ಮಡಿಕೇರಿ ಏ.18 : ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ದಕ್ಷಿಣ ಕೊಡಗಿನ ಕೆ.ಪಿ.ಬೋಪಣ್ಣ ಅವರು ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಮ್ ಆದ್ಮಿ ಪಾರ್ಟಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಬೋಪಣ್ಣ ಅವರು ಏ.20 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಪಕ್ಷದ ಇಬ್ಬರು ಅಭ್ಯರ್ಥಿಗಳನ್ನು ಮತದಾರರು ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೋಪಣ್ಣ ಅವರು ಆಮ್ ಆದ್ಮಿ ಪಾರ್ಟಿಯಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದು, ಕೋವಿಡ್ ಸಂದರ್ಭ ಮಾಸ್ಕ್, ನೊಂದವರಿಗೆ ಹಾಲು ಮತ್ತು ಆಹಾರ ವಿತರಣೆ ಮಾಡಿ ಸಮಾಜ ಸೇವೆ ಸಲ್ಲಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಸಹಿ ಸಂಗ್ರಹ ಅಭಿಯಾನ ಮತ್ತು ಬೆಂಗಳೂರಿನಲ್ಲಿ ಪಕ್ಷ ನಡೆಸಿದ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಇವರು ವೃತ್ತಿಯಲ್ಲಿ ವಾಹನದ ಬಿಡಿಭಾಗಗಳ ತಯಾರಕರು ಆಗಿದ್ದಾರೆ ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಏ.18 : ರಂಗಭೂಮಿಯಲ್ಲಿ ದಾಖಲೆ ನಿರ್ಮಿಸಿರುವ “ಶಿವದೂತ ಗುಳಿಗ” ಕನ್ನಡ ಪೌರಾಣಿಕ ನಾಟಕವು ಏ.24 ರಂದು ಮಡಿಕೇರಿಯಲ್ಲಿ ಪ್ರದರ್ಶನ ಕಾಣಲಿದೆ ಎಂದು ಜಾನಪದ ಪರಿಷತ್ನ ಸಂಚಾಲಕ ವಿಕ್ರಂ ಜಾದೂಗಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಟಕ ಅಕಾಡಮಿ ಪ್ರಶಸ್ತಿ ವಿಜೇತರಾದ ಪ್ರಸಿದ್ಧ ರಂಗ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ನಿರ್ದೇಶನದ ಹಾಗೂ ಕಾಂತಾರಾ ಚಲನಚಿತ್ರದ ಗುರುವ ಪಾತ್ರಧಾರಿಯಾಗಿ ಮಿಂಚಿದ ಸ್ವರಾಜ್ ಶೆಟ್ಟಿ, ಮುಖ್ಯ ಅಭಿನಯದ ‘ಶಿವದೂತ ಗುಳಿಗ’ ನಾಟಕವು ಏ.24 ರಂದು ನಗರದ ಗಾಂಧಿ ಮೈದಾನದಲ್ಲಿ ರಾತ್ರಿ 7 ಗಂಟೆಗೆ ಪ್ರದರ್ಶನ ಕಾಣಲಿದೆ ಎಂದು ಮಾಹಿತಿ ನೀಡಿದರು. ಈಗಾಗಲೇ 50ಕ್ಕೂ ಹೆಚ್ಚು ಪ್ರದರ್ಶನ ನೀಡಿದ್ದು, 500ರ ಪ್ರದರ್ಶನದ `ದಾಖಲೆಯತ್ತ ಮುನ್ನುಗುತ್ತಿದೆ ಎಂದ ಅವರು, ಪರಿಣಾಮಕಾರಿ ಕಥೆ, ಆತ್ಯದ್ಭುತ ರಂಗ ಸಜ್ಜಿಕೆಯಿಂದ ಕರ್ನಾಟಕದ ಎಲ್ಲೆಡೆ ಹಾಗೂ ವಿದೇಶದಲ್ಲೂ ಕೂಡ ಪ್ರದರ್ಶನ ನೀಡಿರುವ ಅಪರೂಪದ ಅವಕಾಶ ಮಡಿಕೇರಿ ಪ್ರೇಕ್ಷಕರಿಗೆ ಒಲಿದು ಬಂದಿದೆ ಎಂದರು. 30ಕ್ಕೂ ಹೆಚ್ಚು ಕಲಾವಿದರು, ಟನ್ನುಗಟ್ಟಲೆ ಸಾಮಾಗ್ರಿ, ಅತ್ಯಧುನಿಕ…
