ಸೋಮವಾರಪೇಟೆ ಏ.27 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓ.ಡಿ.ಪಿ ಮಹಿಳಾ ಸಾಂತ್ವನ ಕೌಟಂಬಿಕ ಸಲಹಾ ಕೇಂದ್ರವು ಕಳೆದ 5 ವರ್ಷಗಳಲ್ಲಿ 542 ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಅಲೆಕ್ಸಾ ಪ್ರಶಾಂತ್ ಸಿಕ್ವೇರಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಕೌಟಂಬಿಕಾ ದೌರ್ಜನ್ಯ, ಗಂಡನಿoದ ಹಿಂಸೆ, ಅತ್ಯಾಚಾರ, ವರದಕ್ಷಿಣೆ ಕಿರುಕುಳ ಹಾಗು ಇನ್ನಿತರ ಮಾನಸಿಕ ಹಿಂಸೆಗಳಿಗೆ ಸಂಬoಧಪಟ್ಟoತೆ 553 ಪ್ರಕರಣಗಳು ದಾಖಲಾಗಿದ್ದು 542 ಇತ್ಯರ್ಥವಾಗಿ 11 ಪ್ರಕರಣಗಳು ಇತ್ಯಾರ್ಥದ ಹಂತದಲ್ಲಿವೆ ಎಂದು ಹೇಳಿದರು. ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ಅನುಭವಿಸುತ್ತಿರುವ ನೊಂದ ಮಹಿಳೆಯರಿಗೆ ಕಾನೂನು ನೆರವು ಹಾಗೂ ಆಪ್ತಸಮಾಲೋಚನೆಯ ಸೇವೆಯನ್ನು ಪ್ರತಿದಿನ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಹಿಳಾ ದೌರ್ಜನ್ಯಕ್ಕೆ ಒಳಗಾದ ನೊಂದ ಮಹಿಳೆಯರು ಸಹಾಯವಾಣಿ ಸಹಕಾರ ಪಡೆದುಕೊಳ್ಳಲು ಓ.ಡಿ.ಪಿ, ಮಹಿಳಾ ಸಾಂತ್ವಾನ ಕೇಂದ್ರ, ಮನೆ ಸಂಖ್ಯೆ 57/ಅ ಸರ್ಕಾರಿ ಆಸ್ಪತ್ರೆ ಹತ್ತಿರ, ಸೋಮವಾರಪೇಟೆ. ಕೊಡಗು, ದೂ. ಸಂಖ್ಯೆ 08276 282195 ಗೆ ಕರೆ ಮಾಡಬಹುದಾಗಿದೆ.
ಲೇಖಕ: admin
ಮಡಿಕೇರಿ ಏ.27 : ಉರಿ ಬಿಸಿಲ ಬೇಗೆಯಿಂದ ಬಳಲಿದ್ದ ನಗರದ ಜನತೆಗೆ ನೆಮ್ಮದಿಯನ್ನು ತರುವಂತೆ, ಗುರುವಾರ ಸಂಜೆ ಮಳೆ ಸುರಿದು ವಾತಾವರಣಕ್ಕೆ ತಂಪನ್ನೆರಚಿತು. ಫೆಬ್ರವರಿಯಲ್ಲಿ ಬಂದ ಅಲ್ಪ ಪ್ರಮಾಣದ ಮಳೆ ಬಿಟ್ಟರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕೇಂದ್ರಕ್ಕೆ ಹನಿ ಮಳೆಯಾಗಿರಲಿಲ್ಲ. ಇಂದು ಮಧ್ಯಾಹ್ನ ನಿಧಾನವಾಗಿ ಕವಿದ ಮೋಡ, ಸಂಜೆ ಸುಮಾರು ಅರ್ಧಗಂಟೆಗಳ ಕಾಲ ಸುರಿಸಿದ ಮಳೆ ಬಿಸಿಲ ಬೇಗೆಯನ್ನು ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಮಾಡಿತು. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ವರ್ಷಂಪ್ರತಿ ಸುರಿಯುತ್ತಿದ್ದ ಮಳೆ ಈ ಬಾರಿ ಕೈಕೊಟ್ಟ ಪರಿಣಾಮ, ಏಪ್ರಿಲ್ನಲ್ಲಿ ಮಡಿಕೇರಿಯ ತಾಪಮಾನ 35 ಡಿಗ್ರಿ ಆಸುಪಾಸಿಗೆ ತಲುಪುವ ಮೂಲಕ ಬಿಸಿಲ ಬೇಗೆಗೆ ಜನತೆ ಕಂಗಾಲಾಗಿದ್ದರು. ಇಂದು ಸುರಿದ ಮಳೆ ಬಿಸಿಲ ವಾತಾವರಣದ ನಡುವೆ ಒಂದಷ್ಟು ತಂಪನ್ನು ನೀಡಿ ನಗರದ ಜನತೆಗೆ ಸಂತಸವನ್ನು ಉಂಟುಮಾಡಿದೆ.
