ಲೇಖಕ: admin

ಮಡಿಕೇರಿ ಏ.19 : ವಿಧಾನಸಭಾ ಚುನಾವಣಾ ಹಿನ್ನೆಲೆ ಭಾರತ ಚುನಾವಣಾ ಆಯೋಗವು ಕೊಡಗು ಜಿಲ್ಲೆಯ 208-ಮಡಿಕೇರಿ ವಿಧಾನಸಭಾ ಕ್ಷೇತ್ರ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ಸಾಮಾನ್ಯ ವೀಕ್ಷಕರಾಗಿ ವಿಕ್ರಮ್ ಸಿಂಗ್ ಮಲಿಕ್ ಭಾ.ಆ.ಸೇ. ಅವರನ್ನು ನಿಯೋಜಿಸಿದ್ದು, ಏ.18 ರಂದು ಕೊಡಗು ಜಿಲ್ಲೆಯಲ್ಲಿ ವರದಿ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಭೇಟಿ ಮಾಡಿ ಚುನಾವಣೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು. ವಿಧಾನಸಭಾ ಚುನಾವಣಾ ಸಂಬಂಧ ಹೆಚ್ಚಿನ ಮಾಹಿತಿಗೆ ಜಿಲ್ಲಾಡಳಿತ ಭವನದ ಮೊದಲ ಮಹಡಿಯ ಕೊಠಡಿ ಸಂಖ್ಯೆ 3 ರಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆ ವರೆಗೆ ನೇರವಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 6360041101 ಅಥವಾ ಸಾಮಾನ್ಯ ವೀಕ್ಷಕರ ಸಂಪರ್ಕ ಅಧಿಕಾರಿ ಡಾ.ಜೆ.ಆರ್.ಬಾಲಸುಬ್ರಮಣ್ಯಂ 9632953019 ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಸಿದ್ಧಾಪುರ ಏ.19 :  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚುಮತಗಳಿಂದ  ಗೆಲವು ಸಾಧಿಸಲಿ ಎಂದು  ಸಿದ್ಧಾಪುರ ಬಿಜೆಪಿಯ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ  ಪ್ರವೀಣ್  ಅವರ ನೇತೃತ್ವದಲ್ಲಿ ಕೇರಳದ ಮಾಮಾನಿಕ್ಕುನ್ನು ದೇವಿ ಕ್ಷೇತ್ರ ಹಾಗೂ ಪರಶ್ಶಿನಿಕಡವು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭ  ಹಿಂದೂ ಮುಖಂಡರಾದ ರದೀಶ್, ಬಿಜೆಪಿ ಯುವಮೋರ್ಚಾ ವಿರಾಜಪೇಟೆ ತಾಲ್ಲೂಕು ಉಪಾಧ್ಯಕ್ಷ ವಿಜೇಶ್, ಯುವ ಮೋರ್ಚಾ ನಗರ ಅಧ್ಯಕ್ಷ ಯತೀಶ್ ರೈ, ಪವನ್, ಮೊದಲಾದವರು ಹಾಜರಿದ್ದರು.

Read More

ನಾಪೋಕ್ಲು ಏ.19 : ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಪೆಬ್ಬಟ್ಟಿರ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಅಯ್ಯಂಗೇರಿ ಗ್ರಾ.ಪಂ  ವ್ಯಾಪ್ತಿಯ ದೊಡ್ಡ ಪುಲಿಕೋಟು ಗ್ರಾಮದ ಪೆಬ್ಬಟ್ಟಿರ ಕುಟುಂಬಸ್ಥರನ್ನು ಸರ್ಕಾರದ ವಿವಿಧ ಕಾಮಗಾರಿಗಳಿಂದ ವಂಚಿಸಲಾಗಿದೆ ಎಂದು ಆರೋಪಿಸಿದರು. ಕುಟುಂಬದಲ್ಲಿ 70 ಮತದಾರರಿದ್ದು,  ಈ ಬಾರಿ ನಾವು ಮತದಾನ ಮಾಡುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಕುಟುಂಬಸ್ಥರು, ಚುನಾವಣೆ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ. ವರದಿ : ಸಾಜಿದ್ ಪಯ್ಯಡಿ 

