ಸೋಮವಾರಪೇಟೆ ಏ.17 : ಹರಗ ಗ್ರಾಮದಲ್ಲಿ ಯಾವ ವ್ಯಕ್ತಿಗೂ ಬಹಿಷ್ಕಾರ ಹಾಕಿಲ್ಲ. ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಹರಗ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಎ.ಧರ್ಮಪ್ಪ ಹೇಳಿದರು. ಗ್ರಾಮ ನಿವಾಸಿಯಾಗಿರುವ ಪಿ.ಡಿ.ಗಿರೀಶ್ ಎಂಬವರು, ಗ್ರಾಮಾಭಿವೃದ್ಧಿ ಮಂಡಳಿ ವಿರುದ್ಧ ಬಹಿಷ್ಕಾರದ ದೂರು ನೀಡಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಉಪತಹಸೀಲ್ದಾರ್, ಬಿಸಿಎಂ ಅಧಿಕಾರಿ ಹಾಗು ಇನ್ನಿತರ ಅಧಿಕಾರಿಗಳು ಗ್ರಾಮಕ್ಕೆ ಬಂದು ಹೇಳಿಕೆ ಪಡೆದುಕೊಂಡು ಸಲಹೆ ನೀಡಿ ಹೋಗಿದ್ದಾರೆ ಎಂದು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಗ್ರಾಮದ ಪಿ.ಡಿ.ಗಿರೀಶ್ ಎಂಬವರು ಅರಣ್ಯ ಒತ್ತುವರಿ 6 ಎಕರೆ ಜಾಗದಲ್ಲಿ ಕಾಫಿ ತೋಟ ಮಾಡಿದ್ದರು. ಬೆಟ್ಟದಲ್ಲಿ ಯಂತ್ರದ ಮೂಲಕ ರಸ್ತೆ ಮಾಡಿದ್ದರು. ಇದನ್ನು ಗಮನಿಸಿದ ಅರಣ್ಯ ಇಲಾಖೆಯವರು ನೋಟಿಸ್ ನೀಡಿ, ಕಾಫಿ ಗಿಡಗಳನ್ನು ಕಿತ್ತು ತೆರವುಗೊಳಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ಹರಗ ಗ್ರಾಮದವರು ಹೇಳಿ ತೆರವು ಮಾಡಿಸಿದ್ದಾರೆ ಎಂದು ಗಿರೀಶ್ ಸುಳ್ಳು ಆರೋಪ ಮಾಡಿ ಕಾಗಿನೆಲೆ ಚಾಮುಂಡೇಶ್ವರಿ ದೇವಾಲಯದಿಂದ 40 ಮಂದಿಗೆ ನೋಟೀಸು ಮಾಡಿಸಿದ್ದಾರೆ. ನೋಟೀಸು ಪಡೆದ 40…
ಲೇಖಕ: admin
ನಾಪೋಕ್ಲು ಏ.17 : ನಾಪೋಕ್ಲು ಸಮೀಪದ ನೆಲಜಿ ಶ್ರೀ ಭಗವತಿ(ಪೋವದಿಯಮ್ಮೆ) ದೇವಾಲಯದ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಎತ್ತು ಪೋರಾಟ, ಆಂಗೋಲ ಪೊಂಗೋಲ ಸೇವೆ, ವಿವಿಧ ಪೂಜಾ ಕೈಂಕರ್ಯ ಮತ್ತು ದೇವರ ನೃತ್ಯ ಬಲಿ ನಡೆಯಿತು. ಶ್ರೀ ದೇವಿಯ ಸನ್ನಿಧಿಯಲ್ಲಿ ಪೀಲಿ ಆಟ್, ದೇವಿಯ ನೃತ್ಯ ಬಲಿ ಹಾಗೂ ವಿವಿಧ ಸೇವೆಗಳು ನಡೆದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನೆಲಜಿ ಶ್ರೀ ಭಗವತಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. (ವರದಿ : ದುಗ್ಗಳ ಸದಾನಂದ)
ನಾಪೋಕ್ಲು ಏ.17 : ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಅಜ್ಜಿಮುಟ್ಟ ಪಳ್ಳಿರಾಣೆ ಪ್ರದೇಶವನ್ನು ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಪಂಚಾಯ್ತಿ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನಗೊಂಡ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಕಳೆದ ಎರಡು ಮೂರು ವರ್ಷಗಳಿಂದ ಇಲ್ಲಿನ ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ನೀರಿನ ಟ್ಯಾಂಕ್ ಇದ್ದರೂ ನೀರು ಸರಬರಾಜಾಗುತ್ತಿಲ್ಲ. ಪ್ರಧಾನಮಂತ್ರಿಗಳ ಜಲಜೀವನ್ ಯೋಜನೆ ಇಲ್ಲಿ ಅನುಷ್ಠಾನಗೊಂಡಿಲ್ಲ. ಕುಡಿಯುವ ನೀರಿಗಾಗಿ ಸಮೀಪದ ಮಸೀದಿಯ ಬಳಿಯ ಕೊಳವೆಬಾವಿಯನ್ನು ಅವಲಂಬಿಸಬೇಕಾಗಿದೆ. ಹೆಚ್ಚಿನ ನೀರಿಗಾಗಿ ದೂರದ ಹೊಳೆಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರಾದ ಮoದಪಂಡ ಮೊಣ್ಣಪ್ಪ, ಇಬ್ರಾಹಿಂ ಪಿ.ಬಿ,ನಬೀಸಾ, ಫೇಮೀನಾ ಮತ್ತಿತರರು ಚುನಾವಣೆ ಬಹಿಷ್ಕರಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು. ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ನೀಡದ ಪಂಚಾಯಿತಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಹೇಳಿದರು. ಪಳ್ಳಿರಾಣೆಗೆ ತುರ್ತಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡಬೇಕು ಮತ್ತು…
ಕುಶಾಲನಗರ ಏ.17 : ಆರೋಗ್ಯಕರ ಬದುಕನ್ನು ಸಾಗಿಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಚ ಹಾಗೂ ಉತ್ತಮ ಪರಿಸರ ಅತ್ಯಗತ್ಯವಾಗಿದೆ, ಸಾರ್ವಜನಿಕ ಪ್ರದೇಶಗಳಲ್ಲಿ ಮರ ಗಿಡಗಳನ್ನು ಹೆಚ್ಚು ಹೆಚ್ಚಾಗಿ ಬೆಳೆಸುವ ಮೂಲಕ ಪ್ರಕೃತಿಯ ಆರಾಧನೆಯೊಂದಿಗೆ ಉತ್ತಮ ಪರಿಸರ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕಾವೇರಿ ನದಿ ಸ್ವಚ್ಚತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರದ ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ ವತಿಯಿಂದ ಸೀಜನ್-7 ರ ಬೇಸಿಗೆ ಶಿಬಿರದ ಅಂಗವಾಗಿ ಸ್ಥಳೀಯ ಕಾವೇರಿ ಉದ್ಯಾನವನದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿನೇ ದಿನೇ ಹೆಚ್ಚುತ್ತಿರುವ ಭೂಮಿಯ ತಾಪಮಾನವನ್ನು ಕಡಿಮೆ ಮಾಡಲು ಹಾಗೂ ಹಸಿರನ್ನು ಹೆಚ್ಚಿಸಿ ಶುದ್ಧ ಗಾಳಿಯನ್ನು ಪಡೆಯಲು ಪ್ರತಿಯೊಬ್ಬ ನಾಗರಿಕರು ಮರಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಹೇಳಿದರು. ಮಕ್ಕಳುತಮ್ಮ ಹುಟ್ಟು ಹಬ್ಬದ ಸಂದರ್ಭ ಒಂದು ಗಿಡವನ್ನು ಕಡ್ಡಾಯವಾಗಿ ನೆಟ್ಟು ಬೆಳೆಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು. ಟೀಂ ಆಟಿಟ್ಯೂಡ್ ಕಲ್ಚರಲ್ ಅಕಾಡೆಮಿಯ…
ಮಡಿಕೇರಿ ಏ.17 : ಭಾರತದ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಪೊನ್ನಂಪೇಟೆಯ ಬೆಳ್ಳೂರು ಗ್ರಾಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಮದ ಹಿರಿಯರಾದ ಮುತ್ತಣ್ಣ ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ಸಮಿತಿಯ ಪ್ರಮುಖರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲರ್ಪಣೆ ಮಾಡಿ ಗೌರವಿಸಿದರು. ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಸಂಘಟನಾ ಸಂಚಾಲಕಾರದ ಕರ್ಕು, ಧನು, ಚಂದ್ರ, ಜೌರ, ನಿತೇಶ್ , ಗ್ರಾಮ ಸಂಚಾಲಕ ಸುರೇಶ್ ಹಾಗೂ ಮತ್ತಿತರು ಹಾಜರಿದ್ದರು.
ಮಡಿಕೇರಿ ಏ.17 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಲ್ಕುನಾಡು ಮುಸ್ಲಿಂ ಒಕ್ಕೂಟದ ಪ್ರಮುಖ, ಅಲ್ಪಸಂಖ್ಯಾತ ಮುಖಂಡ ಕುಂಜಿಲದ ನಾಸರ್ ಮಕ್ಕಿ ಸೋಮವಾರ ಚುನಾವಣಾಧಿಕಾರಿ ಶಬಾನಾ ಎಂ. ಷೇಕ್ ಅವರಿಗೆ ನಾಮಪತ್ರ ಸಲ್ಲಿಸಿದರು. ವಿರಾಜಪೇಟೆ ಗಡಿಯಾರ ಕಂಬದ ಬಳಿಯಿಂದ ಬೆಂಬಲಿಗರೊoದಿಗೆ ಮೆರವಣಿಗೆಯಲ್ಲಿ ಬಂದ ನಾಸರ್ ಮಕ್ಕಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊಡಗಿನಲ್ಲಿ ಹಿಂದಿನಿoದಲೂ ರಾಜಕೀಯ ಪಕ್ಷಗಳು ಜಿಲ್ಲೆಯ ಅಲ್ಪಸಂಖ್ಯಾತರನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿಲ್ಲ ಎಂದು ಟೀಕಿಸಿದರು. ಇದೀಗ ಪರಿಸ್ಥಿತಿ ಬದಲಾಗಿದ್ದು, ಅಲ್ಪಸಂಖ್ಯಾತರು ಆಮಿಷಗಳಿಗೆ ಬಲಿಯಾಗಿ ಮತ ನೀಡುವವರಲ್ಲ ಎಂಬುವುದನ್ನು ತೋರಿಸಿಕೊಡಬೇಕಿದೆ ಎಂದರು.
