ಮೈಸೂರು ಜ.13 NEWS DESK : ಯುವ ಸಮುದಾಯಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಜ್ಞಾನಿಕ ಉತ್ತೇಜನಕ್ಕಾಗಿ ಮೈಸೂರಿನಲ್ಲಿ ಪ್ಲಾನೆಟೋರಿಯಂ ನಿರ್ಮಾಣಕ್ಕೆ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಐದು ಕೋಟಿ ರೂ. ಅನುದಾನವನ್ನು ಸಂಸದರ ನಿಧಿಯಿಂದ ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಮೈಸೂರಿನಲ್ಲಿ ಕಾಸ್ಮೋಲಜಿ ಎಜುಕೇಷನ್ ಅಂಡ್ ರೀಸರ್ಚ್ ಟ್ರೇನಿಂಗ್ ಸೆಂಟರ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಹೆಚ್ಚುವರಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಕಾಸ್ಮೋಸ್ ಪ್ಲಾನೆಟೇರಿಯಮ್ ಯೋಜನೆಯು ನಮ್ಮ ಯುವಜನರಿಗೆ ಕುತೂಹಲ, ಕಲಿಕೆ, ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚು ಒತ್ತು ನೀಡುತ್ತದೆ ಎಂದು ವಿವರಿಸಿದ್ದಾರೆ. ಈ ಪ್ರಮುಖ ಯೋಜನೆಯು ಮೈಸೂರಿನ ಪ್ರವಾಸಿ ತಾಣದ ಹೆಗ್ಗುರುತಿಗೆ ಮತ್ತೊಂದು ಸೇರ್ಪಡೆಯಾಗಲಿದೆ. ಸ್ಥಳೀಯ ಅಭಿವೃದ್ಧಿಗೆ ಹೊಸ ಮಾರ್ಗ ಅವಕಾಶ ಒದಗಿಸುತ್ತದೆ ಜೊತೆಗೆ. ಜ್ಞಾನದ ಕೇಂದ್ರವಾಗಿ ಮೈಸೂರಿನ ಪರಂಪರೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ವಿವರಿಸಿದ್ದಾರೆ.…
ಲೇಖಕ: admin
ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಲೇಖಕಿ ಪೂಜಾರಿರ ಕೃಪಾ ದೇವರಾಜ್ ಬರೆದ ‘ಮಂತ್ರ ಪುಷ್ಪ ಕಥೆಗಳ ಕ್ಯಾನ್ವಾಸ್’ ಕೃತಿ ಪಡೆದುಕೊಂಡಿದೆ. ಈ ದತ್ತಿಯನ್ನು ಗೌರಮ್ಮ ಅವರ ಪುತ್ರ. ಬಿ.ಜಿ.ವಸಂತ ಅವರು ಸ್ಥಾಪಿಸಿದ್ದು, ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇದುವರೆಗೆ 22 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಪಾ ದೇವರಾಜ್ ಹಲವು ಪುಸ್ತಕಗಳನ್ನು ರಚಿಸಿದ್ದು, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಮಡಿಕೇರಿ ಜ.13 NEWS DESK : ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಭಾರತೀಯ ಕ್ರೀಡಾ ಪ್ರಾಧಿಕಾರದ ನೇತಾಜಿ ಸುಭಾಷ್ ದಕ್ಷಿಣ ಕೇಂದ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರೀಡಾಪಟುಗಳ ಸಾಧನೆ, ಕ್ರೀಡಾ ಕೊಠಡಿ, ಕ್ರೀಡೆಗೆ ಸಂಬಂಧಿತ ಉಪಕರಣಗಳು, ಸುಸಜ್ಜಿತ ಕ್ರೀಡಾಂಗಣಾದ ಒಳ ಹಾಗೂ ಹೊರ ನೋಟವನ್ನು ವೀಕ್ಷಿಸಿದರು. ಕ್ರೀಡಾಪಟುಗಳನ್ನು ಭೇಟಿ ಮಾಡಿ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡುವಂತೆ ಎಂದು ಪ್ರೋತ್ಸಾಹಿಸಿದರು. ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾದ ವಿಷ್ಣು ಸುಧಾಕರನ್, ನಿಕಟ ಪೂರ್ವ ನಿರ್ದೇಶಕರಾದ ಎಂ.ಕೆ ಗಣೇಶನ್ ಹಾಗೂ ಹಿರಿಯ ಕ್ರೀಡಾಪಟುಗಳು ಉಪಸ್ಥಿತರಿದ್ದರು.
ಬೆಂಗಳೂರು ಜ.13 NEWS DESK : ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿದರು. ಚುನಾವಣೆ ಹಾಗೂ ಚುನಾವಣಾ ನೀತಿಗಳು ಮತ್ತು ಪ್ರಜಾಪ್ರಭುತ್ವ ಆಡಳಿತ ಎಂಬ ವಿಷಯದ ಬಗ್ಗೆ ಮಾತನಾಡಿದ ಶಾಸಕರು, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮಹತ್ವ ಹಾಗೂ ಚುನಾವಣೆ ಪ್ರಕ್ರಿಯೆಗಳ ರೀತಿ -ನೀತಿಗಳ ಬಗ್ಗೆ ವಿಸ್ತಾರವಾಗಿ ವಿವರಿಸಿ ಯುವ ವಕೀಲರ ಜೊತೆ ಸಂವಾದ ನಡೆಸಿದರು. ಭಾರತೀಯರಾದ ನಮಗೆ ನಮ್ಮ ಸಂವಿಧಾನ ನೀಡಿದ ಅತ್ಯಂತ ಮಹತ್ವದ ವಿಷಯವೇ ಪ್ರಜಾಪ್ರಭುತ್ವ ಆಡಳಿತ. ಇಲ್ಲಿ ಪ್ರಜೆಗಳು ತಮ್ಮನ್ನು ಆಳಬೇಕಾಗಿರುವ ವ್ಯಕ್ತಿಯನ್ನು ಆಯ್ಕೆ ಮಾಡಲು ಸಂಪೂರ್ಣ ಸ್ವಾತಂತ್ರ್ಯರು ಮತ್ತು ದೇಶದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡರೆ, ಇದು ಅತ್ಯಂತ ಮಹತ್ವದ ಹಾಗೂ ಗುರುತರ ಜವಾಬ್ದಾರಿ ಆಗಿರುತ್ತದೆ. ವಕೀಲರಿಗೆ ಸಂವಿಧಾನವನ್ನು ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವ ಮಹತ್ವದ ಜವಾಬ್ದಾರಿ ಇದೆ. ಇದನ್ನು ಎಲ್ಲರೂ ಯಶಸ್ವಿಯಾಗಿ ನಿಭಾಯಿಸಬೇಕೆಂದು ಪ್ರಜಾಪ್ರಭುತ್ವ ಆಡಳಿತದ ಮಹತ್ವ…
ನಾಪೋಕ್ಲುಜ.13 NEWS DESK : ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2025-26 ಸಾಲಿನ ಸ್ಪರ್ಧೆಯಲ್ಲಿ ರಘುಪತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ 2025-26 ಸಾಲಿನ ಸ್ಪರ್ಧೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಮೂರ್ನಾಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕಕ್ಕಬೆ ನಿವಾಸಿ ಎ.ಎ.ರಘುಪತಿ ಅವರು ನಾಟಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಜು ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.12 NEWS DESK : ಮಡಿಕೇರಿಯ ಮಂಗಳಾದೇವಿ ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಜ.14 ಮತ್ತು 15 ರಂದು ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಎರಡು ದಿನಗಳ ಕಾಲ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗ ದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ನಡೆಯಲಿದೆ. ಜ.14 ರಂದು ಸಂಜೆ 6 ಗಂಟೆಯಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ದಿ, ರಾಕ್ಷೆಘ್ನ ಹೋಮ, ವಾಸ್ತುಪೂಜೆ, ವಾಸ್ತುಹೋಮ, ದಿಶಾಬಲಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ಜ.15 ರಂದು ಬೆಳಗ್ಗೆ ಗಂಟೆ 8 ರಿಂದ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ, ಕಲಶಾಭಿಷೇಕ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ಸಾಯಂಕಾಲ 5.30 ರಿಂದ ಸಾಯಂಪೂಜೆ, 6.30 ಕ್ಕೆ ರಂಗಪೂಜೆ ಸಂಜೆ 7 ರಿಂದ ಬಲಿ…
