ಮಡಿಕೇರಿ ಏ.15 : ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ತೀವ್ರ ಅಸಮಾಧಾನಕ್ಕೆ ಒಳಗಾಗಿ ‘ಪಕ್ಷೇತರ’ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರ ತಳೆದಿದ್ದ ಹರಪ್ಪಳ್ಳಿ ರವೀಂದ್ರ, ಕಾಂಗ್ರೆಸ್ ವರಿಷ್ಠರ ಮನವೊಲಿಕೆಯ ಬಳಿಕ ತಮ್ಮ ನಿಲುವನ್ನು ಬದಲಿಸಿಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಪ್ಪಳ್ಳಿ ರವೀಂದ್ರ ಅವರು, ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರನಾಗಿ ಸ್ಪರ್ಧಿಸಲು ಮುಂದಾಗಿದ್ದೆ. ಆದರೆ ಇದೀಗ ಕೆಪಿಸಿಸಿ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತನ್ನೊಂದಿಗೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ಅಗತ್ಯ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ ನಿರಾಸೆ ಇದ್ದರೂ, ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವಿಗೆ ಶ್ರಮಿಸುತ್ತೇನೆ, ಅವರೊಂದಿಗೆ ಚುನಾವಣಾ ಪ್ರಚಾರಕ್ಕೂ ತೆರಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಚಿಂತನೆಗಳಡಿ ತಾನು ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೆ. ತನ್ನ ಚಿಂತನೆಯಂತೆ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ತಾಲ್ಲೂಕುವಾರು ಸುಸಜ್ಜಿತ ಆರೋಗ್ಯ ಕೇಂದ್ರ, ಪ್ರವಾಸೋದ್ಯಮದ ಅಭಿವೃದ್ಧಿ, ಜಿಲ್ಲೆಯ…
ಲೇಖಕ: admin
ಮಡಿಕೇರಿ ಏ.15 : ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಎ.ಎಸ್ ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರ ಬಿ ಫಾರ್ಮ್ ಅನ್ನು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಭ್ಯರ್ಥಿಗಳ ಪರವಾಗಿ ಇಂದು ಕೆಪಿಸಿಸಿ ಅಧ್ಯಕ್ಷರ ಬಳಿಯಿಂದ ಪಡೆದುಕೊಂಡರು. ಈ ಸಂದರ್ಭ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಮುಖ ಹರಪಳ್ಳಿ ರವೀಂದ್ರ ರಾಜ್ಯಾಧ್ಯಕ್ಷರೊಂದಿಗೆ ಕೊಡಗು ಜಿಲ್ಲೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು ಉಪಸ್ಥಿತರಿದ್ದರು.
ಸೋಮವಾರಪೇಟೆ ಏ.14 : ಬೇಸಿಗೆ ಶಿಬಿರಗಳು ಮಕ್ಕಳ ಮಾನಸಿಕ ಬೆಳವಣಿಗೆಗೆ ಸಹಕಾರಿ ಎಂದು ಡ್ರಾಮಾ ಜ್ಯೂನಿಯರ್ನ ಮಾರ್ಗದರ್ಶಕ ಯೋಗೇಶ್ ಅಭಿಪ್ರಾಯಪಟ್ಟರು. ಬೆಟ್ಟದಳ್ಳಿ ಯಶೋದೆ ರಂಗ ಟ್ರಸ್ಟ್ ಹಾಗೂ ಸಾಂದೀಪನಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ , ಸಾಂದೀಪನಿ ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ಮಕ್ಕಳ ಕಲಾ ಕಲಿಕೆ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಇಂತಹ ಶಿಬಿರಗಳು ಸಹಕಾರಿಯಾಗಿದೆ ಎಂದರು. ಶಿಬಿರವನ್ನು ಉದ್ಘಾಟಿಸಿದ ಚೌಡ್ಲು ಗ್ರಾ.