ಮಡಿಕೇರಿ ಏ.17 : 2023ರ ವಿಧಾನಸಭಾ ಚುನಾವಣೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಗರ ಕಾಂಗ್ರೆಸ್ ಸಮಿತಿಯ ಚುನಾವಣಾ ಉಸ್ತುವಾರಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ. ಪ್ರಮುಖರಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಅಂಬೆಕಲ್ ನವೀನ್, ಕೆ.ಜಿ.ಪೀಟರ್, ಮಹಮ್ಮದ್ ಯಾಕುಬ್, ಹೆಚ್.ಎಸ್.ಬಸವರಾಜ್, ತಾಹಿರಾ ಅಬೂಬಕರ್, ದಿವ್ಯ, ಜಫ್ರುರುಲ್ಲಾ, ಕೆ.ಆರ್.ದಿನೇಶ್, ಟಿ.ಹೆಚ್.ಉದಯಕುಮಾರ್ ಅವರನ್ನು ಸಮಿತಿಯ ಸದಸ್ಯರುಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮೆರವಣಿಗೆ ಮೂಲಕ ಆಗಮಿಸಿದ ಹೆಚ್.ಎಂ.ಸೋಮಪ್ಪ ಅವರು ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಮಡಿಕೇರಿ ಏ.17 ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ಕೆ.ಜಿ.ಬೋಪಯ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ತಾಲ್ಲೂಕು ಬಿಜೆಪಿ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಪಟ್ರಪಂಡ ರಘು ನಾಣಯ್ಯ ಉಪಸ್ಥಿತಿಯಲ್ಲಿ ಕೆ.ಜಿ.ಬೋಪಯ್ಯ ಅವರು ಚುನಾವಣಾಧಿಕಾರಿ ಶಬಾನ ಎಂ.ಶೇಖ್ ಅವರಿಗೆ ನಾಮಪತ್ರ ಸಲ್ಲಿಸಿದರು. ::: ಬಲ ಪ್ರದರ್ಶನ ::: ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ತೆಲುಗರಬೀದಿಯಲ್ಲಿರುವ ಶ್ರೀ ದಕ್ಷಿಣಾ ಮಾರಿಯಮ್ಮ ಹಾಗೂ ಗಣಪತಿ ದೇಗುಲದಲ್ಲಿ ಕೆ.ಜಿ.ಬೋಪಯ್ಯ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿದ ಬೋಪಯ್ಯ ಪಕ್ಷದ ಬಲ ಪ್ರದರ್ಶಿಸಿದರು. ::: ಬಿಜೆಪಿ ಅಧಿಕಾರಕ್ಕೆ ::: ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಜಿ.ಬೋಪಯ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನತೆಗೆ ನೀಡಿರುವ ಜನಹಿತ ಕಾರ್ಯಗಳ ಹಿನ್ನೆಲೆ ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷ…
ಮಡಿಕೇರಿ ಏ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮಂತರ್ ಗೌಡ, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಹೆಚ್.ಎಸ್.ಚಂದ್ರಮೌಳಿ, ಲೋಕೇಶ್ ಹಾಗೂ ಡಾ.ಮಂತರ್ ಗೌಡ ಪತ್ನಿ ದಿವ್ಯ ಹಾಜರಿದ್ದರು. ::: ಮೆರವಣಿಗೆ ::: ನಾಮಪತ್ರ ಸಲ್ಲಿಕೆಗೂ ಮೊದಲು ಡಾ.ಮಂತರ್ ಗೌಡ ಅವರು ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು. ನಂತರ ನಗರದ ಶ್ರೀ ಚೌಡೇಶ್ವರಿ ದೇವಾಲಯದ ಬಳಿಯಿಂದ ಗಾಂಧಿ ಮೈದಾನದವರೆಗೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ::: ಗೆಲುವು ಖಚಿತ ::: ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಂತರ್ ಗೌಡ ಮಡಿಕೇರಿ ಕ್ಷೇತ್ರದ ಜನ ಈ ಬಾರಿ ವಿದ್ಯಾವಂತರನ್ನು ಬೆಂಬಲಿಸಲಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಮತ ಚಲಾಯಿಸಲಿದ್ದು, ನನ್ನ ಗೆಲುವು ನೂರಕ್ಕೆ ನೂರು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನನ್ನ…






