ಮಡಿಕೇರಿ ಏ.23 : ಸಾಮಾಜಿಕ ಕ್ರಾಂತಿಯ ಜಗದ್ಗುರು ಬಸವೇಶ್ವರರ ಜಯಂತಿಯನ್ನು ಶ್ರೀ ಸಿದ್ಧಗಂಗಾ ಮಠದಲ್ಲಿ ಮಠಾಧೀಶ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪ್ರತಿಯೊಂದು ಜೀವಿಯ ಆತ್ಮೋದ್ಧಾರಕ್ಕೆ ಮಾರ್ಗ ತೋರಿದ ಗುರು ಬಸವಣ್ಣನವರು 12 ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ಮುಂದಾದ ಉದಾತ್ತ ತತ್ವಗಳನ್ನು ಭೋಧಿಸಿದ ಮಹಾನ್ ವ್ಯಕ್ತಿ. ಅಂದಿನ ಕಾಲಕ್ಕೆ ಒಂದು ದೇಶದ ಪ್ರಧಾನಿಯಾಗಿದ್ದುಕೊಂಡು ಪ್ರಜಾಪ್ರಭುತ್ವ, ಕಾಯಕಕ್ಕೆ ಪ್ರಧಾನ ಆಧ್ಯತೆಯನ್ನು ನೀಡಿ ಭಕ್ತಿ ಮಾರ್ಗವನ್ನು ಪ್ರತಿಪಾದಿಸಿದ ಅಪರೂಪದ ಗುರು ಎಂದರೂ ತಪ್ಪಾಗುವುದಿಲ್ಲ. ಬಸವಣ್ಣನವರು ಕೇವಲ ಸಾಮಾಜಿಕ ಕ್ರಾಂತಿಗೆ ಮಾತ್ರ ಸೀಮಿತಗೊಳಿಸದೇ ಭಕ್ತಿ ಮತ್ತು ರಾಜತಂತ್ರವನ್ನು ಜೊತೆ ಜೊತೆಗೇ ನಡೆಸಲು ಪ್ರೇರಕ ಶಕ್ತಿಯಾದ ಮಾರ್ಗದರ್ಶಕ, ಚೈತನ್ಯವೂ ಹೌದು. ಭಾರತೀಯ ಸನಾತನ ಧರ್ಮ ಹೇಳಿದ್ದ “ಭಗವಂತ ನಿನ್ನಲ್ಲೇ ಇದ್ದಾನೆ” ಎಂಬುದನ್ನು ಬಸವಣ್ಣನವರು ಶರೀರವೇ ದೇವಸ್ಥಾನ, ಶಿರವೇ ಹೊನ್ನ ಕಲಶ ಎಂದು ಸಾಮಾನ್ಯರಿಗೂ ವಚನಗಳ ಮೂಲಕ ಜಾಗೃತಿ ಮೂಡಿಸಿದ್ದರು. ::: ಉತ್ತರಾಧಿಕಾರಿ ::: ಶ್ರೀ ಸಿದ್ಧಗಂಗಾ ಮಠದಲ್ಲಿ ಬಸವ ಜಯಂತಿಯೊಂದಿಗೆ ಶ್ರೀ ಸಿದ್ಧಗಂಗಾ…
ಲೇಖಕ: admin
ವಿರಾಜಪೇಟೆ, ಏ 22: ಅಮ್ಮತ್ತಿ ಕಾರ್ಮಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಪಾಷಾಣಮೂರ್ತಿ ಕ್ಷೇತ್ರದಲ್ಲಿ ಶ್ರೀ ಚಾಮುಂಡೇಶ್ವರಿ ದೇವರ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಪ್ರಮುಖರಾದ ಕುಟ್ಟಂಡ ಸರಸ್ವತಿಯವರು ಪೂಜಾ ಕಾರ್ಯಗಳಿಗೆ ಚಾಲನೆ ನೀಡಿದರು. ಬಳಿಕ ಅಮ್ಮತ್ತಿಯ ಗುರೂಜಿ ಗುರುರಾಜ್ ಭಟ್ ರವರ ನೇತೃತ್ವದಲ್ಲಿ ದೇವಾಲಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಬೆಳಗ್ಗಿನ ಜಾವ ಕ್ಷೇತ್ರದಲ್ಲಿರುವ ದೈವ ದೇವರುಗಳಿಗೆ ವಾದ್ಯಗೋಷ್ಠಿಯೊಂದಿಗೆ ಅಭಿಷೇಕ ಹಾಗೂ ಅಲಂಕಾರ ಪೂಜೆ, ನಂತರ ಗಣಪತಿ ಹೋಮ, ಮೃತ್ಯುಂಜಯ ಹೋಮ, ಚಂಡಿಕಾ ಹೋಮ ನಡೆಯಿತು. ಇದಾದ ನಂತರ ಪ್ರಸಾದ ವಿತರಣೆ ಮಾಡಲಾಯಿತು. ಸಂಜೆ ಆಶ್ಲೇಷ ಬಲಿ, ನಾಗಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಮೃದ್ಧಿ ಎ.