ನವದೆಹಲಿ: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.
ಲೇಖಕ: admin
ವಿರಾಜಪೇಟೆ 25 : ನಗರದಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಣಗೊಳಿಸಲು ಪುರಸಭೆಯು ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದೆ ಅಲ್ಲದೆ ಮೂಲಭೂತ ಸೌಕರ್ಯಗಳನ್ನು ನೀಡದೆ ತೆರಿಗೆ ಏರಿಕೆಗೊಳಿಸಿರುವುದು ಖಂಡನೀಯ ಎಂದು ನಾಗರಿಕ ಸಮಿತಿ ಸಂಚಾಲಕ ಇ.ಆರ್.ದುರ್ಗಾ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು. ಗೋಣಿಕೊಪ್ಪ ರಸ್ತೆಯಲ್ಲಿರುವ ಸಮಿತಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ವಾಹನ ನಿಲುಗಡೆಗೆ ಶುಲ್ಕ ವಿಧಿಸುವ ಕ್ರಮವನ್ನು ಪುರಸಭೆಯ ಆಡಳಿತರೂಢ ಸದಸ್ಯರು ಒಪ್ಪಿರುವುದು ಅವೈಜ್ಞಾನಿಕ. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿದರು ಆದೇಶ ಜಾರಿಗೆ ಮಾಡಲಾಗಿದೆ ಎಂದು ಆರೋಪಿಸಿದರು. ವಾಹನ ಶುಲ್ಕ ವಿಧಿಸುವುದರಿಂದ ವಾಹನ ದಟ್ಟಣೆ ನಿಯಂತ್ರಣ ಮಾಡಬಹುದಾಗಿದೆ ಎಂದು ಸಭೆಯು ಒಪ್ಪಿಗೆ ಸೂಚಿಸಿ ಶುಲ್ಕ ವಿಧಿಸುವ ಕ್ರಮ ಜಾರಿಗೆಗೊಳಿಸಿದೆ. ನಗರದ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಅವ್ಯವಸ್ಥೆಯಿಂದ ಕೂಡಿದೆ. ಪಾದಚಾರಿಗಳಿಗೆ ಸಂಚಾರ ಮಾಡಲು ಯೋಗ್ಯವಾದ ಪಾದಚಾರಿ ರಸ್ತೆಗಳು ಇಲ್ಲಾ, ಒಳಚರಂಡಿ ವ್ಯವಸ್ಥೆಯು ಕ್ರಮಬದ್ಧವಾಗಿ ನಿರ್ವಹಣೆಯಿಲ್ಲಾ. ವಾಹನ ಮಾಲೀಕರು ಎಲ್ಲೆಂದರಲ್ಲಿ ವಾಹನ ನಿಲುಗಡೆಗೊಳಿಸಿ ಇತರ ಪ್ರದೇಶಗಳಿಗೆ ತೆರಳುವುದು ಸಾಮಾನ್ಯವಾಗಿದೆ. ನೂತನವಾಗಿ…
ಮಡಿಕೇರಿ ಏ.25 : ಹಾಕತ್ತೂರು ಚೂರಿಕಾಡು ಗ್ರಾಮದ ರಾಜೇಶ್ ಎಂಬವರ ಮನೆಯ ಕೋಳಿಗೂಡಿನಲ್ಲಿದ್ದ 6 ಅಡಿ ಉದ್ದದ ನಾಗರಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ಮಡಿಕೇರಿ ಏ.25 : ವಿಧಾನಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಸಿ.ಎಸ್.ರವಿಂದ್ರ ಪರ ಬಿರುಸಿನ ಪ್ರಚಾರ ನಡೆಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟ, ಟಿ.ಶೆಟ್ಟಿಗೇರಿ, ಹುದಿಕೇರಿ, ಶ್ರೀಮಂಗಲ ಭಾಗದಲ್ಲ್ಲಿ ಮತಯಾಚಿಸಿದರು. ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಪೃಥ್ವಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಏ.24 : ವಿಧಾನಸಭಾ ಚುನಾವಣೆ ಸಂಬAಧ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 6 ಮಂದಿ ನಾಮಪತ್ರ ಹಿಂಪಡೆದಿದ್ದು, 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಯಾರೂ ನಾಮಪತ್ರ ಹಿಂಪಡೆದಿಲ್ಲ. ಈ ಕ್ಷೇತ್ರದಲ್ಲಿ 9 ಮಂದಿ ಕಣದಲ್ಲಿದ್ದಾರೆ. ::: ಅಂತಿಮವಾಗಿ ಕಣದಲ್ಲಿರುವವರು ಮಡಿಕೇರಿ ಕ್ಷೇತ್ರ ::: ಬಿಜೆಪಿಯ ಎಂ.ಪಿ.ಅಪ್ಪಚ್ಚುರಂಜನ್, ಕಾಂಗ್ರೆಸ್ ನ ಡಾ.ಮಂತರ್ ಗೌಡ, ಜೆಡಿಎಸ್ ನ ಎನ್.