Read More

ಸುಂಟಿಕೊಪ್ಪ ಏ.19: ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 45ನೇ ವಾರ್ಷಿಕ ಮಹೋತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಏ.17 ರಂದು ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊಂಡಿತು. ದೀಪರಾಧನೆ ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ನೆರವೇರಿತು. ನಂತರ ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆಯೊಂದಿಗೆ ಭಕ್ತರ ಹರಕೆ ಮತ್ತು ಬೇಡಿಕೆಗಳು ನಡೆದವು ರಾತ್ರಿ ವಿವಿಧ ದೈವಗಳ ಕೋಲ ಜರುಗಿದವು. ಮರುದಿನ ಅಜ್ಜಪ್ಪ ಕೋಲ, ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲಗಳು ನೆರವೇರಿದ್ದು, ಶ್ರೀದೇವಿ ನೈವೇದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವವು ಸಂಪನ್ನಗೊಂಡಿತು. ಜಾತ್ರಾಮೋಹತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಾಂಲಕಾರಗಳಿಂದ ಸಿಂಗಾರಿಸಲಾಗಿತ್ತು. ಸುತ್ತ ಮುತ್ತಲ್ಲ ಗ್ರಾಮಗಳ ಭಕ್ತರು ಮೂರು ದಿನಗಳ ಕಾಲ ನಡೆದ ವಾರ್ಷಿಕ ಮಹೋತ್ಸವದಲ್ಲಿ ಭಾಗಿಯಾಗಿದ್ದರು.

Read More

ಮಡಿಕೇರಿ ಏ.19 : ಭಾರತೀಯ ವಾಯುಪಡೆಯಲ್ಲಿ ಕರ್ತವ್ಯದಲ್ಲಿರುವ ಜಿಲ್ಲೆಯವರಾದ ಯುವ ಅಧಿಕಾರಿ ವಿಂಗ್ ಕಮಾಂಡರ್ ಮಂದಪಂಡ ತಿಮ್ಮಯ್ಯ ಅವರಿಗೆ ವೆಲ್ಲಿಂಗ್ಟನ್ ಸ್ಟಾಫ್ ಕಾಲೇಜಿನಲ್ಲಿ ತೋರಿರುವ ಸಾಧನೆಗಾಗಿ ಜನರಲ್ ತಿಮ್ಮಯ್ಯ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸ್ಟಾಫ್ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ತೋರುವ ಅಧಿಕಾರಿಗಳಿಗೆ ಪ್ರಥಮ ಸ್ಥಾನಕ್ಕೆ ಫೀ.ಮಾ.ಮಾಣಿಕ್ ಷಾ ಪ್ರಶಸ್ತಿ ಹಾಗೂ ಎರಡನೆಯ ಸ್ಥಾನಕ್ಕೆ ಜರರಲ್ ತಿಮ್ಮಯ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೀಗ ತಿಮ್ಮಯ್ಯ ಅವರು ತಮ್ಮ ಸಾಧನೆಗಾಗಿ (ಬೆಸ್ಟ್ ಆಲ್‍ರೌಂಡ್ ಸಾಧನೆ) ಎರಡನೇ ಸ್ಥಾನ ಪಡೆಯುವುದರೊಂದಿಗೆ ಇವರಿಗೆ ಜನರಲ್ ತಿಮ್ಮಯ್ಯ ಪ್ರಶಸ್ತಿ ನೀಡಲಾಗಿದೆ. ಈ ಹಿಂದೆ ಸ್ಕ್ವಾಡ್ರನ್ ಲೀಡರ್ ಆಗಿದ್ದ ತಿಮ್ಮಯ್ಯ ವಿಂಗ್ ಕಮಾಂಡರ್ ಆಗಿ ಬಡ್ತಿಯನ್ನು ಪಡೆದಿದ್ದಾರೆ. ಇವರು ಬೇಂಗೂರಿನವರಾದ ಮಂದಪಂಡ ಚಂಗಪ್ಪ (ಸದ) ಹಾಗೂ ಗೌರಮ್ಮ (ರಜನಿ-ತಾಮನೆ : ಇಟ್ಟಿರ) ದಂಪತಿ ಪುತ್ರ.

