ಲೇಖಕ: admin

ಮಡಿಕೇರಿ  ಮಡಿಕೇರಿ ಏ.29 :  ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ‌.ಎ ಮನ್ಸೂರ್  ಆಲಿ  ಕುಟ್ಟ ಭಾಗದಲ್ಲಿ  ಪ್ರಚಾರದ ಮೂಲಕ ಮತಯಾಚನೆ ಮಾಡಿದರು. ಈ ಸಂದರ್ಭ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಆಲಿ, ವಿರಾಜಪೇಟೆ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ವಿರಾಜಪೇಟೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ. ಎಚ್.ಡಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಗೆ ನೀಡಿರುವ ಕೊಡುಗೆಗಳ ಬಗ್ಗೆ ಜನರ ಸ್ಮರಿಸುತ್ತಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ ಮನ್ಸೂರ್ ಆಲಿ ಹೇಳಿದರು. ಜೆಡಿಎಸ್ ಮುಖಂಡರಾದ ಮಜೀದ್ ಚೋಕಂಡಳ್ಳಿ, ಸೈಫು ಚಾಮಿಯಾಲ್, ಆಲಿ ಎಮ್ಮೆಮಾಡು, ರಶೀದ್ ,ಆಸಿಫ್, ಕುಟ್ಟ ಜೆಡಿಎಸ್ ಮುಖಂಡರಾದ ಕುಂಞಾಪು, ರನ್ನಿ ಇದ್ದರು.

Read More

ಸೋಮವಾರಪೇಟೆ ಏ.28 : ಕಾಫಿ ಬೆಳೆಗಾರರ 10 ಎಚ್.ಪಿ ವರೆಗಿನ ಪಂಪ್‌ಸೆಟ್‌ಗಳಿಗೆ ಯಾವುದೇ ಷರತ್ತಿಲ್ಲದೆ ಉಚಿತ ವಿದ್ಯುತ್ ನೀಡಬೇಕು. ಬೆಳೆಗಾರರ ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡಬೇಕು. ರೈತರ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡುವ ರಾಜಕೀಯ ಪಕ್ಷವನ್ನು ರೈತರು ಬೆಂಬಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ ಮನವಿ ಮಾಡಿದೆ. ಕೊಡಗಿನಲ್ಲಿ ರೈತರೇ ಕಾಫಿ ಬೆಳೆಯುತ್ತಿದ್ದಾರೆ. ರೈತರನ್ನು ವಂಚಿಸುವ ಸರ್ಕಾರಗಳಿಗೆ ಮತ ನೀಡಿ ಇವತ್ತು ರೈತರು ಬೀದಿಗೆ ಬಂದಿದ್ದಾರೆ. ಅತೀವೃಷ್ಟಿ, ಅನಾವೃಷ್ಟಿಯಿಂದ ರೈತರ ಸಾಲಗಾರರಾಗಿ ಸಂಕಷ್ಟದಲ್ಲಿದ್ದಾರೆ. ಇನ್ನಾದರೂ ರೈತರು ಬುದ್ದಿ ಕಲಿಯದಿದ್ದರೆ ಮುಂದಿನ ಪೀಳಿಗೆಗೆ ಅನ್ಯಾಯ ಮಾಡಿದಂತೆ ಎಂದು ಸಂಘದ ಉಪಾಧ್ಯಕ್ಷ ಜಿ.ಎಂ. ಹೂವಯ್ಯ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮೇ 10 ರ ಒಳಗೆ ರಾಜಕೀಯ ಪಕ್ಷಗಳು ಕಾಫಿ ಬೆಳೆಗಾರರಿಗೆ ಭರವಸೆ ನೀಡಬೇಕು. ತಪ್ಪಿದಲ್ಲಿ ರೈತ ಸಂಘ ಒಂದು ನಿಧಾರಕ್ಕೆ ಬರಲಿದೆ ಎಂದು ಹೇಳಿದರು. ರೈತ ಸಂಘದ ಹೋರಾಟದಿಂದ ಬೆಳೆಗಾರರ ಪಂಪ್‌ಸೆಟ್‌ಗಳು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿಲ್ಲ.…

Read More

ಮಡಿಕೇರಿ ಏ.28 : ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ಪಂಚಾಯ್ತಿ ವ್ಯಾಪ್ತಿಯ 50 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಅಯ್ಯಂಗೇರಿ ಅಧ್ಯಕ್ಷರಾದ ಕುಯ್ಯಮುಡಿ ರಂಜಿತ್, ಬೂತ್ ಅಧ್ಯಕ್ಷ ಬಾರಿಕೆ ದೀಪು, ದಿನು ಹಾಗೂ ಪಕ್ಷದ ಪ್ರಮುಖರಾದ ಹೊಸೂರು ಸತೀಶ್ ಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Read More

