ಲೇಖಕ: admin

ಸುಂಟಿಕೊಪ್ಪ ಏ.27 : ಸಮಾಜಘಾತುಕ ಶಕ್ತಿಗಳನ್ನು ತಡೆಯಲು ಕಾನೂನು ಸುವ್ಯವಸ್ಥೆ ಬಿಗಿಗೊಳಿಸುವ ನಿಟ್ಟಿನಲ್ಲಿ ಸುಂಟಿಕೊಪ್ಪ ಪಟ್ಟಣದಲ್ಲಿ ಪೊಲೀಸರು ಹಾಗೂ ಕೇಂದ್ರ ಕೈಗಾರಿಕ ರಕ್ಷಣಾ ಪಡೆ, ಇಂಡೋಟಿಬೆಟಿಯನ್ ಗಡಿ ರಕ್ಷಣಾಪಡೆ ಪಥ ಸಂಚಲನ ನಡೆಸಿದರು. ಗದ್ದೆಹಳ್ಳದ ಬಳಿ ಕುಶಾಲನಗರ ವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ವೃತ್ತನಿರೀಕ್ಷಕರಾದ ಬಿ.ಜಿ.ಮಹೇಶ್, ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಅವರೊಂದಿಗೆ ಸಿಐಎಫ್‍ನ ಅಧಿಕಾರಿ ಚೌಹಣ್ 100 ಕ್ಕೂ ಹೆಚ್ಚು ಮಂದಿಯ ಇಂಡೋಟಿಬೆಟಿಯನ್ ಗಡಿ ರಕ್ಷಣಾಪಡೆ ಪೊಲೀಸ್ ತುಕಡಿ ತಂಡದವರು ಸುಂಟಿಕೊಪ್ಪದ ಮುಖ್ಯ ರಸ್ತೆಯಲ್ಲಿ ಸಾಗಿ ಮಧುರಮ್ಮ ಬಡಾವಣೆಗಾಗಿ, ಪಂಪ್‍ಹೌಸ್, ಗುಡ್ಡಪ್ಪ ರೈ ಬಡಾವಣೆ, 1ನೇ ವಿಭಾಗಕ್ಕಾಗಿ ಸಾಗಿ ಮರಳಿ ಪೊಲೀಸ್ ಠಾಣೆಗೆ ಸಾಗಿದರು. ಕೊಡಗಿನ ಜನತೆ ಶಾಂತಿ ಪ್ರಿಯರು ಮಾತ್ರವಲ್ಲದೆ ಚುನಾವಣಾ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವವರಾಗಿದ್ದಾರೆ ಆದರೂ ಸಮಾಜದಲ್ಲಿ ಕೆಲವು ಕೀಡಿಗೇಡಿಗಳು ಮತ್ತು ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಎಚ್ಚರಿಕೆ ಹಾಗೂ ಶಾಂತಿ ಪ್ರಿಯ ಜನರಿಗೆ ಭದ್ರತೆಯನ್ನು ನೀಡುವ ನಿಟ್ಟಿನಲ್ಲಿ  ಪಥಸಂಚಲ ನಡೆಸಲಾಗಿದೆ.

Read More

ಮಡಿಕೇರಿ ಏ.27 : ಕಾಂಗ್ರೆಸ್ ಅಭ್ಯರ್ಥಿಗಳು ಹೊರಗಿನವರು ಎನ್ನುವ ಜಿಲ್ಲೆಯ ಶಾಸಕರುಗಳ ಹೇಳಿಕೆ ಹಾಸ್ಯಾಸ್ಪದವಾಗಿದೆ. ಇಬ್ಬರು ಅಭ್ಯರ್ಥಿಗಳು ಸ್ವ ಕ್ಷೇತ್ರದವರೇ ಆಗಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಗುಣ ಹೊಂದಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆಯ ಎ.ಎಸ್.ಪೊನ್ನಣ್ಣ ಅವರು ಜಿಲ್ಲೆಯವರೇ ಆಗಿದ್ದಾರೆ. ಜನಪರ ಕಾಳಜಿ ಹೊಂದಿರುವ ಇವರು ವಿದ್ಯಾವಂತರಾಗಿದ್ದು, ಜನರ ಒಲವು ಇಬ್ಬರ ಮೇಲಿದೆ. ಇದೇ ಕಾರಣಕ್ಕೆ ಶಾಸಕರು ಹಾಗೂ ಬೆಂಬಲಿಗರು ಹತಾಶೆಗೊಂಡು ಬಾಲಿಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಗೆಲವು ಅನಿವಾರ್ಯವಾಗಿದೆ. ಜನರು ಕೂಡ ಬದಲಾವಣೆಯನ್ನು ಬಯಸಿದ್ದು, ಗೆಲುವಿಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರೂ.450 ಇದ್ದ ಅಡುಗೆ ಅನಿಲದ ಬೆಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ 1150 ತಲುಪಿದ್ದು, ಕೂಲಿ ಕಾರ್ಮಿಕರು ಅನಿಲ ಬಳಸಲಾಗದ ಸ್ಥಿತಿಗೆ ತಲುಪಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್…