ವಿರಾಜಪೇಟೆ ಏ.27 : ಜೆಡಿಎಸ್ ಪಕ್ಷದ ವಿರಾಜಪೇಟೆ ನಗರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಯೋಗೇಶ್ ನಾಯ್ಡು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತೊರೆದು ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಅವರಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಿಲ್ಲಿಸಲಾಗಿದ್ದರು ಇದುವರೆಗು ಚುನಾವಣೆ ಬಗ್ಗೆ ಯಾವುದೇ ಕಾರ್ಯ ಚಟುವಟಿಕೆಗಳು ನಡೆಯದಿರುವ ಕಾರಣ ನಾನು ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ಮುಂದೆ ರಾಷ್ಟ್ರೀಯ ಪಕ್ಷದತ್ತ ನನ್ನ ನಡೆ ಎಂದ ಯೋಗೇಶ್ ನಾಯ್ಡು ರಾಜೀನಾಮೆ ಪತ್ರವನ್ನು ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಅವರಿಗೆ ಸಲ್ಲಿಸಿರುವುದಾಗಿ ತಿಳಿಸಿದರು.
ಮಡಿಕೇರಿ ಏ.27 : ಕ್ರೀಡೆಯಲ್ಲಿ ಶಿಸ್ತು ಮುಖ್ಯವಾಗಿದ್ದು, ಶ್ರಮಪಟ್ಟರೆ ಖಂಡಿತಾ ಪ್ರತಿಫಲ ಸಿಗಲಿದೆ ಎಂದು ರಾಷ್ಟ್ರೀಯ ಡೆಕಥ್ಲಾನ್, ಹಾಕಿ ಹಾಗೂ ಕ್ರಿಕೆಟ್ ಆಟಗಾರ ಕೋದಂಡ ಪೂವಯ್ಯ ಹೇಳಿದರು. ವಾಂಡರ್ಸ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ಮರಣಾರ್ಥ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಬೇಸಿಗೆ ಕ್ರೀಡಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು. ಸಾಧನೆ ಮಾಡಲು ಯಾವುದೇ ಮಿತಿ ಇರುವುದಿಲ್ಲ, ಕಷ್ಟಪಟ್ಟರೆ ಪ್ರಯೋಜನ ಸಿಗಲಿದೆ. ಕ್ರೀಡೆಯಲ್ಲಿ ಶ್ರಮಪಟ್ಟರೆ ಯಶಸ್ಸು ಸಿಗಲಿದೆ. ಕ್ರೀಡಾಪಟುಗಳಿಗೆ ದೈಹಿಕ ಸಾಮಥ್ರ್ಯ ಇರಬೇಕು. ಮೇಲಾಟಗಳಲ್ಲಿ(ಅಥ್ಲೆಟಿಕ್) ತೊಡಗಿಸಿಕೊಂಡವರಿಗೆ ಯಾವುದೇ ಕ್ರೀಡೆಯಲ್ಲೂ ಭಾಗವಹಿಸಬಹುದು. ಮೇಲಾಟಗಳು ಕ್ರೀಡೆಯ ತಾಯಿ ಇದ್ದಂತೆ ಎಂದು ಹೇಳಿದರು. ಇದು ನಿಮಗಳಿಗೆ ಕಲಿಯಲು ಸರಿಯಾದ ಸಮಯವಾಗಿದ್ದು, ತರಬೇತುದಾರರು ಹೇಳಿಕೊಡುವುದನ್ನು ಆಸಕ್ತಿಯಿಂದ ಕೇಳಿ ತಿಳಿದುಕೊಳ್ಳಬೇಕು. ಸರಿಯಾಗಿ ಅರ್ಥ ಮಾಡಿಕೊಳ್ಳದಿದ್ದಲ್ಲಿ ಏನನ್ನೂ ಸಾಧಿಸಲಾಗದು. ಎಲ್ಲರಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಹೊರಗೆಡಹಲು ಇದು ಸದವಕಾಶವಾಗಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಕ್ಕಳಿಗೆ ಕರೆ ನೀಡಿದರು. ಮಕ್ಕಳು ಕುರುಕಲು ಆಹಾರವನ್ನು ಸೇವಿಸದೇ ಮನೆಯಲ್ಲಿ ಮಾಡಿಕೊಡುವ ಪೌಷ್ಠಿಕ ಆಹಾರ, ಹಣ್ಣು…
ಮಡಿಕೇರಿ ಏ.27 : ಭಾರತ ಚುನಾವಣಾ ಆಯೋಗವು ಮೇ 10 ರಂದು ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನ ನಿಗದಿಪಡಿಸಿದೆ. ಈ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿದೆ. ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿ ಕೊಡಬೇಕಾಗಿದೆ. ಆದ್ದರಿಂದ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ತಿಳಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ ಅಥವಾ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಕೃಷಿ ಇಲಾಖೆಯ ಉಪ ನಿರ್ದೇಶಕ ಬಾಲರಾಜ್ ರಂಗರಾವ್, ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ನಯನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಹಾಗೂ ಇತರರು ಹಾಜರಿದ್ದರು.
ಮಡಿಕೇರಿ ಏ.27 : ಕೊಡಗು ಹೆಗ್ಗಡೆ ಸಮಾಜದ ವತಿಯಿಂದ ಏ.29 ರಿಂದ ಮೇ 2ರ ವರೆಗೆ ಕ್ರೀಡೋತ್ಸವ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ತಿಳಿಸಿದ್ದಾರೆ. ಮೂರ್ನಾಡಿನ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಏ.29 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿರುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮುಖ್ಯ ಅಥಿತಿಗಳಾಗಿ ಟ್ರೋಫಿ ದಾನಿಗಳಾದ ಮೇಜರ್ ಮಳ್ಳಡ ದೀಕ್ಷಿತ್ ದೇವಯ್ಯ, ಪೊಲೀಸ್ ಉಪ ನಿರೀಕ್ಷಕ ಹಾಗೂ ಮುಖ್ಯಮಂತ್ರಿ ಪದಕ ವಿಜೇತ ತುದಿಮಾಡ ಸವಿ, ಕ್ರೀಡಾ ಸಮಿತಿಯ ಅಧ್ಯಕ್ಷ ಪಡಿಞರಂಡ ಪ್ರಭುಕುಮಾರ್, ಸಮಾಜದ ಉಪಾಧ್ಯಕ್ಷ ಕೊರಕುಟ್ಟಿರ ಸರ ಚಂಗಪ್ಪ, ಕಾರ್ಯದರ್ಶಿ ಚಂಗಚಂಡ ಕಟ್ಟಿಕಾವೇರಪ್ಪ, ಖಜಾಂಚಿ ಪಾನಿಕುಟ್ಟಿರ ಕುಟ್ಟಪ್ಪ, ಪ್ರಮುಖರಾದ ಪದಿಕಂಡ ನಾಗೇಶ್, ಕೊಂಗೆಪಂಡ ಕುಟ್ಟಪ್ಪ, ತೋರೆರ ಉಮೇಶ್ ಮತ್ತು ಹೆಗ್ಗಡೆ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಕ್ರಿಕೆಟ್ ಸಿನಿಯರ್ ವಿಭಾಗದಲ್ಲಿ 19 ತಂಡಗಳು, ಕ್ರಿಕೆಟ್ ಜೂನಿಯರ್ ವಿಭಾಗದಲ್ಲಿ 5…
ಮಡಿಕೇರಿ ಏ.27 : ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷರಾಗಿ ಕಳಕಂಡ ಡಿ.ಮುತ್ತಪ್ಪ ಮರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಅಜ್ಜಮಾಡ ಮೋನಿ ಪೊನ್ನಪ್ಪ, ಉಪಾಧ್ಯಕ್ಷರಾಗಿ ಮತ್ರಂಡ ಸಿ.ಪೂವಣ್ಣ, ಜಂಟಿ ಕಾರ್ಯದರ್ಶಿಯಾಗಿ ಬೇರೇರ ಸೂರಜ್ ಮುತ್ತಣ್ಣ, ಖಜಾಂಚಿಯಾಗಿ ಬಾನಂಗಡ ವಿನೋದ್ ನೇಮಕಗೊಂಡಿದ್ದು, ನಿರ್ದೇಶಕರಾಗಿ ಬಿ.ಯು.ಪ್ರತಿಷ್ಟ, ಹೆಚ್.ಜಿ.ದಿನೇಶ್, ಎಂ.ಜಿ.ರಫಿಕ್, ಎ.ಜಿ.ಕಲ್ಪನ ಆಯ್ಕೆಯಾಗಿದ್ದಾರೆ. ಪ್ರತೀ ಎರಡು ವರ್ಷಕೊಮ್ಮೆ ನಡೆಯುವ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಕುಶಾಲನಗರ ಏ.27 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಕುಶಾಲನಗರ ವ್ಯಾಪ್ತಿಯ ಮಿಂಚಿನ ಸಂಚಾರ ನಡೆಸಿ, ಮತದಾರರನ್ನು ಭೇಟಿಯಾಗಿ ಬಿರುಸಿನ ಚುನಾವಣಾ ಮತಯಾಚನೆ ಕಾರ್ಯ ನಡೆಸಿದರು. ಮೈಸೂರು-ಕುಶಾಲನಗರ ರಸ್ತೆಯಲ್ಲಿರುವ ಜೆಡಿಎಸ್ ಕಚೇರಿ ಬಳಿಯಿಂದ ಸಭೆಯ ಬಳಿಕ ಕಾರ್ಯಕರ್ತರೊಂದಿಗೆ ಪ್ರಚಾರ ಆರಂಭಿಸಿದ ಮುತ್ತಪ್ಪ, ನಗರದ ವಿವಿಧ ಕಡೆಗಳಿಗೆ ತೆರಳಿ ಮತ ಪ್ರಚಾರ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸಲು ಉದ್ದೇಶಿಸಿರುವುದನ್ನು ತಮ್ಮೊಂದಿಗೆ ಹೇಳಿದ್ದಾರೆಂದು ಮುತ್ತಪ್ಪ ತಿಳಿಸಿದರು. ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಯನ್ನು ಯಾವುದೇ ನಿಬಂಧನೆಗಳಿಲ್ಲದೆ ಜಾರಿಗೆ ತರಲಿದೆ. ಜೆಡಿಎಸ್ ಪಕ್ಷವು ಕ್ಷೇತ್ರದಲ್ಲಿ ಬಲಿಷ್ಠವಾಗಿದ್ದು, ಈ ಬಾರಿ ಗೆಲುವು ಸಾಧಿಸಲಿದೆ ಎಂದರು. ಕೊಡಗಿನಲ್ಲಿ ಉತ್ತಮ ಪರಿಕಲ್ಪನೆಯೊಂದಿಗೆ ಅತ್ಯಾಧುನಿಕ ರೀತಿಯ ವೈಜ್ಞಾನಿಕ ರೂಪುರೇμÉಗಳನ್ನು ಒಳಗೊಂಡ ಯೋಜನೆಗಳನ್ನು ಜಾರಿಗೆ ತರುವುದೇ ನಮ್ಮ ಮೊದಲ ಆದ್ಯತೆ ಆಗಿದ್ದು, ಬದ್ಧತೆ ಇಲ್ಲದ ರಾಷ್ಟ್ರೀಯ ಪಕ್ಷಗಳಿಗೆ ಜನ ತಕ್ಕ ಪಾಠ ಕಲಿಸಲಿದ್ದು, ಈ ಬಾರಿ…
ವಿರಾಜಪೇಟೆ ಏ.27 : ಪ್ರಸ್ತುತ ಜಗತ್ತು ನವನವೀನವಾದ ಆವಿಷ್ಕಾರಗಳನ್ನು ಎದುರು ನೋಡುತ್ತಿದೆ. ಯುವ ಜನತೆಯು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಾ ಜಗತ್ತಿನ ಆಶೋತ್ತರಗಳಿಗೆ ಸ್ಪಂದಿಸಲು ಚಿಂತನೆ ನಡೆಸಬೇಕು ಎಂದು ಮಂಗಳೂರಿನ ಯುವ ವಕೀಲ ಸಿ.ಎ.ಅನ್ವೇಶ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಕಾಲೇಜು ಸ್ನಾತಕೋತ್ತರ ವಿಭಾಗ, ಐಕ್ಯೂಎಸಿ ಮತ್ತು ವಾಣಿಜ್ಯಶಾಸ್ತø ವಿಭಾಗದ ವತಿಯಿಂದ ವಿಶ್ವ ಬೌದ್ಧಿಕ ಆಸ್ತಿ ಮತ್ತು ಹಕ್ಕುಗಳ ದಿನಾಚರಣೆಯ ಅಂಗವಾಗಿ ಕಾಲೇಜು ಸಭಾಂಗಣದಲ್ಲಿ ನಡೆದ ಬೌಧಿಕ ಆಸ್ತಿ ಮತ್ತು ಹಕ್ಕುಗಳ ರಾಷ್ಟøಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ, ಉಪನ್ಯಾಸ ನೀಡಿದರು. ಮನುಷ್ಯನ ಬೌದ್ಧಿಕ ಸಾಮಥ್ರ್ಯದಿಂದ ಸೃಷ್ಟಿಸಲ್ಪಟ್ಟ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಕ್ರಿಯೆಗಳನ್ನು ಬೌದ್ಧಿಕ ಸ್ವತ್ತುಗಳು ಅಥವಾ ಆಸ್ತಿಗಳೆಂದು ಹೇಳಬಹುದಾಗಿದೆ. ಯಾವುದೇ ಭೌತಿಕ ವಸ್ತುಗಿರುವ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯಗಳನ್ನು ಬೌದ್ಧಿಕ ಆಸ್ತಿ ಹೊಂದಿದ್ದು, ಈ ಕಾರಣ ಇದನ್ನು ಸ್ವತ್ತು ಅಥವಾ ಆಸ್ತಿ ಎಂದು ಪರಿಗಣಿಸಿ ಕಾನೂನಿನ ಮೂಲಕ ಬೌದ್ಧಿಕ ಆಸ್ತಿಯ ಹಕ್ಕುಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಸಾಹಿತ್ಯ, ಕಾಲತ್ಮಕ ಕೃತಿಗಳು ( ಸಂಗೀತ,…