ಪಂ ಮಾಜಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ವರ್ಷವಿಡೀ ಪಾಠ ಪ್ರವಚಗಳಲ್ಲೆ ತೊಡಗಿರುವ ಮಕ್ಕಳಿಗೆ ಬೇಸಿಗೆ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಮನಸ್ಸು ಹಾಗೂ ದೈಹಿಕವಾಗಿ ಬದಲಾವಣೆ ಸಿಕ್ಕಂತಾಗುತದೆ ಎಂದರು. ಪೋಷಕರು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಇಂಥ ತರಬೇತಿ ಕೊಡಿಸಿದರೆ ಮುಂದೆ ಸಾಧನೆಗೆ ಸಹಕಾರಿಯಾಗಲಿದೆ ಎಂದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್, ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ,ಶಿಕ್ಷಕಿ ವಸಂತಿ, ಶಿಬಿರದ ಸಂಚಾಲಕ ನಿಶಾಂತ್ ಮುತ್ತಣ್ಣ, ನಿರ್ದೇಶಕ ಗಣೇಶ್…
ಮಡಿಕೇರಿ.ಏ.15 : ಕೊಡಗು ಪತ್ರಕರ್ತರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಏ.16 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ಪತ್ರಕರ್ತರಿಗಾಗಿ ಬೆಳಿಗ್ಗೆ 9 ಗಂಟೆಯಿಂದ ಒಳಾಂಗಣ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಹಿರಿಯ ವಕೀಲ ಡಾ.ಯಾಲದಾಳು ಮನೋಜ್ ಬೋಪಯ್ಯ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ವಹಿಸಲಿದ್ದು, ಅತಿಥಿಯಾಗಿ ಸಂಘದ ಉಪಾಧ್ಯಕ್ಷ ಹಾಗೂ ಕ್ರೀಡಾಕೂಟದ ಸಂಚಾಲಕರಾದ ಜಿ.ವಿ.ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಏ.15 : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಹಂತಹಂತವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನಾಂಗದ ಪ್ರತಿಯೊಬ್ಬರು ಕೂಡಾ ಸಂಘದ ಜತೆಗೆ ಕೈಜೋಡಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ಮನವಿ ಮಾಡಿದರು. ನಗರದ ಗಾಂಧಿ ಮೈದಾನ ಬಳಿಯಿರುವ ಖಾಸಗಿ ಕಟ್ಟಡದಲ್ಲಿ ನಡೆದ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮುದಾಯ ಬಾಂಧವರಿಗಾಗಿ ಸಂಘದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ತುಳು ಭಾಷಿಕರ ಹೊಸ ವರ್ಷವಾದ ಬಿಸು ಹಬ್ಬವನ್ನು ಮುಂದಿನ ವರ್ಷದಿಂದ ಸಂಘದ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸುವ ಉದ್ದೇಶವಿದೆ. ನಮ್ಮ ಸಂಸ್ಕøತಿ, ಸಂಪ್ರದಾಯವನ್ನು ಬಿಂಬಿಸುವ ಆಚರಣೆಯಾಗಿ ಎಲ್ಲರೂ ಸಂಭ್ರಮಿಸುವ ರೀತಿಯ ಕಾರ್ಯಕ್ರಮ ಮಾಡಲಾಗುವುದೆಂದರು. ಜಿಲ್ಲಾ ಬಂಟರ ಸಂಘದ ಜತೆಗೆ ತಾಲೂಕು ಘಟಕ, ನಗರ ಮಹಿಳಾ ಘಟಕ, ಯುವ ಬಂಟ್ಸ್ ಅಸೋಸಿಯೇಷನ್ ಕಾರ್ಯಚಟುವಟಿಕೆಗಳಿಗೆ ಈ ಕಚೇರಿಯನ್ನು ಬಳಸಿಕೊಳ್ಳಬಹುದು. ಸಂಘದ ಕಾರ್ಯಚಟುವಟಿಕೆಗಳು ಜಿಲ್ಲಾ ಬಂಟರ ಭವನದಲ್ಲಿ ಆಗಬೇಕೆಂಬ ಕನಸು ಜನಾಂಗ ಬಾಂಧವರಲ್ಲಿದೆ. ಅದು ಈಡೇರಬೇಕಾದರೆ ಎಲ್ಲರ ಸಹಕಾರ ಅಗತ್ಯ ಎಂದರು. ಕಾರ್ಯದರ್ಶಿ ರವೀಂದ್ರ ವಿ.…
