇಜಿನ ಬಳಿ ಇರುವ 98 ವರ್ಷದ ಲಕ್ಷ್ಮಿನಾರಾಯಣ ಅವರ ಮನೆಗೆ ಭೇಟಿ ನೀಡಿ, ಅಂಚೆ ಮತಪತ್ರದ ಮೂಲಕ ಮತ ಪಡೆಯುವ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಉಪ ವಿಭಾಗಾಧಿಕಾರಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್, ಸೆಕ್ಟರ್ ಅಧಿಕಾರಿ ಹಾಗೂ ನಗರಸಭೆ ಪೌರಾಯುಕ್ತರಾದ ವಿಜಯ್, ಅಧಿಕಾರಿಗಳು ಇದ್ದರು.
ಮಡಿಕೇರಿ ಮೇ 1 : ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಜಾಗೃತಿ(ಸ್ವೀಪ್) ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಸ್ತ್ರೀಶಕ್ತಿ ಒಕ್ಕೂಟಗಳ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ರಂಗೋಲಿ ಸ್ಪರ್ಧಾ ಕಾರ್ಯಕ್ರಮವು ಜರುಗಿತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ರಂಗೋಲಿ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ರೆಹನಾ ಸುಲ್ತಾನ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷರಾದ ಅನಿಲ್ ಎಚ್.ಟಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್, ಸಿಡಿಪಿಒಗಳಾದ ಸೀತಾಲಕ್ಷ್ಮಿ, ಸವಿತಾ ಇತರರು ಇದ್ದರು. ಮಡಿಕೇರಿ ತಾಲ್ಲೂಕಿನಿಂದ ಸುಮಾರು 30 ಕ್ಕೂ ಹೆಚ್ಚು ಮಹಿಳೆಯರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ಬಣ್ಣ ಬಣ್ಣದ ಚಿತ್ತಾರದ ರಂಗೋಲಿ ಬಿಡಿಸಿ ಮತದಾನದ ಮಹತ್ವ…
ಮಡಿಕೇರಿ ಏ.30 : ಮಕ್ಕಳಿಗೆ ಶಿಕ್ಷಣದ ಬೆಳಕನ್ನು ನೀಡುವುದರೊಂದಿಗೆ ‘ಸಂಸ್ಕಾರ’ವನ್ನು ನೀಡುವುದು ಅತ್ಯವಶ್ಯವೆಂದು ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷ ನವೀನ್ ಅಂಬೆಕಲ್ ಅಭಿಪ್ರಾಯಪಟ್ಟಿದ್ದಾರೆ. ಸುಳ್ಯದ ರಂರ ಮಯೂರಿ, ಮಡಿಕೇರಿ ತಾಲ್ಲೂಕು ಕಸಾಪ, ಮಡಿಕೇರಿಯ ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಒಳಾಂಗಣ ಸಭಾಂಗಣದಲ್ಲಿ ಆಯೋಜಿತ ‘ಬಣ್ಣ’ ಶಿಬಿರದ ಸಮಾರೋಪದಲ್ಲಿ ಪಾಲ್ಗೊಂಡು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ರಂಗ ಮಯೂರಿಯ ಪ್ರಮುಖರಾದ ಲೋಕೇಶ್ ಊರುಬೈಲು ಅವರ ಪರಿಕಲ್ಪನೆಯ ಬಣ್ಣ ಶಿಬಿರದಲ್ಲಿ ಮಕ್ಕಳಿಗೆ ನಮ್ಮ ಸಂಸ್ಕೃತಿಯ ಅರಿವಿನೊಂದಿಗೆ, ರಂಗ ತರಬೇತಿಯನ್ನು ನೀಡಿರುವುದಲ್ಲದೆ, ಮಕ್ಕಳಲ್ಲಿ ಸ್ವಚ್ಛತೆಯ ಪರಿಕಲ್ಪನೆಯನ್ನೂ ಮೂಡಿಸುವ ಕೆಲಸ ಮಾಡಿರುವುದು ನಿಜಕ್ಕೂ ಮೆಚ್ಚುಗೆಯ ಅಂಶ. ರಂಗ ಮಯೂರಿಯ ಶಾಖೆಯನ್ನು ಮಡಿಕೇರಿಯಲ್ಲಿ ತೆರೆಯುವ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ತರಬೇತಿಯನ್ನು ನೀಡುವಂತೆ ಅವರು ಮನವಿ ಮಾಡಿದರು. ಮಡಿಕೇರಿಯ ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಕ್ಯೂರೇಟರ್ ರೇಖಾ ಅವರು…
