ಲೇಖಕ: admin

ಮಡಿಕೇರಿ ಏ.24 : ವಿರಾಜಪೇಟೆಯಲ್ಲಿ ಏ.25 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತದ ಗುಂಪು ಪರೀಕ್ಷೆ ನಡೆಯಲಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು ಜಿಲ್ಲಾಸ್ಪತ್ರೆ ಮತ್ತು ವಿರಾಜಪೇಟೆ ರೋಟರಿ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ, ರೆಡ್‍ಕ್ರಾಸ್ ಮತ್ತು ರೆಡ್ ರಿಬ್ಬನ್ ಘಟಕದ ಸಂಯುಕ್ತಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಪೂರ್ವಹ್ನ 10.30 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ವಿರಾಜಪೇಟೆ ರೋಟರಿ ಕ್ಲಬ್ ಅಧ್ಯಕ್ಷ ಹರಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಸಭಾಪತಿ ರವೀಂದ್ರ ರೈ, ಮಡಿಕೇರಿ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ಕರುಂಬಯ್ಯ, ಕೊಡಗು ಯುವ ರೆಡ್‍ಕ್ರಾಸ್ ಘಟಕದ ಅಧ್ಯಕ್ಷ ಎಂ.ಧನಂಜಯ, ವಿರಾಜಪೇಟೆ ರೋಟರಿ ಕ್ಲಬ್ ಕಾರ್ಯದರ್ಶಿ ಡಾ.ನರಸಿಂಹ ಪಾಲ್ಗೊಳ್ಳಲಿದ್ದು, ವಿರಾಜಪೇಟೆ ಸ.ಪ್ರ,ದ.ಕಾಲೇಜು ಐ.ಕ್ಯೂ.ಎ.ಸಿ.ಸಂಚಾಲಕ ಪಿ.ಎನ್.ನಾಗರಾಜಮೂರ್ತಿ ಉಪಸ್ಥಿತರಿರಲಿದ್ದಾರೆ.

Read More

ಮಡಿಕೇರಿ ಏ.24 : ಮಡಿಕೇರಿ ನಗರದ ವಾರ್ಡ್ ನಂಬರ್ 20ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಪರ ಬಿರುಸಿನ ಪ್ರಚಾರ ನಡೆಯಿತು. ಬೂತ್ ಅಧ್ಯಕ್ಷ ರವಿಗೌಡ ಅವರ ನೇತೃತ್ವದಲ್ಲಿ ನಗರದ ವಾರ್ಡ್ ನಂಬರ್ 20ರ ಹೊಸ ಬಡಾವಣೆ ಹಾಗೂ ಚಾಮುಂಡೇಶ್ವರಿ ನಗರದ ಮನೆಮನೆಗಳಿಗೆ ತೆರಳಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವಿಗೆ ಸಹಕಾರ ನೀಡಿ ಈ ಬಾರಿ ಬದಲಾವಣೆ ಬಯಸುವಂತೆ ಮತದಾರರಲ್ಲಿ ಮನವಿ ಮಾಡಲಾಯಿತು. ಈ ಸಂದರ್ಭ ಬೂತ್ ನ ಬಿ.ಎಲ್.ಎ ಗಳಾದ ಹೆಚ್.ಯು.ಲಿಲ್ಲಿ, ಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಸದಸ್ಯರುಗಳಾದ ಸತೀಶ್ ಪೈ, ರಮ್ಯಾ, ದೇವಕಿ ಹಾಗೂ ಹಲವು ಬೂತ್ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಏ.24 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 2 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಸದಸ್ಯ ಹೆಚ್.ಎಸ್.ದೇವರಾಜ್ (ಮಣಿ) ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದ್ದು, ಬೆಳಿಗ್ಗೆ 9.20ಕ್ಕೆ ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಲಿದೆ ಎಂದು ಮಾಹಿತಿ ನೀಡಿದರು. ಹಗಲು 11.45ಕ್ಕೆ ದೇವಿಯ ರಥೋತ್ಸವವು ದೇವಾಲಯದ ಆವರಣದ ಸುತ್ತಲೂ ನೆರವೇರಲಿದ್ದು, ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ಜರುಗಲಿದೆ ಎಂದರು. ಅಪರಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ…

