ಮಡಿಕೇರಿ ಏ.17 : ಪೊನ್ನಂಪೇಟೆಯ ಆಸ್ಟ್ರೋ ಟ್ರಾಫ್ ಮೈದಾನದಲ್ಲಿ ಹಾಕಿ ಬೇಸಿಗೆ ಶಿಬಿರ ಆರಂಭಗೊಂಡಿದ್ದು, 75ಕ್ಕೂ ಹೆಚ್ಚು ಭವಿಷ್ಯದ ಹಾಕಿ ಕ್ರೀಡಾ ಕಲಿಗಳು ಲವಲವಿಕೆಯಿಂದ ಪಾಲ್ಗೊಂಡಿದ್ದರು. ಶಿಬಿರದಲ್ಲಿ ವ್ಯಾಯಾಮ, ಪ್ರಥಮ ಹಂತದಲ್ಲಿ ಹಾಕಿ ಆಟದ ಬಗ್ಗೆ ತರಬೇತಿ ಹಾಗೂ ಎರಡು ವಿಭಾಗಗಳಲ್ಲಿ ತಂಡ ರಚಿಸಿ ಹಾಕಿ ತರಬೇತಿ ನೀಡಿದ್ದಾರೆ. ಡಿ ವೈ ಎಸ್ ಎಸ್ ನ ತರಬೇತಿದಾರರಾದ ಕುಪ್ಪಂಡ ಸುಬ್ಬಯ್ಯ ಅವರ ಮುಂದಾಳತ್ವದಲ್ಲಿ, ಮುಕಳಮಾಡ ಗಣಪತಿ, ಕೆಲೋ ಇಂಡಿಯಾ ಸೆಂಟ್ರಿನ ತರಬೇತಿದಾರ ಸೌಮ್ಯ, ಮತ್ತು ಮಂಗಳೂರು ವಿಶ್ವವಿದ್ಯಾಲಯದ ಹಾಕಿ ಕ್ರೀಡಾಪಟು ಹಾಗು ಕಾವೇರಿ ಕಾಲೇಜಿನ ದೈಹಿಕ ಶಿಕ್ಷಕ ಕೆ.ತಮ್ಮಯ್ಯ ತರಬೇತಿಯನ್ನು ನೀಡುತ್ತಿದ್ದಾರೆ. ಏ.21 ರವರೆಗೆ ಈ ತರಬೇತಿ ಶಿಬಿರ ನಡೆಯಲಿದ್ದು, ಒಂದೆರಡು ದಿನಗಳು ಮುಂದೂಡುವ ಸಾಧ್ಯತೆ ಇದೆ ಎಂದು ತರಬೇತಿದಾರ ಸುಬ್ಬಯ್ಯ ಹೇಳಿದ್ದಾರೆ. ಬೆಳಿಗ್ಗೆ ಶಿಬಿರಾರ್ಥಿಗಳಿಗೆ ಪೌಷ್ಟಿಕ ಆಹಾರವನ್ನು ಕೂಡ ನೀಡುತ್ತಿದ್ದಾರೆ. ಮುಂಜಾನೆ ಈ ಮೈದಾನಕ್ಕೆ ಶಿಬಿರಾರ್ಥಿಗಳು ತಮ್ಮ ಪೋಷಕರೊಂದಿಗೆ ಆಗಮಿಸಿ ಶಿಬಿರದಲ್ಲಿ ಲವಲವಿಕೆಯಿಂದ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.