ಕುಶಾಲನಗರ, ಜ.12 NEWS DESK : ಕುಶಾಲನಗರದ ತಾಲ್ಲೂಕಿನ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎನ್.ಎಸ್.ಎಸ್. ಘಟಕ, ಸಮಾಜ ಸಂಘ, ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಾಲಾ ಘಟಕ, ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ ಮತ್ತು ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನ: 2026 ವನ್ನು ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಸ್ವಾಮಿ ವಿವೇಕಾನಂದ ಅವರ ಬದುಕು ಮತ್ತು ದೂರದೃಷ್ಠಿ ವ್ಯಕ್ತಿತ್ವ” ಕುರಿತು ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ತತ್ವಶಾಸ್ತ್ರ ಮತ್ತು ಇತಿಹಾಸದ ಬಗ್ಗೆ ಅಪಾರ ಜ್ಞಾನವನ್ನು ಪಡೆದು ವಿಶ್ವದ ಗಮನ ಸೆಳೆದ ಆಧ್ಯಾತ್ಮಿಕ ಚಿಂತಕರೂ ಆದ ಯುವ ಜನಾಂಗದ ಕಣ್ಮಣಿಯಾಗಿದ್ದ ಸ್ವಾಮಿ ವಿವೇಕಾನಂದರ ಆದರ್ಶಗಳು ಮತ್ತು ತತ್ವಗಳು ಭಾರತೀಯ ಯುವಕರ ವ್ಯಕ್ತಿತ್ವ ನಿರ್ಮಾಣಕ್ಕೆ ಅತ್ಯುತ್ತಮ ಮಾರ್ಗದರ್ಶಕವಾಗಿವೆ ಎಂದರು. ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ…
ಮಡಿಕೇರಿ ಜ.12 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ಪರಂಬ್ ಕೊಡವ ನರಮೇಧ ಸ್ಥಳಕ್ಕೆ ಭೇಟಿ ನೀಡಿ 1785ರ ದುರಂತ ಹತ್ಯಾಕಾಂಡದಲ್ಲಿ ಮೃತಪಟ್ಟ ಹಿರಿಯರಿಗೆ ಗೌರವ ನಮನ ಸಲ್ಲಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಗುರು ಹಿರಿಯರನ್ನು ಸ್ಮರಿಸಿ ದುರಂತ ಇತಿಹಾಸದ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಆದಿಮಂಜಾತ ಏಕ-ಜನಾಂಗೀಯ, ಅನಿಮಿಸ್ಟಿಕ್ ಕೊಡವ ಜನರ ವಿರುದ್ಧದ ಈ ದೌರ್ಜನ್ಯಕ್ಕೆ ನ್ಯಾಯ ಮತ್ತು ಅಂತರರಾಷ್ಟ್ರೀಯ ಮನ್ನಣೆಯನ್ನು ಪಡೆಯುವ ಸಿಎನ್ಸಿಯ ಬದ್ಧತೆಯನ್ನು ಪುನರುಚ್ಚರಿಸುವುದಾಗಿ ತಿಳಿಸಿದರು. ದೇವಟ್ಪರಂಬ್ ದುರಂತ ಕೊಡವ ನರಮೇಧವು 1785ರ ಡಿಸೆಂಬರ್ 12 ರ ದುರದೃಷ್ಟಕರ ದಿನದಂದು ಸಂಭವಿಸಿತು. ಸಾವಿರಾರು ಮುಗ್ಧ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಯೋಧರು ಮತ್ತು ಅವರ ಕುಟುಂಬಗಳನ್ನು ಟಿಪ್ಪು ಸುಲ್ತಾನನ ನೇತೃತ್ವದ ಮೈಸೂರು ಸುಲ್ತಾನರ ಸೈನ್ಯವು ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯ ಸೈನಿಕರೊಂದಿಗೆ ಸೇರಿಕೊಂಡು ಕ್ರೂರವಾಗಿ ಹತ್ಯೆ ಮಾಡಿತು. ಕೊಡವ ಯೋಧರಿಂದ 31 ಬಾರಿ ಸೋಲಿಸಲ್ಪಟ್ಟ ಟಿಪ್ಪು, ಮೋಸಗೊಳಿಸುವ ಶಾಂತಿ ಒಪ್ಪಂದವನ್ನು ರೂಪಿಸಿ ಕೊಡವ ಜನರನ್ನು…
ಮಡಿಕೇರಿ ಜ.12 NEWS DESK : ಕೊಡಗು ಜಿಲ್ಲೆಯ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿ ‘ಜಿಲ್ಲಾ ಮುಸ್ಲಿಂ ಭವನ’ ನಿರ್ಮಾಣಕ್ಕೆ ಸೂಕ್ತ ಸರಕಾರಿ ಜಾಗವನ್ನು ಮಂಜೂರು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಪಿ.ಎ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ಅಲ್ಪಸಂಖ್ಯಾತರ ಪಕ್ಷ ನಿಷ್ಠೆಯನ್ನು ವಿವರಿಸಿದರು. ಕೊಡಗು ಜಿಲ್ಲೆಯ ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಪಕ್ಷಕ್ಕಾಗಿ ತೋರಿದ ನಿಷ್ಠೆಗೆ ಯಾವುದೇ ರೀತಿಯಲ್ಲೂ ಬೆಲೆ ಕಲ್ಪಿಸಲು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರೂ ಕೊಡಗು ಜಿಲ್ಲೆಯ ಕಾಂಗ್ರೆಸ್ ನ ಮುಸ್ಲಿಂ ಮುಖಂಡರಿಗೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆಯಲಿಲ್ಲ ಎನ್ನುವ ಕೊರಗು ನಮ್ಮನ್ನು ನಿರಂತರವಾಗಿ ಕಾಡುತ್ತಿದೆ ಎಂದು ಹನೀಫ್ ಪಿ.ಎ ತಿಳಿಸಿದರು. ಕೊಡಗಿನ ಕಾಂಗ್ರೆಸ್ ಮುಸ್ಲಿಂ ಪ್ರಮುಖರೊಬ್ಬರನ್ನು ಕರ್ನಾಟಕ ವಿಧಾನ ಪರಿಷತ್…
ಮಡಿಕೇರಿ ಜ.12 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ದಿನಾಂಕ: 17.01.2026 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ನವೀನ್ ಕುಮಾರ್ ಎಸ್.ಕೆ.ಅವರು ತಿಳಿಸಿದ್ದಾರೆ.