Read More

ಮಡಿಕೇರಿ ಏ.24 : ಮಡಿಕೇರಿ ತಾಲ್ಲೂಕಿನ ಮೇಕೇರಿ ಸಮೀಪದ ಬಿಳಿಗೇರಿ ಗ್ರಾಮದ ಶ್ರೀ ಅರ್ಧನಾರೀಶ್ವರ ದೇವಾಲಯದ ವಾರ್ಷಿಕ ಉತ್ಸವ ಏ.27 ರಿಂದ ಮೇ1ರ ವರೆಗೆ ನಡೆಯಲಿದೆ. ಏ.27ರಂದು ಬೆಳಿಗ್ಗೆ 7 ಗಂಟೆಗೆ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಕಗ್ಗೋಡ್ಲುವಿನ ಶ್ರೀ ಬೊಟ್ಲಪ್ಪ ದೇವಾಲಯದಿಂದ ತೀರ್ಥ ತೆಗೆದುಕೊಂಡು ಬರುವುದು, ಗಣಪತಿ ಹೋಮ, ತೀರ್ಥ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6 ಗಂಟೆಗೆ ಪ್ರಾರ್ಥನೆ, ಭಂಡಾರ ತರುವುದು, ಅಂದಿ ಬೆಳಕು, ಶ್ರೀ ದೇವರ ಬಲಿ, ಪ್ರಸಾದ ವಿತರಣೆ ನಡೆಯಲಿದೆ. ಏ.28 ರಂದು ಬೆಳಿಗ್ಗೆ 5ಗಂಟೆಗೆ ದೇವರು ಬಲಿ ಬರುವುದು, 10 ಗಂಟೆಗೆ ಹಬ್ಬದ ಕಟ್ಟುಮುರಿಯುವುದು, ಶ್ರೀ ದೇವರ ನೃತ್ಯ ಬಲಿ, ವಸಂತ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 5 ಗಂಟೆಗೆ ದೇವರು ಜಳಕಕ್ಕೆ ಹೋಗುವುದು, ನಂತರ ದೇವರ ನೃತ್ಯ ಬಲಿ, ಮಹಾಪೂಜೆ, ಪ್ರಸಾದ ವಿತರಣೆಗಳು ನಡೆಯಲಿವೆ. ಏ.29 ರಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಹೋಮ, ಶುದ್ಧ ಕಲಶ, ಮಹಾಪೂಜೆ, ಪ್ರಸಾದ ವಿತರಣೆ,…

Read More

ಚೆಂಬೆ ಬೆಳ್ಳೂರ್ ಏ.24 :  ವಿರಾಜಪೇಟೆಯ ಚೆಂಬೆಬೆಳ್ಳೂರಿನ ವಾರ್ಷಿಕ ಬೋಡ್‍ನಮ್ಮೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ತಾಲಿಪಾಟ್, ಹುಲಿವೇಷಧಾರಿಗಳು, ಬಂಡ್‍ಕಳಿ, ಪಿಲ್ಲ್ ಭೂತ, ಹೆಣ್ಣಿನ ವೇಷದಾರಿಗಳ ಕುಣಿತ ಗಮನ ಸೆಳೆಯಿತು. ಪಟ್ಟಣಿ ಹಬ್ಬದೊಂದಿಗೆ ಆರಂಭವಾದ ಬೋಡ್‍ನಮ್ಮೆಯು ಪಣಿಕರಡೋಲಿನಕೊಟ್ಟು ಹಾಗೂ ಕೊಂಬಿನ ಊದಿದ ನಂತರ ಊರಿನವರು ಸಂಪ್ರದಾಯದಂತೆ ಪಟ್ಟಣಿ ಮುರಿಯಲಾಯಿತು. ಹಬ್ಬದ ಅಂಗವಾಗಿ ಭದ್ರಕಾಳಿ ದೇವಾಲಯವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಚೀರುಳಿ ಅಂಬಲದಲ್ಲಿ ಭದ್ರಕಾಳಿಯ ಒಂದುಮುಡಿ ತೆರೆಕಟ್ಟಿ ಪೂಜಿಸಿ ದೇವರನೆಲೆಗೆ ಬಂದು ಕುಣಿಯಲಾಯಿತು. ನಂತರ ಊರಿನ ಮೂರು ಕೇರಿಯಿಂದ ಬೆತ್ತದಿಂದ ಮಾಡಿ ಶೃಗಂರಿಸಿದ ಕೃತಕ ಮೂರು ಕುದುರೆಯೊಂದಿಗೆ ಊರಿನವರು ಅಂಬಲಕ್ಕೆ ಬಂದು ದೇವಾಲಯದಲ್ಲಿ ಸೇರುವ ಮೂಲಕ ಪೂಜಾ ಕೈಂಕರ್ಯವನ್ನು ನೆರವೇರಿಸಿದರು. ಬೊಳಕಾಟ್, ತೆಂಗಿನಕಾಯಿ ಎಳೆಯುವ ಸ್ಪರ್ಧೆ ನಂತರ ದೇವರಿಗೆ ವಿಶೇಷ ಪೂಜೆಸಲ್ಲಿಸಲಾಯಿತು. ರಾತ್ರಿ ಊರಿನವರು, ಹರಕ್ಕೆ ಹೊತ್ತವರು ಮೈ ಯಲ್ಲೆಲ್ಲ ಬಣ್ಣಬಳಿದು ವಿಧದ ವೇಶಕಟ್ಟಿ ಮನೆಮನೆಗೆ ತೆರಳಿದರು. ಸಂಜೆ ವೇಷಧಾರಿಗಳು ಅಂಬಲದಲ್ಲಿ ಸೇರಿ ಊರಿನವರೊಂದಿಗೆ ಡೋಲನ್ನು ಕೊಟ್ಟುತ್ತಾ ದೋಳ್‍ಪಾಟ್ ನೊಂದಿಗೆ ಭದ್ರಕಾಳಿ, ಚಾಮುಂಡಿ ಹಾಗೂ ಮಕ್ಕಾಟ್…