ಮಡಿಕೇರಿ ಏ.30 : ಕಳೆದ 25 ವರ್ಷಗಳಿಂದ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಶಾಸಕರುಗಳು ಜನಪರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಳಜಿ ವಹಿಸದೆ ಇರುವುದರಿಂದ ಈ ಬಾರಿ ಮತದಾರರು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಅವರು ನಡೆಸಿದ ರೋಡ್ ಶೋಗೆ ಸೂಕ್ತ ಸ್ಪಂದನೆ ದೊರೆಯದೆ ನೀರಸವಾಗಿತ್ತು ಎಂದು ಟೀಕಿಸಿದ್ದಾರೆೆ ವಿಜಯ ಸಂಕಲ್ಪ ಯಾತ್ರೆ ವಿಫಲವಾಗಿದ್ದು, 60 ಸ್ಥಾನಗಳನ್ನು ಗೆಲ್ಲಲಾಗದ ಪರಿಸ್ಥಿತಿಯಲ್ಲಿ ಬಿಜೆಪಿ ಇದೆ. ಕೊಡಗಿನಲ್ಲಿ ಶಾಸಕರುಗಳ ನಿರ್ಲಕ್ಷ್ಯ ಮನೋಭಾವಕ್ಕೆ ಜನ ತಕ್ಕ ಉತ್ತರ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲಿದ್ದಾರೆ ಎಂದರು. ವಿರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಅವರನ್ನು ಹೊರಗಿನ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿದೆ. ಪೊನ್ನಣ್ಣ ಹುದಿಕೇರಿಯವರಾಗಿದ್ದು, ಕ್ಷೇತ್ರದ ನಿವಾಸಿಯಾಗಿದ್ದಾರೆ. ಈಗಿರುವ…
ಮಡಿಕೇರಿ ಏ.30 : ವಿಧಾನಸಭಾ ಚುನಾವಣೆಯ ಮತದಾನದಂದು ತಪ್ಪದೆ ಅರ್ಹರೆಲ್ಲರೂ ಮತದಾನ ಮಾಡುವಂತಾಗಲು ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಕಾರ್ಯಕ್ರಮ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜಾಥವು ಭಾನುವಾರ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯ ಮತದಾನದಂದು ಅರ್ಹರೆಲ್ಲರೂ ಮತ ಹಕ್ಕು ಚಲಾಯಿಸಬೇಕು ಎಂದು ಕೋರಿದರು. ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆ ನಿಟ್ಟಿನಲ್ಲಿ ಅರ್ಹರು ತಪ್ಪದೆ ಮತ ಚಲಾಯಿಸಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು ಅವರು ಮಾತನಾಡಿ ಮತದಾನಕ್ಕೆ ಅರ್ಹರಾಗಿರುವ ಎಲ್ಲರೂ ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ…
ಮಡಿಕೇರಿ ಏ.30 : ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಸೋಲುವ ಭೀತಿಯನ್ನು ಎದುರಿಸುತ್ತಿರುವ ಪ್ರತಿಸ್ಪರ್ಧಿಗಳು ಕಾಂಗ್ರೆಸ್ ಮತಗಳನ್ನು ವಿಭಜಿಸುವ ಷಡ್ಯಂತ್ರದಲ್ಲಿ ತೊಡಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆರೋಪಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ ಎನ್ನುವ ಮಾಹಿತಿ ಅರಿತಿರುವ ಪ್ರತಿಸ್ಪರ್ಧಿಗಳು ಹತಾಶ ಮನೋಭಾವದಿಂದ ಕಾಂಗ್ರೆಸ್ ಮತಗಳು ಹಂಚಿ ಹೋಗುವಂತೆ ಕಾರ್ಯತಂತ್ರ ರೂಪಿಸಿದ್ದಾರೆ. ಈ ಕುತಂತ್ರಗಳ ಬಗ್ಗೆ ಮತದಾರರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ. ಸೋಲುವ ಅಭ್ಯರ್ಥಿಗಳನ್ನು ಬೆಂಬಲಿಸಿ ಮತಗಳನ್ನು ಹಾಳು ಮಾಡಿಕೊಳ್ಳದೆ ಜನಪರ ಮತ್ತು ಅಭಿವೃದ್ಧಿಪರ ಚಿಂತನೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು. ಮತಗಳು ಹಂಚಿ ಹೋಗದಂತೆ ನೋಡಿಕೊಳ್ಳಬೇಕು. ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾರ್ಯಗಳಿಂದ ಮತ್ತು ಮೂಲಭೂತ ಸೌಲಭ್ಯಗಳಿಂದ ಕೊಡಗು ವಂಚಿತವಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಜಿಲ್ಲೆಯ ಮತದಾರರು ಜಾಗೃತರಾಗದಿದ್ದಲ್ಲಿ ಮತ್ತೆ ಐದು ವರ್ಷಗಳ ಕಾಲ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ. ಭಾವನೆಗಳನ್ನು ಕೆಣಕುವ ಅಭ್ಯರ್ಥಿಗಳನ್ನು…