ಸಿದ್ದಾಪುರ ಏ.28 :  ಮತಗಟ್ಟೆ ಸಂಖ್ಯೆ 110ಮತ್ತು111 ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 100ಮಿ. ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಕೋರಿ ಗ್ರಾ.ಪಂ ಸದಸ್ಯರು ಮನವಿ ಸಲ್ಲಿಸಿದ್ದಾರೆ. ಸಿದ್ದಾಪುರ ಗ್ರಾ,ಪಂ ಸದಸ್ಯರಾದ ಪ್ರೇಮ, ಸಮೀರ, ದೇವಜಾನು ಅವರು  ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ   ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರನ್ನು ಭೇಟಿಯಾಗಿ ಅಗತ್ಯ ದಾಖಲೆಗಳೊಂದಿಗೆ ಮನವಿ ಸಲ್ಲಿಸಿದರು.  ಮನವಿ ಸ್ವೀಕರಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಅಗತ್ಯ ಕ್ರಮ ಕೈ ಗೊಳ್ಳುವ ಭರವಸೆ ನೀಡಿದರು. ನಂತರ ಮಾತನಾಡಿದ ಗ್ರಾ.ಪಂ.ಸದಸ್ಯೆ ಪ್ರೇಮ ಈ  ಪ್ರದೇಶದಲ್ಲಿ ಯಾವುದೇ ಬೀದಿ ದೀಪಗಳ ಅಳವಡಿಕೆಯಾಗಿಲ್ಲ, ಕಸವಿಲೆವಾರಿಗೆ ಸೂಕ್ತ ಜಾಗವಿಲ್ಲದೆ  ಈ ಪ್ರದೇಶದಲ್ಲಿ ಶೇಖರಣೆ ಮಾಡಿದ್ದು . ಎರಡು ವಾರದ ಹಿಂದೆ ಈ ಪ್ರದೇಶದಲ್ಲಿ ಶೇಖರಣೆ ಮಾಡಿಟ್ಟಂತಹ ತ್ಯಾಜ್ಯದ ಗೋದಾಮಿಗೆ ರಾತ್ರಿ ಬೆಂಕಿ ಅವಘಡ ನಡೆದಿತ್ತು. ರಸ್ತೆಯಲ್ಲಿಯೇ ಚರಂಡಿ ನೀರು ಹರಿಯುತ್ತಿರುವುದರಿಂದ ಸೋಳ್ಳೆ,ನೊಣಗಳು ಹೆಚ್ಚಿದೆ ಈ ಮತಗಟ್ಟೆ ಸುತ್ತ ನೂರಾರು ಕುಟುಂಬಗಳು ಇದ್ದು ಅಲ್ಲದೆ ಹೊರಗಿನಿಂದ  ಬರುವ ಸಿಬ್ಬಂದಿ ಗಳಿಗೆ ಮಾರಕ ರೋಗ ಹರಡುವ ಭೀತಿ ಇದೆ…

Read More

ಮಡಿಕೇರಿ ಏ.28 : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ದಾಖಲಿಸುವುದಾಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮತಯಾಚಿಸಿದ ಅವರು ಜನರ ಸಂಕಷ್ಟಗಳಿಗೆ ಸಕಾಲದಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದು, ನನ್ನ ಆಯ್ಕೆಯನ್ನು ಎದುರು ನೋಡುತ್ತಿದ್ದಾರೆ. ಇದರಿಂದ ಪ್ರತಿಸ್ಪರ್ಧಿಗಳು ಹತಾಶೆಗೊಂಡಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಮತ್ತು ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮತಯಾಚಿಸಿದರು.

Read More

ಮಡಿಕೇರಿ ಏ.28 :     ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ  ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭ ಕಾಲೇಜು ಆವರಣದಲ್ಲಿ ನಡೆಯಿತು.      ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಎಂ.ಕೆ.ರಮೇಶ್  ರೋಗಿಗಳು ಇಲ್ಲದೆ ವೈದ್ಯರಾಗಲು ಸಾಧ್ಯವಿಲ್ಲ,  ಮುಗುಳುನಗೆಯಲ್ಲಿ  ಚಿಕಿತ್ಸೆ ನೀಡಿದರೆ ಮಾತ್ರ ರೋಗಿಯು ಸಂತೃಪ್ತಿಯಿಂದ ಗುಣಮುಖರಾಗುತ್ತಾರೆ. ಹಣ ಮಾಡಬೇಕೆಂಬ ಉದ್ದೇಶ ಇರುವವರು ವೈದ್ಯ ಕ್ಷೇತ್ರಕ್ಕೆ ಬರಬಾರದು ಎಂದು ಕಿವಿಮಾತು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪದ್ಮಶ್ರೀ ಪುರಸ್ಕೃತ ಡಾ. ಮಾತ ಬಿ.ಮಂಜಮ್ಮ ಜೋಗತ್ತಿ ಅವರು ಮೊದಲ ಬಾರಿಗೆ ವೈದ್ಯ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ತಂದೆ ತಾಯಿಯರ ಕನಸು ನನಸು ಮಾಡಿರುವ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸುವಂತೆ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆಕಾಶ್ ಎಸ್, ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕಾರ್ಯಪ್ಪ…

