ಮಡಿಕೇರಿ ಏ.16 : ಪಕ್ಷೇತರ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗರಗಂದೂರು ಗ್ರಾಮದ ಜಿ.ಜಿ.ಹೇಮಂತ್ ಕುಮಾರ್ ಅವರು ಏ.17 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೆಂಬಲಿಗರೊoದಿಗೆ ಮೆರವಣಿಗೆಯಲ್ಲಿ ಸಾಗಿ 11 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಕಳೆದ 30 ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಪಕ್ಷದ ಬೆಳವಣಿಗೆಗಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ. ಮಡಿಕೇರಿ ಕ್ಷೇತ್ರದಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಬೆಂಬಲಿಗರು ನೀಡಿದ ಸಲಹೆ ಹಿನ್ನೆಲೆ ಬಂಡಾಯವಾಗಿ ಕಣಕ್ಕಿಳಿಯುತ್ತಿರುವುದಾಗಿ ಹೇಮಂತ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಲೇಖಕ: admin
ಚೆಟ್ಟಳ್ಳಿ ಏ.15 : ಚೆಟ್ಟಳ್ಳಿಯ ಶ್ರೀಮಂಗಲ (ಪೊವ್ವೊದಿ ) ಭಗವತಿ ಉತ್ಸವವು ಎರಡು ದಿನಗಳ ಕಾಲ ಶ್ರದ್ದಾಭಕ್ತಿಯಿಂದ ನೆರವೇರಿತು. ಶುಕ್ರವಾರದಂದು ನಡೆದ ಪಟ್ಟಣಿ ಹಬ್ಬದಂದು ಊರಿನವರ ಸಮ್ಮುಖದಲ್ಲಿ ದುಡಿಕೊಟ್ಟು ಹಾಡಿನೊಂದಿಗೆ ದೇವಾಲಯ ತಕ್ಕರಾದ ಮುಳ್ಳಂಡ ಐನ್ ಮನೆಯಿಂದ ಎತ್ತುಪೋರಾಟದೊಂದಿಗೆ ದೇವರ ಭಂಡಾರವನ್ನು ತರಲಾಯಿತು. ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶನಿವಾರ ದೊಡ್ದಹಬ್ಬವಾಗಿದ್ದು ದೇವರ ಭಂಡಾರವನ್ನು ದೇವಾಲಯಕ್ಕೆ ತರುವುದು ವಿಶೇಷ ಪೂಜೆ, ತೆಂಗಿಕಾಯಿ ಎಳೆಯುವುದು, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಿತು. ಬೊಳಕ್ ಮರವನ್ನು ತೆಗೆದು ದೇವಾಲಯದ ಗರ್ಭಗುಡಿಯೊಳಗೆ ಇಡಲಾಯಿತು. ನಂತರ ದೇವರ ನೆಲೆಯಲ್ಲಿ ಭಕ್ತಾದಿಗಳು ಹರಕೆ ಕಾಣಿಕೆ ಒಪ್ಪಸಿದರು. ಪ್ರಸಾದ ವಿತರಣೆ ನಡೆಯಿತು. ಏ.16 ರ ಭಾನುವಾರ ಪೂರ್ವಾಹ್ನ 7 ಗಂಟೆಗೆ ದೇವಾಲಯದಲ್ಲಿ ಶುದ್ಧ ಕಳಸ ಪೂಜೆ ನೆವೇರಿಸಿ ದೇವರ ಭಂಡಾರವನ್ನು ತಕ್ಕರಾದ ಮುಳ್ಳಂಡ ಐನ್ ಮನೆಯಲ್ಲಿ ಒಪ್ಪಿಸಲಾಗುವುದು ಎಂದು ದೇವಾಲಯದ ಪ್ರಮುಖರು ತಿಳಿಸಿದ್ದಾರೆ.
