ಲೇಖಕ: admin

ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ರಾತ್ರಿ ವೇಳೆ ಅಂಗಡಿ ಮುಂಗಟ್ಟುಗಳು, ವ್ಯಾಪಾರ ಮಳಿಗೆಗಳನ್ನು ಶೀಘ್ರವಾಗಿ ಮುಚ್ಚುವುದರಿಂದ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ, ವರ್ತಕರುಗಳ ಹಿತದೃಷ್ಟಿಯಿಂದ ಕಾಲಾವಧಿಯನ್ನು ವಿಸ್ತರಿಸಿಕೊಡಬೇಕೆಂದು ವಿರಾಜಪೇಟೆ ನಗರ ವರ್ತಕರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಅವರ ನೇತೃತ್ವದಲ್ಲಿ ವಿರಾಜಪೇಟೆಯ ಡಿವೈಎಸ್‍ಪಿ ಮಹೇಶ್ ಕುಮಾರ್ ಹಾಗೂ ನಗರ ಠಾಣಾಧಿಕಾರಿ ಹೆಚ್.ಎಸ್. ಪ್ರಮೋದ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಪಿ.ಎ..ಮಂಜುನಾಥ್ ಅವರು, ರಾತ್ರಿ ವೇಳೆ ಸಾಮಾನು ಸಗಟುಗಳನ್ನು ಲಾರಿ ಅಥವಾ ಇನ್ನಿತರ ವಾಹನಗಳಲ್ಲಿ ತಂದು ಇಳಿಸಿ ಅದರ ನಿರ್ವಹಣೆ ಮಾಡುವ ಸಂದರ್ಭ ಕಾಲಾವಕಾಶ ಹೆಚ್ಚು ಬೇಕಾಗುತ್ತದೆ. ಅಲ್ಲದೆ ದೋರದಿಂದ ಬಂದವರಿಗೆ ಎನಾದರೂ ವಸ್ತುಗಳನ್ನು ತೆಗೆದುಕೊಳ್ಳಬೇಕೆಂದರೂ ಅಂಗಡಿಗಳು ಇರುವುದಿಲ್ಲ. ಅಲ್ಲದೆ ಕನಿಷ್ಟ ಕಾಫಿಯಾದರೂ ಕುಡಿಬೇಕೆಂದರೆ ಅದಕ್ಕೂ ಇಲ್ಲಿ ಅವಕಾಶ ಇಲ್ಲ. ಎಲ್ಲವೂ ಮುಚ್ಚಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಸಮಸ್ಯೆ, ವ್ಯಾಪಾರಸ್ಥರಿಗೂ ನಷ್ಟವಾಗುತ್ತದೆ ಎಂದರು. ಈ ಸಮಸ್ಯೆ ಕುರಿತು ವರ್ತಕರ ನಿರಂತರ…

Read More

ವಿರಾಜಪೇಟೆ ಡಿ.9 NEWS DESK : ಕಾನೂರು ವಲಯದ ಕೋತೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಕಾರ್ಯಕ್ರಮದಡಿಯಲ್ಲಿ ಹೈನುಗಾರಿಕೆ ಮಾಹಿತಿ ಕಾರ್ಯಕ್ರಮವು ಸಮಗ್ರ ಕೃಷಿಕರಾದ ಕೃಷ್ಣ ಅವರ ಮನೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪಶು ವೈದ್ಯಧಿಕಾರಿಗಳಾದ ಡಾ.ಚಂದ್ರಶೇಖರ್ ಉದ್ಘಾಟಿಸಿ, ಮಾತನಾಡಿ ಹೈನುಗಾರಿಕೆಯು ಲಾಭದಾಯಕವಾಗಿದ್ದು, ಹಟ್ಟಿ ರಚನೆ ವಿಧಾನಗಳು, ಹಸುಗಳ ಆಯ್ಕೆ, ಕರುಗಳ ಪಾಲನೆ ಹಸುಗಳಿಗೆ ಸಂಪೂರ್ಣ ಆಹಾರ ನೀಡುವ ಬಗ್ಗೆ, ಹಸುಗಳಿಗೆ ಬರುವ ಸಾಂಕ್ರಾಮಿಕ ಕಾಯಿಲೆಗಳು ಮತ್ತು ಸಿಗುವ ಲಸಿಕೆ ಗಳ ಬಗ್ಗೆ ಮತ್ತು ಪಶು ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು. ಹೈನುಗಾರಿಕೆಯು ಸ್ವಯಂ ಉದ್ಯೋಗಕ್ಕೆ ಒಂದು ಉತ್ತಮ ಅವಕಾಶವಾಗಿದ್ದು, ಇದರಿಂದ ಜನರು ತಮ್ಮದೇ ಆದ ಉದ್ಯೋಗವನ್ನು ಸೃಷ್ಟಿಸಿಕೊಳ್ಳಬಹುದು ಎಂದು ಹೇಳಿದರು. ಕೃಷಿ ಮೇಲ್ವಿಚಾರಕರಾದ ವಸಂತ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಹೈನುಗಾರಿಕೆಗೆ ಸಿಗುವ ತರಬೇತಿ, ಪ್ರಗತಿ ನಿಧಿ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾನೂರು ಪಶು ಸಖಿಯಾದ ಮೋನಿಕಾ, ಸೇವಾಪ್ರತಿನಿಧಿಗಳು, ಕಾವೇರಿ…