Read More

ಮಡಿಕೇರಿ ಏ.28 : ಸಮ ಸಮಾಜದ ನಿರ್ಮಾಣಕ್ಕಾಗಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ತಾನು ಸ್ಪರ್ಧಿಸಿದ್ದು, ಮತದಾರರು ಸಹಕಾರ ನೀಡಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ದಲಿತ ಸಂಘರ್ಷ ಸಮಿತಿ(ಭೀಮವಾದ) ಜಿಲ್ಲಾಧ್ಯಕ್ಷ ಕೆ.ಬಿ.ರಾಜು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 42 ವರ್ಷಗಳಿಂದ ಕೊಡಗಿನ ಅಭಿವೃದ್ಧಿ, ಬಡವರು, ದಲಿತರು, ಆದಿವಾಸಿಗಳು ಸೇರಿದಂತೆ ಎಲ್ಲಾ ವರ್ಗದ ಜನರ ಬಗ್ಗೆ ಕಾಳಜಿ ತೋರುತ್ತಾ ಬಂದಿದ್ದೇನೆ. ನೆಲ, ಜಲ, ಪರಿಸರ ಮತ್ತು ಬಡವರ ಪರ ವಿವಿಧ ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದೇನೆ. ಜನ ನನ್ನ ಕಾರ್ಯವನ್ನು ಗುರುತಿಸಿ ಮತ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು. ದೇಶದಲ್ಲಿ ಸಂವಿಧಾನ ಯಥಾಸ್ಥಿತಿಯಲ್ಲಿ ಜಾರಿಯಾಗಿಲ್ಲ, ಬಿಜೆಪಿ ಆಡಳಿತಕ್ಕೆ ಬಂದ ನಂತರ ಬಡವರಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ. ಜಿಲ್ಲೆಯಲ್ಲಿ ಇನ್ನೂ ಕೂಡ ಜೀತ ಪದ್ಧತಿ ಜಾರಿಯಲ್ಲಿದೆ. ಪಾಲೆಮಾಡು ವ್ಯಾಪ್ತಿಯಲ್ಲಿ ಸ್ಮಶಾನಕ್ಕಾಗಿ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಜಿಲ್ಲೆಯಲ್ಲಿ ಉಳಿದುಕೊಳ್ಳಲು ಸೂರಿಲ್ಲದ ಸಾಕಷ್ಟು ಜನರಿದ್ದಾರೆ. ಆದರೆ,…

Read More

ಮಡಿಕೇರಿ ಏ.28 : ಬಿಜೆಪಿ ನೇತೃತ್ವದ ಸರಕಾರ ರೈತರ ಆದಾಯವನ್ನು ದ್ವಿಗುಣಗೊಳಿಸಲು ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಇದೇ ಕಾರಣದಿಂದ ಇಂದು ಕೃಷಿಕ ವರ್ಗ ಸ್ವಾಭಿಮಾನದಿಂದ ಬದುಕು ಕಟ್ಟಿಕೊಂಡಿದ್ದಾರೆ ಎಂದು ಕೊಡಗು ಜಿಲ್ಲಾ ಬಿಜೆಪಿ ಕೃಷಿ ಮೋರ್ಚಾದ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 538 ಮನೆಗಳ ನಿರ್ಮಾಣ ಮಾಡಲಾಗಿದ್ದು, ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ಮನೆಗಳಲ್ಲಿ ಶೌಚಾಲಯ ನಿರ್ಮಾಣ, ಆಯಷ್ಠಾನ್ ಭಾರತ್ ಯೋಜನೆಯಡಿ ಆರೋಗ್ಯ ಕಾರ್ಡುಗಳ ವಿತರಣೆ, ಮಳೆಹಾನಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದರು. ಕಳೆದ 8 ವರ್ಷಗಳ ಅವಧಿಯಲ್ಲಿ ಅನ್ನದಾತರ ಜೀವನ ಸುಧಾರಣೆಗೆ ಹಲವಾರು ಕ್ರಮಗಳನ್ನು ನೇರ ನಗದು ಪಾವತಿ ಮೂಲಕ ರೈತರಿಗೆ ಹಣಕಾಸಿನ ನೆರವು ನೀಡಲಾಗಿದೆ. ಜೊತೆಗೆ ಹೆಚ್ಚಿನ ಇಳುವರಿ ಪಡೆಯಲು ಮಣ್ಣಿನ ಪರೀಕ್ಷೆ ಮಾಡಿ ಮಣ್ಣಿನ ಆರೋಗ್ಯ ಕಾರ್ಡ್ ವಿತರಿಸಲಾಗಿದೆ.ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರ ಸರಕಾರದಿಂದ ರೂ.6 ಸಾವಿರ ಮತ್ತು ರಾಜ್ಯ ಸರಕಾರದಿಂದ ರೂ.4 ಸಾವಿರ ಸೇರಿದಂತೆ…

