ಲೇಖಕ: admin

ವಿರಾಜಪೇಟೆ ಡಿ.9 NEWS DESK : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ಘಟಕದ ಏರ್ ವಿಂಗ್ ಹಾಗೂ ಆರ್ಮಿ ವಿಂಗ್ ಗಳ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಯ ಪ್ರಯುಕ್ತ ಎನ್‌ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ನಡೆಯಿತು. ಸಂತ ಅನ್ನಮ್ಮ ಪ್ರೌಢಶಾಲೆಯ ಬಳಿ ವಿದ್ಯಾಸಂಸ್ಥೆ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿಮಿಕ್ ಹಾಗೂ ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ರವರು ಈ ಜಾಥಾಕ್ಕೆ ಚಾಲನೆಯನ್ನು ನೀಡಿದರು. ನಂತರ ಮಾತನಾಡಿದ ಅವರು, ಮಕ್ಕಳಲ್ಲಿ ಧೈರ್ಯ ಮನೋಭಾವನೆ ಮೂಡಬೇಕು. ವಾಯುಮಾಲಿನ್ಯ ಹೆಚ್ಚಳವಾಗುತ್ತಿರುವ ಸಂದರ್ಭ ಅದನ್ನು ನಿಯಂತ್ರಿಸಿ ಪರಿಸರ ಸಂರಕ್ಷಣೆಗೆ ಗಮನ ನೀಡಬೇಕು. ಜೊತೆಗೆ ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸಿ ಎಂದು ಕರೆ ನೀಡಿದರು. ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ಮಾತನಾಡಿ, ಇಂದು ಸೇನಾ ವಿಭಾಗಗಳ ದ್ವಜ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ಆ ಮೂಲಕ…

Read More

ವಿರಾಜಪೇಟೆ ಡಿ.9 NEWS DESK : ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಇನ್ಫೋಸಿಸ್ ಕಂಪೆನಿಯ ವತಿಯಿಂದ 15 ದಿವಸಗಳ ಕಾಲ ಸರ್ಟಿಫಿಕೇಟ್ ಕೋರ್ಸ್ ಅನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಇನ್ಫೋಸಿಸ್ ಕಂಪನಿಯ ಸಿಎಸ್ಆರ್ ಚಟುವಟಿಕೆಯ ಅನ್ವಯ ಈ ಕೋರ್ಸ್ ಅನ್ನು ಆಯೋಜಿಸಲಾಗಿತ್ತು. ಸರ್ಟಿಫಿಕೇಟ್ ಕೋರ್ಸ್ ಗೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು ಅವರು ಚಾಲನೆ ನೀಡಿದರು. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಕಾರ್ಯಕ್ರಮದ ಸ್ವರೂಪದ ಬಗ್ಗೆ ಮಾತನಾಡಿದರು. 15 ದಿವಸಗಳ ಕಾಲ ಜರುಗಿದ ಕೋರ್ಸ್ ನಲ್ಲಿ ಇನ್ಫೋಸಿಸ್ ಕಂಪನಿಯ ತರಬೇತುದಾರರಾದ ನಳಿನಿ ಬಸವರಾಜ್ ಹಾಗೂ ವಿನೋದ್ ಮರಿ ರಾಜನ್ ವಿದ್ಯಾರ್ಥಿಗಳಿಗೆ ಸಂವಹನದ ವಿಧಾನ, ಭಾಷೆ ಹಾಗೂ ಸಾಫ್ಟ್ ಸ್ಕಿಲ್ಸ್, ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ರೆಸ್ಯುಮ್ ಅನ್ನು ತಯಾರಿಸುವ ಬಗ್ಗೆ, ಸಂದರ್ಶನವನ್ನು ಎದುರಿಸುವ ಬಗ್ಗೆ ತರಬೇತಿಯನ್ನು ನೀಡಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಗುಂಪು ಚಟುವಟಿಕೆಗಳನ್ನು ನೀಡುವುದರ ಮೂಲಕ ಸಂವಹನ, ಕೌಶಲ್ಯ ವೃದ್ಧಿಗೆ ತರಬೇತಿಗೊಳಿಸಿದರು. ಮಾದರಿ ಸಂದರ್ಶನವನ್ನು…