ಲೇಖಕ: admin
ಮಡಿಕೇರಿ ಏ.17 : ಪೊನ್ನಂಪೇಟೆಯ ಭಾರತೀಯ ಜನತಾ ಪಕ್ಷದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಿದರು. ನಂತರ ಕೊಡವ ಸಮಾಜದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಮಾಚಿಮಾಡ ರವೀಂದ್ರ, ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ, ಮುಕುಳಿಯರ ಮಧುಕುಮಾರ್ ಹಾಗೂ ಕೋಟೆರ ಕಿಶನ್, ಗ್ರಾ.ಪಂ ಅಧ್ಯಕ್ಷ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷ ದಶಮಿ ಉಪಸ್ಥಿತರಿದ್ದರು. ಇದೇ ಸಂದರ್ಭ ಹಲವರು ಬಿಜೆಪಿಗೆ ಸೇರ್ಪಡೆಗೊಂಡರು. ಪೊನ್ನಂಪೇಟೆಯ ಜೆ. ಡಿ.ಎಸ್ ಪಕ್ಷದ ಹಿರಿಯ ಮುಖಂಡ ಬಲ್ಸೇರಾ ಕಾಂತರಾಜ್ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ಬೆಂಗಳೂರು ಏ.17 : ಬಿಜೆಪಿಯ ಮಾಜಿ ನಾಯಕ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರವಾನಿಸಿದ್ದ ಶೆಟ್ಟರ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಸೇರ್ಪಡೆಯಾದರು.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಏ.16 : ರಾಷ್ಟ್ರದ ಪ್ರಗತಿಯಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದು ಮತ್ತು ಜವಾಬ್ದಾರಿಯುತವಾದುದು ಎಂದು ವಕೀಲರಾದ ಡಾ.ಯಾಲದಾಳು ಮನೋಜ್ ಬೋಪಯ್ಯ ಅಭಿಪ್ರಾಯಪಟ್ಟರು. ನಗರದ ಪತ್ರಿಕಾಭವನದಲ್ಲಿಂದು ಕೊಡಗು ಪತ್ರಕರ್ತರ ಸಂಘದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಒಳಾಂಗಣ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 4ನೇ ಅಂಗವಾಗಿ ಪರಿಗಣಿತವಾಗಿರುವ ಮಾಧ್ಯಮ ಕ್ಷೇತ್ರ ಸಮಾಜದ ಭಾವನೆಗಳಿಗೆ ಸದಾ ಸ್ಪಂದಿಸುವ ಅತ್ಯಂತ ಸೂಕ್ಷ್ಮವಾದ ಕ್ಷೇತ್ರವೆಂದರು. ರಾಷ್ಟçವನ್ನು ಕಟ್ಟುವ ಮತ್ತು ಬೆಳೆೆಸುವ ಮಹತ್ತರ ಜವಾಬ್ದಾರಿ ಮಾಧ್ಯಮ ಕ್ಷೇತ್ರದ ಮೇಲಿದೆಯೆಂದು ತಿಳಿಸಿದ ಅವರು, ಕೊಡಗಿನ ಮಾಧ್ಯಮಗಳು ಅತ್ಯಂತ ಪ್ರಾಮಾಣಿಕವಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆಯೆಂದು ಮೆಚ್ಚುಗೆಯ ನುಡಿಗಳನ್ನಾಡಿದರು. ಪತ್ರಕರ್ತರು ತಮ್ಮ ದೈನಂದಿನ ಬಿಡುವಿಲ್ಲದ ಕೆಲಸ ಕಾರ್ಯಗಳ ಒತ್ತಡಗಳಿಂದ ಮುಕ್ತರಾಗಿ ಮತ್ತೆ ಉತ್ಸಾಹ ಮತ್ತು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಲು ಕ್ರೀಡಾ ಚಟುವಟಿಕೆಗಳು ಸಹಾಯಕವಾಗಿದೆಯೆಂದು ಡಾ. ಮನೋಜ್ ಬೋಪಯ್ಯ ಹೇಳಿದರು. ಪತ್ರಕರ್ತರು ತಮ್ಮ ವೃತ್ತಿ ಧರ್ಮವನ್ನು ಕಾಪಾಡಿಕೊಳ್ಳುವ ಮೂಲಕ ಪತ್ರಿಕೋದ್ಯಮಕ್ಕೆ ಗೌರವ, ಘನತೆಯನ್ನು ತರಬೇಕು ಎಂದು ಕಿವಿ ಮಾತು…