Read More

ಸಿದ್ದಾಪುರ ಏ.19 : ಕೋಟ್ಯಂತರ ಜನ-ಜಾನುವಾರುಗಳ ದಾಹ ನೀಗಿಸುವ ಕಾವೇರಿ ನದಿ ತವರಿನಲ್ಲೇ ಮಲಿನವಾಗುತ್ತಿದ್ದು, ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದ್ದರೂ ಎಚ್ಚೆತ್ತುಕೊಳ್ಳದ ಆಡಳಿತ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಜ್ಞಾವಂತ ನಾಗರಿಕರ ಪ್ರವೃತ್ತಿಯಿಂದ ಒಡಲು ಮಲಿನಗೊಳ್ಳುತ್ತಿದ್ದು, ಕೋಟ್ಯಂತರ ಜಲಚರಗಳು ಹಾಗೂ ಸಾರ್ವಜನಿಕರು ಈ ಕೊಳಕು ನೀರನ್ನು ಕುಡಿದು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕರಡಿಗೋಡು  ಗ್ರಾಮದಲ್ಲಿ ಮದ್ಯ ಸೇವಿಸಿ ಬಾಟಲಿ ಹಾಗೂ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ನದಿಗೆ ಎಸೆದು ಇಡೀ ವಾತಾವರಣವನ್ನೆ ಕಲುಷಿಗೊಳಿಸುತ್ತಿದ್ದಾರೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಸ್ವಚ್ಚತಾಕಾರ್ಯ ನಡೆಸಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದರ ಪರಿಣಾಮ ಗ್ರಾ.ಪಂ ಶುಚಿತ್ವ ಕಾಪಾಡಲು ಸೂಚಿಸಿದರೂ ನದಿ ಸಂರಕ್ಷಣೆಗೆ ಕಾಳಜಿ ವಹಿಸುವಲ್ಲಿ ವಿಫಲವಾಗಿರುವ ಆಡಳಿತ ಮಂಡಳಿ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕರಡಿಗೋಡು ಗ್ರಾಮದಲ್ಲಿ ರೆಸಾರ್ಟ್ ಸೇರಿದಂತೆ ಹೋಂಸ್ಟೇಗಳು ಪ್ರವಾಸಿಗರಿಗೆ ಆಶ್ರಯ ಕಲ್ಪಿಸುತ್ತಿವೆ. ಇಲ್ಲಿಗೆ ಬರುವ ಪ್ರವಾಸಿಗರು ವಾಯು ವಿವಾಹರಕ್ಕೆ ಬಂದು ನದಿ ತೀರದಲ್ಲಿ…

