ಮಡಿಕೇರಿ ಏ.29 : ಅಯ್ಯಂಗೇರಿಯಲ್ಲಿ 50ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಅಯ್ಯಂಗೇರಿ ಬಿಜೆಪಿ ಸತ್ಯಕ್ಕೆ ದೂರವಾದ ಹೇಳಿಕೆ ನೀಡಿದೆ ಎಂದು ಅಯ್ಯಂಗೇರಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೆಸ್ ಬೆಂಬಲಿತ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಎನ್ ಎಸ್ ಯು ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ಎಂ.ಅಬ್ದುಲ್ ರಾಶಿದ್, ಕಾಂಗ್ರೆಸ್ ಪಕ್ಷದಿಂದ ಇಲ್ಲಿಯವರೆಗೆ ಯಾವುದೇ ಕಾರ್ಯಕರ್ತರು ಬಿಜೆಪಿಗೆ ಹೋಗಿಲ್ಲ, ಬಿಜೆಪಿಗೆ ಸೇರ್ಪಡೆಗೊಂಡವರು ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಯ್ಯಂಗೇರಿ ಕಾಂಗ್ರೆಸ್ ವಲಯ ಅಧ್ಯಕ್ಷ ಎಂ.ಎಂ.ಮೊಹಮ್ಮದ್, ಸಣ್ಣ ಪುಲಿಕೋಟು ಕಾಂಗ್ರೆಸ್ ಅಧ್ಯಕ್ಷ ದಾಮೋದರ, ಪ್ರಮುಖರಾದ ಹ್ಯಾರಿಸ್, ಅಬ್ದುಲ್ಲ ಹಾಗೂ ಬಡುವಂಡ ಮೊಯ್ದು ಈ ಸಂದರ್ಭ ಹಾಜರಿದ್ದರು.
ಲೇಖಕ: admin
ಮಡಿಕೇರಿ ಏ.29 : ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಮಿತಿ ಸದಸ್ಯ ಇಂದೂಧರ ಹೊನ್ನಾಪುರ, ಸದಾ ಸಮಾನತೆ, ಸಾಮರಸ್ಯವನ್ನೇ ಬಯಸುವ ದಸಂಸ, ದೇಶ ಮತ್ತು ರಾಜ್ಯದಲ್ಲಿ ಜಾರಿಯಲ್ಲಿರುವ ಸರ್ವಾಧಿಕಾರಿ, ಜನವಿರೋಧಿ ಆಡಳಿತವನ್ನು ಕಿತ್ತೊಗೆಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಗುಂಪುಗಳಾಗಿ ಹಂಚಿಹೋಗಿದ್ದ ಸಮಾನ ಮನಸ್ಕ ದಲಿತ ಸಂಘರ್ಷ ಸಮಿತಿಗಳ ಹತ್ತು ಬಣಗಳನ್ನು ಒಂದುಗೂಡಿಸುವ ಮೂಲಕ ಬೆಂಗಳೂರಿನಲ್ಲಿ ನಡೆದ ಡಾ.ಬಿ.ಆರ್.ಅಂಬೇಸ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡಲು ನಿರ್ಧರಿಸಿದೆ ಎಂದರು. ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರಿಗೆ ನೀಡಬೇಕಾದ ಕಲ್ಯಾಣ ಕಾರ್ಯಕ್ರಮ ಮತ್ತು ಹಲವು ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಕಾರ್ಪೋರೇಟ್ಗಳನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ…
