ಲೇಖಕ: admin

ಸೋಮವಾರಪೇಟೆ ಏ.28 :  ಮಡಿಕೇರಿ ಕ್ಷೇತ್ರಕ್ಕೆ ಶಾಸಕ ಅಪ್ಪಚ್ಚು ರಂಜನ್ ಅವರ ಕೊಡುಗೆ ಶೂನ್ಯ ಎಂದು ಆರೋಪಿಸಿರುವ ಸೋಮವಾರಪೇಟೆ  ನಗರ ಕಾಂಗ್ರೆಸ್,  ಅವರಿಗೆ ಸೋಲಿನ ಭೀತಿ ಎದುರಾಗಿದೆ ಎಂದು  ಲೇವಡಿ ಮಾಡಿದೆ. ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಮಾತನಾಡಿ, ಅಪ್ಪಚ್ಚುರಂಜನ್ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಟೀಕಿಸಿದರು. ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದ್ದು, ಎಲ್ಲೆಡೆ ಮಂತರ್ ಗೌಡರ ಹೆಸರು ಕೇಳಿ ಬರುತ್ತಿದೆ. ಇದರಿಂದ ಶಾಸಕರು ವಿಚಲಿತರಾಗಿದ್ದಾರೆ ಎಂದರು. ಕುಡಿಯುವ ನೀರಿನ ಸಮಸ್ಯೆಗೆ ಈವರೆಗೆ ಪರಿಹಾರ ಕಂಡುಹಿಡಿಯಲು ವಿಫಲರಾಗಿದ್ದಾರೆ. ಕಸವಿಲೇವಾರಿ ಸಮಸ್ಯೆ ವಿಪರೀತವಾಗಿದೆ ಅದಕ್ಕೆ ಪರಿಹಾರವೇ ಇಲ್ಲದಂತಾಗಿದೆ. ಕಳೆದ ಹಲವು ವರ್ಷಗಳಿಂದ ಟರ್ಫ್ ಕ್ರೀಡಾಂಗಣ ಕಾಮಗಾರಿ ನೆನೆಗುದಿಗೆ ಬಿದ್ದಿದೆ ಅದೇ ಹಣವನ್ನು ವಸತಿ ರಹಿತರಿಗೆ ನಿವೇಶನ ಖರೀದಿಗೆ ಉಪಯೋಗಿಸಬಹುದಿತ್ತು. ಕಳೆದ ಹಲವು ವರ್ಷಗಳಿಂದ ಕಾಮಗಾರಿ ಪೂರ್ಣಗೊಳ್ಳದೆ ಪಾಳುಬಿದ್ದಿರುವ ಶತಮಾನೋತ್ಸವ ಭವನವನ್ನು ಕಣ್ಣೆತ್ತಿಯೂ ನೋಡಲಿಲ್ಲವೆಂದು ಆರೋಪಿಸಿದರು. ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಪ.ಪಂ ಸದಸ್ಯೆ ಶೀಲಾ ಡಿಸೋಜ…

Read More

ಮಡಿಕೇರಿ ಏ.28 : ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ ‘ನಮ್ಮ ನಡೆ ಮತಗಟ್ಟೆಯ ಕಡೆಗೆ’ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ಏಪ್ರಿಲ್, 30 ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 103 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಪ್ರತಿ ಗ್ರಾಮ ಪಂಚಾಯತಿಯ 1 ಮತಗಟ್ಟೆಯಲ್ಲಿ ಏಪ್ರಿಲ್, 30 ರಂದು ಬೆಳಗ್ಗೆ 8 ಗಂಟೆಗೆ ‘ಧ್ವಜಾರೋಹಣ’ ನೆರವೇರಿಸಲು ಕ್ರಮವಹಿಸಲಾಗುತ್ತದೆ ಎಂದರು. ಧ್ವಜಾರೋಹಣ ನೆರವೇರಿಸುವ ಸ್ಥಳವನ್ನು ರಂಗೋಲಿಯಿಂದ ಹಾಗೂ ಇತರೆ ಕ್ರಮಗಳನ್ನು ವಹಿಸಿ ಅಲಂಕರಿಸುವುದು (ಮತದಾರರ ಜಾಗೃತಿಯ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಬಹುದು). ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಮತದಾರರನ್ನು ಸೆಳೆಯಲು ಸ್ಥಳೀಯ ಜನಪದ ಅಥವಾ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಜಿ.ಪಂ.ಸಿಇಒ ಅವರು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಬಿಎಲ್‍ಒ, ಪಂಚಾಯತಿ ಸಿಬ್ಬಂದಿಗಳು,…

