ನಾಪೋಕ್ಲು ಏ.23 : ರಂಜಾನ್ ಹಬ್ಬದ ಪ್ರಯುಕ್ತ ಮೂರ್ನಾಡು ಪಟ್ಟಣದಲ್ಲಿ ಮೈಮ ಸಂಘಟನೆ ವತಿಯಿಂದ ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಲಾಯಿತು. ನಿರಂತರ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಸಂಘಟನೆಯ ಸೇವಾ ಕಾರ್ಯದ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು. ರಂಜಾನ್ ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯ ಹಂಚಿಕೊಂಡರು. ಈ ಸಂದರ್ಭ ಮೈಮಾ ಸಂಘಟನೆಯ ಅಧ್ಯಕ್ಷ ಖಾದರ್, ಕಾರ್ಯದರ್ಶಿ ನಿಚ್ಚು, ಉಪಾಧ್ಯಕ್ಷ ಮಮ್ಮದಾಲಿ, ಸುಬ್ಹಾನ್ ಸೇರಿದಂತೆ ಮತ್ತಿತರರು ಹಾಜರಿದ್ದರು. (ವರದಿ : ಝಕರಿಯ ನಾಪೋಕ್ಲು)
ಲೇಖಕ: admin
ಚಾಮರಾಜನಗರ ಏ.23 : ಭಾರೀ ಮಳೆ ಸುರಿಯುತ್ತಿದ್ದ ಸಂದರ್ಭ ಚಾಮರಾಜನಗರದ ಕುಂದಕೆರೆ ಗ್ರಾಮದ ಹೊರ ವಲಯದಲ್ಲಿ ಸಿಡಿಲು ಬಡಿದು 8 ಹಸುಗಳು, 2 ಕುರಿಗಳು ಮತ್ತು 1 ಮೇಕೆ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ರೈತ ಸಣ್ಣಮಲ್ಲಪ್ಪನ ರಾಜಪ್ಪ ಜಾನುವಾರು ಕಳೆದುಕೊಂಡವರಾಗಿದ್ದು, ಜಮೀನಿನಲ್ಲಿ ಈ ದುರಂತ ಸಂಭವಿಸಿದೆ. ಭಾರೀ ಮಳೆ ಸುರಿಯುತ್ತಿದ್ದಾಗ ಜಾನುವಾರುಗಳು ಆಲದ ಮರದ ಕೆಳಗೆ ಆಶ್ರಯ ಪಡೆದಿದ್ದವು. ಈ ಸಂದರ್ಭ ಸಿಡಿಲು ಬಡಿದು ನಾಡತಳಿಯ 8 ಹಸುಗಳು, 2 ಕುರಿಗಳು, 1 ಮೇಕೆ ಸಾವನ್ನಪ್ಪಿದೆ. ಘಟನೆ ವೇಳೆ ರಾಜಪ್ಪ ಮತ್ತೊಂದು ಬದಿಯಲ್ಲಿ ನಿಂತಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಇನ್ನೊಂದು ಪ್ರದೇಶದಲ್ಲಿ ಬಸವಣ್ಣ ಎಂಬುವರ ಹಸು ಸಿಡಿಲು ಬಡಿದು ಮೃತಪಟ್ಟಿದೆ.
ಮಡಿಕೇರಿ ಏ.23 : ಸಿದ್ದಾಪುರ ಹೈಸ್ಕೂಲ್ ಪೈಸಾರಿಯ ನಳಂದ ಎಸ್ಟೇಟ್ ನ ನಾರಾಯಣ ಎಂಬುವವರ ಮನೆಯೊಳಗೆ ಸೇರಿಕೊಂಡಿದ್ದ ನಾಗರಹಾವನ್ನು ಉರಗ ಪ್ರೇಮಿ ಗುಹ್ಯ ಗ್ರಾಮದ ಸುರೇಶ್ ರಕ್ಷಿಸಿದ್ದಾರೆ. ಸೆರೆ ಹಿಡಿದ ಹಾವನ್ನು ಸುರಕ್ಷಿತವಾಗಿ ಮಾಲ್ದಾರೆ ಅರಣ್ಯ ಬಿಟ್ಟಿದ್ದಾರೆ. ಹಾವುಗಳು ಕಂಡು ಬಂದಲ್ಲಿ ಅದನ್ನು ಕೊಲ್ಲದೆ ತಮಗೆ ಕರೆ ಮಾಡುವಂತೆ ಸುರೇಶ್ ಮನವಿ ಮಾಡಿದ್ದಾರೆ. (ಸುರೇಶ್ : 82771 31863)