ಮಡಿಕೇರಿ ಏ.29 : ಹದಗೆಟ್ಟಿರುವ ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ನಿರ್ಧರಿಸಿದ್ದು, ಮತದಾರರು ನನಗೆ ಮತದಾನ ಮಾಡುವ ಮೂಲಕ ಜನಸೇವೆಗೆ ಅವಕಾಶ ನೀಡಬೇಕು ಎಂದು ಅಭ್ಯರ್ಥಿ ಪೊನ್ನೆಟಿ ಕೆ.ದರ್ಶನ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ವಿಲಾಸಿ ಜೀವನ, ಮತ್ತೊಬ್ಬರ ನಾಶವನ್ನು ಬಯಸುವುದು ಮತ್ತು ಸರ್ವಾಧಿಕಾರಿ ಧೋರಣೆ ರಾರಾಜಿಸುತ್ತಿದೆ. ಜಾತಿ ಜಾತಿಗಳ ನಡುವೆ ಒಡಕು ಮೂಡಿಸಿ ಅಶಾಂತಿ ಸೃಷ್ಟಿಸುವ ನಾಯಕರು ಹೆಚ್ಚಾಗುತ್ತಿದ್ದಾರೆ. ಈ ರೀತಿಯ ಗೊಂದಲಮಯ ವಾತಾವರಣದಿಂದ ಕ್ಷೇತ್ರವನ್ನು ಮುಕ್ತಗೊಳಿಸುವ ಚಿಂತನೆಗಳೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಮತದಾರರು ಪ್ರಮಾಣಿಕರನ್ನು ಬೆಂಬಲಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಗ್ರಾಮೀಣ ಜನರನ್ನು ಒಡೆದು ಆಳಲಾಗುತ್ತಿದೆ, ಮುಗ್ಧ ಮನಸ್ಸಿನ ಬಡಜನರ ಹಾದಿ ತಪ್ಪಿಸಲಾಗುತ್ತಿದೆ. ಮದ್ಯ ವ್ಯಸನಿಗಳಾಗುತ್ತಿರುವ ಮಂದಿ ತಮ್ಮ ಭವಿಷ್ಯವನ್ನು ಮರೆಯುತ್ತಿದ್ದಾರೆ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ನ್ಯೂನತೆಗಳನ್ನು ಸರಿಪಡಿಸದೆ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಕಾಳಜಿ ವಹಿಸದೆ ಸ್ವಾರ್ಥಕ್ಕಾಗಿ ಅಧಿಕಾರವನ್ನು…
ಮಡಿಕೇರಿ ಏ.29 : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೇ.25 ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ, ಕುಶಾಲನಗರ ತಾಲ್ಲೂಕು ದೂ.ಸಂ.6361802037, ತಾಲ್ಲೂಕು ವಿಸ್ತರಣಾಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.9972171266 ಹಾಗೂ ಮಾಹಿತಿ ಕೇಂದ್ರ ಮಡಿಕೇರಿ 9972799091, ಸೋಮವಾರಪೇಟೆ 8548068519 ಮತ್ತು ವಿರಾಜಪೇಟೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.29 : ಕೊಡಗು ಹೆಗ್ಗಡೆ ಜನಾಂಗದ 20ನೇ ವರ್ಷದ ಕ್ರೀಡೋತ್ಸವಕ್ಕೆ ಮೂರ್ನಾಡು ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಮೇಜರ್ ಮಳ್ಳಡ ದೀಕ್ಷಿತ್ ದೇವಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೊಡಗು ಹೆಗ್ಗಡೆ ಜನಾಂಗದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪರಿಣತರನ್ನುಹೊಂದಿರುವುದು ಉತ್ತಮ ಬೆಳವಣಿಗೆ ಎಂದರು. ಕ್ರೀಡಾಕೂಟವು ಸೋಲು ಗೆಲುವಿನ ಮಾಪನವಾಗದೆ ಜನಾಂಗದ ಮೇಲಿನ ಅಭಿಮಾನವನ್ನು ವೃದ್ಧಿಸಿ ದೇಶಭಿಮಾನವನ್ನು ಇಮ್ಮಡಿಗೊಳಿಸುವ ಕಾರ್ಯಾಗಾರವಾಗಬೇಕೆಂದು ಕರೆ ನೀಡಿದರು. ಕೂಡಗು ಅರಣ್ಯ ಅಪರಾಧ ಪತ್ತೆ ದಳದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತುದಿಮಾಡ ಸವಿ ಮಾತನಾಡಿ, ಕೊಡಗಿನಲ್ಲಿ ಕರ್ತವ್ಯದಲ್ಲಿ ಇರುವಾಗ ಮುಖ್ಯ ಮಂತ್ರಿ ಪದಕ ಸಿಕ್ಕುವುದು ಸೌಭಾಗ್ಯವಾಗಿದ್ದು, ಜನಾಂಗ ಬಾಂಧವರು ಶ್ರಮವಹಿಸಿ ಉನ್ನತ ಹುದ್ದೆಗೇರುವುದರೊಂದಿಗೆ ಜಿಲ್ಲೆಯ ಕೀರ್ತಿಯನ್ನು ಉತ್ತುಂಗಕ್ಕೆರಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಮಾತನಾಡಿ ಕ್ರೀಡಾ ಕೂಟದಲ್ಲಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವಂತೆ ಕ್ರೀಡಾ ಪಟುಗಳಿಗೆ ಶುಭಕೊರಿದರು. ಕೊಡಗು ಹೆಗ್ಗಡೆ ಸಮಾಜದ ಕಾರ್ಯದರ್ಶಿ ಚಂಗಚಂಡ ಕಟ್ಟಿಕಾವೇರಪ್ಪ, ಖಜಾಂಚಿ ಪಾನಿಕುಟ್ಟಿರ…
ಮಡಿಕೇರಿ ಏ.29 : ಜಿಲ್ಲಾ ಬಿಜೆಪಿ ಪ್ರಮುಖರು ಅಮಿತ್ ಶಾ ಅವರಿಗೆ ಕೊಡಗಿನ ಪೇಟವನ್ನು ತೊಡಿಸಿ ಗೌರವಿಸಿದರು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ, ಜನರಿಗೆ ಕೈ ಬೀಸಿ ನಗುಬೀರಿದರು. ಅಮಿತ್ ಶಾ ಅವರು ಸಾಗಿ ಬಂದ ಹಾದಿಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪುಷ್ಪಮಳೆ ಸುರಿಸಿ ಘೋಷಣೆಗಳನ್ನು ಕೂಗಿದರು. ಆದರೆ ಶಾ ಪ್ರಚಾರ ಭಾಷಣ ಮಾಡದೆ ತೆರಳುವ ಮೂಲಕ ಕಾರ್ಯಕರ್ತರಲ್ಲಿ ನಿರಾಶೆ ಮೂಡಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ವಾಹನಗಳಲ್ಲಿ ಆಗಮಿಸಿದ ಸಹಸ್ರಾರು ಕಾರ್ಯಕರ್ತರು, ಶ್ರೀ ಚೌಡೇಶ್ವರಿ ದೇಗುಲದ ಬಳಿಯಿಂದ ಮಹದೇವಪೇಟೆಯವರೆಗೆ ಕಿಕ್ಕಿರಿದು ನೆರೆದಿದ್ದರು. ಅಮಿತ್ ಶಾ ಅವರ ಆಗಮನದ ವಿಳಂಬದೊಂದಿಗೆ ಬಿಸಿಲ ಬೇಗೆಯಿಂದ ಬಳಲಿದರು. ಆದರೆ ಸ್ಥಳ ಬಿಟ್ಟು ಕದಲದೆ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು.
ಮಡಿಕೇರಿ ಏ.29 : ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲೇಬೇಕೆನ್ನುವ ಉದ್ದೇಶದಿಂದ ಪಕ್ಷ ಪ್ರಬಲವಾಗಿ ನೆಲೆಯೂರಿರುವ ಕರಾವಳಿ ಕರ್ನಾಟಕ ಭಾಗದಲ್ಲಿ ಇರುವ ಸ್ಥಾನಗಳನ್ನು ಉಳಿಸಿಕೊಳ್ಳುವುದಕ್ಕಾಗಿ ರಾಷ್ಟ್ರ ಮತ್ತು ರಾಜ್ಯ ನಾಯಕರುಗಳ ದಂಡು ಪ್ರಚಾರದಲ್ಲಿ ತೊಡಗಿದೆ. ಬಿಜೆಪಿಯ ಭದ್ರಕೋಟೆ ಎಂದೇ ಪ್ರತಿಬಿಂಬಿತವಾಗಿರುವ ಕೊಡಗು ಜಿಲ್ಲೆಯ ಇಬ್ಬರು ಅಭ್ಯರ್ಥಿಗಳಾದ ಮಡಿಕೇರಿ ಕ್ಷೇತ್ರದ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ವಿರಾಜಪೇಟೆ ಕ್ಷೇತ್ರದ ಕೆ.