Read More

ಮಡಿಕೇರಿ ಏ.28 : ಕೊಡಗು ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಜೂ.4 ರಂದು ಪೊನ್ನಂಪೇಟೆಯಲ್ಲಿ ಹಿರಿಯ ಅಥ್ಲಿಟ್‍ಗಳಿಗೆ ನಾಲ್ಕು ವಿಭಾಗಗಳಲ್ಲಿ ಮೆರಾಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆಯೆಂದು ಅಸೋಸಿಯೇಷನ್ ಅಧ್ಯಕ್ಷ ಬಲ್ಯಮೀದೇರಿರ ಪ್ರಕಾಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಿಂದ ಹಳ್ಳಿಗಟ್ಟು ಮಾರ್ಗವಾಗಿ ಮತ್ತೆ ಶಾಲಾ ಮೈದಾನ ಸೇರುವಂತೆ 5 ಕಿ.ಮೀ. ದೂರದ ಮೆರಥಾನ್ ಸ್ಪರ್ಧೆ ಅಂದು ಬೆಳಗ್ಗೆ 6.30 ಗಂಟೆಗೆ ನಡೆಯಲಿದೆಯೆಂದು ತಿಳಿಸಿದರು. ಮೆರಥಾನ್‍ನಲ್ಲಿ 35 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳಾ ಅಥ್ಲಿಟ್‍ಗಳು ಪಾಲ್ಗೊಳ್ಳಬಹುದಾಗಿದೆ.ಮೆರಥಾನ್ ಸ್ಪರ್ಧೆ 35 ವರ್ಷದಿಂದ 44 ವರ್ಷದ ಒಳಗಿನ ವಿಭಾಗ, 45 ರಿಂದ 54 ವರ್ಷದ ಒಳಗಿನವರು, 55 ರಿಂದ 64 ವರ್ಷ ಹಾಗೂ 64 ವರ್ಷ ಮೇಲ್ಪಟ್ಟವರ ವಿಭಾಗಗಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿರುವ ಪ್ರತಿಭಾವಂತ ಹಿರಿಯ ಕ್ರೀಡಾ ಪಟುಗಳನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಮೆರಥಾನ್ ಆಯೋಜಿಸಲಾಗಿದೆಯೆಂದು ಹೇಳಿದರು. ಮೆರಥಾನ್‍ನಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು 100 ರೂ. ಪ್ರವೇಶ ಶುಲ್ಕದೊಂದಿಗೆ ಮೇ30ರ…

Read More

ಮಡಿಕೇರಿ ಏ.28 : ಕಳೆದ ಐದು ವರ್ಷಗಳ ಅವಧಿಯಲ್ಲಿ ಶಾಸಕರುಗಳಾಗಿ ಜನರ ಸಂಕಷ್ಟಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರುವ ಕಾರಣ ಈ ಬಾರಿಯ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಮತ್ತೆ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರ್ರೆಸ್ ಹೊರಗಿನ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದ್ದು, ಇಂತಹ ‘ಪಿಕ್ನಿಕ್’ ರಾಜಕಾರಣಿಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಸಾಧ್ಯವಿಲ್ಲ. ಹಣ ಬಲದ ರಾಜಕಾರಣದ ಎದುರು ನಾವು ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿರುವುದಾಗಿ ಹೇಳಿದರು. ವಿಶ್ವ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನಂತೆ ತಮ್ಮ ಆಡಳಿತದ ಅವಧಿಯಲ್ಲಿ ‘ಸೇವೆಯೊಂದಿಗೆ ಸಂಘಟನೆ’ ಮಾಡಲಾಗಿದೆ. ಈ ಬಾರಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಗೆಲುವನ್ನು ದಾಖಲಿಸಲಿದೆ ಎಂದರು. ಪ್ರಾಕೃತಿಕ ವಿಕೋಪ ಮತ್ತು ಕೋವಿಡ್ ಸಂದರ್ಭ ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಕಾಂಗ್ರೆಸ್ ಮಾಡಿಲ್ಲ…

Read More