ಮಡಿಕೇರಿ ಏ.23 : ಚುನಾವಣೆಯ ಹೆಸರಿನಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಮತಯಾಚಿಸುವುದನ್ನು ಕೊಡಗು ರಕ್ಷಣಾ ವೇದಿಕೆ ತೀವ್ರವಾಗಿ ವಿರೋಧಿಸುತ್ತದೆ ಮತ್ತು ಈ ರೀತಿಯ ರಾಜಕಾರಣ ಮಾಡುವ ಅಭ್ಯರ್ಥಿಗಳಿಗೆ ನಮ್ಮ ಬಂಬಲವಿಲ್ಲ ಎಂದು ಕೊರವೇ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ಸರ್ವ ಜನಾಂಗಗಳ ಶಾಂತಿಯ ತೋಟವಾಗಿದೆ. ಇಲ್ಲಿ ಎಲ್ಲಾ ಜಾತಿ, ಜನಾಂಗದವರು ಶಾಂತಿ ಸೌಹಾರ್ದತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಆದರೆ ವಿಧಾನಸಭಾ ಚುನಾವಣೆ ಘೋಷಣೆಯಾದ ನಂತರ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಅಭ್ಯರ್ಥಿಗಳು ಜಾತಿ, ಧರ್ಮ ಮತ್ತು ಜನಾಂಗದ ಆಧಾರದಲ್ಲಿ ಮತಯಾಚಿಸುತ್ತಿರುವುದು ಕಂಡು ಬಂದಿದೆ. ಅಲ್ಲದೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆಯಲ್ಲಿ ತೊಡಗಿರುವುದು ಗೋಚರಿಸಿದೆ. ಈ ರೀತಿಯ ಬೆಳವಣಿಗೆ ಕೊಡಗು ಜಿಲ್ಲೆಯ ಸಹೋದರತೆಗೆ ಮಾರಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಚುನಾವಣೆ ಎಂದರೆ ಒಬ್ಬ ಜನಪ್ರತಿನಿಧಿಯನ್ನು ಆಯ್ಕೆ ಮಾಡುವ ಪ್ರಜಾತಂತ್ರ ವ್ಯವಸ್ಥೆಯ ಪ್ರಕ್ರಿಯೆಯಷ್ಟೆ. ಪ್ರಜ್ಞಾವಂತರ ಜಿಲ್ಲೆ ಕೊಡಗಿನಲ್ಲಿ ಇದನ್ನು ಗೌರವಯುತವಾಗಿ ನಡೆಸಿಕೊಂಡು ಬರಲಾಗುತ್ತಿದೆ.…
ಮಡಿಕೇರಿ ಏ.23 : ಬಸವ ಜಯಂತಿ ಪ್ರಯುಕ್ತ ಕೊಡ್ಲಿಪೇಟೆ ಪಟ್ಟಣದ ಬಸವೇಶ್ವರ ದೇವಸ್ಥಾನಕ್ಕೆ ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ. ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿದರು. ನಂತರ ವೀರಭಧ್ರೆಶ್ವರ ದೇವಸ್ಥಾನದಲ್ಲಿ ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು. ಕಿರಿಕೊಡ್ಲಿ, ಕೇರಗನಹಳ್ಳಿ ವೆಟನರಿ ಆಸ್ಪತ್ರೆ ಹತ್ತಿರ, ಕಲ್ಲುಕೋರೆ, ದೊಡ್ಡಕೊಡ್ಲಿ, ಬೆಸೂರು, ಕಟ್ಟೆಪುರ, ಚಿಕ್ಕಭಂಡಾರ, ಚಿಕ್ಕಕುಂಧ, ಕೂಡಲೂರು, ದೊಡ್ಡಭಂಡಾರ, ನೀರುಗುಂದ, ಬ್ಯಾಡಗೊಟ್ಟ ಪೋಸ್ಟ್, ಬೆಂಬಳೂರು, ಊರುಗುತ್ತಿ, ಕ್ಯಾತೆ, ಕವಡಿಕೊಟ್ಟೆ ಮುಂತಾದ ಕಡೆ ಸಾರ್ವಜನಿಕರನ್ನುದ್ದೇಶಿಸಿ ಮಾತಾನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ಜಿ. ಮೇದಪ್ಪ, ಬಿಜೆಪಿ ಪ್ರಮುಖರಾದ ಅಭಿಮನ್ಯು ಕುಮಾರ್, ಭಾರತೀಶ್ ಮತ್ತಿತರರು ಅಪ್ಪಚ್ಚುರಂಜನ್ ಪರ ಮತಯಾಚಿಸಿದರು.