ಮಡಿಕೇರಿ ಏ.16 : ಗುಂಡೇಟಿನಿಂದ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ವಿರಾಜಪೇಟೆ ಸಮೀಪದ ತೋರ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಬೈಮನ ನಾಣಿ ಎಂಬುವವರ ಪುತ್ರ ಬಿ.ಎಂ.ಮಧು (44) ಮೃತ ವ್ಯಕ್ತಿ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಡಿಕೇರಿ ಏ.16 : ಮಾದಕ ವಸ್ತುಗಳಾದ ಚರಸ್ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ವಿರಾಜಪೇಟೆ ಅಬಕಾರಿ ಇಲಾಖೆ ಸಿಬ್ಬಂದಿಗಳು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಾರ್ಮಾಡು ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಕಾರೊಂದನ್ನು ತಪಾಸಣೆ ನಡೆಸಿದಾಗ ಮಾದಕ ವಸ್ತುಗಳು ಪತ್ತೆಯಾಗಿದೆ. ಅಲ್ಲದೆ ಗಾಂಜಾ ಸೇವನೆ ಮಾಡಿರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು 10 ಗ್ರಾಂ ಚರಸ್, 35 ಗ್ರಾಂ ಗಾಂಜಾ, ಕಾರು ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಆರೋಪಿಗಳಾದ ತಮಪ್ಪ ಸರ್ಕಾರ್, ಬೀಬವ್, ದೇವಾಂಸ್ ಶರ್ಮಾ ಹಾಗೂ ಆದಿತ್ಯ ಕುಮಾರ್ ಅವರುಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿರಾಜಪೇಟೆ ಉಪ ವಿಭಾಗ ಕಛೇರಿಯ ಅಬಕಾರಿ ಉಪ ಅಧೀಕ್ಷಕ ಎಂ.ಎನ್.ನಟರಾಜು, ಸಿಬ್ಬಂದಿಗಳಾದ ಎನ್.ಜಿ.ಮದನ್ ಕುಮಾರ್, ಸಂತೋಷ್, ಚಾಲಕ ದರ್ಶನ್ ಪೊಲೀಸ್ ಸಿಬ್ಬಂದಿ ಸಂತೋಷ್ ಕುಮಾರ್, ಅರಣ್ಯ ಇಲಾಖಾ ಸಿಬ್ಬಂದಿ ಉದಯಕುಮಾರ್ ಮತ್ತಿತರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಏ.16 : ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯ ವತಿಯಿಂದ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ನಗರದ ರಾಜಾಸೀಟ್ ನಲ್ಲಿ ಶನಿವಾರ ಆಯೋಜಿಸಲ್ಪಟ್ಟಿದ್ದ ಕೊಡಗು ಮತ್ತು ಮತದಾನ ವಿಷಯ ಸಂಬಂಧಿತ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯಾದ್ಯಂತಲಿನ ವಿದ್ಯಾರ್ಥಿಗಳಲ್ಲದೇ ಹೊರಜಿಲ್ಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮತದಾನದ ಮಹತ್ವದ ಕುರಿತಂತೆ ವಿದ್ಯಾರ್ಥಿಗಳಲ್ಲಿನ ಆಸಕ್ತಿ, ತಿಳುವಳಿಕೆ ಬಗ್ಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರ : 14 ವರ್ಷದೊಳಗಿನ ವಿಭಾಗ -ಹರ್ಷಿತ ಪೊನ್ನಪ್ಪ ಸಂತಜೋಸೇಫರ ಶಾಲೆ ಮಡಿಕೇರಿ (ಪ್ರಥಮ), ಧ್ರುವನಂಜಪ್ಪ, ಜನರಲ್ ತಿಮ್ಮಯ್ಯ ಶಾಲೆ ಮಡಿಕೇರಿ (ದ್ವಿತೀಯ) , ಧೃತಿ ಕೆ.ಯು. ಸಂತಜೊಸೇಫರ ಶಾಲೆ. ಮಡಿಕೇರಿ (ತೃತೀಯ) ವಿಸ್ಮಯಿ ಎಂ. ಮೊರಾರ್ಜಿ ದೇಸಾಯಿ ವಸತಿಶಾಲೆ, ಕೂಡಿಗೆ ( ಸಮಧಾನಕರ) 14 ರಿಂದ 18 ವರ್ಷದೊಳಗಿನ ವಿಭಾಗ – ಮೋಕ್ಷಾ ಎ.ಕೆ. ಕಾವೇರಿ ವಿದ್ಯಾಸಂಸ್ಥೆ. ವಿರಾಜಪೇಟೆ (ಪ್ರಥಮ) ತಶ್ಮಿಕಾ ಕೆ.ಎಂ. ಸರ್ಕಾರಿ ಪ್ರೌಢಶಾಲೆ ಮೂರ್ನಾಡು (ದ್ವಿತೀಯ), ಮೋಕ್ಷಿತಾ ಕೆ.ಜೆ.…
