ಮಡಿಕೇರಿ ಏ.18 : ಹೌದು ಭಾಷಣಗಳು ವಿಚಾರವಾದದಿಂದ ಕೂಡಿರಬೇಕೆ ಹೊರತು ಪ್ರಚೋದನಕಾರಿಯಾಗಿರಬಾರದು. ಭಾಷಣಗಳು ಸಮಾಜದ ಮೇಲೆ ಒಂದು ಅದ್ಬುತ ಪರಿಣಾಮ ಬೀರುವ ಒಂದು ಮಾರ್ಗ. ಭಾಷಣದಿಂದ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಅದೇ ರೀತಿ ಕೆಲವು ಭಾಷಣಗಳು ನಾಶಕ್ಕೂ ಕಾರಣವಾಗುತ್ತದೆ. ಇಂತಹ ಅನೇಕ ನಿದರ್ಶನಗಳು ನಡೆದಿದೆ. ಭಾಷಣಗಳನ್ನು ಮಾಡುವುದು ಒಂದು ಕಲೆ. ಇದು ಕೆಲವರಿಗೆ ರಕ್ತಗತವಾಗಿರುತ್ತದೆ. ಇನ್ನೂ ಕೆಲವರು ಪರಿಶ್ರಮದಿಂದ ಕರಗತ ಮಾಡಿಕೊಂಡಿರುತ್ತಾರೆ. ಕೆಲವು ನಮ್ಮ ರಾಜಕಾರಣಿಗಳು ಮಾತ್ರ ಒಂದಷ್ಟೂ ಒದರುವುದೇ ಭಾಷಣ ಎಂದು ಕೊಂಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ನಮಗೆ ಸಮಾಜದಲ್ಲಿ ಕಂಡು ಬರುತ್ತಿರುವುದೇನೆಂದರೆ ನಾಲಗೆಯ ಮೇಲೆ ಹಿಡಿತವಿಲ್ಲದ ಭಾಷಣಗಳು. ಯಾರು, ಯಾರ ಮೇಲೆ, ಯಾವ ವಿಷಯದ ಮೇಲೆ ತಾವು ಭಾಷಣ ಮಾಡುತ್ತಿದ್ದೇವೆ ಎಂದು ಅವರಿಗೆ ಅರಿವು ಇರುವುದಿಲ್ಲ. ಅಬ್ಬರಿಸುವುದೇ ಭಾಷಣವಾಗಿದೆ. ಹಿರಿಯರು, ಕಿರಿಯರು, ಪದವಿಗಳಿಗೆ ಮೌಲ್ಯಗಳಿಗೆ ಬೆಲೆ ನೀಡದೆ ಏಕವಚನದಲ್ಲಿ ಸಂಭೋದಿಸುವುದು ಕೇಳುಗರಿಗೆ ಮುಜುಗರ ಉಂಟು ಮಾಡುತ್ತದೆ. ಈ ಬರವಣಿಗೆ ಬರೆಯಲು ಕಾರಣವೇನೆಂದರೆ ಇತ್ತೀಚಿನ ದಿನಪತ್ರಿಕೆಯೊಂದರಲ್ಲಿ ಭಾರತದ ಉಚ್ಚ…
ಲೇಖಕ: admin
ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಯಾಗಿ ಪೊನ್ನಂಪೇಟೆಯ ಸಿ.ಎಸ್.ರವೀಂದ್ರ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಏ.19 ರಂದು ಮಧ್ಯಾಹ್ನ ರವೀಂದ್ರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ. 2011ರಲ್ಲಿ ದೇಶದಲ್ಲಿ ಅಣ್ಣಾ ಹಜಾರೆ ನಡೆಸಿದ ಜನಾಂದೋಲನದಿಂದ ಸ್ಫೂರ್ತಿಗೊಂಡು ನಂತರ ಸ್ಥಾಪನೆಯಾದ ಆಮ್ ಆದ್ಮಿ ಪಕ್ಷದಲ್ಲಿ ಸೇರ್ಪಡೆಗೊಂಡ ರವೀಂದ್ರ ಅಂದಿನಿಂದ ಇಂದಿನವರೆಗೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಪತ್ರಕರ್ತರಾಗಿರುವುದರಿಂದ ಜನರ ಸಮಸ್ಯೆಗಳಿಗೆ ಸುಲಭವಾಗಿ ಸ್ಪಂದಿಸುವ ಇಚ್ಛಾಶಕ್ತಿಯನ್ನು ಹೊಂದಿದ್ದಾರೆ ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಮಡಿಕೇರಿ ಏ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಮೆರವಣಿಗೆ ಮೂಲಕ ಬಂದ ಪೊನ್ನಣ್ಣ ಅವರು ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಶಬಾನ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ , ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಜರಿದ್ದರು. ::: ಮೆರವಣಿಗೆ ::: ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ಪೊನ್ನಣ್ಣ, ಪಂಜರಪೇಟೆಯಿಂದ ಚುನಾವಣಾಧಿಕಾರಿ ಕಚೇರಿವರೆಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು. ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ವಿರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜಿ ಪೂಣಚ್ಚ, ಮಿದೇರಿರ ನವೀನ್, ಇಸ್ಮಾಯಿಲ್ ಸೇರಿದಂತೆ ಕಾಂಗ್ರೆಸ್ನ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಏ.18 : ಹಿರಿಯ ರಾಜಕಾರಣಿ, ಕೊಡಗು ಜಿ.ಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಎಸ್.ಟಿ ಘಟಕದ ಜಿಲ್ಲಾಧ್ಯಕ್ಷ ಎಸ್.ಎನ್.ರಾಜಾರಾವ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸುಂಟಿಕೊಪ್ಪ ಏ.18 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವವು ವಿವಿಧ ಪೂಜಾಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು. ಧ್ವಜಾರೋಹಣದೊಂದಿಗೆ ಆರಂಭಗೊಂಡ ತೆರೆ ಮಹೋತ್ಸವವು ಬಾವುಟ ಇಳಿಸವ ಮೂಲಕ ಸಂಪನ್ನಗೊಂಡಿತು. ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ಶ್ರೀಮುತ್ತಪ್ಪ ವೆಳ್ಳಾಟಂ, ಚಂಡೆಮೇಳವು ನಡೆಯಿತು. ನಂತರ ವಾದ್ಯಮೇಳದೊಂದಿಗೆ ಶ್ರೀಶಾಸ್ತಪ್ಪನ ವೆಳ್ಳಾಟಂ, ಶ್ರೀ ಗುಳಿಗನ ವೆಳ್ಳಾಟಂ ಜರುಗಿತು. ಸಂಜೆ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ಮಹಿಳೆಯರು ಮತ್ತು ಮಕ್ಕಳು ತಲಾ ದೀಪವನ್ನು ಹಿಡಿದು ಅಡಿಯರ ಮೆರವಣಿಗೆಯಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಭಕ್ತಾಧಿಗಳು ಸಾಗಿದರು. ನಂತರ ಶ್ರೀ ಮುತ್ತಪ್ಪ ವೆಳ್ಳಾಟಂ, ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, ಶ್ರೀ ವಸೂರಿಮಾಲೆ ಸ್ನಾನಕ್ಕೆ ಹೊರಡುವುದು, ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, ಶ್ರೀ ವಸೂರಿಮಾಲೆ ಮೆರವಣಿಗೆ, ಕಳಿಗಪಾಟ್, ಅಂದಿವೇಳ ಕಳಸಂ ಸ್ವೀಕರಿಸಿತು. ಬಳಿಕ ವಳ್ಳಕಟ್ಟ್, ಶ್ರೀ ಗುಳಿಗನ ಕೋಲ, ಶ್ರೀ ಶಾಸ್ತಪ್ಪನ ಕೋಲ, ಬೆಳಗಿನವರೆಗೆ ಶ್ರೀ ತಿರುವಪ್ಪನ ಕೋಲ, ಗಂಭೀರ…
ಮಡಿಕೇರಿ ಏ.18 : ಕಗ್ಗೋಡ್ಲು-ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ ಶಾಲಾ ಬ್ಯಾಗ್ ಕೊಡುಗೆ ನೀಡಲಾಯಿತು. ಕಗ್ಗೋಡ್ಲುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 35 ವಿದ್ಯಾಥಿ೯ಗಳಿಗೆ ಕಲಿಕೆಯನ್ನು ಮುಂದುವರಿಸಲು, ಮುಂದಿನ ಶೈಕ್ಷಣಿಕ ವರ್ಷಕ್ಕೆ ಶಾಲೆಗೆ ಸಂತೋಷದಿಂದ ಹಾಜರಾಗಲು ಉತ್ತೇಜಿಸಿ ಶಾಲಾ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿಗಳನ್ನು ಉಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಕ್ಲಬ್ನ ಅಧ್ಯಕ್ಷೆ ಡಾ.ರೇಣುಕಾ ಸುಧಾಕರ್ ,ಕಾರ್ಯದರ್ಶಿ ಲಲಿತಾ ರಾಘವನ್ , ಸದಸ್ಯರುಗಳಾದ ಉಮಾಗೌರಿ ,ಮಲ್ಲಿಗೆ ಪೈ ಹಾಗೂ ಆಗ್ನೇಸ್ ಮುತ್ತಣ್ಣ, ಶಾಲಾ ಮುಖ್ಯಶಿಕ್ಷಕಿ ಜಲಜಾಕ್ಷಿ ಶಿಕ್ಷಕಿ ಇಂದಿರಾ ಹಾಜರಿದ್ದರು.