ವಿ ರವರಿಂದ ಭರತನಾಟ್ಯ ಹಾಗೂ ಗಾಯನ ಕಾರ್ಯಕ್ರಮ ಜರುಗಿತು. ರಾತ್ರಿ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮ್ಮತ್ತಿಯ ಪಾಲಿಪಾರ್ವತಿ ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಪಾಷಾಣಮೂರ್ತಿ ದೇವಾಲಯದ ಪ್ರಮುಖರಾದ ಕುಟ್ಟಂಡ ಸರಸ್ವತಿ ಲೋಕೇಶ್ ಮುತ್ತಪ್ಪ, ಹರ್ಷಿತಾ, ಹಾಗೂ ದೇವಾಲಯದ ಆಡಳಿತ…
ಶನಿವಾರಸಂತೆ ಏ.22 : ಮತಗಟ್ಟೆವಾರು ಹಾಗೂ ಸೆಕ್ಟರ್ ವಾರು 80 ವರ್ಷ ಮೇಲ್ಪಟ್ಟ ಮತ್ತು ವಿಶೇಷ ಚೇತನರಿಂದ ಮತದಾನ ಮಾಡಿಸುವ ಸಂಬಂಧ ಶನಿವಾರಸಂತೆ ಹೋಬಳಿಯ ಮನೆ ಮನೆಗೆ ಶನಿವಾರ ಸೆಕ್ಟರ್ ಅಧಿಕಾರಿಗಳು ಭೇಟಿ ನೀಡಿದರು. ಸೆಕ್ಟರ್ ಅಧಿಕಾರಿ ಯಾದವಬಾಬು, ಉಪತಹಶೀಲ್ದಾರ್ ಟಿ. ಸಿ. ನಾಗರಾಜು ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಮತದಾನದ ಕುರಿತು ಮಾಹಿತಿ ನೀಡಿದರು. (ವರದಿ : ದಿನೇಶ್ ಮಾಲಂಬಿ, ಶನಿವಾರಸಂತೆ)
ಮಡಿಕೇರಿ ಏ.22 : ಶಾದಿಭಾಗ್ಯ ಮತ್ತು ಟಿಪ್ಪು ಜಯಂತಿಯನ್ನು ಆಚರಿಸುವಂತೆ ಯಾರೂ ಕೇಳಿರಲಿಲ್ಲ, ಅವು ಹಿಂದಿನ ಕಾಂಗ್ರೆಸ್ ಸರ್ಕಾರದ ಒಡೆದು ಆಳುವ ನೀತಿಯ ತಂತ್ರಗಳಾಗಿದ್ದವು ಎಂದು ಮಡಿಕೇರಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ಶನಿವಾರಸಂತೆ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಮಾತನಾಡಿದ ಅವರು ಶಾದಿಭಾಗ್ಯ ಕೆಟ್ಟ ಯೋಜನೆ ಎಂದು ಹೇಳುತ್ತಿಲ್ಲ. ಆದರೆ ಅದರ ಅಗತ್ಯವೇ ಇರಲಿಲ್ಲ. ಯೋಜನೆಗೆ ಭಾರೀ ಪ್ರಚಾರ ಕೊಡಲಾಯಿತೇ ಹೊರತು, ಅದರ ಫಲ ಪಡೆದವರ ಸಂಖ್ಯೆ ತೀರಾ ಕಡಿಮೆ ಎಂದು ಅಪ್ಪಚ್ಚುರಂಜನ್ ಹೇಳಿದರು. ಶಾದಿ ಭಾಗ್ಯ ಯೋಜನೆಯನ್ನು ಅಲ್ಪಸಂಖ್ಯಾತ ಹೆಣ್ಣು ಮಕ್ಕಳಿಗೆ ಮಾತ್ರ ಸೀಮಿತಗೊಳಿಸಿ ಸಮುದಾಯಗಳ ನಡುವೆ ಕಂದಕ ಸೃಷ್ಟಿಸಿತೇ ಹೊರತು ಅದರಿಂದ ಆದ ಉಪಯೋಗ ಅಷ್ಟರಲ್ಲೇ ಇದೆ ಎಂದು ಟೀಕಿಸಿದರು. ಟಿಪ್ಪು ಜಯಂತಿ ಸೃಷ್ಟಿಸಿದ ಅನಾಹುತ ಎಲ್ಲರಿಗೂ ಗೊತ್ತೇ ಇದೆ, ಅದನ್ನು ವಿವರಿಸಿ ಹೇಳುವ ಅಗತ್ಯವಿಲ್ಲ ಎಂದ ಅಪ್ಪಚ್ಚು ರಂಜನ್, ಜನತಂತ್ರದಲ್ಲಿ ಜನರಿಗೆ ಬೇಡವಾದ ವಿಷಯಗಳನ್ನು ಹೇರಲಾಗುವುದಿಲ್ಲ ಎಂದರು. ಸಭೆಯಲ್ಲಿ ವಿಧಾನ ಪರಿಷತ್…
ಮಡಿಕೇರಿ ಏ.22 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಮಂಥರ್ ಗೌಡ ಪರ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ವಿವಿಧೆಡೆ ಚುನಾವಣಾ ಪ್ರಚಾರ ನಡೆಯಿತು. ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸದಾಮುದ್ದಪ್ಪ, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಎಸ್.ಸಿ.ಘಟಕದ ಅಧ್ಯಲ್ಷ ಮುದ್ದುರಾಜ್, ಟಿ.ಪಿ.ನಾಣಯ್ಯ, ಹಿಂದುಳಿದ ಘಟಕದ ಬ್ಲಾಕ್ ಅಧ್ಯಕ್ಷ ಜಿ.ಸಿ.ಜಗದೀಶ್, ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಿನೇಶ್, ಡಿಸಿಸಿ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ಟಿ.ಪಿ.ನಾಣಯ್ಯ, ನಗರಸಭೆ ಮಾಜಿ ಅಧ್ಯಕ್ಷೆ ಜುಲೆಕಾಬಿ, ಪ್ರಮುಖರಾದ ಪ್ರೇಮ ನಿಂಗಪ್ಪ, ಕವನ್ ಕೊತೋಳಿ, ಕಾರ್ಯಕರ್ತರಾದ ಜಿ.ಆರ್.ರಾಜು, ರೇಣುಕ, ಡೈಸಿ, ಮನೋಜ್, ಕರಣ್, ಪ್ರತಾಪ್, ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಶನಿವಾರಸಂತೆ ಏ.22 : ಶನಿವಾರಸಂತೆ ಹನಫಿ ಜಾಮಿಯಾ ಮಸಿದಿ ವತಿಯಿಂದ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಹಬ್ಬದ ಪ್ರಯುಕ್ತ ಪಟ್ಟಣದ ಹನಫಿ ಜಾಮಿಯಾ ಮಸಿದಿಯಿಂದ ಕೆಆರ್ಸಿ ವೃತ್ತದಲ್ಲಿರುವ ಇದ್ಗ ಮೈದಾನದ ವರೆಗೆ ಮುಸ್ಲಿಂ ಬಾಂಧವರು ಮೆರವಣಿಗೆಯಲ್ಲಿ ತೆರಳಿ ಮಸೀದಿಯಲ್ಲಿ ಸಾಮೂಹಿಕವಾಗಿ ಪ್ರಾರ್ಥಿಸಿದರು. ನಂತರ ಪರಸ್ಪರ ಆಲಿಂಗನ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ಪಟ್ಟಣದ ಮುಖ್ಯರಸ್ತೆಯಲ್ಲಿ ಎಲ್ಲರಿಗೂ ತಂಪು ಪಾನಿಯವಿತರಿಸಿದರು.