ಮಡಿಕೇರಿ ಏ.15 : ಕೊಡವ ಹೊಸ ವರ್ಷಾಚರಣೆ ಎಡ್ಮ್ಯಾರ್ ಒಂದ್ ರ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬೆಟ್ಟತ್ತೂರು ಗ್ರಾಮದ ಕೂಪದಿರ ಮೋಹನ್ ಅವರ ಗದ್ದೆಯಲ್ಲಿ ಉಳುಮೆ ಕಾರ್ಯ ಮಾಡಿ ಭೂದೇವಿಗೆ ನಮಿಸಿತು. ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆ ಆವರಣದಲ್ಲಿ ಹತ್ಯೆಗೀಡಾದ ಕೊಡವರ ಪರವಾಗಿ ಪ್ರಾರ್ಥಿಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಎತ್ತುಗಳ ಸಹಾಯದಿಂದ ಗದ್ದೆಯನ್ನು ಸಾಂಪ್ರದಾಯಿಕವಾಗಿ ಉಳುಮೆ ಮಾಡಿದರು. ಕೊಡವ ಸಾಂಪ್ರದಾಯಿಕ ಆಚರಣೆಗಳು ಭೂತಾಯಿಯ ಮಣ್ಣಿನೊಂದಿಗೆ ಕೊಡವ ಬುಡಕಟ್ಟಿನ ಅವಿನಾಭಾವ ಬಂಧವನ್ನು ಪ್ರದರ್ಶಿಸುತ್ತದೆ ಎಂದು ಅವರು ಇದೇ ಸಂದರ್ಭ ಅಭಿಪ್ರಾಯಪಟ್ಟರು. ಬುಡಕಟ್ಟು ಜನಾಂಗವಾಗಿರುವ ಕೊಡವರ ಮೂಲ ಸಂಸ್ಕೃತಿಯನ್ನು ಸಂರಕ್ಷಿಸಲು ಈ ರೀತಿಯ ಆಚರಣೆಗಳು ಸಾರ್ವಜನಿಕವಾಗಿ ನಡೆಯಬೇಕು. ಕೊಡವ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಸಿಎನ್ಸಿ ಮಾಡುತ್ತಿದೆ ಎಂದರು. ಕೂಪದಿರ ಮೋಹನ್, ಕೂಪದಿರ ಗಂಗಮ್ಮ, ಕೂಪದಿರ ತಂಗಮ್ಮ, ಕೂಪದಿರ ಕಾವೇರಮ್ಮ, ಕೂಪದಿರ ರೋಶನ್, ಕೂಪದಿರ ಎನ್.ದಿಲೀಪ್, ಕೂಪದಿರ…
ಮಡಿಕೇರಿ ಏ.15 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವ ಹೊಸ ವರ್ಷಾಚರಣೆ ಎಡ್ಮ್ಯಾರ್ ಒಂದ್ ರ ಪ್ರಯುಕ್ತ ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ ಹೊಸ ವರ್ಷವನ್ನು ಕಳೆದ 28 ವರ್ಷಗಳಿಂದ ಸಿಎನ್ಸಿ ಸಂಘಟನೆ ಸಾರ್ವಜನಿಕ ಕಾರ್ಯಕ್ರಮವಾಗಿ ನಡೆಸಿಕೊಂಡು ಬರುತ್ತಿದೆ. ಇದು 29 ನೇ ಆಚರಣೆಯಾಗಿದ್ದು, ಕೊಡವ ಬುಡಕಟ್ಟು ಜನಾಂಗದ ಪರವಾದ ಹಕ್ಕೊತ್ತಾಯಗಳನ್ನು ಮಂಡಿಸಲಾಗಿದೆ ಎಂದರು. ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಕೊಡವರಿಗೆ ತಮ್ಮದೇ ಆದ ಪ್ರಾಚೀನ ಆಚಾರ, ವಿಚಾರ, ಸಂಸ್ಕೃತಿಯ ಆಚರಣೆಗಳಿದ್ದು, ಇದನ್ನು ಆಡಳಿತ ವ್ಯವಸ್ಥೆಗಳು ಗೌರವಿಸಬೇಕು. ಆ ಮೂಲಕ ಸಣ್ಣ ಸಮುದಾಯದ ಸಂಪ್ರದಾಯವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು. ಇಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಜಯಂತಿಯಾಗಿರುವ ಹಿನ್ನೆಲೆ ಅವರನ್ನು ಕೂಡ ಸ್ಮರಿಸಿಕೊಳ್ಳಬೇಕಾಗಿದೆ. ಅಂಬೇಡ್ಕರ್ ಅವರು ಜಾತಿ, ಮತ, ಧರ್ಮ, ಜನಾಂಗ ಭೇದವನ್ನು ಲೆಕ್ಕಿಸದೆ ಎಲ್ಲಾ ಜನರ ಯೋಗಕ್ಷೇಮಕ್ಕಾಗಿ ಶ್ರೇಷ್ಠ ಸಂವಿಧಾನವನ್ನು ರಚಿಸಿದರು. ಇದು ನಮಗೆ ಧರ್ಮಗ್ರ್ರಂಥವಿದ್ದಂತೆ. ಮಹಾತ್ಮ ಗಾಂಧಿ ಅವರು…