Read More

ಮಡಿಕೇರಿ ಏ.27 : ಟಿಪ್ಪು ಮೂರ್ತಿ ಸ್ಥಾಪನೆ ಬಗ್ಗೆ ಮುಸಲ್ಮಾನರಲ್ಲಿ ಭರವಸೆ ಮೂಡಿಸಿ ಕೊಡಗಿನ ಕಾಂಗ್ರೆಸ್ ಅಭ್ಯರ್ಥಿಗಳು ಮತ ಗಳಿಕೆಗೆ ಪ್ರಯತ್ನಿಸುತ್ತಿದ್ದಾರೆ ಎನ್ನುವ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದೆ, ಇಸ್ಲಾಮಿನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಎಂ.ಎ.ಕಲೀಲ್ ಬಾಷ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯ ಸಂದರ್ಭ ಸಾಧನೆಯ ಆಧಾರದಲ್ಲಿ ಮತಯಾಚನೆ ಮಾಡಬೇಕೆ ಹೊರತು ಭಾವನೆಗಳನ್ನು ಕೆಣಕಬಾರದು ಎಂದು ಒತ್ತಾಯಿಸಿದ್ದಾರೆ. ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ವಿದ್ಯಾವಂತರು ಮತ್ತು ಪ್ರಜ್ಞಾವಂತರಾಗಿದ್ದು, ಪ್ರತಿಸ್ಪರ್ಧಿಗಳನ್ನು ಇಲ್ಲಿಯವರೆಗೆ ತೇಜೋವಧೆ ಮಾಡುವ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿಲ್ಲ. ಬದಲಾವಣೆಗಾಗಿ ಮತಯಾಚಿಸುತ್ತಿದ್ದು, ಮತದಾರರು ಕೂಡ ಸೂಕ್ತ ಸ್ಪಂದನೆ ನೀಡುತ್ತಿದ್ದಾರೆ. ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರು ಗೆಲ್ಲುವುದು ಖಚಿತ ಎನ್ನುವ ಮುನ್ಸೂಚನೆ ದೊರೆತ ಬೆನ್ನಲ್ಲೇ ಅಪ್ರಸ್ತುತ ವಿಚಾರಗಳನ್ನು ಚರ್ಚೆಗೆ…

Read More

ಮಡಿಕೇರಿ ಏ.27 : ಕಾಲುಜಾರಿ ಬಿದ್ದು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುತ್ತ (70) ಎಂಬವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಬೆಳ್ಳೂರು ಗ್ರಾಮದವರೆಂದು ಅಂದಾಜಿಸಲಾಗಿದ್ದು, ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲದಿರುವುದರಿಂದ ಮೃತ ದೇಹವನ್ನು ಮಡಿಕೇರಿ ಆಸ್ಪತ್ರೆಯಲ್ಲಿ ಶೀಥಿಲೀಕರಣದಲ್ಲಿ ಇಡಲಾಗಿದ್ದು, ವಾರಸುದಾರರು ಇದ್ದಲ್ಲಿ ಶ್ರೀಮಂಗಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ಮನವಿ ಮಾಡಿದೆ.

Read More

ಮಡಿಕೇರಿ ಏ.27 :  ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ಲಿ ನಲ್ಲಿ (ಪುಳಿಙೋಂ ಔಲಿಯಾಕಳ ಹೆಸರಿನಲ್ಲಿ) ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ 2023ನೇ ಸಾಲಿನ ಮೇ 27 ಮತ್ತು 28 ರಂದು  ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಯಕೋಲ್ ಆಡಳಿತ ಮಂಡಳಿ ತಿಳಿಸಿದೆ.

Read More

ಮಡಿಕೇರಿ ಏ.27 :  ಪುತ್ತೂರಿನ  ಕುಂಬ್ರ ಸರಕಾರಿ ಪದವಿ ಪೂರ್ವ ಕಾಲೇಜು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಯಿಷತ್ ಮಝಿನಾ 562 ( 93.66%)ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈಕೆ ಈಶ್ವರ ಮಂಗಲ  ಗ್ರಾಮದ ಇಸ್ಮಾಯಿಲ್ ಮೂನಡ್ಕ ಹಾಗೂ ಮಿಸ್ರಿಯಾ ಅಡ್ಕಾರ್ ದಂಪತಿಯ ಪುತ್ರಿ .ಶಾಲೆಗೆ ಪ್ರಥಮ ಸ್ಥಾನ ಪಡೆದಕ್ಕೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಏ.26 : ಕರ್ನಾಟಕ ರಾಜ್ಯ ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಪಶ್ಚಿಮವಲಯ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಉಡುಪಿ ಜಿಲ್ಲಾ ಪೊಲೀಸ್ ಘಟಕಗಳ ಚುನಾವಣಾ ಪೂರ್ವ ಸಿದ್ದತೆಯ ಪ್ರಗತಿಯ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾದ ಡಾ|| ಚಂದ್ರಗುಪ್ತ ಐ.ಪಿ.ಎಸ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹಾಕೆ ಅಕ್ಷಯ್‌ ಮಚ್ಚಿಂದ್ರ  ಐ.ಪಿ.ಎಸ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ವಿಕ್ರಮ್ ಅಮಟೆ ಐ.ಪಿ.ಎಸ್ ಹಾಗೂ ಜಿಲ್ಲೆಯ ಇತರ ಅಧಿಕಾರಿಗಳು ಹಾಜರಿದ್ದರು.