ಮಡಿಕೇರಿ ಏ.18 : ಕೊಡವ ನ್ಯಾಷನಲ್ ಕೌನ್ಸಿಲ್ನ ಬೇಡಿಕೆಯಾಗಿರುವ ಕೊಡವರಿಗೆ ಭೂ ರಾಜಕೀಯ ಸ್ವಾಯತ್ತತೆ ನೀಡಬೇಕು ಹಾಗೂ ಜನಾಂಗಕ್ಕೆ ದೊರಕಬೇಕಾದ ಬುಡಕಟ್ಟು ಸ್ಥಾನಮಾನದ ಬೇಡಿಕೆಯನ್ನು ಪೂರೈಸಲು ಆಯೋಗ ರಚಿಸಬೇಕೆಂದು ಕರ್ನಾಟಕ ಉಚ್ಚ ನ್ಯಾಯಾಲಯವು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನೋಟೀಸ್ ನೀಡಿದೆ. ಜನಾಂಗದ ಬೇಡಿಕೆಗಳ ಪೂರೈಕೆಗೆ ಆಯೋಗ ರಚಿಸುವಂತೆ ಮಾಜಿ ಕೇಂದ್ರ ಕಾನೂನು ಸಚಿವ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಏ.6 ರಂದು ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಏ.17 ರಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಸನ್ನ ಬಿ ವರಾಲೆ ಅವರನ್ನು ಒಳಗೊಂಡ ಪೀಠ, ಅರ್ಜಿಯಲ್ಲಿನ ಮನವಿಯಂತೆ ಸಿ.ಎನ್.ಸಿ ಬೇಡಿಕೆಗಳ ಈಡೇರಿಕೆಗೆ ಆಯೋಗ ರಚಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ನೋಟೀಸ್ ಜಾರಿ ಮಾಡಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಡಾ.ಸುಬ್ರಮಣ್ಯನ್ ಸ್ವಾಮಿ ಅವರು ಏ.6 ರಂದು ವಕೀಲ ಸತ್ಯ ಸಬರ್ವಾಲ ಅವರ ಮೂಲಕ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ…
ಮಡಿಕೇರಿ ಏ.18 : ಕೇರಳದ ಕಣ್ಣೂರಿನಲ್ಲಿರುವ ಪಯ್ಯಂಬಲ ಕಡಲ ತೀರದಲ್ಲಿ ಕಣ್ಮರೆಯಾದ ತಣ್ಣೀರುಹಳ್ಳ ಗ್ರಾಮದ ಸೃಜನ್ ನ ಮೃತದೇಹ ಪತ್ತೆಯಾಗಿದೆ. ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಮುಗಿದ ಹಿನ್ನೆಲೆ ಕುಟುಂಬದ ಸದಸ್ಯರೊಂದಿಗೆ ಕೇರಳದ ದೇವಾಲಯಗಳು ಹಾಗೂ ಪ್ರವಾಸಿತಾಣಗಳಿಗೆ ತೆರಳಿದ್ದ ಸೃಜನ್ (15) ಪಯ್ಯಾಂಬಲ ಕಡಲ ಕಿನಾರೆಯಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ. ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು, ನುರಿತ ಈಜುಗಾರರು ಕಾರ್ಯಾಚರಣೆ ಕೈಗೊಂಡಿದ್ದರು. ಸೋಮವಾರ ರಾತ್ರಿ 8.30ರ ಸುಮಾರಿಗೆ ಸೃಜನ್ ಮೃತದೇಹ ಪತ್ತೆಯಾಗಿದೆ. ಸೃಜನ್ ತಣ್ಣೀರುಹಳ್ಳ ಗ್ರಾಮದ ನಿವಾಸಿ ಶಶಿಕುಮಾರ್ (ಸಚಿನ್) ಹಾಗೂ ನೇರುಗಳಲೆ ಗ್ರಾ.ಪಂ ಸದಸ್ಯೆ ಕವಿತ ದಂಪತಿ ಪುತ್ರ.
ಮಡಿಕೇರಿ ಏ.18 : ಮಡಿಕೇರಿ ಆಕಾಶವಾಣಿಯಿಂದ ಏಪ್ರಿಲ್, 20 ರಂದು ಸಂಜೆ 6.50 ಕ್ಕೆ ಪ್ರಸ್ತುತ ಧಗೆಯ ಪರಿಸ್ಥಿತಿಯಲ್ಲಿ ಕಾಫಿ ಬೆಳೆಯ ರಕ್ಷಣೆ ಮತ್ತು ಪೋಷಣೆ ಕುರಿತು ಬಾಳೆಹೊನ್ನೂರಿನ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ವಿಜ್ಞಾನಿ ಎಸ್.ಎಲ್.ಪಾಟೀಲ್ ಅವರ ವಿವರವಾದ ಸಲಹೆಗಳ ಕಾರ್ಯಕ್ರಮವು ಪ್ರಸಾರವಾಗುತ್ತಿದೆ. ಉಪಯುಕ್ತ ವಿಚಾರಗಳಿವೆ. ಕಾಫಿ ಬೆಳೆಗಾರರು ತಪ್ಪದೇ ಆಲಿಸಿ, ಹಾಗೆಯೇ ಇತರರಿಗೂ ತಿಳಿಸಿ ರೇಡಿಯೊ ಮೂಲಕ ಇಲ್ಲವೇ newsonairapp ಸಹಾಯದಿಂದ ಕಾರ್ಯಕ್ರಮ ಕೇಳಬಹುದು ಎಂದು ಮಡಿಕೇರಿ ಆಕಾಶವಾಣಿ ನಿಲಯದ ಕಾರ್ಯಕ್ರಮ ನಿರ್ವಾಹಕರಾದ ವಿಜಯ ಅಂಗಡಿ ಅವರು ತಿಳಿಸಿದ್ದಾರೆ.