Read More

ಮಡಿಕೇರಿ ಏ.24 :  ಕೊಡಗು ಜಿಲ್ಲಾ ಕಾಂಗ್ರೆಸ್ ಚುನಾವಣೆ ವಾರ್ ರೂಂ ಸಂಚಾಲಕರನ್ನಾಗಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ  ತೆನ್ನಿರ ಮೈನಾ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ  ಅವರು ನೇಮಕ ಮಾಡಿ,  2023 ರ ವಿಧಾನ ಸಭಾ ಚುನಾವಣೆಯಲ್ಲಿ 208 ಮಡಿಕೇರಿ ವಿಧಾನ ಸಭಾ ಕ್ಷೇತ್ರ ಹಾಗೂ 209 ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪೂರಕವಾದ ಕಾರ್ಯತಂತ್ರಗಳನ್ನು ಅಳವಡಿಸಿ ಪರಿಣಾಮಕಾರಿಯಾಗಿ ಚುನಾವಣೆ ಎದುರಿಸಲು ಕಾರ್ಯಪ್ರವೃತ್ತರಾಗುವಂತೆ ನೇಮಕಾತಿ ಆದೇಶದಲ್ಲಿ ನಿರ್ದೇಶನ ನೀಡಿದ್ದಾರೆ.

Read More

ಬೆಂಗಳೂರು ಏ.24 : ಆದಿಚುಂಚನಗಿರಿ ಮಠದ ಮಠಾಧೀಶ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ, ಜಾತ್ಯತೀತ ಜನತಾದಳದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದರು. ಜ್ವರದ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಶ್ರೀಗಳು ವಿಶ್ರಾಂತಿ ಪಡೆದು ಶೀಘ್ರ ಗುಣಮುಖರಾಗಿ ಎಂದು ಸಲಹೆ ನೀಡಿದರು. ಚುನಾವಣೆಯ ಒತ್ತಡ ಇರುವುದರಿಂದ ಕುಮಾರಸ್ವಾಮಿ ಅವರು ಆಸ್ಪತ್ರೆಯಿಂದÀಲೇ ಪಕ್ಷದ ನಾಯಕರು ಹಾಗೂ ಅಭ್ಯರ್ಥಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

Read More

ಮಡಿಕೇರಿ ಏ.24  : ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 16ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಕೇರಳದ ಪಯ್ಯನೂರ್ ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು. ಏ.21 ರಂದು ಸಂಜೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದವಿತರಿಸಲಾಯಿತು. ಏ.22 ರಂದು ಬೆಳಿಗ್ಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನೆರವೇರಿತು. ನಂತರ ನೆರದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