Read More

ಕುಶಾಲನಗರ, ಡಿ.9 NEWS DESK : ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಾಲ್ಲೂಕುಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ , ಶಿಕ್ಷಕರು ನಿರಂತರ ವಿದ್ಯಾರ್ಥಿ ಇದ್ದಂತೆ, ತಮ್ಮ ಬೋಧನಾ ಸಾಮರ್ಥ್ಯವನ್ನು ಉತ್ತಮಪಡಿಸಿಕೊಳ್ಳಲು‌ ನಿರಂತರ ಅಧ್ಯಯನದಲ್ಲಿ ತೊಡಗಬೇಕು. ಕಲಿಕೆಯೇ ಬಂಡವಾಳ. ಇದರಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳುವುದರಿಂದ ಹೆಚ್ಚು ಕ್ರಿಯಾಶೀಲತೆ ಬೆಳೆಯುತ್ತದೆ. ಇದಕ್ಕೆ ಸಹ-ಪಠ್ಯ ಚಟುವಟಿಕೆ ಸ್ಪರ್ಧೆಗಳೂ ಸಹಾಯಕವಾಗಿದ್ದು, ಇವುಗಳಲ್ಲಿ ಶಿಕ್ಷಕರು ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಜ್ಞಾನವೂ ವೃದ್ಧಿಸಲಿದ್ದು, ಪಾಠ ಭೋದನೆಗೂ ಸಹಕಾರಿಯಾಗುತ್ತದೆ ಎಂದರು. ಸಹಪಠ್ಯ ಚಟುವಟಿಕೆಗಳು ಶಾಲಾ ಶಿಕ್ಷಣದ ಪ್ರಮುಖ ಭಾಗವಾಗಿದ್ದು, ಅವು ಶೈಕ್ಷಣಿಕ ಪಠ್ಯಕ್ರಮಕ್ಕೆ ಪೂರಕವಾಗಿವೆ. ವಿದ್ಯಾರ್ಥಿಗಳ ಪ್ರತಿಭೆ ಮತ್ತು ಕೌಶಲ್ಯಗಳನ್ನು ಉದ್ದೀಪನಗೊಳಿಸುವ ದಿಸೆಯಲ್ಲಿ ಶಿಕ್ಷಕರಿಗೂ ಇಂತಹ ವೇದಿಕೆಯನ್ನು ಒದಗಿಸುವ ಮೂಲಕ ಅವರ ಪ್ರತಿಭೆಯನ್ನು ಅನಾವರಣಗೊಳಿಸಲು/ಪ್ರದರ್ಶಿಸಲು…

Read More

ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ.