ಮಡಿಕೇರಿ ಏ.18 : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತದಾನದ ಬಗ್ಗೆ ತಮ್ಮ ಪೋಷಕರಿಗೆ ಜಾಗೃತಿ ಮೂಡಿಸಲು ಕಾರ್ಡಿನಲ್ಲಿ ಪತ್ರ ಬರೆಯುವುದರ ಮೂಲಕ ಮತದಾನದ ಅರಿವು ಮೂಡಿಸಿದರು.
ಮಡಿಕೇರಿ ಏ.18 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಇಂಡಿಯನ್ ಮೂಮ್ಮೆಂಟ್ ಪಕ್ಷದ (ಐಎಂಪಿ) ಅಭ್ಯರ್ಥಿ ರಶೀದ ಬೇಗಂ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರಶೀದ ಬೇಗಂ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಟಿಕೆಟ್ ಲಭಿಸದೆ ಇರುವುದರಿಂದ ನಾನು ಮತ್ತಷ್ಟು ಪ್ರಬುದ್ಧನಾಗಿದ್ದು, ಪಕ್ಷದ ಹಿರಿಯ ನಾಯಕರ ಅಣತಿಯಂತೆ ಸಕ್ರಿಯ ಕಾರ್ಯಕರ್ತನಾಗಿರುವೆ ಎಂದು ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿರಾಜಪೇಟೆ ಕ್ಷೇತ್ರದ ಮೇಲೆ ನನಗಿದ್ದ ಅಭಿಮಾನದಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಮತ್ತು ಅಭಿವೃದ್ಧಿ ಕಾರ್ಯಗಳ ಮೂಲಕ ಹೊಸ ಮನ್ವಂತರ ಆರಂಭಿಸಬೇಕು ಎನ್ನುವ ಅಭಿಲಾಷೆ ಇತ್ತು. ಅಪಾರ ಪ್ರಮಾಣದ ಅಭಿಮಾನಿಗಳು ಹಾಗೂ ಹಿತೈಷಿಗಳು ನನ್ನನ್ನು ಚುನಾವಣೆಗೆ ಸ್ಪರ್ಧಿಸಿ ಎಂದು ಮಾಡಿದ ಒತ್ತಾಯ ಮತ್ತು ಪ್ರೋತ್ಸಾಹದಿಂದ ನನ್ನ ಹೆಸರು ರಾಜ್ಯ ಮಾತ್ರವಲ್ಲ ದೆಹಲಿಯ ಭಾರತೀಯ ಜನತಾ ಪಕ್ಷದ ವರಿಷ್ಠರ ಮುಂದೆಯೂ ಪರಿಗಣಿತವಾಗುವಂತೆ ಮಾಡಿತು. ನನಗೆ ವೈಯಕ್ತಿಕವಾಗಿ ರಾಜಕೀಯ ಆಸಕ್ತಿಗಿಂತ ಕ್ಷೇತ್ರದ ಮೇಲಿನ ಹಿತಾಸಕ್ತಿ ಮುಖ್ಯವಾಗಿತ್ತು. ವಿಶೇಷವಾಗಿ ವಿರಾಜಪೇಟೆ ಕ್ಷೇತ್ರದ ಜನತೆಗೆ ನಾನೋರ್ವ ಶಿಸ್ತಿನ ಸಿಪಾಯಿಯಾಗಲು, ನಮ್ಮ ದೇಶದ ಹೆಮ್ಮೆಯ ಪ್ರಧಾನಿಯಂತೆ ನಾನು ಕೂಡ ಕೆಲಸಗಾರನಾಗಬೇಕೆಂದು ನನ್ನನ್ನು ಪ್ರೇರೇಪಿಸಿತು.…
ಮಡಿಕೇರಿ ಏ.18 : ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಕೊಡಗಿನ ಜಮ್ಮಾ ಹಿಡುವಳಿದಾರ ಕೆಲವು ಅಪರಾಧ ಪ್ರಕರಣಗಳ ಆರೋಪಿಗಳಿಂದ ಕೋವಿಯನ್ನು ವಶಕ್ಕೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ಶ್ರೀ ಕಾವೇರಮ್ಮ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಟ್ರಸ್ಟ್ ನ ಅಧ್ಯಕ್ಷ ಎಂ.ಬಿ.