ಮಡಿಕೇರಿ ಏ.15 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಹೆಚ್.ಎಂ.ಸೋಮಪ್ಪ ಅವರು ಏ.17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು ಕಡು ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲಾ ಸಮುದಾಯದ ಮಂದಿ ಜನಸಾಮಾನ್ಯ ಅಭ್ಯರ್ಥಿಯಾಗಿರುವ ನನಗೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಮತ್ತು ಕೇಂದ್ರದ ಶಾಸನ ಸಭೆಗಳಿಗೆ ಆಯ್ಕೆಯಾಗುತ್ತಿರುವವರು ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇಂತಹ ಸಂದಿಗ್ಧ ಕಾಲಘಟ್ಟದಲ್ಲಿ ಜನಪರ ಹೋರಾಟದ ಭಾಗವಾಗಿ ಈ ಬಾರಿ ಸಿಪಿಐ ಸ್ಪರ್ಧೆಗಿಳಿದಿದೆ ಎಂದರು. ಪಕ್ಷದಿಂದ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾದ ಹೋರಾಟಗಳನ್ನು ನಡೆಸಿಕೊಂಡು ಬರಲಾಗಿದೆ. ಸೂರಿಲ್ಲದವರಿಗಾಗಿ ಸೂರು ಒದಗಿಸುವ ನಿಟ್ಟಿನಲ್ಲಿ ‘ಸೂರಿಗಾಗಿ ಸಮರ’ ಎನ್ನುವ ಆಂದೋಲವನ್ನು ಪಕ್ಷ ರೂಪಿಸಿತ್ತು. ಜಿಲ್ಲೆಯಲ್ಲಿನ ವನ್ಯಜೀವಿ- ಮಾನವ ಸಂಘರ್ಷ, ದುಡಿಯುವ ವರ್ಗದ ಶೋಷಣೆ, ರೈತ ಸಮೂಹಕ್ಕೆ ನಡೆಯುತ್ತಿರುವ ಅನ್ಯಾಯ, ಕಾರ್ಮಿಕ ಸಮೂಹದ ಮೂಲಭೂತ ಬೇಡಿಕೆಗಳಿಗೆ ಸೂಕ್ತ ಸ್ಪಂದನ ದೊರಕಬೇಕಾಗಿದೆ.…
ಮಡಿಕೇರಿ ಏ.15 : ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಚಿತ್ರಸಂತೆಯಂಥ ಕಲಾಪ್ರಕಾರ ಆಯೋಜಿಸಲು ಸೂಕ್ತ ತಾಣವಾಗಿದ್ದು, ಮುಂದಿನ ದಿನಗಳಲ್ಲಿ ವಿನೂತನವಾದ ಚಿತ್ರಸಂತೆಯನ್ನು ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ನಗರದ ರಾಜಾಸೀಟು ಉದ್ಯಾನವನದಲ್ಲಿ ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಶನಿವಾರ ಆಯೋಜಿತವಾಗಿದ್ದ ‘ಕೊಡಗು ಮತ್ತು ಮತದಾನ’ ಚಿತ್ರಕಲಾ ಸ್ಪರ್ಧೆ ಮತ್ತು ನಾನು ಮತ ಹಾಕುವೆ ಎಂಬ ಬೃಹತ್ ಕ್ಯಾನ್ವಸ್ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವೀಪ್ ಸಮಿತಿ ವತಿಯಿಂದ ನಾನಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದೆ. ಮತದಾನದ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಮಾಡುವ ಹೊಣೆಗಾರಿಕೆ ಸಮಿತಿ ಮೇಲಿದೆ. ಈ ನಿಟ್ಟಿನಲ್ಲಿ ಮತದಾನದ ಮಹತ್ವ ಸಾರುವ ಚಿತ್ರಕಲಾ ಸ್ಪರ್ಧೆಯನ್ನೂ ಮಡಿಕೇರಿ ತಾಲೂಕು ಜಾನಪದ ಪರಿಷತ್ ಸಹಯೋಗದಲ್ಲಿ ಆಯೋಜಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ದೊರಕಿರುವುದು ಹರ್ಷ ತಂದಿದೆ ಎಂದರು. ಭಾನುವಾರ ಮಡಿಕೇರಿಯಲ್ಲಿ ಮತದಾನ ಮಹತ್ವ ಸಾರುವ ಬೈಕ್…