ಮಡಿಕೇರಿ ಏ.15 : ಸಿರಿಗನ್ನಡ ವೇದಿಕೆ ಕೊಡಗು ಹಾಗೂ ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ಪದಗ್ರಹಣ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಿತು. ಸಿರಿಗನ್ನಡ ವೇದಿಕೆ ಮಡಿಕೇರಿ ತಾಲೂಕು ಅಧ್ಯಕ್ಷೆ, ಸಾಹಿತಿ, ನಿರ್ಮಾಪಕಿ, ನಟಿ ಈರಮಂಡ ಹರಿಣಿ ವಿಜಯ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿರಿಗನ್ನಡ ವೇದಿಕೆಯ ರಾಜ್ಯ ಸಮಿತಿ ಕಾರ್ಯಾಧ್ಯಕ್ಷೆ ಡಾ.ಸೌಗಂಧಿಕಾ ವಿ.ಜೋಯಿಸ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ಸಂಘಟನೆಗಳಲ್ಲಿ ಹುದ್ದೆ ಮುಖ್ಯವಲ್ಲ, ಸಲ್ಲಿಸುವ ಸೇವೆ ಮುಖ್ಯ. ನಾವು ಮಾಡುವ ಜನಸೇವೆ ಶಾಶ್ವತವಾಗಿರುತ್ತದೆ ಎಂದರು. ಹಿರಿಯ ಕವಿಗಳು, ಸಾಹಿತಿಗಳನ್ನು ನೆನಪಿಸಿಕೊಂಡು ಅವರುಗಳ ಬರಹಗಳನ್ನು ಓದಬೇಕು; ಮೌಲ್ಯಯುತ ಬರಹಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕೆಂದು ಹೇಳಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕ ಡಾ.ಮೋಹನ್ ಅಪ್ಪಾಜಿ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಉತ್ತಮ ಸಾಹಿತಿಗಳಿದ್ದಾರೆ. ಅವರುಗಳ ಮಾರ್ಗದರ್ಶನದೊಂದಿಗೆ ಇನ್ನೂ ಹೆಚ್ಚಿನ ಸಾಹಿತಿಗಳು ಮುಂದೆ ಬರಬೇಕು. ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.…
ಮಡಿಕೇರಿ ಏ.15 : ಕುದುಕುಳಿ ಕ್ರಿಕೆಟ್ ಸಮಿತಿ ಆಯೋಜಿಸಿದ ಗೌಡ ಕುಟುಂಬಗಳ ನಡುವಿನ ಕುದುಕುಳಿ ಐನ್ಮನೆ ಕ್ರಿಕೆಟ್ ಕಪ್ನಲ್ಲಿ ಪರ್ಲಕೋಟಿ ತಂಡ ಚಾಂಪಿಯನ್ ಪಟ್ಟ ಮಡುಗೇರಿಸಿಕೊಂಡಿದೆ. ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪರ್ಲಕೋಟಿ ಮತ್ತು ಹೊಸೊಕ್ಲು ತಂಡಗಳ ನಡುವೆ ಸೆಣೆಸಾಟ ನಡೆಯಿತು. ಪರ್ಲಕೋಟಿ ತಂಡವು ಆರಂಭಿಕ ಉತ್ತಮ ಪ್ರದರ್ಶನ ನೀಡಿತು. 10 ಓವರ್ ನಲ್ಲಿ 104 ರನ್ ಗಳಿಸಿ ಎದುರಾಳಿ ತಂಡಕ್ಕೆ ಸವಾಲು ನೀಡಿತು. ನಂತರ ಬೌಲಿಂಗ್ ಮೂಲಕ ಎದುರಾಳಿ ಹೊಸೊಕ್ಲು ತಂಡವನ್ನು ಕೇವಲ 54 ರನ್ಗಳಿಗೆ ಕಟ್ಟಿ ಹಾಕಿತು. ಇದರಿಂದ ಹೊಸೊಕ್ಲು ತಂಡ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಎರಡನೇ ಸೆಮಿಫೈನಲ್ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ಲಕೋಟಿ ತಂಡ 7 ವಿಕೆಟ್ ನಷ್ಟಕ್ಕೆ 85 ರನ್ ಗಳಿಸಿತು. ಪರ್ಲಕೋಟಿ ಮತ್ತು ಪುದಿನೆರವನ ತಂಡಗಳ ನಡುವಿನ ರೋಚಕ ಪಂದ್ಯದಲ್ಲಿ ಪುದಿನೆರವನ ತಂಡ 84 ರನ್ ಗಳಿಸಿ ಒಂದು ರನ್ಗಳ ವಿರೋಚಿತ ಸೋಲನ್ನು ಅನುಭವಿಸಿತು. ಮೂರು ಮತ್ತು…