Read More

ಸೋಮವಾರಪೇಟೆ ಡಿ.9 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋಮವಾರಪೇಟೆ ಕಾರ್ಯಕ್ಷೇತ್ರಕ್ಕೆ ಒಳಪಡುವ ಪ್ರಗತಿಬಂಧು ಸ್ವಸಹಾಯ ಗುಂಪುಗಳ ನೇತೃತ್ವದಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ಗಣ ಹೋಮ ಮತ್ತು ಮಾತೃ ವಂದನಾ ಕಾರ್ಯಕ್ರಮ ನಡೆಯಿತು. ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಮುಳ್ಳೂರು ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಅವರು, ತಾಯಿ ತನ್ನ ನಡವಳಿಕೆ ಮೂಲಕ ಮಕ್ಕಳಿಗೆ ಸಂಸ್ಕಾರ ನೀಡಬೇಕು. ಸಂಸ್ಕಾರದ ಕೊಂಡಿ ಕಳಚಿದರೆ ಸಮಾಜಕ್ಕೆ ಭವಿಷ್ಯವಿಲ್ಲ. ಕುಟುಂಬ ವ್ಯವಸ್ಥೆ ಬಲಗೊಳ್ಳುವುದೇ ಮನೆಯ ತಾಯಿಯಿಂದ ಎಂದ ಅವರು, ಕೌಟುಂಬಿಕ ಸಂಬಂಧಗಳು ಉತ್ತಮಗೊಳ್ಳಬೇಕು. ಇಂಗ್ಲೀಷ್ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣವೂ ಅತ್ಯಗತ್ಯ ಎಂದು ಪ್ರತಿಪ್ರಾದಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಜನಜಾಗೃತಿ ಸಮಿತಿ ಸ್ಥಾಪಕಾಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಮಾತನಾಡಿ, ಕ್ಷೇತ್ರದಿಂದ ಮಹಿಳಾ ಸಬಲೀಕರಣ, ರೈತರು, ವೃದ್ಧರು, ವಿದ್ಯಾರ್ಥಿಗಳು, ಅಶಕ್ತರ ಶ್ರೇಯೋಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಇದನ್ನು ಸಹಿಸದ ಕಿಡಿಗೇಡಿಗಳು ಕ್ಷೇತ್ರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಎಂದರು. ಮಹಿಳಾ ಸಮಾಜದ…