Read More

ನಾಪೋಕ್ಲು ಏ.19 : ಪಾಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೋತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಗಣ ಹೋಮ ಮತ್ತು ಕೊಡಿಮರ ಏರಿಸುವುದು, ಉತ್ಸವಬಲಿ ನಡೆಯಿತು. ಅಲ್ಲದೆ ಭಾನುವಾರ ಉತ್ಸವ ಬಲಿ ಮತ್ತು ದೀಪಾರಾಧನೆ ಜರಗಿತು. ಹಗಲು ನೃತ್ಯಬಲಿ ನಡೆದು ಸಂಜೆ ದೀಪಾರಾಧನೆ, ಪಟ್ಟಣಿಹಬ್ಬ ನೆರವೇರಿತು. ಬೆಳಗ್ಗೆ ತುಲಾಭಾರ, ಮಧ್ಯಾಹ್ನ ಎತ್ತು ಪೋರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಾಪೂಜೆ ತೀರ್ಥ ಪ್ರಸಾದ ವಿತರಣೆ ಜರಗಿತು. ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. ಅಪರಾಹ್ನ ನಡೆದ ಜೋಡಿ ದೇವರ ನೃತ್ಯೋತ್ಸವವನ್ನು ಭಕ್ತರು ಶ್ರದ್ದಾಭಕ್ತಿಯಿಂದ ಕಣ್ತುಂಬಿಕೊಂಡರು. ಜಾತ್ರಾ ಮಹೋತ್ಸವದ ಪೂಜಾ ವಿಧಿ ವಿಧಾನಗಳನ್ನು ದೇವಾಲಯದ ಮುಖ್ಯ ಅರ್ಚಕ ದೇವಿ ಪ್ರಸಾದ್, ತಂತ್ರಿಗಳಾದ ಕೃಷ್ಣ ನೂರಿತಾಯ, ದಿವಾಕರ, ಕೃಷ್ಣಪ್ರಸಾದ್ ,ಸತ್ಯಮೂರ್ತಿ ನೆರವೇರಿಸಿದರು. ಈ ಸಂದರ್ಭ ಬಂಡಾರ ತಕ್ಕರಾದ ಎಡಿಕೇರಿ ಪ್ರವೀಣ್, ನಾಡುತಕ್ಕರಾದ ಚೌರಿರ ಚೋಮಣಿ…

Read More

ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರು ಇಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರ ಬೃಹತ್ ಮೆರವಣಿಗೆ ಬಳಿಕ, ವಿರಾಜಪೇಟೆ ತಾಲ್ಲೂಕು ಕಚೇರಿಗೆ ಆಗಮಿಸಿದ ಎ.ಎಸ್.ಪೊನ್ನಣ್ಣ ಅವರು, ಚುನಾವಣಾಧಿಕಾರಿ ಶಬಾನಾ ಎಂ.ಶೇಖ್ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭ ಪೊನ್ನಣ್ಣ ಅವರ ಪತ್ನಿ ಪತ್ನಿ ಕಾಂಚನ ಪೊನ್ನಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಕಾಂಗ್ರೆಸ್ ಮುಖಂಡ ಖಾಸಿಂ, ವಕೀಲ ಶ್ರೀಧರ್ ನಾಯರ್ ಹಾಜರಿದ್ದರು. ::: ವಿಶೇಷ ಪೂಜೆ ::: ನಾಮಪತ್ರ ಸಲ್ಲಿಕೆಗೂ ಮೊದಲು ಎ.ಎಸ್.ಪೊನ್ನಣ್ಣ ಅವರು ಬೆಳಗ್ಗೆ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯ ಮತ್ತು ತಲಕಾವೇರಿ, ವಿರಾಜಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ::: ಶಕ್ತಿ ಪ್ರದರ್ಶನ ::: ನಗರದ ಸರ್ವೋದಯ ಕಾಲೇಜು ಬಳಿಯಿಂದ ಆರಂಭಗೊoಡ ಕಾಂಗ್ರೆಸ್ ಪಕ್ಷದ ಬೃಹತ್ ಮೆರವಣಿಗೆಯಲ್ಲಿ ಕ್ಷೇತ್ರ ವ್ಯಾಪ್ತಿಯ ಬೆಂಬಲಿಗರು…