Read More

ಮಡಿಕೇರಿ ಏ.23 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಜನರ ಪ್ರೀತಿ ನನ್ನ ಗೆಲುವಿಗೆ ಶ್ರೀರಕ್ಷೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತೊರೆನೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಈ ಬಾರಿ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದರು. ಮಡಿಕೇರಿ ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ, ನನ್ನ ಪರ ಒಲವು ಹೊಂದಿದ್ದಾರೆ. ಇದರಿಂದ ಹತಾಶಗೊಂಡಿರುವ ಪ್ರತಿಸ್ಪರ್ಧಿಗಳು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನನ್ನು ಬಹುಮತದಿಂದ ಗೆಲ್ಲಿಸುವ ಭರವಸೆಯನ್ನು ಮಡಿಕೇರಿ ಕ್ಷೇತ್ರದ ಜನ ನೀಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಮುಖಂಡ ಹರಪಳ್ಳಿ ರವೀಂದ್ರ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಮತಯಾಚಿಸಿದರು.

Read More

ನಾಪೋಕ್ಲು ಏ.23 : ಕೊಡಗು ಜಿಲ್ಲೆ ಸೈನ್ಯ ಮತ್ತು ಕ್ರೀಡೆ ಎರಡರಲ್ಲೂ ಹೆಸರುವಾಸಿಯಾಗಿದ್ದು ಹಾಕಿಯ ನಂತರ ಕ್ರಿಕೆಟ್ ಕೂಡ ಚರಿತ್ರೆಯಲ್ಲಿ ದಾಖಲಾಗಿದೆ ಎಂದು ಕರ್ನಲ್ ಮಾಚಿಮಂಡ  ಮುತ್ತಪ್ಪ ಹೇಳಿದರು. ಸಮೀಪದ ಚೆರಿಯಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬಾಳೆಯಡ ಕ್ರಿಕೆಟ್ ನಮ್ಮೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆಯೋಜಿಸುತ್ತಿರುವ ಕ್ರೀಡಾ ಚಟುವಟಿಕೆಗಳು ಇಂದಿನ ಯುವ ಜನಾಂಗಕ್ಕೆ ಮಾದರಿಯಾಗುತ್ತಿವೆ. ಹಿಂದೆ ಕ್ರೀಡೆ ವೃತ್ತಿಯ ಒಂದು ಭಾಗವಾಗಿರಲಿಲ್ಲ. ಈಗ ಕ್ರೀಡೆ ಮತ್ತು ವೃತ್ತಿ ಎರಡು ಒಂದಕ್ಕೊಂದು ಪೂರಕ ವಾಗಿದ್ದು ಕ್ರೀಡಾಕೂಟಗಳ ಆಯೋಜನೆಯಿಂದ ಜನಾಂಗಬಾಂಧವರ ಬಾಂಧವ್ಯ ವೃದ್ಧಿ ಆಗಲಿದೆ. ಬಾಳೆಯಡ ಕುಟುಂಬಸ್ಥರು ಆಯೋಜಿಸಿರುವ ಕೌಟುಂಬಿಕ ಕ್ರಿಕೆಟ್ ನಮ್ಮೆ ಇತರ ಕುಟುಂಬದವರಿಗೂ ಮಾದರಿ ಆಗಲಿ ಎಂದರು. ಮತ್ತೋರ್ವ ಮುಖ್ಯ ಅತಿಥಿ ಒಲಂಪಿಯನ್ ಬೊಳ್ಳಂಡ ಪ್ರಮೀಳಾ ಅಯ್ಯಪ್ಪ ಮಾತನಾಡಿ ಕುಟುಂಬದವರ ಪ್ರೋತ್ಸಾಹವಿದ್ದಲ್ಲಿ ಕ್ರೀಡೆಯಲ್ಲೂ ಉನ್ನತ ಸ್ಥಾನಕ್ಕೆ ಇರಲು ಸಾಧ್ಯ. ಇಂದು ಶಿಕ್ಷಣದೊಂದಿಗೆ ಕ್ರೀಡೆಗೂ  ಉತ್ತೇಜನ ನೀಡುವ ಅವಶ್ಯಕತೆ ಇದೆ. ಮಕ್ಕಳ ಭವಿಷ್ಯಕ್ಕಾಗಿ ಪೋಷಕರು…

Read More