Read More

ನಾಪೋಕ್ಲು ಡಿ.9 NEWS DESK : ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಪಂಚಾಯಿತಿ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೃಷಿ ಸಖಿ ಯರಾದ ಗಿರಿಜಾ, ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯದ ಬಗ್ಗೆ ಸಭೆಯಲ್ಲಿ ಮಾಹಿತಿಯನ್ನು ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಡಿದದರು. ನಂತರ ಪಂಚಾಯಿತಿಯ ಅಧ್ಯಕ್ಷರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರಿಗೆ ಪಂಚಾಯಿತಿ ಮೂಲಕ ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭ ಪಂಚಾಯಿತಿಯ ಉಪಾಧ್ಯಕ್ಷರಾದ ಬೀನ ಸುಚಿತ್ರ, ಸದಸ್ಯರುಗಳಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯ ಮಾಡಂಡ ಹರೀಶ್ ಮೊಣ್ಣಪ್ಪ, ತುಕಡಿ ಸಫಿಯ ನಂಬುಡಮಂಡ ಶೈಲಾ ಕೋಡಿಮಣಿಯಂಡ ಬೊಪಣ್ಣ, ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರುಗಳು ಸೇರಿದಂತೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಡಿ.9 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಬೀದರ್‍ನಲ್ಲಿ ನಡೆದ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕ್ವಾಟರ್ ಫೈನಾಲ್ಸ್ ಬಾಲಕಿಯರು ಹಾಗೂ ಫ್ರೀ ಕ್ವಾಟರ್ ಫೈನಲ್ಸ್ ಬಾಲಕರು ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದು ಕೊಟ್ಟಿರುತ್ತಾರೆ. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತೀವ್ರ ಸ್ಪರ್ಧೆಯ ನಡುವೆ ಮೂರ್ನಾಡು ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಆಟದ ಶೈಲಿಯಿಂದ ಗಮನ ಸೆಳೆದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಡಿ.9 NEWS DESK : ಶ್ರೀ ಪೊನ್ನುಮುತ್ತಪ್ಪ ದೇವಾಲಯದಲ್ಲಿ ಡಿ.15 ರಂದು ಪುತ್ತರಿ ವೆಳ್ಳಾಟಂ ಜರುಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ದೇವಾಲಯದಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ನಡೆಸಿಕೊಂಡು ಬರುತ್ತಿರುವ ಪುತ್ತರಿ ವೆಳ್ಳಾಟಂ. ಡಿ.15ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ದೇವಾಲಯದಲ್ಲಿ ಕೇರಳದ ಪ್ರಖ್ಯಾತ ಪರಶಿನಿಕಡವು ಮಡೆಯನ್ ಅವರ ನೃತ್ಯದೊಂದಿಗೆ ದೇವರನ್ನು ಮಲೆ ಇಳಿಸುವ ಮೂಲಕ ಪುತ್ತರಿವೆಳ್ಳಾಟಂಗೆ ಚಾಲನೆ ನೀಡಲಾಗುತ್ತದೆ. ಸಂಜೆ 6 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಲಿದೆ. ರಾತ್ರಿ 7.30 ಗಂಟೆಗೆ ಗುಳಿಗ ದೇವರ ವೆಳ್ಳಾಟಂ, 8 ಗಂಟೆಗೆ ಕುಟ್ಟಿಚಾತ ದೇವರ ವೆಳ್ಳಾಟಂ ನಡೆದ ಬಳಿಕ 9.30 ಗಂಟೆಗೆ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತ ಶ್ರೀ ಪೊನ್ನು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಎ.ಕೆ.ಚಂದ್ರನ್ ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಡಿ.9 NEWS DESK : ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಸೋಮವಾರ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ನಡೆಸಲಾಯಿತು. ಕುಂಜಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕುಮಾರಿ ಫಾತಿಮಾ ಮುಬಾಶಿರ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಸಭೆಯಲ್ಲಿ ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶಿಲ್ಪಾ ಲೋಕೇಶ್ ಭಾಗವಹಿಸಿ ಮಾತನಾಡಿ, ಮಕ್ಕಳು ಮಂಡಿಸಿದ ಅಹವಾಲುಗಳನ್ನು ಮುಂದಿನ ಕ್ರಿಯಾಯೋಜನೆಯಲ್ಲಿ ಅಳವಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಬೀನಾ ಸುಚಿತ್ರ, ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯಮಾಡಂಡ ಹರೀಶ್ ಮೊಣ್ಣಪ್ಪ ,ಕೋಡಿಮಣಿಯಂಡ ಬೋಪಣ್ಣ ,ತುಕಡಿ ಸಾಫಿಯ, ನಂಬುಡಮಂಡ ಶೈಲ ರವರು, ಶಾಲಾ ಅಧ್ಯಾಪಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಕೆ.ಪಿ.ಬಾಣೆ ಶಾಲಾ ಮಕ್ಕಳು ಸಂವಿಧಾನ ಪೀಠಿಕೆಯನ್ನು ವಾಚಿಸಿ ಮಕ್ಕಳ ಅಹವಾಲುಗಳನ್ನು ಸಭೆಯಲ್ಲಿ ಮಂಡಿಸಿದರು. ನಂತರ ಮಕ್ಕಳಿಗೆ ಕೆಲವು ಚಟುವಟಿಕೆಗಳನ್ನು ಮಾಡಿಸಿ ಮಾರ್ಗದರ್ಶನ ಮಾಡಲಾಯಿತು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಡಿ.8 NEWS DESK : ಕಲಾವಿದೆ ಚಿತ್ರ ರವಿ ಆರ್ಯನ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಕರ್ನಾಟಕದ ನ್ಯೂಸ್ ಪೇಪರ್ಸ್ ಅಸೋಸಿಯೇಷನ್‌ನಿಂದ ಚಿತ್ರ ರವಿ ಆರ್ಯನ್ ಅವರ ಆರೋಗ್ಯ ಮತ್ತು ಸಂಗೀತ ಕ್ಷೇತ್ರದ ಸಾಧನೆಗಾಗಿ  ಬೆಂಗಳೂರಿನ  ಪುಟ್ಟಣ್ಣ ಚೆಟ್ಟಿಯಾರ್ ಸ್ಮಾರಕ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ  ಸಮಾರಂಭದಲ್ಲಿ ಗಣ್ಯರು ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Read More