ಮಡಿಕೇರಿ ಏ.15 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಮೂದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ಕಾಮತ್ ಮತ್ತು ಸಹ-ಪ್ರಾಧ್ಯಾಪಕರಾದ ಡಾ.ಶರವಣನ್ ಅವರು ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ವತಿಯಿಂದ ನೀಡಲ್ಪಡುವ ಡಾ.ಬಿ.ಎನ್.ರಾಯ್ ಅತ್ಯುತ್ತಮ ಸಂಶೋಧನ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಉಡುಪಿ ಜಿಲ್ಲೆಯ ಪಡುಬಿದ್ರೆಯ ಉಷ್ಣ ವಿದ್ಯುತ್ ಸ್ಥಾವರದಿಂದ ಜನರ ಆರೋಗ್ಯ ಹಾಗೂ ಪರಿಸರದ ಮೇಲಿನ ಪರಿಣಾಮಗಳ ಕುರಿತ ಸಂಶೋಧನೆಗೆ ಈ ಪ್ರಶಸ್ತಿ ಲಭಿಸಿದೆ. ಕೋಲ್ಕತದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ.ಸಿ.ವಿ.ಆನಂದ್ ಭೋಸ್ ಅವರಿಂದ ಡಾ.ರಾಮಚಂದ್ರ ಕಾಮತ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸಂಘಮಿತ್ರ ಘೋಷ್ ಅವರು ಉಪಸ್ಥಿತರಿದ್ದರು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಏ.15 : ನಗರದ ಸಂಪಿಗೆಕಟ್ಟೆಯ ನಿವಾಸಿ, ಸಮಾಜ ಸೇವಕ ಎಂ.ಖಲೀಲ್ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಏ.18 ರಂದು ಮಡಿಕೇರಿಯಲ್ಲಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿರುವ ಅವರು, ತಾನು ನಿರಂತರವಾಗಿ ಸಮಾನ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಜನರದ ನೋವಿಗೆ ಸ್ಪಂದಿಸುತ್ತಿದ್ದೇನೆ. ಈ ಹಿಂದೆಯೂ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ರಾಜಕೀಯ ಪಕ್ಷಗಳಿಂದ ಬೇಸತ್ತಿರುವ ಮಡಿಕೇರಿ ಕ್ಷೇತ್ರದ ಜನ ಈ ಬಾರಿ ಬದಲಾವಣೆಯನ್ನು ಬಯಸುತ್ತಿದ್ದು, ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು. ಭ್ರಷ್ಟಾಚಾರ ಮುಕ್ತ ಆಡಳಿತ, ಸರ್ವಋತು ರಸ್ತೆ ನಿರ್ಮಾಣ, ರೈತಾಪಿ ವರ್ಗದ ಸಮಸ್ಯೆಗಳಿಗೆ ಸ್ಪಂದನೆ, ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿ, ಉನ್ನತ ಶಿಕ್ಷಣಕ್ಕೆ ಆದ್ಯತೆ, ಕ್ರೀಡಾಂಗಣಗಳ ಅಭಿವೃದ್ಧಿಗೆ ಕ್ರಮ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ, ಪ್ರವಾಸಿತಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೈಟೆಕ್ ಗೊಳಿಸುವುದು, ನಿವೇಶನ ರಹಿತ ಬಡವರು ಹಾಗೂ ಕಾರ್ಮಿಕರಿಗೆ ವಸತಿ ಯೋಜನೆಯಡಿ ಸೂರು ಕಲ್ಪಿಸುವುದು, ಸರ್ಕಾರದ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು…