Read More

ಮಡಿಕೇರಿ ಏ.28 : ವಿಧಾನಸಭಾ ಚುನಾವಣೆ ಹಿನ್ನೆಲೆ ಭಾರತ ಚುನಾವಣಾ ಆಯೋಗ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಸಖಿ, ಸಾಂಪ್ರದಾಯಿಕ, ವಿಶೇಷಚೇತನ ಸ್ನೇಹಿ ಮತ್ತು ಯುವ ವೋಟರ್ಸ್ ಒಳಗೊಂಡ ಮತಗಟ್ಟೆಗಳನ್ನು ಗುರುತಿಸಿ ಮತದಾರರನ್ನು ಮತದಾನಕ್ಕೆ ಆಕರ್ಷಿಸಲು ಮುಂದಾಗಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್  ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸಖಿ ಮತಗಟ್ಟೆ ಕೇಂದ್ರಗಳ ವಿವರ ಇಂತಿದೆ : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ನಗರದ ಮಹದೇವಪೇಟೆಯ ನಗರಸಭೆಯ ಹಿರಿಯ ಪ್ರಾಥಮಿಕ ಶಾಲೆ, ಶಿರಂಗಾಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಳ್ಳುಸೋಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆಯ ಎಸ್‍ಜೆಎಂ ಬಾಲಕಿಯರ ಪ್ರೌಢಶಾಲೆ, ಮಡಿಕೇರಿಯ ಎಫ್‍ಎಂಕೆಎಂಸಿ ಕಾಲೇಜು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತಿತಿಮತಿಯ ಗ್ರಾ.ಪಂ.ಕಚೇರಿ, ವಿರಾಜಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪೊನ್ನಂಪೇಟೆಯ ಸರ್ಕಾರಿ ಜೂನಿಯರ್ ಕಾಲೇಜು, ಗೋಣಿಕೊಪ್ಪದ ಮಹಿಳಾ ಸಮಾಜ ಕಟ್ಟಡ ಮತ್ತು ವಿರಾಜಪೇಟೆಯ ಜಯಪ್ರಕಾಶ್ ಬಾಲಕಿಯರ ಪ್ರೌಢಶಾಲೆಯಲ್ಲಿ ಸಖಿ ಮತಗಟ್ಟೆಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.…

Read More

ಸೋಮವಾರಪೇಟೆ ಏ.28 : ತೋಳೂರುಶೆಟ್ಟಳ್ಳಿ ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ದೊಡ್ಡಮನೆಕೊಪ್ಪ, ಊರೊಳಕೊಪ್ಪ, ಸಿಂಗನಳ್ಳಿ, ನಡ್ಲಕೊಪ್ಪ, ಇನಕನಹಳ್ಳಿ, ಹರಪಳ್ಳಿ, ವಣಗೂರುಕೊಪ್ಪ, ಶುಭಾಷ್‍ನಗರ, ಕರಡಿಕೊಪ್ಪ, ದೊಡ್ಡತೋಳೂರು, ಚಿಕ್ಕತೋಳೂರು, ಗ್ರಾಮಗಳ ವ್ಯಾಪ್ತಿಗೆ ಒಳಪಡುವ ನಿವಾಸಿಗಳು ಸುಗ್ಗಿ ಉತ್ಸವದಲ್ಲಿ ದೇವಿಗೆ ಮಡೆ ಅರ್ಪಿಸುವ ಮೂಲಕ ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುಗ್ಗಿ ಕುಣಿತದ ತಂಡದಿಂದ ಸುಗ್ಗಿ ಕುಣಿತ ನಡೆದರೆ, ಇನ್ನೊಂದೆಡೆಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ಸಂಪ್ರಾದಾಯದಂತೆ ಸುಗ್ಗಿ ಕುಣಿತದಲ್ಲಿ ಪಾಲ್ಗೊಂಡರು. ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಸುಗ್ಗಿ ಕಟ್ಟೆಯ ಮುಖ್ಯ ರಂಗಕ್ಕೆ ಪ್ರದಕ್ಷಿಣೆ ಹಾಕಲಾಯಿತು. ಹರಕೆ ಮಾಡಿಕೊಂಡ ಭಕ್ತರು ಈಡುಗಾಯಿ ಸೇವೆ ಅರ್ಪಿಸಿದರು. ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಇಷ್ಟಾರ್ಥಗಳ ನೆರವೇರಿಕೆಗೆ ಪ್ರಾರ್ಥಿಸಿದರು. ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವುದು, ಗ್ರಾಮದ ಹೆಣ್ಣುಮಕ್ಕಳಿಗೆ ವಿಶೇಷ ದಿನ. ಈ ಭಾಗದಿಂದ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ತವರಿನ ಸುಗ್ಗಿಯಲ್ಲಿ ಸಂಭ್ರಮದಿಂದ ಪಾಲ್ಗೊಂಡರು. ಪ್ರಧಾನ ಅರ್ಚಕರಾದ…