ಮಡಿಕೇರಿ ಏ.15 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾ ದಳದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮುತ್ತಪ್ಪ ಅವರು, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಯುವ ಮುಖಂಡ ಸಿ.ಎಲ್.ವಿಶ್ವ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು. ::: ಸೋಮವಾರ ‘ಬಿ’ ಫಾರಂ ::: ನಾಮಪತ್ರ ಸಲ್ಲಿಕೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಪಂಡ ಮುತ್ತಪ್ಪ, ತನ್ನನ್ನು ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರಿಗೆ ಕೃತಜ್ಞತೆ ಸಲ್ಲಿಸಿ, ಪಕ್ಷದಿಂದ ‘ಬಿ’ ಫಾರಂ ಇನ್ನಷ್ಟೆ ದೊರಕಬೇಕಿದ್ದು, ಸೋಮವಾರ ಚುನಾವಣಾಧಿಕಾರಿಗಳಿಗೆ ‘ಬಿ’ ಫಾರಂ ಸಲ್ಲಿಸುವುದಾಗಿ ತಿಳಿಸಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕ್ಷೇತ್ರದಲ್ಲಿ ಯಾವುದೇ ಪಕ್ಷ ಪ್ರಬಲ ದುರ್ಬಲ ಎಂಬುದಿಲ್ಲ. ಇದೆಲ್ಲ ನಿರ್ಧಾರವಾಗುವುದು ಮತ ಎಣಿಕೆಯ ಸಂದರ್ಭ…
ಮಡಿಕೇರಿ ಏ.15 : ಭಾರತೀಯ ಭೂ ಸೇನೆಯಲ್ಲಿ ಕರ್ನಲ್ ಹುದ್ದೆಗೆ ಮಂಡೇಪಂಡ ಸ್ಮಿತಾ ಅಯ್ಯಪ್ಪ (ತಾಮನೆ-ಮೇವಡ) ನೇಮಕಗೊಂಡಿದ್ದು, ಜಿಲ್ಲೆಯ ಮೊದಲ ಮಹಿಳೆ ಕರ್ನಲ್ ಹುದ್ದೆ ತಲುಪಿದ್ದಾರೆ. 2005ರಲ್ಲಿ ಚೆನ್ನೈನಲ್ಲಿ ತರಬೇತಿ ಪಡೆದು ಆರ್ಮಿ ಸರ್ವಿಸಸ್ ಕೋರ್ಗೆ ಸೇರ್ಪಡೆಗೊಂಡು ತನ್ನ 18 ವರ್ಷದ ಸೇವೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ ಸ್ಮಿತಾ ಅವರು ವಿಶ್ವಸಂಸ್ಥೆ ಶಾಂತಿಪಾಲನಾ ಸಂಸ್ಥೆಗೆ ನಿಯುಕ್ತಿಗೊಂಡು ಇಸ್ರೇಲ್ ಮತ್ತು ಸಿರಿಯಾದಲ್ಲಿ ಕರ್ತವ್ಯ ನಿರ್ವಹಿಸಿ ತನ್ನ ಅತ್ಯುತ್ತಮ ನಿರ್ಣಯಗಳಿಗೆ ಅಲ್ಲಿನ ಫೋರ್ಸ್ ಕಮಾಂಡ್ನಿಂದ ಕಮಾಂಡೇಶನ್ ಕಾರ್ಡ್ ಪಡೆದಿದ್ದಾರೆ. ಇವರು ನಿವೃತ್ತ ಯೋಧ ಮೇವಡ ಅಪ್ಪಣ್ಣ ರಾಧ ದಂಪತಿ ಪುತ್ರಿಯಾಗಿದ್ದು, ಕರ್ನಲ್ ಮಂಡೇಪಂಡ ಅಯ್ಯಪ್ಪ ಅವರ ಪತ್ನಿಯಾಗಿದ್ದಾರೆ.
ನಾಪೋಕ್ಲು ಏ.15 : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹೆಚ್ಚು ಪ್ರಯತ್ನ ಮಾಡಿದರೆ ಮುಂದಿನ ಗುರಿಯನ್ನು ಮುಟ್ಟಲು ಸಾಧ್ಯ ಎಂದು ನಬಾರ್ಡ್ ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಮೇಶ್ ಬಾಬು .ವಿ ಹೇಳಿದರು. ಅಂಕುರ್ ಪಬ್ಲಿಕ್ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಗ್ರಾಜುಯೇಷನ್ ಡೇ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಿಗದಿತ ಗುರಿಯನ್ನು ಸಾಧಿಸಲು ಪೋಷಕರ ಮತ್ತು ಶಿಕ್ಷಕರ ಪ್ರೋತ್ಸಾಹ ಬಹಳ ಮುಖ್ಯ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ರಾಜಾ ಚರ್ಮಣ ವಹಿಸಿದ್ದರು. ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ರತ್ನ ಚರ್ಮಣ ಪೋಷಕರನ್ನು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಟ್ರಸ್ಟಿ ಯಾದ ಗಾಯನ್ ಗೌರಮ್ಮ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು. ಈ ಸಂದರ್ಭ ಉಪಸ್ಥಿತ ಇದ್ದ ಗಣ್ಯರು ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿ ಶುಭ ಕೋರಿದರು. ವರದಿ : ದುಗ್ಗಳ ಸದಾನಂದ