ಸುಂಟಿಕೊಪ್ಪ ಏ.15: ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವಕ್ಕೆ ದೇವಾಲಯ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಸ್ಥಳೀಯ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ 55ನೇ ವರ್ಷದ ತೆರೆ ಮಹೋತ್ಸವದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ವಿದ್ಯುತ್ ದೀಪ ಹೂ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಸ್ಥಾನದ ಆರ್ಚಕ ಮಂಜುನಾಥ ಉಡುಪ ಹಾಗೂ ಮುತ್ತಪ್ಪ ದೇವಸ್ಥಾನ ಪೂಜಾರಿ ಶಿವರಾಂ ಗಣಪತಿ ಹವನ, ಶುದ್ಧಿ ಪುಣ್ಯಾಹ, ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಸಂಜೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ಶ್ರೀಮುತ್ತಪ್ಪ ವೆಳ್ಳಾಟಂ, ಚಂಡೆಮೇಳ ನಡೆಯಿತು. ಈ ಸಂದರ್ಭ ದೇವಸ್ಥಾನ ಸಮಿತಿ ಕಾರ್ಯದರ್ಶಿ ಶಶಿಕಾಂತರೈ, ಖಜಾಂಜಿ ಎಸ್.ಜಿ.ಶ್ರೀನಿವಾಸ್, ಕೆ.ಪಿ.ಜಗನ್ನಾಥ್, ಎ.ಶ್ರೀಧರ್ ಕುಮಾರ್, ಸುರೇಶ್ ಗೋಪಿ, ಎ.ಶ್ರೀಧರನ್, ಧನುಕಾವೇರಪ್ಪ, ಫೃಥ್ವಿರಾಜ್, ಸುರೇಶ್ ಚಂದು, ದಿನು ದೇವಯ್ಯ, ರಮೇಶ್ ಪಿಳ್ಳೆ, ವಿ.ಎ.ಸಂತೋಷ್ ಕುಮಾರ್, ವಿನೋದ್, ದೇವಸ್ಥಾನ ಅರ್ಚಕರಾದ…
ಮಡಿಕೇರಿ ಏ.15 : ವಿವಾಹವಾದ ಮೂರೇ ದಿನದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಬ್ಬಾಲೆ ಗ್ರಾಮದ 6ನೇ ಹೊಸಕೋಟೆಯ ದಲಿತ ಯುವತಿಯ ಕುಟುಂಬಕ್ಕೆ ಅಧಿಕಾರಿಗಳು ಸರ್ಕಾರದ ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಎಸ್.ಆರ್.ಮಂಜುನಾಥ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ವರ್ಗ ದೌರ್ಜನ್ಯ ಕಾಯ್ದೆಯಡಿ ಮೃತ ಯುವತಿಯ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಬೇಕಾಗಿದ್ದ ಪರಿಹಾರ ಇಲ್ಲಿಯವರೆಗೆ ನೀಡಿಲ್ಲವೆಂದು ಆರೋಪಿಸಿದರು. ಈಗಾಗಲೇ ಹಲವು ಬಾರಿ ಸಾಮಾಜ ಕಲ್ಯಾಣ ಇಲಾಖೆಗೆ ಈ ಬಗ್ಗೆ ಮನವಿ ಸಲ್ಲಿಸಲಾಗಿದೆ. ಆದರೆ ಅಧಿಕಾರಿಗಳು ಪರಿಹಾರ ನೀಡದೆ ಮೀನಾಮೇಷ ಎಣಿಸುತ್ತಿದ್ದಾರೆ. ಯಾರದ್ದೋ ಒತ್ತಡಕ್ಕೆ ಮಣಿದಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದೆ, ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವ ಮೂಲಕ ಅಮಾಯಕ ಯುವತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ::: ಮತ್ತೊಂದು ಪ್ರಕರಣ ::: ಸೋಮವಾರಪೇಟೆ ತಾಲ್ಲೂಕಿನ ಬಾಣವಾರ ಗ್ರಾಮದ ಆಟೋ ಚಾಲಕ…