ಎಂ.ಮುತ್ತಪ್ಪ, ಎಸ್ಡಿಪಿಐ ನ ಅಮೀನ್ ಮೊಹಿಸಿನ್, ಆರ್ಪಿಐ ನ ಕೆ.ಬಿ.ರಾಜು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಹೆಚ್.ಎಂ.ಸೋಮಪ್ಪ, ದಿವಿಲ್ ಕುಮಾರ್ ಎ.ಎ.(ಬಹುಜನ ಸಮಾಜ ಪಕ್ಷ), ರಶೀದ ಬೇಗಂ (ಇಂಡಿಯನ್ ಮೂವೆಮೆಂಟ್ ಪಾರ್ಟಿ), ಶ್ರೀನಿವಾಸ ರೈ ಬಿ.ಕೆ.(ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ), ಬೋಪಣ್ಣ ಕೆ.ಪಿ.(ಆಮ್ ಆದ್ಮಿ ಪಾರ್ಟಿ), ಸಜೀರ್ ಮಜೀದ್ ನೆಲಾಟ್ (ಕರ್ನಾಟಕ ರಾಷ್ಟç ಸಮಿತಿ), ಜಿ.ಜಿ.ಹೇಮಂತ್ ಕುಮಾರ್(ಪಕ್ಷೇತರ), ಹರೀಶ್ ಆಚಾರ್ಯ(ಪಕ್ಷೇತರ), ಎಂ.ಖಲೀಲ್(ಪಕ್ಷೇತರ), ಶೃತಿ ಕೆ.ಪಿ.(ಪಕ್ಷೇತರ) ::: ವಿರಾಜಪೇಟೆ ಕ್ಷೇತ್ರ ::: ಬಿಜೆಪಿಯಿಂದ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಎ.ಎಸ್.ಪೊನ್ನಣ್ಣ,…
ನಾಪೋಕ್ಲು ಏ.24 : ವಿರಾಜಪೇಟೆ ಕ್ಷೇತ್ರದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಹಲವೆಡೆ ರಸ್ತೆ, ವಸತಿ, ನೀರು, ವಿದ್ಯುತ್ ಗೆ ಪರದಾಡುವ ಪರಿಸ್ಥಿತಿ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ .ಪೊನ್ನಣ್ಣ ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ಮತಯಾಚಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರವಾದ ಆಶ್ವಾಸನೆಗಳನ್ನು ನೀಡಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ವಿರಾಜಪೇಟೆ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿ ಸಾಧಿಸಲಾಗುವುದು ಎಂದರು. ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ಇದುವರೆಗಿನ ಸರ್ಕಾರ ಸುಳ್ಳನ್ನು ಹೇಳುತ್ತಾ ಜನರಿಗೆ ತಪ್ಪು ಮಾಹಿತಿ ನೀಡುತ್ತಾ ಅಧಿಕಾರ ಮಾಡಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಜನ ಬದಲಾವಣೆ ಬಯಸಿದ್ದು,…
ಮಡಿಕೇರಿ ಏ.24 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸೋಮವಾರಪೇಟೆ ಪಟ್ಟಣದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಪಟ್ಟಣದ ಕಕ್ಕೆಹೊಳೆ ಜಂಕ್ಷನ್ನಿಂದ ಪ್ರಚಾರ ರಥದೊಂದಿಗೆ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ತೆರಳಿದ ಮುಖಂಡರು ಹಾಗು ಕಾರ್ಯಕರ್ತರು, ಸಾರ್ವಜನಿಕರಲ್ಲಿ ಕಾಂಗ್ರೆಸ್ ಪರ ಮತಯಾಚನೆ ಮಾಡಿದರು. ಈ ಬಾರಿ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಕಾಂಗ್ರೆಸ್ಗೆ ಜನತೆ ಆಶೀರ್ವಾದ ಮಾಡಲಿದ್ದಾರೆ. ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅಭ್ಯರ್ಥಿ ಮಂತರ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡರಾದ ಎಚ್.ಎಸ್. ಚಂದ್ರಮೌಳಿ, ಬಿ.ಬಿ. ಸತೀಶ್, ಮಿಥುನ್ ಹಾನಗಲ್ಲು, ಕೆ.ಎಂ. ಲೋಕೇಶ್, ವಿ.ಎ. ಲಾರೆನ್ಸ್ ಇದ್ದರು.