ಚೆಯ್ಯಂಡಾಣೆ ಏ 22 : ಮುಸ್ಲಿಂಮರ ಪವಿತ್ರ ಈದುಲ್ ಫಿತರ್ ಹಬ್ಬವನ್ನು ಎಡಪಾಲದ ಮುಸಲ್ಮಾನ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮೊಹಲ್ಲಾ ಖತೀಬ್ ನಿಝಾರ್ ಫೈಝಿ ಸಾಮೂಹಿಕ ಈದ್ ನಮಾಝ್ ಹಾಗೂ ದುಆಕ್ಕೆ ನೇತೃತ್ವ ವಹಿಸಿದರು. ನಂತರ ಅಂಡತ್ ಮಾನಿ ದರ್ಗಾಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ ಅಗಲಿದ ಹಿರಿಯರ ಸಮಾಧಿ ತಾಣದಲ್ಲಿ ಶಾಂತಿ ಕೋರಿ ಪ್ರಾರ್ಥನೆ ಮಾಡಿದರು. ಸಮೂದಾಯ ಭಾಂದವರು ಪರಸ್ಪರ ಆಲಿಂಗನ ಮಾಡುವುದರ ಮೂಲಕ ಹಬ್ಬದ ಶುಭಾಶಯ ಕೋರಿದರು. ವರದಿ : ಅಶ್ರಫ್
ಕುಶಾಲನಗರ ಏ.22 : ಮುಸಲ್ಮಾನರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದುಲ್ ಫಿತರ್ ಹಬ್ಬವನ್ನು ಕುಶಾಲನಗರದ ಹನಫಿ ಬಾಂಧವರು ಸಂಭ್ರಮದಿಂದ ಆಚರಿಸಿದರು. ಮೂವತ್ತು ದಿನಗಳ ವ್ರತಾಚರಣೆಯ ನಂತರ ದಾನದ ಹಬ್ಬವಾದ ಈದುಲ್ ಫಿತರ್ ಹಬ್ಬದ ಆಚರಣೆಗೆ ಮುಂದಾದ ಹನಫಿ ಬಾಂಧವರು, ಕುಶಾಲನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ತೆರಳಿ ಕುಶಾಲನಗರದ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ನೆರೆಯವನು ಹಸಿದಿರುವಾಗ ತಾನು ಹೊಟ್ಟೆ ತುಂಬಿಸಿಕೊಳ್ಳುವವನು ನನ್ನವನಲ್ಲ ಎಂದು ಹೇಳಿದ ಪ್ರವಾದಿ ಪೈಗಂಬರ್ ಮುಹಮ್ಮದ್ ಅವರ ಸಂದೇಶವನ್ನು ಸಾರಿದ ಜಾಮಿಯಾ ಮಸೀದಿ ಧರ್ಮಗುರುಗಳು, ಎಲ್ಲರೂ ಪರಸ್ಪರ ಸೌಹಾರ್ದತೆ ಹಾಗೂ ಸಹಬಾಳ್ವೆಯಿಂದ ಜೀವಿಸುವಂತೆ ಕರೆ ನೀಡಿದರು. ನಂತರ ಪರಸ್ಪರ ಈದುಲ್ ಫಿತರ್ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡು ಸಮಾಜಕ್ಕೆ ಸೌಹಾರ್ದತೆಯ ಸಂದೇಶವನ್ನು ಸಾರಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರದ ಜಾಮಿಯಾ ಮಸೀದಿ ಸದಸ್ಯರಾದ ಎಸ್.ಆದಂ, ದಾನದ ಹಬ್ಬವೆಂದೇ ಕರೆಯಲ್ಪಡುವ ಈದುಲ್ ಹಬ್ಬವನ್ನು ಕುಶಾಲನಗರದ ಈದ್ಗಾ ಮೈದಾನದಲ್ಲಿ ಆಚರಿಸಲಾಯಿತು. ವಿಶೇಷ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡಿದ್ದೇವೆ. ಎಲ್ಲರೂ…