ಜಿ.ಬೋಪಯ್ಯ ಅವರುಗಳ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಡಿಕೇರಿಯಲ್ಲಿ ರೋಡ್ ಶೋ ನಡೆಸಿದರು. ನಗರದ ಮಾರುಕಟ್ಟೆ ಬಳಿಯ ಶ್ರೀಚೌಡೇಶ್ವರಿ ದೇಗುಲದಿಂದ ಮಧ್ಯಾಹ್ನ 12.44 ಗಂಟೆಗೆ ಆರಂಭಗೊಂಡ ಚುನಾವಣಾ ರೋಡ್ ಶೋ ಜನರಲ್ ತಿಮ್ಮಯ್ಯ ವೃತ್ತದವರೆಗೆ ನಡೆಯಬೇಕಿತ್ತು. ಆದರೆ ಅಮಿತ್ ಶಾ ಅವರು ಉಡುಪಿಗೆ ತೆರಳಬೇಕಾದ ಅನಿವಾರ್ಯತೆ ಇದ್ದ ಕಾರಣ ಹಳೇ ಖಾಸಗಿ ಬಸ್ ನಿಲ್ದಾಣದ ಸ್ಕ್ವಾಡ್ರನ್ ಲೀಡರ್ ದೇವಯ್ಯ ವೃತ್ತದವರೆಗೆ ಮಾತ್ರ ರೋಡ್ ಶೋ ನಡೆಸಿದರು. ಸುಮಾರು ಅರ್ಧ ಗಂಟೆ ತಡವಾಗಿ ಹೆಲಿಕಾಪ್ಟರ್ನಲ್ಲಿ ನಗರದಂಚಿನ ಗಾಲ್ಫ್ ಮೈದಾನಕ್ಕೆ ಆಗಮಿಸಿದ ಅಮಿತ್…
ಮಡಿಕೇರಿ ಏ.29 : ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿ ಮಡಿಕೇರಿಯಲ್ಲಿ ರೋಡ್ ಶೋ ನಡೆಸುವ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರಾವಳಿ ಕರ್ನಾಟಕವನ್ನು ಬಿಜೆಪಿ ಸಂಪೂರ್ಣವಾಗಿ ಗೆಲ್ಲಲಿದೆ ಮತ್ತು ಕರ್ನಾಟಕದಲ್ಲಿ ನೂರಕ್ಕೆ ನೂರು ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಪೈಪೋಟಿಯೇ ಇಲ್ಲದಿರುವುದರಿಂದ ನಿರೀಕ್ಷೆಯ 150 ಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ. ಪ್ರತಿ ಪಕ್ಷಗಳು ‘ಮೋದಿ’ ಅವರನ್ನು ಕೆಟ್ಟ ಭಾಷೆಯಿಂದ ತೆಗಳಿದರೆ ಬಿಜೆಪಿ ಬೆಂಬಲಿಗರು, ಸಮರ್ಥಕರ ಸಂಖ್ಯೆ ಹೆಚ್ಚಾಗುತ್ತದೆಯೇ ಹೊರತು ಮತ್ತೇನು ಆಗಲಾರದು ಎಂದು ಅಮಿತ್ ಶಾ ಹೇಳಿದರು. ಪುಟ್ಟ ಜಿಲ್ಲೆ ಕೊಡಗಿನಂತಹ ಗುಡ್ಡಗಾಡು ಪ್ರದೇಶದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ರೋಡ್ ಶೋಗೆ ಜನ ಸೇರಿದ್ದು ನೋಡಿದರೆ ಬಿಜೆಪಿಯ ಗೆಲುವು ಮತ್ತು ಕರಾವಳಿ ಕರ್ನಾಟಕದಲ್ಲಿ…
ಮಡಿಕೇರಿ ಏ.29 : ಕೊಡಗು ಗೌಡ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಮರಗೋಡುವಿನಲ್ಲಿ ನಡೆದ ಪಾಣತ್ತಲೆ ಕಪ್ ಫುಟ್ಬಾಲ್ ಅಂಗವಾಗಿ ನಡೆದ ವಿವಾಹಿತ ಮಹಿಳೆಯರ ಮುಕ್ತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೀಂ 11 ಮಾಲ್ದಾರೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ದ್ವಿತೀಯ ಸ್ಥಾನಕ್ಕೆ ಬ್ಲ್ಯಾಕ್ ಪ್ಯಾಂಥರ್ಸ್ ಕಟ್ಟೆಮಾಡು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಫೈನಲ್ ಪಂದ್ಯಾವಳಿಯಲ್ಲಿ ಮೊದಲು ಬ್ಯಾಟ್ ಮಾಡಿದ ಮಾಲ್ದಾರೆ ತಂಡ 4 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 58 ರನ್ ಪೇರಿಸಿತು. ಉತ್ತರವಾಗಿ ಆಡಿದ ಕಟ್ಟೆಮಾಡು ತಂಡ ಮೂರು ವಿಕೆಟ್ ಕಳೆದುಕೊಂಡು 48 ರನ್ಗಳಿಸಿ 10 ರನ್ಗಳ ಅಂತರದಿಂದ ಸೋಲನುಭವಿಸಿತು. ಉತ್ತಮ ಬ್ಯಾಟ್ಸ್ಮೆ ಪ್ರಶಸ್ತಿಯನ್ನು ಮಾಲ್ದಾರೆ ತಂಡದ ಸುಜಿತಾ ಪಡೆದರೆ, ಉತ್ತಮ ಬೌಲರ್ ಪ್ರಶಸ್ತಿಯನ್ನು ಕಟ್ಟೆಮಾಡುವಿನ ಬಿದ್ರುಪಣೆ ಜ್ಯೋತಿ, ಉತ್ತಮ ಆಲ್ರೌಂಡರ್ ಹಾಗೂ ಅತಿ ಹೆಚ್ಚು ರನ್ಗಳಿಕೆಯ ಪ್ರಶಸ್ತಿಯನ್ನು ಮಾಲ್ದಾರೆಯ ಪ್ರಮೀಳಾ ಹಾಗೂ ಬೆಸ್ಟ್ ಫೀಲ್ಡರ್ ಪ್ರಶಸ್ತಿಯನ್ನು ಕಟ್ಟೆಮಾಡುವಿನ ಬಡಕಡ ಶೃಂಗ ಪಡೆದುಕೊಂಡರು. ಕೊಡಗು ಫುಟ್ಬಾಲ್ ಸಂಸ್ಥೆ ಅಧ್ಯಕ್ಷ ಪಾಣತ್ತಲೆ ಜಗದೀಶ್…
ಮಡಿಕೇರಿ ಏ.29 : ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ 5, 7, 10 ಹಾಗೂ +2 ತರಗತಿಗಳಿಗೆ ನಡೆಸುವ ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ದಾರುಲ್ ಉಲೂಂ ಮದ್ರಸ ಕುಶಾಲನಗರ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ ಎಂದು ಪ್ರಾಂಶುಪಾಲರಾದ ತಮ್ಲೀಖ್ ದಾರಿಮಿ ತಿಳಿಸಿದ್ದಾರೆ. ಉಸ್ತಾದ್ ಸ್ವಾಲಿಹ್ ಅಝ್ಹರಿಯವರ 5ನೇ ತರಗತಿಯಲ್ಲಿ 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು ಮಡಿಕೇರಿ ರೇಂಜ್ ಮಟ್ಟದಲ್ಲಿ ಮೊದಲ ಮೂರು ಸ್ಥಾನಗಳನ್ನು ಶೈಖ್ ಅಮಾನ್, ಮುಹಮ್ಮದ್ ಆಮೀರ್,ಆಯಿಷಾ ಫಾಝಿಲಾ ಕ್ರಮವಾಗಿ ಪಡೆದುಕೊಂಡಿದ್ದಾರೆ. ಪ್ರತ್ಯೇಕವಾಗಿ ಶೈಖ್ ಅಮಾನ್ ಜಿಲ್ಲಾ ಮಟ್ಟದಲ್ಲಿ 2ನೇ ಸ್ಥಾನ ಹಾಗೂ ಮುಹಮ್ಮದ್ ಆಮೀರ್ 3ನೇ ಸ್ಥಾನ ಪಡೆದಿದ್ದಾರೆ. ಮುಷ್ತಾಕ್ ದಾರಿಮಿ ಕಲಿಸುತ್ತಿರುವ 7ನೇ ತರಗತಿಯಲ್ಲಿ 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು ರೇಂಜ್ ಮಟ್ಟದಲ್ಲಿ 3ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. 10ನೇ ತರಗತಿಯಲ್ಲಿ ಕಲಿಯುತ್ತಿರುವ ಸಫ್ವಾನ್ ಜೆ ಐ ಎಂಬ ವಿದ್ಯಾರ್ಥಿಯೂ ಡಿಸ್ಟಿಂಕ್ಷನೊಂದಿಗೆ ಕೊಡಗು ಜಿಲ್ಲೆಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಫಾತಿಮಾ ನಾಸರ್ 3ನೇ ಸ್ಥಾನ ಪಡೆದಿದ್ದು…