ನಾಪೋಕ್ಲು ಏ.24 : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸರು ನಾಪೋಕ್ಲು ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಸೋಮವಾರ ಪಥಸಂಚಲನ ನಡೆಸಿದರು. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಮುಡಿ ಗ್ರಾಮದಿಂದ ನಾಪೋಕ್ಲು ಪಟ್ಟಣದ ಮುಖ್ಯ ರಸ್ತೆಯ ಮಾರ್ಗವಾಗಿ, ಎಮ್ಮೆಮಾಡು, ನೆಲಜಿ,ಕೊಳಕೇರಿ, ಕುಂಜಿಲ, ಕಕ್ಕಬ್ಬೆ, ನಾಲಡಿ, ಯುವಕಪಾಡಿ, ನೆರಿಯಂದಡ, ಚೇಲಾವರ ಗ್ರಾಮದವರೆಗೂ ಪಥಸಂಚಲನ ನಡೆಸುವ ಮೂಲಕ ಭಯಮುಕ್ತ ಚುನಾವಣೆ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಸುಂದರ್ ರಾಜ್, ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಶೇಖರ್ ಅವರ ಮಾರ್ಗದರ್ಶನದಂತೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಅವರ ಮುಂದಾಳತ್ವದಲ್ಲಿ ನಡೆದ ಪಥಸಂಚನದಲ್ಲಿ ನಾಪೋಕ್ಲು ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು. (ವರದಿ : ಝಕರಿಯ ನಾಪೋಕ್ಲು )
ಸೋಮವಾರಪೇಟೆ ಏ.24 : ಕಳೆದ 25 ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಕೆಲಸ ಮಾಡಿದ್ದೇನೆ. ಮೆ.10ರಂದು ನಡೆಯುವ ಚುನಾವಣೆಯಲ್ಲಿ ತನಗೆ ಮತನೀಡುವಂತೆ ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಮನವಿ ಮಾಡಿದರು. ಭಾರತೀಯ ಜನತಾ ಪಾರ್ಟಿ ವತಿಯಿಂದ ಜೇಸಿ ವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯ ಕಾಫಿ ಬೆಳೆಗಾರರಿಗೆ 10 ಎಚ್.ಪಿ. ವರೆಗಿನ ವಿದ್ಯುತ್ ಮೋಟಾರುಗಳಿಗೆ ಉಚಿತ ವಿದ್ಯುತ್ ನೀಡುವುದು, ಆನೆ ಹಾವಳಿ ನಿಯಂತ್ರಣಕ್ಕೆ ರೈಲ್ವೇ ಬ್ಯಾರಿಕೇಡ್, ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ, ಫಾರಂ 53 ಮತ್ತು 57ರಲ್ಲಿ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿದ ಸಾಕಷ್ಟು ರೈತರಿಗೆ ಸಾಗುವಳಿ ಪತ್ರ ಸೇರಿದಂತೆ ಹಲವು ಕೆಲಸಗಳನ್ನು ಮಾಡಿಕೊಡಲಾಗಿದೆ ಎಂದರು. ಕಾಂಗ್ರೆಸ್ ಜಿಲ್ಲೆಯ ಎರಡೂ ಕ್ಷೇತ್ರಗಳಿಗೆ ಬೆಂಗಳೂರಿನಿಂದ ಅಭ್ಯರ್ಥಿಗಳನ್ನು ಆಮದು ಮಾಡಿಕೊಂಡು ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. ಗೆದ್ದ ನಂತರ ಇವರನ್ನು ಕಾಣಲು ಬೆಂಗಳೂರಿಗೆ ಹೋಗ ಬೇಕಾಗಿರುವುದರಿಂದ ಮನೆಯ ಮಗನಿಗೆ ಮತ ನೀಡಿ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕೆಂದರು. ಅರಕಲಗೂಡಿನ…
ಸೋಮವಾರಪೇಟೆ ಏ.24 : ಭಾರತ ಕಮ್ಯೂನಿಸ್ಟ್ ಪಕ್ಷದ(ಸಿಪಿಐ) ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಎಚ್.ಎಂ. ಸೋಮಪ್ಪ ಸೋಮವಾರ ಪಟ್ಟಣದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭ ಮಾತನಾಡಿ, ವಿಧಾನ ಸಭೆಯಲ್ಲಿ ಕಾರ್ಮಿಕರು, ರೈತರು, ವಿದ್ಯಾರ್ಥಿ, ಯುವಜನರು, ಶೋಷಿತರ ಪರವಾಗಿ ಯಾರೂ ಧ್ವನಿ ಎತ್ತುತ್ತಿಲ್ಲ. ಈ ಭಾರಿ ದುಡಿಯುವ ಜನತೆಯ ಪಕ್ಷವಾದ ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಸ್ವಧಿಸಿರುವ ನನಗೆ ಮತ ನೀಡಿದಲ್ಲಿ ಶೋಷಿತರ ಪರಿವಾಗಿ ಹೋರಾಟ ನಡೆಸಲಾಗುವುದು ಎಂದರು. ಈ ಸಂದರ್ಭ ಪಕ್ಷದ ರಾಜ್ಯ ಸಮಿತಿ ಕಾರ್ಯದರ್ಶಿ ಬಿ. ಹಮ್ಚದ್, ಜಿಲ್ಲಾ ಕಾರ್ಯದರ್ಶಿ ಕೆ.ವಿ. ಸುನಿಲ್, ಸಹಕಾರ್ಯದರ್ಶಿ ರಫೀಕ್, ಆದಿ ದ್ರಾವೀಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಎಚ್.ಎಸ್. ಮಧು, ತಾಲ್ಲೂಕು ಕಾರ್ಯದರ್ಶಿ ಪಿ.ಟಿ. ಸುಂದರ ಮತ್ತಿತರರು ಇದ್ದರು.