ಸೋಮವಾರಪೇಟೆ ಏ.22 : ಸುಮಾರು 960 ವರ್ಷಗಳ ಇತಿಹಾಸವಿರುವ ಸುಗ್ಗಿಕಟ್ಟೆಯಲ್ಲಿ ಯಡೂರು ಗ್ರಾಮದ ವಾರ್ಷಿಕ ಶ್ರೀ ಸಬ್ಬಮ್ಮ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು. ಗ್ರಾಮೀಣ ಸಂಸ್ಕøತಿಯನ್ನು ಬಿಂಬಿಸುವ ಸಾಂಪ್ರದಾಯಿಕ ಪೂಜಾ ಕಾರ್ಯಗಳು ನಡೆದವು. ಶುಕ್ರವಾರ ರಾತ್ರಿ ಸುಗ್ಗಿಕಟ್ಟೆಯಲ್ಲಿ ದೇವಿಗೆ ಎಡೆ ಇಟ್ಟ ಗ್ರಾಮಸ್ಥರು ಊರಿನ ಸಮೃದ್ಧಿಗಾಗಿ ಸಾಮೂಹಿಕ ಪೂಜೆ ಸಲ್ಲಿಸಿದರು. ಉತ್ತಮ ಮಳೆಯಾಗಿ ಬರಗಾಲದ ಆತಂಕದಿಂದ ಕೃಷಿಕರನ್ನು ಮುಕ್ತಗೊಳಿಸುವಂತೆ ದೇವಿಯಲ್ಲಿ ಪ್ರಾರ್ಥಿಸಿದರು. ನಂತರ ಪಟಾಕಿ ಸಿಡಿಸುತ್ತ, ವಾದ್ಯಗೋಷ್ಠಿಯಲ್ಲಿ ಗ್ರಾಮಸ್ಥರು ಸುಗ್ಗಿಕಟ್ಟೆ ಪ್ರದಕ್ಷಿಣೆ ಹಾಕಿದರು. ಎಡೆಯ ಸಾಮೂಹಿಕ ಭೋಜನ ನೆರವೇರಿತು. ಶನಿವಾರ ಬೆಳಿಗ್ಗೆ ಗ್ರಾಮದ ದೇವರಬಾವಿಯಲ್ಲಿ ಬಸವಣ್ಣ ದೇವರ ಗಂಗಾಸ್ನಾನ ನಡೆಯಿತು. ನಂತರ ಬಸವಣ್ಣ ದೇವರನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಪ್ರತಿ ಮನೆಯವರು ಈಡುಗಾಯಿಯೊಂದಿಗೆ ಪೂಜೆ ಸಲ್ಲಿಸಿದರು. ಸುಗ್ಗಿಕಟ್ಟೆಯಲ್ಲಿ ಗ್ರಾಮಸ್ಥರ ಸಾಮೂಹಿಕ ಕುಣಿತದೊಂದಿಗೆ, ದೇವತಕ್ಕರ ಮೆರವಣಿ ನಡೆಯಿತು. ಈ ಸಂದರ್ಭ ವೈ.ಡಿ.ನಾಗೇಶ್, ಎ.ವಿ.ಕಾರ್ತಿಕ್, ಎ.ಟಿ.ನಾಗರಾಜು, ದಯಾನಂದ, ಜಯರಾಮ್, ಚಂದ್ರ, ಧನುಂಜಯ ದೇವರ ಒಡೆಕಾರರಾಗಿ…
ಮಡಿಕೇರಿ ಏ.22 : ನಗರದ ಮುನೀಶ್ವರ ಬಡಾವಣೆಯ ಮುನೀಶ್ವರ ದೇವಾಲಯ ಭಕ್ತ ಮಂಡಳಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಬಿ.ಡಿ.ಜಗದೀಶ್ ರೈ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಎಂ.ಕೆ.ಕಾವೇರಪ್ಪ, ಕಾರ್ಯದರ್ಶಿಯಾಗಿ ಕೆ.ಆರ್.ಪ್ರಸಾದ್, ಸಹ ಕಾರ್ಯದರ್ಶಿಯಾಗಿ ಚಂದ್ರ, ಗೌರವಾಧ್ಯಕ್ಷರಾಗಿ ಆನಂದ, ಸಲಹೆಗಾರರಾಗಿ ಪಿ.ಟಿ. ಉಣ್ಣಿಕೃಷ್ಣ ಅವರನ್ನು ಆಯ್ಕೆ ಮಾಡಲಾಯಿತು. ಜಗದೀಶ್ ರೈ ಅವರಿಗೆ ನಿರ್ಗಮಿತ ಅಧ್ಯಕ್ಷ ಪಿ.ಟಿ. ಉಣ್ಣಿಕೃಷ್ಣ ಅಧಿಕಾರ ಹಸ್ತಾಂತರಿಸಿದರು.