ಮಡಿಕೇರಿ ಏ.23 : ವಿಧಾನಸಭಾ ಚುನಾವಣೆಯ ನಂತರ ಕರ್ನಾಟಕ ರಾಜ್ಯ ಕೊಡಗು ಜಿಲ್ಲೆಯಂತೆ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಭವಿಷ್ಯ ನುಡಿದಿದ್ದಾರೆ. ಕೊಡ್ಲಿಪೇಟೆಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕೊಡಗು ಈಗಾಗಲೇ ಕಾಂಗ್ರೆಸ್ ಮುಕ್ತ ಜಿಲ್ಲೆಯಾಗಿದೆ. ಚುನಾವಣೆ ನಂತರ ಕರ್ನಾಟಕ ರಾಜ್ಯ ಕೂಡ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು. ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಸ್ಥಳೀಯ ಅಭ್ಯರ್ಥಿಗಳೇ ಸಿಕ್ಕಿಲ್ಲ, ಇಬ್ಬರೂ ಅಭ್ಯರ್ಥಿಗಳು ಹೊರಗಿನವರು, ಅವರಿಗೆ ಕ್ಷೇತ್ರಗಳ ಕನಿಷ್ಠ ಪರಿಚಯವೂ ಇಲ್ಲ ಎಂದು ಟೀಕಿಸಿದರು. ಎಲ್ಲೋ ಬೆಳೆದು, ಅದೆಲ್ಲೋ ಉದ್ಯೋಗ, ವ್ಯವಹಾರ ಮಾಡಿಕೊಂಡು ಇರುವವರು ಇದೀಗ ಕೊಡಗು ಜಿಲ್ಲೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಬಂದಿದ್ದಾರೆ. ಇಬ್ಬರೂ ‘ಟೂರಿಂಗ್ ಟಾಕೀಸ್’ ಇದ್ದ ಹಾಗೆ. ಸ್ಥಳೀಯ ಅಭ್ಯರ್ಥಿಗಳು ಸಿಗದಿರುವುದು ಕೊಡಗು ಕಾಂಗ್ರೆಸ್ ಮುಕ್ತವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ವ್ಯಂಗ್ಯವಾಡಿದರು. ತನ್ನ ಮತದಾರರನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೇರುವುದು ಕನಸಿನ ಮಾತು. ಬಿಜೆಪಿ…
ಮಡಿಕೇರಿ ಏ.23 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ “ಬಸವ ಜಯಂತಿ”ಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು. ಬಸವೇಶ್ವರರು ಎಲ್ಲಾ ಸಮಾಜದವರನ್ನೂ ಅನುಭವ ಮಂಟಪದ ಪ್ರಜಾಪ್ರಭುತ್ವದ ವೇದಿಕೆಗೆ ತಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಚರ್ಚಾ ವೇದಿಕೆಯಾಗಿ ಬೆಳೆಸಿದರು ಎಂದು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ ಅವರು ತಿಳಿಸಿದರು. ಇಡೀ ಶರಣ ಚಳುವಳಿಯ ಮಹಾಚೇತನರಾಗಿ ಬಸವೇಶ್ವರರು 12 ನೇ ಶತಮಾನದಲ್ಲಿ ಬೆಳಕು ಕಂಡಿದರು ಎಂದು ಬಸಪ್ಪ ಅವರು ನುಡಿದರು. ಬಸವಣ್ಣ ಎಂಬ ವ್ಯಕ್ತಿತ್ವದ ಮತ್ತು ಶರಣ ಚಳುವಳಿಯ ಮಹಾನಡೆಯ ಸಂಗಮತ್ವವನ್ನು ಸದಾ ಸ್ಮರಿಸಬೇಕಿದೆ. ಬಸವಣ್ಣ ಅವರು ಮಹಾ ಮಾನವತಾವಾದಿಯಾಗಿ ಕಟ್ಟಿ ಬೆಳೆಸಿದ ಚಳವಳಿ ಕನ್ನಡ ನೆಲದಲ್ಲಿ ಹುಟ್ಟಿ ಬೆಳೆದ ಶರಣ ಚಳವಳಿ…
ಮಡಿಕೇರಿ ಏ.23 : ಕೊಡಗು ಜಿಲ್ಲೆಯ ಹಿರಿಯ ಸಾಹಿತಿ ಗೌರಮ್ಮ ದತ್ತಿನಿದಿ ಪ್ರಶಸ್ತಿ ಪುರಸ್ಕೃತೆ ದಿನಮಣಿ ಹೇಮರಾಜ್ ಅವರಿಗೆ ಸಾಹಿತ್ಯ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಡಳಬಾಳು ಹಗರಿಬೊಮ್ಮನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಧಾರವಾಡದಲ್ಲಿ ಸ್ಥಳೀಯ ರಂಗಾಯಣ ಸಾಂಸ್ಕೃತಿಕ ಸಮುದಾಯ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಲಾಯಿತು. ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಿತು. ಕ್ರೀಡೆ , ಸಾಹಿತ್ಯ , ಆಶಾ ಕಾರ್ಯಕರ್ತೆ, ಕೃಷಿ ಮುಂತಾದ ಕ್ಷೇತ್ರಗಳ 101 ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ದಿನಮಣಿ ಹೇಮರಾಜ್ ಅವರ ಸಾಧನೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಭಿನಂದನೆ ಸಲ್ಲಿಸಿದೆ.
ಮಡಿಕೇರಿ ಏ.23 : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಪರವಾಗಿ ಅವರ ಪತ್ನಿ ದಿವ್ಯಾ ಮಂತರ್ಗೌಡ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದಲ್ಲಿ ಬಿರುಸಿನ ಮತಯಾಚನೆ ಮಾಡಿದರು. ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರ ನೀಡುವಂತೆ ಕೋರಿದರು.
ಪುಣೆ ಏ.23 : ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.