ಮಡಿಕೇರಿ ಏ.16 : ಮತದಾನದ ಮಹತ್ವ ಮತ್ತು ಮತದಾನ ಮಾಡಿ ಎಂಬ ಜಾಗೃತಿ ಸಂದೇಶದ ಬೈಕ್ ಜಾಥಾ ಮಡಿಕೇರಿಯಲ್ಲಿ ಜನಮನ ಸೆಳೆಯಿತು. ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿಯ ವತಿಯಿಂದ (ಸ್ವೀಪ್) ಮತ್ತು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ಬೈಕ್ ಜಾಥಾಕ್ಕೆ ನಗರದ ಬನ್ನಿಮಂಟಪದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹಸಿರುನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಸತೀಶ್ ಅವರ ಪತ್ನಿ ರೂಪಶ್ರೀ ಅವರೊಂದಿಗೆ ಬೈಕ್ ಜಾಥಾದಲ್ಲಿ ಪಾಲ್ಗೊಂಡರೆ, ಜಿ.ಪಂ.ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಬುಲೆಟ್ ಬೈಕ್ ನಲ್ಲಿ ಬಂದು ಗಮನ ಸೆಳೆದರು. ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತಕ್ಕಾಗಿ ಸಾಗಿದ ಬೈಕ್ ಜಾಥಾ ರಾಜಾಸೀಟು ಉದ್ಯಾನವನದಲ್ಲಿ ಕೊನೆಗೊಂಡಿತು. ರಾಜಾಸೀಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಮತದಾನ ಪ್ರತಿಯೊಬ್ಬರ ಹಕ್ಕಾಗಿದೆ. ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಲು…
ಮಡಿಕೇರಿ ಏ.16 : ವಿಧಾನಸಭಾ ಚುನಾವಣೆ ಸಂಬoಧ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ವ್ಯವಸ್ಥಿತವಾಗಿ ಚುನಾವಣಾ ಕಾರ್ಯ ನಿರ್ವಹಿಸುವಂತೆ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ. ನಗರದ ಸಂತ ಜೋಸೆಫರ ಕಾಲೇಜಿನಲ್ಲಿ ಪಿಆರ್ಒ ಮತ್ತು ಎಪಿಆರ್ಗಳಿಗೆ ಭಾನುವಾರ ನಡೆದ ಚುನಾವಣಾ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಜಿಲ್ಲಾಧಿಕಾರಿ ಅವರು ಮಾತನಾಡಿದರು. ಚುನಾವಣಾ ಕಾರ್ಯವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು. ಯಾವುದೇ ರೀತಿಯ ಆತಂಕ ಅಥವಾ ಭಯ ಪಡಬಾರದು, ಚುನಾವಣಾ ಆಯೋಗದ ನಿರ್ದೇಶನದಂತೆ ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್ ಮತ್ತಿತರ ಬಗ್ಗೆ ಮಾಹಿತಿ ಪಡೆದು ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಜಿಲ್ಲೆಯಲ್ಲಿ ಒಟ್ಟು 542 ಮತಗಟ್ಟೆಗಳಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 269 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, ಮತಗಟ್ಟೆಗಳಿಗೆ ನಿಯೋಜಿಸುವ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಲಾಗುತ್ತಿದೆ ಎಂದರು. ಚುನಾವಣೆಗೆ ನಿಯೋಜಿಸಿರುವ…
ಮಡಿಕೇರಿ ಏ.16 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಆಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಇಂದು “ಬಿ” ಫಾರಂ ಪಡೆದುಕೊಂಡಿರುವ ಮನ್ಸೂರ್ ಆಲಿ ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿರುವ ಜನ ಈ ಬಾರಿ ಜೆಡಿಎಸ್ ನ್ನು ಬೆಂಬಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.