Read More

ವಿರಾಜಪೇಟೆ ಡಿ.9 NEWS DESK : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವಿರಾಜಪೇಟೆ ಘಟಕ ಹಾಗೂ ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಸಹಯೋಗದೊಂದಿಗೆ ನಡೆದ ಕ್ರಿಸ್ಮಸ್ ಗಾನ ತರಂಗ- 2025 ಗಾಯನ ಸ್ಪರ್ಧೆಯು ನಡೆಯಿತು. ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯ ಸಭಾಂಗಣದಲ್ಲಿ ನಡೆದ ಕ್ರಿಸ್‍ಮಸ್ ಋತುವಿನ ಸಂತೋಷ ಮತ್ತು ಸದ್ಭಾವನೆಯನ್ನು ಆಚರಿಸಲು, ಕ್ಯಾರೋಲ್‍ಗಳ ಮೂಲಕ ಪ್ರೀತಿ, ಶಾಂತಿ ಮತ್ತು ಏಕತೆಯ ಸಂದೇಶಗಳನ್ನು ಹರಡಲು ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳಾದ ಫಾ. ಜೇಮ್ಸ್ ಡೊಮೇನಿಕ್ ಧ್ವಜಾರೋಹಣ ನೆರವೇರಿಸಿ, ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ರೆ.ಫಾ. ಎಸ್.ಜೆ.ಪ್ರಾನ್ಸಿಸ್ ಸೆರಾವೋ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿ, ಡಿಸೆಂಬರ್ ಬಂತೆಂದರೆ ಸಾಕು ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹುರುಪು ಎಲ್ಲರಲ್ಲೂ ಮನೆಮಾಡಿರುತ್ತದೆ. ಕ್ರಿಶ್ಚಿಯನ್ ಬಾಂಧವರು ಒಗ್ಗೂಡಿ ಆಚರಿಸುವ ಕ್ರಿಸ್ಮಸ್ ವಿಶ್ವಕ್ಕೆ ಸಮಾನತೆ ಹಾಗೂ ಸಾರ್ಥಕತೆಯ ಪಾಠವನ್ನು ಮಾಡುತ್ತದೆ. ಕ್ರಿಸ್ಮಸ್ ಶಾಂತಿ ಸಮಾಧಾನವನ್ನು ಸಾರುವ ಹಬ್ಬವಾಗಿದ್ದು ಜಗತ್ತಿಗೆ…

Read More

ಸೋಮವಾರಪೇಟೆ ಡಿ.9 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಸಂಭ್ರಮದ ದೀಪೋತ್ಸವ ಹಾಗೂ ಶ್ರದ್ಧಾ ಭಕ್ತಿಯಿಂದ ಶ್ರೀ ಗುರುಸಿದ್ಧವೀರೇಶ್ವರರ ಉತ್ಸವ ನಡೆಯಿತು. ಅಕ್ಕಪಕ್ಕದ ಗ್ರಾಮಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಭಕ್ತಾದಿಗಳು ದೀಪೋತ್ಸವವನ್ನು ಕಣ್ತುಂಬಿಕೊಂಡರು. ಮುಂಜಾನೆಯಿಂದಲೇ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ಅರ್ಚನೆ ನಡೆಯಿತು. ಮಹಿಳೆಯರಾದಿಯಾಗಿ ಹಲವು ಭಕ್ತರು ಮಠದ ಆವರಣವನ್ನು ತಳಿರು ತೋರಣಗಳಿಂದ ಹಾಗೂ ವೈವಿಧ್ಯಮಯ ರಂಗೋಲಿ ಬಿಡಿಸಿ ಅಲಂಕರಿಸಿದ್ದರು. ಕ್ಷೇತ್ರದ ತುಂಬೆಲ್ಲಾ ಹಣತೆಗಳು ಪ್ರಜ್ವಲಿಸುತ್ತಿದ್ದವು. ಸಂಜೆ ನಡೆದ ಧಾರ್ಮಿಕ ಸಮಾರಂಭಲ್ಲಿ ಶಿಕ್ಣಣ ತಜ್ಞ ದಾವಣಗೆರೆಯ ಸಾಗರ್ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಮಕ್ಕಳು ಅನ್ಯ ಮಾರ್ಗ ಹಿಡಿದಿರುವುದು ಆತಂಕಕಾರಿ ವಿಚಾರವಾಗಿದೆ ಎಂದರು. ಆನ್ ಲೈನ್ ಗೇಮ್ ಗಳಿಗೆ‌ಬಲಿಯಾಗುತ್ತಿದ್ದಾರೆ ಎಂತಹ ಪರಿಸ್ಥಿತಿ ಬಂದಿದೆ ಎಂದರು. ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ ಇಂದು ಇರುವುದು ಕೇವಲ ಪದವಿಗಾಗಿ ಮಾತ್ರ ಆದರೆ ನೈತಿಕ ಶಿಕ್ಷಣ ಅವಶ್ಯಕತೆ ಇದೆ ಎಂದ ಅವರು ಬಸವಣ್ಣ ನವರ ಅನುಭವ ಮಂಟಪದ ರೀತಿಯ…