ಮಡಿಕೇರಿ ಏ.30 : ಸೂಡಾನ್ ದೇಶದಲ್ಲಿ ಸೇನೆ ಹಾಗೂ ಅರೆ ಸೇನಾಪಡೆಗಳ ನಡುವೆ ಸಂಘರ್ಷ ಸಂಭವಿಸುತ್ತಿದ್ದು, ವಿರಾಜಪೇಟೆ ತಾಲ್ಲೂಕಿನ ಒಂದು ಕುಟುಂಬವನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮೊಹಿದ್ದೀನ್ ಅವರ ಕುಟುಂಬ ಸೂಡಾನಿನ ತೀವ್ರ ಸಂಘರ್ಷದ ಪ್ರದೇಶವಾದ ಖಾರ್ಟೂಮ್ನಲ್ಲಿ ಸಿಲುಕಿತ್ತು. ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಈ ಬಗ್ಗೆ ಮಾಹಿತಿ ಬಂದ ಕೂಡಲೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಆರ್.ಎಂ.ಅನನ್ಯ ವಾಸುದೇವ್ ಅವರಿಗೆ ಈ ಕಾರ್ಯಾಚರಣೆಯ ಜವಾಬ್ದಾರಿಯನ್ನು ವಹಿಸಿದ್ದರು. ಮೊಹಿದ್ದೀನ್ ಅವರ ಕುಟುಂಬದ ಜೊತೆಗೆ ನಿರಂತರವಾದ ಸಂಪರ್ಕ ಸಾಧಿಸಿ, ಧೈರ್ಯವನ್ನು ತುಂಬಿದ ಅನನ್ಯ ವಾಸುದೇವ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದರು. ಪರಿಣಾಮ 8 ತಿಂಗಳ ಹಾಗೂ 2.5 ವರ್ಷದ ಮಕ್ಕಳು ಸೇರಿದಂತೆ ಮೊಹಿದ್ದೀನ್ ಅವರ ಕುಟುಂಬದ 6 ಸದಸ್ಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕ್ಷೇಮವಾಗಿ ಕರೆತರುವಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಯಶಸ್ವಿಯಾಗಿದೆ ಎಂದು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಚೆಯ್ಯಂಡಾಣೆಯಲ್ಲಿ ಪ್ರಚಾರ ಸಭೆ ನಡೆಸಿದರು. ಮತದಾರರನ್ನು ಉದ್ದೇಶಿಸಿ ಮಾತನಾಡಿದ ಹಾಲಿ ಶಾಸಕರು 4 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಅವರು ಚುನಾವಣೆಯ ಪ್ರಚಾರಕ್ಕೆ ಬಂದಾಗ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಂಕಿಅಂಶಗಳನ್ನು ಪಡೆಯಿರಿ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರ ಹಣಾಹಣಿ ಇದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಅವರು ಮಾತನಾಡಿ ರಾಜಕೀಯವಾಗಿ ನನ್ನನ್ನು ಮುಂದೆ ತಂದ ಕ್ಷೇತ್ರ ಚೆಯ್ಯಂಡಾಣೆ. ಈ ಕ್ಷೇತ್ರದ ಮತದಾರರು ಮನಸ್ಸು ಮಾಡಿದರೆ ನಮ್ಮ ಅಭ್ಯರ್ಥಿ ಪೊನ್ನಣ್ಣ ಅವರನ್ನು ಗೆಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಕೆಪಿಸಿಸಿ ಪ್ರಚಾರ ಸಮಿತಿಯ ಗಿರಿಜಾ ಬೆಂಗಳೂರು ಮಾತನಾಡಿ ಪ್ರತಿ ಮನೆ ಮನೆಗೆ ಪೊನ್ನಣ್ಣ ತಲುಪಲು ಸಾಧ್ಯವಿಲ್ಲ, ನೀವೆಲ್ಲ ಪೊನ್ನಣ್ಣ ಅಂತ ಭಾವಿಸಿಕೊಂಡು ಮತಯಾಚನೆ ಮಾಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪ್ರಚಾರ ಸಮಿತಿಯ ಶಿವು ಮಾದಪ್ಪ, ಕೋಡಿರ…