ದೇವಯ್ಯ, ಪ್ರತಿ ಚುನಾವಣೆ ಸಂದರ್ಭ ಲೈಸೆನ್ಸ್ ಹೊಂದಿರುವ ಕೋವಿಗಳನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠೇವಣಿ ಇಟ್ಟುಕೊಳ್ಳುವುದು ಸಾಮಾನ್ಯ. ಈ ನಿಯಮದಿಂದ ಜಮ್ಮಾ ಹಿಡುವಳಿದಾರರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಪ್ರಸ್ತುತ ನೀತಿ ಸಂಹಿತೆ ಜಾರಿಯಾದ ನಂತರ ಪೊಲೀಸರು ಅಪರಾಧ ಸಾಬೀತಾಗದ ವಿಚಾರಣೆ ಹಂತದ ಜಮ್ಮಾ ಹಿಡುವಳಿದಾರ ಆರೋಪಿಗಳಿಂದ ಕೋವಿಯನ್ನು ಠೇವಣಿ ಇಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೋವಿ ಜಮ್ಮಾ ಹಿಡುವಳಿದಾರರ ಹಕ್ಕಾಗಿದೆ, ಕೋವಿ ಹೊಂದಿರುವವರಿಂದ ಇಲ್ಲಿಯವರೆಗೆ ಕೊಡಗಿನಲ್ಲಿ ಯಾವುದೇ ಅಶಾಂತಿಯ ವಾತಾವರಣ ಸೃಷ್ಟಿಯಾಗಿಲ್ಲ. ಪ್ರತಿ ಚುನಾವಣೆಯೂ ಶಾಂತಿಯುತವಾಗಿ ನಡೆದಿದ್ದು, ಕೋವಿಯಿಂದ ಅನಾಹುತಗಳು ಸಂಭವಿಸಿಲ್ಲ. ಕೊಡಗಿನ ಜನ ಪ್ರಜ್ಞಾವಂತರಾಗಿದ್ದು, ಕೋವಿ ಹಕ್ಕನ್ನು…
ಮಡಿಕೇರಿ ಏ.18 : ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಕಾರಿಗಳ ಆದೇಶವಿಲ್ಲದೆ ಪೊಲೀಸರು ಜಮ್ಮಾ ಹಿಡುವಳಿದಾರರ ಕೋವಿಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ತಕ್ಷಣ ಈ ಪ್ರಕ್ರಿಯೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿ ಚುನಾವಣೆಯ ಸಂದರ್ಭ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳ ಆದೇಶದಂತೆ ಲೈಸನ್ಸ್ ಪಡೆದು ಬಳಸುತ್ತಿರುವವರ ಕೋವಿಯನ್ನು ಪೊಲೀಸ್ ಇಲಾಖೆ ಠೇವಣಿ ಇಟ್ಟುಕೊಳ್ಳುವುದು ಸಾಮಾನ್ಯ. ಈ ಕ್ರಮಕ್ಕೆ ಕೊಡಗಿನ ಜನ ಕೂಡ ಸಹಕಾರ ನೀಡುತ್ತಾ ಬಂದಿದ್ದಾರೆ. ಜಮ್ಮಾ ಹಿಡುವಳಿದಾರರ ಕೋವಿಗಳಿಗೆ ಪ್ರತಿ ಚುನಾವಣೆ ಸಂದರ್ಭದಲ್ಲೂ ವಿನಾಯಿತಿ ನೀಡಲಾಗಿದೆ. ಆದರೆ 2023 ರ ಚುನಾವಣೆಯಲ್ಲಿ ಯಾವುದೇ ಆದೇಶ ಮತ್ತು ಮುನ್ಸೂಚನೆ ಇಲ್ಲದೆ ಜಮ್ಮಾ ಹಿಡುವಳಿದಾರರ ಮನೆಗಳಿಗೆ ಪೊಲೀಸರು ತೆರಳಿ ಕೋವಿ ನೀಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸ್ ಇಲಾಖೆಯ ಈ ಕ್ರಮದಿಂದ ಕೊಡಗಿನಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ಹಿಂದಿನ ಯಾವುದೇ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಕೋವಿಯಿಂದ ರಾಜಕೀಯ ಘರ್ಷಣೆಯಾದ ಉದಾಹರಣೆಗಳಿಲ್ಲ. ಆದರೂ ಈ ಚುನಾವಣೆಯಲ್ಲಿ…