Read More

ಮಡಿಕೇರಿ ಏ.28 : ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಾಗಲು ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿತಾಣಗಳನ್ನು ಮೇ 10 ರಂದು ಬಂದ್ ಮಾಡಬೇಕೆಂದು ಕೊಡಗು ರಕ್ಷಣಾ ವೇದಿಕೆ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ, ಮತದಾರರು ಚುನಾವಣೆ ಬಗ್ಗೆ ತಾತ್ಸಾರ ಮನೋಭಾವ ತೋರಿ ಪ್ರವಾಸಿತಾಣಗಳೆಡೆಗೆ ಮುಖ ಮಾಡುವುದನ್ನು ತಪ್ಪಿಸಲು ಒಂದು ದಿನ ಬಂದ್ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ಕೊಡಗು ಜಿಲ್ಲೆ ಮಾತ್ರವಲ್ಲದೆ ಇತರ ಜಿಲ್ಲೆಗಳಲ್ಲೂ ದಾಖಲೆ ಪ್ರಮಾಣದ ಮತ ಚಲಾವಣೆಯಾಗಬೇಕು. ಮತದಾನ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಅಸ್ತçವಾಗಿದೆ. ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಮತದಾನವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಮೇ 10 ರಂದು ಪ್ರವಾಸಿತಾಣಗಳನ್ನು ಬಂದ್ ಮಾಡಲು ಆಡಳಿತ ವ್ಯವಸ್ಥೆ ಕ್ರಮ ಕೈಗೊಂಡಿದೆ. ಇದೇ ಮಾದರಿಯಲ್ಲಿ ಕೊಡಗಿನಲ್ಲಿ ಕೂಡ ಪ್ರವಾಸಿತಾಣಗಳು ಬಂದ್ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಮತ ಚಲಾವಣೆ ಮಾಡದೇ ಇದ್ದರೆ ನಮ್ಮ ಹಕ್ಕುಗಳನ್ನು…

Read More

ನಾಪೋಕ್ಲು ಏ.28 : ಮಡಿಕೇರಿ ರೋಟರಿ ವುಡ್ಸ್ ನ ಪ್ರಾಯೋಜಿತ ಕ್ಲಬ್ ಆದ ಮೂರ್ನಾಡು ಪದವಿ ಕಾಲೇಜಿನ ರೋಟ್ರಾಕ್ಟ್ ಕ್ಲಬ್ ನ ಸದಸ್ಯರುಗಳು ಮೈಸೂರಿನಲ್ಲಿ ನಡೆದ ಯುವ ಸಮ್ಮಿಲನ ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಏ.28 : ವಿರಾಜಪೇಟೆ ಸಮೀಪದ ವಿ ಬಾಡಗ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಲಾಗಿದೆ. ವಿ ಬಾಡಗದ ಕಂಜಿತಂಡ ಚಿನ್ನಪ್ಪ ಎಂಬವರ ಮನೆ ಹತ್ತಿರ ಇದ್ದ 12 ಅಡಿ ಉದ್ದದ ಬಾರಿ ಗಾತ್ರದ ಕಾಳಿಂಗ ಸರ್ಪವನ್ನು ಉರಗತಜ್ಞ ಪೊನ್ನೀರ ಗಗನ್ ರಕ್ಷಿಸಿ ಪೆರಂಬಾಡಿ ರಕ್ಷಿತಾರಣ್ಯಕ್ಕೆ ಬಿಟ್ಟರು. ಗಗನ್ ವಿವಿಧ ಜಾತಿಯ ಹಾವುಗಳನ್ನು ಹಿಡಿದು ರಕ್ಷಿಸಿದ್ದು, ಇದು 66ನೇ ಕಾಳಿಂಗ ಸರ್ಪವಾಗಿದೆ. ಯಾವುದೇ ತರದ ಹಾವುಗಳು ಕಂಡರೆ ಸಂಪರ್ಕಿಸುವಂತೆ ತಿಳಿಸಿದರು. ವರದಿ : ದುಗ್ಗಳ ಸದಾನಂದ   