Read More

ಚೆಟ್ಟಳ್ಳಿ ಏ.26 : ಚೆಟ್ಟಳ್ಳಿಯ ಬೇಟೆಗಾರ ಅಯ್ಯಪ್ಪ ನೆಲೆಯಲ್ಲಿ ವಾರ್ಷಿಕ ಪೂಜಾಕೈಂಕರ್ಯ ಶ್ರದ್ಧಾಭಕ್ತಿಯಿಂದ ನೆರವೇರಿತು. ಶ್ರೀಮಂಗಲ ಶ್ರೀಭಗವತಿ ದೇವಾಲಯದಲ್ಲಿ ವಾರ್ಷಿಕ ಉತ್ಸವ ನೆರವೇರಿದ ನಂತರ ಊರಿನ ಪುರಾತನ ನೆಲೆಯಾದ ಬೇಟೆಗಾರ ಅಯ್ಯಪ್ಪನಿಗೆ ಪೂಜೆ ಅರ್ಪಿಸಲಾಯಿತು. ಊರಿಗೆ ಒಳಿತನ್ನು ಮಾಡೆಂದು ಪುತ್ತರಿರ ಮುತ್ತಣ್ಣ ಊರಿನವರ ಪರವಾಗಿ ಬೇಡಿಕೊಂಡರು. ಬೇಟೆಗಾರ ಅಯ್ಯಪ್ಪನಿಗೆ ಅಂಬ್(ಬಿಲ್ಲು), ಕಜ್ಜಾಯ ಹಾಗೂ ಹಾಲಿನ ಅಭಿಶೇಷ ಅರ್ಪಿಸಲಾಯಿತು. ಮಹಾಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ನಂತರ ಬೇಟೆಗಾರ ಅಯ್ಯಪ್ಪನ ಸೇವಕರಿಗೆ ಪೂಜೆ ನೆರವೇರಿತು.

Read More

ಮಡಿಕೇರಿ ಏ.26 : ವಿಧಾನಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ನಿರ್ದೇಶನಂತೆ ಮೈಕ್ರೋ ವೀಕ್ಷಕರು ಕರ್ತವ್ಯ ನಿರ್ವಹಿಸಬೇಕು ಎಂದು ಚುನಾವಣಾ ಸಾಮಾನ್ಯ ವೀಕ್ಷಕರಾದ ವಿಕ್ರಮ್ ಸಿಂಗ್ ಮಲ್ಲಿಕ್ ಅವರು ಸೂಚಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಮೈಕ್ರೋ ವೀಕ್ಷಕರಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಸುಗಮವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮೈಕ್ರೋ ವೀಕ್ಷಕರ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಬೇಕು. ಮತದಾನದ ಪಾವಿತ್ರ್ಯತೆ ಕಾಪಾಡಬೇಕು. ಚುನಾವಣೆ ಸಂಬಂಧ ಮಾಹಿತಿಯನ್ನು ನಿಖರವಾಗಿ ದಾಖಲು ಮಾಡಬೇಕು ಎಂದರು. ಕಾಲ ಕಾಲಕ್ಕೆ ಚುನಾವಣಾ ಸಾಮಾನ್ಯ ವೀಕ್ಷಕರಿಗೆ ಮಾಹಿತಿಯನ್ನು ನೀಡಬೇಕು. ಅಂಚೆ ಮತಪತ್ರ, ಮತದಾನದಂದು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿ, ವರದಿ ನೀಡಬೇಕು ಎಂದು ಚುನಾವಣಾ ಸಾಮಾನ್ಯ ವೀಕ್ಷಕರು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ಚುನಾವಣಾ ಮೈಕ್ರೋ ವೀಕ್ಷಕರು ವರದಿಯನ್ನು ಚುನಾವಣಾ ಸಾಮಾನ್ಯ ವೀಕ್ಷಕರಿಗೆ ನೀಡಬೇಕು. ಚುನಾವಣಾ ಆಯೋಗದ ನಿರ್ದೇಶನವನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ತರಬೇತಿಯಲ್ಲಿ…

Read More

ಮಡಿಕೇರಿ ಏ.26 : ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಶಿಕ್ಷಣ ನೀತಿ ಆಧಾರಿತ ಮೂರು ವರ್ಷದ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನೀಯರಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಬಿ.ಎ.ಪದವಿಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಐಚ್ಛಿಕ ಕನ್ನಡ, ಬಿ.ಕಾಂ ಪದವಿ ಹಾಗೂ ಬಿಬಿಎ ಪದವಿ ವ್ಯಾಸಂಗಕ್ಕೆ ಅವಕಾಶವಿದ್ದು, ಆಸಕ್ತ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಡಾ.ಕೆ.ಸಿ.ದಯಾನಂದ ಅವರು ತಿಳಿಸಿದ್ದಾರೆ.

Read More