Read More

ಮಡಿಕೇರಿ ಡಿ.9 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿ.10 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

:: NEWS DESK :: ಚಳಿಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಿನವರ ದೇಹದ ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಇದಕ್ಕೆ ಪ್ರಮುಖ ಕಾರಣ ಈ ಸಮಯದಲ್ಲಿ ನಾವೆಲ್ಲಾ ಅನುಸರಿಸು ತ್ತಿರುವ ಜೀವನಶೈಲಿ ಆಹಾರಪದ್ಧತಿಯೇ ಪ್ರಮುಖ ಕಾರಣ ಎಂದು ಹೇಳಬಹುದು. ಪ್ರಮುಖವಾಗಿ ಚಳಿಗೆ ವ್ಯಾಯಾಮ ಮಾಡಲು ಅಥವಾ ಹೊರಗಡೆ ವಾಕಿಂಗ್ ಮಾಡಲು ಮನಸ್ಸು ಒಪ್ಪುವುದಿಲ್ಲ.ಯಾವುದೇ ರೀತಿಯ ದೈಹಿಕ ಚಟುವಟಿಕೆ ಇರುವುದಿಲ್ಲ ಅಲ್ಲದೇ ಈ ಸಮಯದಲ್ಲಿ ಹೆಚ್ಚಾಗಿ ಎಣ್ಣೆಯಲ್ಲಿ ಕರಿದ ತಿನಿಸುಗಳು, ಸಿಹಿ ತಿಂಡಿಗಳು, ಜಂಕ್ ಫುಡ್, ಕುರುಕುಲು ತಿಂಡಿಗಳನ್ನು ಸೇವಿಸಲು ಮನಸ್ಸು ಹಾತೊರೆಯುತ್ತವೆ ಕೊನೆಗೆ ಇದೇ ಕಾರಣಕ್ಕೆ ದೇಹದ ತೂಕ ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ದೇಹದ ತೂಕ ಇಳಿಸಿಕೊಳ್ಳುವ ವಿಧಾನ… ಹೊರಗಡೆ ನಿಲ್ಲಿ :: ಚಳಿಗಾಲದಲ್ಲಿ, ಬೆಳಗ್ಗೆ 10 ರಿಂದ 15 ನಿಮಿಷಗಳ ಕಾಲ ಸೂರ್ಯನ ಬೆಳಕಿನಲ್ಲಿ ಕಳೆಯುವುದರಿಂದ ವಿಟಮಿನ್ ಡಿ ದೊರೆಯುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಕ್ಯಾಲೋರಿ ಸೇವನೆಯನ್ನು ನಿಯಂತ್ರಿ ಸುತ್ತದೆ ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.…

Read More

ಬೆಳಗಾವಿ ಡಿ.9 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಇಂದು ಬೆಳಗಾವಿಯ ಸುವರ್ಣಸೌಧದ ಮುಂಭಾಗ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ, ಶುಭ ಹಾರೈಸಿದರು.

Read More

ಮಡಿಕೇರಿ ಡಿ.9 NEWS DESK : ಕೂಡಿಗೆ ಡಯಟ್ ವತಿಯಿಂದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ತರುಣ್ ಎನ್.ಎಂ ವೈಯಕ್ತಿಕ ವಿಭಾಗದಲ್ಲಿ ವಿಜ್ಞಾನ ಮಾದರಿ ಪ್ರದರ್ಶಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ವಿಜ್ಞಾನ ವಿಭಾಗದ ಶಿಕ್ಷಕರಾದ ಸುದೇಶ್ ಬಿ.ಎಸ್ ಅವರು ಮಾರ್ಗದರ್ಶನವನ್ನು ನೀಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲೆ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿ, ಶುಭ ಹಾರೈಸಿದರು.

Read More