Read More

ಮಡಿಕೇರಿ ಏ.28 :  ಬೆಂಗಳೂರಿನ ಟಯೋಟದ ಪ್ರಮುಖ ಡೀಲರ್ ಗಳಲ್ಲಿ ಒಂದಾಗಿರುವ ನಂದಿ ಟೊಯೋಟೊ ಸಂಸ್ಥೆಯು ಭಾಗಮಂಡಲದ  ಕೆವಿಜಿ ಐಟಿಐ ನಲ್ಲಿ ಕ್ಯಾಂಪಸ್ ಸಂದರ್ಶನ ನಡೆಸಿದರು. ಈ ಸಂದರ್ಭದಲ್ಲಿ  ಆಯ್ಕೆಯಾದ ತರಬೇತುದಾರರಿಗೆ ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದರು. ನಂದಿ ಟೊಯೋಟಾದ ಹೆಚ್ ಆರ್ ಮಧುಸೂಧನ್ , ಕಾಲೇಜಿನ ಪ್ರಾಂಶುಪಾಲ ಕೆ.ವಿ.ಶ್ರೀಕಾಂತ್   , ಕಿರಿಯ ತರಬೇತಿ ಅಧಿಕಾರಿಗಳಾದ  ಜೆ.ಕೃಷ್ಣಮೂರ್ತಿ,  ಪದ್ಮ ಕುಮಾರ್ ಮತ್ತು ಪುನೀತ್ ಉಪಸ್ಥಿತರಿದ್ದರು.

Read More

ಮಡಿಕೇರಿ ಏ.28 :  ವಿರಾಜಪೇಟೆಯ ಮೈತಾಡಿ ಗ್ರಾಮದ ಐಯ್ಯಮಂಡ ಸುಗುಣ ಅವರ  ಮನೆಯ ಅಂಗಳದಲ್ಲಿದ್ದ ನಾಗರ ಹಾವನ್ನು ಉರಗ ಪ್ರೇಮಿ ಒಂಟಿ ಅಂಗಡಿಯ ಬೊಪ್ಪoಡ ರೋಷನ್  ರಕ್ಷಿಸಿ  ಮಾಲ್ದಾರೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ಈ ಸಂಖ್ಯೆಗೆ  7022373921 ಕರೆ ಮಾಡುವಂತೆ ರೋಷನ್  ಮನವಿ ಮಾಡಿದ್ದಾರೆ.

Read More

ಸೋಮವಾರಪೇಟೆ ಏ.28 :   ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೂತನವಾಗಿ ಪರಿಚಯಿಸಿರುವ ಆನ್ ಲೈನ್ ಕೌಂಟರ್ ನ್ನು ಸೋಮವಾರಪೇಟೆ ತಹಸೀಲ್ದಾರ್ ನರಗುಂದ  ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇನ್ನು ಮುಂದೆ ನೋಂದಣಿ ಕಚೇರಿಯಲ್ಲಿ ನಡೆಯುವ ಎಲ್ಲ ಕೆಲಸಗಳಿಗೂ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭ ಜಿಲ್ಲಾ ನೋಂದಣಿ ಅಧಿಕಾರಿ ಸಿದ್ದೇಶ್ , ಸೋಮವಾರಪೇಟೆ ಉಪ ನೋಂದಣಿ ಅಧಿಕಾರಿ ಬಿ.ಸಿ. ಶಿವಪ್ಪ ಮತ್ತು ಸಿಬ್ಬಂದಿ ಗಳು ಉಪಸ್ಥಿತರಿದ್ದರು.

Read More