ನಾಪೋಕ್ಲು ಏ.18 : ಮೂಟೇರಿ ಉಮಾಮಹೇಶ್ವರಿ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಎರಡು ದಿನಗಳ ಕಾಲ ನಡೆದ ಹಬ್ಬದಲ್ಲಿ ದೀಪಾರಾಧನೆ, ದೇವರ ನೃತ್ಯಬಲಿ ನಡೆಯಿತು. ಮುಖ್ಯ ಹಬ್ಬದಂದು ಮಧ್ಯಾಹ್ನ ಎತ್ತುಪೋರಾಟ, ಬೊಳಕಾಟ್, ದುಡಿಕೊಟ್ ಪಾಟ್, ಮಹಾಪೂಜೆ ತೀರ್ಥ ಪ್ರಸಾದ ವಿತರಣೆ ನೆರವೇರಿತು. ರಾತ್ರಿ ದೇವರ ಅವಭೃತ ಸ್ನಾನ ಹಾಗೂ ನೃತ್ಯಬಲಿ ನಡೆಯಿತು. ವಾರ್ಷಿಕ ಉತ್ಸವದಲ್ಲಿ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡು ತಮ್ಮ ಇಷ್ಟಾರ್ಥ ಸಿದ್ದಿಗೆ ವಿವಿಧ ಹರಕೆ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯದ ತಕ್ಕರಾದ ವಾಂಜಂಡ ಬೋಪಯ್ಯ, ಆಡಳಿತ ಮಂಡಳಿ ಅಧ್ಯಕ್ಷ ಅಪ್ಪಚ್ಚಿರ ರೆಮ್ಮಿ ನಾಣಯ್ಯ, ಉಪಾಧ್ಯಕ್ಷ ಕಾಟುಮಣಿಯಂಡ ಉಮೇಶ್, ಕಾರ್ಯದರ್ಶಿ ಪುಲ್ಲೇರ ವಿಠಲ ಪಳಂಗಪ್ಪ, ಆಡಳಿತ ಮಂಡಳಿ ಸದಸ್ಯರು, ಊರ ಮತ್ತು ಪರಾವೂರಿನ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯದ ಮುಖ್ಯ ಅರ್ಚಕ ಕೀರ್ತೀಶ್ ಪೂಜಾ ಕೈ ಕಾರ್ಯಗಳನ್ನು ನೆರವೇರಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಏ.18 : ಕ್ರೀಡೆ ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ, ಎಳೆ ಮನಸ್ಸುಗಳು ಕ್ರೀಡೆ ಎಂದಾಕ್ಷಣ ಉಲ್ಲಾಸಿತಗೊಳ್ಳುತ್ತವೆ ಅರಳುವ ಪ್ರತಿಭೆಗಳಿಗೆ ಇಂತಹ ಶಿಬಿರಗಳು ವೇದಿಕೆಯಾಗಿವೆ ಎಂದು ಕೆಂಬಡತಂಡ ಸಿಮ್ಸ್ ಮಂದಣ್ಣ ಅಭಿಪ್ರಾಯಪಟ್ಟರು. ಮೂರ್ನಾಡು ವಿದ್ಯಾ ಸಂಸ್ಥೆಯ ಜನರಲ್ ಕೆ.ಎಸ್.ತಿಮ್ಮಯ್ಯ ಅಕಾಡೆಮಿ ಫಾರ್ ಸ್ಪೋರ್ಟ್ಸ್ ಅಂಡ್ ಗೇಮ್ಸ್ ವತಿಯಿಂದ 12ನೇ ವರ್ಷದ ಹಾಕಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಶಿಬಿರಾರ್ಥಿಗಳು ಶಿಬಿರ ಮುಗಿದ ನಂತರವೂ ಕೂಡ ದೈಹಿಕ ಚಟುವಟಿಕೆಯ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಏಪ್ರಿಲ್ 1 ರಿಂದ ಆರಂಭಗೊಂಡು ಸುಮಾರು 16 ದಿನಗಳ ಕಾಲ ನಡೆದ ಶಿಬಿರ ಮುಕ್ತಾಯಗೊಂಡಿತು. 74 ಶಿಬಿರಾರ್ಥಿಗಳನ್ನ ಒಳಗೊಂಡಿದ್ದ ಈ ಶಿಬಿರದಲ್ಲಿ ಆರು ಮಂದಿ ತರಬೇತಿದಾರರಿದ್ದರು. ಎಲ್ಲಾ ದೈಹಿಕ ತರಬೇತುದಾರರು ಶಿಬಿರಾರ್ಥಿಗಳು ಪೋಷಕ ವರ್ಗದವರು ಹಾಜರಿದ್ದರು. ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ಶಿಬಿರಾರ್ಥಿಗಳಿಗೆ ಅರ್ಹತಾ ಪತ್ರ ವಿತರಿಸಿ ಶುಭ ಹಾರೈಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಏ.17 : ರಾಜ್ಯದಲ್ಲಿ ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆೆ ಮತದಾನದ ಪವಿತ್ರ ದಿನ ಮಾತ್ರವಲ್ಲ ಶೇ.40ರ ಕಮಿಷನ್ ದಂಧೆ, ಮೇರೆ ಮೀರಿರುವ ಭ್ರಷ್ಟಾಚಾರವನ್ನು ಓಡಿಸುವ ಮತ್ತು ಡಬಲ್ ಇಂಜಿನ್ ಸರ್ಕಾರಕ್ಕೆ ಉತ್ತರ ನೀಡುವ ಮಹತ್ವದ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿ ಅಜ್ಜಿಕುಟ್ಟೀರ ಪೊನ್ನಣ್ಣ ಅವರ ಗೆಲುವಿಗಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು. ರಾಜ್ಯದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿತ್ಯೋಪಯೋಗಿ ವಸ್ತಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಕೊಡುವುದಾಗಿ ಡಬಲ್ ಇಂಜಿನ್ ಸರ್ಕಾರ ನೀಡಿದ್ದ ಭರವಸೆಗಳು ಹುಸಿಯಾಗಿದೆ. ಇದಕ್ಕೆ ಮೇ 10 ರಂದು ಜನರೇ ಉತ್ತರ ನೀಡಬೇಕು ಮತ್ತು ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು…
ಸೋಮವಾರಪೇಟೆ ಏ.17 : ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ.ಗಣೇಶ್ ಆಶಯ ವ್ಯಕ್ತಪಡಿಸಿದರು. ಈ ಹಿಂದೆ 20 ತಿಂಗಳ ಅವದಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿಯವರು ರೈತರ ಸಾಲಮನ್ನಾ ಮಾಡಿದ್ದಾರೆ. 2018ರಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಹಿನ್ನೆಲೆಯಲ್ಲಿ ಮನೆ ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ 1000 ಮನೆಗಳನ್ನು ನಿರ್ಮಿಸಿಕೊಟ್ಟು, ಕೊಡಗಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ, ಸ್ವಸಹಾಯ ಸಂಘದ ಸದಸ್ಯರ ಸಾಲಮನ್ನಾ, ಆಟೋಚಾಲಕರಿಗೆ 2ಸಾವಿರ ರೂ.ಗಳ ಮಾಶಾಸನ, ವೃದ್ಧಾಪ್ಯ ಹಾಗು ಅಂಗವಿಕಲರಿಗೆ 5 ಸಾವಿರ ರೂ.ಗಳ ಮಾಶಾಸನ, ಬಡ ಕುಟುಂಬಕ್ಕೆ ವಾರ್ಷಿಕ ಉಚಿತ 5 ಗ್ಯಾಸ್ ಸಿಲಿಂಡರ್ಗಳನ್ನು ವಿತರಿಸುವ ಭರವಸೆಯನ್ನು ಜೆಡಿಎಸ್ ನೀಡಿದೆ. ನುಡಿದಂತೆ ನಡೆಯುವ ಏಕೈಕ ಪಕ್ಷ ಜೆಡಿಎಸ್ ಎಂದು ಹೇಳಿದರು. ವಿರಾಜಪೇಟೆ ಕ್ಷೇತ್ರಕ್ಕೆ ಅಲ್ಪಸಂಖ್ಯಾಯತರಿಗೆ ಟಿಕೇಟ್ ನೀಡಿದ ಕೀರ್ತಿ ಜೆಡಿಎಸ್ಗೆ ಸಲ್ಲುತ್ತದೆ ಎಂದರು. ಪ್ರಾದೇಶಿಕ ಪಕ್ಷದ ಆಡಳಿತದಿಂದ ಮಾತ್ರ…