ಮಡಿಕೇರಿ ಡಿ.8 NEWS DESK :  ಕೊಡಗು ಜಿಲ್ಲೆಯಲ್ಲಿ 1.41 ಲಕ್ಷ ಮಂದಿಯ ಬ್ಯಾಂಕ್ ಖಾತೆಯಲ್ಲಿ ದೀರ್ಘಕಾಲದಿಂದ ಸುಮಾರು 33 ಕೋಟಿಯಷ್ಟು ಹಣವಿದ್ದು, ಈ ಸಂಬಂಧ ವಾರಸುದಾರರು ಹಣ ವಾಪಸ್ಸು ಪಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಗ್ರಾಹಕರಿಗೂ ಮಾಹಿತಿ ದೊರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದ್ದಾರೆ. ದೀರ್ಘ ಕಾಲದಿಂದ ಬ್ಯಾಂಕ್‍ನಲ್ಲಿರುವ ತಮ್ಮ ಹಣ ಪಡೆಯದೆ ಉಳಿದಿರುವ ಠೇವಣಿ, ವಿಮಾ ಕಂತುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರು ಹಣವನ್ನು ವಾಪಸ್ಸು ಪಡೆಯುವ ಸಂಬಂಧ ‘ನಿಮ್ಮ ಹಣ ನಿಮ್ಮ ಹಕ್ಕು’ ಜಾಗೃತಿ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಜಿಲ್ಲಾಧಿಕಾರಿ ಮಾತನಾಡಿದರು. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬ್ಯಾಂಕ್‍ನಲ್ಲಿ ದೀರ್ಘಕಾಲದಿಂದ ಇರುವ ಹಣ ಹಾಗೂ ವಿಮಾ ಕಂತನ್ನು ಪಡೆಯದಿರುವ ಗ್ರಾಹಕರಿಗೆ ಮಾಹಿತಿ ನೀಡಿ ಹಣವನ್ನು ವಾಪಸ್ಸು ಪಡೆಯಲು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್…

Read More

ಮಡಿಕೇರಿ ಡಿ.8 NEWS DESK : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರ ಕುರಿತು ಏಕವಚನ ಪ್ರಯೋಗ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಮುಖ್ಯಮಂತ್ರಿಗಳು ಕೇಂದ್ರದ ಮಹಿಳಾ ಸಚಿವರ ಕುರಿತು ಏಕವಚನ ಬಳಕೆ ಮಾಡುವ ಮೂಲಕ ಸಚಿವ ಸ್ಥಾನಕ್ಕೆ ಮತ್ತು ಸಚಿವರ ಹಿರಿತನಕ್ಕೆ ಅಗೌರವ ತೋರಿದ್ದಾರೆ. ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಿ ಗೌರವಿಸುವ ಈ ನಾಡಿನಲ್ಲಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ಮತ್ತು ನಾಡಿನ ಸಂಸ್ಕೃತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ. ತಾವು ಅಧಿಕಾರದಲ್ಲಿದ್ದ ಅವಧಿಯಲ್ಲೆಲ್ಲ ಹಲವು ಬಾರಿ ಏಕವಚನ ಪ್ರಯೋಗಿಸಿ ಹಿರಿಯರು ಹಾಗೂ ಮಹಿಳೆಯರಿಗೆ ಮುಜುಗರ ಉಂಟು ಮಾಡಿದ್ದಾರೆ. ಇವರ ನಡೆಯ ಕುರಿತು ಆಕ್ಷೇಪಗಳು ವ್ಯಕ್ತವಾದರೂ ತಪ್ಪನ್ನು ತಿದ್ದಿಕೊಳ್ಳುವ ಬದಲು ‘ನಾನು ಗ್ರಾಮೀಣ ಸೊಗಡಿನವನು’ ಎಂದು ಸಮರ್ಥಿಸಿಕೊಳ್ಳುತ್ತಲೇ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ಗ್ರಾಮೀಣ…

Read More