Read More

ಸೋಮವಾರಪೇಟೆ ಏ.18 : ಸೋಮವಾರಪೇಟೆಯ ಹಿರಿಕರ ಗ್ರಾಮದ ಮಲ್ಲೇಶ್ವರ ದೇವಾಲಯದ ವಾರ್ಷಿಕ ವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಂಗಳವಾರ ಬೆಳಗ್ಗಿನ ಜಾವ ಕೊಲ್ಲಿಗದ್ದೆಯ ಕೆರೆಯಲ್ಲಿ ಗಂಗಾ ಪೂಜೆ ಸಲ್ಲಿಸಿದ ಗ್ರಾಮಸ್ಥರು ಸಕಾಲದಲ್ಲಿ ಮಳೆ ಹಾಗು ಗ್ರಾಮದ ಸುಭೀಕ್ಷೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಸವಣ್ಣ ದೇವರ ಉತ್ಸವ ಮೂರ್ತಿಯನ್ನು ಅಡ್ಡಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಗ್ರಾಮದ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರತಿಕುಟುಂಬದವರು ಅವರ ಮನೆಗಳ ಮುಂದೆ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಕಳಸ ಹಿಡಿದ ಮಹಿಳೆಯರು ದೇವಾಲಯದ ಮೂರು ಸುತ್ತು ಮೆರವಣಿಗೆ ನಡೆಸಿದರು. ನಂತರ ಕೆಂಡ ಹಾಯಲಾಯಿತು. ::: ಕ್ರೀಡಾಕೂಟ ::: ಪೂಜೆಯ ಅಂಗವಾಗಿ ಗ್ರಾಮದ ಕ್ರೀಡಾಸ್ಪರ್ಧೆಗಳು ನಡೆದವು. ಮಹಿಳೆಯರ ಹಗ್ಗಾಜಗ್ಗಾಟದಲ್ಲಿ ಚರಿತ್ರಾ ತ್ರಿಲೋಕ್ ತಂಡ ಪ್ರಥಮ, ಅಶಿಕಾ ವಿಜಯಕುಮಾರ್ ತಂಡ ದ್ವಿತೀಯ ಸ್ಥಾನ ಪಡೆಯಿತು. ಪುರುಷರ ವಿಭಾಗದಲ್ಲಿ ಅಭಿಮನ್ಯು ತಂಡ ಪ್ರಥಮ, ದ್ರೋಣ ತಂಡ ದ್ವಿತೀಯ ಸ್ಥಾನ ಗಳಿಸಿತು. ಬಸ್ಸು ಹುಡುಕಾಟ ಸ್ಪರ್ಧೆಯಲ್ಲಿ ಅಕ್ಷಿತಾ ದೇವರಾಜು ಪ್ರಥಮ, ಎಚ್.ಎಲ್. ಪ್ರಿಯಾ ದ್ವಿತೀಯ ಸ್ಥಾನ…

Read More

ಕುಶಾಲನಗರ, ಏ.18 : ಕುಶಾಲನಗರ ಗಡಿ ಭಾಗದ ಚುನಾವಣಾ ವಾಹನ ತಪಾಸಣಾ ಕೇಂದ್ರದಲ್ಲಿ ಮಂಗಳವಾರ  ದಾಖಲೆ ಇಲ್ಲದ  4.77 ಲಕ್ಷ ರೂ ಹಣ ವಶಪಡಿಸಿಕೊಳ್ಳಲಾಗಿದೆ.  ಕೊಪ್ಪ ಆವರ್ತಿ  ಕಡೆಯಿಂದ ಕೊಡಗು ಜಿಲ್ಲೆಯ ಕುಶಾಲನಗರ ಕಡೆಗೆ ಬರುತ್ತಿದ್ದ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಸಂದರ್ಭ ಚುನಾವಣಾ ಅಧಿಕಾರಿಗಳ ತಂಡದ ಪಿ ಬಿ ಪೂವಯ್ಯ ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವೀಂದ್ರ ಅವರ ನೇತೃತ್ವದ ತಂಡ ವಾಹನಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದ ವೇಳೆಗೆ ದಾಖಲೆ ಇಲ್ಲದ 4.77 ಲಕ್ಷದ ನಗದು ಪತ್ತೆಯಾಗಿದೆ. ಹಣವನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.  ಚುನಾವಣಾ ತಪಾಸಣಾ ಕೇಂದ್ರದ  ಕಾರ್ಯಾಚರಣೆ ತಂಡದಲ್ಲಿ ಮಹದೇವ್, ಸಚಿನ್ ಎಎಸ್ಐ ಗಣಪತಿ, ಪೊಲೀಸ್ ಸಿಬ್ಬಂದಿ ಮನೋಜ್ ಮತ್ತಿತರರು ಇದ್ದರು.

Read More